📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ದ.ಕ ಜಿಲ್ಲಾಡಳಿತದಿಂದ ಮಂಗಳಮುಖಿಯರಲ್ಲದವರಿಗೂ ಗುರುತಿನ ಚೀಟಿ ವಿತರಣೆ – ಗಂಭೀರ ಆರೋಪ

ಮಂಗಳೂರು ನಗರದಲ್ಲಿ ಬೆಳಕಿಗೆ ಬಂದಿರುವ ನಕಲಿ ಮಂಗಳಮುಖಿಯರ ಕಾರಣದಿಂದ ನೈಜ ಮಂಗಳ ಮುಖಿಯರಿಗೆ ಅನ್ಯಾಯ ಆಗುತ್ತಿದೆ ಎಂದು ಪತ್ರಕ್ರತರ ಮುಂದೆ ತಮ್ಮ ಅಲಳನ್ನು ತೋಡಿಕೊಂಡಿದ್ದಾರೆ.

ಮಂಗಳಮುಖಿಯರನ್ನು ಗುರುತಿಸುವ ಗುರುತಿನ ಚೀಟಿ (ID) ಯನ್ನು ಅನರ್ಹರಿಗೂ ವಿತರಿಸುವ ಕಾರ್ಯ ನಡೆಯುತ್ತಿದೆ. ಇದರಿಂದ ಗಂಭೀರ ಸಮಸ್ಯೆಗಳು ಉದ್ಭವ ಆಗುತ್ತಿದೆ. ಇದು ಕೇವಲ ಒಂದು ಸಂಘಟನೆ ಅಥವಾ ಕೆಲವು ವ್ಯಕ್ತಿಗಳ ವಿಷಯವಲ್ಲ — ಇದು ನಮ್ಮ ಸಮಾಜದ ವಿಶ್ವಾಸ, ಸರ್ಕಾರಿ ವ್ಯವಸ್ಥೆಗಳ ದುರುಪಯೋಗಕ್ಕೆ ಸಂಬಂದಿಸಿದ್ದು. ನೈಜ ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ಮೇಲೆ ನೇರವಾಗಿ ಪರಿಣಾಮ ಬೀರುವ ಗಂಭೀರ ವಿಷಯ ಇದಾಗಿದೆ ಎಂದು ಅವರು ಹೇಳಿದರು.

ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ “ನವಹಸಜ ಸಮುದಾಯ ಸಂಘಟನೆ” ಈ ಪ್ರಕರಣವನ್ನು ತೀವ್ರವಾಗಿ ಖಂಡಿಸಿದ್ದು, ಸಮಗ್ರ ತನಿಖೆ ನಡೆಸುವಂತೆ ಸರ್ಕಾರ ಮತ್ತು ಜಿಲ್ಲಾಡಳಿತವನ್ನು ಒತ್ತಾಯಿಸಿದೆ. ಸಂಘಟನೆಯ ಅಧ್ಯಕ್ಷೆ ನಿಖಿಲಾ ನೀಡಿದ ಮಾಹಿತಿಯ ಪ್ರಕಾರ, ಕೆಲವು ವ್ಯಕ್ತಿಗಳು ನಕಲಿ ದಾಖಲೆಗಳನ್ನು ಸೃಷ್ಟಿಸಿ, ಟ್ರಾನ್ಸ್‌ಜೆಂಡರ್ ಸಮುದಾಯದ ಹೆಸರಿನಲ್ಲಿ ಸರ್ಕಾರದ ಸೌಲಭ್ಯಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಇದರಿಂದ ನೈಜ ಹಾಗೂ ಅರ್ಹರು ತಮ್ಮ ಹಕ್ಕುಗಳಿಂದ ವಂಚಿತರಾಗುತ್ತಿದ್ದಾರೆ.

ಇದು ಕೇವಲ ಗುರುತಿನ ಚೀಟಿಗಳ ದುರುಪಯೋಗವಲ್ಲ — ಇದು ಸಮಾಜದ ನೈತಿಕ ಮೌಲ್ಯಗಳ ಮೇಲೆ ದಾಳಿ. ನಕಲಿ ಆಧಾರ್ ಕಾರ್ಡ್‌ಗಳು, ತಪ್ಪು ಮಾಹಿತಿಯ ಮೂಲಕ ಪಡೆದ ಟ್ರಾನ್ಸ್‌ಜೆಂಡರ್ ಗುರುತಿನ ಚೀಟಿಯಿಂದಾಗಿ ಅನೇಕ ಸಮಸ್ಯೆಗಳು ಉದ್ಭವವಾಗಿದೆ. ಅದರಿಂದ ಸಾಮಾಜಿಕ ಜಾಲತಾಣಗಳಲ್ಲಿ ಸಮುದಾಯದ ಬಗ್ಗೆ ಅಪಪ್ರಚಾರಕ್ಕೆ ಕಾರಣವಗುತ್ತಿದೆ. ಮಂಗಳೂರಿನಲ್ಲಿ ಸಮುದಾಯದ ಒಳಗೆ ಅಭದ್ರತೆಗೆ ಕಾರಣವಗ್ತಿದೆ. ಸಾಮಾಜಿಕ ಸಮತೋಲನವನ್ನು ಕದಡುತ್ತಿದೆ.

ಈ ಪ್ರಕರಣದಲ್ಲಿ ಮತ್ತೊಂದು ಆತಂಕಕಾರಿ ಅಂಶವೆಂದರೆ, ಕೆಲವು ಜನರು ಸುಲಭವಾಗಿ ಹಣ ಗಳಿಸಲು ಭಿಕ್ಷಾಟನೆ ಅಥವಾ ಇತರ ಚಟುವಟಿಕೆಗಳಿಗೆ ಈ ನಕಲಿ ಗುರುತಿನ ಚೀಟಿಗಳನ್ನು ಬಳಸುತ್ತಿದ್ದಾರೆ ಎಂಬ ಆರೋಪ ಇದೆ. ಇದರಿಂದ ಸಾರ್ವಜನಿಕರ ಮನಸ್ಸಿನಲ್ಲಿ ಸಂಪೂರ್ಣ ಸಮುದಾಯದ ಬಗ್ಗೆ ತಪ್ಪು ಕಲ್ಪನೆಗಳು ಮೂಡುತ್ತಿವೆ. ಇದರಿಂದ ನೈಜ ಮಂಗಳಮುಖಿಯರು ಸಾಮಾಜಿಕ ತಿರಸ್ಕಾರಕ್ಕೆ ಒಳಗಾಗುತ್ತಿದ್ದಾರೆ.

ಜಿಲ್ಲಾಧಿಕಾರಿಗಳ ಸಭೆಯಲ್ಲಿ 50 ಮಂದಿಗೆ ಟ್ರಾನ್ಸ್‌ಜೆಂಡರ್ ಕಾರ್ಡ್‌ಗಳು ನೀಡಲಾಗಿದೆ ಎಂಬ ಮಾಹಿತಿ ಬಹಿರಂಗವಾಗಿದ್ದು, ಅದರಲ್ಲಿ ಹಲವಾರು ಕಾರ್ಡ್‌ಗಳು ನಕಲಿಯಾಗಿರುವ ಅನುಮಾನ ವ್ಯಕ್ತವಾಗಿದೆ. ಇದು ಆಡಳಿತ ವ್ಯವಸ್ಥೆಯಲ್ಲಿಯೇ ಇರುವ ದೌರ್ಬಲ್ಯವನ್ನು ತೋರಿಸುತ್ತದೆ. ಸೂಕ್ತ ಪರಿಶೀಲನೆ ಇಲ್ಲದೆ ನೀಡಲಾಗುತ್ತಿರುವ ದಾಖಲೆಗಳು ಭವಿಷ್ಯದಲ್ಲಿ ಇನ್ನಷ್ಟು ದೊಡ್ಡ ಅಪಾಯಕ್ಕೆ ಕಾರಣವಾಗಬಹುದು.

ಈ ಹಿನ್ನೆಲೆಯಲ್ಲಿ ತಕ್ಷಣ ಕ್ರಮ ಕೈಗೊಳ್ಳಬೇಕಾಗಿದೆ.

ನೀಡಲಾದ ಎಲ್ಲಾ ಟ್ರಾನ್ಸ್‌ಜೆಂಡರ್ ಗುರುತಿನ ಚೀಟಿಗಳ ಸಮಗ್ರ ಪರಿಶೀಲನೆ ಆಗಬೇಕು.

ನಕಲಿ ದಾಖಲೆಗಳನ್ನು ಸೃಷ್ಟಿಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಆಗಬೇಕು.

ಅದಕ್ಕೆ ಸಹಕರಿಸಿದ ಅಧಿಕಾರಿಗಳ ವಿರುದ್ಧವೂ ತನಿಖೆಯಾಗಿ ಕ್ರಮವಗಬೇಕು.

ನೈಜ ಸಮುದಾಯದವರಿಗೆ ನ್ಯಾಯ ಒದಗಿಸುವ ಭರವಸೆ ಬೇಕಾಗಿದೆ.

ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಅಭಿಯಾನದಿಂದಾಗಿ,

ಯಾರೂ ಮಾಡಿದ ತಪ್ಪಿನಿಂದ ಸಂಪೂರ್ಣ ಸಮುದಾಯದ ಗೌರವ ಹಾಳಾಗಬಾರದು. ಮಂಗಳೂರಿನಂತಹ ನಗರದಲ್ಲಿ ಇಂತಹ ದಂಧೆಗಳು ಮುಂದುವರಿದರೆ, ಅದು ಕೇವಲ ಒಂದು ಸಮುದಾಯವಲ್ಲ, ಪ್ರತಿಯೊಬ್ಬ ಸಾಮಾನ್ಯ ನಾಗರಿಕನಿಗೂ ಅಪಾಯಕಾರಿಯೇ.

ಸಮಾಜ, ಸರ್ಕಾರ ಮತ್ತು ನಾಗರಿಕರು ಒಟ್ಟಾಗಿ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣವೇ ಕ್ರಮ ಕೈಗೊಳ್ಳಬೇಕು ಅನ್ನುವುದು ಅವ್ರ ಬೇಡಿಕೆ.

ಫೋಟೋ- ಎಸ್ಕೆ

COMMENTS

Login with Gmail to comment

ಇನ್ನಷ್ಟು ಸುದ್ದಿ

ಸಂಸತ್ ವಿಶೇಷ ಅಧಿವೇಶನ: ಮಹಿಳಾ ಮೀಸಲಾತಿಗೆ ಒಗ್ಗಟ್ಟು, ಡಿಲಿಮಿಟೇಶನ್ ಮೇಲೆ ಭಾರಿ ವಿವಾದ – ಕರ್ನಾಟಕಕ್ಕೂ ಪರಿಣಾಮದ ಚರ್ಚೆ 🔥
ಅಕ್ರಮ ಗಡಿ ದಾಟಿದವರಿಗೆ ಈಗ ಭಾರತದಲ್ಲಿ ನೋ ಎಂಟ್ರಿ!ಬಾಂಗ್ಲಾ ಗಡಿಯಲ್ಲಿ ಎನ್‌ಆರ್‌ಸಿ ಅಸ್ತ್ರ: ರಾಜಕೀಯಕ್ಕಿಂತ ರಾಷ್ಟ್ರೀಯ ಭದ್ರತೆ ಮುಖ್ಯ
ಹಿಂದೂ ಬುಡಕಟ್ಟು ಸಮಾಜದ ರುದ್ರಾಕ್ಷಿ ಸುಂದರಿ ಮುಸ್ಲಿಂ ಹುಡುಗನ ಮದುವೆಯಾದ್ಲು
ಗೃಹ ಸಚಿವರಾದ ಜಿ ಪರಮೇಶ್ವರ್ ರವರ ಒಡೆತನದ ಸಂಸ್ಥೆಯಲ್ಲಿ ನಡೆದಿದೆ ಎಂಬ ವಿಡಿಯೋ ವೈರಲ್….!
Anticipatory Bail ಗೆ ಹೊಸ ರಕ್ಷಣೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಆಕ್ಷೇಪ
ಒಂದು ರಾಷ್ಟ್ರ, ಒಂದು ಚುನಾವಣೆ’ಗೆ ಡಿಕೆಶಿ ಸಿಡಿದೆದ್ದೇಕೆ?
sdfdf
ಮೂರನೇ ಮಹಾಯುದ್ಧದ ಭೀತಿ: ಇರಾನ್ ಹೊಸ ನಾಯಕನಾಗಿ ಮೊಜ್ತಬಾ ಖಮೇನಿ –ನೂತನ ನಾಯಕನಿಗೆ ರಷ್ಯಾ, ಚೀನಾ ಬೆಂಬಲ
ಕಾಂಗ್ರೆಸ್‌ಗೆ ದಾವಣಗೆರೆ ಬಿಸಿ ತುಪ್ಪ!..“ಸಮುದಾಯದ ಹೆಸರಿನಲ್ಲಿ ರಾಜಕೀಯ… ಅಥವಾ ರಾಜಕೀಯದ ಹೆಸರಿನಲ್ಲಿ ಸಮುದಾಯ?”
ಹೋಟೆಲ್ನಲ್ಲಿ ಅಗ್ನಿಯ ಜ್ವಾಲೆ-ಉಸಿರುಗಟ್ಟಿದ ಹೊಗೆಯೊಳಗೆ ಅಡಗಿಹೋದ ಜೀವಗಳು ..!
ಕರ್ನಾಟಕದಲ್ಲಿ ಮಳೆ ಅಲರ್ಟ್! 13 ಜಿಲ್ಲೆಗಳಿಗೆ ಯೆಲ್ಲೋ ವಾರ್ನಿಂಗ್ – ಜನರು ಎಚ್ಚರಿಕೆ ಅಗತ್ಯ
ಮಧ್ಯಪ್ರಾಚ್ಯದಲ್ಲಿ ಯುದ್ಧ– ಸಂಕಷ್ಟದಲ್ಲಿ ಜಗತ್ತು-ಉಸಿರು ತಡೆದ ಪರಿಸ್ಥಿತಿ!ಏನಾಗ್ತಾ ಇದೆ…
ಸಿಎಂ ಕುರ್ಚಿಯನ್ನು, ಡಿಕೆಗೆ ಮಗ್ಗಲ ಮುಳ್ಳನ್ನಾಗಿಸಲು ಸಕಲ ತಯಾರಿ
ಕೊನೆಗೂ ಸೋತ ಖಾಕಿ….!!!
“ವಿ ದಿ ಲೀಡರ್ಸ್”ಅಣ್ಣಾಮಲೈ ಮಾಸ್ಟರ್ ಪ್ಲಾನ್!ಸಿನಿಮಾ ವರ್ಚಸ್ಸಿನ ಟಿವಿಕೆ (TVk) ಯನ್ನ ಮಕಾಡೆ ಮಲಗಿಸಲು ಸಜ್ಜಾಗ್ತಾ ಇದೆಯಾ..?
ಪುತ್ತೂರಿನ ಜಾತ್ರೆಯಲ್ಲಿ ಸುಡುಮದ್ದು ದುರಂತ-ಹಲವರಿಗೆ ಗಾಯ..
ಇರಾನ್–ಇಸ್ರೇಲ್ ಯುದ್ಧ: ಯುದ್ಧ ನಿಲ್ಲಿಸಲು ಇರಾನ್‌ನ 3 ಷರತ್ತುಗಳು… ಅಮೇರಿಕಾ ಕಂಗಾಲು
ಧೂಮಪಾನ ಮಾಡುತ್ತಿದ್ದೀರಾ? ನಿಮ್ಮ ಮುಖ ನಿಧಾನವಾಗಿ ನಾಶವಾಗುತ್ತಿದೆ…
ಜಾಗತಿಕ ಯುದ್ಧ ಭೀತಿ:ಟ್ರಂಪ್ ಎಫೆಕ್ಟ್‌ಗೆ ಭಾರೀ ಆರ್ಥಿಕ ಭೂಕಂಪ! — ಒಂದೇ ದಿನ ₹6 ಲಕ್ಷ ಕೋಟಿ ನಷ್ಟ!ಸೆನ್ಸೆಕ್ಸ್ ಧರೆಗುರುಳಿ, ರೂಪಾಯಿ ದಾಖಲೆ ಪತನ!
🔴 ಯುದ್ಧದ ಹೊತ್ತಿನಲ್ಲಿ ಮಾನವೀಯ ರಾಜತಾಂತ್ರಿಕತೆ: ಇರಾನ್‌ಗೆ ಭಾರತದಿಂದ ಮೊದಲ ವೈದ್ಯಕೀಯ ನೆರವು:
ಶಿಶಿಲದಲ್ಲಿ ವಿಷಪೂರಿತ ಹಾವು ಕಚ್ಚಿ 65 ವರ್ಷದ ರೈತ ಮೃತ್ಯು
 ಡೊನಾಲ್ಡ್ ಟ್ರಂಪ್ ಟೆರರ್ ನಡೆ      ವಿಶ್ವದ ಆರ್ಥಿಕತೆ ಪಾತಾಳದ ಕೆಡೆ
ಮುಳುಗುತ್ತಿರುವ ಕಾಂಗ್ರೆಸ್ಸಿಗೆ ಇನ್ನೂ ಬುದ್ಧಿ ಬಂದಂತಿಲ್ಲ… ಡಿಜೆಪಿ ರಾಮಚಂದ್ರರಾವ್  ಅಮಾನತ್ ಆದೇಶ ಹಿಂಪಡೆದ  ಸರ್ಕಾರ
ಮಂಗಳೂರು ಶಾಕ್ ! ನೇತ್ರಾವತಿ ತೀರದ ನದಿಯಲ್ಲಿ ತೇಲಿ ಬಂದ ರಾಶಿ ರಾಶಿ ಆಧಾರ್ ಕಾರ್ಡ್‌ಗಳು !!!ಹೊಣೆ ಯಾರು?
ಪಕ್ಷದಿಂದ ಪಕ್ಕಕ್ಕೆ? ರಾಘವ್ ಚಡ್ಡಾ ಹಿಂದೆ ಏನಿದೆ ದೊಡ್ಡ ರಾಜಕೀಯ ಆಟ!”ಮೌನಗೊಳಿಸಿದರೂ ನಿಲ್ಲದ ಧ್ವನಿ – ರಾಘವ್ ಚಡ್ಡಾ!”
Golden Hour ಉಳಿಸುವತ್ತ ಗ್ರಾಮದಿಂದ ನಗರವರೆಗೆ – ಕರ್ನಾಟಕ ಹೆಲ್ತ್ ಸಿಸ್ಟಮ್ ಮಹತ್ವದ ಹೆಜ್ಜೆ
ಗ್ಯಾಸ್ ಪೈಪ್‍ಲೈನ್ ಸೋರಿಕೆ: ಅಣಕು ಪ್ರದರ್ಶನ
ಡ್ರೋನ್ ದಾಳಿಯ ನಂತರ ಬಹ್ರೇನ್‌ನಲ್ಲಿ ಕನಿಷ್ಠ 32 ಜನರಿಗೆ ಗಾಯ
ಮುದ್ದಾದ ಅವಳಿ ಹೆಣ್ಣು ಮಕ್ಕಳನ್ನು ಕತ್ತು ಸೀಳಿ ಕೊಂದ ಪಾಪಿ ಅಪ್ಪ
ಕನಕಪುರ ಬಂಡೆ ಬಿಜೆಪಿಗೆ ಎಂಬ ಬೋಗಸ್ ಸುದ್ದಿ
ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐಎಂ ರಣಕಹಳೆ!”