📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ದ.ಕ ಜಿಲ್ಲಾಡಳಿತದಿಂದ ಮಂಗಳಮುಖಿಯರಲ್ಲದವರಿಗೂ ಗುರುತಿನ ಚೀಟಿ ವಿತರಣೆ – ಗಂಭೀರ ಆರೋಪ

    ಮಂಗಳೂರು ನಗರದಲ್ಲಿ ಬೆಳಕಿಗೆ ಬಂದಿರುವ ನಕಲಿ ಮಂಗಳಮುಖಿಯರ ಕಾರಣದಿಂದ ನೈಜ ಮಂಗಳ ಮುಖಿಯರಿಗೆ ಅನ್ಯಾಯ ಆಗುತ್ತಿದೆ ಎಂದು ಪತ್ರಕ್ರತರ ಮುಂದೆ ತಮ್ಮ ಅಲಳನ್ನು ತೋಡಿಕೊಂಡಿದ್ದಾರೆ.

    ಮಂಗಳಮುಖಿಯರನ್ನು ಗುರುತಿಸುವ ಗುರುತಿನ ಚೀಟಿ (ID) ಯನ್ನು ಅನರ್ಹರಿಗೂ ವಿತರಿಸುವ ಕಾರ್ಯ ನಡೆಯುತ್ತಿದೆ. ಇದರಿಂದ ಗಂಭೀರ ಸಮಸ್ಯೆಗಳು ಉದ್ಭವ ಆಗುತ್ತಿದೆ. ಇದು ಕೇವಲ ಒಂದು ಸಂಘಟನೆ ಅಥವಾ ಕೆಲವು ವ್ಯಕ್ತಿಗಳ ವಿಷಯವಲ್ಲ — ಇದು ನಮ್ಮ ಸಮಾಜದ ವಿಶ್ವಾಸ, ಸರ್ಕಾರಿ ವ್ಯವಸ್ಥೆಗಳ ದುರುಪಯೋಗಕ್ಕೆ ಸಂಬಂದಿಸಿದ್ದು. ನೈಜ ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ಮೇಲೆ ನೇರವಾಗಿ ಪರಿಣಾಮ ಬೀರುವ ಗಂಭೀರ ವಿಷಯ ಇದಾಗಿದೆ ಎಂದು ಅವರು ಹೇಳಿದರು.

    ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ “ನವಹಸಜ ಸಮುದಾಯ ಸಂಘಟನೆ” ಈ ಪ್ರಕರಣವನ್ನು ತೀವ್ರವಾಗಿ ಖಂಡಿಸಿದ್ದು, ಸಮಗ್ರ ತನಿಖೆ ನಡೆಸುವಂತೆ ಸರ್ಕಾರ ಮತ್ತು ಜಿಲ್ಲಾಡಳಿತವನ್ನು ಒತ್ತಾಯಿಸಿದೆ. ಸಂಘಟನೆಯ ಅಧ್ಯಕ್ಷೆ ನಿಖಿಲಾ ನೀಡಿದ ಮಾಹಿತಿಯ ಪ್ರಕಾರ, ಕೆಲವು ವ್ಯಕ್ತಿಗಳು ನಕಲಿ ದಾಖಲೆಗಳನ್ನು ಸೃಷ್ಟಿಸಿ, ಟ್ರಾನ್ಸ್‌ಜೆಂಡರ್ ಸಮುದಾಯದ ಹೆಸರಿನಲ್ಲಿ ಸರ್ಕಾರದ ಸೌಲಭ್ಯಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಇದರಿಂದ ನೈಜ ಹಾಗೂ ಅರ್ಹರು ತಮ್ಮ ಹಕ್ಕುಗಳಿಂದ ವಂಚಿತರಾಗುತ್ತಿದ್ದಾರೆ.

    ಇದು ಕೇವಲ ಗುರುತಿನ ಚೀಟಿಗಳ ದುರುಪಯೋಗವಲ್ಲ — ಇದು ಸಮಾಜದ ನೈತಿಕ ಮೌಲ್ಯಗಳ ಮೇಲೆ ದಾಳಿ. ನಕಲಿ ಆಧಾರ್ ಕಾರ್ಡ್‌ಗಳು, ತಪ್ಪು ಮಾಹಿತಿಯ ಮೂಲಕ ಪಡೆದ ಟ್ರಾನ್ಸ್‌ಜೆಂಡರ್ ಗುರುತಿನ ಚೀಟಿಯಿಂದಾಗಿ ಅನೇಕ ಸಮಸ್ಯೆಗಳು ಉದ್ಭವವಾಗಿದೆ. ಅದರಿಂದ ಸಾಮಾಜಿಕ ಜಾಲತಾಣಗಳಲ್ಲಿ ಸಮುದಾಯದ ಬಗ್ಗೆ ಅಪಪ್ರಚಾರಕ್ಕೆ ಕಾರಣವಗುತ್ತಿದೆ. ಮಂಗಳೂರಿನಲ್ಲಿ ಸಮುದಾಯದ ಒಳಗೆ ಅಭದ್ರತೆಗೆ ಕಾರಣವಗ್ತಿದೆ. ಸಾಮಾಜಿಕ ಸಮತೋಲನವನ್ನು ಕದಡುತ್ತಿದೆ.

    ಈ ಪ್ರಕರಣದಲ್ಲಿ ಮತ್ತೊಂದು ಆತಂಕಕಾರಿ ಅಂಶವೆಂದರೆ, ಕೆಲವು ಜನರು ಸುಲಭವಾಗಿ ಹಣ ಗಳಿಸಲು ಭಿಕ್ಷಾಟನೆ ಅಥವಾ ಇತರ ಚಟುವಟಿಕೆಗಳಿಗೆ ಈ ನಕಲಿ ಗುರುತಿನ ಚೀಟಿಗಳನ್ನು ಬಳಸುತ್ತಿದ್ದಾರೆ ಎಂಬ ಆರೋಪ ಇದೆ. ಇದರಿಂದ ಸಾರ್ವಜನಿಕರ ಮನಸ್ಸಿನಲ್ಲಿ ಸಂಪೂರ್ಣ ಸಮುದಾಯದ ಬಗ್ಗೆ ತಪ್ಪು ಕಲ್ಪನೆಗಳು ಮೂಡುತ್ತಿವೆ. ಇದರಿಂದ ನೈಜ ಮಂಗಳಮುಖಿಯರು ಸಾಮಾಜಿಕ ತಿರಸ್ಕಾರಕ್ಕೆ ಒಳಗಾಗುತ್ತಿದ್ದಾರೆ.

    ಜಿಲ್ಲಾಧಿಕಾರಿಗಳ ಸಭೆಯಲ್ಲಿ 50 ಮಂದಿಗೆ ಟ್ರಾನ್ಸ್‌ಜೆಂಡರ್ ಕಾರ್ಡ್‌ಗಳು ನೀಡಲಾಗಿದೆ ಎಂಬ ಮಾಹಿತಿ ಬಹಿರಂಗವಾಗಿದ್ದು, ಅದರಲ್ಲಿ ಹಲವಾರು ಕಾರ್ಡ್‌ಗಳು ನಕಲಿಯಾಗಿರುವ ಅನುಮಾನ ವ್ಯಕ್ತವಾಗಿದೆ. ಇದು ಆಡಳಿತ ವ್ಯವಸ್ಥೆಯಲ್ಲಿಯೇ ಇರುವ ದೌರ್ಬಲ್ಯವನ್ನು ತೋರಿಸುತ್ತದೆ. ಸೂಕ್ತ ಪರಿಶೀಲನೆ ಇಲ್ಲದೆ ನೀಡಲಾಗುತ್ತಿರುವ ದಾಖಲೆಗಳು ಭವಿಷ್ಯದಲ್ಲಿ ಇನ್ನಷ್ಟು ದೊಡ್ಡ ಅಪಾಯಕ್ಕೆ ಕಾರಣವಾಗಬಹುದು.

    ಈ ಹಿನ್ನೆಲೆಯಲ್ಲಿ ತಕ್ಷಣ ಕ್ರಮ ಕೈಗೊಳ್ಳಬೇಕಾಗಿದೆ.

    ನೀಡಲಾದ ಎಲ್ಲಾ ಟ್ರಾನ್ಸ್‌ಜೆಂಡರ್ ಗುರುತಿನ ಚೀಟಿಗಳ ಸಮಗ್ರ ಪರಿಶೀಲನೆ ಆಗಬೇಕು.

    ನಕಲಿ ದಾಖಲೆಗಳನ್ನು ಸೃಷ್ಟಿಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಆಗಬೇಕು.

    ಅದಕ್ಕೆ ಸಹಕರಿಸಿದ ಅಧಿಕಾರಿಗಳ ವಿರುದ್ಧವೂ ತನಿಖೆಯಾಗಿ ಕ್ರಮವಗಬೇಕು.

    ನೈಜ ಸಮುದಾಯದವರಿಗೆ ನ್ಯಾಯ ಒದಗಿಸುವ ಭರವಸೆ ಬೇಕಾಗಿದೆ.

    ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಅಭಿಯಾನದಿಂದಾಗಿ,

    ಯಾರೂ ಮಾಡಿದ ತಪ್ಪಿನಿಂದ ಸಂಪೂರ್ಣ ಸಮುದಾಯದ ಗೌರವ ಹಾಳಾಗಬಾರದು. ಮಂಗಳೂರಿನಂತಹ ನಗರದಲ್ಲಿ ಇಂತಹ ದಂಧೆಗಳು ಮುಂದುವರಿದರೆ, ಅದು ಕೇವಲ ಒಂದು ಸಮುದಾಯವಲ್ಲ, ಪ್ರತಿಯೊಬ್ಬ ಸಾಮಾನ್ಯ ನಾಗರಿಕನಿಗೂ ಅಪಾಯಕಾರಿಯೇ.

    ಸಮಾಜ, ಸರ್ಕಾರ ಮತ್ತು ನಾಗರಿಕರು ಒಟ್ಟಾಗಿ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣವೇ ಕ್ರಮ ಕೈಗೊಳ್ಳಬೇಕು ಅನ್ನುವುದು ಅವ್ರ ಬೇಡಿಕೆ.

    ಫೋಟೋ- ಎಸ್ಕೆ

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಹೆಸರಲ್ಲಿ ನಡಿತಿರೋದೇನು?
    ಪುತ್ತೂರು ಗ್ರಾಮಾಂತರದಲ್ಲಿ ಭೂ ವಿವಾದದ ಗಲಾಟೆ ತೀವ್ರತೆ: ಪರಸ್ಪರ ಹಲ್ಲೆ – ಎರಡು ಪ್ರಕರಣಗಳು ದಾಖಲು
    ಕಾಂಗ್ರೆಸ್–ಮುಸ್ಲಿಂ ಸಮುದಾಯ ಸಂಬಂಧದಲ್ಲಿ ದೊಡ್ಡ ಬಿರುಕು?
    ಸರ್ಕಾರಿ ವೈದ್ಯರ ಅನರ್ದಿಷ್ಟಾವಧಿ ಮುಷ್ಕರ ರದ್ದು
    ಸಾಲ ಮರುಪಾವತಿ ವಿಚಾರಕ್ಕೆ ಜಾಲ್ಸೂರು ರಸ್ತೆಯಲ್ಲೇ ಗಲಾಟೆ ಹಲ್ಲೆ
    ಮಂಗಳೂರು ಬಸ್‌ನಲ್ಲಿ ಗುಪ್ತಾಂಗ ತೋರಿಸಿ ಕಂಡಕ್ಟರ್ ವಿಕೃತ ವರ್ತನೆ: ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ – ಬಂಧನ
    ಪೆರ್ವಾಜೆ ಮಹಾಲಿಂಗೇಶ್ವರ ದೇವಸ್ಥಾನದ ಚೆಕ್‌ಗೆ ನಕಲಿ ಸಹಿ! ನಕಲಿ ಚೆಕ್‌ಗಳೊಂದಿಗೆ ಸಿಕ್ಕಿಬಿದ್ದ ಮಾಜಿ ಸಿಬ್ಬಂದಿ…
    ಬಂಗಾಳದಲ್ಲಿ ಬಿಜೆಪಿಯ ಯುದ್ಧೋನ್ಮಾದ, ದೀದಿಯ ರಚ್ಚೆ…
    ನನ್ನನ್ನು ದುರ್ಬಲ ವ್ಯಕ್ತಿ ಅಂದುಕೊಳ್ಳಬೇಡಿ- U.T ಖಾದರ್
    ನಾಲ್ಕು ವರ್ಷದ ಬಾಲಕಿ  ಅಪಹರಿಸಿ, ಲೈಂಗಿಕ ದೌರ್ಜನ್ಯ ನಡೆಸಿ ಕೊಲೆಗೈದ ಆರೋಪಿಯನ್ನು ಎನ್ಕೌಂಟರ್ ಮಾಡಿದ ಪೊಲೀಸರು
     ಡೊನಾಲ್ಡ್ ಟ್ರಂಪ್ ಟೆರರ್ ನಡೆ      ವಿಶ್ವದ ಆರ್ಥಿಕತೆ ಪಾತಾಳದ ಕೆಡೆ
    ಕೌಶಾಂಬಿಯಲ್ಲಿ ಭೀಕರ LPG ಟ್ಯಾಂಕರ್ ದುರಂತ: ಸಿಸಿಟಿವಿಯಲ್ಲಿ ಸೆರೆಯಾದ ಜೀವಭಯದ ಕ್ಷಣಗಳು – ಮೃತರ ಸಂಖ್ಯೆ 4ಕ್ಕೆ ಏರಿಕೆ
    ಮಹಿಳಾ ಕ್ರಿಕೆಟ್ ವಿಶ್ವಕಪ್ 2026 ಆರಂಭ:ಗಾಯ, ನೋವು, ಟೀಕೆ… ಎಲ್ಲವನ್ನೂ ಮೀರಿ ವಿಶ್ವಕಪ್‌ನಲ್ಲಿ ಭಾರತದ ಮಹಿಳಾ ಪಡೆ!
    ರಸ್ತೆಯ ವಿಚಾರಕ್ಕೆ ನೆರೆಹೊರೆಯರ ನಡುವೆ ಬಾರಿ ಗಲಾಟೆ !
    ಅಕ್ರಮ ಮರಳುಗಾರಿಕೆ, ಕ್ರಮ ಕೈಗೊಂಡ ವೇಣೂರು ಪೊಲೀಸರು
    ಸಂಕಷ್ಟದಲ್ಲಿರುವ ರಾಜ್ಯದ ಜನತೆಗೆ ಬರೆ ಹಾಕಿದ ರಾಜ್ಯ ಸರ್ಕಾರ!
    ವಿದೇಶಿಗರ ಮೇಲೆ ನಿಗಾ ಇಟ್ಟ ಕೇಂದ್ರ ಗೃಹ ಇಲಾಖೆ! ನಿಯಮ ಮೀರಿದರೆ ಕಠಿಣ ಕ್ರಮ ಗ್ಯಾರಂಟಿ! 
    ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ FIR ..!ರಾಹುಲ್ ಗಾಂಧಿ ವಿರುದ್ಧ ವಿವಾದಾತ್ಮಕ ಹೇಳಿಕೆ ರಾಜಕೀಯ ಕಾವು ಏರಿಕೆ!
    ರಾಜ್ಯಸಭೆಗೆ ಬಿಜೆಪಿಯಿಂದ 9 ಜನರ ಪಟ್ಟಿ ಬಿಡುಗಡೆ
    ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ಯಾಂಕಾಕ್‌ನಿಂದ ಬಂದ ಪ್ರಯಾಣಿಕನ ಬ್ಯಾಗ್‌ನಲ್ಲಿ 47 ಜೀವಂತ ಅಪರೂಪದ ಪ್ರಾಣಿಗಳು ಪತ್ತೆ! 
    ಕಂದಾಯ ಸಚಿವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ
    ಜುಲೈ 1ರಿಂದ ದೇಶದಲ್ಲಿ ಹಲವು ಹೊಸ ನಿಯಮಗಳು ಜಾರಿ…ಪಾಸ್‌ಪೋರ್ಟ್, ರೈಲ್ವೆ, ಕ್ರೆಡಿಟ್ ಕಾರ್ಡ್, ಬ್ಯಾಂಕ್… ಒಂದೇ ದಿನದಲ್ಲಿ ಹಲವು ದೊಡ್ಡ ಬದಲಾವಣೆಗಳು
    ಆನ್ ಲೈನ್ ವಂಚನೆ ಶಿರ್ವದ ಯುವತಿಗೆ ಲಕ್ಷ ಲಕ್ಷ ಉಂಡೆನಾಮ… ಬ್ಯಾಂಕ್ ನಿಯಮ ವಂಚಕರಿಗೆ  ಸಹಕಾರಿ?
    ಸೂರತ್‌ನಲ್ಲಿ ಮಳೆಯ ರೌದ್ರನರ್ತನ: 200ಕ್ಕೂ ಹೆಚ್ಚು ಅಂಗಡಿಗಳಿಗೆ ನೀರು ನುಗ್ಗಿ ₹200 ಕೋಟಿ ನಷ್ಟ – ಕಣ್ಣೀರಿನಲ್ಲಿ ಮುಳುಗಿದ ವ್ಯಾಪಾರಿಗಳು
    ಮೋದಿ ಸರ್ಕಾರಕ್ಕೆ ಮತ್ತೊಂದು ಶಾಕ್ …ಕೇಂದ್ರ ಸಚಿವ ಸಂಪುಟಕ್ಕೆ ರವನೀತ್ ಸಿಂಗ್ ಬಿಟ್ಟು ರಾಜೀನಾಮೆ
    ಅಮಾವಾಸ್ಯೆ ಬೈಲ್ ಪೊಲೀಸ್ ಠಾಣೆಯಲ್ಲಿ ಜೀವ ಬೆದರಿಕೆ ಹಾಗೂ ನಿಂದನೆಯ ಪ್ರಕರಣ ದಾಖಲು
    ಪೆಟ್ರೋಲ್–ಡೀಸೆಲ್ ಬೆಲೆ ಏರಿಕೆ ..! ಸಾರ್ವಜನಿಕ ಸಾರಿಗೆ ಬಳಸಿ ,ಇಂಧನ ಉಳಿಸಿ ,Work From Home ಮಾಡಿ ಎಂದಿದ್ದ ಮೋದಿ… ಈಗ ಅದರ ಅರ್ಥ ಸ್ಪಷ್ಟವಾಗುತ್ತಿದೆಯೇ?
    ಸ್ಪೇನ್‌ಗೆ 2ನೇ FIFA ವಿಶ್ವಕಪ್ ಕಿರೀಟ!ನ್ಯೂಯಾರ್ಕ್‌ನಲ್ಲಿ ಮೆಸ್ಸಿಯ ಅರ್ಜೆಂಟೀನಾವನ್ನು ಮಣಿಸಿದ ಸ್ಪೇನ್ ನ ಲಾ ರೋಜಾ ಗೆ ಐತಿಹಾಸಿಕ ಜಯ! 
    ಇಬ್ಬರ ಸಣ್ಣ ಜಗಳದ ಎಫೆಕ್ಟ್ ನೋಡಿ..ಕಡಬದಲ್ಲಿ ಹೈಡ್ರಾಮಾ!ಸಿಲ್ಲಿAngry ಮೂಡ್‌ನಲ್ಲಿ ಎಸೆದ car ಕೀ ಚರಂಡಿಗೆ…
    ಟೂರ್ plan ಮಾಡ್ತಿದ್ದೀರಾ ?ಸ್ಥಳವೇ ಇಲ್ಲದ address ಗೆ online book ಮಾಡಿ ಮೋಸ ಹೋಗ್ಬೇಡಿ…