📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ದ.ಕ ಜಿಲ್ಲಾಡಳಿತದ ಆದೇಶ “ಮಳೆ ರಜೆ “ಉಲ್ಲಂಘಿಸಿ ರಜೆ ಕೊಟ್ಟರೂ class ನಡೆಸಿದ ಹತ್ತಕ್ಕೂ ಹೆಚ್ಚು ಶಾಲೆ-ಕಾಲೇಜುಗಳು ! ಇದೀಗ ನೋಟಿಸ್ ಶಾಕ್..!

    ಮಕ್ಕಳ ಜೀವಕ್ಕಿಂತ ರ್ಯಾಂಕ್ ಮುಖ್ಯವೇ?

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಎಚ್ಚರಿಕೆಯ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಶಾಲೆ ಹಾಗೂ ಕಾಲೇಜುಗಳಿಗೆ2,3 ರಜೆ ಘೋಷಿಸಿದೆ.ಆದರೆ ಕೆಲ ಶಿಕ್ಷಣ ಸಂಸ್ಥೆಗಳು ಈ ಆದೇಶವನ್ನೇ ಲೆಕ್ಕಿಸದೆ ತರಗತಿಗಳನ್ನು ನಡೆಸಿರುವುದು ಇದೀಗ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ವಿದ್ಯಾರ್ಥಿಗಳ ಸುರಕ್ಷತೆಯನ್ನು ಮೊದಲ ಆದ್ಯತೆಯಾಗಿ ಪರಿಗಣಿಸಿ ನೀಡಿರುವ ರಜೆಯನ್ನು ನಿರ್ಲಕ್ಷ್ಯ ಮಾಡಿದ ಹತ್ತಕ್ಕೂ ಹೆಚ್ಚು ಶಾಲೆ-ಕಾಲೇಜುಗಳಿಗೆ ಜಿಲ್ಲಾಡಳಿತ ಹಾಗೂ ವಿಪತ್ತು ನಿರ್ವಹಣಾ ಪ್ರಾಧಿಕಾರ ನೋಟಿಸ್ ಜಾರಿಗೊಳಿಸಿದೆ.

    ಅಚ್ಚರಿಯ ಸಂಗತಿಯೆಂದರೆ, ಈ ಪ್ರಕರಣದಲ್ಲಿ ದೂರು ನೀಡಿದವರಲ್ಲಿ ಬಹುತೇಕರು ವಿದ್ಯಾರ್ಥಿಗಳೇ ಆಗಿದ್ದಾರೆ. ದೂರವಾಣಿ ಕರೆಗಳು ಹಾಗೂ ಇತರೆ ಮಾರ್ಗಗಳ ಮೂಲಕ ವಿದ್ಯಾರ್ಥಿಗಳು ಮಾಹಿತಿ ನೀಡಿದ ನಂತರವೇ ಅಧಿಕಾರಿಗಳು ಪರಿಶೀಲನೆ ನಡೆಸಿ ಕ್ರಮ ಕೈಗೊಂಡಿದ್ದಾರೆ. ಇದರಿಂದ ಮಕ್ಕಳಿಗೂ ತಮ್ಮ ಸುರಕ್ಷತೆಯ ಬಗ್ಗೆ ಎಷ್ಟು ಕಾಳಜಿ ಇದೆ ಎಂಬುದು ಸ್ಪಷ್ಟವಾಗಿದೆ.

    ಮಳೆ ರಜೆ ಎಂದರೆ ಅದು ಕೇವಲ ಒಂದು ದಿನದ “ಹಾಲಿಡೇ” ಅಲ್ಲ. ಭಾರೀ ಮಳೆ, ರಸ್ತೆ ಕುಸಿತ, ಗುಡ್ಡ ಕುಸಿತ, ಮರ ಬೀಳುವುದು, ಪ್ರವಾಹ, ವಿದ್ಯುತ್ ಅವಘಡಗಳಂತಹ ಅಪಾಯಗಳಿಂದ ವಿದ್ಯಾರ್ಥಿಗಳನ್ನು ರಕ್ಷಿಸುವ ಮುನ್ನೆಚ್ಚರಿಕಾ ಕ್ರಮವೇ ಮಳೆ ರಜೆ. ಮಕ್ಕಳ ಜೀವ ಸುರಕ್ಷಿತವಾಗಿರಲಿ ಎಂಬ ಉದ್ದೇಶದಿಂದ ಜಿಲ್ಲಾಡಳಿತ ಈ ನಿರ್ಧಾರ ಕೈಗೊಳ್ಳುತ್ತದೆ.

    ಆದರೆ ಕೆಲವು ಶಾಲೆಗಳು ಉತ್ತಮ ಫಲಿತಾಂಶ, ಶೇಕಡಾವಾರು ಅಂಕ, ರ್ಯಾಂಕ್ ಹಾಗೂ ಸಿಲೆಬಸ್ ಪೂರ್ಣಗೊಳಿಸುವ ಒತ್ತಡದ ನೆಪದಲ್ಲಿ ರಜೆ ದಿನವೂ ವಿದ್ಯಾರ್ಥಿಗಳನ್ನು ಶಾಲೆಗೆ ಕರೆಸಿರುವ ಆರೋಪ ಕೇಳಿಬಂದಿದೆ. ಇಂತಹ ನಿರ್ಧಾರದಿಂದ ಮಳೆಗಾಲದ ಅಪಾಯವನ್ನು ಲೆಕ್ಕಿಸದೆ ಮಕ್ಕಳನ್ನು ರಸ್ತೆಗೆ ಇಳಿಸುವ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಈ ಬಾರಿ ಮೊದಲ ಹಾಗೂ ಎರಡನೇ ಬಾರಿ ರಜೆ ಘೋಷಿಸಿದಾಗ ಅಧಿಕಾರಿಗಳು ಕೇವಲ ಎಚ್ಚರಿಕೆ ನೀಡಿ ಶಾಲೆಗಳನ್ನು ಮುಚ್ಚಿಸಿದ್ದರು. ಆದರೆ ಮೂರನೇ ಬಾರಿ ಕೂಡ ಆದೇಶ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ನೇರವಾಗಿ ನೋಟಿಸ್ ಜಾರಿಗೊಳಿಸಲಾಗಿದೆ. ಶಾಲೆಗಳು ತಮ್ಮ ವಿವರಣೆ ಸಲ್ಲಿಸಬೇಕಿದ್ದು, ತೃಪ್ತಿಕರ ಉತ್ತರ ಸಿಗದಿದ್ದರೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ.

    ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ದರ್ಶನ್ ಎಚ್.ವಿ. ಅವರ ಪ್ರಕಾರ, ಮುಂದೆ ಇಂತಹ ಉಲ್ಲಂಘನೆ ಮರುಕಳಿಸಿದರೆ ಸಂಬಂಧಿಸಿದ ಶಾಲೆಯ ಮಾನ್ಯತೆ ಅಥವಾ ಪರವಾನಗಿ ರದ್ದುಪಡಿಸುವಂತೆ ಸರ್ಕಾರಕ್ಕೆ ಶಿಫಾರಸು ಮಾಡುವ ಸಾಧ್ಯತೆಯೂ ಇದೆ. ವಿಪತ್ತು ನಿರ್ವಹಣಾ ಕಾಯ್ದೆಯಡಿ ಕಠಿಣ ಕ್ರಮಗಳಿಗೂ ಅವಕಾಶವಿದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

    ಇನ್ನೊಂದೆಡೆ, ಮಳೆಗಾಲದಲ್ಲಿ ತಾಲೂಕು ಮಟ್ಟದ ರಜೆ ಘೋಷಣೆ ವ್ಯವಸ್ಥೆಯಲ್ಲೂ ಬದಲಾವಣೆ ಮಾಡುವ ಬಗ್ಗೆ ಜಿಲ್ಲಾಡಳಿತ ಚಿಂತನೆ ನಡೆಸಿದೆ. ಮುಂಜಾನೆ ಕೊನೆಯ ಕ್ಷಣದಲ್ಲಿ ರಜೆ ಘೋಷಿಸುವ ಬದಲು, ಮಳೆಯ ಪರಿಸ್ಥಿತಿ, ತಹಸೀಲ್ದಾರ್, ಬಿಇಒ ಹಾಗೂ ಸ್ಥಳೀಯ ಅಧಿಕಾರಿಗಳ ವರದಿ ಆಧರಿಸಿ ಸಾಧ್ಯವಾದಷ್ಟು ಮುಂಚಿತವಾಗಿ ನಿರ್ಧಾರ ಪ್ರಕಟಿಸುವ ಉದ್ದೇಶವಿದೆ. ಇದರಿಂದ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಅನಗತ್ಯ ಗೊಂದಲ ತಪ್ಪಲಿದೆ.

    ಪೋಷಕರು ಮತ್ತು ವಿದ್ಯಾರ್ಥಿಗಳು ಏನು ಮಾಡಬೇಕು? ಜಿಲ್ಲಾಡಳಿತ ಅಧಿಕೃತವಾಗಿ ರಜೆ ಘೋಷಿಸಿದರೆ ಯಾವುದೇ ಒತ್ತಡಕ್ಕೆ ಮಣಿದು ಮಕ್ಕಳನ್ನು ಶಾಲೆಗೆ ಕಳುಹಿಸಬಾರದು. ಶಾಲೆಯಿಂದ ಕರೆ ಬಂದರೂ ಮೊದಲು ಜಿಲ್ಲಾಡಳಿತದ ಆದೇಶವನ್ನು ಪರಿಶೀಲಿಸಬೇಕು. ಎಲ್ಲಿಯಾದರೂ ಆದೇಶ ಉಲ್ಲಂಘಿಸಿ ತರಗತಿ ನಡೆಸುತ್ತಿರುವುದು ಕಂಡುಬಂದರೆ ಜಿಲ್ಲಾಡಳಿತ, ಶಿಕ್ಷಣ ಇಲಾಖೆ ಅಥವಾ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ಮಾಹಿತಿ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ.

    ಒಂದು ದಿನದ ಪಾಠವನ್ನು ಮತ್ತೆ ಕಲಿಸಬಹುದು. ಒಂದು ಪರೀಕ್ಷೆಯನ್ನು ಮತ್ತೆ ಬರೆಯಬಹುದು. ಆದರೆ ಮಳೆಯಿಂದ ಸಂಭವಿಸುವ ಅವಘಡದಲ್ಲಿ ಕಳೆದುಹೋದ ಒಂದು ಜೀವವನ್ನು ಯಾವತ್ತೂ ಮರಳಿ ತರಲು ಸಾಧ್ಯವಿಲ್ಲ. ಆದ್ದರಿಂದ ಮಳೆ ರಜೆಯ ಉದ್ದೇಶವನ್ನು ಅರ್ಥಮಾಡಿಕೊಂಡು ಶಾಲಾ ಆಡಳಿತ, ಪೋಷಕರು ಹಾಗೂ ವಿದ್ಯಾರ್ಥಿಗಳು ಎಲ್ಲರೂ ಸುರಕ್ಷತೆಯನ್ನೇ ಮೊದಲ ಆದ್ಯತೆಯಾಗಿ ಪರಿಗಣಿಸಬೇಕು. ರ್ಯಾಂಕ್, ಪರ್ಸೆಂಟೇಜ್ ಮತ್ತು ಸ್ಕೋರ್‌ಗಿಂತ ಮಕ್ಕಳ ಜೀವವೇ ಅಮೂಲ್ಯ.

    ##RainHoliday #DakshinaKannada #SchoolNotice #StudentSafety #HeavyRainAlert #KarnatakaNews

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    🔥 “Get out of here! — ಸೂಪರ್ women ವಿರುದ್ಧವೇ ಕೇಸ್?!!
    🚨4 ವರ್ಷಗಳಿಂದ ಪೊಲೀಸರಿಗೆ ತಪ್ಪಿಸಿಕೊಂಡಿದ್ದ 17 ಪ್ರಕರಣಗಳ ಆರೋಪಿಯ ಡ್ರಾಮಾಟಿಕ್ ಬಂಧನ!
    Cocktail 2 ಸುತ್ತ ರಶ್ಮಿಕಾ ಮಂದಣ್ಣ ಕ್ರಿಯೇಟ್ ಮಾಡಿದ ಹೈಪ್ ಎಷ್ಟು ಗೊತ್ತಾ?ಅನ್ಟೋಲ್ಡ್ ಮಸಾಲೆ ಸ್ಟೋರಿಗಳು ಇಲ್ಲಿವೆ!
    ಅನಾಥ ಪುಟ್ಟ ಬಾಲಕಿಯರ ಮೇಲೆ ವರ್ಷಗಳ ಕಾಲ ಲೈಂಗಿಕ ದೌರ್ಜನ್ಯ:ರಾಕ್ಷಸ ಮನಸ್ಸುಗಳಿಗೆ ಅಂತ್ಯ ಯಾವಾಗ?
    ಜಿಲ್ಲಾ ಸರ್ಜನ್ ಡಾ. ಅಶೋಕ್ರನ್ನು ತಕ್ಷಣವೇ ಅಮಾನತು ಮಾಡಿ- ದ.ಸಂ.ಸ. ಆಗ್ರಹ
    ಕಾಂಗ್ರೆಸ್ ನಿಂದ ”MLC ಮಾಡಿಸುತ್ತೇನೆ” ಎಂದು 1.5 ಕೋಟಿ ವಂಚನೆ ಆರೋಪ
    ಎಲ್ಲರಿಗೂ ಯುಗಾದಿ ಹಬ್ಬ… ಆದರೆ ಈ ಗ್ರಾಮಗಳಲ್ಲಿ ಭಯ ಮೌನ…ಹಬ್ಬ ಇಲ್ಲ…!ಒಂದು ವಿಚಿತ್ರ ಕಥೆ!
    ಕುಂದಾಪುರ ಗಂಗೊಳ್ಳಿಯಲ್ಲಿ ಕತ್ತಿ  ದೊಣ್ಣೆಗಳಿಂದ ಮಾರಾಮಾರಿ; ವೈರಲ್ ವಿಡಿಯೋದಿಂದ ಪ್ರಕರಣಕ್ಕೆ ಹೊಸ ತಿರುವು?
    *ಬೈಕಂಪಾಡಿ ಹೆದ್ದಾರಿ ಡಕಾಯಿತಿ, 23 ಲಕ್ಷ ಮೌಲ್ಯದ ಸೊತ್ತು ದರೋಡೆ ಪ್ರಕರಣ: 3 ಆರೋಪಿಗಳು ಸೆರೆ.
    ಲೈಂಗಿಕ ಕಿರುಕುಳ ನೀಡಿದ ಬಾಸ್‌ಗೆ ಪೊಲೀಸರ ಮುಂದೆಯೇ ಮುಖಕ್ಕೆ ಮಸಿ ಬಳಿದು ಕೆನ್ನೆಗೆ ಬಾರಿಸಿದ ಮಹಿಳೆ!
    ನೆತನ್ಯಾಹು ಎಲ್ಲಿದ್ದಾರೆ? ಬದುಕಿದ್ದರೆ ಹಿಂಬಾಲಿಸಿ ಕೊಲ್ಲುತ್ತೇವೆ ಎಂದ ಇರಾನ್
    ಎಸ್.ಎಸ್.ಎಲ್.ಸಿ. ಪರೀಕ್ಷೆ: ಮಂಗಳೂರಲ್ಲಿ ನಿಷೇಧಾಜ್ಞೆ ಜಾರಿ
    35 ವಾರಂಟ್ ಇದ್ದ ಆರೋಪಿಯು ವಿದೇಶದಿಂದ ಮರಳುತ್ತಿದ್ದಾಗ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ
    ಐಸಿಸ್ ನೆರವು ಜಾಲದ ಮೇಲೆ ಇ.ಡಿ ಸರ್ಜಿಕಲ್ ಸ್ಟ್ರೈಕ್..! ಬೆಂಗಳೂರಿನ 8 ಕಡೆ ಏಕಕಾಲಕ್ಕೆ ದಾಳಿ
    ಎಥೆನಾಲ್ ಮಿಶ್ರಿತ ಇಂಧನದಿಂದ ವಾಹನಗಳಿಗೆ ಸಮಸ್ಯೆ ಇಲ್ಲ – ನಿತಿನ್ ಗಡ್ಕರಿ
    ಕೋವಿಡ್ ಶೀಲ್ಡ್ ಸೈಡ್ ಎಫೆಕ್ಟ್ ಒಪ್ಪಿಕೊಂಡ ಕಂಪನಿ
    ಮೊಹಾಲಿ ಬೆಚ್ಚಿಬೀಳಿಸಿದ ಕಚೇರಿ ಕೊಲೆ: ಮಹಿಳೆ ಮೇಲೆ ಮಾರಣಾಂತಿಕ ದಾಳಿ, ದೇಶಾದ್ಯಂತ ಆಕ್ರೋಶ…
    “ಜೆನ್‌ ಜಿಯ ಧ್ವನಿ ದೇಶದ್ರೋಹವಲ್ಲ” – ಶಿಕ್ಷಣ ಸುಧಾರಣೆಗೆ ಎದ್ದ ಯುವ ಆಕ್ರೋಶಕ್ಕೆ RSS ಮೋಹನ್ ಭಾಗವತ್ ಬೆಂಬಲ…..
    ಹೆಚ್.ಪಿ.ವಿ. ಚುಚ್ಚು ಮದ್ದಿನ ಬಗ್ಗೆ ಗೊಂದಲ ಬೇಡ: ಜಿಲ್ಲಾ ಆರೋಗ್ಯಾಧಿಕಾರಿ ಸ್ಪಷ್ಟನೆ
    ಉಡುಪಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಕಾನೂನುಬಾಹಿರ ಚಟುವಟಿಕೆ
    ಸಹಕಾರ ಕ್ಷೇತ್ರದ ಅಭಿವೃದ್ಧಿ ಕುರಿತು ಸಿಎಂ ಡಿಕೆಶಿ ಜೊತೆ ಸಮಾಲೋಚನೆ
    ಬೆಳಕು-ನೆರಳಿನ ಕಾವ್ಯ: ಕಾಲವನ್ನೇ ಕಟ್ಟಿಹಾಕುವ ಛಾಯಾಚಿತ್ರಗಳ ವೈಭವ
    ಬೀದಿ ನಾಯಿಗಳ ಹಾವಳಿ ಮಾನವ ಜೀವ ರಕ್ಷಣೆಗೆ ಮೊದಲ ಆದ್ಯತೆ — ಸುಪ್ರೀಂ ಕೋರ್ಟ್‌ನ ಕಠಿಣ ನಿಲುವು
    ಇನ್ನು ಹೈವೇಯಲ್ಲಿ ಲಿಮಿಟ್ ಗಿಂತ ವೇಗವಾಗಿ ಹೋಗುವವರು ಹುಷಾರಾಗಿರಿ…
    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಮಚ್ಚು ದಾಳಿ: ಕಾಲೇಜಿಗೆ ತೆರಳುತ್ತಿದ್ದ ಪಿಯುಸಿ ವಿದ್ಯಾರ್ಥಿನಿ ಮೇಲೆ ಹಲ್ಲೆ; ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು
    ತಿಮರೋಡಿ ಸೇರಿ ನಾಲ್ವರಿಗೆ ಕೇಸ್…
    ಸೂರತ್‌ನಲ್ಲಿ ಮಳೆಯ ರೌದ್ರನರ್ತನ: 200ಕ್ಕೂ ಹೆಚ್ಚು ಅಂಗಡಿಗಳಿಗೆ ನೀರು ನುಗ್ಗಿ ₹200 ಕೋಟಿ ನಷ್ಟ – ಕಣ್ಣೀರಿನಲ್ಲಿ ಮುಳುಗಿದ ವ್ಯಾಪಾರಿಗಳು
    ಅಕ್ರಮ ಮರಳುಗಾರಿಕೆ, ಕ್ರಮ ಕೈಗೊಂಡ ವೇಣೂರು ಪೊಲೀಸರು
    ದೇವರ ಮುಂದೆ ಸಾಲಿನಲ್ಲಿ ನಿಲ್ಲಲೇಬೇಕು! ಮಂತ್ರಿ ಇರಲಿ, ಸೆಲೆಬ್ರಿಟಿ ಇರಲಿ…ಅಧಿಕಾರ ಇರಲಿ, ಅಂತಸ್ತು ಇರಲಿ…”ವಿಐಪಿ ದರ್ಶನ”ಕ್ಕೆ ಹೈಕೋರ್ಟ್ ಕೊಟ್ಟ ಚಾವಟಿ ಏಟು!
    ಬಿಡದಿ “ಸಮಗ್ರ ಉಪನಗರ” ಯೋಜನೆ ಕೈಬಿಡಿ: ಸಿಎಂ ಡಿಕೆ ಶಿಗೆ ಎಚ್.ಡಿ. ದೇವೇಗೌಡ ಪತ್ರ