📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    “ಧುರಂಧರ್” ನಟ ರಣವೀರ್ ಸಿಂಗ್‌ ವಿರುದ್ಧ ಇಡೀ ಬಾಲಿವುಡ್ ಒಕ್ಕೂಟವೇ ತಿರುಗಿಬಿದ್ದಿದ್ದೇಕೆ? shocking ₹45 ಕೋಟಿ ವಿವಾದದ ಅಸಲಿ ಕಥೆ ಇಲ್ಲಿದೆ!

    ಬಾಲಿವುಡ್ ಅಂಗಳದಲ್ಲಿ ಭಾರಿ ಸಂಚಲನ ಸೃಷ್ಟಿಸಿರುವ ಸೂಪರ್‌ಸ್ಟಾರ್ ರಣವೀರ್ ಸಿಂಗ್ ಮತ್ತು ‘ಡಾನ್ 3’ (Don 3) ಚಿತ್ರತಂಡದ ನಡುವಿನ ವಿವಾದ ಏನಿದು..,

    ಬಾಲಿವುಡ್‌ನಲ್ಲಿ ರಣವೀರ್ ಸಿಂಗ್‌ಗೆ ಬಿಗ್ ಶಾಕ್: ‘ಡಾನ್ 3’ ಚಿತ್ರದಿಂದ ಔಟ್ ಬೆನ್ನಲ್ಲೇ ನಟನಿಗೆ ಬಿತ್ತು ಅಸಹಕಾರ ಬ್ಯಾನ್!

    ಬಾಲಿವುಡ್‌ನ ಬಹುನಿರೀಕ್ಷಿತ ಆಕ್ಷನ್ ಫ್ರಾಂಚೈಸಿ ‘ಡಾನ್ 3’ (Don 3) ಚಿತ್ರೀಕರಣ ಆರಂಭಕ್ಕೂ ಮುನ್ನವೇ ಭಾರಿ ವಿವಾದದ ಸುಳಿಗೆ ಸಿಲುಕಿದೆ. ಚಿತ್ರದ ನಾಯಕನಾಗಿ ಆಯ್ಕೆಯಾಗಿದ್ದ ಸೂಪರ್‌ಸ್ಟಾರ್ ರಣವೀರ್ ಸಿಂಗ್ (Ranveer Singh) ಅವರು ಕೊನೆಯ ಕ್ಷಣದಲ್ಲಿ ಸಿನಿಮಾದಿಂದ ದಿಢೀರ್ ಹೊರನಡೆದಿದ್ದು, ಈಗ ಅವರ ವಿರುದ್ಧ ಇಡೀ ಚಿತ್ರರಂಗವೇ ತಿರುಗಿಬೀಳುವಂತೆ ಮಾಡಿದೆ. ಮುಂಬೈನ ಪ್ರಭಾವಿ ಸಿನಿಕಾರ್ಮಿಕರ ಒಕ್ಕೂಟವಾದ FWICE (Federation of Western India Cine Employees) ರಣವೀರ್ ಸಿಂಗ್ ವಿರುದ್ಧ ‘ಅಸಹಕಾರ ನಿರ್ದೇಶನ’ (Non-Cooperation Directive) ಹೊರಡಿಸುವ ಮೂಲಕ ಬಾಲಿವುಡ್‌ನಲ್ಲಿ ಅವರಿಗೆ ಅಘೋಷಿತ ಬ್ಯಾನ್ ಬಿಸಿ ಮುಟ್ಟಿಸಿದೆ!

    ₹45 ಕೋಟಿ ನಷ್ಟದ ಕ್ಲೈಮ್ ಮತ್ತು ಇಲಾಖೆಯ ಎಂಟ್ರಿ

    ಸಿನಿಮಾ ಶೂಟಿಂಗ್‌ಗಾಗಿ ಕಳೆದ ಮೂರು ವರ್ಷಗಳಿಂದ ಪ್ರೀ-ಪ್ರೊಡಕ್ಷನ್ (Pre-production) ಕೆಲಸಗಳು ನಡೆಯುತ್ತಿದ್ದವು. ರಣವೀರ್ ಅವರ ದಿಢೀರ್ ಎಕ್ಸಿಟ್‌ನಿಂದಾಗಿ ತಮಗೆ ಅಂದಾಜು ₹45 ಕೋಟಿ ನಷ್ಟವಾಗಿದೆ ಎಂದು ನಿರ್ಮಾಪಕ ಫರ್ಹಾನ್ ಅಖ್ತರ್ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಅವರು ನಿರ್ದೇಶಕರ ಸಂಘಕ್ಕೆ (IFTDA) ದೂರು ನೀಡಿದ್ದರು, ಬಳಿಕ ಈ ಮ್ಯಾಟರ್ 4 ಲಕ್ಷಕ್ಕೂ ಅಧಿಕ ಕಾರ್ಮಿಕರನ್ನು ಹೊಂದಿರುವ FWICE ಒಕ್ಕೂಟದ ಕೈ ಸೇರಿತು.

    ವಿವಾದದ ಕಿಡಿ ಹೊತ್ತಿಕೊಂಡಿದ್ದು ಹೇಗೆ?

    ಅಮಿತಾಭ್ ಬಚ್ಚನ್ ಮತ್ತು ಶಾರುಖ್ ಖಾನ್ ನಟಿಸಿ ಸೈ ಎನಿಸಿಕೊಂಡಿದ್ದ ಐಕಾನಿಕ್ ‘ಡಾನ್’ ಪಾತ್ರಕ್ಕೆ, 2023ರಲ್ಲಿ ನಿರ್ದೇಶಕ ಫರ್ಹಾನ್ ಅಖ್ತರ್ ಮತ್ತು ನಿರ್ಮಾಪಕ ರಿತೇಶ್ ಸಿಧ್ವಾನಿ (ಎಕ್ಸೆಲ್ ಎಂಟರ್‌ಟೈನ್‌ಮೆಂಟ್) ಹೊಸ ಡಾನ್ ಆಗಿ ರಣವೀರ್ ಸಿಂಗ್ ಅವರನ್ನು ಅಧಿಕೃತವಾಗಿ ಘೋಷಿಸಿದ್ದರು. ಆದರೆ, ಚಿತ್ರದ ಶೂಟಿಂಗ್ ಆರಂಭವಾಗಲು ಕೇವಲ 3 ವಾರಗಳು ಬಾಕಿ ಇರುವಾಗ, ರಣವೀರ್ ಸಿಂಗ್ ಚಿತ್ರಕಥೆಯಲ್ಲಿ ಬದಲಾವಣೆ ಮಾಡುವಂತೆ ಪಟ್ಟು ಹಿಡಿದರು ಎನ್ನಲಾಗಿದೆ. ಇದಕ್ಕೆ ಮೇಕರ್ಸ್ ಒಪ್ಪದಿದ್ದಾಗ, ರಣವೀರ್ ದಿಢೀರನೆ ಸಿನಿಮಾದಿಂದ ಹೊರನಡೆದಿದ್ದಾರೆ.

    ಈಗ ‘ಡಾನ್ 3’ ಕಥೆ ಏನಾಗುತ್ತೆ?

    ಸದ್ಯಕ್ಕೆ ರಣವೀರ್ ಸಿಂಗ್ ಹೊರನಡೆದಿರುವುದರಿಂದ ‘ಡಾನ್ 3’ ಚಿತ್ರದ ಭವಿಷ್ಯ ಅನಿಶ್ಚಿತತೆಯಲ್ಲಿದೆ. ರಣವೀರ್ ಜಾಗಕ್ಕೆ ಮತ್ತೊಬ್ಬ ಸ್ಟಾರ್ ನಟ ಹೃತಿಕ್ ರೋಷನ್ ಬstatusರಬಹುದು ಎಂಬ ವದಂತಿ ಇತ್ತಾದರೂ, ಹೃತಿಕ್ ಅದನ್ನು ನಿರಾಕರಿಸಿದ್ದಾರೆ. ಇತ್ತ ಚಿತ್ರದ ನಾಯಕಿಯಾಗಿದ್ದ ಕಿಯಾರಾ ಅಡ್ವಾಣಿ ಕೂಡ ಹೊರನಡೆದಿದ್ದು, ಕೃತಿ ಸನೂನ್ ಹೆಸರು ಕೇಳಿಬರುತ್ತಿದೆ. ಒಟ್ಟಿನಲ್ಲಿ ರಣವೀರ್ ಸಿಂಗ್ ಅವರ ಈ ಒಂದು ನಿರ್ಧಾರ ಬಾಲಿವುಡ್‌ನಲ್ಲಿ ದೊಡ್ಡ ಬಿರುಗಾಳಿಯನ್ನೇ ಸೃಷ್ಟಿಸಿದೆ.

    FWICE ಬ್ಯಾನ್‌ನ ಅಸಲಿ ಕಥೆಯೇನು?

    FWICE ಸಂಘಟನೆಯು ರಣವೀರ್ ಸಿಂಗ್‌ಗೆ ತಮ್ಮ ವಾದ ಮಂಡಿಸಲು ಮೂರು ಬಾರಿ ನೋಟಿಸ್ ನೀಡಿತ್ತು. ಆದರೆ ರಣವೀರ್ ಸಿಂಗ್, ಇದು ಕರಾರು ಒಪ್ಪಂದಕ್ಕೆ ಸಂಬಂಧಿಸಿದ ವಿಷಯವಾಗಿದ್ದು, ಇದಕ್ಕೆ ಉತ್ತರಿಸಲು FWICE ಸರಿಯಾದ ವೇದಿಕೆಯಲ್ಲ ಎಂದು ಇಮೇಲ್ ಮೂಲಕ ಖಾರವಾಗಿ ಪ್ರತಿಕ್ರಿಯಿಸಿದ್ದರು.

    ಇದರಿಂದ ಆಕ್ರೋಶಗೊಂಡ FWICE ಅಧ್ಯಕ್ಷ ಬಿ.ಎನ್. ತಿವಾರಿ ಮತ್ತು ಮುಖ್ಯ ಸಲಹೆಗಾರ ಅಶೋಕ್ ಪಂಡಿತ್ ಸುದ್ದಿಗೋಷ್ಠಿ ನಡೆಸಿ, “ಯಾವೊಬ್ಬ ಸೂಪರ್‌ಸ್ಟಾರ್ ಕೂಡ ಚಿತ್ರರಂಗದ ನಿಯಮಗಳಿಗಿಂತ ದೊಡ್ಡವನಲ್ಲ. ಇನ್ಮುಂದೆ ನಮ್ಮ ಒಕ್ಕೂಟದ ಯಾವುದೇ ಕ್ಯಾಮೆರಾಮನ್, ಲೈಟ್‌ಮ್ಯಾನ್, ಸ್ಪಾಟ್ ಬಾಯ್ ಅಥವಾ ತಂತ್ರಜ್ಞರು ರಣವೀರ್ ಸಿಂಗ್ ಸಿನಿಮಾಗಳಿಗೆ ಕೆಲಸ ಮಾಡುವುದಿಲ್ಲ”ಎಂದು ಘೋಷಿಸಿದ್ದಾರೆ.

    ಮೌನ ಮುರಿದ ರಣವೀರ್ ಸಿಂಗ್!

    ಈ ವಿವಾದ ಇಡೀ ದೇಶಾದ್ಯಂತ ದೊಡ್ಡ ಸುದ್ದಿಯಾಗುತ್ತಿದ್ದಂತೆ ನಟ ರಣವೀರ್ ಸಿಂಗ್ ಅವರ ವಕ್ತಾರರು ಅಧಿಕೃತ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ.

    “ರಣವೀರ್ ಸಿಂಗ್ ಅವರಿಗೆ ಚಿತ್ರರಂಗ ಹಾಗೂ ‘ಡಾನ್’ ಫ್ರಾಂಚೈಸಿ ಮೇಲೆ ಅಪಾರ ಗೌರವವಿದೆ. ವೃತ್ತಿಪರ ಚರ್ಚೆಗಳನ್ನು ಗೌರವ ಮತ್ತು ಪ್ರಬುದ್ಧತೆಯಿಂದ ಬಗೆಹರಿಸಿಕೊಳ್ಳಬೇಕು ಎಂದು ಅವರು ನಂಬಿರುವುದರಿಂದಲೇ ಈವರೆಗೆ ಮೌನವಾಗಿದ್ದಾರೆ. ಸೋಷಿಯಲ್ ಮೀಡಿಯಾದ ಊಹಾಪೋಹಗಳಿಗೆ ಉತ್ತರಿಸುವ ಅಗತ್ಯ ಅವರಿಗೆ ಅನಿಸಿಲ್ಲ. ಅವರು ತಮ್ಮ ಮುಂದಿನ ಸಿನಿಮಾಗಳತ್ತ ಗಮನ ಹರಿಸಿದ್ದಾರೆ” ಎಂದು ತಿಳಿಸಿದ್ದಾರೆ.

    ##RanveerSingh #Don3Controversy #FarhanAkhtar #FWICEBan #BollywoodNews #RanveerSinghBanned #Don3Movie #KannadaCinemaNews

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಮಂಗಳೂರು ಕಮಿಷನರ್ ವಿರುದ್ಧ ಎಸ್ಪಿ ಕಾಶಿನಾಥ್ ದೂರು ಕೊಡುತ್ತಿರುವುದು ಯಾಕೆ?
    ಪಾಕಿಸ್ತಾನಕ್ಕೆ ಭಾರತೀಯ ಸೇನಾ ಮುಖ್ಯಸ್ಥರ ಕಠಿಣ ಎಚ್ಚರಿಕೆ ದ್ವಿವೇದಿ ವಾರ್ನಿಂಗ್ ವೈರಲ್!” “ಭೂಗೋಳದ ಭಾಗವಾಗಿರಬೇಕೆ ಅಥವಾ ಇತಿಹಾಸದ ಭಾಗವಾಗಬೇಕೆ ?”
    ಪ್ರಧಾನಿ ಮೋದಿ ಇಂದು ಬಂಟ್ವಾಳ ಸೇರಿ ಕರ್ನಾಟಕದ 4 ನವೀಕೃತ ರೈಲುನಿಲ್ದಾಣಗಳು ಲೋಕಾರ್ಪಣೆ..!
    ಮಕ್ಕಳ ಸುರಕ್ಷತೆಯೇ ಮುಖ್ಯ – ಸಂದೇಶ ಕೊಟ್ಟ ಹೈಕೋರ್ಟ್
    ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ
    ಪ್ರಜ್ಞಾನಂದನ ದಿಗ್ವಿಜಯ…ಚೆಸ್ ಚಕ್ರವ್ಯೂಹದಲ್ಲಿ ದಿಗ್ಗಜರನ್ನೆಲ್ಲಾ ಮಣಿಸಿ ಸಿಂಹಾಸನಕ್ಕೇರಿದ ಭಾರತೀಯ ಬಾಲಪ್ರತಿಭೆ! 
    ಜೈನ ಸನ್ಯಾಸ ದೀಕ್ಷೆ ನಿಯಮಗಳು ಏನು ಗೊತ್ತಾ?
    ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್ ಭೂಷಣ್ ಸಿಂಗ್‌ಗೆ ದೆಹಲಿ ಕೋರ್ಟ್‌ನಿಂದ ಖುಲಾಸೆ
    ಇಂದು ಬೆಳ್ಳಂ ಬೆಳಗ್ಗೆ ಪಲ್ಟಿ ಯಾದ ಬಸ್… ಒಬ್ಬ ಸಾವು ಹಲವರಿಗೆ ಗಾಯ
    50 ಸಾವಿರ ಸಾಲಕ್ಕೆ ಸವಣೂರು ಪೇಟೆಯಲ್ಲಿ ರಕ್ತಸಿಕ್ತ ಘರ್ಷಣೆ ..
    ಡೆಲಿವರಿ ಬಾಯ್‌ಗೆ ಅಡ್ಡಗಟ್ಟಿ ಹಲ್ಲೆ – ಪ್ರಕರಣ ದಾಖಲು
    24 ಭಾರತೀಯರಿದ್ದ ಹಡಗಿನ ಮೇಲೆ ಅಮೆರಿಕಾ ದಾಳಿ: 3 ನಾವಿಕರ ಜೀವ ಬಲಿ
    ಮಂಗಳೂರು ಹಂಪನಕಟ್ಟೆಯಲ್ಲಿ ಶೂ ಅಂಗಡಿಗೆ ಬೆಂಕಿ; ಅಪಾರ ನಷ್ಟ, ಅವಘಡದಿಂದ ಎಚ್ಚೆತ್ತ ವ್ಯಾಪಾರಿಗಳು…!
    ಜುಲೈ 1ರಿಂದ ದೇಶದಲ್ಲಿ ಹಲವು ಹೊಸ ನಿಯಮಗಳು ಜಾರಿ…ಪಾಸ್‌ಪೋರ್ಟ್, ರೈಲ್ವೆ, ಕ್ರೆಡಿಟ್ ಕಾರ್ಡ್, ಬ್ಯಾಂಕ್… ಒಂದೇ ದಿನದಲ್ಲಿ ಹಲವು ದೊಡ್ಡ ಬದಲಾವಣೆಗಳು
    *ಬೈಕಂಪಾಡಿ ಹೆದ್ದಾರಿ ಡಕಾಯಿತಿ, 23 ಲಕ್ಷ ಮೌಲ್ಯದ ಸೊತ್ತು ದರೋಡೆ ಪ್ರಕರಣ: 3 ಆರೋಪಿಗಳು ಸೆರೆ.
    ಎಸ್.ಎಸ್.ಎಲ್.ಸಿ. ಪರೀಕ್ಷೆ: ಮಂಗಳೂರಲ್ಲಿ ನಿಷೇಧಾಜ್ಞೆ ಜಾರಿ
    ಭಾರತದ ಟ್ರಾಫಿಕ್ ಕಿರಿಕಿರಿಗೆ ಇದುವರೆಗೂ ಯಾರೂ ಯೋಚಿಸದ ಮಾಸ್ಟರ್ ಪ್ಲಾನ್!ಉಬರ್ ಡ್ರೈವರ್ ಕೊಟ್ಟ ಐಡಿಯಾ ಕೇಳಿದ್ರೆ ನೀವೂ ಹೌದಲ್ವಾ ಅಂತೀರಾ….
    ಮೊಹಾಲಿ ಬೆಚ್ಚಿಬೀಳಿಸಿದ ಕಚೇರಿ ಕೊಲೆ: ಮಹಿಳೆ ಮೇಲೆ ಮಾರಣಾಂತಿಕ ದಾಳಿ, ದೇಶಾದ್ಯಂತ ಆಕ್ರೋಶ…
    ಕೇರಳ ಸರ್ಕಾರ ರಚನೆಯ ಕಗ್ಗಂಟು.. ಸಿಎಂ ಅಭ್ಯರ್ಥಿ ಆಯ್ಕೆಗೆ ಕಸರತ್ತು… ಕಾಂಗ್ರೆಸ್ ದುರ್ಬಲತೆಗೆ ಸಾಕ್ಷಿ
    ಕರಾವಳಿಯಲ್ಲಿ ಶುರುವಾಯ್ತು MESCOM ಮಹಾಸಮರ!ಬಯಲಾಗುತ್ತಾ “ಬ್ರಹ್ಮಾಂಡ ಭ್ರಷ್ಟಾಚಾರ”..!?
    ಟ್ರಂಪ್ ಇರಾನ್ ಡೀಲ್ ಕಥೆ ಏನು?ಒಪ್ಪಂದವಾಗುತ್ತಾ? ಅಥವಾ ಯುದ್ಧ ಮುಂದುವರೆಯುತ್ತಾ?
    ಪುತ್ತೂರು ಗ್ರಾಮಾಂತರದಲ್ಲಿ ಭೂ ವಿವಾದದ ಗಲಾಟೆ ತೀವ್ರತೆ: ಪರಸ್ಪರ ಹಲ್ಲೆ – ಎರಡು ಪ್ರಕರಣಗಳು ದಾಖಲು
    ಕುಡಿತದ ಅಮಲಿನಲ್ಲಿ ಹೆತ್ತ ತಾಯಿಯನ್ನೇ ಕೊಂದ ಮಗಳು, ಮೊಮ್ಮಗ: ಕೆಂಗೇರಿಯಲ್ಲಿ ಕರುಳು ಹರಿಯುವ ಕೃತ್ಯ!
    ನಾಲ್ಕು ದಶಕಗಳ ಕಾಲ ರೋಗಿಗಳಿಗೆ ಜೀವ ನೀಡಿದ ವೈದ್ಯನೇ ಇಂದು ಯಾಕೆ ತನ್ನ ಜೀವ ತಾನೇ ತೆಗೆದುಕೊಂಡರು …
    ಅಮೆರಿಕಾ ವಿರುದ್ಧ ‘ಪೈರಸಿ’ ಆರೋಪ: ಇರಾನ್ ಯುಎನ್‌ಗೆ ದೂರು
    ತಾಯಿಯನ್ನೇ ಮದುವೆಗೆ ಆಹ್ವಾನಿಸದ ಕಾರಣಕ್ಕೆ ಉದ್ಯೋಗ ಕಳೆದುಕೊಂಡ ಯುವಕ…!
    ಉಡುಪಿ ಮಹಿಳೆಗೆ ಮುಂಬೈನಲ್ಲಿ ಕಂಬಿ! ₹3.10 ಕೋಟಿ ವಂಚನೆ ಉಡುಪಿ ಮೂಲದ ಮಹಿಳೆ ಅರೆಸ್ಟ್!
    ನಾಸಿಕ್ TCS ಪ್ರಕರಣ-ಸತ್ಯ ಮರೆಮಾಚಿದವರಾರು?ಕಾರ್ಪೊರೇಟ್ ಜಗತ್ತಿನ ಕತ್ತಲೆ ಮುಖ:HRಮಹಿಳೆಯಾಗಿಯೂ…..
    ಡಿಜಿಟಲ್ ಡಿಟಾಕ್ಸ್‌ಗೆ ಮಾದರಿಯಾದ ಸಿಇಒ: ಯುವಜನತೆಗೆ ಹೊಸ ಸಂದೇಶ!
    ಎರಡು ಭೀಕರ ಕ್ಷಣಗಳು!ಒಂದು ರನ್‌ವೇಯಲ್ಲಿ ಸಾವು… ಮತ್ತೊಂದು ರನ್‌ವೇಯಲ್ಲಿ ಅದ್ಭುತ ಪಾರು!