📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

“ಧುರಂಧರ್” ನಟ ರಣವೀರ್ ಸಿಂಗ್‌ ವಿರುದ್ಧ ಇಡೀ ಬಾಲಿವುಡ್ ಒಕ್ಕೂಟವೇ ತಿರುಗಿಬಿದ್ದಿದ್ದೇಕೆ? shocking ₹45 ಕೋಟಿ ವಿವಾದದ ಅಸಲಿ ಕಥೆ ಇಲ್ಲಿದೆ!

ಬಾಲಿವುಡ್ ಅಂಗಳದಲ್ಲಿ ಭಾರಿ ಸಂಚಲನ ಸೃಷ್ಟಿಸಿರುವ ಸೂಪರ್‌ಸ್ಟಾರ್ ರಣವೀರ್ ಸಿಂಗ್ ಮತ್ತು ‘ಡಾನ್ 3’ (Don 3) ಚಿತ್ರತಂಡದ ನಡುವಿನ ವಿವಾದ ಏನಿದು..,

ಬಾಲಿವುಡ್‌ನಲ್ಲಿ ರಣವೀರ್ ಸಿಂಗ್‌ಗೆ ಬಿಗ್ ಶಾಕ್: ‘ಡಾನ್ 3’ ಚಿತ್ರದಿಂದ ಔಟ್ ಬೆನ್ನಲ್ಲೇ ನಟನಿಗೆ ಬಿತ್ತು ಅಸಹಕಾರ ಬ್ಯಾನ್!

ಬಾಲಿವುಡ್‌ನ ಬಹುನಿರೀಕ್ಷಿತ ಆಕ್ಷನ್ ಫ್ರಾಂಚೈಸಿ ‘ಡಾನ್ 3’ (Don 3) ಚಿತ್ರೀಕರಣ ಆರಂಭಕ್ಕೂ ಮುನ್ನವೇ ಭಾರಿ ವಿವಾದದ ಸುಳಿಗೆ ಸಿಲುಕಿದೆ. ಚಿತ್ರದ ನಾಯಕನಾಗಿ ಆಯ್ಕೆಯಾಗಿದ್ದ ಸೂಪರ್‌ಸ್ಟಾರ್ ರಣವೀರ್ ಸಿಂಗ್ (Ranveer Singh) ಅವರು ಕೊನೆಯ ಕ್ಷಣದಲ್ಲಿ ಸಿನಿಮಾದಿಂದ ದಿಢೀರ್ ಹೊರನಡೆದಿದ್ದು, ಈಗ ಅವರ ವಿರುದ್ಧ ಇಡೀ ಚಿತ್ರರಂಗವೇ ತಿರುಗಿಬೀಳುವಂತೆ ಮಾಡಿದೆ. ಮುಂಬೈನ ಪ್ರಭಾವಿ ಸಿನಿಕಾರ್ಮಿಕರ ಒಕ್ಕೂಟವಾದ FWICE (Federation of Western India Cine Employees) ರಣವೀರ್ ಸಿಂಗ್ ವಿರುದ್ಧ ‘ಅಸಹಕಾರ ನಿರ್ದೇಶನ’ (Non-Cooperation Directive) ಹೊರಡಿಸುವ ಮೂಲಕ ಬಾಲಿವುಡ್‌ನಲ್ಲಿ ಅವರಿಗೆ ಅಘೋಷಿತ ಬ್ಯಾನ್ ಬಿಸಿ ಮುಟ್ಟಿಸಿದೆ!

₹45 ಕೋಟಿ ನಷ್ಟದ ಕ್ಲೈಮ್ ಮತ್ತು ಇಲಾಖೆಯ ಎಂಟ್ರಿ

ಸಿನಿಮಾ ಶೂಟಿಂಗ್‌ಗಾಗಿ ಕಳೆದ ಮೂರು ವರ್ಷಗಳಿಂದ ಪ್ರೀ-ಪ್ರೊಡಕ್ಷನ್ (Pre-production) ಕೆಲಸಗಳು ನಡೆಯುತ್ತಿದ್ದವು. ರಣವೀರ್ ಅವರ ದಿಢೀರ್ ಎಕ್ಸಿಟ್‌ನಿಂದಾಗಿ ತಮಗೆ ಅಂದಾಜು ₹45 ಕೋಟಿ ನಷ್ಟವಾಗಿದೆ ಎಂದು ನಿರ್ಮಾಪಕ ಫರ್ಹಾನ್ ಅಖ್ತರ್ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಅವರು ನಿರ್ದೇಶಕರ ಸಂಘಕ್ಕೆ (IFTDA) ದೂರು ನೀಡಿದ್ದರು, ಬಳಿಕ ಈ ಮ್ಯಾಟರ್ 4 ಲಕ್ಷಕ್ಕೂ ಅಧಿಕ ಕಾರ್ಮಿಕರನ್ನು ಹೊಂದಿರುವ FWICE ಒಕ್ಕೂಟದ ಕೈ ಸೇರಿತು.

ವಿವಾದದ ಕಿಡಿ ಹೊತ್ತಿಕೊಂಡಿದ್ದು ಹೇಗೆ?

ಅಮಿತಾಭ್ ಬಚ್ಚನ್ ಮತ್ತು ಶಾರುಖ್ ಖಾನ್ ನಟಿಸಿ ಸೈ ಎನಿಸಿಕೊಂಡಿದ್ದ ಐಕಾನಿಕ್ ‘ಡಾನ್’ ಪಾತ್ರಕ್ಕೆ, 2023ರಲ್ಲಿ ನಿರ್ದೇಶಕ ಫರ್ಹಾನ್ ಅಖ್ತರ್ ಮತ್ತು ನಿರ್ಮಾಪಕ ರಿತೇಶ್ ಸಿಧ್ವಾನಿ (ಎಕ್ಸೆಲ್ ಎಂಟರ್‌ಟೈನ್‌ಮೆಂಟ್) ಹೊಸ ಡಾನ್ ಆಗಿ ರಣವೀರ್ ಸಿಂಗ್ ಅವರನ್ನು ಅಧಿಕೃತವಾಗಿ ಘೋಷಿಸಿದ್ದರು. ಆದರೆ, ಚಿತ್ರದ ಶೂಟಿಂಗ್ ಆರಂಭವಾಗಲು ಕೇವಲ 3 ವಾರಗಳು ಬಾಕಿ ಇರುವಾಗ, ರಣವೀರ್ ಸಿಂಗ್ ಚಿತ್ರಕಥೆಯಲ್ಲಿ ಬದಲಾವಣೆ ಮಾಡುವಂತೆ ಪಟ್ಟು ಹಿಡಿದರು ಎನ್ನಲಾಗಿದೆ. ಇದಕ್ಕೆ ಮೇಕರ್ಸ್ ಒಪ್ಪದಿದ್ದಾಗ, ರಣವೀರ್ ದಿಢೀರನೆ ಸಿನಿಮಾದಿಂದ ಹೊರನಡೆದಿದ್ದಾರೆ.

ಈಗ ‘ಡಾನ್ 3’ ಕಥೆ ಏನಾಗುತ್ತೆ?

ಸದ್ಯಕ್ಕೆ ರಣವೀರ್ ಸಿಂಗ್ ಹೊರನಡೆದಿರುವುದರಿಂದ ‘ಡಾನ್ 3’ ಚಿತ್ರದ ಭವಿಷ್ಯ ಅನಿಶ್ಚಿತತೆಯಲ್ಲಿದೆ. ರಣವೀರ್ ಜಾಗಕ್ಕೆ ಮತ್ತೊಬ್ಬ ಸ್ಟಾರ್ ನಟ ಹೃತಿಕ್ ರೋಷನ್ ಬstatusರಬಹುದು ಎಂಬ ವದಂತಿ ಇತ್ತಾದರೂ, ಹೃತಿಕ್ ಅದನ್ನು ನಿರಾಕರಿಸಿದ್ದಾರೆ. ಇತ್ತ ಚಿತ್ರದ ನಾಯಕಿಯಾಗಿದ್ದ ಕಿಯಾರಾ ಅಡ್ವಾಣಿ ಕೂಡ ಹೊರನಡೆದಿದ್ದು, ಕೃತಿ ಸನೂನ್ ಹೆಸರು ಕೇಳಿಬರುತ್ತಿದೆ. ಒಟ್ಟಿನಲ್ಲಿ ರಣವೀರ್ ಸಿಂಗ್ ಅವರ ಈ ಒಂದು ನಿರ್ಧಾರ ಬಾಲಿವುಡ್‌ನಲ್ಲಿ ದೊಡ್ಡ ಬಿರುಗಾಳಿಯನ್ನೇ ಸೃಷ್ಟಿಸಿದೆ.

FWICE ಬ್ಯಾನ್‌ನ ಅಸಲಿ ಕಥೆಯೇನು?

FWICE ಸಂಘಟನೆಯು ರಣವೀರ್ ಸಿಂಗ್‌ಗೆ ತಮ್ಮ ವಾದ ಮಂಡಿಸಲು ಮೂರು ಬಾರಿ ನೋಟಿಸ್ ನೀಡಿತ್ತು. ಆದರೆ ರಣವೀರ್ ಸಿಂಗ್, ಇದು ಕರಾರು ಒಪ್ಪಂದಕ್ಕೆ ಸಂಬಂಧಿಸಿದ ವಿಷಯವಾಗಿದ್ದು, ಇದಕ್ಕೆ ಉತ್ತರಿಸಲು FWICE ಸರಿಯಾದ ವೇದಿಕೆಯಲ್ಲ ಎಂದು ಇಮೇಲ್ ಮೂಲಕ ಖಾರವಾಗಿ ಪ್ರತಿಕ್ರಿಯಿಸಿದ್ದರು.

ಇದರಿಂದ ಆಕ್ರೋಶಗೊಂಡ FWICE ಅಧ್ಯಕ್ಷ ಬಿ.ಎನ್. ತಿವಾರಿ ಮತ್ತು ಮುಖ್ಯ ಸಲಹೆಗಾರ ಅಶೋಕ್ ಪಂಡಿತ್ ಸುದ್ದಿಗೋಷ್ಠಿ ನಡೆಸಿ, “ಯಾವೊಬ್ಬ ಸೂಪರ್‌ಸ್ಟಾರ್ ಕೂಡ ಚಿತ್ರರಂಗದ ನಿಯಮಗಳಿಗಿಂತ ದೊಡ್ಡವನಲ್ಲ. ಇನ್ಮುಂದೆ ನಮ್ಮ ಒಕ್ಕೂಟದ ಯಾವುದೇ ಕ್ಯಾಮೆರಾಮನ್, ಲೈಟ್‌ಮ್ಯಾನ್, ಸ್ಪಾಟ್ ಬಾಯ್ ಅಥವಾ ತಂತ್ರಜ್ಞರು ರಣವೀರ್ ಸಿಂಗ್ ಸಿನಿಮಾಗಳಿಗೆ ಕೆಲಸ ಮಾಡುವುದಿಲ್ಲ”ಎಂದು ಘೋಷಿಸಿದ್ದಾರೆ.

ಮೌನ ಮುರಿದ ರಣವೀರ್ ಸಿಂಗ್!

ಈ ವಿವಾದ ಇಡೀ ದೇಶಾದ್ಯಂತ ದೊಡ್ಡ ಸುದ್ದಿಯಾಗುತ್ತಿದ್ದಂತೆ ನಟ ರಣವೀರ್ ಸಿಂಗ್ ಅವರ ವಕ್ತಾರರು ಅಧಿಕೃತ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ.

“ರಣವೀರ್ ಸಿಂಗ್ ಅವರಿಗೆ ಚಿತ್ರರಂಗ ಹಾಗೂ ‘ಡಾನ್’ ಫ್ರಾಂಚೈಸಿ ಮೇಲೆ ಅಪಾರ ಗೌರವವಿದೆ. ವೃತ್ತಿಪರ ಚರ್ಚೆಗಳನ್ನು ಗೌರವ ಮತ್ತು ಪ್ರಬುದ್ಧತೆಯಿಂದ ಬಗೆಹರಿಸಿಕೊಳ್ಳಬೇಕು ಎಂದು ಅವರು ನಂಬಿರುವುದರಿಂದಲೇ ಈವರೆಗೆ ಮೌನವಾಗಿದ್ದಾರೆ. ಸೋಷಿಯಲ್ ಮೀಡಿಯಾದ ಊಹಾಪೋಹಗಳಿಗೆ ಉತ್ತರಿಸುವ ಅಗತ್ಯ ಅವರಿಗೆ ಅನಿಸಿಲ್ಲ. ಅವರು ತಮ್ಮ ಮುಂದಿನ ಸಿನಿಮಾಗಳತ್ತ ಗಮನ ಹರಿಸಿದ್ದಾರೆ” ಎಂದು ತಿಳಿಸಿದ್ದಾರೆ.

##RanveerSingh #Don3Controversy #FarhanAkhtar #FWICEBan #BollywoodNews #RanveerSinghBanned #Don3Movie #KannadaCinemaNews

COMMENTS

Login with Gmail to comment

ಇನ್ನಷ್ಟು ಸುದ್ದಿ

ಕಾಂಗ್ರೆಸ್ ಜನರ ವಿಶ್ವಾಸದಿಂದ ದಿನದಿಂದ ದಿನಕ್ಕೂ ದೂರ ಹೋಗುತ್ತಿರುವುದಕ್ಕೆ ಸಾಕ್ಷಿನೇ ಇದು
ಪಶ್ಚಿಮ ಬಂಗಾಳ ಅಪ್ರಾಪ್ತೆಯ ಸಾವು, ಸಾರ್ವಜನಿಕರಿಂದ ಶಂಕಿತನ ಲಿಂಚಿಂಗ್ ..!ಬಾಲಕಿಯ ಹತ್ಯೆ ಬೆನ್ನಲ್ಲೇ ಭುಗಿಲೆದ್ದ ಹಿಂಸಾಚಾರ;
AAP ಸದ್ದು ಮಂಗಳೂರಲ್ಲೂ! ಜನರ ಸಮಸ್ಯೆಗೆ ನೇರ ಹೋರಾಟ
ಇರಾನ್–ಇಸ್ರೇಲ್ ಯುದ್ಧ: ಯುದ್ಧ ನಿಲ್ಲಿಸಲು ಇರಾನ್‌ನ 3 ಷರತ್ತುಗಳು… ಅಮೇರಿಕಾ ಕಂಗಾಲು
ಸಂಸತ್ತಿನಲ್ಲಿ ಇತಿಹಾಸ ಸೃಷ್ಟಿಸುವ ಚರ್ಚೆ-ಮಹಿಳಾ ಮೀಸಲು ಬಿಲ್ಲಿನ ಸುತ್ತ ಕಂಗೊಳಿಸಿದ ಸಂಸತ್ !
ರಾಮ ಮಂದಿರ ಟ್ರಸ್ಟ್‌ಗೆ ಸರ್ಕಾರದ ನಿಯಂತ್ರಣವೇ ಇಲ್ಲ! ಆರ್‌ಟಿಐಗೂ ಬಾಧ್ಯತೆ ಇಲ್ಲ ಎಂದ ಸಿಐಸಿ
ತುಮಕೂರಿನಲ್ಲಿ ಬೆಚ್ಚಿಬೀಳಿಸುವ ತಂದೆ-ಮಗಳು ದುರಂತ
ಖಾಸಗಿ ಬಸ್ಸಿನಲ್ಲಿ ಮಹಿಳೆಯ ಮಂಗಳಸೂತ್ರ ಏಗರಿಸಿದ್ರಾ?
ನಾಳೆ ಮಂಗಳೂರಲ್ಲಿ ಇಡೀ ದಿನ ಕರೆಂಟಿಲ್ಲ Power Cut.. ಎಲ್ಲೆಲ್ಲಿ?
ರಾಜಕೀಯ ಸುದ್ದಿ ಅಂದರೆ ಬೋರ್ ಅಂತ ಅನ್ನಿಸುವರಿಗೆ ಇದು ಒಂದು ಪಕ್ಕಾ ಎಂಟರ್‌ಟೈನ್‌ಮೆಂಟ್ ಎಪಿಸೋಡ್!!!
ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಹೆಸರಲ್ಲಿ ನಡಿತಿರೋದೇನು?
ಅಮೆರಿಕಾ ವಿರುದ್ಧ ‘ಪೈರಸಿ’ ಆರೋಪ: ಇರಾನ್ ಯುಎನ್‌ಗೆ ದೂರು
ಪಿಸ್ತೂಲ್ ತೋರಿಸಿ ಬೆದರಿಸಿ ಪರಾರಿಯಾಗಿದ್ದ ಯುವಕ ಬಂಧನ
ತೈಲ ಟ್ಯಾಂಕರ್ ಮೇಲೆ ಇರಾನ್ ಆತ್ಮಹತ್ಯಾ ದೋಣಿ ದಾಳಿ – ಭಾರತೀಯ ನಾವಿಕ ಸಾವು
ಅರೆಬೈಲ್ ಘಾಟ್ ನ ಕಾರು ಅಫಘಾತ ವ್ಯವಸ್ಥಿತ ಕೊಲೆ…!
ಕರ್ನಾಟಕದಲ್ಲೇ ಮೊದಲು-ಕಿಚ್ಚ ಸುದೀಪ್ ಕೈಯಿಂದ ಗ್ರಾಂಡ್ ಓಪನಿಂಗ್!₹130 ಕೋಟಿ ವೆಚ್ಚದ ವಿಶ್ವದರ್ಜೆಯ ‘MR-Linac’ ತಂತ್ರಜ್ಞಾನ ಹೈಟೆಕ್ ಕ್ಯಾನ್ಸರ್ ಆಸ್ಪತ್ರೆ!
ದೆಹಲಿ: ₹21.40 ಕೋಟಿ ಮೌಲ್ಯದ 15 ಕೆ.ಜಿ. ಚಿನ್ನ ವಶ ಅಂತರರಾಷ್ಟ್ರೀಯ ಕಳ್ಳಸಾಗಣೆ ಜಾಲ ಭೇದಿಸಿದ DR
🚨 BREAKING: ಬಿಜೆಪಿಯಿಂದ ಅಣ್ಣಾಮಲೈ ಔಟ್?!…ರಾತ್ರೋರಾತ್ರಿ ರಾರಾಜಿಸಿದ ಬಂಡಾಯದ ಪೋಸ್ಟರ್‌ಗಳು! 
ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ರೋಗಿಗಳಿಗೆ heartattack !!!..ಐಸಿಯು ಮತ್ತು ಸಿಸಿಟಿವಿ ದೃಶ್ಯಗಳಲ್ಲಿದೆ ಕ್ಲಾರಿಟಿ!
ದೇಶಕ್ಕಾಗಿ ಹಾರಿದ ಯುವ ಪೈಲಟ್: ಅಸ್ಸಾಂ ದುರಂತದಲ್ಲಿ ಐಎಎಫ್ ಅಧಿಕಾರಿ ವೀರಮರಣ
ಮನೆಯ ಮೇಲೆ ಪೊಲೀಸರ  ದಾಳಿ  ಮಾರಾಟಕ್ಕೆ ಇಡಲಾದ ಮಾದಕ ವಸ್ತು ಹಾಗೂ ಮಾರಕ ಆಯುಧ ವಶ
ಸಿದ್ದು vs ಕೃಷ್ಣ -ಸಿದ್ಧು ವಿರುದ್ಧ ನೇರ ಸವಾಲು: ‘ಬಿ’ ರಿಪೋರ್ಟ್ ಪ್ರಶ್ನಿಸಿ ಸ್ನೇಹಮಯಿ ಕೃಷ್ಣನ ನಡೆ ಭ್ರಷ್ಟ ವ್ಯವಸ್ಥೆಗೆ ಬಿಗಿ ಹೊಡೆತ!”
ತಪ್ಪೊಪ್ಪಿಕೊಂಡ ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಆರೋಪಿ ಶಾರೀಕ್…!ಶಿಕ್ಷೆ ಏನು?
ಸ್ಕ್ಯಾಮರ್‌ಗೆ 60 ಸೆಕೆಂಡ್ ಸಾಕು… RBIಗೆ ಈಗ 60 ನಿಮಿಷ ಬೇಕಂತೆ!ಹಣ ಕಳಿಸುವ ಮುನ್ನ ಯೋಚಿಸಲು 1 ಗಂಟೆ!
ಅಕ್ರಮ ಕಸಾಯಿ ಖಾನೆಗೆ ದಾಳಿ ಇಬ್ಬರನ್ನು ಬಂಧಿಸಿದ ಬಂಟ್ವಾಳದ ಪೊಲೀಸರು
ವಿಶ್ವಸಂಸ್ಥೆಗೆ ಜೀವ ಬಂತು ನೋಡಿ…
50 ಸಾವಿರ ಸಾಲಕ್ಕೆ ಸವಣೂರು ಪೇಟೆಯಲ್ಲಿ ರಕ್ತಸಿಕ್ತ ಘರ್ಷಣೆ ..
108 ಆರೋಗ್ಯ ಕವಚ'”ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ಇನ್ಮುಂದೆ ಆಂಬ್ಯುಲೆನ್ಸ್ ನಿಮ್ಮ ಮನೆಬಾಗಿಲಿಗೆ! 
ಕರ್ನಾಟಕ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: 123 ಕೇಂದ್ರಗಳ ಪಾಸ್ ವಿತರಣ –ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿದೆ, ಬಸ್‌ಗಳ ಸಂಖ್ಯೆಯೂ ಹೆಚ್ಚುತ್ತದೆಯೇ?
ಬ್ರಹ್ಮಾವರ ಅಪಾರ್ಟ್‌ಮೆಂಟ್ ರೂಮಿನಲ್ಲಿ ಯುವತಿಯ ನಿಗೂಢ ಸಾವು