📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ನಕಲಿ ಔಷಧ ದಂಧೆ: ಜೀವ ಉಳಿಸಬೇಕಾದ ಔಷಧವೇ ಹಣ ಮಾಡುವ ದಂಧೆಯಾಯಿತೇ?

    ಔಷಧಿ ಎಂದರೆ ಕೇವಲ ಒಂದು ಉತ್ಪನ್ನವಲ್ಲ… ಅದು ಒಬ್ಬರ ಜೀವದ ಮೇಲಿರುವ ನಂಬಿಕೆ. ನೋವು ಕಡಿಮೆ ಮಾಡಬೇಕು, ರೋಗ ಗುಣಪಡಿಸಬೇಕು, ಜೀವ ಉಳಿಸಬೇಕು ಎಂಬ ನಿರೀಕ್ಷೆಯಲ್ಲಿ ಜನರು ಔಷಧಿ ಖರೀದಿಸುತ್ತಾರೆ. ಆದರೆ ಇದೇ ನಂಬಿಕೆಯನ್ನು ಹಣ ಮಾಡುವ ಮಾರ್ಗವನ್ನಾಗಿ ಮಾಡಿಕೊಂಡಿರುವ ನಕಲಿ ಔಷಧ ದಂಧೆ ಈಗ ಆತಂಕಕ್ಕೆ ಕಾರಣವಾಗಿದೆ.

    ಬಿಡದಿ ಸಮೀಪದ ಹೆಜ್ಜಾಲದಲ್ಲಿ ಪರವಾನಗಿಯೇ ಇಲ್ಲದ ಘಟಕದಲ್ಲಿ ಪ್ರತಿಷ್ಠಿತ ಅಂತರಾಷ್ಟ್ರೀಯ ಹಾಗೂ ಬಹುರಾಷ್ಟ್ರೀಯ ಕಂಪನಿಗಳ ಹೆಸರಿನಲ್ಲಿ ನಕಲಿ ಔಷಧಗಳನ್ನು ತಯಾರಿಸಿ, ಮರುಪ್ಯಾಕ್ ಮಾಡಿ ಮಾರುಕಟ್ಟೆಗೆ ಕಳುಹಿಸಲು ಸಿದ್ಧತೆ ನಡೆಸಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿದೆ. ಅಧಿಕಾರಿಗಳ ಕಾರ್ಯಾಚರಣೆಯಲ್ಲಿ 5 ಕೋಟಿಗೂ ಅಧಿಕ ಮೌಲ್ಯದ ನಕಲಿ ಔಷಧಗಳು ಹಾಗೂ ಕಚ್ಚಾವಸ್ತುಗಳು ವಶಕ್ಕೆ ಪಡೆದಿರುವುದು ಪ್ರಕರಣದ ಗಂಭೀರತೆಯನ್ನು ತೋರಿಸುತ್ತದೆ.

    ಅಸಿಡಿಟಿ, ನೋವು ನಿವಾರಕ ಮಾತ್ರೆಗಳು ಹಾಗೂ ಆ್ಯಂಟಿಬಯೋಟಿಕ್‌ಗಳಂತೆ ಬಳಸುವ ಔಷಧಿಗಳಿಗೆ ನಕಲಿ ಲೇಬಲ್ ಅಂಟಿಸಿ ಮಾರಾಟ ಮಾಡಲು ಸಿದ್ಧತೆ ನಡೆಸಲಾಗಿತ್ತು ಎನ್ನಲಾಗಿದೆ. ಅಂದರೆ ಗ್ರಾಹಕನಿಗೆ ಔಷಧಿ ನಿಜವೋ, ನಕಲಿಯೋ ಎಂಬ ಅನುಮಾನ ಬಾರದಂತೆ ಪ್ರತಿಷ್ಠಿತ ಕಂಪನಿಗಳ ಹೆಸರನ್ನೇ ಬಳಸಿಕೊಂಡಿರುವ ಆರೋಪವಿದೆ.

    ಇಲ್ಲಿ ಪ್ರಶ್ನೆ ಕೇವಲ 5 ಕೋಟಿ ಮೌಲ್ಯದ ನಕಲಿ ಔಷಧ ಪತ್ತೆಯಾಗಿದೆ ಎಂಬುದಲ್ಲ. ಇನ್ನೆಷ್ಟು ಔಷಧಿಗಳು ಈಗಾಗಲೇ ಮಾರುಕಟ್ಟೆಗೆ ಹೋಗಿವೆ? ಎಷ್ಟು ಜನ ಇವುಗಳನ್ನು ನಿಜವಾದ ಔಷಧಿ ಎಂದು ನಂಬಿ ಸೇವಿಸಿದ್ದಾರೆ? ಒಂದು ನಕಲಿ ಮಾತ್ರೆಯಿಂದ ಆರೋಗ್ಯ ಹದಗೆಟ್ಟರೆ, ಅದರ ಹೊಣೆ ಯಾರು?

    ಆಹಾರ ಕಲಬೆರಕೆಯಾದರೆ ಆರೋಗ್ಯಕ್ಕೆ ಅಪಾಯ. ಆದರೆ ಔಷಧಿಯೇ ನಕಲಿಯಾದರೆ, ಅದು ನೇರವಾಗಿ ಜೀವದ ಜೊತೆಗಿನ ಆಟ.ಜನರ ಅನಾರೋಗ್ಯವನ್ನು ಗುಣಪಡಿಸಬೇಕಾದ ಔಷಧವೇ ಕೆಲವರ ಪಾಲಿಗೆ ‘ಮನಿ ಮಿಂಟಿಂಗ್ ಮೆಷಿನ್’ ಆಗಿರುವುದು ಸಮಾಜಕ್ಕೆ ಎಚ್ಚರಿಕೆಯ ಗಂಟೆಯಾಗಿದೆ.

    ಹಣಕ್ಕಾಗಿ ನಕಲಿ ಉತ್ಪನ್ನ ತಯಾರಿಸುವುದು ವ್ಯಾಪಾರದಲ್ಲಿ ಮೋಸವಾಗಬಹುದು; ಆದರೆ ನಕಲಿ ಔಷಧ ತಯಾರಿಸುವುದು ಮನುಷ್ಯನ ಆರೋಗ್ಯ ಮತ್ತು ಜೀವದ ಮೇಲೆ ನಡೆಸುವ ಅಪಾಯಕಾರಿ ವಂಚನೆ. ಆದ್ದರಿಂದ ಈ ಪ್ರಕರಣದಲ್ಲಿ ಕೇವಲ ನಕಲಿ ಔಷಧ ವಶಪಡಿಸಿಕೊಳ್ಳುವುದಷ್ಟೇ ಅಲ್ಲ, ಇದರ ಹಿಂದೆ ಇರುವ ಸಂಪೂರ್ಣ ಜಾಲವನ್ನು ಪತ್ತೆಹಚ್ಚಿ, ಔಷಧಗಳು ಎಲ್ಲಿಗೆಲ್ಲ ಪೂರೈಕೆಯಾಗಿದ್ದವು ಎಂಬುದನ್ನೂ ತನಿಖೆ ಮಾಡುವುದು ಅತ್ಯಂತ ಅಗತ್ಯ.

    ಅಧಿಕಾರಿಗಳ ಕಾರ್ಯಾಚರಣೆ ಒಂದು ಜಾಲವನ್ನು ಬಯಲಿಗೆಳೆದಿದೆ. ಆದರೆ ದೊಡ್ಡ ಪ್ರಶ್ನೆ ಇನ್ನೂ ಉಳಿದಿದೆ — ಜೀವ ಉಳಿಸುವ ಔಷಧಕ್ಕೂ ಬೆಲೆ ಕಟ್ಟುವ ಈ ದಂಧೆ ಇನ್ನೆಷ್ಟು ಆಳಕ್ಕೆ ಹೋಗಿದೆ?

    ##FakeMedicines #DrugScam #MedicineFraud #HealthcareSafety #PharmaFraud #FakeDrugs #DrugControl

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    “ಧುರಂಧರ್” ನಟ ರಣವೀರ್ ಸಿಂಗ್‌ ವಿರುದ್ಧ ಇಡೀ ಬಾಲಿವುಡ್ ಒಕ್ಕೂಟವೇ ತಿರುಗಿಬಿದ್ದಿದ್ದೇಕೆ? shocking ₹45 ಕೋಟಿ ವಿವಾದದ ಅಸಲಿ ಕಥೆ ಇಲ್ಲಿದೆ!
    ವಿಟ್ಲ ಪಟಾಕಿ ತಯಾರಿಕಾ ಘಟಕದಲ್ಲಿ ಪಟಾಕಿ ಸ್ಫೋಟ
    ಉಡುಪಿ ನಗರ ಅಭಿವೃದ್ಧಿ ಪ್ರಾಧಿಕಾರ ಮತ್ತು ನಗರ ಸಭೆ ಎರಡೂ ಕಮಾಯಿಗೆ ಕುಳಿತು ಕೊಂಡಿದೆಯಾ?
    ಒಂದು ದೇಶವನ್ನೇ ಮಟ್ಟಾಶ್ ಮಾಡುವಷ್ಟು ನ್ಯೂಕ್ಲಿಯರ್ ಪವರ್ stock ಇರಾನ್ನಲ್ಲಿ ಇದ್ಯಾ !?
    ವೆಟ್-ವೆಲ್‌ಗಳ ಕಳಪೆ ನಿರ್ವಹಣೆಚರಂಡಿ-ಬಾವಿಗಳಿಗೆ ಡ್ರೈನೇಜ್ ನೀರು..
    ಡಿಜಿಟಲ್ ದಿಗ್ಗಜರಿಗೆ ₹2 ಕೋಟಿ ಲೀಗಲ್ ನೋಟಿಸ್ ಶಾಕ್!ಯೂಟ್ಯೂಬ್ ಸ್ಟಾರ್ vs ಟಿವಿ ಸ್ಟಾರ್ ನಡುವಿನ ಕಾನೂನು ಸಮರ!
    ತಮಿಳುನಾಡು ರಾಜಕೀಯದಲ್ಲಿ ದಿನಕ್ಕೊಂದು ಟ್ವಿಸ್ಟ್ -TVK wave ಎಷ್ಟು ದೂರ ಸಾಗುತ್ತದೆ?
    ಕಾಂಗ್ರೆಸ್ ಹೈಕಮಾಂಡ್ ಖಡಕ್ ವಾರ್ನಿಂಗ್: ಸ್ವಾಮೀಜಿ, ಧಾರ್ಮಿಕ ಮುಖಂಡರ ಶಿಫಾರಸುಗಳಿಗೆ ಸಿಗಲ್ಲ ಮನ್ನಣೆ!
    “ಅಂಕಗಳು ಭವಿಷ್ಯ ನಿರ್ಧರಿಸುವುದಿಲ್ಲ” B.Tech ನಲ್ಲಿ 24 ವಿಷಯ ಫೇಲ್ ಆದರೂ IPS ಆದ ಸಮೀರ್ ಶರ್ಮಾ
    ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ದೆಹಲಿ ಹೈಕೋರ್ಟ್, ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ: ಭದ್ರತೆ ಬಿಗಿ
    ಪ್ರತಿಭಟನಾ ಶಕ್ತಿಯನ್ನೇ ಕಳೆದುಕೊಂಡ ಭಾರತ… ನಿಶ್ಯಕ್ತವಾದ ವಿರೋಧ ಪಕ್ಷಗಳು
    ಕಮ್ ಬ್ಯಾಕ್ ಮಾಡಿದ ಮುಂಬೈ ಇಂಡಿಯನ್, ಕ್ಯಾಪ್ಟನ್ ಪ್ರೇರಣೆಗೆ ವರ್ಮಾ ಬ್ಯಾಟಿನಿಂದ  ಮೊದಲ ಸೆಂಚುರಿ
    ಶಾಲೆಗಳ ಸುತ್ತ ಜಂಕ್ ಫುಡ್‌ಗೆ ಬ್ರೇಕ್: ಮಕ್ಕಳ ಆರೋಗ್ಯ ರಕ್ಷಣೆಗೆ FDA ಅಲರ್ಟ್!
    ಇನ್ಮುಂದೆ ಗೂಗಲ್‌ನಲ್ಲಿ ನಿಮ್ಮ ಹಳೆಯ ಕೋರ್ಟ್ ಕೇಸ್‌ಗಳ ವಿವರಗಳನ್ನುಮರೆಮಾಡಬಹುದು-ದೆಹಲಿ ಹೈಕೋರ್ಟ್ ಗೈಡ್‌ಲೈನ್ಸ್ ರಿಲೀಸ್! 
    ಗೃಹಸಚಿವ ಪ್ರಿಯಾಂಕ್ ಖರ್ಗೆಗೆ ಅವಹೇಳನ ಜಾತಿ ನಿಂದನೆ  ಆರೋಪದಲ್ಲಿ ಕಾರ್ಕಳ ವ್ಯಕ್ತಿಯ ಬಂಧನ !
    ದೆಹಲಿ: ₹21.40 ಕೋಟಿ ಮೌಲ್ಯದ 15 ಕೆ.ಜಿ. ಚಿನ್ನ ವಶ ಅಂತರರಾಷ್ಟ್ರೀಯ ಕಳ್ಳಸಾಗಣೆ ಜಾಲ ಭೇದಿಸಿದ DR
    ಮೂಡಬಿದ್ರೆ ಪೊಲೀಸ್ ಅಧಿಕಾರಿಯ ಮಾನ ಹರಾಜಿಗೆ ನಿಂತವರು ಯಾರು?
    ಬಂಗಾಳ ಚುನಾವಣೆ ಫಲಿತಾಂಶವೇ ಬದಲಾಗಿತ್ತಾ?ಬಂಗಾಳ ರಾಜಕೀಯದಲ್ಲಿ ಹೊಸ ಬಾಂಬ್!ಸುಪ್ರೀಂ ಕೋರ್ಟ್ ಮುಂದೆ ಬಿಜೆಪಿ ಜಯದ ಮೇಲೆ ಟಿಎಂಸಿ ದೊಡ್ಡ ಪ್ರಶ್ನೆ!
    “ಬಾದಾಮಿ ತಿಂದರೆ ಮೆಮೊರಿ ಹೆಚ್ಚಾಗಿ, ನನ್ನ ಫೈಲ್ ಎಲ್ಲಿ ಇದೆ ಎಂದು ನೆನಪಾಗಬಹುದು”-ಹಣ ಕೊಡದೇ ಕೆಲಸ ಆಗೋದಿಲ್ಲ ಎಂಬ ಭ್ರಷ್ಟ ವ್ಯವಸ್ಥೆ ಇನ್ನೂ ಬಲವಾಗಿ ಜೀವಂತವಾಗಿದೆ…!
    ಸ್ಟೇಟ್ ಬ್ಯಾಂಕ್ ಮೀನು ಮಾರುಕಟ್ಟೆಗೆ ಭೇಟಿ ನೀಡಿದ ಡಾ. ನಾಗಲಕ್ಷ್ಮಿ ಚೌಧರಿ – ಮಹಿಳಾ ಮೀನುಗಾರರ ಸಮಸ್ಯೆ ಆಲಿಕೆ
    sdfdf
    ಮೂರನೇ ಮಹಾಯುದ್ಧದ ಭೀತಿ: ಇರಾನ್ ಹೊಸ ನಾಯಕನಾಗಿ ಮೊಜ್ತಬಾ ಖಮೇನಿ –ನೂತನ ನಾಯಕನಿಗೆ ರಷ್ಯಾ, ಚೀನಾ ಬೆಂಬಲ
    ಬಾಲ್ಯವಿವಾಹಕ್ಕೆ ಬ್ರೇಕ್ ಹಾಕಲು ಮಹಾರಾಷ್ಟ್ರದ ಮಾಸ್ಟರ್ ಪ್ಲಾನ್: ಇನ್ವಿಟೇಶನ್ ಕಾರ್ಡ್‌ನಲ್ಲಿ ಜನ್ಮ ದಿನಾಂಕ ಕಡ್ಡಾಯ!
    “ಜೈ ಶ್ರೀರಾಮ್” ಘೋಷಣೆಯಿಂದ ನಡುಗಿದ ಢಾಕಾ! 
    ಮೂಡಬಿದ್ರೆ: ಅಕ್ರಮ ಜಾನುವಾರು ಸಾಗಾಟ -ಆರೋಪಿಗಳ ಬಂಧನ, ವಾಹನ ಹಾಗೂ ಕರು ವಶಕ್ಕೆ.
    ದಾವೂದ್ ಇಬ್ರಾಹಿಂನ ಆಪ್ತ. ಸಲೀಂ ಡೋಲಾ ಬಂದನ ವಿದೇಶದಲ್ಲಿ ಅಡಗಿದ್ದರೂ ಕಾನೂನಿನಿಂದ ತಪ್ಪಿಸಿಕೊಳ್ಳಲಾಗಲಿಲ್ಲ
    ಅರ್ಧ ಸಂಬಳ ಸಾಕು ಮತ್ತು VIP ಸೌಲಭ್ಯಕ್ಕೆ ‘ನೋ’ ಎಂದ ನ್ಯಾಯಾಧೀಶ!
    ಬಂಗಾಳ ರಾಜಕೀಯದಲ್ಲಿ ಭಾರಿ ಟ್ವಿಸ್ಟ್ ಮೇಲೆ ಟ್ವಿಸ್ಟ್..! ಸುವೇಂದು ಪ್ರಮಾಣವಚನಕ್ಕೂ ಬ್ರೇಕ್ ಬೀಳುತ್ತಾ?ಸುಪ್ರೀಂ ಕೋರ್ಟ್ ಎಂಟ್ರಿ ಆಗುತ್ತಾ?
    ಗ್ರಾಹಕರ ಮಾತು ಕೇಳಿ, ₹900 ಕೋಟಿಯ ರೆಸ್ಟೋರೆಂಟ್ ಸಾಮ್ರಾಜ್ಯ ನಿರ್ಮಿಸಿದ ಉದ್ಯಮಿ..
    ದೇಶಕ್ಕಾಗಿ ಹಾರಿದ ಯುವ ಪೈಲಟ್: ಅಸ್ಸಾಂ ದುರಂತದಲ್ಲಿ ಐಎಎಫ್ ಅಧಿಕಾರಿ ವೀರಮರಣ
    ಇಬ್ಬರ ಸಣ್ಣ ಜಗಳದ ಎಫೆಕ್ಟ್ ನೋಡಿ..ಕಡಬದಲ್ಲಿ ಹೈಡ್ರಾಮಾ!ಸಿಲ್ಲಿAngry ಮೂಡ್‌ನಲ್ಲಿ ಎಸೆದ car ಕೀ ಚರಂಡಿಗೆ…