📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಕರ್ನಾಟಕದಲ್ಲಿ 2 ಲಕ್ಷಕ್ಕೂ ಹೆಚ್ಚು ನಾಯಿ ಕಚ್ಚಿದ ಪ್ರಕರಣಗಳು …!ನಗರಗಳಲ್ಲಿ ‘ಸ್ಟ್ರೇ ಡಾಗ್ ಟೆರರ್’ — ಜನರು ಭಯದಲ್ಲಿ ಬದುಕುತ್ತಿದ್ದಾರೆ!

    ಈಗಿನ ದಿನಗಳಲ್ಲಿ ಹೆಚ್ಚಿನ ರಸ್ತೆಗಳ ಪರಿಸ್ಥಿತಿ ಹೇಗಿದೆ ಅಂದ್ರೆ ಮಕ್ಕಳು ಹೊರಗೆ ಆಟ ಆಡೋದು ಕೂಡ ಅಪಾಯವಾಗಿದೆ. ನಿರ್ಭೀತಿಯಿಂದ ಸ್ವಚ್ಛಂದವಾಗಿ ರಸ್ತೆಯಲ್ಲಿ walk ಕೂಡ ಅಸಾಧ್ಯ.ಕೆಲವು ರಸ್ತೆಗಳಲ್ಲಿ Dogs ಗ್ಯಾಂಗ್ ಯಾವುದೇ ಸಮಯದಲ್ಲೂ attack ಮಾಡುವಂತ ಸ್ಥಿತಿ ಎದುರಾಗಿದೆ.ಇದು ಎಚ್ಚರಿಕೆ ಅಲ್ಲ… ಅಪಾಯದ ಗಂಟೆ!

    ಭಾರತದಾದ್ಯಂತ ನಾಯಿಕಚ್ಚುವ ಪ್ರಕರಣಗಳು ಆತಂಕಕಾರಿ ಮಟ್ಟಕ್ಕೆ ಏರಿರುವ ಹಿನ್ನೆಲೆಯಲ್ಲಿ, Supreme Court of India ತೀವ್ರ ಕಳವಳ ವ್ಯಕ್ತಪಡಿಸಿದೆ. 2026ರ ಮೊದಲ ನಾಲ್ಕು ತಿಂಗಳಲ್ಲಿ ಮಾತ್ರ ತಮಿಳುನಾಡಿನಲ್ಲಿ ಸುಮಾರು 2.63 ಲಕ್ಷ ಮತ್ತು ಕರ್ನಾಟಕದಲ್ಲಿ 2 ಲಕ್ಷಕ್ಕೂ ಹೆಚ್ಚು ನಾಯಿ ಕಚ್ಚುವ ಪ್ರಕರಣಗಳು ದಾಖಲಾಗಿವೆ ಎಂದು ನ್ಯಾಯಾಲಯ ಗಮನಿಸಿದೆ. ನ್ಯಾಯಾಲಯವು ರಾಜ್ಯ ಸರ್ಕಾರಗಳು ಹಾಗೂ ಸ್ಥಳೀಯ ಆಡಳಿತಗಳ ನಿರ್ಲಕ್ಷ್ಯದಿಂದ ಪರಿಸ್ಥಿತಿ “ಅತ್ಯಂತ ಆತಂಕಕಾರಿ” ಮಟ್ಟಕ್ಕೇರಿದೆ ಎಂದು ಹೇಳಿದೆ.

    ಪ್ರಮುಖ ಅಂಶಗಳು

    • ತಮಿಳುನಾಡಿನಲ್ಲಿ 2026ರ ಜನವರಿಯಿಂದ ಏಪ್ರಿಲ್‌ವರೆಗೆ ಸುಮಾರು 17 ಸಾವುಗಳು ದಾಖಲಾಗಿವೆ.
    • ಕರ್ನಾಟಕದಲ್ಲಿ ರೇಬೀಸ್ ಸಂಬಂಧಿತ ಕನಿಷ್ಠ 25 ಸಾವುಗಳು ವರದಿಯಾಗಿವೆ.
    • ಬೆಂಗಳೂರು ನಗರ ಪ್ರದೇಶದಲ್ಲೇ ಸಾವಿರಾರು ನಾಯಿ ಕಚ್ಚುವ ಪ್ರಕರಣಗಳು ದಾಖಲಾಗಿವೆ.
    • ಶಾಲೆಗಳು, ಆಸ್ಪತ್ರೆಗಳು, ಬಸ್ ನಿಲ್ದಾಣಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

    ರಸ್ತೆ ಮೇಲೆ ನಡೆಯುವವರು ಮತ್ತು ಸೈಕಲ್ ಓಡಿಸುವ ಮಕ್ಕಳು ಗಮನಿಸಬೇಕಾದ ಸುರಕ್ಷತಾ ಸೂಚನೆಗಳು

    ಬೀದಿ ನಾಯಿಗಳಿಂದ ಸುರಕ್ಷತೆ – ನಡೆದುಕೊಂಡು ಹೋಗುವವರು

    • ನಾಯಿಯನ್ನು ನೋಡಿ ಓಡಬೇಡಿ; ಅದು ಬೆನ್ನಟ್ಟುವ ಸಾಧ್ಯತೆ ಹೆಚ್ಚುತ್ತದೆ.
    • ನಾಯಿಯ ಕಣ್ಣಿಗೆ ನೇರವಾಗಿ ನೋಡಬೇಡಿ; ಅದು ಸವಾಲು ಎಂದು ಭಾವಿಸಬಹುದು.
    • ಶಾಂತವಾಗಿ ನಿಧಾನವಾಗಿ ಹಿಂದೆ ಸರಿಯಿರಿ.
    • ಕೈಯಲ್ಲಿ ಕಲ್ಲು ಅಥವಾ ಕಡ್ಡಿ ಹಿಡಿದಂತೆ ನಟಿಸುವುದರಿಂದ ಕೆಲವೊಮ್ಮೆ ನಾಯಿ ದೂರ ಸರಿಯಬಹುದು.
    • ರಾತ್ರಿ ಒಬ್ಬರೇ ನಿರ್ಜನ ಪ್ರದೇಶಗಳಲ್ಲಿ ನಡೆಯುವುದನ್ನು ತಪ್ಪಿಸಿ.
    • ಆಹಾರ ತಿನ್ನುತ್ತಿರುವ ಅಥವಾ ಮರಿ ನಾಯಿಗಳ ಬಳಿ ಹೋಗಬೇಡಿ.
    • ಅಪರಿಚಿತ ನಾಯಿಗಳನ್ನು ಮುಟ್ಟಲು ಪ್ರಯತ್ನಿಸಬೇಡಿ.

    ಸೈಕಲ್ ಓಡಿಸುವ ಮಕ್ಕಳಿಗೆ ವಿಶೇಷ ಎಚ್ಚರಿಕೆ

    • ನಾಯಿಗಳು ಬೆನ್ನಟ್ಟಿದರೆ ಸೈಕಲ್ ವೇಗವಾಗಿ ಓಡಿಸಬೇಡಿ; ನಿಧಾನವಾಗಿ ನಿಲ್ಲಿಸಿ.ಸೈಕಲ್‌ನಿಂದ ಇಳಿದು ಶಾಂತವಾಗಿ ನಿಲ್ಲಿ.ಅಥವಾ ಹೆದರಿಸಲು ಮುಂದಾಗಿ ಅಪಾಯ ಎದುರಾದರೆ ಸಹಾಯಕ್ಕಾಗಿ ಜೋರಾಗಿ ಕಿರುಚಿ….
    • ಮಕ್ಕಳಿಗೆ ನಾಯಿಗಳನ್ನು ಕೆಣಕಬಾರದು ಎಂದು ತಿಳಿಸಿ.ಶಾಲೆಗೆ ಹೋಗುವ ದಾರಿಯಲ್ಲಿ ನಾಯಿಗಳ ಗುಂಪು ಇರುವ ಪ್ರದೇಶಗಳನ್ನು ತಪ್ಪಿಸಿ.
    • ಸಂಜೆ ಮತ್ತು ರಾತ್ರಿ ವೇಳೆಯಲ್ಲಿ ಮಕ್ಕಳನ್ನು ಒಬ್ಬರೇ ಕಳುಹಿಸಬೇಡಿ.ಪೋಷಕರು ಮಕ್ಕಳಿಗೆ ತುರ್ತು ಪರಿಸ್ಥಿತಿಯಲ್ಲಿ ಸಹಾಯ ಕೇಳುವುದು ಹೇಗೆ ಎಂಬುದನ್ನು ಕಲಿಸಬೇಕು.

    ನಾಯಿ ಕಚ್ಚಿದರೆ ತಕ್ಷಣ ಮಾಡಬೇಕಾದದ್ದು

    1. ಗಾಯವನ್ನು ಕನಿಷ್ಠ 15 ನಿಮಿಷ ಸಾಬೂನು ಮತ್ತು ನೀರಿನಿಂದ ತೊಳೆಯಿರಿ.
    2. ತಕ್ಷಣ ಸಮೀಪದ ಆಸ್ಪತ್ರೆಗೆ ಹೋಗಿ.
    3. ರೇಬೀಸ್ ಲಸಿಕೆ ಪಡೆಯುವುದು ಅತ್ಯಂತ ಮುಖ್ಯ.
    4. ಗಾಯವನ್ನು ನಿರ್ಲಕ್ಷಿಸಬೇಡಿ, ಸಣ್ಣ ಕಚ್ಚುವಿಕೆಯಾದರೂ ಚಿಕಿತ್ಸೆ ಅಗತ್ಯ.

    ಸಾರ್ವಜನಿಕರಿಗೆ ಜಾಗೃತಿ

    • ಬೀದಿ ನಾಯಿಗಳಿಗೆ ಅಜಾಗರೂಕವಾಗಿ ಆಹಾರ ಹಾಕುವುದು ಸಮಸ್ಯೆಯನ್ನು ಹೆಚ್ಚಿಸಬಹುದು.
    • ಸ್ಥಳೀಯ ಆಡಳಿತಕ್ಕೆ ಆಕ್ರಮಣಕಾರಿ ನಾಯಿಗಳ ಬಗ್ಗೆ ಮಾಹಿತಿ ನೀಡಿ.
    • ಮಕ್ಕಳ ಸುರಕ್ಷತೆ ಬಗ್ಗೆ ಶಾಲೆಗಳು ಹಾಗೂ ಪೋಷಕರು ಹೆಚ್ಚು ಎಚ್ಚರಿಕೆಯಿಂದಿರಬೇಕು.

    ಇದಾಗಲೇ ಸುಪ್ರೀಂ ಕೋರ್ಟ್ ಮಾನವ ಜೀವ ಮತ್ತು ಸಾರ್ವಜನಿಕ ಸುರಕ್ಷತೆಯೇ ಮೊದಲ ಆದ್ಯತೆ ಎಂದು ಸ್ಪಷ್ಟಪಡಿಸಿದೆ.

    ##DogBite #StrayDogs #StreetDogAttack #PublicSafety #RabiesAwareness #ChildSafety #KarnatakaNews

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    “ಬೆಡ್‌ರೂಮ್ ರಾಜಕೀಯ”ಪಪ್ಪು ಯಾದವ್ ಹೇಳಿಕೆ ಸ್ಫೋಟಕ ಚರ್ಚೆ…!ಪಪ್ಪು ತಪ್ಪಾಗ್ ಮಾತಾಡಿದ್ದು ತಪ್ಪು 
    ಬಾಲಗರ್ಭಿಣಿಯರ ಸಂಖ್ಯೆ 5975….!!
    ಹೊಸ ಸಂಸತ್ ಭವನದ ವಿನ್ಯಾಸಕ್ಕೆ ಶಶಿ ತರೂರ್ ಅಸಮಾಧಾನ: “ಆತ್ಮ ರಹಿತ ಸಮಾವೇಶ ಕೇಂದ್ರ”
    ಮಂಡ್ಯದಲ್ಲಿ ವೈರಲ್ ವಿಡಿಯೋ!ಜಿಂಕೆ ಸಂಪೂರ್ಣ ಮಾಯ!ಈ ದೃಶ್ಯ ನೋಡಿದ್ರೆ ಗಾಬರಿಯಾಗ್ತೀರಾ!ಜೀವಂತ ಪ್ರಕೃತಿ ಡಾಕ್ಯುಮೆಂಟರಿ…
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ
    ಬಂಗಾಳದಲ್ಲಿ ಬಿಜೆಪಿಯ ಯುದ್ಧೋನ್ಮಾದ, ದೀದಿಯ ರಚ್ಚೆ…
    ₹1270 ಕೋಟಿ ಕಾನ್ಟ್ರಾಕ್ಟ್ ಹಗರಣ -CM ಖಾಂಡು ಕುಟುಂಬ ವಿಚಾರಣೆ-ಸುಪ್ರೀಂಕೋರ್ಟ್ ಸಿಬಿಐಗೆ ಆದೇಶ..
    ಕಾಂಗ್ರೆಸ್‌ಗೆ ದಾವಣಗೆರೆ ಬಿಸಿ ತುಪ್ಪ!..“ಸಮುದಾಯದ ಹೆಸರಿನಲ್ಲಿ ರಾಜಕೀಯ… ಅಥವಾ ರಾಜಕೀಯದ ಹೆಸರಿನಲ್ಲಿ ಸಮುದಾಯ?”
    ಮನೆಗಣತಿ ಮಂಗಳೂರು ಮಹಾನಗರ ಪಾಲಿಕೆ-ಸ್ಪೀಕರ್ ಯು ಟಿ ಖಾದರ್ ಚಾಲನೆ
    ಫ್ರಿಡ್ಜ್ ರಿಪೇರಿಗೆ ಬಂದವ ಮನೆ ಲೂಟಿ ಪರಾರಿ…!ಬಿ ಅಲರ್ಟ್ ‼️
    ಬೆಳಗ್ಗೆಯೇ ಲೋಕಾಯುಕ್ತ ಬಿಗ್ ಬ್ಲಾಸ್ಟ್!54 ಕಡೆ ಏಕಕಾಲದಲ್ಲಿ ರೇಡ್… ಚಿನ್ನ, ನಗದು, ಮನೆ, ಜಮೀನುಗಳ ಮಹಾಪರ್ವತ ಪತ್ತೆ!
    ಉಡುಪಿಯಲ್ಲಿ  ಹರಿಕಥಾ ಕಾರ್ಯಕ್ರಮದಲ್ಲಿ ಶ್ರೀ ಜಗದ್ಗುರು ಶಂಕರಾಚಾರ್ಯರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ- ಯುಟಿಕ್ಷಮೆ ಯಾಚನೆ
    ಅಕ್ರಮ ಕಸಾಯಿ ಖಾನೆಗೆ ದಾಳಿ ಇಬ್ಬರನ್ನು ಬಂಧಿಸಿದ ಬಂಟ್ವಾಳದ ಪೊಲೀಸರು
    ಬಲಪಂಥೀಯರ ಜೊತೆ ಮುಖ್ಯಮಂತ್ರಿಗಳ ಸ್ನೇಹ : ಅಭದ್ರತೆ ಯಾರಿಗೆಲ್ಲ?
    ಕ್ಲೌಡ್ ಮಾರುಕಟ್ಟೆಗೆ ಮಾರ್ಕ್ ಜುಕರ್‌ಬರ್ಗ್ ಎಂಟ್ರಿ!?ಇಡೀ ಟೆಕ್ ಪ್ರಪಂಚವೇ ಬೆಚ್ಚಿಬೀಳುವಂತಿದೆ ಜುಕರ್‌ಬರ್ಗ್ ಮುಂದಿನ ನಡೆ!
    🚀 ಸ್ಪೇಸ್‌ನಲ್ಲಿ ಪೆಟ್ರೋಲ್ ಬಂಕ್‌ನಿಂದ..ಔಷಧ ತಯಾರಿಕೆಯವರೆಗೆ!
    ವಾಲ್ಮೀಕಿ ಹಗರಣಕ್ಕೆ ನಾಗೇಂದ್ರ ತಲೆದಂಡ? ರಾಜೀನಾಮೆ ಚರ್ಚೆ ನಡುವೆ ಕಾಂಗ್ರೆಸ್‌ಗೆ ಹೊಸ ಸಂಕಷ್ಟ!
    ಬೆಳಗಾವಿ ಮಾಜಿ ಯೋಧನ ಸಾವಿನ ಹಿಂದೆ ಬೆಚ್ಚಿಬೀಳಿಸುವ ಸತ್ಯ ₹2 ಕೋಟಿ ವಿಮೆ..!? ಸಿನೆಮಾವನ್ನೂ ಮೀರಿಸಿದ ಕ್ರೈಂ ಸ್ಟೋರಿ!
    ಮನೆಯ ಮೇಲೆ ಪೊಲೀಸರ  ದಾಳಿ  ಮಾರಾಟಕ್ಕೆ ಇಡಲಾದ ಮಾದಕ ವಸ್ತು ಹಾಗೂ ಮಾರಕ ಆಯುಧ ವಶ
    ಇರಾನ್ ಬಿಕ್ಕಟ್ಟು ವೀಸಾ ವಿಸ್ತರಿಸಲು ವಿದೇಶಿ ಪ್ರಜೆಗಳು ಹತ್ತಿರದ FRRO ಅನ್ನು ಸಂಪರ್ಕಿಸಲು ಭಾರತ ಸಲಹೆ
    ಖಾಸಗಿ ಆಸ್ಪತ್ರೆ ವೈದ್ಯರಿಗೆ ಬ್ಲ್ಯಾಕ್‌ಮೇಲ್: 2 ಕೋಟಿಗೂ ಅಧಿಕ ಹಣ ವಸೂಲಿ ಮಾಡಿದ ನರ್ಸ್‌ ಬಂಧನ
    ಮಾರ್ಚ್ 17 :ಮಂಗಳೂರಿನಲ್ಲಿ ವಿಶ್ವ ಗ್ರಾಹಕರ ದಿನಾಚರಣೆ-ಗ್ರಾಹಕರ ಹಕ್ಕುಗಳ ಜಾಗೃತಿ ಕಾರ್ಯಕ್ರಮ
    AAP ಸದ್ದು ಮಂಗಳೂರಲ್ಲೂ! ಜನರ ಸಮಸ್ಯೆಗೆ ನೇರ ಹೋರಾಟ
    🚨 ಮಂಗಳೂರು ನಿವಾಸಿಗಳಿಗೆ ಮಹತ್ವದ ಮಾಹಿತಿ – 2026 ಘನತ್ಯಾಜ್ಯ ನಿರ್ವಹಣೆ ಹೊಸ ನಿಯಮ  🚨
    ವಿಡಿಯೋ ಕಾಲ್‌ನಲ್ಲಿ ತಂದೆಗೆ ಅಂತಿಮ ವಿದಾಯ!ಸಂಸ್ಕಾರ ಸೋತಿತೇ….ಸೌಲಭ್ಯ ಗೆದ್ದಿತೇ?ವೃದ್ಧಾಶ್ರಮದಿಂದ ಚಿತೆಯವರೆಗೆ ಒಂಟಿ ಪಯಣ…
    ಮಾರ್ಕ್ಸ್ 90%, ಆದರೆ 19ಕ್ಕೆ ಕ್ರೂರ ಅಪರಾಧಿ!ಕನಸುಗಳಿದ್ದ ಹುಡುಗನೊಬ್ಬ ಕಟುಕನಾದ ದುರಂತ ಕಥೆ”
    ಕರ್ನಾಟಕ CM ಬದಲಾವಣೆ ರಾಜಕೀಯ ಕೌಂಟ್‌ಡೌನ್ ಶುರುವಾಗಿದೆ! ತೆರೆಮರೆಯಲ್ಲಿ ಏನೋ ನಡೀತಿದೆ… 
    ಹಾಡುಹಗಲೇ ಉಡುಪಿಯ ಕರಾವಳಿ ಬೈಪಾಸ್ ನಲ್ಲಿ ಗುಂಡಾಗಿರಿ
    ನಿಶ್ಶಬ್ದ ಕೊಠಡಿ ಹೇಳುವ ನಿಗೂಢ ರಹಸ್ಯ …!ಮನೆಯ ಗೋಡೆಗಳ ಮೇಲೆ ಬರಹ,ಕಾಗದಗಳು ನೂರಾರು…! ಅಸಹಜ ಮರಣದ ಹಿಂದೆ ಅಡಗಿರುವ ಸತ್ಯ ಇನ್ನೂ ಅನಾವರಣವಾಗಿಲ್ಲ…”
    ಸಾಲದ ಭಾರವೂ ಶಿಸ್ತಿನ ಮುಂದೆ ಸೋಲುತ್ತದೆ…! ಇದಕ್ಕೆ ಸಾಕ್ಷಿಯೇ ಸಾಕ್ಷಿ..!₹80 ಲಕ್ಷ ಸಾಲ-1 ವರ್ಷ ಮತ್ತು ಒಂದು ಡೆಡಿಕೇಟೆಡ್ ಟಾರ್ಗೆಟ್..!