📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಕರ್ನಾಟಕದಲ್ಲಿ 2 ಲಕ್ಷಕ್ಕೂ ಹೆಚ್ಚು ನಾಯಿ ಕಚ್ಚಿದ ಪ್ರಕರಣಗಳು …!ನಗರಗಳಲ್ಲಿ ‘ಸ್ಟ್ರೇ ಡಾಗ್ ಟೆರರ್’ — ಜನರು ಭಯದಲ್ಲಿ ಬದುಕುತ್ತಿದ್ದಾರೆ!

ಈಗಿನ ದಿನಗಳಲ್ಲಿ ಹೆಚ್ಚಿನ ರಸ್ತೆಗಳ ಪರಿಸ್ಥಿತಿ ಹೇಗಿದೆ ಅಂದ್ರೆ ಮಕ್ಕಳು ಹೊರಗೆ ಆಟ ಆಡೋದು ಕೂಡ ಅಪಾಯವಾಗಿದೆ. ನಿರ್ಭೀತಿಯಿಂದ ಸ್ವಚ್ಛಂದವಾಗಿ ರಸ್ತೆಯಲ್ಲಿ walk ಕೂಡ ಅಸಾಧ್ಯ.ಕೆಲವು ರಸ್ತೆಗಳಲ್ಲಿ Dogs ಗ್ಯಾಂಗ್ ಯಾವುದೇ ಸಮಯದಲ್ಲೂ attack ಮಾಡುವಂತ ಸ್ಥಿತಿ ಎದುರಾಗಿದೆ.ಇದು ಎಚ್ಚರಿಕೆ ಅಲ್ಲ… ಅಪಾಯದ ಗಂಟೆ!

ಭಾರತದಾದ್ಯಂತ ನಾಯಿಕಚ್ಚುವ ಪ್ರಕರಣಗಳು ಆತಂಕಕಾರಿ ಮಟ್ಟಕ್ಕೆ ಏರಿರುವ ಹಿನ್ನೆಲೆಯಲ್ಲಿ, Supreme Court of India ತೀವ್ರ ಕಳವಳ ವ್ಯಕ್ತಪಡಿಸಿದೆ. 2026ರ ಮೊದಲ ನಾಲ್ಕು ತಿಂಗಳಲ್ಲಿ ಮಾತ್ರ ತಮಿಳುನಾಡಿನಲ್ಲಿ ಸುಮಾರು 2.63 ಲಕ್ಷ ಮತ್ತು ಕರ್ನಾಟಕದಲ್ಲಿ 2 ಲಕ್ಷಕ್ಕೂ ಹೆಚ್ಚು ನಾಯಿ ಕಚ್ಚುವ ಪ್ರಕರಣಗಳು ದಾಖಲಾಗಿವೆ ಎಂದು ನ್ಯಾಯಾಲಯ ಗಮನಿಸಿದೆ. ನ್ಯಾಯಾಲಯವು ರಾಜ್ಯ ಸರ್ಕಾರಗಳು ಹಾಗೂ ಸ್ಥಳೀಯ ಆಡಳಿತಗಳ ನಿರ್ಲಕ್ಷ್ಯದಿಂದ ಪರಿಸ್ಥಿತಿ “ಅತ್ಯಂತ ಆತಂಕಕಾರಿ” ಮಟ್ಟಕ್ಕೇರಿದೆ ಎಂದು ಹೇಳಿದೆ.

ಪ್ರಮುಖ ಅಂಶಗಳು

  • ತಮಿಳುನಾಡಿನಲ್ಲಿ 2026ರ ಜನವರಿಯಿಂದ ಏಪ್ರಿಲ್‌ವರೆಗೆ ಸುಮಾರು 17 ಸಾವುಗಳು ದಾಖಲಾಗಿವೆ.
  • ಕರ್ನಾಟಕದಲ್ಲಿ ರೇಬೀಸ್ ಸಂಬಂಧಿತ ಕನಿಷ್ಠ 25 ಸಾವುಗಳು ವರದಿಯಾಗಿವೆ.
  • ಬೆಂಗಳೂರು ನಗರ ಪ್ರದೇಶದಲ್ಲೇ ಸಾವಿರಾರು ನಾಯಿ ಕಚ್ಚುವ ಪ್ರಕರಣಗಳು ದಾಖಲಾಗಿವೆ.
  • ಶಾಲೆಗಳು, ಆಸ್ಪತ್ರೆಗಳು, ಬಸ್ ನಿಲ್ದಾಣಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

ರಸ್ತೆ ಮೇಲೆ ನಡೆಯುವವರು ಮತ್ತು ಸೈಕಲ್ ಓಡಿಸುವ ಮಕ್ಕಳು ಗಮನಿಸಬೇಕಾದ ಸುರಕ್ಷತಾ ಸೂಚನೆಗಳು

ಬೀದಿ ನಾಯಿಗಳಿಂದ ಸುರಕ್ಷತೆ – ನಡೆದುಕೊಂಡು ಹೋಗುವವರು

  • ನಾಯಿಯನ್ನು ನೋಡಿ ಓಡಬೇಡಿ; ಅದು ಬೆನ್ನಟ್ಟುವ ಸಾಧ್ಯತೆ ಹೆಚ್ಚುತ್ತದೆ.
  • ನಾಯಿಯ ಕಣ್ಣಿಗೆ ನೇರವಾಗಿ ನೋಡಬೇಡಿ; ಅದು ಸವಾಲು ಎಂದು ಭಾವಿಸಬಹುದು.
  • ಶಾಂತವಾಗಿ ನಿಧಾನವಾಗಿ ಹಿಂದೆ ಸರಿಯಿರಿ.
  • ಕೈಯಲ್ಲಿ ಕಲ್ಲು ಅಥವಾ ಕಡ್ಡಿ ಹಿಡಿದಂತೆ ನಟಿಸುವುದರಿಂದ ಕೆಲವೊಮ್ಮೆ ನಾಯಿ ದೂರ ಸರಿಯಬಹುದು.
  • ರಾತ್ರಿ ಒಬ್ಬರೇ ನಿರ್ಜನ ಪ್ರದೇಶಗಳಲ್ಲಿ ನಡೆಯುವುದನ್ನು ತಪ್ಪಿಸಿ.
  • ಆಹಾರ ತಿನ್ನುತ್ತಿರುವ ಅಥವಾ ಮರಿ ನಾಯಿಗಳ ಬಳಿ ಹೋಗಬೇಡಿ.
  • ಅಪರಿಚಿತ ನಾಯಿಗಳನ್ನು ಮುಟ್ಟಲು ಪ್ರಯತ್ನಿಸಬೇಡಿ.

ಸೈಕಲ್ ಓಡಿಸುವ ಮಕ್ಕಳಿಗೆ ವಿಶೇಷ ಎಚ್ಚರಿಕೆ

  • ನಾಯಿಗಳು ಬೆನ್ನಟ್ಟಿದರೆ ಸೈಕಲ್ ವೇಗವಾಗಿ ಓಡಿಸಬೇಡಿ; ನಿಧಾನವಾಗಿ ನಿಲ್ಲಿಸಿ.ಸೈಕಲ್‌ನಿಂದ ಇಳಿದು ಶಾಂತವಾಗಿ ನಿಲ್ಲಿ.ಅಥವಾ ಹೆದರಿಸಲು ಮುಂದಾಗಿ ಅಪಾಯ ಎದುರಾದರೆ ಸಹಾಯಕ್ಕಾಗಿ ಜೋರಾಗಿ ಕಿರುಚಿ….
  • ಮಕ್ಕಳಿಗೆ ನಾಯಿಗಳನ್ನು ಕೆಣಕಬಾರದು ಎಂದು ತಿಳಿಸಿ.ಶಾಲೆಗೆ ಹೋಗುವ ದಾರಿಯಲ್ಲಿ ನಾಯಿಗಳ ಗುಂಪು ಇರುವ ಪ್ರದೇಶಗಳನ್ನು ತಪ್ಪಿಸಿ.
  • ಸಂಜೆ ಮತ್ತು ರಾತ್ರಿ ವೇಳೆಯಲ್ಲಿ ಮಕ್ಕಳನ್ನು ಒಬ್ಬರೇ ಕಳುಹಿಸಬೇಡಿ.ಪೋಷಕರು ಮಕ್ಕಳಿಗೆ ತುರ್ತು ಪರಿಸ್ಥಿತಿಯಲ್ಲಿ ಸಹಾಯ ಕೇಳುವುದು ಹೇಗೆ ಎಂಬುದನ್ನು ಕಲಿಸಬೇಕು.

ನಾಯಿ ಕಚ್ಚಿದರೆ ತಕ್ಷಣ ಮಾಡಬೇಕಾದದ್ದು

  1. ಗಾಯವನ್ನು ಕನಿಷ್ಠ 15 ನಿಮಿಷ ಸಾಬೂನು ಮತ್ತು ನೀರಿನಿಂದ ತೊಳೆಯಿರಿ.
  2. ತಕ್ಷಣ ಸಮೀಪದ ಆಸ್ಪತ್ರೆಗೆ ಹೋಗಿ.
  3. ರೇಬೀಸ್ ಲಸಿಕೆ ಪಡೆಯುವುದು ಅತ್ಯಂತ ಮುಖ್ಯ.
  4. ಗಾಯವನ್ನು ನಿರ್ಲಕ್ಷಿಸಬೇಡಿ, ಸಣ್ಣ ಕಚ್ಚುವಿಕೆಯಾದರೂ ಚಿಕಿತ್ಸೆ ಅಗತ್ಯ.

ಸಾರ್ವಜನಿಕರಿಗೆ ಜಾಗೃತಿ

  • ಬೀದಿ ನಾಯಿಗಳಿಗೆ ಅಜಾಗರೂಕವಾಗಿ ಆಹಾರ ಹಾಕುವುದು ಸಮಸ್ಯೆಯನ್ನು ಹೆಚ್ಚಿಸಬಹುದು.
  • ಸ್ಥಳೀಯ ಆಡಳಿತಕ್ಕೆ ಆಕ್ರಮಣಕಾರಿ ನಾಯಿಗಳ ಬಗ್ಗೆ ಮಾಹಿತಿ ನೀಡಿ.
  • ಮಕ್ಕಳ ಸುರಕ್ಷತೆ ಬಗ್ಗೆ ಶಾಲೆಗಳು ಹಾಗೂ ಪೋಷಕರು ಹೆಚ್ಚು ಎಚ್ಚರಿಕೆಯಿಂದಿರಬೇಕು.

ಇದಾಗಲೇ ಸುಪ್ರೀಂ ಕೋರ್ಟ್ ಮಾನವ ಜೀವ ಮತ್ತು ಸಾರ್ವಜನಿಕ ಸುರಕ್ಷತೆಯೇ ಮೊದಲ ಆದ್ಯತೆ ಎಂದು ಸ್ಪಷ್ಟಪಡಿಸಿದೆ.

##DogBite #StrayDogs #StreetDogAttack #PublicSafety #RabiesAwareness #ChildSafety #KarnatakaNews

COMMENTS

Login with Gmail to comment

ಇನ್ನಷ್ಟು ಸುದ್ದಿ

“Arvind Kejriwal: ‘ಸತ್ಯಾಗ್ರಹ’ದಿಂದ ನ್ಯಾಯದ ಬೇಡಿಕೆ.”
ಮರಣದಂಡನೆ ಶಿಕ್ಷೆಗೆ ಈಡಾದ  ತಮಿಳುನಾಡು   ಪೊಲೀಸರು
ಹೊರಗೆ ಕ್ಯಾಂಟೀನ್…ಆದ್ರೆ ಒಳಗೆ ನಡೆಯುತ್ತಿತ್ತು ಬೇರೆದ್ದೇ ಆಟ..!ಬಯಲಾಯ್ತು ಬೆಚ್ಚಿಬೀಳಿಸುವ ದಂಧೆ. 
ಕೂದಲೆಳೆ ಅಂತರದಲ್ಲಿ ಪಾರಾದ ಗುಜರಾತ್ ಟೈಟಾನ್ಸ್!ಕ್ಷಣಾರ್ಧ ತಡವಾಗಿದ್ದರೂ ಸಂಭವಿಸುತ್ತಿತ್ತು ಘೋರ ಅಗ್ನಿ ದುರಂತ!
🛑 ನಾಗರಮಠದಲ್ಲಿ ಅವೈಜ್ಞಾನಿಕ ಮರಳುಗಾರಿಕೆ ವಿರುದ್ಧ ಗ್ರಾಮಸ್ಥರ ಆಕ್ರೋಶ
ಮಾರ್ಕ್ಸ್ 90%, ಆದರೆ 19ಕ್ಕೆ ಕ್ರೂರ ಅಪರಾಧಿ!ಕನಸುಗಳಿದ್ದ ಹುಡುಗನೊಬ್ಬ ಕಟುಕನಾದ ದುರಂತ ಕಥೆ”
ಗುರುವಾಯನಕೆರೆ ಯ ಪ್ರತಿಷ್ಠಿತ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ
PoKನಲ್ಲಿ ರಕ್ತಪಾತ-ಪಾಕಿಸ್ತಾನದ ವಿರುದ್ಧ ಭಾರತದ ತೀವ್ರ ಆಕ್ರೋಶ!ಗುಂಡಿನ ಮಳೆಯ ನಡುವೆ ಜೀವ ಕಳೆದುಕೊಂಡ ಪ್ರತಿಭಟನಾಕಾರರು!
ಶೈಕ್ಷಣಿಕ ವರ್ಷ ಆರಂಭ, ನೋಟ್‌ಬುಕ್‌ನಿಂದ ಆಟೋವರೆಗೆ ಎಲ್ಲ ಖರ್ಚು ಗಗನಕ್ಕೆ….ಪೋಷಕರಿಗೆ ದುಬಾರಿ ಹೊರೆ
ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣಕ್ಕೆ ಆಪ್ ತೀವ್ರ ವಿರೋಧ-ಒಪ್ಪಂದ ಬಹಿರಂಗಪಡಿಸುವಂತೆ ಆಗ್ರಹ
ಹೋಳಿ ಮತ್ತು ರಂಜಾನ್ ಒಂದು ಜೀವವನ್ನೇ ನುಂಗಿತು..!
ಗ್ಯಾಸ್ ಅಭಾವ ಮತ್ತು ಬೆಲೆ ಏರಿಕೆ, ಸುಳ್ಳು ಎನ್ನುತ್ತಿದೆ-HPCL
“ಹಿಜಾಬ್ ಆದೇಶಕ್ಕೆ ಕರಾವಳಿಯಲ್ಲಿ ಬಿಜೆಪಿ ಸಿಡಿದೆದ್ದಿದೆ!ಓಲೈಕೆಗಾಗಿ ಶಿಕ್ಷಣವನ್ನೇ ಬಲಿ ಕೊಟ್ಟ ಕಾಂಗ್ರೆಸ್” – ಬಿಜೆಪಿ ವಾಗ್ದಾಳಿ.
ಪ್ರತೀಕಾರದ ದಾಳಿಗೆ ‘ ರೌಡಿಶೀಟರ್ ಟ್ಯಾಬ್ಲೆಟ್’ ಆರೀಫ್ ಖತಂ .!
ಬಂಗಾಳದ ಸಿಂಹಾಸನಕ್ಕೆ ಸುವೇಂದು ಏರಿಕೆ — 15 ವರ್ಷದ ಮಮತಾ ಯುಗಕ್ಕೆ ಬ್ರೇಕ್!ಟಿಎಂಸಿ ಕೋಟೆ ಕುಸಿತ…
“ಅಮ್ಮ”ನ ಕಾರ್ಯಕ್ರಮದಲ್ಲಿ  ಕೇಂದ್ರ ಸಚಿವರಿಂದ ರಾಜಕೀಯ ಭಾಷಣ
ಮಳೆ ಮಾಯ! ಪೆಸಿಫಿಕ್ ಚಂಡಮಾರುತದಿಂದ ಮುಂಗಾರಿಗೆ ಬ್ರೇಕ್ – ದೇಶದ 70-80% ಭಾಗದಲ್ಲಿ ಒಣಹವೆ
ಅನಾಥ ಪುಟ್ಟ ಬಾಲಕಿಯರ ಮೇಲೆ ವರ್ಷಗಳ ಕಾಲ ಲೈಂಗಿಕ ದೌರ್ಜನ್ಯ:ರಾಕ್ಷಸ ಮನಸ್ಸುಗಳಿಗೆ ಅಂತ್ಯ ಯಾವಾಗ?
ಬೈಂದೂರಿನಲ್ಲಿ ಹಳೆ ವೈಷಮ್ಯದಿಂದ ಮನೆಗೆ ನುಗ್ಗಿ ಹಲ್ಲೆಗೆ ಯತ್ನ
ಇನ್ಮುಂದೆ ಏರ್‌ಪೋರ್ಟ್‌ನಲ್ಲಿ ಇಷ್ಟ ಬಂದಂತೆ ವಿಡಿಯೋ ಮಾಡುವಂತಿಲ್ಲ! ಇನ್ಸ್ಟಾರೀಲ್ಸ್, ವಿಡಿಯೋ ಮಾಡಿದರೆ ‘ನೋ-ಫ್ಲೈ ಲಿಸ್ಟ್’ ಸೇರುವ ಮುನ್ನೆಚ್ಚರಿಕೆ ನೀಡಿದ DGCA! ಲೇಟೆಸ್ಟ್ ಅಪ್ಡೇಟ್ ಹೊಸ ರೂಲ್ಸ್ ಇಲ್ಲಿದೆ.. ಓದಿ..
ಜನಪ್ರತಿನಿಧಿಗಳಿಗೆ ಕೆಲಸ ,ಜನಸೇವೆ ಬೇಡ ,ಪ್ಲೆಕ್ಸ್ ಮಾತ್ರ ಫುಲ್ ಸೈಜ್ …ಕಾನೂನು ಇದೆ… ಪಾಲನೆ ಮಾತ್ರ ಇಲ್ಲ!
ಮಂಗಳೂರಿನಲ್ಲಿ ವಕೀಲರೊಬ್ಬರ ನಕಲಿ ದುಷ್ಕೃತ್ಯ ಬಯಲಿಗೆ?
ಹೆಸರು ಬದಲಾವಣೆ ಪಶ್ಚಿಮ ಬಂಗಾಳ ಪೆಂಡಿಂಗ್, ಕೇರಳ ಪ್ರಗತಿಯಲ್ಲಿ
ಕರ್ನಾಟಕದಲ್ಲಿ ಮಳೆ ಅಲರ್ಟ್! 13 ಜಿಲ್ಲೆಗಳಿಗೆ ಯೆಲ್ಲೋ ವಾರ್ನಿಂಗ್ – ಜನರು ಎಚ್ಚರಿಕೆ ಅಗತ್ಯ
“ವಾಹನ ಮಾರಾಟ-RC ಬದಲಾವಣೆ  ಅಗತ್ಯ.. ಇಲ್ಲವಾದರೆ ಕಾನೂನು ಸಮಸ್ಯೆಗಳು ತಪ್ಪಿದ್ದಲ್ಲ..!” ಹೈಕೋರ್ಟ್
ಹೈ ಪ್ರೋಫೈಲ್ ಕೇಸ್ ಬಿಹಾರದಿಂದ UPವರೆಗೆ CID ಚೇಸ್… ಕೊನೆಗೂ ಸಿಕ್ಕಿದ ಸುಪಾರಿ ಕಿಲ್ಲರ್ಸ್!ಸಿನಿಮಾ ಸ್ಟೈಲ್ ಮರ್ಡರ್ ಮಿಸ್ಟರಿ: ಹೈಟೆಕ್ ಪ್ಲಾನ್ ಮಾಡಿದ ಹಂತಕರು… 
ಫ್ರಿಡ್ಜ್ ರಿಪೇರಿಗೆ ಬಂದವ ಮನೆ ಲೂಟಿ ಪರಾರಿ…!ಬಿ ಅಲರ್ಟ್ ‼️
ಬೇಕಾದಾಗ, ಬೇಕಾದಂಗೆ ಸಂವಿಧಾನದ ಜಪ
ಶಿಕ್ಷಣದ ಹೆಸರಿನಲ್ಲಿ ಡ್ರಗ್ ವ್ಯವಹಾರ! ಬೆಚ್ಚಿಬಿದ್ದ ಮಂಗಳೂರು…
“ಕುನಾಲ್ ಶಾ ವಾಟ್ಸಾಪ್ ಗ್ಲೋಬಲ್ ಹೆಡ್! ಸುಂದರ್ ಪಿಚೈ, ಸತ್ಯ ನಾಡೆಲ್ಲಾ ಸಾಲಿಗೆ ಮತ್ತೊಬ್ಬ ಭಾರತೀಯನ ಸೇರ್ಪಡೆ.