📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಕರ್ನಾಟಕದಲ್ಲಿ 2 ಲಕ್ಷಕ್ಕೂ ಹೆಚ್ಚು ನಾಯಿ ಕಚ್ಚಿದ ಪ್ರಕರಣಗಳು …!ನಗರಗಳಲ್ಲಿ ‘ಸ್ಟ್ರೇ ಡಾಗ್ ಟೆರರ್’ — ಜನರು ಭಯದಲ್ಲಿ ಬದುಕುತ್ತಿದ್ದಾರೆ!

ಈಗಿನ ದಿನಗಳಲ್ಲಿ ಹೆಚ್ಚಿನ ರಸ್ತೆಗಳ ಪರಿಸ್ಥಿತಿ ಹೇಗಿದೆ ಅಂದ್ರೆ ಮಕ್ಕಳು ಹೊರಗೆ ಆಟ ಆಡೋದು ಕೂಡ ಅಪಾಯವಾಗಿದೆ. ನಿರ್ಭೀತಿಯಿಂದ ಸ್ವಚ್ಛಂದವಾಗಿ ರಸ್ತೆಯಲ್ಲಿ walk ಕೂಡ ಅಸಾಧ್ಯ.ಕೆಲವು ರಸ್ತೆಗಳಲ್ಲಿ Dogs ಗ್ಯಾಂಗ್ ಯಾವುದೇ ಸಮಯದಲ್ಲೂ attack ಮಾಡುವಂತ ಸ್ಥಿತಿ ಎದುರಾಗಿದೆ.ಇದು ಎಚ್ಚರಿಕೆ ಅಲ್ಲ… ಅಪಾಯದ ಗಂಟೆ!

ಭಾರತದಾದ್ಯಂತ ನಾಯಿಕಚ್ಚುವ ಪ್ರಕರಣಗಳು ಆತಂಕಕಾರಿ ಮಟ್ಟಕ್ಕೆ ಏರಿರುವ ಹಿನ್ನೆಲೆಯಲ್ಲಿ, Supreme Court of India ತೀವ್ರ ಕಳವಳ ವ್ಯಕ್ತಪಡಿಸಿದೆ. 2026ರ ಮೊದಲ ನಾಲ್ಕು ತಿಂಗಳಲ್ಲಿ ಮಾತ್ರ ತಮಿಳುನಾಡಿನಲ್ಲಿ ಸುಮಾರು 2.63 ಲಕ್ಷ ಮತ್ತು ಕರ್ನಾಟಕದಲ್ಲಿ 2 ಲಕ್ಷಕ್ಕೂ ಹೆಚ್ಚು ನಾಯಿ ಕಚ್ಚುವ ಪ್ರಕರಣಗಳು ದಾಖಲಾಗಿವೆ ಎಂದು ನ್ಯಾಯಾಲಯ ಗಮನಿಸಿದೆ. ನ್ಯಾಯಾಲಯವು ರಾಜ್ಯ ಸರ್ಕಾರಗಳು ಹಾಗೂ ಸ್ಥಳೀಯ ಆಡಳಿತಗಳ ನಿರ್ಲಕ್ಷ್ಯದಿಂದ ಪರಿಸ್ಥಿತಿ “ಅತ್ಯಂತ ಆತಂಕಕಾರಿ” ಮಟ್ಟಕ್ಕೇರಿದೆ ಎಂದು ಹೇಳಿದೆ.

ಪ್ರಮುಖ ಅಂಶಗಳು

  • ತಮಿಳುನಾಡಿನಲ್ಲಿ 2026ರ ಜನವರಿಯಿಂದ ಏಪ್ರಿಲ್‌ವರೆಗೆ ಸುಮಾರು 17 ಸಾವುಗಳು ದಾಖಲಾಗಿವೆ.
  • ಕರ್ನಾಟಕದಲ್ಲಿ ರೇಬೀಸ್ ಸಂಬಂಧಿತ ಕನಿಷ್ಠ 25 ಸಾವುಗಳು ವರದಿಯಾಗಿವೆ.
  • ಬೆಂಗಳೂರು ನಗರ ಪ್ರದೇಶದಲ್ಲೇ ಸಾವಿರಾರು ನಾಯಿ ಕಚ್ಚುವ ಪ್ರಕರಣಗಳು ದಾಖಲಾಗಿವೆ.
  • ಶಾಲೆಗಳು, ಆಸ್ಪತ್ರೆಗಳು, ಬಸ್ ನಿಲ್ದಾಣಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

ರಸ್ತೆ ಮೇಲೆ ನಡೆಯುವವರು ಮತ್ತು ಸೈಕಲ್ ಓಡಿಸುವ ಮಕ್ಕಳು ಗಮನಿಸಬೇಕಾದ ಸುರಕ್ಷತಾ ಸೂಚನೆಗಳು

ಬೀದಿ ನಾಯಿಗಳಿಂದ ಸುರಕ್ಷತೆ – ನಡೆದುಕೊಂಡು ಹೋಗುವವರು

  • ನಾಯಿಯನ್ನು ನೋಡಿ ಓಡಬೇಡಿ; ಅದು ಬೆನ್ನಟ್ಟುವ ಸಾಧ್ಯತೆ ಹೆಚ್ಚುತ್ತದೆ.
  • ನಾಯಿಯ ಕಣ್ಣಿಗೆ ನೇರವಾಗಿ ನೋಡಬೇಡಿ; ಅದು ಸವಾಲು ಎಂದು ಭಾವಿಸಬಹುದು.
  • ಶಾಂತವಾಗಿ ನಿಧಾನವಾಗಿ ಹಿಂದೆ ಸರಿಯಿರಿ.
  • ಕೈಯಲ್ಲಿ ಕಲ್ಲು ಅಥವಾ ಕಡ್ಡಿ ಹಿಡಿದಂತೆ ನಟಿಸುವುದರಿಂದ ಕೆಲವೊಮ್ಮೆ ನಾಯಿ ದೂರ ಸರಿಯಬಹುದು.
  • ರಾತ್ರಿ ಒಬ್ಬರೇ ನಿರ್ಜನ ಪ್ರದೇಶಗಳಲ್ಲಿ ನಡೆಯುವುದನ್ನು ತಪ್ಪಿಸಿ.
  • ಆಹಾರ ತಿನ್ನುತ್ತಿರುವ ಅಥವಾ ಮರಿ ನಾಯಿಗಳ ಬಳಿ ಹೋಗಬೇಡಿ.
  • ಅಪರಿಚಿತ ನಾಯಿಗಳನ್ನು ಮುಟ್ಟಲು ಪ್ರಯತ್ನಿಸಬೇಡಿ.

ಸೈಕಲ್ ಓಡಿಸುವ ಮಕ್ಕಳಿಗೆ ವಿಶೇಷ ಎಚ್ಚರಿಕೆ

  • ನಾಯಿಗಳು ಬೆನ್ನಟ್ಟಿದರೆ ಸೈಕಲ್ ವೇಗವಾಗಿ ಓಡಿಸಬೇಡಿ; ನಿಧಾನವಾಗಿ ನಿಲ್ಲಿಸಿ.ಸೈಕಲ್‌ನಿಂದ ಇಳಿದು ಶಾಂತವಾಗಿ ನಿಲ್ಲಿ.ಅಥವಾ ಹೆದರಿಸಲು ಮುಂದಾಗಿ ಅಪಾಯ ಎದುರಾದರೆ ಸಹಾಯಕ್ಕಾಗಿ ಜೋರಾಗಿ ಕಿರುಚಿ….
  • ಮಕ್ಕಳಿಗೆ ನಾಯಿಗಳನ್ನು ಕೆಣಕಬಾರದು ಎಂದು ತಿಳಿಸಿ.ಶಾಲೆಗೆ ಹೋಗುವ ದಾರಿಯಲ್ಲಿ ನಾಯಿಗಳ ಗುಂಪು ಇರುವ ಪ್ರದೇಶಗಳನ್ನು ತಪ್ಪಿಸಿ.
  • ಸಂಜೆ ಮತ್ತು ರಾತ್ರಿ ವೇಳೆಯಲ್ಲಿ ಮಕ್ಕಳನ್ನು ಒಬ್ಬರೇ ಕಳುಹಿಸಬೇಡಿ.ಪೋಷಕರು ಮಕ್ಕಳಿಗೆ ತುರ್ತು ಪರಿಸ್ಥಿತಿಯಲ್ಲಿ ಸಹಾಯ ಕೇಳುವುದು ಹೇಗೆ ಎಂಬುದನ್ನು ಕಲಿಸಬೇಕು.

ನಾಯಿ ಕಚ್ಚಿದರೆ ತಕ್ಷಣ ಮಾಡಬೇಕಾದದ್ದು

  1. ಗಾಯವನ್ನು ಕನಿಷ್ಠ 15 ನಿಮಿಷ ಸಾಬೂನು ಮತ್ತು ನೀರಿನಿಂದ ತೊಳೆಯಿರಿ.
  2. ತಕ್ಷಣ ಸಮೀಪದ ಆಸ್ಪತ್ರೆಗೆ ಹೋಗಿ.
  3. ರೇಬೀಸ್ ಲಸಿಕೆ ಪಡೆಯುವುದು ಅತ್ಯಂತ ಮುಖ್ಯ.
  4. ಗಾಯವನ್ನು ನಿರ್ಲಕ್ಷಿಸಬೇಡಿ, ಸಣ್ಣ ಕಚ್ಚುವಿಕೆಯಾದರೂ ಚಿಕಿತ್ಸೆ ಅಗತ್ಯ.

ಸಾರ್ವಜನಿಕರಿಗೆ ಜಾಗೃತಿ

  • ಬೀದಿ ನಾಯಿಗಳಿಗೆ ಅಜಾಗರೂಕವಾಗಿ ಆಹಾರ ಹಾಕುವುದು ಸಮಸ್ಯೆಯನ್ನು ಹೆಚ್ಚಿಸಬಹುದು.
  • ಸ್ಥಳೀಯ ಆಡಳಿತಕ್ಕೆ ಆಕ್ರಮಣಕಾರಿ ನಾಯಿಗಳ ಬಗ್ಗೆ ಮಾಹಿತಿ ನೀಡಿ.
  • ಮಕ್ಕಳ ಸುರಕ್ಷತೆ ಬಗ್ಗೆ ಶಾಲೆಗಳು ಹಾಗೂ ಪೋಷಕರು ಹೆಚ್ಚು ಎಚ್ಚರಿಕೆಯಿಂದಿರಬೇಕು.

ಇದಾಗಲೇ ಸುಪ್ರೀಂ ಕೋರ್ಟ್ ಮಾನವ ಜೀವ ಮತ್ತು ಸಾರ್ವಜನಿಕ ಸುರಕ್ಷತೆಯೇ ಮೊದಲ ಆದ್ಯತೆ ಎಂದು ಸ್ಪಷ್ಟಪಡಿಸಿದೆ.

##DogBite #StrayDogs #StreetDogAttack #PublicSafety #RabiesAwareness #ChildSafety #KarnatakaNews

COMMENTS

Login with Gmail to comment

ಇನ್ನಷ್ಟು ಸುದ್ದಿ

ಪ್ರೀತಿಸಿ ಓಡಿಹೋದ ಸೇಡಿನ ಬೆಂಕಿಗೆ ಬಲಿಯಾದ ನಿರ್ದೋಷಿ ಅಣ್ಣ..!
ಹಳೆಯ ಬಟ್ಟೆಗೂ ಹಣ ಸಿಗುತ್ತಾ?! ಬೆಂಗಳೂರಿನ ಈ ಸ್ಟಾರ್ಟ್‌ಅಪ್ ನಿಜಕ್ಕೂ ಶಾಕ್ ಕೊಡುತ್ತಿದೆ!
ಈ ಬಾರಿ ಮಕ್ಕಳೊಟ್ಟಿಗೆ PUC ಎಕ್ಸಾಮ್ ಪಾಸಾದಅಮ್ಮಂದಿರೇ ಮನಸ್ಸಿದ್ದರೆ ಮಾರ್ಗ ಇದೆ ಅನ್ನೋದಕ್ಕೆ…ಪ್ರೇರಣೆ…!
“ವಾಹನ ಮಾರಾಟ-RC ಬದಲಾವಣೆ  ಅಗತ್ಯ.. ಇಲ್ಲವಾದರೆ ಕಾನೂನು ಸಮಸ್ಯೆಗಳು ತಪ್ಪಿದ್ದಲ್ಲ..!” ಹೈಕೋರ್ಟ್
“ಪ್ರಜಾಪ್ರಭುತ್ವದ ಮೇಲೆ ದಾಳಿ”ಸುಪ್ರೀಂ ಕೋರ್ಟ್ ಕಿಡಿ: ಇದು ಪ್ರತಿಭಟನೆ ಅಲ್ಲ, ಸಂಚು!”
ಅಂಡಮಾನ್ boat ದುರಂತ-250 ಕ್ಕೂ ಹೆಚ್ಚು ಮಂದಿ ಕಾಣೆ..
ಮಂಗಳೂರು ಏರ್‌ಪೋರ್ಟ್ ಬಳಿ ಬರ್ತಿದೆ ಲಕ್ಸುರಿ ಇಂಟರ್‌ನ್ಯಾಷನಲ್ ಹೋಟೆಲ್!
ಡಿಕೆಎಮುಲ್‌ನಿಂದ ₹1,270 ಕೋಟಿ ದಾಖಲೆ ಬೆಳವಣಿಗೆ ಹೊಸ ಮೈಲುಗಲ್ಲು..!
108 ಆರೋಗ್ಯ ಕವಚ'”ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ಇನ್ಮುಂದೆ ಆಂಬ್ಯುಲೆನ್ಸ್ ನಿಮ್ಮ ಮನೆಬಾಗಿಲಿಗೆ! 
ಹೈ ಪ್ರೋಫೈಲ್ ಕೇಸ್ ಬಿಹಾರದಿಂದ UPವರೆಗೆ CID ಚೇಸ್… ಕೊನೆಗೂ ಸಿಕ್ಕಿದ ಸುಪಾರಿ ಕಿಲ್ಲರ್ಸ್!ಸಿನಿಮಾ ಸ್ಟೈಲ್ ಮರ್ಡರ್ ಮಿಸ್ಟರಿ: ಹೈಟೆಕ್ ಪ್ಲಾನ್ ಮಾಡಿದ ಹಂತಕರು… 
ಕರ್ನಾಟಕ ಎಸ್‌ಎಸ್‌ಎಲ್‌ಸಿ 2026 ಫಲಿತಾಂಶ: ಇತಿಹಾಸದ ಅತ್ಯಧಿಕ ಉತ್ತೀರ್ಣ ಪ್ರಮಾಣ ಮತ್ತು ಟಾಪರ್‌ಗಳ ಸಾಧನೆ
ಭಾರತ ಬಗ್ಗೆ ಟ್ರಂಪ್ ಡಬಲ್ ಸ್ಟ್ಯಾಂಡ್…!ವಿವಾದ ಸೃಷ್ಟಿಸಿ, ಬಳಿಕ ಸಮಾಧಾನದ ಮಾತು
ಮುಂದಿನ ಕೆಲವು ದಿನ ಭಾರಿ ಗಾಳಿ ಮಳೆ ಗುಡುಗು -ಮಿಂಚಿನ ಎಚ್ಚರಿಕೆ 
ಮಂಗಳೂರು ಶಾಕ್ ! ನೇತ್ರಾವತಿ ತೀರದ ನದಿಯಲ್ಲಿ ತೇಲಿ ಬಂದ ರಾಶಿ ರಾಶಿ ಆಧಾರ್ ಕಾರ್ಡ್‌ಗಳು !!!ಹೊಣೆ ಯಾರು?
ಕೊಲೆ ಆರೋಪಿಗಳ ಕಾರು ಮಾಣಿಯಲ್ಲಿ ಪತ್ತೆ ….!
ನಾರ್ವೇ ಪತ್ರಕರ್ತರಿಗೆ ತಿರುಗೇಟು: “ಭಾರತದ ವಾಸ್ತವತೆ ಅರಿವಿಲ್ಲ” ಎಂದ MEA ಕಾರ್ಯದರ್ಶಿ ಸಿಬಿ ಜಾರ್ಜ್…
ಕೊಪ್ಪ ತಹಸಿಲ್ದಾರ್ ಲಿಖಿತಾ ಮೋಹನ್, ಅಧಿಕಾರ ದುರುಪಯೋಗ ಮಾಡಿಕೊಂಡರಾ?
ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐಎಂ ರಣಕಹಳೆ!”
ಬೆಳ್ತಂಗಡಿ ಸ್ನಾನಕ್ಕೆ ತೆರಳಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವು…
ಬ್ರೇಕಿಂಗ್ ನ್ಯೂಸ್
ಬಂಗಾಳದಲ್ಲಿ ಬಿಜೆಪಿಯ ಯುದ್ಧೋನ್ಮಾದ, ದೀದಿಯ ರಚ್ಚೆ…
ಪರಮೇಶ್ವರ ವಿರುದ್ಧ FIR-₹500 ಬೆಟ್ಟಿಂಗ್ ಹೇಳಿಕೆಗೆ ಕಾನೂನು ಕ್ರಮ.
ನೀವು Fit…ಆದ್ರೆ ನಿಮ್ಮ ಹೃದಯ ?ಮನೆಯಲ್ಲಿಯೇ 5 ನಿಮಿಷದಲ್ಲಿ ಪರೀಕ್ಷಿಸಿಕೊಳ್ಳಿ ನಿಮ್ಮ ಹೃದಯದ ಆರೋಗ್ಯ!
ಬೆಂಗಳೂರಲ್ಲಿ Bowring Hospital ಬಳಿ ಗೋಡೆ ಕುಸಿತ ಮನ ಕಲುಕುವ ಘಟನೆ ಬಿಸಿಲಿನಿಂದ ತಪ್ಪಿಸಿಕೊಳ್ಳಲು ನಿಂತವರು… ಏಳು ಮಂದಿಯ ದುರಂತ ಅಂತ್ಯ.!
ಒಂದು ದೇಶವನ್ನೇ ಮಟ್ಟಾಶ್ ಮಾಡುವಷ್ಟು ನ್ಯೂಕ್ಲಿಯರ್ ಪವರ್ stock ಇರಾನ್ನಲ್ಲಿ ಇದ್ಯಾ !?
ಉಡುಪಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಕಾನೂನುಬಾಹಿರ ಚಟುವಟಿಕೆ
50 ಸಾವಿರ ಸಾಲಕ್ಕೆ ಸವಣೂರು ಪೇಟೆಯಲ್ಲಿ ರಕ್ತಸಿಕ್ತ ಘರ್ಷಣೆ ..
ಡೈಮಂಡ್ ನೆಕ್ಲೇಸ್, ಕಿವಿಯೋಲೆಗಳು, ಚಿನ್ನದ ಚೈನ್, ಪ್ಲಾಟಿನಂ ಉಂಗುರ ಕಳವು…!
ಸ್ಮಾರ್ಟ್ ಲಾಕ್ ಇದ್ದ ಸುರಕ್ಷಿತ ಮನೆಯಲ್ಲೇ ಯುವತಿಯ ರೇಪ್ ಅಂಡ್ ಮರ್ಡರ್…!ನಗರವನ್ನು ಬೆಚ್ಚಿಬೀಳಿಸಿದ ಘಟನೆ”
ಪಕ್ಷದಿಂದ ಪಕ್ಕಕ್ಕೆ? ರಾಘವ್ ಚಡ್ಡಾ ಹಿಂದೆ ಏನಿದೆ ದೊಡ್ಡ ರಾಜಕೀಯ ಆಟ!”ಮೌನಗೊಳಿಸಿದರೂ ನಿಲ್ಲದ ಧ್ವನಿ – ರಾಘವ್ ಚಡ್ಡಾ!”