📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ನನ್ನನ್ನು ದುರ್ಬಲ ವ್ಯಕ್ತಿ ಅಂದುಕೊಳ್ಳಬೇಡಿ- U.T ಖಾದರ್

ನನ್ನ ಸೌಮ್ಯ ಸ್ವಭಾವ ದುರ್ಬಲ ಅಂತ ಅಂದ್ಕೊಬೇಡಿ!’ ಸ್ಪೀಕರ್ ಗರಂ ಆದದ್ದೇಕೆ? ವಿಧಾನಸಭೆಯಲ್ಲಿ ಅಪರೂಪಕ್ಕೆ ಗರಂ ಆದ ಸ್ಪೀಕರ್: “ಉತ್ತರ ಕೊಡದೇ ನಿರ್ಲಕ್ಷ್ಯಮುಂದುವರಿಸಿದರೇ ಕ್ರಮ ಎದಿರಿಸಬೇಕಾಗುತ್ತದೆ ”ಅಂತ ಖಡಕ್ ಆದ ಖಾದರ್ ನೋಡಿ ಒಂದು ಕ್ಷಣ ವಿಧಾನ ಸಭೆ ಗಂಭೀರ…. ಏಕೆ ಅಂತ ಡಿಟೇಲ್ಸ್ ಓದಿ…

ಬೆಂಗಳೂರು: ಸಾಮಾನ್ಯವಾಗಿ ಸದನದಲ್ಲಿ ಹಾಸ್ಯಪ್ರಿಯವಾಗಿ ಮಾತನಾಡುವ, ಎಲ್ಲರ ಜೊತೆ ಸ್ನೇಹಭಾವದಿಂದ ವರ್ತಿಸುವ ವಿಧಾನಸಭಾಧ್ಯಕ್ಷ U. T. Khader ಶುಕ್ರವಾರ ಸದನದಲ್ಲಿ ಅಪರೂಪದ ಗಂಭೀರ ಧ್ವನಿಯಲ್ಲಿ ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಸದನದಲ್ಲಿ ಕೇಳಲಾಗಿರುವ ಚುಕ್ಕೆ ಗುರುತಿಲ್ಲದ ಪ್ರಶ್ನೆಗಳಿಗೆ (Unstarred Questions) ಸರಿಯಾದ ಸಮಯದಲ್ಲಿ ಉತ್ತರ ನೀಡದೆ ವಿಳಂಬ ಮಾಡುತ್ತಿರುವುದನ್ನು ಅವರು ಕಠಿಣವಾಗಿ ತರಾಟೆಗೆ ತೆಗೆದುಕೊಂಡರು.

“ನನ್ನ ಸೌಮ್ಯ ಸ್ವಭಾವವನ್ನು ದುರ್ಬಲ ಎಂದು ಯಾರೂ ಭಾವಿಸಬೇಡಿ. ಮುಂದುವರೆದರೆ ಕ್ರಮ ಕೈಗೊಳ್ಳಬೇಕಾಗುತ್ತದೆ,” ಎಂದು ಸ್ಪೀಕರ್ ಖಾದರ್ ಖಡಕ್ ಎಚ್ಚರಿಕೆ ನೀಡಿದ ಕ್ಷಣ ಸದನದಲ್ಲಿ ಕ್ಷಣಕಾಲ ಗಂಭೀರ ವಾತಾವರಣ ನಿರ್ಮಾಣವಾಯಿತು.

131 ಪ್ರಶ್ನೆಗಳಲ್ಲಿ ಉತ್ತರ ಕೇವಲ 50ಕ್ಕೆ!

ಪ್ರಶ್ನೋತ್ತರ ಅವಧಿ ಮುಗಿದ ನಂತರ ಸಚಿವ Ramalinga Reddy ಅವರು ಸಂಸದೀಯ ವ್ಯವಹಾರಗಳ ಸಚಿವರ ಪರವಾಗಿ ಚುಕ್ಕೆ ಗುರುತಿಲ್ಲದ ಪ್ರಶ್ನೆಗಳ ಉತ್ತರ ಮಂಡಿಸಿದರು.

ಆ ವೇಳೆ ಅವರು ನೀಡಿದ ಮಾಹಿತಿಯಂತೆ:
ಒಟ್ಟು ಕೇಳಲಾದ ಪ್ರಶ್ನೆಗಳು: 131
ಉತ್ತರ ನೀಡಿದ ಪ್ರಶ್ನೆಗಳು: 50 ಮಾತ್ರ
ಇನ್ನೂ ಬಾಕಿ ಉಳಿದಿರುವ ಪ್ರಶ್ನೆಗಳು: 81

ಈ ಮಾಹಿತಿ ಕೇಳುತ್ತಿದ್ದಂತೆಯೇ ಸದನದಲ್ಲಿ ವಿರೋಧ ಪಕ್ಷದಿಂದ ಆಕ್ರೋಶ ವ್ಯಕ್ತವಾಯಿತು.“ಸರ್ಕಾರಕ್ಕೆ ಜಡತ್ವ ಹಿಡಿದಂತಿದೆ!” – ಆರ್. ಅಶೋಕ್ ಕಿಡಿ

ವಿಧಾನಸಭೆ ಪ್ರತಿಪಕ್ಷ ನಾಯಕ R. Ashoka ಸರ್ಕಾರದ ಕಾರ್ಯಕ್ಷಮತೆಯನ್ನು ತೀವ್ರವಾಗಿ ಪ್ರಶ್ನಿಸಿದರು ,ಅವರೂ ಕಿಡಿಕಾರುತ್ತಾ..:“ಸ್ಪೀಕರ್ ಅವರು ಇದೇ ವಿಷಯವನ್ನು ಮೂರನೇ ಬಾರಿ ಸೂಚಿಸುತ್ತಿದ್ದಾರೆ. ಆದರೆ ಅಧಿಕಾರಿಗಳು ಮತ್ತು ಇಲಾಖೆಗಳಲ್ಲಿ ಯಾವುದೇ ಚಲನೆ ಕಾಣುತ್ತಿಲ್ಲ. ಸರ್ಕಾರಕ್ಕೆ ಜಡತ್ವ ಹಿಡಿದಂತಿದೆ.”

ಅವರು ಮತ್ತಷ್ಟು ಒತ್ತಿ ಹೇಳಿದ್ದು:
ಪ್ರಶ್ನೆಗಳಿಗೆ ಉತ್ತರ ನೀಡದೇ ವಿಳಂಬ ಮಾಡುವುದು ಜನಪ್ರತಿನಿಧಿಗಳ ಅವಮಾನ..
ಅಭಿವೃದ್ಧಿ ಕಾರ್ಯಗಳ ಪ್ರಗತಿ ಕುರಿತು ಸ್ಪಷ್ಟತೆ ಇಲ್ಲ.
ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಗಂಭೀರವಾಗಿ ಕೆಲಸ ಮಾಡುತ್ತಿಲ್ಲ.

ಅಂತೂ ಸದನದಲ್ಲಿ ಶುಕ್ರವಾರದ ಘಟನೆ ಒಂದು ಸ್ಪಷ್ಟ ಸಂದೇಶ ನೀಡಿದೆ: “ಅಧಿಕಾರಿಗಳು ಜವಾಬ್ದಾರಿಯಾಗಬೇಕು”

ಜನಪ್ರತಿನಿಧಿಗಳ ಪ್ರಶ್ನೆಗಳಿಗೆ ಸಮಯಕ್ಕೆ ಸರಿಯಾಗಿ ಉತ್ತರ ಅಗತ್ಯ, ಅಧಿಕಾರಿಗಳ ನಿರ್ಲಕ್ಷ್ಯ ಸಹಿಸಲಾಗುವುದಿಲ್ಲ, ಸದನದ ಗೌರವ ಕಾಪಾಡುವುದು ಎಲ್ಲರ ಜವಾಬ್ದಾರಿ

ಸಾಮಾನ್ಯವಾಗಿ ಹಾಸ್ಯಪ್ರಿಯ ವ್ಯಕ್ತಿತ್ವ ಹೊಂದಿರುವ ಸ್ಪೀಕರ್ U. T. Khader ಈ ಬಾರಿ ಗಂಭೀರವಾಗಿ ಎಚ್ಚರಿಕೆ ನೀಡಿರುವುದು ಅಧಿಕಾರಿಗಳಿಗೆ ಸ್ಪಷ್ಟ ಸಂದೇಶ ನೀಡಿದಂತಾಗಿದೆ.

“ಫಾಲೋಅಪ್ ಇಲ್ಲದಿದ್ದರೆ ವರ್ಷವಾದರೂ ಉತ್ತರ ಇಲ್ಲ!”

ಸ್ಪೀಕರ್ U. T. Khader ಅಧಿಕಾರಿಗಳ ನಿರ್ಲಕ್ಷ್ಯದ ಕುರಿತು ಸ್ಪಷ್ಟವಾಗಿ ಹೇಳಿದರು:
ಅನೇಕ ಪ್ರಶ್ನೆಗಳಿಗೆ ವರ್ಷವಾದರೂ ಉತ್ತರ ಇಲ್ಲ.
ಉಪಸಭಾಧ್ಯಕ್ಷರ ನೇತೃತ್ವದಲ್ಲಿ ಸಮಿತಿ ರಚಿಸಿದರೂ ಫಲಿತಾಂಶ ಇಲ್ಲ.
ಅಧಿಕಾರಿಗಳಿಂದ ಫಾಲೋಅಪ್ ಕೊರತೆ.

“ಸಿಎಂ ಗಮನಕ್ಕೆ ತರುತ್ತೇವೆ” – ಗೃಹ ಸಚಿವ ಪರಮೇಶ್ವರ್

ಸರ್ಕಾರದ ಪರವಾಗಿ ಪ್ರತಿಕ್ರಿಯಿಸಿದ ಗೃಹ ಸಚಿವ G. Parameshwara ಸಮಸ್ಯೆಯನ್ನು ಒಪ್ಪಿಕೊಂಡು ,ಸ್ಪೀಕರ್ ಅಪರೂಪಕ್ಕೆ ಗಟ್ಟಿಯಾಗಿ ಮಾತನಾಡಿದ್ದಾರೆ,ಸಮಸ್ಯೆ ನಿಜವಾಗಿಯೂ ಇದೆ,ಈ ವಿಷಯವನ್ನು ಮುಖ್ಯಮಂತ್ರಿಯ ಗಮನಕ್ಕೆ ತರಲಾಗುತ್ತದೆ ಎಲ್ಲಾ ಸಚಿವಾಲಯಗಳಿಗೆ ಸೂಚನೆ ನೀಡಿ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಜನರ ಪ್ರಶ್ನೆಗಳಿಗೆ ಉತ್ತರವೇ ಇಲ್ಲವಾದರೆ ಅಭಿವೃದ್ಧಿ ಹೇಗೆ?

ವಿಧಾನಸಭೆಯಲ್ಲಿ ಕೇಳಲಾಗುವ ಪ್ರಶ್ನೆಗಳು ಸಾಮಾನ್ಯ ರಾಜಕೀಯ ವಿಷಯಗಳಷ್ಟೇ ಅಲ್ಲ. ಅವುಗಳಲ್ಲಿ:
ರಸ್ತೆ ಅಭಿವೃದ್ಧಿ
ಕುಡಿಯುವ ನೀರು
ಶಾಲೆ ಮತ್ತು ಆಸ್ಪತ್ರೆಗಳ ಸಮಸ್ಯೆ
ಗ್ರಾಮಗಳ ಮೂಲಸೌಕರ್ಯ
ಯೋಜನೆಗಳ ಪ್ರಗತಿ…
ಇಂತಹ ಜನಸಾಮಾನ್ಯರಿಗೆ ಸಂಬಂಧಿಸಿದ ಪ್ರಶ್ನೆಗಳು ಸೇರಿರುತ್ತವೆ.ಆ ಪ್ರಶ್ನೆಗಳಿಗೆ ಉತ್ತರವೇ ಸಿಗದಿದ್ದರೆ, ಜನರ ಸಮಸ್ಯೆಗಳ ಪರಿಹಾರವೂ ವಿಳಂಬವಾಗುತ್ತದೆ ಎಂಬ ಆತಂಕ ವ್ಯಕ್ತವಾಗುತ್ತಿದೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಸಂಕಷ್ಟದಲ್ಲಿರುವ ರಾಜ್ಯದ ಜನತೆಗೆ ಬರೆ ಹಾಕಿದ ರಾಜ್ಯ ಸರ್ಕಾರ!
ವಿಶ್ವಸಂಸ್ಥೆಗೆ ಜೀವ ಬಂತು ನೋಡಿ…
ಇ-ಸಿಗರೇಟ್‌ಗೆ ಭಾರಿ ಡಿಮ್ಯಾಂಡ್ – ಗೋಣಿ ಚೀಲದಲ್ಲಿಸಂಗ್ರಹಿಸಿಟ್ಟ ಆರೋಪಿ ಬಂಧನ..!
ವಿಟ್ಲ ಪಟಾಕಿ ತಯಾರಿಕಾ ಘಟಕದಲ್ಲಿ ಪಟಾಕಿ ಸ್ಫೋಟ
AI ಹವಾ-ಬೇಗನೆ ಫೈನಾನ್ಷಿಯಲ್ ಇಂಡಿಪೆಂಡೆಂಟ್ ಆಗೋ ಟ್ರೆಂಡ್- ಕೈಬಿಟ್ಟ  ಓದು!! ಇದು ಗಂಭೀರ ಸೂಚನೆ….
ಅಕ್ರಮವಾಗಿ ಲಕ್ಷಾಂತರ ಮೌಲ್ಯದ ಎತ್ತುಗಳನ್ನು ವಧೆಗೆ….!
ದರೆಗುಡ್ಡೆಯಲ್ಲಿ ಬಾರಿ ಅಗ್ನಿ ಅವಗಡ…!
ಉಡುಪಿಯಲ್ಲಿ ಆಡಳಿತ ನಡೆಸುತ್ತಿರುವುದು ಜನವಿರೋಧಿ ಜಿಲ್ಲಾಡಳಿತವೇ?
ಸ್ಟೇಟ್ ಬ್ಯಾಂಕ್ ಮೀನು ಮಾರುಕಟ್ಟೆಗೆ ಭೇಟಿ ನೀಡಿದ ಡಾ. ನಾಗಲಕ್ಷ್ಮಿ ಚೌಧರಿ – ಮಹಿಳಾ ಮೀನುಗಾರರ ಸಮಸ್ಯೆ ಆಲಿಕೆ
ಹಾವು ಮುಂಗುಸಿ ಅಂತಾಗಿದ್ದವರು ಒಂದಾದರು
60 ದಿನಗಳ ಸ್ಟಾಕ್ – ಭಾರತಕ್ಕೆ ಎಲ್‌ಪಿಜಿ ಚಿಂತೆ ಇಲ್ಲ!
ಡ್ರೋನ್ ದಾಳಿಯ ನಂತರ ಬಹ್ರೇನ್‌ನಲ್ಲಿ ಕನಿಷ್ಠ 32 ಜನರಿಗೆ ಗಾಯ
🚨 ಬೈಂದೂರಿನಲ್ಲಿ ಭಯಾನಕ ದಾಳಿ! ಕತ್ತಿಯಿಂದ ಹಲ್ಲೆ – ಆರೋಪಿ ಬಂಧನ
8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ
ಯಕ್ಷಗಾನದಲ್ಲಿ ಶಿಳ್ಳೆ ಹಾಕ್ಲಿಕ್ಕೆ ಪರ್ಮಿಶನ್ ಬೇಕಾ..…!?
ಸೋಶಿಯಲ್ ಮೀಡಿಯಾ ಮೂಲಕ ಸಾರ್ವಜನಿಕರಲ್ಲಿ ಭಯ ಸೃಷ್ಠಿ -45 ಜನರ ಬಂಧನ
ಆರೋಪಿ ಸಮೀರ್ ಮುಲ್ಲಾ ಸ್ಫೋಟಕ ಹೇಳಿಕೆ-ಖುಷಿ ಒಳ್ಳೆ ಹುಡುಗಿ-🔥 ಹುಬ್ಬಳ್ಳಿ ಲವ್ ಜಿಹಾದ್ ಅಲ್ಲ ಎಂದ ಪೊಲೀಸರು : ಇದೀಗ ಹೊಸ ಟ್ವಿಸ್ಟ್!
ಐಸಿಸಿ ಟ್ವೆಂಟಿ-20 ವಿಶ್ವಕಪ್ ಮೂಡಿಗೇರಿಸಿಕೊಂಡ ಭಾರತ
ಸುಳ್ಳು ಸ್ಟೇಟ್ಮೆಂಟ್ ನೀಡಿದ ಎಚ್ ಪಿ ಸಿ ಎಲ್
ಕರ್ನಾಟಕದಲ್ಲಿ ಯುಗಾದಿ ಹಬ್ಬಕ್ಕೂ ಮುನ್ನವೇ  ಮುಂಗಾರು  ಮಳೆರಂಗು – 5 ಜಿಲ್ಲೆಗಳಲ್ಲಿ ಆಲಿಕಲ್ಲು ಅಬ್ಬರ!
ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿ ಗಡಿಪಾರು ಆದೇಶ….
AI ಡೀಪ್‌ಫೇಕ್ ಕೇವಲ ಸಿನಿಮಾ ನಟಿಯರಿಗೆ ಸೀಮಿತವಾಗಿಲ್ಲ .
ನಾಳೆ ಮಂಗಳೂರಲ್ಲಿ ಇಡೀ ದಿನ ಕರೆಂಟಿಲ್ಲ Power Cut.. ಎಲ್ಲೆಲ್ಲಿ?
ಶಿರಸಿ ಮಾರಿಯಮ್ಮನ ಜಾತ್ರೆ ಪ್ರಾರಂಭ
ರಾಜ್ಯಸಭೆಗೆ ಬಿಜೆಪಿಯಿಂದ 9 ಜನರ ಪಟ್ಟಿ ಬಿಡುಗಡೆ
ಐಟಿ ಕ್ಷೇತ್ರದಲ್ಲಿ ಮತ್ತೆ ಲೇಆಫ್ ಭೀತಿ!
ಹೋಟೆಲ್, ಕೆಫೆ ಬಿಸಿ ಬಿಸಿ ಪ್ಲಾಸ್ಟಿಕ್ ಲ್ಲಿ ಪಾರ್ಸೆಲ್‌ಗೆ ಬ್ರೇಕ್ –ಹಾಗೆ 5ರೂ 10ರೂ ಬೀಡಿ ಸಿಗರೇಟ್ ಗುಟ್ಕಾಕ್ಕೆ ₹1000 ದಂಡ ಕಟ್ಟಬೇಕಾದಿತು ಎಚ್ಚರ …!
ಬೇಕಾದಾಗ, ಬೇಕಾದಂಗೆ ಸಂವಿಧಾನದ ಜಪ
ಹತ್ತು ವರ್ಷದಿಂದ ಪೊಲೀಸರಿಗೆ ಬೇಕಾದ ಆರೋಪಿಯನ್ನು ಕೊನೆಗೂ ಬಂಧಿಸಿದ ಪೊಲೀಸರು