📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ನನ್ನನ್ನು ದುರ್ಬಲ ವ್ಯಕ್ತಿ ಅಂದುಕೊಳ್ಳಬೇಡಿ- U.T ಖಾದರ್

ನನ್ನ ಸೌಮ್ಯ ಸ್ವಭಾವ ದುರ್ಬಲ ಅಂತ ಅಂದ್ಕೊಬೇಡಿ!’ ಸ್ಪೀಕರ್ ಗರಂ ಆದದ್ದೇಕೆ? ವಿಧಾನಸಭೆಯಲ್ಲಿ ಅಪರೂಪಕ್ಕೆ ಗರಂ ಆದ ಸ್ಪೀಕರ್: “ಉತ್ತರ ಕೊಡದೇ ನಿರ್ಲಕ್ಷ್ಯಮುಂದುವರಿಸಿದರೇ ಕ್ರಮ ಎದಿರಿಸಬೇಕಾಗುತ್ತದೆ ”ಅಂತ ಖಡಕ್ ಆದ ಖಾದರ್ ನೋಡಿ ಒಂದು ಕ್ಷಣ ವಿಧಾನ ಸಭೆ ಗಂಭೀರ…. ಏಕೆ ಅಂತ ಡಿಟೇಲ್ಸ್ ಓದಿ…

ಬೆಂಗಳೂರು: ಸಾಮಾನ್ಯವಾಗಿ ಸದನದಲ್ಲಿ ಹಾಸ್ಯಪ್ರಿಯವಾಗಿ ಮಾತನಾಡುವ, ಎಲ್ಲರ ಜೊತೆ ಸ್ನೇಹಭಾವದಿಂದ ವರ್ತಿಸುವ ವಿಧಾನಸಭಾಧ್ಯಕ್ಷ U. T. Khader ಶುಕ್ರವಾರ ಸದನದಲ್ಲಿ ಅಪರೂಪದ ಗಂಭೀರ ಧ್ವನಿಯಲ್ಲಿ ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಸದನದಲ್ಲಿ ಕೇಳಲಾಗಿರುವ ಚುಕ್ಕೆ ಗುರುತಿಲ್ಲದ ಪ್ರಶ್ನೆಗಳಿಗೆ (Unstarred Questions) ಸರಿಯಾದ ಸಮಯದಲ್ಲಿ ಉತ್ತರ ನೀಡದೆ ವಿಳಂಬ ಮಾಡುತ್ತಿರುವುದನ್ನು ಅವರು ಕಠಿಣವಾಗಿ ತರಾಟೆಗೆ ತೆಗೆದುಕೊಂಡರು.

“ನನ್ನ ಸೌಮ್ಯ ಸ್ವಭಾವವನ್ನು ದುರ್ಬಲ ಎಂದು ಯಾರೂ ಭಾವಿಸಬೇಡಿ. ಮುಂದುವರೆದರೆ ಕ್ರಮ ಕೈಗೊಳ್ಳಬೇಕಾಗುತ್ತದೆ,” ಎಂದು ಸ್ಪೀಕರ್ ಖಾದರ್ ಖಡಕ್ ಎಚ್ಚರಿಕೆ ನೀಡಿದ ಕ್ಷಣ ಸದನದಲ್ಲಿ ಕ್ಷಣಕಾಲ ಗಂಭೀರ ವಾತಾವರಣ ನಿರ್ಮಾಣವಾಯಿತು.

131 ಪ್ರಶ್ನೆಗಳಲ್ಲಿ ಉತ್ತರ ಕೇವಲ 50ಕ್ಕೆ!

ಪ್ರಶ್ನೋತ್ತರ ಅವಧಿ ಮುಗಿದ ನಂತರ ಸಚಿವ Ramalinga Reddy ಅವರು ಸಂಸದೀಯ ವ್ಯವಹಾರಗಳ ಸಚಿವರ ಪರವಾಗಿ ಚುಕ್ಕೆ ಗುರುತಿಲ್ಲದ ಪ್ರಶ್ನೆಗಳ ಉತ್ತರ ಮಂಡಿಸಿದರು.

ಆ ವೇಳೆ ಅವರು ನೀಡಿದ ಮಾಹಿತಿಯಂತೆ:
ಒಟ್ಟು ಕೇಳಲಾದ ಪ್ರಶ್ನೆಗಳು: 131
ಉತ್ತರ ನೀಡಿದ ಪ್ರಶ್ನೆಗಳು: 50 ಮಾತ್ರ
ಇನ್ನೂ ಬಾಕಿ ಉಳಿದಿರುವ ಪ್ರಶ್ನೆಗಳು: 81

ಈ ಮಾಹಿತಿ ಕೇಳುತ್ತಿದ್ದಂತೆಯೇ ಸದನದಲ್ಲಿ ವಿರೋಧ ಪಕ್ಷದಿಂದ ಆಕ್ರೋಶ ವ್ಯಕ್ತವಾಯಿತು.“ಸರ್ಕಾರಕ್ಕೆ ಜಡತ್ವ ಹಿಡಿದಂತಿದೆ!” – ಆರ್. ಅಶೋಕ್ ಕಿಡಿ

ವಿಧಾನಸಭೆ ಪ್ರತಿಪಕ್ಷ ನಾಯಕ R. Ashoka ಸರ್ಕಾರದ ಕಾರ್ಯಕ್ಷಮತೆಯನ್ನು ತೀವ್ರವಾಗಿ ಪ್ರಶ್ನಿಸಿದರು ,ಅವರೂ ಕಿಡಿಕಾರುತ್ತಾ..:“ಸ್ಪೀಕರ್ ಅವರು ಇದೇ ವಿಷಯವನ್ನು ಮೂರನೇ ಬಾರಿ ಸೂಚಿಸುತ್ತಿದ್ದಾರೆ. ಆದರೆ ಅಧಿಕಾರಿಗಳು ಮತ್ತು ಇಲಾಖೆಗಳಲ್ಲಿ ಯಾವುದೇ ಚಲನೆ ಕಾಣುತ್ತಿಲ್ಲ. ಸರ್ಕಾರಕ್ಕೆ ಜಡತ್ವ ಹಿಡಿದಂತಿದೆ.”

ಅವರು ಮತ್ತಷ್ಟು ಒತ್ತಿ ಹೇಳಿದ್ದು:
ಪ್ರಶ್ನೆಗಳಿಗೆ ಉತ್ತರ ನೀಡದೇ ವಿಳಂಬ ಮಾಡುವುದು ಜನಪ್ರತಿನಿಧಿಗಳ ಅವಮಾನ..
ಅಭಿವೃದ್ಧಿ ಕಾರ್ಯಗಳ ಪ್ರಗತಿ ಕುರಿತು ಸ್ಪಷ್ಟತೆ ಇಲ್ಲ.
ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಗಂಭೀರವಾಗಿ ಕೆಲಸ ಮಾಡುತ್ತಿಲ್ಲ.

ಅಂತೂ ಸದನದಲ್ಲಿ ಶುಕ್ರವಾರದ ಘಟನೆ ಒಂದು ಸ್ಪಷ್ಟ ಸಂದೇಶ ನೀಡಿದೆ: “ಅಧಿಕಾರಿಗಳು ಜವಾಬ್ದಾರಿಯಾಗಬೇಕು”

ಜನಪ್ರತಿನಿಧಿಗಳ ಪ್ರಶ್ನೆಗಳಿಗೆ ಸಮಯಕ್ಕೆ ಸರಿಯಾಗಿ ಉತ್ತರ ಅಗತ್ಯ, ಅಧಿಕಾರಿಗಳ ನಿರ್ಲಕ್ಷ್ಯ ಸಹಿಸಲಾಗುವುದಿಲ್ಲ, ಸದನದ ಗೌರವ ಕಾಪಾಡುವುದು ಎಲ್ಲರ ಜವಾಬ್ದಾರಿ

ಸಾಮಾನ್ಯವಾಗಿ ಹಾಸ್ಯಪ್ರಿಯ ವ್ಯಕ್ತಿತ್ವ ಹೊಂದಿರುವ ಸ್ಪೀಕರ್ U. T. Khader ಈ ಬಾರಿ ಗಂಭೀರವಾಗಿ ಎಚ್ಚರಿಕೆ ನೀಡಿರುವುದು ಅಧಿಕಾರಿಗಳಿಗೆ ಸ್ಪಷ್ಟ ಸಂದೇಶ ನೀಡಿದಂತಾಗಿದೆ.

“ಫಾಲೋಅಪ್ ಇಲ್ಲದಿದ್ದರೆ ವರ್ಷವಾದರೂ ಉತ್ತರ ಇಲ್ಲ!”

ಸ್ಪೀಕರ್ U. T. Khader ಅಧಿಕಾರಿಗಳ ನಿರ್ಲಕ್ಷ್ಯದ ಕುರಿತು ಸ್ಪಷ್ಟವಾಗಿ ಹೇಳಿದರು:
ಅನೇಕ ಪ್ರಶ್ನೆಗಳಿಗೆ ವರ್ಷವಾದರೂ ಉತ್ತರ ಇಲ್ಲ.
ಉಪಸಭಾಧ್ಯಕ್ಷರ ನೇತೃತ್ವದಲ್ಲಿ ಸಮಿತಿ ರಚಿಸಿದರೂ ಫಲಿತಾಂಶ ಇಲ್ಲ.
ಅಧಿಕಾರಿಗಳಿಂದ ಫಾಲೋಅಪ್ ಕೊರತೆ.

“ಸಿಎಂ ಗಮನಕ್ಕೆ ತರುತ್ತೇವೆ” – ಗೃಹ ಸಚಿವ ಪರಮೇಶ್ವರ್

ಸರ್ಕಾರದ ಪರವಾಗಿ ಪ್ರತಿಕ್ರಿಯಿಸಿದ ಗೃಹ ಸಚಿವ G. Parameshwara ಸಮಸ್ಯೆಯನ್ನು ಒಪ್ಪಿಕೊಂಡು ,ಸ್ಪೀಕರ್ ಅಪರೂಪಕ್ಕೆ ಗಟ್ಟಿಯಾಗಿ ಮಾತನಾಡಿದ್ದಾರೆ,ಸಮಸ್ಯೆ ನಿಜವಾಗಿಯೂ ಇದೆ,ಈ ವಿಷಯವನ್ನು ಮುಖ್ಯಮಂತ್ರಿಯ ಗಮನಕ್ಕೆ ತರಲಾಗುತ್ತದೆ ಎಲ್ಲಾ ಸಚಿವಾಲಯಗಳಿಗೆ ಸೂಚನೆ ನೀಡಿ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಜನರ ಪ್ರಶ್ನೆಗಳಿಗೆ ಉತ್ತರವೇ ಇಲ್ಲವಾದರೆ ಅಭಿವೃದ್ಧಿ ಹೇಗೆ?

ವಿಧಾನಸಭೆಯಲ್ಲಿ ಕೇಳಲಾಗುವ ಪ್ರಶ್ನೆಗಳು ಸಾಮಾನ್ಯ ರಾಜಕೀಯ ವಿಷಯಗಳಷ್ಟೇ ಅಲ್ಲ. ಅವುಗಳಲ್ಲಿ:
ರಸ್ತೆ ಅಭಿವೃದ್ಧಿ
ಕುಡಿಯುವ ನೀರು
ಶಾಲೆ ಮತ್ತು ಆಸ್ಪತ್ರೆಗಳ ಸಮಸ್ಯೆ
ಗ್ರಾಮಗಳ ಮೂಲಸೌಕರ್ಯ
ಯೋಜನೆಗಳ ಪ್ರಗತಿ…
ಇಂತಹ ಜನಸಾಮಾನ್ಯರಿಗೆ ಸಂಬಂಧಿಸಿದ ಪ್ರಶ್ನೆಗಳು ಸೇರಿರುತ್ತವೆ.ಆ ಪ್ರಶ್ನೆಗಳಿಗೆ ಉತ್ತರವೇ ಸಿಗದಿದ್ದರೆ, ಜನರ ಸಮಸ್ಯೆಗಳ ಪರಿಹಾರವೂ ವಿಳಂಬವಾಗುತ್ತದೆ ಎಂಬ ಆತಂಕ ವ್ಯಕ್ತವಾಗುತ್ತಿದೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಮೋದಿ ಅವರ ನಿರ್ಧಾರಗಳು“ದೀರ್ಘಕಾಲೀನ ಅಭಿವೃದ್ಧಿಗೆ ಜವಾಬ್ದಾರಿಯುತ ನೀತಿಗಳು” ಆತಂಕದ ಸೂಚನೆ ಅಲ್ಲ-ಎಸ್.ಎಸ್. ನಾಯಕ್
ಮಾರ್ಚ್ 17 :ಮಂಗಳೂರಿನಲ್ಲಿ ವಿಶ್ವ ಗ್ರಾಹಕರ ದಿನಾಚರಣೆ-ಗ್ರಾಹಕರ ಹಕ್ಕುಗಳ ಜಾಗೃತಿ ಕಾರ್ಯಕ್ರಮ
ಸದ್ಯದಲ್ಲೇ ಬರುತ್ತೆ ತಣ್ಣೀರ್ಬಾವಿ ಬೀಚ್‌ಗೆ shortcut ಮಾರ್ಗ!30 ನಿಮಿಷ ಕಡಿಮೆ ಪ್ರಯಾಣ..!
ಸಿದ್ದು vs ಕೃಷ್ಣ -ಸಿದ್ಧು ವಿರುದ್ಧ ನೇರ ಸವಾಲು: ‘ಬಿ’ ರಿಪೋರ್ಟ್ ಪ್ರಶ್ನಿಸಿ ಸ್ನೇಹಮಯಿ ಕೃಷ್ಣನ ನಡೆ ಭ್ರಷ್ಟ ವ್ಯವಸ್ಥೆಗೆ ಬಿಗಿ ಹೊಡೆತ!”
ಅಯೋಧ್ಯೆ ವಿವಾದದ ಬೆನ್ನಲ್ಲೇ ಬದರಿನಾಥ ದೇಗುಲದಲ್ಲೂ ಕಾಣಿಕೆ ದುರುಪಯೋಗದ ಆರೋಪ – ದೇಶಾದ್ಯಂತ ಭಕ್ತರಲ್ಲಿ ಆತಂಕ..!
ಕರ್ನಾಟಕ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: 123 ಕೇಂದ್ರಗಳ ಪಾಸ್ ವಿತರಣ –ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿದೆ, ಬಸ್‌ಗಳ ಸಂಖ್ಯೆಯೂ ಹೆಚ್ಚುತ್ತದೆಯೇ?
ಕುತ್ತಾರಿನಲ್ಲಿ ಸ್ಪೀಕರ್‌ನ್ನೇ ಜನರು ಸುತ್ತುವರಿದ ಶಾಕಿಂಗ್ ದೃಶ್ಯ! ಏನಾಯ್ತು ನಿಜವಾಗಿಯೂ?ಸಾಮಾಜಿಕ ಮಾಧ್ಯಮದಲ್ಲಿ ಸದ್ದು ಮಾಡುತ್ತಿರುವ ಕುತ್ತಾರು ವಾದವಿವಾದ!
ಜಾಗತಿಕ ಯುದ್ಧ ಭೀತಿ:ಟ್ರಂಪ್ ಎಫೆಕ್ಟ್‌ಗೆ ಭಾರೀ ಆರ್ಥಿಕ ಭೂಕಂಪ! — ಒಂದೇ ದಿನ ₹6 ಲಕ್ಷ ಕೋಟಿ ನಷ್ಟ!ಸೆನ್ಸೆಕ್ಸ್ ಧರೆಗುರುಳಿ, ರೂಪಾಯಿ ದಾಖಲೆ ಪತನ!
ಎಲ್ಲೆಡೆ LPG ಗ್ಯಾಸ್ ಸಿಲಿಂಡರ್ ಸಂಕಷ್ಟ: ಇದು ಜೀವನೋಪಾಯದ ಪ್ರಶ್ನೆ… ತಕ್ಷಣ ಸಮರ್ಪಕ ಕ್ರಮ ಸರ್ಕಾರದ ಹೊಣೆ.
ಅರೆಬೈಲ್ ಘಾಟ್ ನ ಕಾರು ಅಫಘಾತ ವ್ಯವಸ್ಥಿತ ಕೊಲೆ…!
ಶಾಲೆ ಹತ್ತಿರವಿದ್ದರೂ,ಮಕ್ಕಳ ಹೆಲ್ಮೆಟ್ ನಿರ್ಲಕ್ಷಿಸಬೇಡಿ!4 ವರ್ಷದೊಳಗಿನ ಮಗುಗೂ ಹೆಲ್ಮೆಟ್ ಕಡ್ಡಾಯ!
ಪುತ್ತೂರು ಘಟನೆ ಚಾಕು ಕಂಡು ಆತಂಕ…ಏನಾಯಿತು?ತನಿಖೆಯಲ್ಲಿ ಬಯಲಾಯ್ತು ಮತ್ತೊಂದು ಸತ್ಯ!
ಮಂಗಳೂರು ಸಿಟಿ ಪೊಲೀಸರ ಭರ್ಜರಿ ಬೇಟೆ – ನಿಷೇಧಿತ ಎಂಡಿಎಂ, ಗಾಂಜಾ ಮರಾಟಗಾರರ ಬಂಧನ
ಕೇರಳ ಸರ್ಕಾರ ರಚನೆಯ ಕಗ್ಗಂಟು.. ಸಿಎಂ ಅಭ್ಯರ್ಥಿ ಆಯ್ಕೆಗೆ ಕಸರತ್ತು… ಕಾಂಗ್ರೆಸ್ ದುರ್ಬಲತೆಗೆ ಸಾಕ್ಷಿ
ಗೃಹಲಕ್ಷ್ಮಿ ಹಣ ಉಳಿಸಿ ದೇವಿಗೆ ₹17 ಲಕ್ಷ ದೇಣಿಗೆ!
ಪತ್ರಿಕೋದ್ಯಮವೇ? ಪ್ರಚೋದನೆಯೇ? ಸುಳ್ಳು ಸುದ್ದಿಗೆ ಕೋಮು ಬಣ್ಣ ಆರೋಪದಲ್ಲಿ 7 ಮಾಧ್ಯಮಗಳ ವಿರುದ್ಧ FIR…!
ಮೈ ಜುಮ್ಮೆನ್ನಿಸುವ ಬೈಕ್–ಲಾರಿ ಡಿಕ್ಕಿ ಅಪಘಾತ… ಕ್ಷಣಾರ್ಧದಲ್ಲೇ ಜೀವ ಹೋದ ಹೃದಯವಿದ್ರಾವಕ ರಸ್ತೆ ದುರಂತ
ಯಕ್ಷಗಾನದಲ್ಲಿ ಶಿಳ್ಳೆ ಹಾಕ್ಲಿಕ್ಕೆ ಪರ್ಮಿಶನ್ ಬೇಕಾ..…!?
ಭಾರತದಲ್ಲಿ ಎಚ್‌ಪಿವಿ (HPV) ಲಸಿಕೆ ಕಾರ್ಯಕ್ರಮ ಹೆಣ್ಣೆತ್ತವರು ತಿಳಿದುಕೊಳ್ಳಲೇಬೇಕಾದ ವಿಚಾರ
ದಿಲ್ಲಿಯಲ್ಲಿ ವಾಗ್ದಾಳಿ.. ಗಲ್ಲಿಯಲ್ಲಿ ಒಪ್ಪಂದ?! ದೇಶದ ಅತ್ಯಂತ ಕಾಂಟ್ರವರ್ಸಿಯಲ್ ಬಿಡ್ ತೆರೆಮರೆಯಲ್ಲಿ ನಡೆದ ಆ ಒಂದು ನಡೆ ಕಾಂಗ್ರೆಸ್ ಸರ್ಕಾರಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದ್ದು ಯಾಕೆ?!
ಹಿರಿಯಡ್ಕದ ಬಾರಿನಲ್ಲಿ ಸರಿ ಕುಡಿದು ಗುಂಡಾಗಿರಿ, ಬಿಯರ್ ಬಾಟಲಿಯಿಂದ ಹಲ್ಲೆ
ಸಹೋದರಿಯ ಎಲುಬುಗಳೊಂದಿಗೆ ಬ್ಯಾಂಕ್ ಗೆ ಬಂದ ಅಣ್ಣ…!ದಾಖಲೆ ನಿಯಮಗಳ ನಡುವೆ ಸೋತ ಮಾನವೀಯತೆ”
ಜನಪ್ರಿಯ “ಶಕ್ತಿ ಯೋಜನೆ” ವಿಫಲಗೊಳಿಸಲು ಸಂಚು!
165 ಹೆಣ್ಮಕ್ಕಳು ತಮ್ಮದಲ್ಲದ ತಪ್ಪಿಗೆ ಹತ್ಯೆಗೆ ಒಳಗಾದರು 
ಟೂರಿಸಂ ಡೆವಲಪ್‌ಮೆಂಟ್‌ಗೆ ಅಧಿಕಾರಿಗಳೇ ಮಾರಕ
ಕರ್ನಾಟಕದಲ್ಲಿ ಮಳೆ ಅಬ್ಬರಕ್ಕೆ ರೆಡ್ ಅಲರ್ಟ್ ಸನ್ನಾಹ!8 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ – ಜನರಿಗೆ ಎಚ್ಚರಿಕೆ
🔴 ಪೊಲೀಸರ ಮೇಲಿನ ಹಿಡಿತ ಕಠಿಣ: PEBಗೆ ಹೆಚ್ಚಿದ ಅಧಿಕಾರ — ರಾಜ್ಯದ ದೊಡ್ಡ ಆಡಳಿತಾತ್ಮಕ ತೀರ್ಮಾನ
ಸರ್ಕಾರಿ ವೈದ್ಯರ ಅನರ್ದಿಷ್ಟಾವಧಿ ಮುಷ್ಕರ ರದ್ದು
“ಅಮ್ಮ”ನ ಕಾರ್ಯಕ್ರಮದಲ್ಲಿ  ಕೇಂದ್ರ ಸಚಿವರಿಂದ ರಾಜಕೀಯ ಭಾಷಣ
ಸಂಸತ್ ವಿಶೇಷ ಅಧಿವೇಶನ: ಮಹಿಳಾ ಮೀಸಲಾತಿಗೆ ಒಗ್ಗಟ್ಟು, ಡಿಲಿಮಿಟೇಶನ್ ಮೇಲೆ ಭಾರಿ ವಿವಾದ – ಕರ್ನಾಟಕಕ್ಕೂ ಪರಿಣಾಮದ ಚರ್ಚೆ 🔥