📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ನನ್ನನ್ನು ದುರ್ಬಲ ವ್ಯಕ್ತಿ ಅಂದುಕೊಳ್ಳಬೇಡಿ- U.T ಖಾದರ್

ನನ್ನ ಸೌಮ್ಯ ಸ್ವಭಾವ ದುರ್ಬಲ ಅಂತ ಅಂದ್ಕೊಬೇಡಿ!’ ಸ್ಪೀಕರ್ ಗರಂ ಆದದ್ದೇಕೆ? ವಿಧಾನಸಭೆಯಲ್ಲಿ ಅಪರೂಪಕ್ಕೆ ಗರಂ ಆದ ಸ್ಪೀಕರ್: “ಉತ್ತರ ಕೊಡದೇ ನಿರ್ಲಕ್ಷ್ಯಮುಂದುವರಿಸಿದರೇ ಕ್ರಮ ಎದಿರಿಸಬೇಕಾಗುತ್ತದೆ ”ಅಂತ ಖಡಕ್ ಆದ ಖಾದರ್ ನೋಡಿ ಒಂದು ಕ್ಷಣ ವಿಧಾನ ಸಭೆ ಗಂಭೀರ…. ಏಕೆ ಅಂತ ಡಿಟೇಲ್ಸ್ ಓದಿ…

ಬೆಂಗಳೂರು: ಸಾಮಾನ್ಯವಾಗಿ ಸದನದಲ್ಲಿ ಹಾಸ್ಯಪ್ರಿಯವಾಗಿ ಮಾತನಾಡುವ, ಎಲ್ಲರ ಜೊತೆ ಸ್ನೇಹಭಾವದಿಂದ ವರ್ತಿಸುವ ವಿಧಾನಸಭಾಧ್ಯಕ್ಷ U. T. Khader ಶುಕ್ರವಾರ ಸದನದಲ್ಲಿ ಅಪರೂಪದ ಗಂಭೀರ ಧ್ವನಿಯಲ್ಲಿ ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಸದನದಲ್ಲಿ ಕೇಳಲಾಗಿರುವ ಚುಕ್ಕೆ ಗುರುತಿಲ್ಲದ ಪ್ರಶ್ನೆಗಳಿಗೆ (Unstarred Questions) ಸರಿಯಾದ ಸಮಯದಲ್ಲಿ ಉತ್ತರ ನೀಡದೆ ವಿಳಂಬ ಮಾಡುತ್ತಿರುವುದನ್ನು ಅವರು ಕಠಿಣವಾಗಿ ತರಾಟೆಗೆ ತೆಗೆದುಕೊಂಡರು.

“ನನ್ನ ಸೌಮ್ಯ ಸ್ವಭಾವವನ್ನು ದುರ್ಬಲ ಎಂದು ಯಾರೂ ಭಾವಿಸಬೇಡಿ. ಮುಂದುವರೆದರೆ ಕ್ರಮ ಕೈಗೊಳ್ಳಬೇಕಾಗುತ್ತದೆ,” ಎಂದು ಸ್ಪೀಕರ್ ಖಾದರ್ ಖಡಕ್ ಎಚ್ಚರಿಕೆ ನೀಡಿದ ಕ್ಷಣ ಸದನದಲ್ಲಿ ಕ್ಷಣಕಾಲ ಗಂಭೀರ ವಾತಾವರಣ ನಿರ್ಮಾಣವಾಯಿತು.

131 ಪ್ರಶ್ನೆಗಳಲ್ಲಿ ಉತ್ತರ ಕೇವಲ 50ಕ್ಕೆ!

ಪ್ರಶ್ನೋತ್ತರ ಅವಧಿ ಮುಗಿದ ನಂತರ ಸಚಿವ Ramalinga Reddy ಅವರು ಸಂಸದೀಯ ವ್ಯವಹಾರಗಳ ಸಚಿವರ ಪರವಾಗಿ ಚುಕ್ಕೆ ಗುರುತಿಲ್ಲದ ಪ್ರಶ್ನೆಗಳ ಉತ್ತರ ಮಂಡಿಸಿದರು.

ಆ ವೇಳೆ ಅವರು ನೀಡಿದ ಮಾಹಿತಿಯಂತೆ:
ಒಟ್ಟು ಕೇಳಲಾದ ಪ್ರಶ್ನೆಗಳು: 131
ಉತ್ತರ ನೀಡಿದ ಪ್ರಶ್ನೆಗಳು: 50 ಮಾತ್ರ
ಇನ್ನೂ ಬಾಕಿ ಉಳಿದಿರುವ ಪ್ರಶ್ನೆಗಳು: 81

ಈ ಮಾಹಿತಿ ಕೇಳುತ್ತಿದ್ದಂತೆಯೇ ಸದನದಲ್ಲಿ ವಿರೋಧ ಪಕ್ಷದಿಂದ ಆಕ್ರೋಶ ವ್ಯಕ್ತವಾಯಿತು.“ಸರ್ಕಾರಕ್ಕೆ ಜಡತ್ವ ಹಿಡಿದಂತಿದೆ!” – ಆರ್. ಅಶೋಕ್ ಕಿಡಿ

ವಿಧಾನಸಭೆ ಪ್ರತಿಪಕ್ಷ ನಾಯಕ R. Ashoka ಸರ್ಕಾರದ ಕಾರ್ಯಕ್ಷಮತೆಯನ್ನು ತೀವ್ರವಾಗಿ ಪ್ರಶ್ನಿಸಿದರು ,ಅವರೂ ಕಿಡಿಕಾರುತ್ತಾ..:“ಸ್ಪೀಕರ್ ಅವರು ಇದೇ ವಿಷಯವನ್ನು ಮೂರನೇ ಬಾರಿ ಸೂಚಿಸುತ್ತಿದ್ದಾರೆ. ಆದರೆ ಅಧಿಕಾರಿಗಳು ಮತ್ತು ಇಲಾಖೆಗಳಲ್ಲಿ ಯಾವುದೇ ಚಲನೆ ಕಾಣುತ್ತಿಲ್ಲ. ಸರ್ಕಾರಕ್ಕೆ ಜಡತ್ವ ಹಿಡಿದಂತಿದೆ.”

ಅವರು ಮತ್ತಷ್ಟು ಒತ್ತಿ ಹೇಳಿದ್ದು:
ಪ್ರಶ್ನೆಗಳಿಗೆ ಉತ್ತರ ನೀಡದೇ ವಿಳಂಬ ಮಾಡುವುದು ಜನಪ್ರತಿನಿಧಿಗಳ ಅವಮಾನ..
ಅಭಿವೃದ್ಧಿ ಕಾರ್ಯಗಳ ಪ್ರಗತಿ ಕುರಿತು ಸ್ಪಷ್ಟತೆ ಇಲ್ಲ.
ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಗಂಭೀರವಾಗಿ ಕೆಲಸ ಮಾಡುತ್ತಿಲ್ಲ.

ಅಂತೂ ಸದನದಲ್ಲಿ ಶುಕ್ರವಾರದ ಘಟನೆ ಒಂದು ಸ್ಪಷ್ಟ ಸಂದೇಶ ನೀಡಿದೆ: “ಅಧಿಕಾರಿಗಳು ಜವಾಬ್ದಾರಿಯಾಗಬೇಕು”

ಜನಪ್ರತಿನಿಧಿಗಳ ಪ್ರಶ್ನೆಗಳಿಗೆ ಸಮಯಕ್ಕೆ ಸರಿಯಾಗಿ ಉತ್ತರ ಅಗತ್ಯ, ಅಧಿಕಾರಿಗಳ ನಿರ್ಲಕ್ಷ್ಯ ಸಹಿಸಲಾಗುವುದಿಲ್ಲ, ಸದನದ ಗೌರವ ಕಾಪಾಡುವುದು ಎಲ್ಲರ ಜವಾಬ್ದಾರಿ

ಸಾಮಾನ್ಯವಾಗಿ ಹಾಸ್ಯಪ್ರಿಯ ವ್ಯಕ್ತಿತ್ವ ಹೊಂದಿರುವ ಸ್ಪೀಕರ್ U. T. Khader ಈ ಬಾರಿ ಗಂಭೀರವಾಗಿ ಎಚ್ಚರಿಕೆ ನೀಡಿರುವುದು ಅಧಿಕಾರಿಗಳಿಗೆ ಸ್ಪಷ್ಟ ಸಂದೇಶ ನೀಡಿದಂತಾಗಿದೆ.

“ಫಾಲೋಅಪ್ ಇಲ್ಲದಿದ್ದರೆ ವರ್ಷವಾದರೂ ಉತ್ತರ ಇಲ್ಲ!”

ಸ್ಪೀಕರ್ U. T. Khader ಅಧಿಕಾರಿಗಳ ನಿರ್ಲಕ್ಷ್ಯದ ಕುರಿತು ಸ್ಪಷ್ಟವಾಗಿ ಹೇಳಿದರು:
ಅನೇಕ ಪ್ರಶ್ನೆಗಳಿಗೆ ವರ್ಷವಾದರೂ ಉತ್ತರ ಇಲ್ಲ.
ಉಪಸಭಾಧ್ಯಕ್ಷರ ನೇತೃತ್ವದಲ್ಲಿ ಸಮಿತಿ ರಚಿಸಿದರೂ ಫಲಿತಾಂಶ ಇಲ್ಲ.
ಅಧಿಕಾರಿಗಳಿಂದ ಫಾಲೋಅಪ್ ಕೊರತೆ.

“ಸಿಎಂ ಗಮನಕ್ಕೆ ತರುತ್ತೇವೆ” – ಗೃಹ ಸಚಿವ ಪರಮೇಶ್ವರ್

ಸರ್ಕಾರದ ಪರವಾಗಿ ಪ್ರತಿಕ್ರಿಯಿಸಿದ ಗೃಹ ಸಚಿವ G. Parameshwara ಸಮಸ್ಯೆಯನ್ನು ಒಪ್ಪಿಕೊಂಡು ,ಸ್ಪೀಕರ್ ಅಪರೂಪಕ್ಕೆ ಗಟ್ಟಿಯಾಗಿ ಮಾತನಾಡಿದ್ದಾರೆ,ಸಮಸ್ಯೆ ನಿಜವಾಗಿಯೂ ಇದೆ,ಈ ವಿಷಯವನ್ನು ಮುಖ್ಯಮಂತ್ರಿಯ ಗಮನಕ್ಕೆ ತರಲಾಗುತ್ತದೆ ಎಲ್ಲಾ ಸಚಿವಾಲಯಗಳಿಗೆ ಸೂಚನೆ ನೀಡಿ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಜನರ ಪ್ರಶ್ನೆಗಳಿಗೆ ಉತ್ತರವೇ ಇಲ್ಲವಾದರೆ ಅಭಿವೃದ್ಧಿ ಹೇಗೆ?

ವಿಧಾನಸಭೆಯಲ್ಲಿ ಕೇಳಲಾಗುವ ಪ್ರಶ್ನೆಗಳು ಸಾಮಾನ್ಯ ರಾಜಕೀಯ ವಿಷಯಗಳಷ್ಟೇ ಅಲ್ಲ. ಅವುಗಳಲ್ಲಿ:
ರಸ್ತೆ ಅಭಿವೃದ್ಧಿ
ಕುಡಿಯುವ ನೀರು
ಶಾಲೆ ಮತ್ತು ಆಸ್ಪತ್ರೆಗಳ ಸಮಸ್ಯೆ
ಗ್ರಾಮಗಳ ಮೂಲಸೌಕರ್ಯ
ಯೋಜನೆಗಳ ಪ್ರಗತಿ…
ಇಂತಹ ಜನಸಾಮಾನ್ಯರಿಗೆ ಸಂಬಂಧಿಸಿದ ಪ್ರಶ್ನೆಗಳು ಸೇರಿರುತ್ತವೆ.ಆ ಪ್ರಶ್ನೆಗಳಿಗೆ ಉತ್ತರವೇ ಸಿಗದಿದ್ದರೆ, ಜನರ ಸಮಸ್ಯೆಗಳ ಪರಿಹಾರವೂ ವಿಳಂಬವಾಗುತ್ತದೆ ಎಂಬ ಆತಂಕ ವ್ಯಕ್ತವಾಗುತ್ತಿದೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಇರಾನ್ ದಾಳಿಗೆ ಬೆಂಜಿಮನೇತನ್ಯಹೋ ಕೊಲ್ಲಲ್ಪಟ್ಟಿದ್ದಾರಾ?
ಮೈ ಜುಮ್ಮೆನ್ನಿಸುವ ಬೈಕ್–ಲಾರಿ ಡಿಕ್ಕಿ ಅಪಘಾತ… ಕ್ಷಣಾರ್ಧದಲ್ಲೇ ಜೀವ ಹೋದ ಹೃದಯವಿದ್ರಾವಕ ರಸ್ತೆ ದುರಂತ
ವರದಕ್ಷಿಣ ಪ್ರಕರಣ:5.5 ತಿಂಗಳ ಮಗುವಿಗೂ ದೈಹಿಕ ಹಿಂಸೆ….!
ವಿಜಯ್ ತಳಪತಿ ಸಂಗೀತಾ ವಿಚ್ಛೇದನ ವಿಚಾರ: 27 ವರ್ಷದ ದಾಂಪತ್ಯಕ್ಕೆ ತೆರೆ? ₹250 ಕೋಟಿ ಸೆಟ್ಲ್‌ಮೆಂಟ್ ಚರ್ಚೆ!!
ಶಾಸಕ ಹ್ಯಾರಿಸ್ ಮೇಲೆ ಪ್ರಕರಣ ದಾಖಲು
ಅಕ್ರಮ ಗಡಿ ದಾಟಿದವರಿಗೆ ಈಗ ಭಾರತದಲ್ಲಿ ನೋ ಎಂಟ್ರಿ!ಬಾಂಗ್ಲಾ ಗಡಿಯಲ್ಲಿ ಎನ್‌ಆರ್‌ಸಿ ಅಸ್ತ್ರ: ರಾಜಕೀಯಕ್ಕಿಂತ ರಾಷ್ಟ್ರೀಯ ಭದ್ರತೆ ಮುಖ್ಯ
Tesla Experience Centre ಬೆಂಗಳೂರು ಈಗ EV ಕ್ರೇಜ್ ಹಬ್!car craze ಇರುವವರು ಮುಗಿಬೀಳುತ್ತಿದ್ದಾರೆ..
ಪಹಲ್ಗಾಂಮ್ ದಾಳಿಯ ಒಂದು ವರ್ಷ: ಇನ್ನೂ ಮುಗಿಯದ ನೋವು, ಮರೆಯಲಾಗದ ನೆನಪುಗಳು
TCS ಜಿಹಾದ್..ಗಂಭೀರ ತಿರುವು… ಟೀಮ್ ಲೀಡರ್ಸ್ ನಿಂದ subordinates ಗಳನ್ನ ಮಲೇಷ್ಯಾಕ್ಕೆ ಎತ್ತಂಗಡಿ ಮಾಡುವ ಪ್ಲಾನ್ ಇತ್ತಾ..?!ದಿನಕ್ಕೊಂದು ಮಹತ್ವದ ಸುಳಿವು…
ಮಂಗಳೂರು ದಸರಾ ಮೆರವಣಿಗೆಗೆ ವಿದ್ಯುತ್ ತಂತಿಗಳ ಸಮಸ್ಯೆಗೆ ಗುಡ್‌ಬೈ!
ಮಣಿಪಾಲ ಜೆಇಇ ಮೇನ್ಸ್ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ಪ್ರಯತ್ನ….
ನಿರ್ಮಾಣ ಹಂತ ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು-  ಶಣೈ ಮೇಲೆ ಕೇಸು
ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್ ವಿಂಗಡಣೆ ನಡುವೆ ಮಹಿಳಾ ಮಿಸಲಿಗೆ ಸೋಲು….
AAP ಸದ್ದು ಮಂಗಳೂರಲ್ಲೂ! ಜನರ ಸಮಸ್ಯೆಗೆ ನೇರ ಹೋರಾಟ
ತಡರಾತ್ರಿ ಭಟ್ಕಳದಲ್ಲಿ ವಿಚ್ಛಿದ್ರಕಾರಿ ಕೋಮುವಾದಿಗಳಿಂದ ದಾಂದಲೆ
ಸಾಮಾಜಿಕ‌ ಕಾರ್ಯಕರ್ತರಿಗೆ ಹಾಗೂ ನಗರ ಸಭೆ ಪೌರಯುಕ್ತರಿಗೆ ಬಹಿರಂಗ ಸವಾಲು.ಶ್ರೀಮಂತರ ಅಕ್ರಮಗಳ ಬಗ್ಗೆ ಮೌನವೇಕೆ.‌‌?
ಪ್ರತೀಕಾರದ ದಾಳಿಗೆ ‘ ರೌಡಿಶೀಟರ್ ಟ್ಯಾಬ್ಲೆಟ್’ ಆರೀಫ್ ಖತಂ .!
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ಯಾಂಕಾಕ್‌ನಿಂದ ಬಂದ ಪ್ರಯಾಣಿಕನ ಬ್ಯಾಗ್‌ನಲ್ಲಿ 47 ಜೀವಂತ ಅಪರೂಪದ ಪ್ರಾಣಿಗಳು ಪತ್ತೆ! 
ಡ್ರೋನ್ ದಾಳಿಯ ನಂತರ ಬಹ್ರೇನ್‌ನಲ್ಲಿ ಕನಿಷ್ಠ 32 ಜನರಿಗೆ ಗಾಯ
ಪ.ಪಂ ಮುಖ್ಯಾಧಿಕಾರಿ – 1 ಲಕ್ಷ ಲಂಚ ಸ್ವೀಕಾರದ ವೇಳೆ ರೆಡ್ ಹ್ಯಾಂಡ್!
“ವೇತನಕ್ಕಾಗಿ ಹೋರಾಟದಿಂದ ಆರಂಭವಾದ ಪ್ರತಿಭಟನೆ… ನೋಯ್ಡಾ ರಸ್ತೆಗಳಲ್ಲಿ ಅರಾಜಕತೆ, ಬೆಂಕಿ, ಘರ್ಷಣೆ — ಈಗ ಸರ್ಕಾರವೇ ತನಿಖೆ ನಡೆಸುವಷ್ಟು ಗಂಭೀರ ಪರಿಸ್ಥಿತಿ!” 🔥🚨
ತೆರಿಗೆ ನಮ್ಮದು… ಪಾಲು ಬೇರೆ ರಾಜ್ಯಗಳಿಗೆ!
ಒಂದು ಚಿನ್ನದ ಸರಕ್ಕಾಗಿ ನಿದ್ರೆಯಲ್ಲಿದ್ದ ಗೆಳತಿಯನ್ನೇ ಕೊಲ್ಲಲೆತ್ನಿಸಿದ ಆಕೆಗೆ ಜೈಲೆ ಗತಿ …..ನಂಬಿಕೆಯೇ ರಕ್ತಸಿಕ್ತವಾದ ಮಣಿಪಾಲದ ಭೀಕರ ಘಟನೆ…
ದಕ್ಷಿಣ ಕನ್ನಡದ 14 ವರ್ಷದ ಎಲ್ಲ ಬಾಲಕಿಯರು ಉಚಿತ HPV ಲಸಿಕೆ ಹಾಕಿಸಿಕೊಳ್ಳಲು ಸಂಸದರ ಕರೆ
ಹೀಟ್ ಸ್ಟ್ರೋಕ್ ಗಂಭೀರ – ನಿರ್ಲಕ್ಷ್ಯ ಬೇಡ …ತಲೆ ಸುತ್ತಿದ್ರೆ ತಕ್ಷಣ ನೆರವು ಪಡೆಯಿರಿ.
ಇಂದು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ನಿಂದ ಪ್ರತಿಭಟನೆ
📣3 ತಿಂಗಳಲ್ಲಿ LPG ಸಂಪರ್ಕ ರದ್ದು ??– PNGಗೆ ಬದಲಾವಣೆ ಕಡ್ಡಾಯ” ಈಗಲೇ ಸತ್ಯ ತಿಳಿದುಕೊಳ್ಳಿ..! ಗ್ಯಾಸ್ ಬಗ್ಗೆ ಗೊಂದಲಕ್ಕೆ ಸ್ಪಷ್ಟ ಉತ್ತರ ಇಲ್ಲಿದೆ.
ಕನ್ನಡದ ನೆಲದಲ್ಲಿ ಕನ್ನಡಕ್ಕೇ ಗೇಟ್ ಪಾಸ್: ಇವರು ಕರ್ನಾಟಕದ ಸಚಿವರೊ⁉️ಇಂಗ್ಲೆಂಡಿನ ಪ್ರತಿನಿಧಿಯೋ?
ಡೇಟಾದಲ್ಲಿ ಸತ್ತಿದ್ದಾರೆ: ಬಡ ಮಹಿಳೆ ತಾನು ಜೀವಂತ ಸಾಬೀತುಪಡಿಸಲು ಹರಸಾಹಸ…ಬಡಜನರು “ಡೇಟಾ” ಅಲ್ಲ — ಅವರು ಜೀವಂತ ಮಾನವರು. 
ಜೈಲಿನೊಳಗೆ ಮೊಬೈಲ್ ಮಾಫಿಯಾ: ಖತರ್ನಾಕ್ ಐಡಿಯಾ..!