📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ನನ್ನನ್ನು ದುರ್ಬಲ ವ್ಯಕ್ತಿ ಅಂದುಕೊಳ್ಳಬೇಡಿ- U.T ಖಾದರ್

ನನ್ನ ಸೌಮ್ಯ ಸ್ವಭಾವ ದುರ್ಬಲ ಅಂತ ಅಂದ್ಕೊಬೇಡಿ!’ ಸ್ಪೀಕರ್ ಗರಂ ಆದದ್ದೇಕೆ? ವಿಧಾನಸಭೆಯಲ್ಲಿ ಅಪರೂಪಕ್ಕೆ ಗರಂ ಆದ ಸ್ಪೀಕರ್: “ಉತ್ತರ ಕೊಡದೇ ನಿರ್ಲಕ್ಷ್ಯಮುಂದುವರಿಸಿದರೇ ಕ್ರಮ ಎದಿರಿಸಬೇಕಾಗುತ್ತದೆ ”ಅಂತ ಖಡಕ್ ಆದ ಖಾದರ್ ನೋಡಿ ಒಂದು ಕ್ಷಣ ವಿಧಾನ ಸಭೆ ಗಂಭೀರ…. ಏಕೆ ಅಂತ ಡಿಟೇಲ್ಸ್ ಓದಿ…

ಬೆಂಗಳೂರು: ಸಾಮಾನ್ಯವಾಗಿ ಸದನದಲ್ಲಿ ಹಾಸ್ಯಪ್ರಿಯವಾಗಿ ಮಾತನಾಡುವ, ಎಲ್ಲರ ಜೊತೆ ಸ್ನೇಹಭಾವದಿಂದ ವರ್ತಿಸುವ ವಿಧಾನಸಭಾಧ್ಯಕ್ಷ U. T. Khader ಶುಕ್ರವಾರ ಸದನದಲ್ಲಿ ಅಪರೂಪದ ಗಂಭೀರ ಧ್ವನಿಯಲ್ಲಿ ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಸದನದಲ್ಲಿ ಕೇಳಲಾಗಿರುವ ಚುಕ್ಕೆ ಗುರುತಿಲ್ಲದ ಪ್ರಶ್ನೆಗಳಿಗೆ (Unstarred Questions) ಸರಿಯಾದ ಸಮಯದಲ್ಲಿ ಉತ್ತರ ನೀಡದೆ ವಿಳಂಬ ಮಾಡುತ್ತಿರುವುದನ್ನು ಅವರು ಕಠಿಣವಾಗಿ ತರಾಟೆಗೆ ತೆಗೆದುಕೊಂಡರು.

“ನನ್ನ ಸೌಮ್ಯ ಸ್ವಭಾವವನ್ನು ದುರ್ಬಲ ಎಂದು ಯಾರೂ ಭಾವಿಸಬೇಡಿ. ಮುಂದುವರೆದರೆ ಕ್ರಮ ಕೈಗೊಳ್ಳಬೇಕಾಗುತ್ತದೆ,” ಎಂದು ಸ್ಪೀಕರ್ ಖಾದರ್ ಖಡಕ್ ಎಚ್ಚರಿಕೆ ನೀಡಿದ ಕ್ಷಣ ಸದನದಲ್ಲಿ ಕ್ಷಣಕಾಲ ಗಂಭೀರ ವಾತಾವರಣ ನಿರ್ಮಾಣವಾಯಿತು.

131 ಪ್ರಶ್ನೆಗಳಲ್ಲಿ ಉತ್ತರ ಕೇವಲ 50ಕ್ಕೆ!

ಪ್ರಶ್ನೋತ್ತರ ಅವಧಿ ಮುಗಿದ ನಂತರ ಸಚಿವ Ramalinga Reddy ಅವರು ಸಂಸದೀಯ ವ್ಯವಹಾರಗಳ ಸಚಿವರ ಪರವಾಗಿ ಚುಕ್ಕೆ ಗುರುತಿಲ್ಲದ ಪ್ರಶ್ನೆಗಳ ಉತ್ತರ ಮಂಡಿಸಿದರು.

ಆ ವೇಳೆ ಅವರು ನೀಡಿದ ಮಾಹಿತಿಯಂತೆ:
ಒಟ್ಟು ಕೇಳಲಾದ ಪ್ರಶ್ನೆಗಳು: 131
ಉತ್ತರ ನೀಡಿದ ಪ್ರಶ್ನೆಗಳು: 50 ಮಾತ್ರ
ಇನ್ನೂ ಬಾಕಿ ಉಳಿದಿರುವ ಪ್ರಶ್ನೆಗಳು: 81

ಈ ಮಾಹಿತಿ ಕೇಳುತ್ತಿದ್ದಂತೆಯೇ ಸದನದಲ್ಲಿ ವಿರೋಧ ಪಕ್ಷದಿಂದ ಆಕ್ರೋಶ ವ್ಯಕ್ತವಾಯಿತು.“ಸರ್ಕಾರಕ್ಕೆ ಜಡತ್ವ ಹಿಡಿದಂತಿದೆ!” – ಆರ್. ಅಶೋಕ್ ಕಿಡಿ

ವಿಧಾನಸಭೆ ಪ್ರತಿಪಕ್ಷ ನಾಯಕ R. Ashoka ಸರ್ಕಾರದ ಕಾರ್ಯಕ್ಷಮತೆಯನ್ನು ತೀವ್ರವಾಗಿ ಪ್ರಶ್ನಿಸಿದರು ,ಅವರೂ ಕಿಡಿಕಾರುತ್ತಾ..:“ಸ್ಪೀಕರ್ ಅವರು ಇದೇ ವಿಷಯವನ್ನು ಮೂರನೇ ಬಾರಿ ಸೂಚಿಸುತ್ತಿದ್ದಾರೆ. ಆದರೆ ಅಧಿಕಾರಿಗಳು ಮತ್ತು ಇಲಾಖೆಗಳಲ್ಲಿ ಯಾವುದೇ ಚಲನೆ ಕಾಣುತ್ತಿಲ್ಲ. ಸರ್ಕಾರಕ್ಕೆ ಜಡತ್ವ ಹಿಡಿದಂತಿದೆ.”

ಅವರು ಮತ್ತಷ್ಟು ಒತ್ತಿ ಹೇಳಿದ್ದು:
ಪ್ರಶ್ನೆಗಳಿಗೆ ಉತ್ತರ ನೀಡದೇ ವಿಳಂಬ ಮಾಡುವುದು ಜನಪ್ರತಿನಿಧಿಗಳ ಅವಮಾನ..
ಅಭಿವೃದ್ಧಿ ಕಾರ್ಯಗಳ ಪ್ರಗತಿ ಕುರಿತು ಸ್ಪಷ್ಟತೆ ಇಲ್ಲ.
ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಗಂಭೀರವಾಗಿ ಕೆಲಸ ಮಾಡುತ್ತಿಲ್ಲ.

ಅಂತೂ ಸದನದಲ್ಲಿ ಶುಕ್ರವಾರದ ಘಟನೆ ಒಂದು ಸ್ಪಷ್ಟ ಸಂದೇಶ ನೀಡಿದೆ: “ಅಧಿಕಾರಿಗಳು ಜವಾಬ್ದಾರಿಯಾಗಬೇಕು”

ಜನಪ್ರತಿನಿಧಿಗಳ ಪ್ರಶ್ನೆಗಳಿಗೆ ಸಮಯಕ್ಕೆ ಸರಿಯಾಗಿ ಉತ್ತರ ಅಗತ್ಯ, ಅಧಿಕಾರಿಗಳ ನಿರ್ಲಕ್ಷ್ಯ ಸಹಿಸಲಾಗುವುದಿಲ್ಲ, ಸದನದ ಗೌರವ ಕಾಪಾಡುವುದು ಎಲ್ಲರ ಜವಾಬ್ದಾರಿ

ಸಾಮಾನ್ಯವಾಗಿ ಹಾಸ್ಯಪ್ರಿಯ ವ್ಯಕ್ತಿತ್ವ ಹೊಂದಿರುವ ಸ್ಪೀಕರ್ U. T. Khader ಈ ಬಾರಿ ಗಂಭೀರವಾಗಿ ಎಚ್ಚರಿಕೆ ನೀಡಿರುವುದು ಅಧಿಕಾರಿಗಳಿಗೆ ಸ್ಪಷ್ಟ ಸಂದೇಶ ನೀಡಿದಂತಾಗಿದೆ.

“ಫಾಲೋಅಪ್ ಇಲ್ಲದಿದ್ದರೆ ವರ್ಷವಾದರೂ ಉತ್ತರ ಇಲ್ಲ!”

ಸ್ಪೀಕರ್ U. T. Khader ಅಧಿಕಾರಿಗಳ ನಿರ್ಲಕ್ಷ್ಯದ ಕುರಿತು ಸ್ಪಷ್ಟವಾಗಿ ಹೇಳಿದರು:
ಅನೇಕ ಪ್ರಶ್ನೆಗಳಿಗೆ ವರ್ಷವಾದರೂ ಉತ್ತರ ಇಲ್ಲ.
ಉಪಸಭಾಧ್ಯಕ್ಷರ ನೇತೃತ್ವದಲ್ಲಿ ಸಮಿತಿ ರಚಿಸಿದರೂ ಫಲಿತಾಂಶ ಇಲ್ಲ.
ಅಧಿಕಾರಿಗಳಿಂದ ಫಾಲೋಅಪ್ ಕೊರತೆ.

“ಸಿಎಂ ಗಮನಕ್ಕೆ ತರುತ್ತೇವೆ” – ಗೃಹ ಸಚಿವ ಪರಮೇಶ್ವರ್

ಸರ್ಕಾರದ ಪರವಾಗಿ ಪ್ರತಿಕ್ರಿಯಿಸಿದ ಗೃಹ ಸಚಿವ G. Parameshwara ಸಮಸ್ಯೆಯನ್ನು ಒಪ್ಪಿಕೊಂಡು ,ಸ್ಪೀಕರ್ ಅಪರೂಪಕ್ಕೆ ಗಟ್ಟಿಯಾಗಿ ಮಾತನಾಡಿದ್ದಾರೆ,ಸಮಸ್ಯೆ ನಿಜವಾಗಿಯೂ ಇದೆ,ಈ ವಿಷಯವನ್ನು ಮುಖ್ಯಮಂತ್ರಿಯ ಗಮನಕ್ಕೆ ತರಲಾಗುತ್ತದೆ ಎಲ್ಲಾ ಸಚಿವಾಲಯಗಳಿಗೆ ಸೂಚನೆ ನೀಡಿ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಜನರ ಪ್ರಶ್ನೆಗಳಿಗೆ ಉತ್ತರವೇ ಇಲ್ಲವಾದರೆ ಅಭಿವೃದ್ಧಿ ಹೇಗೆ?

ವಿಧಾನಸಭೆಯಲ್ಲಿ ಕೇಳಲಾಗುವ ಪ್ರಶ್ನೆಗಳು ಸಾಮಾನ್ಯ ರಾಜಕೀಯ ವಿಷಯಗಳಷ್ಟೇ ಅಲ್ಲ. ಅವುಗಳಲ್ಲಿ:
ರಸ್ತೆ ಅಭಿವೃದ್ಧಿ
ಕುಡಿಯುವ ನೀರು
ಶಾಲೆ ಮತ್ತು ಆಸ್ಪತ್ರೆಗಳ ಸಮಸ್ಯೆ
ಗ್ರಾಮಗಳ ಮೂಲಸೌಕರ್ಯ
ಯೋಜನೆಗಳ ಪ್ರಗತಿ…
ಇಂತಹ ಜನಸಾಮಾನ್ಯರಿಗೆ ಸಂಬಂಧಿಸಿದ ಪ್ರಶ್ನೆಗಳು ಸೇರಿರುತ್ತವೆ.ಆ ಪ್ರಶ್ನೆಗಳಿಗೆ ಉತ್ತರವೇ ಸಿಗದಿದ್ದರೆ, ಜನರ ಸಮಸ್ಯೆಗಳ ಪರಿಹಾರವೂ ವಿಳಂಬವಾಗುತ್ತದೆ ಎಂಬ ಆತಂಕ ವ್ಯಕ್ತವಾಗುತ್ತಿದೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಅವಿವಾಹಿತಗೆ ಗರ್ಭ ದಾನ ಮಾಡಿದವ ಜೈಲಿಗೆ
ಪ್ರಧಾನಿ ಮೋದಿ ನೆದರ್ಲ್ಯಾಂಡ್ ಭೇಟಿ ಭಾರತ ಸಹಕಾರದ ಸೇತುವೆ ಕಟ್ಟುವ ದ್ವಿಪಕ್ಷೀಯ ಸಂಬಂಧಗಳ ವಿಸ್ತರಣೆ…
ಗುರುವಾಯನಕೆರೆ ಯ ಪ್ರತಿಷ್ಠಿತ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ
ನಿರ್ಮಾಣ ಹಂತದ ಗಾಲ್ಫ್ ಕೋರ್ಸ್‌ನ ಕೆರೆಯಲ್ಲಿ ತೇಲಿದ ಮೂವರು ಬಾಲಕರ ಶವಗಳು..!
“ಅಂಕಗಳು ಭವಿಷ್ಯ ನಿರ್ಧರಿಸುವುದಿಲ್ಲ” B.Tech ನಲ್ಲಿ 24 ವಿಷಯ ಫೇಲ್ ಆದರೂ IPS ಆದ ಸಮೀರ್ ಶರ್ಮಾ
ಅನಾಥ ಪುಟ್ಟ ಬಾಲಕಿಯರ ಮೇಲೆ ವರ್ಷಗಳ ಕಾಲ ಲೈಂಗಿಕ ದೌರ್ಜನ್ಯ:ರಾಕ್ಷಸ ಮನಸ್ಸುಗಳಿಗೆ ಅಂತ್ಯ ಯಾವಾಗ?
ಹುಬ್ಬಳ್ಳಿ ಲವ್ ಜಿಹಾದ್..!?ಮೂರು ವರ್ಷದ ಸಂಬಂಧ, friendship, ಫ್ಯಾಮಿಲಿ closeness-ಕ್ಷಣದಲ್ಲೇ ಬಾರಿ ಸಂಘರ್ಷ..!
ಫೇಸ್‌ಬುಕ್ ‘ಸುಂದರಿ’ಅವಳಲ್ಲ ಅವನು!ಲವ್ ಮಾಡಿ ಹೆಂಡತಿ ಅಂದುಕೊಂಡವನು ಗಂಡಸು ಅಂತ ಗೊತ್ತಾದಾಗ ನಡೆದಿದ್ದೇ ಬೇರೆ!
ಬಾರ್ ಲೆಕ್ಕಾಚಾರ-ಚೂರಿ ದಾಳಿ – ಯುವಕನ ಕುತ್ತಿಗೆಗೆ ಕೊಯ್ದು ಕೊಲೆ ಯತ್ನ
ಬೈಕಂಪಾಡಿಯಲ್ಲಿ ನಡುರಾತ್ರಿ ನಡೆದ ಸಿನೆಮಾ ಸ್ಟೈಲ್ ದರೋಡೆ: ಕೇರಳ ಉದ್ಯಮಿ ಕುಟುಂಬಕ್ಕೆ ಗನ್ ಪಾಯಿಂಟ್ ಶಾಕ್!
ಅಳಕೆ ಮಾರುಕಟ್ಟೆ ಬಳಿ ಕಸ ಸುರಿದ ಮಹಿಳೆಗೆ ₹1,000 ದಂಡ..ಸಾರ್ವಜನಿಕ ಸ್ಥಳದಲ್ಲಿ ಕಸ ಎಸೆದರೆ ದಂಡ ಖಚಿತ! 
ಖಾಸಗಿ ಬಸ್ಸಿನಲ್ಲಿ ಮಹಿಳೆಯ ಮಂಗಳಸೂತ್ರ ಏಗರಿಸಿದ್ರಾ?
ಸರ್ಕಾರಿ ಸ್ವಾಮ್ಯದ ಬೇಲಿ ಕಂಬ ಕಿತ್ತಾಕಲು DYFI ಕುಮ್ಮಕ್ಕು….!
ಒಂದು ಸಹಿ… ಲಕ್ಷಾಂತರ ರೂ. ಹೊಣೆಗಾರಿಕೆಯ ಶಾಕ್!ಸಹಕಾರ ಸಂಸ್ಥೆಯಲ್ಲಿ ನಡೆದ ಅಕ್ರಮದ ಸತ್ಯ ಬಯಲು..
ಆಂಬ್ಯುಲೆನ್ಸ್‌ನಲ್ಲೇ ನಡೆದ ಭೀಕರ ಘಟನೆ… ನಂಬಲು ಕಷ್ಟ, ಆದರೆ ಸತ್ಯ!
ಮೂಡಿಗೆರೆ ತಾಲ್ಲೂಕಿನಲ್ಲಿ ಭಾರಿ ಗಾಳಿ-ಮಳೆ ಅಬ್ಬರ
ಭಾರತ ಮುಸ್ಲಿಂ ದೇಶವಾಗುವುದೇ?- ನಾಳೆ ಪುಸ್ತಕ ಬಿಡುಗಡೆಯ ಕಾರ್ಯಕ್ರಮ
ಮನೆ ಬಾಡಿಗೆ ಕೊಡುವಾಗ ನಿಗಾ ಇರಿಸಲು ಮಾಲಕರಿಗೆ ಎಚ್ಚರಿಕೆ ..!ಗಾಂಜಾ ಸೇವಿಸಿದ ಐದು ನರ್ಸಿಂಗ್ ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ….
ಮಧ್ಯಪ್ರಾಚ್ಯದಲ್ಲಿ ಯುದ್ಧ– ಸಂಕಷ್ಟದಲ್ಲಿ ಜಗತ್ತು-ಉಸಿರು ತಡೆದ ಪರಿಸ್ಥಿತಿ!ಏನಾಗ್ತಾ ಇದೆ…
ಮಹಿಳಾ ಕ್ರಿಕೆಟ್ ವಿಶ್ವಕಪ್ 2026 ಆರಂಭ:ಗಾಯ, ನೋವು, ಟೀಕೆ… ಎಲ್ಲವನ್ನೂ ಮೀರಿ ವಿಶ್ವಕಪ್‌ನಲ್ಲಿ ಭಾರತದ ಮಹಿಳಾ ಪಡೆ!
ಇರಾನ್ ಬಿಕ್ಕಟ್ಟು ವೀಸಾ ವಿಸ್ತರಿಸಲು ವಿದೇಶಿ ಪ್ರಜೆಗಳು ಹತ್ತಿರದ FRRO ಅನ್ನು ಸಂಪರ್ಕಿಸಲು ಭಾರತ ಸಲಹೆ
ಟೆನಿಸ್ ಕೋರ್ಟ್‌ನಲ್ಲಿ ಡಿಸೈನರ್ ಉಡುಪುಗಳ ಧಮಾಕಾ!
ಬ್ರೇಕಿಂಗ್ ನ್ಯೂಸ್
ಜನರ ಹಾಹಾ ಕಾರಕ್ಕೆ ಬೆಚ್ಚಿಬಿದ್ದ ಸರ್ಕಾರ –  ಎಸ್ಮ ಕಾಯ್ದೆ ಜಾರಿಗೆ
ಕೆಲವೊಮ್ಮೆ ದೇಹದ ಶತ್ರು “ಲೂಪಸ್ “ಹೊರಗಿಲ್ಲ… ಒಳಗೇ ಇರುತ್ತದೆ.ಮಹಿಳೆಯರ ದಣಿವು, ಸಂಧಿ ನೋವು, ತೂಕ ಇಳಿಕೆ —. ನಿರ್ಲಕ್ಷ್ಯ ಬೇಡ. ‘ಸಾಮಾನ್ಯ’ ಎಂದು ಕಡೆಗಣಿಸಬೇಡಿ.
ಕಮ್ ಬ್ಯಾಕ್ ಮಾಡಿದ ಮುಂಬೈ ಇಂಡಿಯನ್, ಕ್ಯಾಪ್ಟನ್ ಪ್ರೇರಣೆಗೆ ವರ್ಮಾ ಬ್ಯಾಟಿನಿಂದ  ಮೊದಲ ಸೆಂಚುರಿ
ಆನ್‌ಲೈನ್ ಕೇರಳ ಲಾಟರಿ ಹೆಸರಿನಲ್ಲಿ 1.85 ಲಕ್ಷ ವಂಚನೆ – ಸೈಬರ್ ವಂಚಕರ ಜಾಲ ಪತ್ತೆ
ಬೆಂಗಳೂರಲ್ಲಿ Bowring Hospital ಬಳಿ ಗೋಡೆ ಕುಸಿತ ಮನ ಕಲುಕುವ ಘಟನೆ ಬಿಸಿಲಿನಿಂದ ತಪ್ಪಿಸಿಕೊಳ್ಳಲು ನಿಂತವರು… ಏಳು ಮಂದಿಯ ದುರಂತ ಅಂತ್ಯ.!
“ಅಪ್ರಾಪ್ತ ಅತ್ಯಾಚಾರ ಸಂತ್ರಸ್ತರಿಗೆ ಅಬಾರ್ಷನ್ ಮಾಡಲು ಆದ್ಯತೆ ,ಕಾನೂನು ತಿದ್ದುಪಡಿ”- ಸುಪ್ರೀಂ ಕೋರ್ಟ್
ಗುಜರಾತ್ ಪೊಲೀಸರಲ್ಲಿ ಆಗದ ಕೆಲಸ, ಒಬ್ಬ ಮಂತ್ರವಾದಿಯಿಂದ ಆಯ್ತು