📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ನನ್ನನ್ನು ದುರ್ಬಲ ವ್ಯಕ್ತಿ ಅಂದುಕೊಳ್ಳಬೇಡಿ- U.T ಖಾದರ್

    ನನ್ನ ಸೌಮ್ಯ ಸ್ವಭಾವ ದುರ್ಬಲ ಅಂತ ಅಂದ್ಕೊಬೇಡಿ!’ ಸ್ಪೀಕರ್ ಗರಂ ಆದದ್ದೇಕೆ? ವಿಧಾನಸಭೆಯಲ್ಲಿ ಅಪರೂಪಕ್ಕೆ ಗರಂ ಆದ ಸ್ಪೀಕರ್: “ಉತ್ತರ ಕೊಡದೇ ನಿರ್ಲಕ್ಷ್ಯಮುಂದುವರಿಸಿದರೇ ಕ್ರಮ ಎದಿರಿಸಬೇಕಾಗುತ್ತದೆ ”ಅಂತ ಖಡಕ್ ಆದ ಖಾದರ್ ನೋಡಿ ಒಂದು ಕ್ಷಣ ವಿಧಾನ ಸಭೆ ಗಂಭೀರ…. ಏಕೆ ಅಂತ ಡಿಟೇಲ್ಸ್ ಓದಿ…

    ಬೆಂಗಳೂರು: ಸಾಮಾನ್ಯವಾಗಿ ಸದನದಲ್ಲಿ ಹಾಸ್ಯಪ್ರಿಯವಾಗಿ ಮಾತನಾಡುವ, ಎಲ್ಲರ ಜೊತೆ ಸ್ನೇಹಭಾವದಿಂದ ವರ್ತಿಸುವ ವಿಧಾನಸಭಾಧ್ಯಕ್ಷ U. T. Khader ಶುಕ್ರವಾರ ಸದನದಲ್ಲಿ ಅಪರೂಪದ ಗಂಭೀರ ಧ್ವನಿಯಲ್ಲಿ ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
    ಸದನದಲ್ಲಿ ಕೇಳಲಾಗಿರುವ ಚುಕ್ಕೆ ಗುರುತಿಲ್ಲದ ಪ್ರಶ್ನೆಗಳಿಗೆ (Unstarred Questions) ಸರಿಯಾದ ಸಮಯದಲ್ಲಿ ಉತ್ತರ ನೀಡದೆ ವಿಳಂಬ ಮಾಡುತ್ತಿರುವುದನ್ನು ಅವರು ಕಠಿಣವಾಗಿ ತರಾಟೆಗೆ ತೆಗೆದುಕೊಂಡರು.

    “ನನ್ನ ಸೌಮ್ಯ ಸ್ವಭಾವವನ್ನು ದುರ್ಬಲ ಎಂದು ಯಾರೂ ಭಾವಿಸಬೇಡಿ. ಮುಂದುವರೆದರೆ ಕ್ರಮ ಕೈಗೊಳ್ಳಬೇಕಾಗುತ್ತದೆ,” ಎಂದು ಸ್ಪೀಕರ್ ಖಾದರ್ ಖಡಕ್ ಎಚ್ಚರಿಕೆ ನೀಡಿದ ಕ್ಷಣ ಸದನದಲ್ಲಿ ಕ್ಷಣಕಾಲ ಗಂಭೀರ ವಾತಾವರಣ ನಿರ್ಮಾಣವಾಯಿತು.

    131 ಪ್ರಶ್ನೆಗಳಲ್ಲಿ ಉತ್ತರ ಕೇವಲ 50ಕ್ಕೆ!

    ಪ್ರಶ್ನೋತ್ತರ ಅವಧಿ ಮುಗಿದ ನಂತರ ಸಚಿವ Ramalinga Reddy ಅವರು ಸಂಸದೀಯ ವ್ಯವಹಾರಗಳ ಸಚಿವರ ಪರವಾಗಿ ಚುಕ್ಕೆ ಗುರುತಿಲ್ಲದ ಪ್ರಶ್ನೆಗಳ ಉತ್ತರ ಮಂಡಿಸಿದರು.

    ಆ ವೇಳೆ ಅವರು ನೀಡಿದ ಮಾಹಿತಿಯಂತೆ:
    ಒಟ್ಟು ಕೇಳಲಾದ ಪ್ರಶ್ನೆಗಳು: 131
    ಉತ್ತರ ನೀಡಿದ ಪ್ರಶ್ನೆಗಳು: 50 ಮಾತ್ರ
    ಇನ್ನೂ ಬಾಕಿ ಉಳಿದಿರುವ ಪ್ರಶ್ನೆಗಳು: 81

    ಈ ಮಾಹಿತಿ ಕೇಳುತ್ತಿದ್ದಂತೆಯೇ ಸದನದಲ್ಲಿ ವಿರೋಧ ಪಕ್ಷದಿಂದ ಆಕ್ರೋಶ ವ್ಯಕ್ತವಾಯಿತು.“ಸರ್ಕಾರಕ್ಕೆ ಜಡತ್ವ ಹಿಡಿದಂತಿದೆ!” – ಆರ್. ಅಶೋಕ್ ಕಿಡಿ

    ವಿಧಾನಸಭೆ ಪ್ರತಿಪಕ್ಷ ನಾಯಕ R. Ashoka ಸರ್ಕಾರದ ಕಾರ್ಯಕ್ಷಮತೆಯನ್ನು ತೀವ್ರವಾಗಿ ಪ್ರಶ್ನಿಸಿದರು ,ಅವರೂ ಕಿಡಿಕಾರುತ್ತಾ..:“ಸ್ಪೀಕರ್ ಅವರು ಇದೇ ವಿಷಯವನ್ನು ಮೂರನೇ ಬಾರಿ ಸೂಚಿಸುತ್ತಿದ್ದಾರೆ. ಆದರೆ ಅಧಿಕಾರಿಗಳು ಮತ್ತು ಇಲಾಖೆಗಳಲ್ಲಿ ಯಾವುದೇ ಚಲನೆ ಕಾಣುತ್ತಿಲ್ಲ. ಸರ್ಕಾರಕ್ಕೆ ಜಡತ್ವ ಹಿಡಿದಂತಿದೆ.”

    ಅವರು ಮತ್ತಷ್ಟು ಒತ್ತಿ ಹೇಳಿದ್ದು:
    ಪ್ರಶ್ನೆಗಳಿಗೆ ಉತ್ತರ ನೀಡದೇ ವಿಳಂಬ ಮಾಡುವುದು ಜನಪ್ರತಿನಿಧಿಗಳ ಅವಮಾನ..
    ಅಭಿವೃದ್ಧಿ ಕಾರ್ಯಗಳ ಪ್ರಗತಿ ಕುರಿತು ಸ್ಪಷ್ಟತೆ ಇಲ್ಲ.
    ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಗಂಭೀರವಾಗಿ ಕೆಲಸ ಮಾಡುತ್ತಿಲ್ಲ.

    ಅಂತೂ ಸದನದಲ್ಲಿ ಶುಕ್ರವಾರದ ಘಟನೆ ಒಂದು ಸ್ಪಷ್ಟ ಸಂದೇಶ ನೀಡಿದೆ: “ಅಧಿಕಾರಿಗಳು ಜವಾಬ್ದಾರಿಯಾಗಬೇಕು”

    ಜನಪ್ರತಿನಿಧಿಗಳ ಪ್ರಶ್ನೆಗಳಿಗೆ ಸಮಯಕ್ಕೆ ಸರಿಯಾಗಿ ಉತ್ತರ ಅಗತ್ಯ, ಅಧಿಕಾರಿಗಳ ನಿರ್ಲಕ್ಷ್ಯ ಸಹಿಸಲಾಗುವುದಿಲ್ಲ, ಸದನದ ಗೌರವ ಕಾಪಾಡುವುದು ಎಲ್ಲರ ಜವಾಬ್ದಾರಿ

    ಸಾಮಾನ್ಯವಾಗಿ ಹಾಸ್ಯಪ್ರಿಯ ವ್ಯಕ್ತಿತ್ವ ಹೊಂದಿರುವ ಸ್ಪೀಕರ್ U. T. Khader ಈ ಬಾರಿ ಗಂಭೀರವಾಗಿ ಎಚ್ಚರಿಕೆ ನೀಡಿರುವುದು ಅಧಿಕಾರಿಗಳಿಗೆ ಸ್ಪಷ್ಟ ಸಂದೇಶ ನೀಡಿದಂತಾಗಿದೆ.

    “ಫಾಲೋಅಪ್ ಇಲ್ಲದಿದ್ದರೆ ವರ್ಷವಾದರೂ ಉತ್ತರ ಇಲ್ಲ!”

    ಸ್ಪೀಕರ್ U. T. Khader ಅಧಿಕಾರಿಗಳ ನಿರ್ಲಕ್ಷ್ಯದ ಕುರಿತು ಸ್ಪಷ್ಟವಾಗಿ ಹೇಳಿದರು:
    ಅನೇಕ ಪ್ರಶ್ನೆಗಳಿಗೆ ವರ್ಷವಾದರೂ ಉತ್ತರ ಇಲ್ಲ.
    ಉಪಸಭಾಧ್ಯಕ್ಷರ ನೇತೃತ್ವದಲ್ಲಿ ಸಮಿತಿ ರಚಿಸಿದರೂ ಫಲಿತಾಂಶ ಇಲ್ಲ.
    ಅಧಿಕಾರಿಗಳಿಂದ ಫಾಲೋಅಪ್ ಕೊರತೆ.

    “ಸಿಎಂ ಗಮನಕ್ಕೆ ತರುತ್ತೇವೆ” – ಗೃಹ ಸಚಿವ ಪರಮೇಶ್ವರ್

    ಸರ್ಕಾರದ ಪರವಾಗಿ ಪ್ರತಿಕ್ರಿಯಿಸಿದ ಗೃಹ ಸಚಿವ G. Parameshwara ಸಮಸ್ಯೆಯನ್ನು ಒಪ್ಪಿಕೊಂಡು ,ಸ್ಪೀಕರ್ ಅಪರೂಪಕ್ಕೆ ಗಟ್ಟಿಯಾಗಿ ಮಾತನಾಡಿದ್ದಾರೆ,ಸಮಸ್ಯೆ ನಿಜವಾಗಿಯೂ ಇದೆ,ಈ ವಿಷಯವನ್ನು ಮುಖ್ಯಮಂತ್ರಿಯ ಗಮನಕ್ಕೆ ತರಲಾಗುತ್ತದೆ ಎಲ್ಲಾ ಸಚಿವಾಲಯಗಳಿಗೆ ಸೂಚನೆ ನೀಡಿ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

    ಜನರ ಪ್ರಶ್ನೆಗಳಿಗೆ ಉತ್ತರವೇ ಇಲ್ಲವಾದರೆ ಅಭಿವೃದ್ಧಿ ಹೇಗೆ?

    ವಿಧಾನಸಭೆಯಲ್ಲಿ ಕೇಳಲಾಗುವ ಪ್ರಶ್ನೆಗಳು ಸಾಮಾನ್ಯ ರಾಜಕೀಯ ವಿಷಯಗಳಷ್ಟೇ ಅಲ್ಲ. ಅವುಗಳಲ್ಲಿ:
    ರಸ್ತೆ ಅಭಿವೃದ್ಧಿ
    ಕುಡಿಯುವ ನೀರು
    ಶಾಲೆ ಮತ್ತು ಆಸ್ಪತ್ರೆಗಳ ಸಮಸ್ಯೆ
    ಗ್ರಾಮಗಳ ಮೂಲಸೌಕರ್ಯ
    ಯೋಜನೆಗಳ ಪ್ರಗತಿ…
    ಇಂತಹ ಜನಸಾಮಾನ್ಯರಿಗೆ ಸಂಬಂಧಿಸಿದ ಪ್ರಶ್ನೆಗಳು ಸೇರಿರುತ್ತವೆ.ಆ ಪ್ರಶ್ನೆಗಳಿಗೆ ಉತ್ತರವೇ ಸಿಗದಿದ್ದರೆ, ಜನರ ಸಮಸ್ಯೆಗಳ ಪರಿಹಾರವೂ ವಿಳಂಬವಾಗುತ್ತದೆ ಎಂಬ ಆತಂಕ ವ್ಯಕ್ತವಾಗುತ್ತಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಭಾರತೀಯರ ಟ್ರಾವೆಲ್ ಲಿಸ್ಟ್‌ನಿಂದ ಯುರೋಪ್ ಔಟ್.. ಲಂಡನ್, ಪ್ಯಾರಿಸ್ ಬಿಟ್ಟು ಥೈಲ್ಯಾಂಡ್, ಮಲೇಷ್ಯಾ ಜಪಾನ್‌ನತ್ತ ಪ್ರವಾಸಿಗರ ದಂಡು ..
    ಅಮೆರಿಕಾ ವಿರುದ್ಧ ‘ಪೈರಸಿ’ ಆರೋಪ: ಇರಾನ್ ಯುಎನ್‌ಗೆ ದೂರು
    ಗೃಹ ಸಚಿವರಾದ ಜಿ ಪರಮೇಶ್ವರ್ ರವರ ಒಡೆತನದ ಸಂಸ್ಥೆಯಲ್ಲಿ ನಡೆದಿದೆ ಎಂಬ ವಿಡಿಯೋ ವೈರಲ್….!
    ಬಿಡದಿ “ಸಮಗ್ರ ಉಪನಗರ” ಯೋಜನೆ ಕೈಬಿಡಿ: ಸಿಎಂ ಡಿಕೆ ಶಿಗೆ ಎಚ್.ಡಿ. ದೇವೇಗೌಡ ಪತ್ರ
    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಮಚ್ಚು ದಾಳಿ: ಕಾಲೇಜಿಗೆ ತೆರಳುತ್ತಿದ್ದ ಪಿಯುಸಿ ವಿದ್ಯಾರ್ಥಿನಿ ಮೇಲೆ ಹಲ್ಲೆ; ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು
    ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ!
    ನೇಪಾಳ ಪ್ರವಾಹ: ಪ್ರಧಾನಿ ನರೇಂದ್ರ ಮೋದಿಯವರಿಂದ ಸಂತಾಪ- ನೇಪಾಳ ಪ್ರಧಾನಿಗೆ ಸಹಕಾರದ ಭರವಸೆ
    ಕಾಂಚನಾ ಟೆಕ್ಸ್‌ಟೈಲ್ಸ್ ಮ್ಯಾನೇಜರ್ ದಿನೇಶ್ ರಾಜ್ ಕೊಲೆ ಆರೋಪಿ 11 ವರ್ಷ ಬಳಿಕ ಅರೆಸ್ಟ್..!
    ಕೋರ್ಟ್‌ ಮೆಟ್ಟಿಲು ಹತ್ತಿ ಸುಸ್ತಾದವರಿಗೆ ಆಸರೆಯಾದ ‘ಅದಾಲತ್‌’: ಮತ್ತೆ ಒಂದಾದ ನೂರಾರು ದಂಪತಿಗಳು,₹3,000 ಕೋಟಿ ಪರಿಹಾರ,ದಾಖಲೆಯ 78.79 ಲಕ್ಷ ಕೇಸ್‌ಗಳಿಗೆ ಶಾಶ್ವತ ಮುಕ್ತಿ!
    2027ರಿಂದ YouTube ಹೊಸ ರೂಲ್ಸ್..ಕ್ರಿಯೇಟರ್‌ಗಳಿಗೆ ಶಾಕ್!YouTube Monetization ಕಠಿಣ!
    ಉಡುಪಿಯ ಆರು ತಹಶೀಲ್ದಾರ್ ಕಚೇರಿಗಳಿಗೆ ಲೋಕಾಯುಕ್ತ ಪೊಲೀಸರ ದಾಳಿ… ದಾಳಿಯ ಬಿಸಿ ತಟ್ಟುತ್ತದಾ ಅಧಿಕಾರಿಗಳಿಗೆ?
    ಬೆಳಗಾವಿ ₹4500 ಕೋಟಿ ವಂಚನೆ ಪ್ರಕರಣ – CID ತನಿಖೆಯಿಂದ ಹೊರಬರುತ್ತಿರುವ ಕತ್ತಲೆಯ ಜಾಲ – ಯಾರು ನಿಜವಾದ ಮಾಸ್ಟರ್ ಮೈಂಡ್?
    ಬಿಡದಿ ಟೌನ್‌ಶಿಪ್ ಯೋಜನೆ ಜಾರಿಗೆ ಸ್ಥಳೀಯ ರೈತರಿಂದಲೇ ಆಗ್ರಹ
    ವೈರಲ್ ‘Reservation Hatao Movement’ ಹಿಂದೆ ಏನಿದೆ? 7 ಗಂಟೆಗಳಲ್ಲಿ 90 ಸಾವಿರದಿಂದ 4 (40ಲಕ್ಷ) ಮಿಲಿಯನ್ ಫಾಲೋವರ್ಸ್‌! ಮೀಸಲಾತಿ ವಿರುದ್ಧದ ಅಭಿಯಾನಕ್ಕೆ ದೇಶಾದ್ಯಂತ ಭಾರೀ ಬೆಂಬಲ..
    ಹೋಳಿ ಮತ್ತು ರಂಜಾನ್ ಒಂದು ಜೀವವನ್ನೇ ನುಂಗಿತು..!
    ಮಾಜಿ ಮುಖ್ಯಮಂತ್ರಿಯ ಮೇಲೆ ಗುಂಡಿನ ದಾಳಿ,- Z+ ಭದ್ರತೆಯ ನಡುವೆ ದಾಳಿಕೋರ ಹೇಗೆ  ಬಂದ?
    🚨 ಮಂಗಳೂರು ನಿವಾಸಿಗಳಿಗೆ ಮಹತ್ವದ ಮಾಹಿತಿ – 2026 ಘನತ್ಯಾಜ್ಯ ನಿರ್ವಹಣೆ ಹೊಸ ನಿಯಮ  🚨
    ಒಂದು ದೇಶವನ್ನೇ ಮಟ್ಟಾಶ್ ಮಾಡುವಷ್ಟು ನ್ಯೂಕ್ಲಿಯರ್ ಪವರ್ stock ಇರಾನ್ನಲ್ಲಿ ಇದ್ಯಾ !?
    ಇಂದು ಆನ್‌ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಆಕ್ರೋಶ!ದಕ್ಷಿಣ ಕನ್ನಡದಲ್ಲಿ 1100 ಮೆಡಿಕಲ್ ಶಾಪ್ ಬಂದ್!
    ಬಂಗಾಳದಲ್ಲಿ ಬಿಜೆಪಿಯ ಯುದ್ಧೋನ್ಮಾದ, ದೀದಿಯ ರಚ್ಚೆ…
    book ಮಾಡಿದ ನಿಮ್ಮ ಹೊಸ ಕಾರು-ಬೈಕ್ ಇನ್ನೂ ಬಂದಿಲ್ವಾ?ಪಶ್ಚಿಮ ಏಷ್ಯಾ ಯುದ್ಧದಿಂದ ಸರಬರಾಜು ವಿಳಂಬ…!
    ಅಲ್ಪಸಂಖ್ಯಾತರ ಘಟಕ ಬರ್ಕಾಸ್ತು- ಡಿಕೆ ಶಿವಕುಮಾರ್ ಗಟ್ಟಿ ನಿರ್ಧಾರ.
    ದಾವಣಗೆರೆ & ಬಾಗಲಕೋಟೆ ಬೈಎಲೆಕ್ಷನ್ ಬಿಗ್ ಬ್ಲಾಸ್ಟ್!
    ಪುತ್ತೂರು ಘಟನೆ ಚಾಕು ಕಂಡು ಆತಂಕ…ಏನಾಯಿತು?ತನಿಖೆಯಲ್ಲಿ ಬಯಲಾಯ್ತು ಮತ್ತೊಂದು ಸತ್ಯ!
    ಸಚಿನ್ ತೆಂಡೂಲ್ಕರ್ ಮಗಳ ಜಪಾನೀಸ್ ಕನೆಕ್ಷನ್ ಈಗ ದೇಶದ ಗಮನ ಸೆಳೆಯುತ್ತಿದೆ…ಸಾರಾ ಹೊಸ ಒಪ್ಪಂದ ಚರ್ಚೆಯಲ್ಲಿ
    ಕುಡಿತದ ಅಮಲಿನಲ್ಲಿ ಹೆತ್ತ ತಾಯಿಯನ್ನೇ ಕೊಂದ ಮಗಳು, ಮೊಮ್ಮಗ: ಕೆಂಗೇರಿಯಲ್ಲಿ ಕರುಳು ಹರಿಯುವ ಕೃತ್ಯ!
    ಇನ್ಮುಂದೆ ಗೂಗಲ್‌ನಲ್ಲಿ ನಿಮ್ಮ ಹಳೆಯ ಕೋರ್ಟ್ ಕೇಸ್‌ಗಳ ವಿವರಗಳನ್ನುಮರೆಮಾಡಬಹುದು-ದೆಹಲಿ ಹೈಕೋರ್ಟ್ ಗೈಡ್‌ಲೈನ್ಸ್ ರಿಲೀಸ್! 
    ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಹಿಗ್ಗಾಮುಗ್ಗ ಜಾಡಿಸಿದ ಹೆಚ್ ವಿಶ್ವನಾಥ್
    ದೈವದ ನ್ಯಾಯ ತಡವಾಗಬಹುದು… ಆದರೆ ತಪ್ಪದು!”ತುಳುನಾಡಿನ ದೈವಶಕ್ತಿ – ನಂಬಿಕೆಗೆ ಸಾಕ್ಷಿಯಾದ ನಿಜಘಟನೆ ..
    ಅಪ್ಪ -ಅಮ್ಮ ಮಕ್ಕಳ–ಬಾಂಧವ್ಯಕ್ಕೆ ಎಚ್ಚರಿಕೆಯ ಗಂಟೆ……!ಸುತ್ತಿಗೆಯಿಂದ ಹೊಡೆದು ತಂದೆ-ತಾಯಿಯನ್ನೇ ಕೊಂದ ಮಗ!