📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ನಾರ್ವೇ ಪತ್ರಕರ್ತರಿಗೆ ತಿರುಗೇಟು: “ಭಾರತದ ವಾಸ್ತವತೆ ಅರಿವಿಲ್ಲ” ಎಂದ MEA ಕಾರ್ಯದರ್ಶಿ ಸಿಬಿ ಜಾರ್ಜ್…

ನವದೆಹಲಿ: ಭಾರತದ ಪತ್ರಿಕಾ ಸ್ವಾತಂತ್ರ್ಯ ಮತ್ತು ಮಾನವ ಹಕ್ಕುಗಳ ಕುರಿತು ನಾರ್ವೇ ಮೂಲದ ಪತ್ರಕರ್ತರು ಕೇಳಿದ ಪ್ರಶ್ನೆಗಳಿಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯದ (MEA) ಕಾರ್ಯದರ್ಶಿ (ಪಶ್ಚಿಮ) Sibi George ತೀಕ್ಷ್ಣ ಪ್ರತಿಕ್ರಿಯೆ ನೀಡಿದರು. “ಕೆಲವು ಅಜ್ಞಾನಿ ಎನ್‌ಜಿಒಗಳ ವರದಿಗಳನ್ನು ಓದಿ ಭಾರತವನ್ನು ಅಳೆಯಲು ಸಾಧ್ಯವಿಲ್ಲ” ಎಂದು ಅವರು ಕಿಡಿಕಾರಿದರು.

“ಭಾರತದ ಪ್ರಮಾಣವೇ ಅರ್ಥವಾಗಿಲ್ಲ”

ಸೋಮವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸಿಬಿ ಜಾರ್ಜ್, ಭಾರತದ ಮಾಧ್ಯಮ ವ್ಯವಸ್ಥೆಯ ವ್ಯಾಪ್ತಿಯನ್ನು ಉಲ್ಲೇಖಿಸಿ, ಪಾಶ್ಚಾತ್ಯ ದೇಶಗಳ ಹಲವು ವೀಕ್ಷಣೆಗಳು ಭಾರತದ ನೈಜ ಪರಿಸ್ಥಿತಿಯನ್ನು ಪ್ರತಿಬಿಂಬಿಸುವುದಿಲ್ಲ ಎಂದರು.

“ದೆಹಲಿ ನಗರದಲ್ಲೇ 200 ಕ್ಕೂ ಹೆಚ್ಚು ಟಿವಿ ಚಾನೆಲ್‌ಗಳಿವೆ. ಇಂಗ್ಲಿಷ್, ಹಿಂದಿ ಹಾಗೂ ಅನೇಕ ಭಾರತೀಯ ಭಾಷೆಗಳಲ್ಲಿ ಪ್ರತಿದಿನ ಸಾವಿರಾರು ಸುದ್ದಿಗಳು ಪ್ರಸಾರವಾಗುತ್ತಿವೆ. ಭಾರತದ ವೈವಿಧ್ಯ ಮತ್ತು ಪ್ರಮಾಣವನ್ನು ಅನೇಕರು ಅರ್ಥಮಾಡಿಕೊಂಡಿಲ್ಲ,” ಎಂದು ಹೇಳಿದರು.

ಅವರು ಮುಂದುವರಿದು,
“ಕೆಲವರು ಏನೋ ಅಪರಿಚಿತ, ಅಜ್ಞಾನಿ ಎನ್‌ಜಿಒಗಳ ವರದಿಗಳನ್ನು ಓದಿ ಭಾರತ ಬಗ್ಗೆ ಪ್ರಶ್ನೆ ಕೇಳುತ್ತಾರೆ. ಅದರಿಂದ ದೇಶದ ವಾಸ್ತವ ಸ್ಥಿತಿ ಅರ್ಥವಾಗುವುದಿಲ್ಲ,” ಎಂದು ತಿರುಗೇಟು ನೀಡಿದರು.


ಸಂವಿಧಾನ ಮತ್ತು ಹಕ್ಕುಗಳ ಕುರಿತು ಭಾರತದ ನಿಲುವು

ಭಾರತದಲ್ಲಿ ಮೂಲಭೂತ ಹಕ್ಕುಗಳಿಗೆ ಸಂವಿಧಾನಿಕ ರಕ್ಷಣೆಯಿದೆ ಎಂದು MEA ಸ್ಪಷ್ಟಪಡಿಸಿದೆ.
ಸಿಬಿ ಜಾರ್ಜ್ ಮಾತನಾಡುತ್ತಾ,

“ನಮ್ಮ ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ಮೂಲಭೂತ ಹಕ್ಕುಗಳನ್ನು ನೀಡುತ್ತದೆ. ಮಹಿಳೆಯರಿಗೂ ಸಮಾನ ಹಕ್ಕುಗಳಿವೆ. ಹಕ್ಕು ಉಲ್ಲಂಘನೆಯಾದರೆ ಕಾನೂನು ಪರಿಹಾರ ಪಡೆಯುವ ವ್ಯವಸ್ಥೆಯೂ ಇದೆ,” ಎಂದರು.

ಮಹಿಳಾ ಮತಹಕ್ಕಿನ ಉದಾಹರಣೆ

ಭಾರತವು ಸ್ವಾತಂತ್ರ್ಯ ಪಡೆದ ತಕ್ಷಣವೇ ಮಹಿಳೆಯರಿಗೆ ಮತದಾನದ ಹಕ್ಕು ನೀಡಿದುದನ್ನು ಅವರು ವಿಶೇಷವಾಗಿ ಉಲ್ಲೇಖಿಸಿದರು.

“1947ರಲ್ಲೇ ಭಾರತೀಯ ಮಹಿಳೆಯರಿಗೆ ಮತದಾನದ ಹಕ್ಕು ದೊರಕಿತು. ಅನೇಕ ರಾಷ್ಟ್ರಗಳಲ್ಲಿ ಈ ಹಕ್ಕು ಹಲವು ದಶಕಗಳ ಬಳಿಕ ಬಂದಿತ್ತು. ಭಾರತ ಸಮಾನತೆ ಮತ್ತು ಮಾನವ ಹಕ್ಕುಗಳ ಮೇಲೆ ನಂಬಿಕೆ ಇಟ್ಟುಕೊಂಡಿದೆ,” ಎಂದು ಹೇಳಿದರು.


“ಸರ್ಕಾರ ಬದಲಿಸುವ ಹಕ್ಕೇ ದೊಡ್ಡ ಮಾನವ ಹಕ್ಕು”

ಭಾರತೀಯ ಪ್ರಜಾಪ್ರಭುತ್ವವನ್ನು ಮೆಚ್ಚಿಕೊಂಡ ಸಿಬಿ ಜಾರ್ಜ್, ಚುನಾವಣೆಗಳ ಮಹತ್ವವನ್ನು ಒತ್ತಿಹೇಳಿದರು.

“ಜನರು ಸರ್ಕಾರವನ್ನು ಬದಲಿಸುವ ಹಕ್ಕು ಹೊಂದಿರುವುದು ಅತ್ಯಂತ ದೊಡ್ಡ ಮಾನವ ಹಕ್ಕು. ಮತದಾನದ ಮೂಲಕ ಜನರು ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಾರೆ. ಭಾರತದಲ್ಲಿ ಇದು ಯಶಸ್ವಿಯಾಗಿ ನಡೆಯುತ್ತಿದೆ ಎಂಬುದಕ್ಕೆ ನಾವು ಹೆಮ್ಮೆಪಡುತ್ತೇವೆ,” ಎಂದರು.


ವಿವಾದಕ್ಕೆ ಕಾರಣವಾದ ಪ್ರಶ್ನೆಗಳು

ಈ ಸಂಭಾಷಣೆ ವೇಳೆ ನಾರ್ವೇ ಪತ್ರಕರ್ತರು ಭಾರತದಲ್ಲಿನ ಪತ್ರಿಕಾ ಸ್ವಾತಂತ್ರ್ಯ, ಎನ್‌ಜಿಒಗಳ ವರದಿಗಳು ಮತ್ತು ಮಾನವ ಹಕ್ಕುಗಳ ಪರಿಸ್ಥಿತಿ ಕುರಿತು ಪ್ರಶ್ನೆ ಎದುರಾಗಿ… ಅದಕ್ಕೆ ಉತ್ತರಿಸಿದ ವೇಳೆ ಸಿಬಿ ಜಾರ್ಜ್ ಅವರ ಮಾತುಗಳು ತೀಕ್ಷ್ಣವಾಗಿದ್ದು, ಇದೀಗ ರಾಜಕೀಯ ಹಾಗೂ ರಾಜತಾಂತ್ರಿಕ ವಲಯಗಳಲ್ಲಿ ಚರ್ಚೆಗೆ ಗ್ರಾಸವಾಗಿವೆ.

##India #MEA #SibiGeorge #PressFreedom #HumanRights #IndianDemocracy #NorwayMedia #BreakingNews

COMMENTS

Login with Gmail to comment

ಇನ್ನಷ್ಟು ಸುದ್ದಿ

ಬೆಳಗಾವಿ ₹4500 ಕೋಟಿ ವಂಚನೆ ಪ್ರಕರಣ – CID ತನಿಖೆಯಿಂದ ಹೊರಬರುತ್ತಿರುವ ಕತ್ತಲೆಯ ಜಾಲ – ಯಾರು ನಿಜವಾದ ಮಾಸ್ಟರ್ ಮೈಂಡ್?
ಧುರಂಧರ್ 2 ಕ್ರೇಜ್ ಓವರ್‌ಫ್ಲೋ ಕಲೆಕ್ಷನ್‌ನಲ್ಲಿಕರ್ನಾಟಕವೇ ಟಾಪ್… ದಕ್ಷಿಣ ಭಾರತದಲ್ಲಿ 300 ಕೋಟಿ ಕ್ಲಬ್!
ಅಮೇರಿಕಾ ಅಧ್ಯಕ್ಷರ ಮೇಲೆ ಎರಡನೆಯ ಬಾರಿ ಗುಂಡಿನ ದಾಳಿ
ಆಂಬ್ಯುಲೆನ್ಸ್‌ನಲ್ಲೇ ನಡೆದ ಭೀಕರ ಘಟನೆ… ನಂಬಲು ಕಷ್ಟ, ಆದರೆ ಸತ್ಯ!
ಸ್ಕ್ಯಾಮರ್‌ಗೆ 60 ಸೆಕೆಂಡ್ ಸಾಕು… RBIಗೆ ಈಗ 60 ನಿಮಿಷ ಬೇಕಂತೆ!ಹಣ ಕಳಿಸುವ ಮುನ್ನ ಯೋಚಿಸಲು 1 ಗಂಟೆ!
ಪುತ್ತೂರಿನ ಕೃಷ್ಣ ಜೆ. ರಾವ್ ಪ್ರಕರಣಕ್ಕೆ ಹೈಕೋರ್ಟ್ ಬ್ರೇಕ್!“ಮಧ್ಯಂತರ ತೀರ್ಪು: ₹75K ತಿಂಗಳ ಸಹಾಯ ಷರತ್ತು”
ರಾಜ್ಯಸಭೆಗೆ ಬಿಜೆಪಿಯಿಂದ 9 ಜನರ ಪಟ್ಟಿ ಬಿಡುಗಡೆ
ನನ್ನನ್ನು ದುರ್ಬಲ ವ್ಯಕ್ತಿ ಅಂದುಕೊಳ್ಳಬೇಡಿ- U.T ಖಾದರ್
ಅಸ್ಸಾಂನಲ್ಲಿ ಮತದಾನದ ಹಿನ್ನೆಲೆ ಹಿಂಸಾಚಾರ: 30ಕ್ಕೂ ಹೆಚ್ಚು ಮಂದಿ ಗಾಯ, 7 ಜನರ ಬಂಧನ
ಕೂತ್ಕೊಳಪ್ಪ ಡಿಕೆಶಿ ನಿಂದೆ ಖುರ್ಚಿ … ಅಂತ CM ಸಿದ್ದು ಯಾವಾಗ ಹೇಳ್ಬೇಕಿತ್ತು??ಅಹಿಂದ ಮಾಸ್ ಲೀಡರ್ ವರ್ಸಸ್ ಮನಿ ಮ್ಯಾನ್..ಕರ್ನಾಟಕ ರಾಜಕಾರಣದ ಅತಿ ದೊಡ್ಡ ಟ್ವಿಸ್ಟ್!
ಬಂಗಾಳ ರಾಜಕೀಯದಲ್ಲಿ ಭಾರಿ ಟ್ವಿಸ್ಟ್ ಮೇಲೆ ಟ್ವಿಸ್ಟ್..! ಸುವೇಂದು ಪ್ರಮಾಣವಚನಕ್ಕೂ ಬ್ರೇಕ್ ಬೀಳುತ್ತಾ?ಸುಪ್ರೀಂ ಕೋರ್ಟ್ ಎಂಟ್ರಿ ಆಗುತ್ತಾ?
ವಿಷ ಸೇವನೆ ಸ್ವಯಂ ಆಗಿತ್ತೇ ಅಥವಾ ಪ್ರಚೋದನೆ ಕಾರಣವೇ ….?!
ವಿಶ್ವದ ನಂಬರ್ ವನ್ ಜನನಾಯಕನಾದ ಪ್ರಧಾನಿ ಮೋದಿ
ಟೆನಿಸ್ ಕೋರ್ಟ್‌ನಲ್ಲಿ ಡಿಸೈನರ್ ಉಡುಪುಗಳ ಧಮಾಕಾ!
ಸಂಸತ್ತಿನಲ್ಲಿ ಇತಿಹಾಸ ಸೃಷ್ಟಿಸುವ ಚರ್ಚೆ-ಮಹಿಳಾ ಮೀಸಲು ಬಿಲ್ಲಿನ ಸುತ್ತ ಕಂಗೊಳಿಸಿದ ಸಂಸತ್ !
ಟ್ರಂಪ್ ಮೇಲೆ ದಾಳಿ ಯತ್ನ -ಗನ್ ಸದ್ದು ಮತ್ತೆ ವೈಟ್ ಹೌಸ್ ರಾಜಕೀಯವನ್ನ ನಡುಗಿಸಿದೆ!ಭದ್ರತಾ ಪ್ರಶ್ನೆ!
Top 5, ಹೆಚ್ಚು ಅನುದಾನ ಪಡೆದ ಇಲಾಖೆಗಳು ಯಾವವು ಗೊತ್ತಾ?
ಒಂದು ದಿನ ಕೈದಿ ಆಗ್ಬೇಕಾ? ಜೈಲು ಜೀವನ ಹೇಗಿರುತ್ತೆ ಅನ್ನೋ ಕುತೂಹಲಕ್ಕೀಗ ಚಂಚಲ್‌ಗುಡ ಜೈಲು ಬಾಗಿಲು ಈಗ ಸಾರ್ವಜನಿಕರಿಗೆ ಓಪನ್!
ಮಂಗಳೂರುಗೆ ಹೈಕೋರ್ಟ್ ಸರ್ಕ್ಯೂಟ್ ಬೆಂಚ್: ಕರಾವಳಿಗೆ ಐತಿಹಾಸಿಕ ನ್ಯಾಯಾಂಗ ಶಕ್ತಿ ನೀಡುವ ಮಹತ್ವದ ಹೆಜ್ಜೆ..
ಅಕ್ರಮ ಮರಳುಗಾರಿಕೆ, ಕ್ರಮ ಕೈಗೊಂಡ ವೇಣೂರು ಪೊಲೀಸರು
ಕಣ್ಣೀರಾದ ಕಣ್ಣಾಲಿಗಳು ಹೊಟ್ಟೆ ತುಂಬಾ ಊಟ ಮಾಡಿ ನಿದ್ರಿಸುವಂತೆ ಮಾಡುವ  “ಕಾರುಣ್ಯ ಸೇವಾಕ್ಕೀಗ 3000 ದಿನಗಳು…!!!”
MRPL ವಿರುದ್ಧ ಜನಹೋರಾಟದ ಎಚ್ಚರಿಕೆ – ಮೇ 1ರಿಂದ ಅನಿರ್ದಿಷ್ಟ ಧರಣಿಗೆ ಸಮಿತಿ ಸಜ್ಜು..
ಎಲ್ಪಿಜಿ ಗ್ಯಾಸ್ ದರದಲ್ಲಿ ಏರಿಕೆ:  ಮಧ್ಯಮ ವರ್ಗದವರಲ್ಲಿ ಹತಾಶೆ
ಡ್ರೋನ್ ದಾಳಿಯ ನಂತರ ಬಹ್ರೇನ್‌ನಲ್ಲಿ ಕನಿಷ್ಠ 32 ಜನರಿಗೆ ಗಾಯ
ಒಂದು ಚಿನ್ನದ ಸರಕ್ಕಾಗಿ ನಿದ್ರೆಯಲ್ಲಿದ್ದ ಗೆಳತಿಯನ್ನೇ ಕೊಲ್ಲಲೆತ್ನಿಸಿದ ಆಕೆಗೆ ಜೈಲೆ ಗತಿ …..ನಂಬಿಕೆಯೇ ರಕ್ತಸಿಕ್ತವಾದ ಮಣಿಪಾಲದ ಭೀಕರ ಘಟನೆ…
ಜನಪ್ರಿಯ “ಶಕ್ತಿ ಯೋಜನೆ” ವಿಫಲಗೊಳಿಸಲು ಸಂಚು!
ಡಿಕೆಎಮುಲ್‌ನಿಂದ ₹1,270 ಕೋಟಿ ದಾಖಲೆ ಬೆಳವಣಿಗೆ ಹೊಸ ಮೈಲುಗಲ್ಲು..!
ಒಂದು ದೇಶವನ್ನೇ ಮಟ್ಟಾಶ್ ಮಾಡುವಷ್ಟು ನ್ಯೂಕ್ಲಿಯರ್ ಪವರ್ stock ಇರಾನ್ನಲ್ಲಿ ಇದ್ಯಾ !?
ಜೈಲಿನೊಳಗೆ ಮೊಬೈಲ್ ಮಾಫಿಯಾ: ಖತರ್ನಾಕ್ ಐಡಿಯಾ..!
 ಮಗಳ ಗಂಡನೇ …ಅತ್ತೆಯ ಗಂಡ! ಹೌದು…ಅಳಿಯ-ಅತ್ತೆಯ ಪ್ರೇಮಕಥೆ ವೈರಲ್!ಕುಟುಂಬ ಸಂಬಂಧಗಳೇ ತಲೆಕೆಳಗು! ಉತ್ತರ ಪ್ರದೇಶದ ಈ ಮದುವೆ ಹಿಂದಿನ ರಹಸ್ಯ ಏನು?