📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ನಾಲ್ಕು ಮಕ್ಕಳನ್ನು ಹೆತ್ತ ಮಹಾತಾಯಿ, ಸದ್ಯಕ್ಕೆ ತಾಯಿ ಮಕ್ಕಳು ಸೇಫ್

ಐದು ದಿನದ ಮೊದಲು ಒಂದು ಗಂಡು ಮಗುವಿಗೆ ಜನ್ಮವಿತ್ತ ಆ ಮಹಾತಾಯಿ, ಮತ್ತೆ ಮೂವರು ಮಕ್ಕಳಿಗೆ ಜನ್ಮ ನೀಡುವ ಮೂಲಕ ನಾಲ್ವರು ಮಕ್ಕಳ ತಾಯಿಯಾಗಿ ಕಾಣಿಸಿಕೊಂಡಿದ್ದಾಳೆ. ಆಸ್ಪತ್ರೆಯ ಡಾಕ್ಟರ್ ಹಾಗೂ ಸಿಬ್ಬಂದಿಗಳು ಅಪಾಯಕಾರಿ ಸನ್ನಿವೇಶದಲ್ಲಿದ್ದ ತಾಯಿ ಮಕ್ಕಳಿಬ್ಬರನ್ನು ಯಾವುದೇ ರೀತಿಯ ಶಸ್ತ್ರಚಿಕಿತ್ಸೆ ಇಲ್ಲದೆ ನಾರ್ಮಲ್ ಡೆಲಿವರಿಯ ಮೂಲಕ ಹೆರಿಗೆ ಮಾಡಿಸಿದ್ದು ಮತ್ತಷ್ಟು ಅಚ್ಚರಿಗೆ ಕಾರಣವಾಗಿದೆ.

Ai ಫೋಟೋಗಳು

ಇದು ನಡೆದದ್ದು ಉತ್ತರ ಪ್ರದೇಶದ ಸಂಬಾಲ್ ಜಿಲ್ಲೆಯಲ್ಲಿ. ಇಲ್ಲಿನ ಓವರಿ ಗ್ರಾಮದ ನಿವಾಸಿ ಅಮೀನಾ ಎಂಬ ಹೆಣ್ಣುಮಗಳೇ ಈಗ ನಾಲ್ಕು ಮಕ್ಕಳ ತಾಯಿಯಾಗಿ ಆರೋಗ್ಯವಂತಳಾಗಿರುವವಳು.

ಮೇ 8ರಂದು ಇಲ್ಲಿನ ಲೋದಿಪುರ ತೀರ್ಥಂಕೇಶ ಮಹಾವೀರ ವಿಶ್ವವಿದ್ಯಾಲಯದ ಆಸ್ಪತ್ರೆಗೆ ಹೆರಿಗೆಗಾಗಿ ಆಗಮಿಸುತ್ತಾಳೆ ಈ ಮಹಾತಾಯಿ. ಇದೇ ಆಸ್ಪತ್ರೆಯಲ್ಲೇ ಹಲವು ಬಾರಿ  ಚಿಕಿತ್ಸೆಯನ್ನು ಪಡೆದಿರುವಂತಹ ಅಮೀನಾ, ಮೇ ಎಂಟರಂದು ನೋವು ಕಾಣಿಸಿ ಕೊಳ್ಳುತ್ತಿದ್ದಂತೆಯೇ ಆಸ್ಪತ್ರೆಗೆ ಬಂದು ಅಡ್ಮಿಟ್ ಆಗುತ್ತಾಳೆ. ಮೊದಲೇ, ನಾಲ್ಕು ಮಗು ಇರುವ ವಿಚಾರವನ್ನು ಅಮೀನಾ ಹಾಗು ಅವರ ಕುಟುಂಬಕ್ಕೆ ವೈದ್ಯರು ತಿಳಿಸಿದರು. ಸಾಕಷ್ಟು ಜಾಗ್ರತೆಯಾಗಿರಬೇಕು ಅಂತಲೂ ಹೇಳಿದ್ದರು.

ಮೇ 9ರಂದು, ಗಂಡು ಮಗು ಒಂದು ಜನಿಸುತ್ತದೆ. ಮೊದಲೇ ಗರ್ಭದಲ್ಲಿ ಇನ್ನೂ ಮೂರು ಮಗು ಇರುವ ವಿಷಯ ತಿಳಿದಿದ್ದರಿಂದ ಇಲ್ಲಿನ ಡಾಕ್ಟರ್ಸ್ ಸಾಕಷ್ಟು ಕೇರ್ ತೆಗೆದುಕೊಂಡಿದ್ದರು. ಮೊದಲ ಮಗು ಗಂಡು ಮಗು ಜನಿಸಿದೆ. ಆರೋಗ್ಯವಂತ ಮಗುವಾದರೂ ಕೇವಲ 710 ಗ್ರಾಂ ತೂಕವನ್ನು ಹೊಂದಿತ್ತು ಆ ಮಗು. ವೈದ್ಯಲೋಕಕ್ಕೆ ಸವಾಲಾಗಿದ್ದ ಈ ಒಂದು ಸನ್ನಿವೇಶವನ್ನು ಇಲ್ಲಿನ ಡಾಕ್ಟರ್ ಗಳು ಹಾಗೂ ನರ್ಸಸ್ ಬಹಳ ಸೀರಿಯಸ್ ಆಗಿ ತೆಗೆದುಕೊಂಡು, ತಾಯಿ ಮಕ್ಕಳನ್ನು ಉಳಿಸಿಕೊಳ್ಳಲು ಸಕಲ ಪ್ರಯತ್ನವನ್ನು ಮಾಡುತ್ತಾರೆ. ಮೇ 14ರಂದು ಮತ್ತೆ ನೋವು ಕಾಣಿಸಿಕೊಳ್ಳುತ್ತದೆ.  ಡಾಕ್ಟರ್ಸ್ಗಳು ಶಸ್ತ್ರಚಿಕಿತ್ಸೆಗೆ ಮನಸ್ಸು ಮಾಡದೆ ನಾರ್ಮಲ್ ಡಿಲೇವರಿಗೇನೇ ಒತ್ತು ನೀಡುತ್ತಾರೆ. ಪರಿಣಾಮ ಎರಡು ಹೆಣ್ಣು ಒಂದು ಗಂಡು ಮಗು ಮೇ 14 ರಂದು ಜನಿಸುತ್ತದೆ. ಅದರಲ್ಲಿ ಒಂದು ಮಗು ಆರೋಗ್ಯವಂತವಾಗಿದೆ ಇನ್ನೆರಡು ಮಗು ಸೇಫ್ ಆಗಿದ್ದರೂ ಸಹ ಆಸ್ಪತ್ರೆಯ ವೆಂಟಿಲೇಟರ್ ನಲ್ಲಿ ತೀವ್ರ ನಿಗ ಘಟಕದಲ್ಲಿ ಇದೆ. ತಾಯಿ ಕೂಡ ಸೇಫ್ ಆಗಿದ್ದಾಳೆ. ವೆಂಟಿಲೇಟರ್ ಅಲ್ಲಿರುವ ಇಬ್ಬರು ಮಕ್ಕಳು ಸಹ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಅಲ್ಲಿನ ವೈದ್ಯರು ತಿಳಿಸಿದ್ದಾರೆ.

ಒಟ್ಟಿನಲ್ಲಿ ಒಂದು ಮಗುವನ್ನು ಹೆತ್ತ ಐದು ದಿನದ ನಂತರ ಮತ್ತೆ ಮೂವರು ಮಕ್ಕಳಿಗೆ ಜನ್ಮ ನೀಡಿರುವ ಅಮೀನಾ ಈಗ ಈ ಪ್ರದೇಶದಲ್ಲಿ ಸಖತ್ ಫೇಮಸ್ ಆಗುತ್ತಿದ್ದಾಳೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

🚢 “ಹಾರ್ಮುಝ್‌ನಿಂದ ಮಂಗಳೂರುವರೆಗೆ – 46,000 MT ಎಲ್‌ಪಿಜಿ ಯಮಹಾಯಾತ್ರೆ!
ನಾಲ್ಕು ದಶಕಗಳ ಕಾಲ ರೋಗಿಗಳಿಗೆ ಜೀವ ನೀಡಿದ ವೈದ್ಯನೇ ಇಂದು ಯಾಕೆ ತನ್ನ ಜೀವ ತಾನೇ ತೆಗೆದುಕೊಂಡರು …
Trump ಮಾತಿಗೆ Iran ಸಂಸತ್ ಸ್ಪೀಕರ್‌ನ ಕಠಿಣ ಸಂದೇಶ ವಿಶ್ವದ ಗಮನ ಸೆಳೆದಿದೆ!
ಅಮಿತ್ ಶಾ- “UCC ಜಾರಿಗೆ ತಂದು ನಾಲ್ಕು ಮದುವೆ ಪದ್ಧತಿ ನಿಷೇಧ” — ಪಶ್ಚಿಮ ಬಂಗಾಳದಲ್ಲಿ ದೊಡ್ಡ ಘೋಷಣೆ
ಶಾಸಕ ಹ್ಯಾರಿಸ್ ಮೇಲೆ ಪ್ರಕರಣ ದಾಖಲು
ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ
ಶೈಕ್ಷಣಿಕ ವರ್ಷ ಆರಂಭ, ನೋಟ್‌ಬುಕ್‌ನಿಂದ ಆಟೋವರೆಗೆ ಎಲ್ಲ ಖರ್ಚು ಗಗನಕ್ಕೆ….ಪೋಷಕರಿಗೆ ದುಬಾರಿ ಹೊರೆ
ಯುವ ಜನಾಂಗದ ಹೋರಾಟ ಕಿಚ್ಚಾಗದಂತೆ ನೋಡಿಕೊಳ್ಳಿ
ತಸ್ಲಿಮಳ ಹಣೆಗೆ ಸಿಂಧೂರವಿಟ್ಟ ಕೇಶವ, ಬುರ್ಖಾ ತೆಗೆದಿಟ್ಟ ತಸ್ಲೀಮಾ
ಸುರತ್ಕಲ್ ಹುಡುಗಿ ವಿಚಾರದಲ್ಲಿ ಹಲ್ಲೆ
ಮಂಗಳೂರು ವಿಮಾನ ನಿಲ್ದಾಣಕ್ಕೆ ಪ್ಲಾಟಿನಂ ಕಿರೀಟ!
ತಿರುಪತಿಯಲ್ಲಿ ಒಂದಿಡೀ ಕುಟುಂಬವೇ ನಾಶ!
ಮ್ಯಾರಥಾನ್ ನಲ್ಲಿ ಇರುವಾಗಲೇ ಹೃದಯಾಘಾತದಿಂದ  ಸಬ್ ಇನ್ಸ್ಪೆಕ್ಟರ್ ನಿಧನ
ಹಲವು ಗಂಭೀರ ಅಪರಾಧ ಪ್ರಕರಣಗಳಲ್ಲಿ ಆರೋಪಿಯಾಗಿ ಕಳೆದ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಕೊನೆಗೂ ಪತ್ತೆ ಹಚ್ಚಲಾಗಿದೆ.
ಗ್ಯಾಂಬ್ಲರ್ ಹಿಡಿತದಲ್ಲಿ ಉಡುಪಿ, ಬಚಾವ್ ಮಾಡಿ..
ಮಂಗಳೂರಿನಲ್ಲಿ ವಕೀಲರೊಬ್ಬರ ನಕಲಿ ದುಷ್ಕೃತ್ಯ ಬಯಲಿಗೆ?
ಮಂಗಳೂರು ದಸರಾ ಮೆರವಣಿಗೆಗೆ ವಿದ್ಯುತ್ ತಂತಿಗಳ ಸಮಸ್ಯೆಗೆ ಗುಡ್‌ಬೈ!
ಪರಮೇಶ್ವರ ವಿರುದ್ಧ FIR-₹500 ಬೆಟ್ಟಿಂಗ್ ಹೇಳಿಕೆಗೆ ಕಾನೂನು ಕ್ರಮ.
ಭಾರತದಲ್ಲಿ ಎಚ್‌ಪಿವಿ (HPV) ಲಸಿಕೆ ಕಾರ್ಯಕ್ರಮ ಹೆಣ್ಣೆತ್ತವರು ತಿಳಿದುಕೊಳ್ಳಲೇಬೇಕಾದ ವಿಚಾರ
🚨 “ಮಂಗಳೂರು ಜಿಲ್ಲಾಕಾರಾಗೃಹದಲ್ಲಿ ಗಲಾಟೆ: ಜೈಲು ಅಧೀಕ್ಷಕರ ಮೇಲೆಯೇ ಕೈದಿಗಳ ಹಲ್ಲೆಯತ್ನ!”
ಅಮೆರಿಕಾ ವಿರುದ್ಧ ‘ಪೈರಸಿ’ ಆರೋಪ: ಇರಾನ್ ಯುಎನ್‌ಗೆ ದೂರು
ಮಣಿಪಾಲ ಜೆಇಇ ಮೇನ್ಸ್ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ಪ್ರಯತ್ನ….
ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್: ಬಿಸಿಲಿಗೆ ಎಚ್ಚರ!
2026 ವಿಧಾನಸಭೆ ಚುನಾವಣೆ – ಮುಖ್ಯ ಮಾಹಿತಿ
ಧುರಂಧರ್ 2 ಕ್ರೇಜ್ ಓವರ್‌ಫ್ಲೋ ಕಲೆಕ್ಷನ್‌ನಲ್ಲಿಕರ್ನಾಟಕವೇ ಟಾಪ್… ದಕ್ಷಿಣ ಭಾರತದಲ್ಲಿ 300 ಕೋಟಿ ಕ್ಲಬ್!
ಮಹಿಳಾ ಕ್ರೀಡಾಪಟುಗಳ ಹೋರಾಟಕ್ಕೆ ಹೊಸ ತಿರುವು ಕೊಟ್ಟ ದೆಹಲಿ ಹೈಕೋರ್ಟ್!
ಮಾಜಿ ಸಚಿವರಿಂದ ಮಂಗಳೂರು ವೈಭವಕ್ಕೆ ಬೃಹತ್ ಕೊಡುಗೆ
ಕೊಲೆ ಆರೋಪಿಯ ದೂರುದಾರನ ವಿಷ ಸೇವನೆಯ ಬಗ್ಗೆ  ಸ್ಪಷ್ಟನೆ
 ಡೊನಾಲ್ಡ್ ಟ್ರಂಪ್ ಟೆರರ್ ನಡೆ      ವಿಶ್ವದ ಆರ್ಥಿಕತೆ ಪಾತಾಳದ ಕೆಡೆ
ಆಪಲ್‌ಗೆ ಭಾರತದಲ್ಲಿ ದೊಡ್ಡ ಕಾನೂನು ಶಾಕ್? App Store ನಿಯಮಗಳ ಮೇಲೆ ಆಪಲ್ vs ಭಾರತ CCI ಜಟಾಪಟಿ