📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ನಾಲ್ಕು ಮಕ್ಕಳನ್ನು ಹೆತ್ತ ಮಹಾತಾಯಿ, ಸದ್ಯಕ್ಕೆ ತಾಯಿ ಮಕ್ಕಳು ಸೇಫ್

ಐದು ದಿನದ ಮೊದಲು ಒಂದು ಗಂಡು ಮಗುವಿಗೆ ಜನ್ಮವಿತ್ತ ಆ ಮಹಾತಾಯಿ, ಮತ್ತೆ ಮೂವರು ಮಕ್ಕಳಿಗೆ ಜನ್ಮ ನೀಡುವ ಮೂಲಕ ನಾಲ್ವರು ಮಕ್ಕಳ ತಾಯಿಯಾಗಿ ಕಾಣಿಸಿಕೊಂಡಿದ್ದಾಳೆ. ಆಸ್ಪತ್ರೆಯ ಡಾಕ್ಟರ್ ಹಾಗೂ ಸಿಬ್ಬಂದಿಗಳು ಅಪಾಯಕಾರಿ ಸನ್ನಿವೇಶದಲ್ಲಿದ್ದ ತಾಯಿ ಮಕ್ಕಳಿಬ್ಬರನ್ನು ಯಾವುದೇ ರೀತಿಯ ಶಸ್ತ್ರಚಿಕಿತ್ಸೆ ಇಲ್ಲದೆ ನಾರ್ಮಲ್ ಡೆಲಿವರಿಯ ಮೂಲಕ ಹೆರಿಗೆ ಮಾಡಿಸಿದ್ದು ಮತ್ತಷ್ಟು ಅಚ್ಚರಿಗೆ ಕಾರಣವಾಗಿದೆ.

Ai ಫೋಟೋಗಳು

ಇದು ನಡೆದದ್ದು ಉತ್ತರ ಪ್ರದೇಶದ ಸಂಬಾಲ್ ಜಿಲ್ಲೆಯಲ್ಲಿ. ಇಲ್ಲಿನ ಓವರಿ ಗ್ರಾಮದ ನಿವಾಸಿ ಅಮೀನಾ ಎಂಬ ಹೆಣ್ಣುಮಗಳೇ ಈಗ ನಾಲ್ಕು ಮಕ್ಕಳ ತಾಯಿಯಾಗಿ ಆರೋಗ್ಯವಂತಳಾಗಿರುವವಳು.

ಮೇ 8ರಂದು ಇಲ್ಲಿನ ಲೋದಿಪುರ ತೀರ್ಥಂಕೇಶ ಮಹಾವೀರ ವಿಶ್ವವಿದ್ಯಾಲಯದ ಆಸ್ಪತ್ರೆಗೆ ಹೆರಿಗೆಗಾಗಿ ಆಗಮಿಸುತ್ತಾಳೆ ಈ ಮಹಾತಾಯಿ. ಇದೇ ಆಸ್ಪತ್ರೆಯಲ್ಲೇ ಹಲವು ಬಾರಿ  ಚಿಕಿತ್ಸೆಯನ್ನು ಪಡೆದಿರುವಂತಹ ಅಮೀನಾ, ಮೇ ಎಂಟರಂದು ನೋವು ಕಾಣಿಸಿ ಕೊಳ್ಳುತ್ತಿದ್ದಂತೆಯೇ ಆಸ್ಪತ್ರೆಗೆ ಬಂದು ಅಡ್ಮಿಟ್ ಆಗುತ್ತಾಳೆ. ಮೊದಲೇ, ನಾಲ್ಕು ಮಗು ಇರುವ ವಿಚಾರವನ್ನು ಅಮೀನಾ ಹಾಗು ಅವರ ಕುಟುಂಬಕ್ಕೆ ವೈದ್ಯರು ತಿಳಿಸಿದರು. ಸಾಕಷ್ಟು ಜಾಗ್ರತೆಯಾಗಿರಬೇಕು ಅಂತಲೂ ಹೇಳಿದ್ದರು.

ಮೇ 9ರಂದು, ಗಂಡು ಮಗು ಒಂದು ಜನಿಸುತ್ತದೆ. ಮೊದಲೇ ಗರ್ಭದಲ್ಲಿ ಇನ್ನೂ ಮೂರು ಮಗು ಇರುವ ವಿಷಯ ತಿಳಿದಿದ್ದರಿಂದ ಇಲ್ಲಿನ ಡಾಕ್ಟರ್ಸ್ ಸಾಕಷ್ಟು ಕೇರ್ ತೆಗೆದುಕೊಂಡಿದ್ದರು. ಮೊದಲ ಮಗು ಗಂಡು ಮಗು ಜನಿಸಿದೆ. ಆರೋಗ್ಯವಂತ ಮಗುವಾದರೂ ಕೇವಲ 710 ಗ್ರಾಂ ತೂಕವನ್ನು ಹೊಂದಿತ್ತು ಆ ಮಗು. ವೈದ್ಯಲೋಕಕ್ಕೆ ಸವಾಲಾಗಿದ್ದ ಈ ಒಂದು ಸನ್ನಿವೇಶವನ್ನು ಇಲ್ಲಿನ ಡಾಕ್ಟರ್ ಗಳು ಹಾಗೂ ನರ್ಸಸ್ ಬಹಳ ಸೀರಿಯಸ್ ಆಗಿ ತೆಗೆದುಕೊಂಡು, ತಾಯಿ ಮಕ್ಕಳನ್ನು ಉಳಿಸಿಕೊಳ್ಳಲು ಸಕಲ ಪ್ರಯತ್ನವನ್ನು ಮಾಡುತ್ತಾರೆ. ಮೇ 14ರಂದು ಮತ್ತೆ ನೋವು ಕಾಣಿಸಿಕೊಳ್ಳುತ್ತದೆ.  ಡಾಕ್ಟರ್ಸ್ಗಳು ಶಸ್ತ್ರಚಿಕಿತ್ಸೆಗೆ ಮನಸ್ಸು ಮಾಡದೆ ನಾರ್ಮಲ್ ಡಿಲೇವರಿಗೇನೇ ಒತ್ತು ನೀಡುತ್ತಾರೆ. ಪರಿಣಾಮ ಎರಡು ಹೆಣ್ಣು ಒಂದು ಗಂಡು ಮಗು ಮೇ 14 ರಂದು ಜನಿಸುತ್ತದೆ. ಅದರಲ್ಲಿ ಒಂದು ಮಗು ಆರೋಗ್ಯವಂತವಾಗಿದೆ ಇನ್ನೆರಡು ಮಗು ಸೇಫ್ ಆಗಿದ್ದರೂ ಸಹ ಆಸ್ಪತ್ರೆಯ ವೆಂಟಿಲೇಟರ್ ನಲ್ಲಿ ತೀವ್ರ ನಿಗ ಘಟಕದಲ್ಲಿ ಇದೆ. ತಾಯಿ ಕೂಡ ಸೇಫ್ ಆಗಿದ್ದಾಳೆ. ವೆಂಟಿಲೇಟರ್ ಅಲ್ಲಿರುವ ಇಬ್ಬರು ಮಕ್ಕಳು ಸಹ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಅಲ್ಲಿನ ವೈದ್ಯರು ತಿಳಿಸಿದ್ದಾರೆ.

ಒಟ್ಟಿನಲ್ಲಿ ಒಂದು ಮಗುವನ್ನು ಹೆತ್ತ ಐದು ದಿನದ ನಂತರ ಮತ್ತೆ ಮೂವರು ಮಕ್ಕಳಿಗೆ ಜನ್ಮ ನೀಡಿರುವ ಅಮೀನಾ ಈಗ ಈ ಪ್ರದೇಶದಲ್ಲಿ ಸಖತ್ ಫೇಮಸ್ ಆಗುತ್ತಿದ್ದಾಳೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಕೊಲೆ ಆರೋಪಿಯ ದೂರುದಾರನ ವಿಷ ಸೇವನೆಯ ಬಗ್ಗೆ  ಸ್ಪಷ್ಟನೆ
ಉದ್ಯಮಿ, ಕಾಲೇಜ್ topper,  ಕೋಟ್ಯದೀಶರೇ…ಕಠಿಣ ಜೈನ ಸನ್ಯಾಸದತ್ತ…!
ಧರ್ಮಸ್ಥಳ-ಚಿಕ್ಕಮಗಳೂರು ಟ್ರಿಪ್‌ಗೆ ಹೊರಟ ಸ್ವಿಗ್ಗಿ ಡೆಲಿವರಿ ಬಾಯ್ಸ್… ಅರಬೈಲ್ ಘಾಟ್‌ನಲ್ಲಿ ಭೀಕರ ಅಪಘಾತ, 6 ಜೀವಗಳು ಅಂತ್ಯ!
ಅಹಿಂಸೆ, ಸತ್ಯ ಮತ್ತು ತ್ಯಾಗದ ಮಾರ್ಗವೇ ಮಹಾವೀರರ ದರ್ಶನ — ಇದೇ ಸುಖಿ ಜೀವನದ ಗುಟ್ಟು.
ಉಡುಪಿಯಲ್ಲಿ ಟ್ರೇಡಿಂಗ್ ಹೆಸರಲ್ಲಿ ಲಕ್ಷಗಟ್ಟಲೆ ಧೋಕಾ….
ಇನ್‌ಸ್ಟಾಗ್ರಾಮ್ ವ್ಯಾಮೋಹಕ್ಕೆ ಹೆತ್ತ ತಾಯಿಗೇ ವಿಷವಿಕ್ಕಿದ ಮಗಳು..ಪ್ರೀತಿಯ ಹೆಸರಲ್ಲಿ ಹಾದಿ ತಪ್ಪಿದ ಹದಿಹರೆಯ ಮುಂದೇನಾಯತು?
“ಅಮ್ಮ”ನ ಕಾರ್ಯಕ್ರಮದಲ್ಲಿ  ಕೇಂದ್ರ ಸಚಿವರಿಂದ ರಾಜಕೀಯ ಭಾಷಣ
“ಅಪ್ಪಾ” ಎಂದು ಕರೆದವನ ಕೈಯಿಂದಲೇ 18 ತಿಂಗಳ ಕಂದಮ್ಮನ ದೇಹದ ಮೇಲೆ 91 ಗಾಯದ ಗುರುತು – ಅಮಾನುಷ ಹತ್ಯೆ!..
ಮ್ಯಾರಥಾನ್ ನಲ್ಲಿ ಇರುವಾಗಲೇ ಹೃದಯಾಘಾತದಿಂದ  ಸಬ್ ಇನ್ಸ್ಪೆಕ್ಟರ್ ನಿಧನ
108 ಆರೋಗ್ಯ ಕವಚ'”ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ಇನ್ಮುಂದೆ ಆಂಬ್ಯುಲೆನ್ಸ್ ನಿಮ್ಮ ಮನೆಬಾಗಿಲಿಗೆ! 
ಒಂದು ವಾಟ್ಸ್ಯಾಪ್ ಮೆಸೇಜ್… ಕೋರ್ಟ್ ವರೆಗೂ ಎಳೆದ ಶಾಕ್ ಘಟನೆಯ ಸುತ್ತ..
🔥 ಮಧ್ಯಪ್ರಾಚ್ಯ ಯುದ್ಧ: 17ನೇ ದಿನಕ್ಕೆ- ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ!
ಭಾರತೀಯ ಸೇನೆಯ ನೆರವಿಗೆ ಡ್ರೋನ್ ನರ್ಸಿಂಗ್ ಹೋಮ್! ದುರ್ಗಮ ಪ್ರದೇಶಗಳಲ್ಲೂ ಸಿಗಲಿದೆ ಅತ್ಯಾಧುನಿಕ ವೈದ್ಯಕೀಯ ಚಿಕಿತ್ಸೆ
ಮುಳುಗುತ್ತಿರುವ ಕಾಂಗ್ರೆಸ್ಸಿಗೆ ಇನ್ನೂ ಬುದ್ಧಿ ಬಂದಂತಿಲ್ಲ… ಡಿಜೆಪಿ ರಾಮಚಂದ್ರರಾವ್  ಅಮಾನತ್ ಆದೇಶ ಹಿಂಪಡೆದ  ಸರ್ಕಾರ
ವಂಚಕನ ಬೆನ್ನಿಗೆ ನಿಂತರೆ, ಕೊರಳಿಗೆ ಉರುಳಾದೀತು!
ಶಾಮ್ ಇನ್ಸ್ಟಿಟ್ಯೂಶನ್ ಪ್ರಸ್ತುತ ಪಡಿಸಿದ “ಕಜ್ಜ” ತುಳು ಸಿನಿಮಾದ ಆಡಿಯೋ, ಟೇಲರ್ ಬಿಡುಗಡೆ
ರಾಕಿಂಗ್ ಸ್ಟಾರ್ ಯಶ್ ‘ಟಾಕ್ಸಿಕ್’ ಸಿನಿಮಾ ಅಪ್ಡೇಟ್: ಸೋಶಿಯಲ್ ಮೀಡಿಯಾದಲ್ಲಿ ಧೂಳೆಬ್ಬಿಸ್ತಿರೋ ಯಶ್ ಡೈಲಾಗ್!
ಕಾಂಗ್ರೆಸ್ ಹೈಕಮಾಂಡ್ ಖಡಕ್ ವಾರ್ನಿಂಗ್: ಸ್ವಾಮೀಜಿ, ಧಾರ್ಮಿಕ ಮುಖಂಡರ ಶಿಫಾರಸುಗಳಿಗೆ ಸಿಗಲ್ಲ ಮನ್ನಣೆ!
ನೀಟ್ ಪರೀಕ್ಷೆಯ ಎಡವಟ್ಟು….ಸುಳ್ಳು ತನಿಖಾ ವರದಿಯನ್ನು ಸರ್ಕಾರಕ್ಕೆ ನೀಡಿದ ಅಧಿಕಾರಿಗಳು!!?
“ಮಾಜಿ RSS ಕಾರ್ಯಕರ್ತನಿಗೆ ಮುಸ್ಲಿಂ ಮಹಿಳೆ ಅಗ್ನಿಸ್ಪರ್ಶ”ವಾಸ್ತವ ಏನು?ಮಾನವೀಯತೆಗೆ ಧರ್ಮದ ಗಡಿ ಇಲ್ಲ!
ಹೆತ್ತ ಮಗಳನ್ನೇ ಉಸಿರುಗಟ್ಟಿಸಿ ಕೊಂದ  ಪಾಪಿ ತಾಯಿ
ಬ್ರೇಕಿಂಗ್ ನ್ಯೂಸ್
“ಮಂಜಿನ ನಡುವೆ ಕ್ಷಣಾರ್ಧದಲ್ಲಿ ಮಾಯವಾದ ಮಗಳು”ಶ್ರೀನಂದಾ ಶವವಾಗಿ ಪತ್ತೆ…!
35 ವಾರಂಟ್ ಇದ್ದ ಆರೋಪಿಯು ವಿದೇಶದಿಂದ ಮರಳುತ್ತಿದ್ದಾಗ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ
ಕುತ್ತಾರಿನಲ್ಲಿ ಸ್ಪೀಕರ್‌ನ್ನೇ ಜನರು ಸುತ್ತುವರಿದ ಶಾಕಿಂಗ್ ದೃಶ್ಯ! ಏನಾಯ್ತು ನಿಜವಾಗಿಯೂ?ಸಾಮಾಜಿಕ ಮಾಧ್ಯಮದಲ್ಲಿ ಸದ್ದು ಮಾಡುತ್ತಿರುವ ಕುತ್ತಾರು ವಾದವಿವಾದ!
ಈ ಬಾರಿ ಮಕ್ಕಳೊಟ್ಟಿಗೆ PUC ಎಕ್ಸಾಮ್ ಪಾಸಾದಅಮ್ಮಂದಿರೇ ಮನಸ್ಸಿದ್ದರೆ ಮಾರ್ಗ ಇದೆ ಅನ್ನೋದಕ್ಕೆ…ಪ್ರೇರಣೆ…!
ಬೆಂಗಳೂರಿನಲ್ಲಿ ಉದ್ಯಮಿಯ₹1.9 ಕೋಟಿ ದರೋಡೆ:ಬೆಚ್ಚಿಬೀಳಿಸಿದ ಥ್ರಿಲ್ಲರ್ ಸಿನಿಮಾವನ್ನೇ ಮೀರಿಸಿದ ಸಸ್ಪೆನ್ಸ್!
ಬ್ರಹ್ಮಾವರ, ಮಂದಾರ್ತಿ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ಹೇಳೋರು ಕೇಳೋರು ಯಾರು ಇಲ್ವಾ?
ಪರಮೇಶ್ವರ ವಿರುದ್ಧ FIR-₹500 ಬೆಟ್ಟಿಂಗ್ ಹೇಳಿಕೆಗೆ ಕಾನೂನು ಕ್ರಮ.
ಒಂದು ಸಹಿ… ಲಕ್ಷಾಂತರ ರೂ. ಹೊಣೆಗಾರಿಕೆಯ ಶಾಕ್!ಸಹಕಾರ ಸಂಸ್ಥೆಯಲ್ಲಿ ನಡೆದ ಅಕ್ರಮದ ಸತ್ಯ ಬಯಲು..