📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    “ನಾವು ಭಾರತೀಯರು” ಎಂಬ ಹೋರಾಟಕ್ಕೆ ಗೆಲುವು

         ಪತ್ರಿಕಾ ಲೇಖನ

    ಬಾಂಗ್ಲಾ ದೇಶಿಯರು ಎಂದು ದೂಷಣೆಗೆ ಒಳಗಾಗಿ ಬಾಂಗ್ಲಕ್ಕೆ ಬಲವಂತವಾಗಿ ಕಳುಹಿಸಲ್ಪಟ್ಟಿದ್ದ ಪಶ್ಚಿಮ ಬಂಗಾಳದ ಬೀರ್‌ಭೂಮ್‌ನ ನಾಲ್ವರು ವರ್ಷದ ಬಳಿಕ ಮನೆಗೆ ಮರಳಿದರು.

    ಗಡಿಭದ್ರತಾ ಪಡೆಯ ಸಿಬ್ಬಂದಿಗಳು ಕಟ್ಟುನಿಟ್ಟಾಗಿ ಕರ್ತವ್ಯ ನಿರ್ವಹಿಸುತ್ತಿರುವುದು

    ಕೋಲ್ಕತ್ತಾ: 2025ರ ಜೂನ್‌ನಲ್ಲಿ ದೆಹಲಿಯಿಂದ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಲ್ಪಟ್ಟಿದ್ದ ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ನಾಲ್ವರು ಭಾರತೀಯರು ಒಂದು ವರ್ಷದ ಬಳಿಕ ಬುಧವಾರ (ಜು.8) ತಮ್ಮ ಊರಿಗೆ ಮರಳಿದ್ದಾರೆ.

    ಘಟನೆಯ ಹಿನ್ನೆಲೆ

    ದೆಹಲಿಯಲ್ಲಿ ವಶಕ್ಕೆ ಪಡೆಯಲಾದ ಸುನಾಲಿ ಖಾತೂನ್, ಅವರ ಪತಿ ಡ್ಯಾನಿಶ್ ಶೇಖ್, ಮಗ ಸಾಬಿರ್, ಹಾಗೂ ಸ್ವೀಟಿ ಬಿಬಿ ಮತ್ತು ಅವರ ಇಬ್ಬರು ಗಂಡು ಮಕ್ಕಳನ್ನು “ಅಕ್ರಮ ನುಸುಳುಕೋರರು” ಎಂಬ ಆರೋಪದ ಮೇಲೆ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಲಾಗಿತ್ತು. ಈ ಆರೂ ಜನರು, ತಾವು ಬೀರ್‌ಭೂಮ್ ಜಿಲ್ಲೆಯ ಪೈಕರ್ ಗ್ರಾಮದ ನಿವಾಸಿಗಳು ಎಂದು ನಿರಂತರವಾಗಿ ಪ್ರತಿಪಾದಿಸಿದ್ದರು ಅವರ ಹೇಳಿಕೆ ಅರಣ್ಯರೋಧನವಾಗಿತ್ತು.

    ಗಡಿಪಾರು ಮಾಡುವಾಗ ಸುನಾಲಿ ಖಾತೂನ್ ತುಂಬು ಗರ್ಭಿಣಿಯಾಗಿದ್ದ ಕಾರಣ, ಮಾನವೀಯ ನೆಲೆಯಲ್ಲಿ 2025ರ ಡಿಸೆಂಬರ್‌ನಲ್ಲಿ ಅವರನ್ನು ಮತ್ತು ಮಗ ಸಾಬಿರ್‌ನನ್ನು ಭಾರತಕ್ಕೆ ಮರಳಿ ಕರೆತರಲಾಗಿತ್ತು.

    ಉಳಿದ ನಾಲ್ವರಾದ ಡ್ಯಾನಿಶ್ ಶೇಖ್, ಸ್ವೀಟಿ ಬಿಬಿ ಮತ್ತು ಅವರ ಇಬ್ಬರು ಮಕ್ಕಳು ಅಂದು ಗಡಿಪಾರಿಗೆ ಒಳಗಾದವರು ಇಂದು ಅಂದರೆ ಕಳೆದ ಬುಧವಾರ ಮಾಲ್ಡಾ ಜಿಲ್ಲೆಯ ಮಹದಿಪುರ ಗಡಿ ಮೂಲಕ ಪಶ್ಚಿಮ ಬಂಗಾಳವನ್ನು ಪ್ರವೇಶಿಸಿದ್ದಾರೆ ಎಂದು ಗ್ರಾಮಸ್ಥ ಸೋಯೆಫ್ ಅಲಿ ತಿಳಿಸಿದ್ದಾರೆ.

    ನ್ಯಾಯಾಲಯದ ಮಧ್ಯಸ್ಥಿಕೆ

    ಈ ಆರೂ ಜನರ ಗಡಿಪಾರು ಆದೇಶವನ್ನು ಕಲ್ಕತ್ತಾ ಹೈಕೋರ್ಟ್ ವಜಾಗೊಳಿಸಿತ್ತು. ಸುನಾಲಿ ಖಾತೂನ್ ಅವರ ತಂದೆ ಭೋದು ಸೇಖ್ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ನಾಲ್ಕು ವಾರಗಳೊಳಗೆ ಎಲ್ಲರನ್ನೂ ಪಶ್ಚಿಮ ಬಂಗಾಳಕ್ಕೆ ಮರಳಿ ಕರೆತರಬೇಕು ಎಂದು ನಿರ್ದೇಶಿಸಿತ್ತು.

    ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಮತ್ತು ದೆಹಲಿ ಪೊಲೀಸರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಮೇ 22ರಂದು ನಡೆದ ವಿಚಾರಣೆ ವೇಳೆ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ, “ಉಳಿದ ನಾಲ್ವರ ಪೌರತ್ವವನ್ನು ಮರು ಪರಿಶೀಲಿಸಿ ಭಾರತಕ್ಕೆ ವಾಪಸ್ ಕರೆತರಲಾಗುವುದು” ಎಂದು ವಾಗ್ದಾನ ನೀಡಿತ್ತು.

    ರಾಜಕೀಯ ಪ್ರತಿಕ್ರಿಯೆ

    ಈ ಬೆಳವಣಿಗೆ ಬಗ್ಗೆ ಟಿಎಂಸಿ ಸಂಸದ ಸಮೀರುಲ್ ಇಸ್ಲಾಂ ಪ್ರತಿಕ್ರಿಯಿಸಿ, “ನ್ಯಾಯಾಂಗದ ಮಧ್ಯಸ್ಥಿಕೆಯಿಂದಾಗಿ ಮಾತ್ರ ಕೇಂದ್ರ ಸರ್ಕಾರ ಕೊನೆಗೂ ಬಡ ಭಾರತೀಯ ನಾಗರಿಕರನ್ನು ಮರಳಿ ಕರೆತಂದಿದೆ” ಎಂದು ಹೇಳಿದರು.

    “ನಿಜವಾಗಿಯೂ ಅಕ್ರಮ ನುಸುಳುಕೋರರನ್ನು ಗಡಿಪಾರು ಮಾಡುವುದಕ್ಕೆ ನಮ್ಮ ಆಕ್ಷೇಪಣೆ ಇಲ್ಲ. ಆದರೆ ಗಡಿಪಾರು ಹೆಸರಿನಲ್ಲಿ ಬಡ ಮತ್ತು ನಿಜವಾದ ಭಾರತೀಯ ನಾಗರಿಕರನ್ನು ಏಕೆ ಕಿರುಕುಳಕ್ಕೆ ಒಳಪಡಿಸಬೇಕು?” ಎಂದು ಅವರು ಪ್ರಶ್ನಿಸಿದರು.

    ಏಪ್ರಿಲ್ 2025ರಲ್ಲಿ ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ  ಹಲವು ರಾಜ್ಯಗಳ ಪೊಲೀಸರು ಬಂಗಾಳಿ ಮಾತನಾಡುವ ವ್ಯಕ್ತಿಗಳನ್ನು ವಶಕ್ಕೆ ಪಡೆದು ಪೌರತ್ವ ಸಾಬೀತುಪಡಿಸಲು ಒತ್ತಾಯಿಸುತ್ತಿದ್ದಾರೆ ಎಂದು ಆರೋಪ ಕೇಳಿ ಬಂದಿತ್ತು.

    ಪೌರತ್ವ ಸಾಬೀತುಪಡಿಸಲು ಸಾಧ್ಯವಾಗದ ಕಾರಣ ಹಲವರನ್ನು ಬಲವಂತವಾಗಿ ಬಾಂಗ್ಲಾ ಗಡಿಯಾಚೆಗೆ ತಳ್ಳಲಾಗಿದೆ. ರಾಜ್ಯ ಅಧಿಕಾರಿಗಳು ತನಿಖೆ ನಡೆಸಿ “ತಪ್ಪಾಗಿ ಗಡಿಪಾರು ಮಾಡಲಾಗಿದೆ” ಎಂದು ಸಾಬೀತುಪಡಿಸಿದ ನಂತರ ಕೆಲವರನ್ನು ಮರಳಿ ಕರೆತರಲಾಗುತ್ತಿದೆ.

    ಒಂದು ವರ್ಷದ ಹೋರಾಟ, ನ್ಯಾಯಾಲಯದ ಹಸ್ತಕ್ಷೇಪದ ಬಳಿಕ ತಮ್ಮ ಊರಿಗೆ ಮರಳಿದ ಈ ನಾಲ್ವರು ಕುಟುಂಬದ ಸದಸ್ಯರು ಇದೀಗ ಬೀರ್‌ಭೂಮ್‌ನ ಪೈಕರ್ ಗ್ರಾಮದಲ್ಲಿ ತಮ್ಮ ಕುಟುಂಬದೊಂದಿಗೆ ಇದ್ದಾರೆ ಎನ್ನಲಾಗಿದೆ.

    ಕೃಪೆ

    ಆಧಾರ: scroll.in

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    “Arvind Kejriwal: ‘ಸತ್ಯಾಗ್ರಹ’ದಿಂದ ನ್ಯಾಯದ ಬೇಡಿಕೆ.”
    ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಹಿಗ್ಗಾಮುಗ್ಗ ಜಾಡಿಸಿದ ಹೆಚ್ ವಿಶ್ವನಾಥ್
    ‘ಮೇಕ್ ಇನ್ ಇಂಡಿಯಾ’ಗೆ ಮತ್ತೊಂದು ದೊಡ್ಡ ಗೆಲುವು: C295 ವಿಮಾನದ ಮೊದಲ ಯಶಸ್ವಿ ಪರೀಕ್ಷಾ ಹಾರಾಟ
    ಪ್ರಕೃತಿಯ ಮುನಿಸಿಗೆ ಕರಗುತ್ತಿದೆ ಯುರೋಪ್ ….!ತಂತ್ರಜ್ಞಾನದ ಅಹಂಕಾರವನ್ನು ಸುಟ್ಟು ಬೂದಿ ಮಾಡುತ್ತಿರುವ ಯುರೋಪ್ ಹೀಟ್‌ವೇವ್!
    ಕಾರು ಸ್ಟೀರಿಂಗ್ ಹಿಡಿದ ಬಾಲಕಿ… ಪಕ್ಕದಲ್ಲೇ ಕುಳಿತಿದ್ದ ಪೊಲೀಸ್ ಅಧಿಕಾರಿ! ವೈರಲ್ ವಿಡಿಯೋ ಎಬ್ಬಿಸಿದ ದೊಡ್ಡ ಪ್ರಶ್ನೆ
    ಮಂಗಳೂರು ನೀರಿನ ಸಂಕಷ್ಟ:ಮಳೆಯಿಲ್ಲದೆ ಮುಂದಿನ 1–2 ತಿಂಗಳು ಗಂಭೀರ ನೀರಿನ ಕೊರತೆ ಸಂಭವ ಸಾಧ್ಯತೆ.
    ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ಯಾಂಕಾಕ್‌ನಿಂದ ಬಂದ ಪ್ರಯಾಣಿಕನ ಬ್ಯಾಗ್‌ನಲ್ಲಿ 47 ಜೀವಂತ ಅಪರೂಪದ ಪ್ರಾಣಿಗಳು ಪತ್ತೆ! 
    ಕಾಂಗ್ರೆಸ್ ನಿಂದ ”MLC ಮಾಡಿಸುತ್ತೇನೆ” ಎಂದು 1.5 ಕೋಟಿ ವಂಚನೆ ಆರೋಪ
    ಉಡುಪಿ ಮಹಿಳೆಗೆ ಮುಂಬೈನಲ್ಲಿ ಕಂಬಿ! ₹3.10 ಕೋಟಿ ವಂಚನೆ ಉಡುಪಿ ಮೂಲದ ಮಹಿಳೆ ಅರೆಸ್ಟ್!
    ಮಂಗಳೂರು ಶಾಕ್ ! ನೇತ್ರಾವತಿ ತೀರದ ನದಿಯಲ್ಲಿ ತೇಲಿ ಬಂದ ರಾಶಿ ರಾಶಿ ಆಧಾರ್ ಕಾರ್ಡ್‌ಗಳು !!!ಹೊಣೆ ಯಾರು?
    ಲಾಲ್‌ಬಾಗ್ ಸಿಗ್ನಲ್ ಬಳಿ ಚಾಕು ಇರಿತದ ಘಟನೆ…!
    ನೆಮ್ಮದಿಯ ಗೂಡಿಗೆ ಸಾಲದ ಕೊಳ್ಳಿ..?!ಮುದ್ದಾದ ಮಕ್ಕಳ ಉಸಿರುಗಟ್ಟಿಸಲು ಅದೇಗೆ…..ಕರುಳಬಳ್ಳಿ ಹಿಂಡುವ ನಾಲ್ಕು ಜೀವಗಳ ದುರಂತ ಅಂತ್ಯ!
    ಸರ್ಕಾರಿ ಸ್ವಾಮ್ಯದ ಬೇಲಿ ಕಂಬ ಕಿತ್ತಾಕಲು DYFI ಕುಮ್ಮಕ್ಕು….!
    ಬೋಗಸ್ ದೂರು ಕೊಡುವವರ ಮೇಲೆ ಕಠಿಣ ಕ್ರಮ ಕೈಗೊಳ್ಳದಿದ್ದರೆ ಗಂಡಾಂತರ ಗ್ಯಾರೆಂಟಿ
    ದರೆಗುಡ್ಡೆಯಲ್ಲಿ ಬಾರಿ ಅಗ್ನಿ ಅವಗಡ…!
    717 ಮದ್ಯದಂಗಡಿಗಳಿಗೆ ವಿಜಯ್ ಬ್ರೇಕ್‌! ತಮಿಳುನಾಡು ಖಜಾನೆಗೆ ಸಾವಿರಾರು ಕೋಟಿ ಶಾಕ್!
    ಚುನಾವಣೆಯವರೆಗೆ ಮೌನ, ನಂತರ LPG ದರ ಭಾರಿ ಏರಿಕೆ –ಇದು ರಾಜಕೀಯ ಅಜೆಂಡಾನಾ?
    ಮಕ್ಕಳಿಲ್ಲದ ನೋವನ್ನು ಮರಗಳ ಪ್ರೀತಿಯಾಗಿ ಬದಲಿಸಿ ಬರಡು ಭೂಮಿಯನ್ನು ಹಸಿರು ಕಾಡಾಗಿಸಿದ ದಂಪತಿಗಳ ಅದ್ಭುತ ಜೀವನಗಾಥೆ
    ನಾಳೆ ಮಂಗಳೂರಲ್ಲಿ ಇಡೀ ದಿನ ಕರೆಂಟಿಲ್ಲ Power Cut.. ಎಲ್ಲೆಲ್ಲಿ?
    ಟ್ರಂಪ್ ಇರಾನ್ ಡೀಲ್ ಕಥೆ ಏನು?ಒಪ್ಪಂದವಾಗುತ್ತಾ? ಅಥವಾ ಯುದ್ಧ ಮುಂದುವರೆಯುತ್ತಾ?
    ಕೇಂದ್ರದ ಮೌನ ಮತ್ತು ಪ್ರಜಾಪ್ರಭುತ್ವದ ಅಣಕಕ್ಕೆ ಜಂತರ್ ಮಂತರ್‌ನಲ್ಲಿ ಧಗಧಗಿಸುತ್ತದ ನೀಟ್ (NEET) ಕಿಚ್ಚು…!
    ಶಿರಸಿ ಮಾರಿಯಮ್ಮನ ಜಾತ್ರೆ ಪ್ರಾರಂಭ
    ಜನಗಣತಿ 2026–27 – Self Enumeration ಮುಗಿದು ಈಗ ಮನೆ ಮನೆ ಭೇಟಿ ಹಂತ ಆರಂಭ!ನಮ್ಮ ಮಾಹಿತಿ = ನಮ್ಮ ದೇಶದ ಬೆಳವಣಿಗೆ…
    ಕೊಲೆ ಆರೋಪಿಯ ದೂರುದಾರನ ವಿಷ ಸೇವನೆಯ ಬಗ್ಗೆ  ಸ್ಪಷ್ಟನೆ
    ಕುಂದಾಪುರದಲ್ಲಿ ಯುವತಿ ಆತ್ಮಹತ್ಯೆಗೆ ಪ್ರಿಯಕರನ ಕುಮ್ಮಕ್ಕು
    ಕಾರ್ಕಳದಲ್ಲಿ 2027ರ ಬಾಹುಬಲಿ ಮಹಾ ಮಜ್ಜನದ ಮಹೋತ್ಸವಕ್ಕೆ ದಿನ ಘೋಷಣೆ!
    ‘ಅಮರ್ ಜವಾನ್ ಪಾರ್ಕ್’ಗೆ ಯುದ್ಧ ಟ್ಯಾಂಕ್, ಯುದ್ಧವಿಮಾನ ಸ್ಥಾಪನೆಗೆ ರಕ್ಷಣಾ ಸಚಿವರಿಗೆ ಸಂಸದೆ ಪ್ರಭಾ ಮಲ್ಲಿಕಾರ್ಜುನ ಮನವಿ
    ಒಂದು ದೇಶವನ್ನೇ ಮಟ್ಟಾಶ್ ಮಾಡುವಷ್ಟು ನ್ಯೂಕ್ಲಿಯರ್ ಪವರ್ stock ಇರಾನ್ನಲ್ಲಿ ಇದ್ಯಾ !?
    ಪುಲ್ವಾಮಾ ದಾಳಿಯ ಮಾಸ್ಟರ್ಮೈಂಡ್ ಹಮ್ಜಾ ಬುರ್ಹಾನ್ ಹತ್ಯೆ: ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ರಹಸ್ಯ ಗುಂಡಿನ ದಾಳಿ
    ಮಹಿಳಾ ದಿನಾಚರಣೆಯಲ್ಲಿ ಮಹಿಳಾ ಸಂಪನ್ಮೂಲ ಕೇಂದ್ರ ಉದ್ಘಾಟನೆ, ಜಾಗೃತಿ ಕಾರ್ಯಕ್ರಮ