📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

“ನಾವು ಭಾರತೀಯರು” ಎಂಬ ಹೋರಾಟಕ್ಕೆ ಗೆಲುವು

     ಪತ್ರಿಕಾ ಲೇಖನ

ಬಾಂಗ್ಲಾ ದೇಶಿಯರು ಎಂದು ದೂಷಣೆಗೆ ಒಳಗಾಗಿ ಬಾಂಗ್ಲಕ್ಕೆ ಬಲವಂತವಾಗಿ ಕಳುಹಿಸಲ್ಪಟ್ಟಿದ್ದ ಪಶ್ಚಿಮ ಬಂಗಾಳದ ಬೀರ್‌ಭೂಮ್‌ನ ನಾಲ್ವರು ವರ್ಷದ ಬಳಿಕ ಮನೆಗೆ ಮರಳಿದರು.

ಗಡಿಭದ್ರತಾ ಪಡೆಯ ಸಿಬ್ಬಂದಿಗಳು ಕಟ್ಟುನಿಟ್ಟಾಗಿ ಕರ್ತವ್ಯ ನಿರ್ವಹಿಸುತ್ತಿರುವುದು

ಕೋಲ್ಕತ್ತಾ: 2025ರ ಜೂನ್‌ನಲ್ಲಿ ದೆಹಲಿಯಿಂದ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಲ್ಪಟ್ಟಿದ್ದ ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ನಾಲ್ವರು ಭಾರತೀಯರು ಒಂದು ವರ್ಷದ ಬಳಿಕ ಬುಧವಾರ (ಜು.8) ತಮ್ಮ ಊರಿಗೆ ಮರಳಿದ್ದಾರೆ.

ಘಟನೆಯ ಹಿನ್ನೆಲೆ

ದೆಹಲಿಯಲ್ಲಿ ವಶಕ್ಕೆ ಪಡೆಯಲಾದ ಸುನಾಲಿ ಖಾತೂನ್, ಅವರ ಪತಿ ಡ್ಯಾನಿಶ್ ಶೇಖ್, ಮಗ ಸಾಬಿರ್, ಹಾಗೂ ಸ್ವೀಟಿ ಬಿಬಿ ಮತ್ತು ಅವರ ಇಬ್ಬರು ಗಂಡು ಮಕ್ಕಳನ್ನು “ಅಕ್ರಮ ನುಸುಳುಕೋರರು” ಎಂಬ ಆರೋಪದ ಮೇಲೆ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಲಾಗಿತ್ತು. ಈ ಆರೂ ಜನರು, ತಾವು ಬೀರ್‌ಭೂಮ್ ಜಿಲ್ಲೆಯ ಪೈಕರ್ ಗ್ರಾಮದ ನಿವಾಸಿಗಳು ಎಂದು ನಿರಂತರವಾಗಿ ಪ್ರತಿಪಾದಿಸಿದ್ದರು ಅವರ ಹೇಳಿಕೆ ಅರಣ್ಯರೋಧನವಾಗಿತ್ತು.

ಗಡಿಪಾರು ಮಾಡುವಾಗ ಸುನಾಲಿ ಖಾತೂನ್ ತುಂಬು ಗರ್ಭಿಣಿಯಾಗಿದ್ದ ಕಾರಣ, ಮಾನವೀಯ ನೆಲೆಯಲ್ಲಿ 2025ರ ಡಿಸೆಂಬರ್‌ನಲ್ಲಿ ಅವರನ್ನು ಮತ್ತು ಮಗ ಸಾಬಿರ್‌ನನ್ನು ಭಾರತಕ್ಕೆ ಮರಳಿ ಕರೆತರಲಾಗಿತ್ತು.

ಉಳಿದ ನಾಲ್ವರಾದ ಡ್ಯಾನಿಶ್ ಶೇಖ್, ಸ್ವೀಟಿ ಬಿಬಿ ಮತ್ತು ಅವರ ಇಬ್ಬರು ಮಕ್ಕಳು ಅಂದು ಗಡಿಪಾರಿಗೆ ಒಳಗಾದವರು ಇಂದು ಅಂದರೆ ಕಳೆದ ಬುಧವಾರ ಮಾಲ್ಡಾ ಜಿಲ್ಲೆಯ ಮಹದಿಪುರ ಗಡಿ ಮೂಲಕ ಪಶ್ಚಿಮ ಬಂಗಾಳವನ್ನು ಪ್ರವೇಶಿಸಿದ್ದಾರೆ ಎಂದು ಗ್ರಾಮಸ್ಥ ಸೋಯೆಫ್ ಅಲಿ ತಿಳಿಸಿದ್ದಾರೆ.

ನ್ಯಾಯಾಲಯದ ಮಧ್ಯಸ್ಥಿಕೆ

ಈ ಆರೂ ಜನರ ಗಡಿಪಾರು ಆದೇಶವನ್ನು ಕಲ್ಕತ್ತಾ ಹೈಕೋರ್ಟ್ ವಜಾಗೊಳಿಸಿತ್ತು. ಸುನಾಲಿ ಖಾತೂನ್ ಅವರ ತಂದೆ ಭೋದು ಸೇಖ್ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ನಾಲ್ಕು ವಾರಗಳೊಳಗೆ ಎಲ್ಲರನ್ನೂ ಪಶ್ಚಿಮ ಬಂಗಾಳಕ್ಕೆ ಮರಳಿ ಕರೆತರಬೇಕು ಎಂದು ನಿರ್ದೇಶಿಸಿತ್ತು.

ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಮತ್ತು ದೆಹಲಿ ಪೊಲೀಸರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಮೇ 22ರಂದು ನಡೆದ ವಿಚಾರಣೆ ವೇಳೆ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ, “ಉಳಿದ ನಾಲ್ವರ ಪೌರತ್ವವನ್ನು ಮರು ಪರಿಶೀಲಿಸಿ ಭಾರತಕ್ಕೆ ವಾಪಸ್ ಕರೆತರಲಾಗುವುದು” ಎಂದು ವಾಗ್ದಾನ ನೀಡಿತ್ತು.

ರಾಜಕೀಯ ಪ್ರತಿಕ್ರಿಯೆ

ಈ ಬೆಳವಣಿಗೆ ಬಗ್ಗೆ ಟಿಎಂಸಿ ಸಂಸದ ಸಮೀರುಲ್ ಇಸ್ಲಾಂ ಪ್ರತಿಕ್ರಿಯಿಸಿ, “ನ್ಯಾಯಾಂಗದ ಮಧ್ಯಸ್ಥಿಕೆಯಿಂದಾಗಿ ಮಾತ್ರ ಕೇಂದ್ರ ಸರ್ಕಾರ ಕೊನೆಗೂ ಬಡ ಭಾರತೀಯ ನಾಗರಿಕರನ್ನು ಮರಳಿ ಕರೆತಂದಿದೆ” ಎಂದು ಹೇಳಿದರು.

“ನಿಜವಾಗಿಯೂ ಅಕ್ರಮ ನುಸುಳುಕೋರರನ್ನು ಗಡಿಪಾರು ಮಾಡುವುದಕ್ಕೆ ನಮ್ಮ ಆಕ್ಷೇಪಣೆ ಇಲ್ಲ. ಆದರೆ ಗಡಿಪಾರು ಹೆಸರಿನಲ್ಲಿ ಬಡ ಮತ್ತು ನಿಜವಾದ ಭಾರತೀಯ ನಾಗರಿಕರನ್ನು ಏಕೆ ಕಿರುಕುಳಕ್ಕೆ ಒಳಪಡಿಸಬೇಕು?” ಎಂದು ಅವರು ಪ್ರಶ್ನಿಸಿದರು.

ಏಪ್ರಿಲ್ 2025ರಲ್ಲಿ ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ  ಹಲವು ರಾಜ್ಯಗಳ ಪೊಲೀಸರು ಬಂಗಾಳಿ ಮಾತನಾಡುವ ವ್ಯಕ್ತಿಗಳನ್ನು ವಶಕ್ಕೆ ಪಡೆದು ಪೌರತ್ವ ಸಾಬೀತುಪಡಿಸಲು ಒತ್ತಾಯಿಸುತ್ತಿದ್ದಾರೆ ಎಂದು ಆರೋಪ ಕೇಳಿ ಬಂದಿತ್ತು.

ಪೌರತ್ವ ಸಾಬೀತುಪಡಿಸಲು ಸಾಧ್ಯವಾಗದ ಕಾರಣ ಹಲವರನ್ನು ಬಲವಂತವಾಗಿ ಬಾಂಗ್ಲಾ ಗಡಿಯಾಚೆಗೆ ತಳ್ಳಲಾಗಿದೆ. ರಾಜ್ಯ ಅಧಿಕಾರಿಗಳು ತನಿಖೆ ನಡೆಸಿ “ತಪ್ಪಾಗಿ ಗಡಿಪಾರು ಮಾಡಲಾಗಿದೆ” ಎಂದು ಸಾಬೀತುಪಡಿಸಿದ ನಂತರ ಕೆಲವರನ್ನು ಮರಳಿ ಕರೆತರಲಾಗುತ್ತಿದೆ.

ಒಂದು ವರ್ಷದ ಹೋರಾಟ, ನ್ಯಾಯಾಲಯದ ಹಸ್ತಕ್ಷೇಪದ ಬಳಿಕ ತಮ್ಮ ಊರಿಗೆ ಮರಳಿದ ಈ ನಾಲ್ವರು ಕುಟುಂಬದ ಸದಸ್ಯರು ಇದೀಗ ಬೀರ್‌ಭೂಮ್‌ನ ಪೈಕರ್ ಗ್ರಾಮದಲ್ಲಿ ತಮ್ಮ ಕುಟುಂಬದೊಂದಿಗೆ ಇದ್ದಾರೆ ಎನ್ನಲಾಗಿದೆ.

ಕೃಪೆ

ಆಧಾರ: scroll.in

COMMENTS

Login with Gmail to comment

ಇನ್ನಷ್ಟು ಸುದ್ದಿ

ಗೃಹಲಕ್ಷ್ಮಿ ಫಲಾನುಭವಿಗಳೇ ಗಮನಿಸಿ: ಹಣ ಕ್ರೆಡಿಟ್ ಆಗ್ಬೇಕಾದ್ರೆ ಇನ್ಮುಂದೆ ಬಯೋಮೆಟ್ರಿಕ್ ಕಡ್ಡಾಯ!
‼️ ಮುಂಗಾರು ಅಬ್ಬರ ಶುರು: ಕರ್ನಾಟಕ-ಕೇರಳಕ್ಕೆ IMD ರೆಡ್ ಸಿಗ್ನಲ್! ಮುಂದಿನ 7 ದಿನ ಭಾರೀ ಮಳೆ, ಬಿರುಗಾಳಿ ಸಾಧ್ಯತೆ!
ಆಂಬುಲೆನ್ಸ್ ಡ್ರೈವರ್ ನ ಸಮಾಜ ಸೇವೆಯ ಕಾರ್ಯ ಶ್ಲಾಘನಿಯ – ಸುದೇಶ್ ಕುಮಾರ್
ಪೆಟ್ರೋಲ್–ಡೀಸೆಲ್ ಬೆಲೆ ಏರಿಕೆ ..! ಸಾರ್ವಜನಿಕ ಸಾರಿಗೆ ಬಳಸಿ ,ಇಂಧನ ಉಳಿಸಿ ,Work From Home ಮಾಡಿ ಎಂದಿದ್ದ ಮೋದಿ… ಈಗ ಅದರ ಅರ್ಥ ಸ್ಪಷ್ಟವಾಗುತ್ತಿದೆಯೇ?
ವೈರಲ್ ಆದ ಒಂದೇ ಒಂದು ಪಂಚ್ … ಐಸಿಯು ಕೋಮಾವರೆಗೆ ! ಬೆಚ್ಚಿಬೀಳಿಸಿದ ಜಿಮ್ ಪಂಚ್ ವೀಡಿಯೋ.ದೇಹ ಗಟ್ಟಿಯಾಗಿತ್ತು… ಮನಸ್ಸು ದುರ್ಬಲವಾಗಿತ್ತು!
ಬೋಗಸ್ ದೂರು ಕೊಡುವವರ ಮೇಲೆ ಕಠಿಣ ಕ್ರಮ ಕೈಗೊಳ್ಳದಿದ್ದರೆ ಗಂಡಾಂತರ ಗ್ಯಾರೆಂಟಿ
ಅಲ್ಲಿ ಸೌಮೆಂದು ಅಧಿಕಾರಿ…. ಇಲ್ಲಿ ಸಾಮ್ರಾಟ್ ಚೌದರಿ, ಹೆಲ್ತ್ ಮಿನಿಸ್ಟರ್ ನಿಶಾಂತ್….
ಎಲ್ಪಿಜಿ ಗ್ಯಾಸ್ ದರದಲ್ಲಿ ಏರಿಕೆ:  ಮಧ್ಯಮ ವರ್ಗದವರಲ್ಲಿ ಹತಾಶೆ
17ನೇ ಆಯವ್ಯಯ ಮಂಡನೆ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ
ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಮಚ್ಚು ದಾಳಿ: ಕಾಲೇಜಿಗೆ ತೆರಳುತ್ತಿದ್ದ ಪಿಯುಸಿ ವಿದ್ಯಾರ್ಥಿನಿ ಮೇಲೆ ಹಲ್ಲೆ; ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು
ಉಡುಪಿಯ ಮಾರ್ಕೆಟ್‌ 99 ಮ್ಯಾನೇಜರ್‌ ವಿರುದ್ಧ ₹13.39 ಲಕ್ಷ ದುರ್ಬಳಕೆ ಪ್ರಕರಣ ದಾಖಲು…
ವೆಟ್-ವೆಲ್‌ಗಳ ಕಳಪೆ ನಿರ್ವಹಣೆಚರಂಡಿ-ಬಾವಿಗಳಿಗೆ ಡ್ರೈನೇಜ್ ನೀರು..
ಸಿಐಡಿ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್: ವಂಚಕರ ಬಲೆಯಿಂದ ಜಸ್ಟ್ ಎಸ್ಕೇಪ್
ಕೊಲೆ ಆರೋಪಿಯ ದೂರುದಾರನ ವಿಷ ಸೇವನೆಯ ಬಗ್ಗೆ  ಸ್ಪಷ್ಟನೆ
ವಿವಾಹಿತ ದಂಪತಿಗಳಿಗೆ ಜಂಟಿ ITR ವ್ಯವಸ್ಥೆ ತರಲು- ಸಂಸತ್ತಿನಲ್ಲಿ Raghav Chadha ಆಗ್ರಹ.
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ಯಾಂಕಾಕ್‌ನಿಂದ ಬಂದ ಪ್ರಯಾಣಿಕನ ಬ್ಯಾಗ್‌ನಲ್ಲಿ 47 ಜೀವಂತ ಅಪರೂಪದ ಪ್ರಾಣಿಗಳು ಪತ್ತೆ! 
ನಿಮ್ಮ ಪ್ರೊಫೈಲ್ ಪಿಕ್ಚರ್ ಸೇಫ್ ಇದೆಯೇ?ಸ್ಮಾರ್ಟ್‌ಫೋನ್ ಬಳಕೆದಾರರೇ ಎಚ್ಚರ! AI ಡೀಪ್‌ಫೇಕ್ ಮಾಯಾಜಾಲ, ಸೈಬರ್ ಕ್ರೈಂ ಪೊಲೀಸರ ಅಧಿಕೃತ ವಾರ್ನಿಂಗ್!
ಕಾಂಗ್ರೆಸ್ ದೇಶದ ಹಿತಾಸಕ್ತಿಯ ವಿರುದ್ಧ ನಡೆದುಕೊಳ್ಳುತ್ತಿದೆ- ಪ್ರಧಾನಿ ಮೋದಿ ಆರೋಪ
ಡಿಕೆ ಶಿವಕುಮಾರ್ ಪ್ರತಿಷ್ಠೆ ಪಣಕ್ಕಿಟ್ಟ ಪರಿಷತ್ ಚುನಾವಣೆ!
ಜಬಲ್ಪುರ್ ದುರಂತಕ್ಕೆ ಹೊಣೆ ಯಾರು? ಕ್ರಮ ಏನು?
ಬಾಲಕಾರ್ಮಿಕ ಪತ್ತೆ : ಮಾಲೀಕನಿಗೆ ಜೈಲು, ದಂಡ
ಅರೆ ವಾ..! ಕರ್ನಾಟಕದ ಜನರಿಗೆ ಫ್ಯಾನ್ಸಿ ನಂಬರ್‌ಗಳೇ ಫೇವರಿಟ್…RTOಗೆ ₹118 ಕೋಟಿ ಆದಾಯ!
ಸ್ಪೀಕರ್ ಯುಟಿ ಖಾದರ್‌ಗೆ ಮುತ್ತಿಗೆ: 11 ಜನರ ವಿರುದ್ಧ FIR
ನಿದ್ರೆಯಲ್ಲಿದ್ದ ಪುಟ್ಟ ಕಂದಮ್ಮಗಳು ಮತ್ತೆ ಏಳಲೇ ಇಲ್ಲ… ಕಾಂಪೌಂಡ್ ಗೋಡೆ ಕುಸಿದು ಮಂಗಳೂರಿನಲ್ಲಿ ಹೃದಯವಿದ್ರಾವಕ ದುರಂತ!
ರಾಮನ ಹೆಸರಲ್ಲಿ ‘ರಾವಣ’ ರಾಜ್ಯ-ಕರ್ನಾಟಕಕ್ಕೂ ತಟ್ಟಿದ ಕಳಂಕ!ರಾಮನ ಹೆಸರಲ್ಲಿ ಭಕ್ತರಿಗೇ ನಾಮ-ಅಯೋಧ್ಯೆಯ ಕೋಟಿಕೋಟಿ ಲೂಟಿಗೆ ಬೀದರ್ ಕನೆಕ್ಷನ್!
ಮಾದಕ ವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯ ಬಂಧನ
ಕಾರ್ಕಳದಲ್ಲಿ 2027ರ ಬಾಹುಬಲಿ ಮಹಾ ಮಜ್ಜನದ ಮಹೋತ್ಸವಕ್ಕೆ ದಿನ ಘೋಷಣೆ!
ಕಾಂಗ್ರೆಸ್‌ಗೆ ದಾವಣಗೆರೆ ಬಿಸಿ ತುಪ್ಪ!..“ಸಮುದಾಯದ ಹೆಸರಿನಲ್ಲಿ ರಾಜಕೀಯ… ಅಥವಾ ರಾಜಕೀಯದ ಹೆಸರಿನಲ್ಲಿ ಸಮುದಾಯ?”
ಲಕ್ನೋ ಕೋಚಿಂಗ್ ಸೆಂಟರ್‌ನಲ್ಲಿ ಭೀಕರ ಬೆಂಕಿ,15 ವಿದ್ಯಾರ್ಥಿಗಳು ಸಜೀವ ದಹನ ಹೃದಯವಿದ್ರಾವಕ ದುರಂತ