📍 Karavali Maruta
  • LOGIN
  • BREAKING
    ‘ಮೇಡ್ ಇನ್ ಮಂಗಳೂರು’ ಹಡಗು ಜರ್ಮನ್ ಸಂಸ್ಥೆಯ ತೆಕ್ಕೆಗೆ; ವಿಶ್ವದ ಗಮನ ಸೆಳೆದ ಚೌಗುಲೆ ಶಿಪ್‌ಯಾರ್ಡ್! ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ನಿಮ್ಮ ಮಾತು ಕೇಳಿ ರಾಜೀನಾಮೆ ನೀಡಿದ್ದೇನೆ. ಈಗ ನನ್ನ ಬೇಡಿಕೆ ಈಡೇರಿಸುವುದು ನಿಮ್ಮ ಸರದಿ  ಎಂದ ಸಿದ್ದರಾಮಯ್ಯ

    ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತಕ್ಷಣವೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯ ಹೈಕಮಾಂಡ್ ಬಂಗಲೆಗೆ ನುಗ್ಗಿದ್ದಾರೆ. ಅವರು ಹಾಗೇ ನುಗ್ಗುವುದರ ಹಿಂದಿನ ಉದ್ದೇಶವೇನು? ನಾನು ನಿಮ್ಮ ಮಾತಿಗೆ ಬೆಲೆ ಕೊಟ್ಟು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಶಾಸಕರ ಸಂಪೂರ್ಣ ಬೆಂಬಲ ಇದ್ದರೂ ಸಹ, ನಾನು ನಿಮಗೆ ಗೌರವ ನೀಡಿ ರಾಜೀನಾಮೆ ನೀಡಿದ್ದೇನೆ. ನೀವು ಹೇಳಿದಂತೆಯೇ ರಾಜೀನಾಮೆ ಕೊಟ್ಟು ನಿಮ್ಮ ಮುಂದಿದ್ದೇನೆ ನೋಡಿ, ಈಗ ನನ್ನ ಬೇಡಿಕೆ ಈಡೇರಿಸುವುದು  ನಿಮ್ಮ ಜವಾಬ್ದಾರಿಯಾಗಿದೆ  ಎಂದು ಜಟ್ಟಿಯಂತೆ ಕೂತಿದ್ದಾರೆ ಸಿದ್ದರಾಮಯ್ಯ.

    ಹೌದು ದೆಹಲಿಗೆ ಹೋಗಿರುವ ಸಿದ್ದರಾಮಯ್ಯ, ತಮ್ಮ ರಾಜಕೀಯ ದಾಳವನ್ನು ಉರುಳಿಸಲು ಪ್ರಾರಂಭಿಸಿದ್ದಾರೆ. ರಾಷ್ಟ್ರ ರಾಜಕಾರಣಕ್ಕೆ ಬರಲು ನನ್ನ ಮನಸ್ಸು ಒಪ್ಪುತ್ತಿಲ್ಲ ನಾನೇನಿದ್ದರೂ ರಾಜ್ಯದಲ್ಲಿಯೇ ಸಕ್ರಿಯ ನಾಗರುತ್ತೇನೆ ಎಂದು ಹೇಳುತ್ತಲೇ, ತಮ್ಮದೇ ಆದ ಲಿಸ್ಟನ್ನು  ವರಿಷ್ಠರ ಬಳಿ ಇಟ್ಟಿದ್ದಾರೆ

    ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲು ಸುತಾರಾಂ ಇಷ್ಟಪಡದ ಸಿದ್ದರಾಮಯ್ಯ, ವರಿಷ್ಠರನ್ನು ಎದುರು ಹಾಕಿಕೊಳ್ಳಲಾಗದೆ ಡಿಕೆ ಮುಖ್ಯಮಂತ್ರಿ ಗಾದಿಗೆರಲು ಗ್ರೀನ್ ಸಿಗ್ನಲ್ ಕೊಟ್ಟಿದ್ದರೆ. ಆದರೆ ಮನಸ್ಸು ಡಿಕೆ ಮುಖ್ಯಮಂತ್ರಿ ಆಗಿ ಒಂದು ವರೆಯಲು ಒಪ್ಪುತ್ತಿಲ್ಲ. ಹಾಗಾಗಿಯೇ ಈಗ ಸರ್ಕಾರ ಹಾಗೂ ಪಕ್ಷದ ಮೇಲೆ ತಮ್ಮ ಪ್ರಬಲ ಹಿಡಿತವನ್ನು ಸ್ಥಾಪಿಸುವ ಕೆಲಸಕ್ಕಾಗಿಯೇ ಸಿದ್ದರಾಮಯ್ಯ ಮಗನ ಜೊತೆಗೆ ದೆಹಲಿಯ ಪ್ರಯಾಣ ಮುಂದುವರೆಸಿದ್ದಾರೆ.

    ರಾಹುಲ್ ಗಾಂಧಿಯವರ ನಿವಾಸಕ್ಕೆ ಅಧಿಕೃತವಾಗಿ ಭೇಟಿ ನೀಡಿದ ಮಾಜಿ ಸಿಎಂ, ನಿಮ್ಮ ಮಾತನ್ನು ಪಾಲಿಸಿದ್ದೇನೆ. ಇನ್ನು ನನ್ನ ಇಚ್ಛೆಯನ್ನು ಈಡೇರಿಸುವುದು ನಿಮ್ಮ ಹೊಣೆ ಎಂದು ಮುಗುಳ್ನಗುತ್ತಲೇ ಪಟ್ಟಿಯನ್ನು ಮುಂದಿಟ್ಟಿದ್ದಾರೆ ಎನ್ನಲಾಗಿದೆ. ಆ ಪಟ್ಟಿಯಲ್ಲಿರುವ  20 ಜನರ ಪೈಕಿ ಕನಿಷ್ಠ 15 ಜನರಿಗಾದರೂ ಮಂತ್ರಿ ಮಾಡಬೇಕೆಂದು ಹಾಗೂ ಅವರಿಗೆ ಸಚಿವ ಸ್ಥಾನ ನೀಡಬೇಕೆನ್ನುವ ಪಟ್ಟಿ ಹೈಕಮಾಂಡ್ ಮುಂದೆ ಇಟ್ಟಿದ್ದಾರೆ.

    ರಾಜ್ಯದಲ್ಲಿ, ಸಾಮಾಜಿಕ ನ್ಯಾಯದ ಅವಶ್ಯಕತೆ ಖಂಡಿತಾ ಇದೆ. ಕಾಂಗ್ರೆಸಿನ ಭವಿಷ್ಯ ಇರುವುದೇ ಆ ವಿಚಾರದಲ್ಲಿ. ಅಹಿಂದ ವರ್ಗ ಸಂಪೂರ್ಣವಾಗಿ ನನ್ನ ಜೊತೆಗಿದೆ. ಅವರು ನನ್ನ ಸಾಮಾಜಿಕ ನ್ಯಾಯದ ವಿಚಾರದ ಪರವಾಗಿದ್ದಾರೆ. ಆ ವಿಚಾರದಲ್ಲಿ ನಾನು ಎಂದು ರಾಜ ಮಾಡಿಕೊಂಡಿಲ್ಲ ಅನ್ನುವುದು ಅವರಿಗೆ ಗೊತ್ತಿದೆ. ಒಂದೊಮ್ಮೆ ನಾನು ತಟಸ್ಥರಾದರೆ ಸರ್ಕಾರಕ್ಕೆ ಹಾಗೂ ಪಕ್ಷಕ್ಕೆ ಬಹುದೊಡ್ಡ ಡ್ಯಾಮೇಜ್ ಆಗುತ್ತದೆ ಎಂಬುದನ್ನು ಈ ಸಂದರ್ಭದಲ್ಲಿ ರಾಹುಲ್ ಗಾಂಧಿಯ ಮುಂದೆ ಹೇಳಿದ್ದಾರೆ ಅನ್ನುವುದಕ್ಕಿಂತ ಸೈಲೆಂಟಾಗಿ ನಗುನಗುತ್ತಲೇ ಥ್ರೆಟ್ ನೀಡಿದ್ದಾರೆ ಎನ್ನಬಹುದು

    ಪ್ರಿಯಾಂಕ ಗಾಂಧಿ ಹಾಗೂ ಸೋನಿಯಾ ಗಾಂಧಿಯವರನ್ನು ಭೇಟಿಯಾಗಿರುವ ಸಿದ್ದರಾಮಯ್ಯನವರು, ಪಕ್ಷ ಹಾಗೂ ಸರ್ಕಾರ ಎರಡಕ್ಕೂ ಭದ್ರತೆ ಇರಬೇಕು ಎಂದರೆ ನಾನು ರಾಜ್ಯದಲ್ಲಿ ಸಕ್ರಿಯನಾಗಿರಲೇಬೇಕು. ನಾನು ಸಕ್ರಿಯನಾಗಿರಬೇಕು ಎಂದರೆ ನನಗೆ ಬಲ ತುಂಬುವ ಕೆಲಸವನ್ನು ನೀವು ಮಾಡಬೇಕು. ಸರ್ಕಾರ ಹಾಗೂ ಪಕ್ಷ ಎರಡು ವಿಚಾರದಲ್ಲಿ ನನಗೆ ಅವಕಾಶ ಇರುವ ಹಾಗೆ ನೋಡಿಕೊಳ್ಳಬೇಕು. ಹೀಗೆ ಮಾಡಿದಲ್ಲಿ, 2028ರ ಚುನಾವಣೆ ಫಲಿತಾಂಶ ನಮ್ಮ ಪರವಾಗಿರುತ್ತದೆ ಎನ್ನುವುದನ್ನು ನಾನು ಈಗ ವಾಗ್ದಾನ ನೀಡುತ್ತೇನೆ ಎಂದು ಕಾನ್ಫಿಡೆನ್ಸ್ ನಲ್ಲಿ ಹೇಳಿದ್ದಾರೆ ಎನ್ನಲಾಗಿದೆ.

    ಆದರೆ, ಇದರ ಮುನ್ಸೂಚನೆ ಸಿಗುತ್ತಿದ್ದಂತೆಯೇ ನಿಯೋಜಿತ ಮುಖ್ಯಮಂತ್ರಿ, ಡಿಕೆ ಶಿವಕುಮಾರ್ ಕೂಡ ಅದಕ್ಕೆ ತಕ್ಕ ಪ್ಲಾನ್ ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ಸರ್ಕಾರದಲ್ಲಿ ಮುಖ್ಯಮಂತ್ರಿಯಾದ ನನಗೆ ಬೇಡಿ ಹಾಕುವ ಕೆಲಸ ಆಗಬಾರದು, ತಂತ್ರವಾಗಿ ಕೆಲಸ ನಿರ್ವಹಿಸಲು  ಅವಕಾಶ ಇರಬೇಕು ಎಂಬುದು ಡಿಕೆ ಶಿವಕುಮಾರ್ ಬೇಡಿಕೆ. ಸಿದ್ದರಾಮಯ್ಯನವರು ಕಳೆದ ಮೂರು ವರ್ಷದಲ್ಲಿ ಹೇಗೆ ಸ್ವತಂತ್ರವಾಗಿ ಆಡಳಿತ ನಡೆಸಿದ್ದಾರೋ, ಅದೇ ರೀತಿಯ ಆಡಳಿತ ನಡೆಸಲು ಮುಂದಿನ ಎರಡು ವರ್ಷಕ್ಕೆ ಸ್ವಾತಂತ್ರ್ಯ ನೀಡಬೇಕು ಅನ್ನುವುದು ಡಿಕೆ ಶಿವಕುಮಾರ್ ಖಡಕ್ ಆಗ್ರಹವಾಗಿದೆ.

    ಒಂದು ಕಡೆ ಸಿದ್ದರಾಮಯ್ಯ ನಾಲ್ಕು ಉಪ ಮುಖ್ಯಮಂತ್ರಿಗಳಿಗೆ ಪಟ್ಟು ಹಿಡಿದಿದ್ದಾರೆ. ಡಿಕೆ ಶಿವಕುಮಾರ್ ಒಬ್ಬರಿಗೆನೆ ಉಪಮುಖ್ಯಮಂತ್ರಿ ಅನ್ನುತ್ತಿದ್ದಾರೆ. ಹಾಗೆಯೇ, ಸಚಿವ ಸ್ಥಾನದ ವಿಚಾರದಲ್ಲೂ ಬಹುತೇಕ ಹಿರಿಯರಿಗೆ ಹಾಗೂ ಪಕ್ಷನಿಷ್ಠ ರಿಗೆ ಸಚಿವ ಸ್ಥಾನ ಮುಂದುವರೆಯುತ್ತದೆ, ಹಾಗೆಯೇ ಹೊಸಬರಿಗೆ ಅವಕಾಶ ಕೊಡುವ ನಿಟ್ಟಿನಲ್ಲಿ ಮುನ್ನಡೆಯುವುದು ಅನಿವಾರ್ಯ. ಇದೆಲ್ಲವುದರ ಕಾರಣದಿಂದಾಗಿ, ಆಡಳಿತಾತ್ಮಕ ವಿಚಾರದಲ್ಲಿ ಮುಖ್ಯಮಂತ್ರಿಯಾದವರಿಗೆ ಸ್ವಾತಂತ್ರ್ಯ ಅತ್ಯವಶ್ಯಕವಾಗಿ ಬೇಕು ಆ ವಿಚಾರದಲ್ಲಿ ಬೇರೆಯವರ ಹಸ್ತಕ್ಷೇಪ ಇರಬಾರದು ಎಂದು ಪ್ರತಿಪಾದಿಸುತ್ತಿದ್ದಾರೆ ಡಿಕೆ ಶಿವಕುಮಾರ್. ಒಟ್ಟಿನಲ್ಲಿ ಈಗ ಹೊಸ ಸರ್ಕಾರದ ಮೇಲೆ ಹಿಡಿತ ಸಾಧಿಸಲು ಸಿದ್ದರಾಮಯ್ಯ ಕಸರತ್ತು ಪ್ರಾರಂಭಿಸಿದ್ದಾರೆ. ಡಿಕೆ ಶಿವಕುಮಾರ್ ಅದಕ್ಕೆ ಅವಕಾಶ ನೀಡಬಾರದು ಎನ್ನುವ ನಿಟ್ಟಿನಲ್ಲಿ ತಮ್ಮ ತಂತ್ರಗಾರಿಕೆ ಶುರು ಮಾಡಿದ್ದಾರೆ. ಜೂನ್ 5ಕ್ಕೆ ಎಲ್ಲವೂ ಬಹಿರಂಗವಾಗಲಿದೆ ಬಿಡಿ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಅಯೋಧ್ಯೆಯಲ್ಲಿ ನ್ಯಾಯಕ್ಕಾಗಿ ವಕೀಲರ ಮೆರವಣಿಗೆ..ಭುಗಿಲೆದ್ದ ಪ್ರತಿಭಟನೆ..ಕಠಿಣ ಕ್ರಮಕ್ಕೆ ಆಗ್ರಹ
    ಕರ್ನಾಟಕದಲ್ಲಿ ಅತಿ ಕನಿಷ್ಠ ಮಟ್ಟಕ್ಕೆ ಕುಸಿದ ‘ಟೀನ್ ಪ್ರೆಗ್ನೆನ್ಸಿ’! 70% ಕೇಸ್‌ಗಳು ಮಾಯವಾಗಿದ್ದು ಹೇಗೆ?
    ಮೊದಲ ದಿನವೇ ಯು.ಟಿ. ಖಾದರ್ ಖಡಕ್ ನಡೆ …PF ಕೊಡದ ಗುತ್ತಿಗೆದಾರನಿಗೆ ನೋಟಿಸ್, ಅಧಿಕಾರಿಗಳಿಗೆ ತರಾಟೆ
    ಪ್ರಮೋದ್ ಮಧ್ವರಾಜ್ ಅವರಿಗೆ ಕೊನೆಗೂ ಸಿಕ್ಕಿತು ಗೌರವ
    ಗಾಯತ್ರಿ ಶಾಂತೇಗೌಡ ಸಚಿವ ಸ್ಥಾನ ವಿವಾದ: ರಾಜಕೀಯ ಚರ್ಚೆಗೆ ಹೊಸ ತಿರುವು…. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಗುರುತರ ಆರೋಪ
    ಶಿಕ್ಷಣದ ಹೆಸರಿನಲ್ಲಿ ಡ್ರಗ್ ವ್ಯವಹಾರ! ಬೆಚ್ಚಿಬಿದ್ದ ಮಂಗಳೂರು…
    ಬಿಡದಿ “ಸಮಗ್ರ ಉಪನಗರ” ಯೋಜನೆ ಕೈಬಿಡಿ: ಸಿಎಂ ಡಿಕೆ ಶಿಗೆ ಎಚ್.ಡಿ. ದೇವೇಗೌಡ ಪತ್ರ
    ಮಂಗಳೂರು ಕಮಿಷನರ್ ವಿರುದ್ಧ ಎಸ್ಪಿ ಕಾಶಿನಾಥ್ ದೂರು ಕೊಡುತ್ತಿರುವುದು ಯಾಕೆ?
    ತೈಲ ಟ್ಯಾಂಕರ್ ಮೇಲೆ ಇರಾನ್ ಆತ್ಮಹತ್ಯಾ ದೋಣಿ ದಾಳಿ – ಭಾರತೀಯ ನಾವಿಕ ಸಾವು
    ಭಾರತದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಅನ್ನೋ ಇತಿಹಾಸ ಬರೆಯಲಿದ್ದಾರೆ ‘ಡಿ ಕೆ ಶಿ’!
    ಇನ್ನೂ ಏಳು ದಿನ ಕರ್ನಾಟಕದ ಸಿಎಂ ಕುರ್ಚಿ ಕಾಲಿ… ಜೂನ್ 5 ರಂದು ಡಿಕೆ ಶಿವಕುಮಾರ್ ಪ್ರಮಾಣ ವಚನ!
    ಭಾರತದಲ್ಲಿ ಮೋದಿ-ಜಸ್ಸಿ ಹೈ-ಲೆವೆಲ್ ಮೀಟಿಂಗ್ – ಅಮೆಜಾನ್ ಬರೋಬ್ಬರಿ $48 ಬಿಲಿಯನ್ ಹೂಡಿಕೆಗೆ ಆಂಡಿ ಜಸ್ಸಿ ಮುದ್ರೆ!
    ಇರಾನ್ ದಾಳಿಗೆ ಬೆಂಜಿಮನೇತನ್ಯಹೋ ಕೊಲ್ಲಲ್ಪಟ್ಟಿದ್ದಾರಾ?
    ದೊಡ್ಡ ಬಜೇಟ್  ತುಳು ಸಿನಿಮಾ`ಗಜಾನನ ಕ್ರಿಕೆಟರ್ಸ್’ ಮೇ 22 ರಂದು ತೆರೆಗೆ
    ಕೂತ್ಕೊಳಪ್ಪ ಡಿಕೆಶಿ ನಿಂದೆ ಖುರ್ಚಿ … ಅಂತ CM ಸಿದ್ದು ಯಾವಾಗ ಹೇಳ್ಬೇಕಿತ್ತು??ಅಹಿಂದ ಮಾಸ್ ಲೀಡರ್ ವರ್ಸಸ್ ಮನಿ ಮ್ಯಾನ್..ಕರ್ನಾಟಕ ರಾಜಕಾರಣದ ಅತಿ ದೊಡ್ಡ ಟ್ವಿಸ್ಟ್!
    ಕೆತ್ತಿಕಲ್‌ನಿಂದ ಚಾರ್ಮಾಡಿವರೆಗೆ ಅಪಾಯದ ಗಂಟೆ! ಭೂಕುಸಿತ ಭೀತಿಯಲ್ಲಿ ಕರಾವಳಿ ರಸ್ತೆಗಳು !ಮಳೆ ಬಂದ ಮೇಲೆ ಸಭೆ, ಪರಿಶೀಲನೆ… ಆದರೆ ಮುನ್ನೆಚ್ಚರಿಕೆ ಎಲ್ಲಿದೆ?
    30 ವರ್ಷದ ಕನಸು ಸಾಕಾರ: ಮಾಣಿಲ–ಪೆರ್ಲ ಸಂಪರ್ಕಕ್ಕೆ ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್!
    ಮಳೆ ಬರುತ್ತದೆ ಎಂದಾಗ ರಜೆ ಇಲ್ಲ… ರಜೆ ಕೊಟ್ಟ ದಿನ ಮಳೆಯೇ ಇಲ್ಲ!ಹವಾಮಾನ ಮುನ್ಸೂಚನೆನಾ? ಖಚಿತ ಭವಿಷ್ಯವಾಣಿಯಾ? ಮಳೆ–ರಜೆ ಗೊಂದಲಕ್ಕೆ ಕಾರಣವೇನು?
    108 ವರ್ಷಗಳ ಇತಿಹಾಸದಲ್ಲಿ ಪಾಟ್ನಾವಿಶ್ವವಿದ್ಯಾಲಯದಲ್ಲಿ ಹೊಸ ಅಧ್ಯಾಯ- ಮಹಿಳೆಯರ ಐತಿಹಾಸಿಕ ಹೆಜ್ಜೆ!
    ಮತ್ತೆ ಹೊತ್ತಿ ಉರಿದ ಮಧ್ಯಪ್ರಾಚ್ಯ: ಇಸ್ರೇಲ್ ಪ್ರಧಾನಿ ನೆತನ್ಯಾಹು ಹೇಳಿಕೆ ಬೆನ್ನಲ್ಲೇ ಲೆಬನಾನ್ ಮತ್ತು ಗಾಜಾದಲ್ಲಿ ಹೆಚ್ಚಿದ ಭೀಕರ ಯುದ್ಧದ ತೀವ್ರತೆ.
    ಭಾರತದ ‘ಗೋಲ್ಡನ್ ಗರ್ಲ್’ ಮೀರಾಬಾಯಿ ಚಾನು ಮತ್ತೊಮ್ಮೆ ಇತಿಹಾಸ ಬರೆದಿದ್ದಾರೆ! 
    “ವೇತನಕ್ಕಾಗಿ ಹೋರಾಟದಿಂದ ಆರಂಭವಾದ ಪ್ರತಿಭಟನೆ… ನೋಯ್ಡಾ ರಸ್ತೆಗಳಲ್ಲಿ ಅರಾಜಕತೆ, ಬೆಂಕಿ, ಘರ್ಷಣೆ — ಈಗ ಸರ್ಕಾರವೇ ತನಿಖೆ ನಡೆಸುವಷ್ಟು ಗಂಭೀರ ಪರಿಸ್ಥಿತಿ!” 🔥🚨
    “ಶಾಲಾ ಬಸ್‌ನಲ್ಲಿ ಪ್ರಯಾಣಿಸುವ ಪ್ರತಿಯೊಂದು ಮಗುವಿನ ಸುರಕ್ಷತೆಗೆ ಶಾಲೆಯೇ ಹೊಣೆ!”
    ದೊಡ್ಡ ಮಿಕವನ್ನೇ ಬಲೆಗೆ ಹಾಕಿದ  ಲೋಕಾಯುಕ್ತ ಪೊಲೀಸರು 
    ಗಂಡನಿಗೆ ಚಿನ್ನ ಕಳ್ಳತನದ ಪಿಎಚ್‌ಡಿ, ಹೆಂಡತಿಗೆ ಮಾರ್ಕೆಟಿಂಗ್ ಜಾಣ್ಮೆ…ಆಹಾ ಒಮ್ಮೆ ಓದಿ ಎಂಥಾ ಜೋಡಿ..
    ಹವ್ಯಕ ಭಾಷಾ ಅಕಾಡೆಮಿ ಅಸ್ತಿತ್ವಕ್ಕೆ ಗ್ರೀನ್ ಸಿಗ್ನಲ್ 
    ಘರ್ಷಣೆಗಳ ನಡುವೆಯೂ ಜನರ ಮತದ ಹಕ್ಕು ಅಚಲ…ಸಂಕ್ಷಿಪ್ತ ನೋಟ..
    ಒಂದು ವಾಟ್ಸ್ಯಾಪ್ ಮೆಸೇಜ್… ಕೋರ್ಟ್ ವರೆಗೂ ಎಳೆದ ಶಾಕ್ ಘಟನೆಯ ಸುತ್ತ..
    ದುರಂತ ಸಂಭವಿಸುವ ಮುನ್ನ ಮೆಸ್ಕಾಂ ಎಚ್ಚೆತ್ತುಕೊಳ್ಳುವುದೇ? ಮಂಗಳೂರಿನ PVS ರಸ್ತೆಯಲ್ಲೇ ಮೆಸ್ಕಾಂ ಟ್ರಾನ್ಸ್‌ಫಾರ್ಮರ್ ಅಡಿಯಲ್ಲೇ ಸುತ್ತಲೂ ಒಣ ಕಸದ ಪ್ಲಾಸ್ಟಿಕ್ ಟಾರ್ಪಾಲಿನ್ ಮತ್ತು ಬಾಕ್ಸ್ ರಾಶಿ!
    ವಿದೇಶಿಗರ ಮೇಲೆ ನಿಗಾ ಇಟ್ಟ ಕೇಂದ್ರ ಗೃಹ ಇಲಾಖೆ! ನಿಯಮ ಮೀರಿದರೆ ಕಠಿಣ ಕ್ರಮ ಗ್ಯಾರಂಟಿ!