📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ನಿಮ್ಮ ಮಾತು ಕೇಳಿ ರಾಜೀನಾಮೆ ನೀಡಿದ್ದೇನೆ. ಈಗ ನನ್ನ ಬೇಡಿಕೆ ಈಡೇರಿಸುವುದು ನಿಮ್ಮ ಸರದಿ  ಎಂದ ಸಿದ್ದರಾಮಯ್ಯ

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತಕ್ಷಣವೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯ ಹೈಕಮಾಂಡ್ ಬಂಗಲೆಗೆ ನುಗ್ಗಿದ್ದಾರೆ. ಅವರು ಹಾಗೇ ನುಗ್ಗುವುದರ ಹಿಂದಿನ ಉದ್ದೇಶವೇನು? ನಾನು ನಿಮ್ಮ ಮಾತಿಗೆ ಬೆಲೆ ಕೊಟ್ಟು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಶಾಸಕರ ಸಂಪೂರ್ಣ ಬೆಂಬಲ ಇದ್ದರೂ ಸಹ, ನಾನು ನಿಮಗೆ ಗೌರವ ನೀಡಿ ರಾಜೀನಾಮೆ ನೀಡಿದ್ದೇನೆ. ನೀವು ಹೇಳಿದಂತೆಯೇ ರಾಜೀನಾಮೆ ಕೊಟ್ಟು ನಿಮ್ಮ ಮುಂದಿದ್ದೇನೆ ನೋಡಿ, ಈಗ ನನ್ನ ಬೇಡಿಕೆ ಈಡೇರಿಸುವುದು  ನಿಮ್ಮ ಜವಾಬ್ದಾರಿಯಾಗಿದೆ  ಎಂದು ಜಟ್ಟಿಯಂತೆ ಕೂತಿದ್ದಾರೆ ಸಿದ್ದರಾಮಯ್ಯ.

ಹೌದು ದೆಹಲಿಗೆ ಹೋಗಿರುವ ಸಿದ್ದರಾಮಯ್ಯ, ತಮ್ಮ ರಾಜಕೀಯ ದಾಳವನ್ನು ಉರುಳಿಸಲು ಪ್ರಾರಂಭಿಸಿದ್ದಾರೆ. ರಾಷ್ಟ್ರ ರಾಜಕಾರಣಕ್ಕೆ ಬರಲು ನನ್ನ ಮನಸ್ಸು ಒಪ್ಪುತ್ತಿಲ್ಲ ನಾನೇನಿದ್ದರೂ ರಾಜ್ಯದಲ್ಲಿಯೇ ಸಕ್ರಿಯ ನಾಗರುತ್ತೇನೆ ಎಂದು ಹೇಳುತ್ತಲೇ, ತಮ್ಮದೇ ಆದ ಲಿಸ್ಟನ್ನು  ವರಿಷ್ಠರ ಬಳಿ ಇಟ್ಟಿದ್ದಾರೆ

ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲು ಸುತಾರಾಂ ಇಷ್ಟಪಡದ ಸಿದ್ದರಾಮಯ್ಯ, ವರಿಷ್ಠರನ್ನು ಎದುರು ಹಾಕಿಕೊಳ್ಳಲಾಗದೆ ಡಿಕೆ ಮುಖ್ಯಮಂತ್ರಿ ಗಾದಿಗೆರಲು ಗ್ರೀನ್ ಸಿಗ್ನಲ್ ಕೊಟ್ಟಿದ್ದರೆ. ಆದರೆ ಮನಸ್ಸು ಡಿಕೆ ಮುಖ್ಯಮಂತ್ರಿ ಆಗಿ ಒಂದು ವರೆಯಲು ಒಪ್ಪುತ್ತಿಲ್ಲ. ಹಾಗಾಗಿಯೇ ಈಗ ಸರ್ಕಾರ ಹಾಗೂ ಪಕ್ಷದ ಮೇಲೆ ತಮ್ಮ ಪ್ರಬಲ ಹಿಡಿತವನ್ನು ಸ್ಥಾಪಿಸುವ ಕೆಲಸಕ್ಕಾಗಿಯೇ ಸಿದ್ದರಾಮಯ್ಯ ಮಗನ ಜೊತೆಗೆ ದೆಹಲಿಯ ಪ್ರಯಾಣ ಮುಂದುವರೆಸಿದ್ದಾರೆ.

ರಾಹುಲ್ ಗಾಂಧಿಯವರ ನಿವಾಸಕ್ಕೆ ಅಧಿಕೃತವಾಗಿ ಭೇಟಿ ನೀಡಿದ ಮಾಜಿ ಸಿಎಂ, ನಿಮ್ಮ ಮಾತನ್ನು ಪಾಲಿಸಿದ್ದೇನೆ. ಇನ್ನು ನನ್ನ ಇಚ್ಛೆಯನ್ನು ಈಡೇರಿಸುವುದು ನಿಮ್ಮ ಹೊಣೆ ಎಂದು ಮುಗುಳ್ನಗುತ್ತಲೇ ಪಟ್ಟಿಯನ್ನು ಮುಂದಿಟ್ಟಿದ್ದಾರೆ ಎನ್ನಲಾಗಿದೆ. ಆ ಪಟ್ಟಿಯಲ್ಲಿರುವ  20 ಜನರ ಪೈಕಿ ಕನಿಷ್ಠ 15 ಜನರಿಗಾದರೂ ಮಂತ್ರಿ ಮಾಡಬೇಕೆಂದು ಹಾಗೂ ಅವರಿಗೆ ಸಚಿವ ಸ್ಥಾನ ನೀಡಬೇಕೆನ್ನುವ ಪಟ್ಟಿ ಹೈಕಮಾಂಡ್ ಮುಂದೆ ಇಟ್ಟಿದ್ದಾರೆ.

ರಾಜ್ಯದಲ್ಲಿ, ಸಾಮಾಜಿಕ ನ್ಯಾಯದ ಅವಶ್ಯಕತೆ ಖಂಡಿತಾ ಇದೆ. ಕಾಂಗ್ರೆಸಿನ ಭವಿಷ್ಯ ಇರುವುದೇ ಆ ವಿಚಾರದಲ್ಲಿ. ಅಹಿಂದ ವರ್ಗ ಸಂಪೂರ್ಣವಾಗಿ ನನ್ನ ಜೊತೆಗಿದೆ. ಅವರು ನನ್ನ ಸಾಮಾಜಿಕ ನ್ಯಾಯದ ವಿಚಾರದ ಪರವಾಗಿದ್ದಾರೆ. ಆ ವಿಚಾರದಲ್ಲಿ ನಾನು ಎಂದು ರಾಜ ಮಾಡಿಕೊಂಡಿಲ್ಲ ಅನ್ನುವುದು ಅವರಿಗೆ ಗೊತ್ತಿದೆ. ಒಂದೊಮ್ಮೆ ನಾನು ತಟಸ್ಥರಾದರೆ ಸರ್ಕಾರಕ್ಕೆ ಹಾಗೂ ಪಕ್ಷಕ್ಕೆ ಬಹುದೊಡ್ಡ ಡ್ಯಾಮೇಜ್ ಆಗುತ್ತದೆ ಎಂಬುದನ್ನು ಈ ಸಂದರ್ಭದಲ್ಲಿ ರಾಹುಲ್ ಗಾಂಧಿಯ ಮುಂದೆ ಹೇಳಿದ್ದಾರೆ ಅನ್ನುವುದಕ್ಕಿಂತ ಸೈಲೆಂಟಾಗಿ ನಗುನಗುತ್ತಲೇ ಥ್ರೆಟ್ ನೀಡಿದ್ದಾರೆ ಎನ್ನಬಹುದು

ಪ್ರಿಯಾಂಕ ಗಾಂಧಿ ಹಾಗೂ ಸೋನಿಯಾ ಗಾಂಧಿಯವರನ್ನು ಭೇಟಿಯಾಗಿರುವ ಸಿದ್ದರಾಮಯ್ಯನವರು, ಪಕ್ಷ ಹಾಗೂ ಸರ್ಕಾರ ಎರಡಕ್ಕೂ ಭದ್ರತೆ ಇರಬೇಕು ಎಂದರೆ ನಾನು ರಾಜ್ಯದಲ್ಲಿ ಸಕ್ರಿಯನಾಗಿರಲೇಬೇಕು. ನಾನು ಸಕ್ರಿಯನಾಗಿರಬೇಕು ಎಂದರೆ ನನಗೆ ಬಲ ತುಂಬುವ ಕೆಲಸವನ್ನು ನೀವು ಮಾಡಬೇಕು. ಸರ್ಕಾರ ಹಾಗೂ ಪಕ್ಷ ಎರಡು ವಿಚಾರದಲ್ಲಿ ನನಗೆ ಅವಕಾಶ ಇರುವ ಹಾಗೆ ನೋಡಿಕೊಳ್ಳಬೇಕು. ಹೀಗೆ ಮಾಡಿದಲ್ಲಿ, 2028ರ ಚುನಾವಣೆ ಫಲಿತಾಂಶ ನಮ್ಮ ಪರವಾಗಿರುತ್ತದೆ ಎನ್ನುವುದನ್ನು ನಾನು ಈಗ ವಾಗ್ದಾನ ನೀಡುತ್ತೇನೆ ಎಂದು ಕಾನ್ಫಿಡೆನ್ಸ್ ನಲ್ಲಿ ಹೇಳಿದ್ದಾರೆ ಎನ್ನಲಾಗಿದೆ.

ಆದರೆ, ಇದರ ಮುನ್ಸೂಚನೆ ಸಿಗುತ್ತಿದ್ದಂತೆಯೇ ನಿಯೋಜಿತ ಮುಖ್ಯಮಂತ್ರಿ, ಡಿಕೆ ಶಿವಕುಮಾರ್ ಕೂಡ ಅದಕ್ಕೆ ತಕ್ಕ ಪ್ಲಾನ್ ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ಸರ್ಕಾರದಲ್ಲಿ ಮುಖ್ಯಮಂತ್ರಿಯಾದ ನನಗೆ ಬೇಡಿ ಹಾಕುವ ಕೆಲಸ ಆಗಬಾರದು, ತಂತ್ರವಾಗಿ ಕೆಲಸ ನಿರ್ವಹಿಸಲು  ಅವಕಾಶ ಇರಬೇಕು ಎಂಬುದು ಡಿಕೆ ಶಿವಕುಮಾರ್ ಬೇಡಿಕೆ. ಸಿದ್ದರಾಮಯ್ಯನವರು ಕಳೆದ ಮೂರು ವರ್ಷದಲ್ಲಿ ಹೇಗೆ ಸ್ವತಂತ್ರವಾಗಿ ಆಡಳಿತ ನಡೆಸಿದ್ದಾರೋ, ಅದೇ ರೀತಿಯ ಆಡಳಿತ ನಡೆಸಲು ಮುಂದಿನ ಎರಡು ವರ್ಷಕ್ಕೆ ಸ್ವಾತಂತ್ರ್ಯ ನೀಡಬೇಕು ಅನ್ನುವುದು ಡಿಕೆ ಶಿವಕುಮಾರ್ ಖಡಕ್ ಆಗ್ರಹವಾಗಿದೆ.

ಒಂದು ಕಡೆ ಸಿದ್ದರಾಮಯ್ಯ ನಾಲ್ಕು ಉಪ ಮುಖ್ಯಮಂತ್ರಿಗಳಿಗೆ ಪಟ್ಟು ಹಿಡಿದಿದ್ದಾರೆ. ಡಿಕೆ ಶಿವಕುಮಾರ್ ಒಬ್ಬರಿಗೆನೆ ಉಪಮುಖ್ಯಮಂತ್ರಿ ಅನ್ನುತ್ತಿದ್ದಾರೆ. ಹಾಗೆಯೇ, ಸಚಿವ ಸ್ಥಾನದ ವಿಚಾರದಲ್ಲೂ ಬಹುತೇಕ ಹಿರಿಯರಿಗೆ ಹಾಗೂ ಪಕ್ಷನಿಷ್ಠ ರಿಗೆ ಸಚಿವ ಸ್ಥಾನ ಮುಂದುವರೆಯುತ್ತದೆ, ಹಾಗೆಯೇ ಹೊಸಬರಿಗೆ ಅವಕಾಶ ಕೊಡುವ ನಿಟ್ಟಿನಲ್ಲಿ ಮುನ್ನಡೆಯುವುದು ಅನಿವಾರ್ಯ. ಇದೆಲ್ಲವುದರ ಕಾರಣದಿಂದಾಗಿ, ಆಡಳಿತಾತ್ಮಕ ವಿಚಾರದಲ್ಲಿ ಮುಖ್ಯಮಂತ್ರಿಯಾದವರಿಗೆ ಸ್ವಾತಂತ್ರ್ಯ ಅತ್ಯವಶ್ಯಕವಾಗಿ ಬೇಕು ಆ ವಿಚಾರದಲ್ಲಿ ಬೇರೆಯವರ ಹಸ್ತಕ್ಷೇಪ ಇರಬಾರದು ಎಂದು ಪ್ರತಿಪಾದಿಸುತ್ತಿದ್ದಾರೆ ಡಿಕೆ ಶಿವಕುಮಾರ್. ಒಟ್ಟಿನಲ್ಲಿ ಈಗ ಹೊಸ ಸರ್ಕಾರದ ಮೇಲೆ ಹಿಡಿತ ಸಾಧಿಸಲು ಸಿದ್ದರಾಮಯ್ಯ ಕಸರತ್ತು ಪ್ರಾರಂಭಿಸಿದ್ದಾರೆ. ಡಿಕೆ ಶಿವಕುಮಾರ್ ಅದಕ್ಕೆ ಅವಕಾಶ ನೀಡಬಾರದು ಎನ್ನುವ ನಿಟ್ಟಿನಲ್ಲಿ ತಮ್ಮ ತಂತ್ರಗಾರಿಕೆ ಶುರು ಮಾಡಿದ್ದಾರೆ. ಜೂನ್ 5ಕ್ಕೆ ಎಲ್ಲವೂ ಬಹಿರಂಗವಾಗಲಿದೆ ಬಿಡಿ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಮೇ 29ರಿಂದ ತಣ್ಣೀರುಬಾವಿ ಬೀಚ್‌ನಲ್ಲಿ ಮೂರು ದಿನಗಳ ರಾಷ್ಟ್ರಮಟ್ಟದ ಸರ್ಫಿಂಗ್ ಸ್ಪರ್ಧೆ…
ಮಾರ್ಚ್ 17 :ಮಂಗಳೂರಿನಲ್ಲಿ ವಿಶ್ವ ಗ್ರಾಹಕರ ದಿನಾಚರಣೆ-ಗ್ರಾಹಕರ ಹಕ್ಕುಗಳ ಜಾಗೃತಿ ಕಾರ್ಯಕ್ರಮ
ಜೆಡಿಎಸ್  ಜನರಲ್ ಸೆಕ್ರೆಟರಿಯಾಗಿ ಯೋಗೇಶ್ ಶೆಟ್ಟಿ ಜಪ್ಪು ಆಯ್ಕೆಯ ಲೆಕ್ಕಾಚಾರವೇನು?
ಚುನಾವಣೆಯವರೆಗೆ ಮೌನ, ನಂತರ LPG ದರ ಭಾರಿ ಏರಿಕೆ –ಇದು ರಾಜಕೀಯ ಅಜೆಂಡಾನಾ?
ಒಂದೂವರೆ ವರ್ಷ ಫ್ರೀ ಬಸ್  ಪ್ರಯಾಣ…ಕೊನೆಯಲ್ಲಿ ದಂಡ ಮತ್ತು ಜೈಲು ಶಿಕ್ಷೆ!
ಅಮೆರಿಕಾ ಭಾರತವನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿದೆ” – ಕೆ.ಸಿ. ವೇಣುಗೋಪಾಲ್
ಕರ್ನಾಟಕದಲ್ಲಿ ಅತಿ ಕನಿಷ್ಠ ಮಟ್ಟಕ್ಕೆ ಕುಸಿದ ‘ಟೀನ್ ಪ್ರೆಗ್ನೆನ್ಸಿ’! 70% ಕೇಸ್‌ಗಳು ಮಾಯವಾಗಿದ್ದು ಹೇಗೆ?
ಹೊರಗೆ ಕ್ಯಾಂಟೀನ್…ಆದ್ರೆ ಒಳಗೆ ನಡೆಯುತ್ತಿತ್ತು ಬೇರೆದ್ದೇ ಆಟ..!ಬಯಲಾಯ್ತು ಬೆಚ್ಚಿಬೀಳಿಸುವ ದಂಧೆ. 
ಟೂರಿಸಂ ಡೆವಲಪ್‌ಮೆಂಟ್‌ಗೆ ಅಧಿಕಾರಿಗಳೇ ಮಾರಕ
ಟೀಕೆಗಳು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿನ ಸೌಂದರ್ಯ – ಖಾದರ್
ಕೊಲೆ ಆರೋಪಿಗಳ ಕಾರು ಮಾಣಿಯಲ್ಲಿ ಪತ್ತೆ ….!
ಬಾಗಲಕೋಟೆ ಜಿಲ್ಲೆ ಕೆರೂರು ಠಾಣೆಯಲ್ಲಿ ಪಿಎಸ್ಐ & ಪೇದೆ ₹1.70 ಲಕ್ಷ ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ!
ಬೆಂಗಳೂರು ಕೆಪಿಸಿಸಿ ಕಚೇರಿಯಲ್ಲಿ ಎರಡು ಬಣಗಳ ರಣರಂಗ!ಮಾತಿನ ಚಕಮಕಿ ಹೊಡೆದಾಟಕ್ಕೆ ತಿರುಗಿದ ಕ್ಷಣ…
Top 5, ಹೆಚ್ಚು ಅನುದಾನ ಪಡೆದ ಇಲಾಖೆಗಳು ಯಾವವು ಗೊತ್ತಾ?
ಮಂಗಳೂರು ಏರ್‌ಪೋರ್ಟ್ ಬಳಿ ಬರ್ತಿದೆ ಲಕ್ಸುರಿ ಇಂಟರ್‌ನ್ಯಾಷನಲ್ ಹೋಟೆಲ್!
ನನ್ನನ್ನು ದುರ್ಬಲ ವ್ಯಕ್ತಿ ಅಂದುಕೊಳ್ಳಬೇಡಿ- U.T ಖಾದರ್
ಮೋದಿ ಅವರ ನಿರ್ಧಾರಗಳು“ದೀರ್ಘಕಾಲೀನ ಅಭಿವೃದ್ಧಿಗೆ ಜವಾಬ್ದಾರಿಯುತ ನೀತಿಗಳು” ಆತಂಕದ ಸೂಚನೆ ಅಲ್ಲ-ಎಸ್.ಎಸ್. ನಾಯಕ್
ಇಂಧನ ಬೆಲೆ ಏರಿಕೆ ಹೊಡೆತ Air India ಹೊಸ ತೀರ್ಮಾನ ಶಾಕಿಂಗ್ …!
ಇರಾನ್ ಮೇಲೆ ಇಸ್ರೇಲ್-ಅಮೆರಿಕ ದಾಳಿಗೆ  ಪ್ರತಿದಾಳಿ ಯುಎಇ, ಬಹ್ರೇನ್, ಸೌದಿಯಲ್ಲಿ ಅಮೆರಿಕದ ನೆಲೆಗಳಿಗೆ ನಡುಕ.
ಸನ್ಯಾಸಿಗೆ ಕಾಡಿದ ಸುಂದರಿಯ  ಬಂಧನ
“ಧುರಂಧರ್” ನಟ ರಣವೀರ್ ಸಿಂಗ್‌ ವಿರುದ್ಧ ಇಡೀ ಬಾಲಿವುಡ್ ಒಕ್ಕೂಟವೇ ತಿರುಗಿಬಿದ್ದಿದ್ದೇಕೆ? shocking ₹45 ಕೋಟಿ ವಿವಾದದ ಅಸಲಿ ಕಥೆ ಇಲ್ಲಿದೆ!
108 ಆರೋಗ್ಯ ಕವಚ'”ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ಇನ್ಮುಂದೆ ಆಂಬ್ಯುಲೆನ್ಸ್ ನಿಮ್ಮ ಮನೆಬಾಗಿಲಿಗೆ! 
ಮೂಡಬಿದ್ರಿ ಪುರಸಭೆಯ ಬೇಜವಾಬ್ದಾರಿ ಹಾಗೂ ವೇಸ್ಟ್ ಆಗುತ್ತಿರುವ ನೀರು
₹168 ಕೋಟಿ ಆದಾಯದೊಂದಿಗೆ ಕುಕ್ಕೆ ಸುಬ್ರಹ್ಮಣ್ಯ 15ನೇ ವರ್ಷವೂ ಅಗ್ರಸ್ಥಾನದಲ್ಲಿ… ಕೋಟಿ ಕೋಟಿ ಕಾಣಿಕೆ – ಭಕ್ತಿಯ ಮಹಾಪ್ರವಾಹ ಕುಕ್ಕೆ ದೇವಾಲಯ…
ಅಹಿಂಸೆ, ಸತ್ಯ ಮತ್ತು ತ್ಯಾಗದ ಮಾರ್ಗವೇ ಮಹಾವೀರರ ದರ್ಶನ — ಇದೇ ಸುಖಿ ಜೀವನದ ಗುಟ್ಟು.
ಹಲವು ಗಂಭೀರ ಅಪರಾಧ ಪ್ರಕರಣಗಳಲ್ಲಿ ಆರೋಪಿಯಾಗಿ ಕಳೆದ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಕೊನೆಗೂ ಪತ್ತೆ ಹಚ್ಚಲಾಗಿದೆ.
ಜೀತಕ್ಕಿಟ್ಟುಕೊಂಡು ದರ್ಬಾರ್ ನಡೆಸುತ್ತಿದ್ದ ರಜನಿಶೆಟ್ಟಿಯ ಬಂಧನ
ಕರ್ನಾಟಕದಲ್ಲಿ ಮಳೆ ಅಬ್ಬರಕ್ಕೆ ರೆಡ್ ಅಲರ್ಟ್ ಸನ್ನಾಹ!8 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ – ಜನರಿಗೆ ಎಚ್ಚರಿಕೆ
ಪರಸ್ತ್ರೀ ಹುಂಡಿಗೆ  ಒಂದುವರೆ ಕೋಟಿ ಅಪಾರ್ಟ್ಮೆಂಟ್, ಮಾಜಿ ಶಾಸಕನ ರಂಗಿನಾಟ