📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಪಂಜಿಮೊಗರುವಿನಲ್ಲಿ ಹೆಂಡತಿಯ ಅಕ್ರಮ ಸಂಬಂಧಕ್ಕೆ, ಗಂಡ ಫಿನಿಶ್!

ಕೊಪ್ಪಳ ಮೂಲದ ದಂಪತಿಗಳಿಬ್ಬರು ಮಂಗಳೂರು ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಪಂಜಿಮಗುರುವಿನಲ್ಲಿ ವಾಸವಾಗಿದ್ದರು. ಹೆಂಡತಿಯ ಅಕ್ರಮ ಸಂಬಂಧ ವಿಚಾರದಲ್ಲಿ ನಡೆದಿರುವಂತಹ ಘಟನೆಯಲ್ಲಿ ಗಂಡ ಬಲಿಯಾಗಿದ್ದಾನೆ ಎಂದು ಹೇಳಲಾದ ಘಟನೆ ನಡೆದಿದೆ.

ಗಣೇಶ್ ಎಂಬ ಕೂಲಿ ಕಾರ್ಮಿಕನೇ ಈಗ, ಹೆಂಡತಿಯ ಅನೈತಿಕ ಚಟಕ್ಕೆ ಬಲಿಯಾದವರಾಗಿದ್ದಾರೆ ಎಂದು ದೂರಲಾಗುತ್ತಿದೆ.. ಹೆಂಡತಿ ಶಿಲ್ಪ ಮತ್ತು ಲಿಂಗಪ್ಪ ಎನ್ನುವವರ ಮಧ್ಯೆ ಅನೈತಿಕ ಸಂಬಂಧ ಏರ್ಪಟ್ಟಿತ್ತು, ಗಣೇಶನಿಗೆ ವಿಪರೀತವಾಗಿ ಕುಡಿಸಿ ಶಿಲ್ಪನ ಜೊತೆಗೆ ಲಿಂಗಪ್ಪ ಸತತವಾಗಿ ಮೋಜು ಮಸ್ತಿ ಮಾಡಿಕೊಂಡು ಬಂದಿದ್ದಾನೆ ಎನ್ನುವುದು ಈಗ ಕೇಳಿ ಬರುತ್ತಿರುವ ಆರೋಪವಾಗಿದೆ.

ಮಧ್ಯದ ಅಮಲಿನಲ್ಲಿ ಮಲಗುತ್ತಿದ್ದ ಗಣೇಶಗೆ ತೀರ ಇತ್ತೀಚೆಗೆ ಹೆಂಡತಿ ಶಿಲ್ಪ ಮತ್ತು ಲಿಂಗಪ್ಪನ ನಡುವಿನ ಅಕ್ರಮ ಸಂಬಂಧದ ವಿಚಾರ ತಿಳಿದು ಬಂದಿದೆ ಎಂದು ಅವರ ಸಂಬಂಧಿಕರು ಹೇಳುತ್ತಿದ್ದಾರೆ. ಅಲ್ಲಿಂದ ಈ ವಿಚಾರವಾಗಿ ಹೆಂಡತಿಯನ್ನು ಪ್ರಶ್ನೆ ಮಾಡಿದ್ದಾನೆ. ಹಾಗೆಯೇ ಲಿಂಗಪ್ಪನನ್ನು ಮನೆಯಿಂದ ದೂರ ಇಡುವ ಪ್ರಯತ್ನ ಮಾಡಿದ್ದಾನೆ. ಆದರೆ, ಅವರ ನಡುವಿನ ಸಂಬಂಧ ದೂರ ಸಾಗಿದ್ದರಿಂದಲೋ ಏನೋ, ಅವರಿಬ್ಬರೂ ಪ್ಲಾನ್ ಮಾಡಿ ಗಣೇಶನ ಮೇಲೆ ಹಲ್ಲೆ ನಡೆಸಿ ನಾಲ್ಕು ಅಡಿ ಕೆಳಗೆ ಬೀಳಿಸಿದ್ದಾರೆ ಎನ್ನುವುದು ಗಣೇಶನ ಸಂಬಂಧಿಕರ ಆರೋಪವಾಗಿದೆ. ಅಲ್ಲಿನ ದೃಶ್ಯ ನೋಡಿದರೆ, ಆತ ಹೇಗೆ ಬಿದ್ದರೂ ಈ ರೀತಿಯ ಪೆಟ್ಟು ಆಗುವುದಿಲ್ಲ ಎಂದು ಗಣೇಶನ ಸಂಬಂಧಿಕರು ಗಟ್ಟಿಯಾಗಿ ಹೇಳುತ್ತಿದ್ದಾರೆ. ಇಲ್ಲಿನ ಪೊಲೀಸರು ಅವಳಿಗೆ ಸಪೋರ್ಟ್ ಮಾಡುತ್ತಿದ್ದಾರೆ ಯಾಕೆ ಅನ್ನುವುದು ಗೊತ್ತಾಗುತ್ತಿಲ್ಲ ಎನ್ನುವುದು ಅವರ ಅಳಲಾಗಿದೆ

ಆದರೆ ಶಿಲ್ಪ ಮಾತ್ರ, ಗಂಡ ಕುಡಿದಿದ್ದ. ಆಯತಪ್ಪಿ ಕೆಳಗೆ ಬಿದ್ದಿದ್ದಾನೆ. ಅವನನ್ನು ಆಸ್ಪತ್ರೆಗೆ ಸೇರಿಸಿದ್ದೇನೆ. ಚಿಕಿತ್ಸೆ ಫಲಕಾರಿಯಾಗಿಲ್ಲ ಅನ್ನೋದು ಅವಳ ಸ್ಟೇಟ್ಮೆಂಟ್. ತನ್ನ ಮತ್ತು ಲಿಂಗಪ್ಪನ ನಡುವಿನ ಸಂಬಂಧದ ವಿಚಾರವನ್ನಾಗಲಿ ಗಲಾಟೆ ನಡೆದಿದ್ದ ವಿಚಾರವನ್ನಾಗಲಿ ಶಿಲ್ಪ ಎಲ್ಲಿಯೂ ಬಾಯಿ ಬಿಟ್ಟಿಲ್ಲ ಎನ್ನಲಾಗುತ್ತಿದೆ. ಶಿಲ್ಪಳ ಸಹೋದರ ಈ ವಿಚಾರದಲ್ಲಿ ಶಿಲ್ಪಗಳಿಂದ ಅಂತರ ಕಾಪಾಡಿಕೊಂಡಿದ್ದಾನೆ. ಶಿಲ್ಪ ಅನೈತಿಕ ಸಂಬಂಧ ಇಟ್ಟುಕೊಂಡು ಕುಟುಂಬದ ಮರ್ಯಾದೆ ತೆಗೆದಿದ್ದಾಳೆ ಅನ್ನುವ ರೀತಿಯಲ್ಲಿ ಅವರು ಮಾತನಾಡಿದ್ದು, ಏನಾದರೂ ಮಾಡಿಕೊಳ್ಳಲಿ ಅವಳಿಗೂ ನಮಗೂ ಸಂಬಂಧವಿಲ್ಲ ಅನ್ನುವ ರೀತಿಯಲ್ಲಿ ಮಾತನಾಡಿದ್ದಾರೆ.

ಗಣೇಶನಿಗೆ ಇನ್ನು 30 ವರ್ಷ, ವೆನ್ಲಾಕ್ ಆಸ್ಪತ್ರೆಯ ವೈದ್ಯರು ಗಣೇಶನ ಸಂಬಂಧಿಕರಿಗೆ ಹೇಳಿದ ಪ್ರಕಾರ ಇದು ಬಿದ್ದ ಪೆಟ್ಟಲ್ಲ ಬಲವಾಗಿ ಹೊಡೆದಿರುವಂತಹ ಪೆಟ್ಟಾಗಿದೆ ಅಂತ ಹೇಳಿದ ಮೇಲೆಯೇ, ಆ ಸಂಬಂಧಿಕರಿಗೆ ಶಿಲ್ಪಾಳ ಮೇಲೆ ಅನುಮಾನ ಬಂದಿದೆ. ಡಾಕ್ಟರ್ ಹೇಳದಿದ್ದರೆ ಅವರು ಶಿಲ್ಪಾಳ ಮಾತೊಂದೇ ನಂಬುತ್ತಿದ್ದರೇನೋ.

ಈಗ, ಶಿಲ್ಪ ಮತ್ತು ಲಿಂಗಪ್ಪನ ಮೇಲೆ ದೂರನ್ನು ಗಣೇಶನ ಅಣ್ಣ ಮುತ್ತಪ್ಪನ ಕೈನಿಂದ ಕೊಡಿಸಲಾಗಿದೆ. ಒಂದು ದಿನದ ಮೊದಲು, ಮುತ್ತಪ್ಪ ನಿಂದ ಬಲವಂತವಾಗಿ ಮೆಟ್ಟಿಲಿನಿಂದ ಬಿದ್ದು ಸತ್ತಿದ್ದಾನೆ ಎಂಬಂತೆ ಪೊಲೀಸರಿಗೆ  ದೂರು ಕೊಡಿಸಿದ್ದರು ಅಂತ ಆರೋಪಿಸಿರುವ ಗಣೇಶನ ಸಂಬಂಧಿಕರು, ಹಾಗಾಗಿಯೇ ಊರಿನಿಂದ ಹಿರಿಯರನ್ನು ಕರೆಸಿಕೊಂಡು ಇಂದು ಮತ್ತೆ ದೂರನ್ನು ನೀಡಲಾಗಿದೆ. ಆ ಕಾರಣ ಎರಡನೆಯ ಬಾರಿಗೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ಕಾವೂರು ಪೊಲೀಸ್ ಠಾಣೆಗೆ ಕೊಟ್ಟಂತಾಗಿದೆ ಎನ್ನಲಾಗುತ್ತಿದೆ. ಈ ಬಗ್ಗೆ ಮೃತ ಗಣೇಶನ ಸಂಬಂಧಿಕರು ಪತ್ರಿಕೆಯ ಜೊತೆಗೆ ಮಾತನಾಡುತ್ತಾ, ನಮಗೆ ನ್ಯಾಯ ಬೇಕು. ಗಣೇಶನ ಕೊಲೆಯಾಗಿದೆ. ಅದಕ್ಕೆ ಕಾರಣರಾದವರನ್ನು ಶಿಕ್ಷಿಸಬೇಕು ಎಂಬ ಆಗ್ರಹವನ್ನು ಮಾಡಿದ್ದಾರೆ. ಈ ಬಗ್ಗೆ ಮಂಗಳೂರು ಪೊಲೀಸ್ ಕಮಿಷನರ್ ಅವರಿಗೆ ಮನವಿ ನೀಡುವುದಾಗಿಯೂ ಅವರು ಪತ್ರಿಕೆಗೆ ತಿಳಿಸಿದ್ದಾರೆ.

ಏನೇ ಇರಲಿ, ಇದು ಕೊಲೆ ಮಾಡಿದ್ದು ಅಥವಾ ಬಿದ್ದು ಊಟ ಮಾಡಿಕೊಂಡಿದ್ದಾನೋ ಅನ್ನುವುದು ತನಿಖೆಯ ಮೂಲಕವೇ ಗೊತ್ತಾಗಬೇಕಿದೆ. ಈ ಬಗ್ಗೆ  ನಗರದ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.

ವರದಿ- ರಾಜೇಶ್

COMMENTS

Login with Gmail to comment

ಇನ್ನಷ್ಟು ಸುದ್ದಿ

🚨 “ಮಂಗಳೂರು ಜಿಲ್ಲಾಕಾರಾಗೃಹದಲ್ಲಿ ಗಲಾಟೆ: ಜೈಲು ಅಧೀಕ್ಷಕರ ಮೇಲೆಯೇ ಕೈದಿಗಳ ಹಲ್ಲೆಯತ್ನ!”
AI ಹವಾ-ಬೇಗನೆ ಫೈನಾನ್ಷಿಯಲ್ ಇಂಡಿಪೆಂಡೆಂಟ್ ಆಗೋ ಟ್ರೆಂಡ್- ಕೈಬಿಟ್ಟ  ಓದು!! ಇದು ಗಂಭೀರ ಸೂಚನೆ….
ವಿಶ್ವಸಂಸ್ಥೆಗೆ ಜೀವ ಬಂತು ನೋಡಿ…
ವಿಟ್ಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ
ಮಂಗಳೂರು ಬಸ್‌ನಲ್ಲಿ ಗುಪ್ತಾಂಗ ತೋರಿಸಿ ಕಂಡಕ್ಟರ್ ವಿಕೃತ ವರ್ತನೆ: ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ – ಬಂಧನ
35 ವಾರಂಟ್ ಇದ್ದ ಆರೋಪಿಯು ವಿದೇಶದಿಂದ ಮರಳುತ್ತಿದ್ದಾಗ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ
“ವೇತನಕ್ಕಾಗಿ ಹೋರಾಟದಿಂದ ಆರಂಭವಾದ ಪ್ರತಿಭಟನೆ… ನೋಯ್ಡಾ ರಸ್ತೆಗಳಲ್ಲಿ ಅರಾಜಕತೆ, ಬೆಂಕಿ, ಘರ್ಷಣೆ — ಈಗ ಸರ್ಕಾರವೇ ತನಿಖೆ ನಡೆಸುವಷ್ಟು ಗಂಭೀರ ಪರಿಸ್ಥಿತಿ!” 🔥🚨
ಬೆಂಗಳೂರು ಕೆಪಿಸಿಸಿ ಕಚೇರಿಯಲ್ಲಿ ಎರಡು ಬಣಗಳ ರಣರಂಗ!ಮಾತಿನ ಚಕಮಕಿ ಹೊಡೆದಾಟಕ್ಕೆ ತಿರುಗಿದ ಕ್ಷಣ…
ಸುಬ್ರಹ್ಮಣ್ಯದಲ್ಲಿ ಭಟ್ಟರಿಗೆ ದಕ್ಷಿಣೆ ಕೊಡುವoತಿಲ್ಲ- ಸಿಟ್ಟಿಗೆಳುತ್ತಿರುವ ಪುರೋಹಿತರು
ಚಿನ್ನ ಖರೀದಿಸುವ ಕಾಲ ಹೋಯ್ತಾ? ಗಗನಕ್ಕೇರಿದ ದರ ಕೇಳಿ ಬೆಚ್ಚಿಬಿದ್ದ ಜನ!ಒಂದೂವರೆ ಲಕ್ಷ ರೂಪಾಯಿ ಗಡಿದಾಟಿತಾ …?ಬೆಳ್ಳಿಎರಡೇ ದಿನದಲ್ಲಿ ಆರು ಸಾವಿರ ಏರಿಕೆ
ಜುಲೈ 1ರಿಂದ ದೇಶದಲ್ಲಿ ಹಲವು ಹೊಸ ನಿಯಮಗಳು ಜಾರಿ…ಪಾಸ್‌ಪೋರ್ಟ್, ರೈಲ್ವೆ, ಕ್ರೆಡಿಟ್ ಕಾರ್ಡ್, ಬ್ಯಾಂಕ್… ಒಂದೇ ದಿನದಲ್ಲಿ ಹಲವು ದೊಡ್ಡ ಬದಲಾವಣೆಗಳು
ನೂರರ ಸಂಭ್ರಮದಲ್ಲಿ “ಜೈ” ತುಳು ಸಿನಿಮಾ
ಪಶ್ಚಿಮ ಬಂಗಾಳ ಅಪ್ರಾಪ್ತೆಯ ಸಾವು, ಸಾರ್ವಜನಿಕರಿಂದ ಶಂಕಿತನ ಲಿಂಚಿಂಗ್ ..!ಬಾಲಕಿಯ ಹತ್ಯೆ ಬೆನ್ನಲ್ಲೇ ಭುಗಿಲೆದ್ದ ಹಿಂಸಾಚಾರ;
ಜೂನ್ 30,ಪ್ಲಾಸ್ಟಿಕ್ ನೋಟುಗಳು ಬರುತ್ತಿವೆಯೇ? – ವೈರಲ್ ಸುದ್ದಿಯ ಹಿಂದಿನ ವಿಷಯ
ಅಂದು ಮುಖ್ಯ ಮಂತ್ರಿ, ಇಂದು ಪುಟ್ಟಪಾತ್ ವ್ಯಾಪಾರಿ!!
“ಅಮ್ಮ”ನ ಕಾರ್ಯಕ್ರಮದಲ್ಲಿ  ಕೇಂದ್ರ ಸಚಿವರಿಂದ ರಾಜಕೀಯ ಭಾಷಣ
ಮಗಳ ಎಡವಟ್ಟಿಗೆ ಪಿಣರಾಯಿ ಬಲಿ…..ಕೇರಳ ರಾಜಕಾರಣದಲ್ಲಿ ಹೈವೋಲ್ಟೇಜ್ ಭೂಕಂಪ
ಭಾರತದ ಹಡಗಿಗೆ ಗ್ರೀನ್ ಸಿಗ್ನಲ್ ನೀಡಿದ ಇರಾನ್ 
ಮಹಿಳೆಯ ಸ್ಕೂಟಿಯನ್ನೇ ಕದ್ದ ಕಳ್ಳರು….. ಹೆಚ್ಚುತ್ತಿರುವ ವಾಹನ ಕಳ್ಳತನ
ಪುತ್ತೂರಿನ ದೇವಸ್ಥಾನ ಪದಾಧಿಕಾರಿಗಳ ವಿರುದ್ಧ FIR ..!
ಬೆಚ್ಚಿಬಿದ್ದ ರಾಷ್ಟ್ರ ರಾಜಧಾನಿ, ಯಂಗ್ ಜಡ್ಜ್ ಆತ್ಮಹತ್ಯೆ
ಎರಡು ಭೀಕರ ಕ್ಷಣಗಳು!ಒಂದು ರನ್‌ವೇಯಲ್ಲಿ ಸಾವು… ಮತ್ತೊಂದು ರನ್‌ವೇಯಲ್ಲಿ ಅದ್ಭುತ ಪಾರು!
ಕಾಂಗ್ರೆಸ್‌ಗೆ ದಾವಣಗೆರೆ ಬಿಸಿ ತುಪ್ಪ!..“ಸಮುದಾಯದ ಹೆಸರಿನಲ್ಲಿ ರಾಜಕೀಯ… ಅಥವಾ ರಾಜಕೀಯದ ಹೆಸರಿನಲ್ಲಿ ಸಮುದಾಯ?”
BRICS ಸಭೆಯಲ್ಲಿ UAE ಮೇಲೆ ಇರಾನ್ ಕಿಡಿ! ಇಸ್ರೇಲ್–ಇರಾನ್ ಯುದ್ಧ – ಇಸ್ರೇಲ್‌ಗೆ UAE ಗುಪ್ತ ಬೆಂಬಲವೇ?
ಹೋಳಿ ಮತ್ತು ರಂಜಾನ್ ಒಂದು ಜೀವವನ್ನೇ ನುಂಗಿತು..!
ಸತೀಶ್’ ಆಗಿ ಹೋದವ, ‘ಸಲೀಂ’ ಆಗಿ ವಾಪಸ್ …!26 ವರ್ಷಗಳ ಬಳಿಕ ತಾಯಿಯ ಮಡಿಲಿಗೆ ಮರಳಿದ ಮಗನ ಭಾವುಕ ಕಥೆ
ಕರ್ನಾಟಕದಲ್ಲೇ ಮೊದಲು-ಕಿಚ್ಚ ಸುದೀಪ್ ಕೈಯಿಂದ ಗ್ರಾಂಡ್ ಓಪನಿಂಗ್!₹130 ಕೋಟಿ ವೆಚ್ಚದ ವಿಶ್ವದರ್ಜೆಯ ‘MR-Linac’ ತಂತ್ರಜ್ಞಾನ ಹೈಟೆಕ್ ಕ್ಯಾನ್ಸರ್ ಆಸ್ಪತ್ರೆ!
ಸಾರ್ವಜನಿಕ ಸ್ಥಳದಲ್ಲಿ ಕೈಕೈ ಮಿಲಾಯಿಸಿ ಜಗಳ ಮಾಡಿದ್ರೇ ಹುಷಾರ್…!
ಜಬಲ್ಪುರ್ ದುರಂತಕ್ಕೆ ಹೊಣೆ ಯಾರು? ಕ್ರಮ ಏನು?