📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಪಂಜಿಮೊಗರುವಿನಲ್ಲಿ ಹೆಂಡತಿಯ ಅಕ್ರಮ ಸಂಬಂಧಕ್ಕೆ, ಗಂಡ ಫಿನಿಶ್!

ಕೊಪ್ಪಳ ಮೂಲದ ದಂಪತಿಗಳಿಬ್ಬರು ಮಂಗಳೂರು ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಪಂಜಿಮಗುರುವಿನಲ್ಲಿ ವಾಸವಾಗಿದ್ದರು. ಹೆಂಡತಿಯ ಅಕ್ರಮ ಸಂಬಂಧ ವಿಚಾರದಲ್ಲಿ ನಡೆದಿರುವಂತಹ ಘಟನೆಯಲ್ಲಿ ಗಂಡ ಬಲಿಯಾಗಿದ್ದಾನೆ ಎಂದು ಹೇಳಲಾದ ಘಟನೆ ನಡೆದಿದೆ.

ಗಣೇಶ್ ಎಂಬ ಕೂಲಿ ಕಾರ್ಮಿಕನೇ ಈಗ, ಹೆಂಡತಿಯ ಅನೈತಿಕ ಚಟಕ್ಕೆ ಬಲಿಯಾದವರಾಗಿದ್ದಾರೆ ಎಂದು ದೂರಲಾಗುತ್ತಿದೆ.. ಹೆಂಡತಿ ಶಿಲ್ಪ ಮತ್ತು ಲಿಂಗಪ್ಪ ಎನ್ನುವವರ ಮಧ್ಯೆ ಅನೈತಿಕ ಸಂಬಂಧ ಏರ್ಪಟ್ಟಿತ್ತು, ಗಣೇಶನಿಗೆ ವಿಪರೀತವಾಗಿ ಕುಡಿಸಿ ಶಿಲ್ಪನ ಜೊತೆಗೆ ಲಿಂಗಪ್ಪ ಸತತವಾಗಿ ಮೋಜು ಮಸ್ತಿ ಮಾಡಿಕೊಂಡು ಬಂದಿದ್ದಾನೆ ಎನ್ನುವುದು ಈಗ ಕೇಳಿ ಬರುತ್ತಿರುವ ಆರೋಪವಾಗಿದೆ.

ಮಧ್ಯದ ಅಮಲಿನಲ್ಲಿ ಮಲಗುತ್ತಿದ್ದ ಗಣೇಶಗೆ ತೀರ ಇತ್ತೀಚೆಗೆ ಹೆಂಡತಿ ಶಿಲ್ಪ ಮತ್ತು ಲಿಂಗಪ್ಪನ ನಡುವಿನ ಅಕ್ರಮ ಸಂಬಂಧದ ವಿಚಾರ ತಿಳಿದು ಬಂದಿದೆ ಎಂದು ಅವರ ಸಂಬಂಧಿಕರು ಹೇಳುತ್ತಿದ್ದಾರೆ. ಅಲ್ಲಿಂದ ಈ ವಿಚಾರವಾಗಿ ಹೆಂಡತಿಯನ್ನು ಪ್ರಶ್ನೆ ಮಾಡಿದ್ದಾನೆ. ಹಾಗೆಯೇ ಲಿಂಗಪ್ಪನನ್ನು ಮನೆಯಿಂದ ದೂರ ಇಡುವ ಪ್ರಯತ್ನ ಮಾಡಿದ್ದಾನೆ. ಆದರೆ, ಅವರ ನಡುವಿನ ಸಂಬಂಧ ದೂರ ಸಾಗಿದ್ದರಿಂದಲೋ ಏನೋ, ಅವರಿಬ್ಬರೂ ಪ್ಲಾನ್ ಮಾಡಿ ಗಣೇಶನ ಮೇಲೆ ಹಲ್ಲೆ ನಡೆಸಿ ನಾಲ್ಕು ಅಡಿ ಕೆಳಗೆ ಬೀಳಿಸಿದ್ದಾರೆ ಎನ್ನುವುದು ಗಣೇಶನ ಸಂಬಂಧಿಕರ ಆರೋಪವಾಗಿದೆ. ಅಲ್ಲಿನ ದೃಶ್ಯ ನೋಡಿದರೆ, ಆತ ಹೇಗೆ ಬಿದ್ದರೂ ಈ ರೀತಿಯ ಪೆಟ್ಟು ಆಗುವುದಿಲ್ಲ ಎಂದು ಗಣೇಶನ ಸಂಬಂಧಿಕರು ಗಟ್ಟಿಯಾಗಿ ಹೇಳುತ್ತಿದ್ದಾರೆ. ಇಲ್ಲಿನ ಪೊಲೀಸರು ಅವಳಿಗೆ ಸಪೋರ್ಟ್ ಮಾಡುತ್ತಿದ್ದಾರೆ ಯಾಕೆ ಅನ್ನುವುದು ಗೊತ್ತಾಗುತ್ತಿಲ್ಲ ಎನ್ನುವುದು ಅವರ ಅಳಲಾಗಿದೆ

ಆದರೆ ಶಿಲ್ಪ ಮಾತ್ರ, ಗಂಡ ಕುಡಿದಿದ್ದ. ಆಯತಪ್ಪಿ ಕೆಳಗೆ ಬಿದ್ದಿದ್ದಾನೆ. ಅವನನ್ನು ಆಸ್ಪತ್ರೆಗೆ ಸೇರಿಸಿದ್ದೇನೆ. ಚಿಕಿತ್ಸೆ ಫಲಕಾರಿಯಾಗಿಲ್ಲ ಅನ್ನೋದು ಅವಳ ಸ್ಟೇಟ್ಮೆಂಟ್. ತನ್ನ ಮತ್ತು ಲಿಂಗಪ್ಪನ ನಡುವಿನ ಸಂಬಂಧದ ವಿಚಾರವನ್ನಾಗಲಿ ಗಲಾಟೆ ನಡೆದಿದ್ದ ವಿಚಾರವನ್ನಾಗಲಿ ಶಿಲ್ಪ ಎಲ್ಲಿಯೂ ಬಾಯಿ ಬಿಟ್ಟಿಲ್ಲ ಎನ್ನಲಾಗುತ್ತಿದೆ. ಶಿಲ್ಪಳ ಸಹೋದರ ಈ ವಿಚಾರದಲ್ಲಿ ಶಿಲ್ಪಗಳಿಂದ ಅಂತರ ಕಾಪಾಡಿಕೊಂಡಿದ್ದಾನೆ. ಶಿಲ್ಪ ಅನೈತಿಕ ಸಂಬಂಧ ಇಟ್ಟುಕೊಂಡು ಕುಟುಂಬದ ಮರ್ಯಾದೆ ತೆಗೆದಿದ್ದಾಳೆ ಅನ್ನುವ ರೀತಿಯಲ್ಲಿ ಅವರು ಮಾತನಾಡಿದ್ದು, ಏನಾದರೂ ಮಾಡಿಕೊಳ್ಳಲಿ ಅವಳಿಗೂ ನಮಗೂ ಸಂಬಂಧವಿಲ್ಲ ಅನ್ನುವ ರೀತಿಯಲ್ಲಿ ಮಾತನಾಡಿದ್ದಾರೆ.

ಗಣೇಶನಿಗೆ ಇನ್ನು 30 ವರ್ಷ, ವೆನ್ಲಾಕ್ ಆಸ್ಪತ್ರೆಯ ವೈದ್ಯರು ಗಣೇಶನ ಸಂಬಂಧಿಕರಿಗೆ ಹೇಳಿದ ಪ್ರಕಾರ ಇದು ಬಿದ್ದ ಪೆಟ್ಟಲ್ಲ ಬಲವಾಗಿ ಹೊಡೆದಿರುವಂತಹ ಪೆಟ್ಟಾಗಿದೆ ಅಂತ ಹೇಳಿದ ಮೇಲೆಯೇ, ಆ ಸಂಬಂಧಿಕರಿಗೆ ಶಿಲ್ಪಾಳ ಮೇಲೆ ಅನುಮಾನ ಬಂದಿದೆ. ಡಾಕ್ಟರ್ ಹೇಳದಿದ್ದರೆ ಅವರು ಶಿಲ್ಪಾಳ ಮಾತೊಂದೇ ನಂಬುತ್ತಿದ್ದರೇನೋ.

ಈಗ, ಶಿಲ್ಪ ಮತ್ತು ಲಿಂಗಪ್ಪನ ಮೇಲೆ ದೂರನ್ನು ಗಣೇಶನ ಅಣ್ಣ ಮುತ್ತಪ್ಪನ ಕೈನಿಂದ ಕೊಡಿಸಲಾಗಿದೆ. ಒಂದು ದಿನದ ಮೊದಲು, ಮುತ್ತಪ್ಪ ನಿಂದ ಬಲವಂತವಾಗಿ ಮೆಟ್ಟಿಲಿನಿಂದ ಬಿದ್ದು ಸತ್ತಿದ್ದಾನೆ ಎಂಬಂತೆ ಪೊಲೀಸರಿಗೆ  ದೂರು ಕೊಡಿಸಿದ್ದರು ಅಂತ ಆರೋಪಿಸಿರುವ ಗಣೇಶನ ಸಂಬಂಧಿಕರು, ಹಾಗಾಗಿಯೇ ಊರಿನಿಂದ ಹಿರಿಯರನ್ನು ಕರೆಸಿಕೊಂಡು ಇಂದು ಮತ್ತೆ ದೂರನ್ನು ನೀಡಲಾಗಿದೆ. ಆ ಕಾರಣ ಎರಡನೆಯ ಬಾರಿಗೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ಕಾವೂರು ಪೊಲೀಸ್ ಠಾಣೆಗೆ ಕೊಟ್ಟಂತಾಗಿದೆ ಎನ್ನಲಾಗುತ್ತಿದೆ. ಈ ಬಗ್ಗೆ ಮೃತ ಗಣೇಶನ ಸಂಬಂಧಿಕರು ಪತ್ರಿಕೆಯ ಜೊತೆಗೆ ಮಾತನಾಡುತ್ತಾ, ನಮಗೆ ನ್ಯಾಯ ಬೇಕು. ಗಣೇಶನ ಕೊಲೆಯಾಗಿದೆ. ಅದಕ್ಕೆ ಕಾರಣರಾದವರನ್ನು ಶಿಕ್ಷಿಸಬೇಕು ಎಂಬ ಆಗ್ರಹವನ್ನು ಮಾಡಿದ್ದಾರೆ. ಈ ಬಗ್ಗೆ ಮಂಗಳೂರು ಪೊಲೀಸ್ ಕಮಿಷನರ್ ಅವರಿಗೆ ಮನವಿ ನೀಡುವುದಾಗಿಯೂ ಅವರು ಪತ್ರಿಕೆಗೆ ತಿಳಿಸಿದ್ದಾರೆ.

ಏನೇ ಇರಲಿ, ಇದು ಕೊಲೆ ಮಾಡಿದ್ದು ಅಥವಾ ಬಿದ್ದು ಊಟ ಮಾಡಿಕೊಂಡಿದ್ದಾನೋ ಅನ್ನುವುದು ತನಿಖೆಯ ಮೂಲಕವೇ ಗೊತ್ತಾಗಬೇಕಿದೆ. ಈ ಬಗ್ಗೆ  ನಗರದ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.

ವರದಿ- ರಾಜೇಶ್

COMMENTS

Login with Gmail to comment

ಇನ್ನಷ್ಟು ಸುದ್ದಿ

ಮಧ್ಯಪ್ರಾಚ್ಯದಲ್ಲಿ ಯುದ್ಧ– ಸಂಕಷ್ಟದಲ್ಲಿ ಜಗತ್ತು-ಉಸಿರು ತಡೆದ ಪರಿಸ್ಥಿತಿ!ಏನಾಗ್ತಾ ಇದೆ…
ಸಚಿವ ಜಮೀರ್ ಕಥೆ ಗೋವಿಂದ!!!?
ದೆಹಲಿಯನ್ನು ನಡುಗಿಸಿದ ಸೈಕೋಪಾತ್ ಘಟನೆಯ ಕ್ರೂರ ಸತ್ಯ…. ಆನ್‌ಲೈನ್ ಬೆಟ್ಟಿಂಗ್ ಮತ್ತು ಆಟಗಳ ಅಡಿಕ್ಟ್ – ಸಾಲ …ಮನೋವೈಕಲ್ಯ ಲಕ್ಷಣ!
ಪೂಜೆಗಾಗಿ ತೆರಳಿದ ಅರ್ಚಕರ ಶವ ನಾಲೆಯಲ್ಲಿ ಪತ್ತೆ
ಪ್ರಧಾನಿ ಮೋದಿ ನೆದರ್ಲ್ಯಾಂಡ್ ಭೇಟಿ ಭಾರತ ಸಹಕಾರದ ಸೇತುವೆ ಕಟ್ಟುವ ದ್ವಿಪಕ್ಷೀಯ ಸಂಬಂಧಗಳ ವಿಸ್ತರಣೆ…
ಅಕ್ರಮವಾಗಿ ಲಕ್ಷಾಂತರ ಮೌಲ್ಯದ ಎತ್ತುಗಳನ್ನು ವಧೆಗೆ….!
ಜನರ ಹಾಹಾ ಕಾರಕ್ಕೆ ಬೆಚ್ಚಿಬಿದ್ದ ಸರ್ಕಾರ –  ಎಸ್ಮ ಕಾಯ್ದೆ ಜಾರಿಗೆ
ಉಪಚುನಾವಣೆ ಮುಗಿಯುತಿದ್ದಂತೆಯೇ, ವಿದ್ಯುತ್ ದರ ಏರಿಸುತ್ತಿರುವ ರಾಜ್ಯ ಸರ್ಕಾರ
ಒಂಟಿ – ಆಂಟಿಯರ ನಂಬಿಕೆ ಗಳಿಸಿ ಕೊಲೆಗೈಯುತ್ತಿದ್ದ ಸೀರಿಯಲ್ ಕಿಲ್ಲರ್ ಬಂಧನ …!
21 ವರ್ಷದ ಆಡಳಿತಕ್ಕೆ ತೆರೆ: ನಿತೀಶ್ ಕುಮಾರ್ ಹೊರಟರೇ?ಸಿಎಂ ಕುರ್ಚಿ ಖಾಲಿ-ಬಿಜೆಪಿ ಹೊಸ ಮುಖ ಮುಂದಿನ ಸಿಎಂ??
ಸಾರ್ವಜನಿಕ ಸ್ಥಳದಲ್ಲಿ ಕೈಕೈ ಮಿಲಾಯಿಸಿ ಜಗಳ ಮಾಡಿದ್ರೇ ಹುಷಾರ್…!
ಬೋಗಸ್ ದೂರು ಕೊಡುವವರ ಮೇಲೆ ಕಠಿಣ ಕ್ರಮ ಕೈಗೊಳ್ಳದಿದ್ದರೆ ಗಂಡಾಂತರ ಗ್ಯಾರೆಂಟಿ
ಅಮೆರಿಕಾ ಭಾರತವನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿದೆ” – ಕೆ.ಸಿ. ವೇಣುಗೋಪಾಲ್
ಕಾಂಗೋದಲ್ಲಿ ಎಬೋಲಾ ಅಟ್ಟಹಾಸ:ಜಗತ್ತಿಗೆ ಮತ್ತೆ ಸಾಂಕ್ರಾಮಿಕ ಭೀತಿಯ ಗಂಟೆ..!
ಬೇಜವಾಬ್ದಾರಿ ಸ್ಟೇಟ್ಮೆಂಟ್ ಪಾಸ್ ಮಾಡಿದ ಕೇಂದ್ರ ಸಚಿವ- ಜೋಶಿ
50 ಸಾವಿರ ಸಾಲಕ್ಕೆ ಸವಣೂರು ಪೇಟೆಯಲ್ಲಿ ರಕ್ತಸಿಕ್ತ ಘರ್ಷಣೆ ..
ಹೆಸರು ಬದಲಾವಣೆ ಪಶ್ಚಿಮ ಬಂಗಾಳ ಪೆಂಡಿಂಗ್, ಕೇರಳ ಪ್ರಗತಿಯಲ್ಲಿ
ನಾಸಿಕ್ TCS ಪ್ರಕರಣ-ಸತ್ಯ ಮರೆಮಾಚಿದವರಾರು?ಕಾರ್ಪೊರೇಟ್ ಜಗತ್ತಿನ ಕತ್ತಲೆ ಮುಖ:HRಮಹಿಳೆಯಾಗಿಯೂ…..
ಭಾರತ ಮುಸ್ಲಿಂ ದೇಶವಾಗುವುದೇ?- ನಾಳೆ ಪುಸ್ತಕ ಬಿಡುಗಡೆಯ ಕಾರ್ಯಕ್ರಮ
“ವೇತನಕ್ಕಾಗಿ ಹೋರಾಟದಿಂದ ಆರಂಭವಾದ ಪ್ರತಿಭಟನೆ… ನೋಯ್ಡಾ ರಸ್ತೆಗಳಲ್ಲಿ ಅರಾಜಕತೆ, ಬೆಂಕಿ, ಘರ್ಷಣೆ — ಈಗ ಸರ್ಕಾರವೇ ತನಿಖೆ ನಡೆಸುವಷ್ಟು ಗಂಭೀರ ಪರಿಸ್ಥಿತಿ!” 🔥🚨
🛑 ನಾಗರಮಠದಲ್ಲಿ ಅವೈಜ್ಞಾನಿಕ ಮರಳುಗಾರಿಕೆ ವಿರುದ್ಧ ಗ್ರಾಮಸ್ಥರ ಆಕ್ರೋಶ
ತೈಲ, ಯುದ್ಧ ಮತ್ತು ಆರ್ಥಿಕತೆ: ಭಾರತದ ಮುಂದೆ ಹೊಸ ಸವಾಲು
ಬೆಂಗಳೂರಿನಿಂದ ಚೆನ್ನೈಗೆ ಹೊರಟ ವಿಮಾನದಲ್ಲಿ ಹೊಗೆ — ಎಲ್ಲಾ ವಿಮಾನಗಳು ವಿಳಂಬ ಪ್ರಯಾಣಿಕರಿಗೆ ತೊಂದರೆ
ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ….
ಬಂಗಾಳದಲ್ಲಿ ಬಿಜೆಪಿಯ ಯುದ್ಧೋನ್ಮಾದ, ದೀದಿಯ ರಚ್ಚೆ…
ತಮಿಳುನಾಡು ಮುಖ್ಯಮಂತ್ರಿ ವಿಜಯ್, ಚಧುರಂಗದಾಟದಲ್ಲಿ ಲಾಂಗ್ ಟೈಮ್ ಉಳಿಯುವರೇ?
ಡೇಟಾದಲ್ಲಿ ಸತ್ತಿದ್ದಾರೆ: ಬಡ ಮಹಿಳೆ ತಾನು ಜೀವಂತ ಸಾಬೀತುಪಡಿಸಲು ಹರಸಾಹಸ…ಬಡಜನರು “ಡೇಟಾ” ಅಲ್ಲ — ಅವರು ಜೀವಂತ ಮಾನವರು. 
ಬೃಹತ್ ಅಭಿಯಾನ….5.51 ಟನ್ ವಸ್ತುಗಳು..!5000ಕ್ಕೂ ಹೆಚ್ಚು ದೇವರ ಫೋಟೋಗಳು
ತಮಿಳು ರಾಜಕೀಯ ರಣರಂಗದಲ್ಲಿ “ವಿಜಯ”ಗಾಥೆ 118 ದಾಟಿದ TVK  ವಿಜಯ್ ಕೈ ಹಿಡಿದ ಮೈತ್ರಿ ಪಕ್ಷಗಳು!
ಪ್ರಧಾನಿ ಮೋದಿ ಯವರಿಗೆ ಡೈರೆಕ್ಟ್ ಬೆದರಿಕೆ ಹಾಕಿದ ಹೆಂಗಸು!!