📍 Karavali Maruta
  • LOGIN
  • BREAKING
    ‘ಮೇಡ್ ಇನ್ ಮಂಗಳೂರು’ ಹಡಗು ಜರ್ಮನ್ ಸಂಸ್ಥೆಯ ತೆಕ್ಕೆಗೆ; ವಿಶ್ವದ ಗಮನ ಸೆಳೆದ ಚೌಗುಲೆ ಶಿಪ್‌ಯಾರ್ಡ್! ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಪಂಜಿಮೊಗರುವಿನಲ್ಲಿ ಹೆಂಡತಿಯ ಅಕ್ರಮ ಸಂಬಂಧಕ್ಕೆ, ಗಂಡ ಫಿನಿಶ್!

    ಕೊಪ್ಪಳ ಮೂಲದ ದಂಪತಿಗಳಿಬ್ಬರು ಮಂಗಳೂರು ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಪಂಜಿಮಗುರುವಿನಲ್ಲಿ ವಾಸವಾಗಿದ್ದರು. ಹೆಂಡತಿಯ ಅಕ್ರಮ ಸಂಬಂಧ ವಿಚಾರದಲ್ಲಿ ನಡೆದಿರುವಂತಹ ಘಟನೆಯಲ್ಲಿ ಗಂಡ ಬಲಿಯಾಗಿದ್ದಾನೆ ಎಂದು ಹೇಳಲಾದ ಘಟನೆ ನಡೆದಿದೆ.

    ಗಣೇಶ್ ಎಂಬ ಕೂಲಿ ಕಾರ್ಮಿಕನೇ ಈಗ, ಹೆಂಡತಿಯ ಅನೈತಿಕ ಚಟಕ್ಕೆ ಬಲಿಯಾದವರಾಗಿದ್ದಾರೆ ಎಂದು ದೂರಲಾಗುತ್ತಿದೆ.. ಹೆಂಡತಿ ಶಿಲ್ಪ ಮತ್ತು ಲಿಂಗಪ್ಪ ಎನ್ನುವವರ ಮಧ್ಯೆ ಅನೈತಿಕ ಸಂಬಂಧ ಏರ್ಪಟ್ಟಿತ್ತು, ಗಣೇಶನಿಗೆ ವಿಪರೀತವಾಗಿ ಕುಡಿಸಿ ಶಿಲ್ಪನ ಜೊತೆಗೆ ಲಿಂಗಪ್ಪ ಸತತವಾಗಿ ಮೋಜು ಮಸ್ತಿ ಮಾಡಿಕೊಂಡು ಬಂದಿದ್ದಾನೆ ಎನ್ನುವುದು ಈಗ ಕೇಳಿ ಬರುತ್ತಿರುವ ಆರೋಪವಾಗಿದೆ.

    ಮಧ್ಯದ ಅಮಲಿನಲ್ಲಿ ಮಲಗುತ್ತಿದ್ದ ಗಣೇಶಗೆ ತೀರ ಇತ್ತೀಚೆಗೆ ಹೆಂಡತಿ ಶಿಲ್ಪ ಮತ್ತು ಲಿಂಗಪ್ಪನ ನಡುವಿನ ಅಕ್ರಮ ಸಂಬಂಧದ ವಿಚಾರ ತಿಳಿದು ಬಂದಿದೆ ಎಂದು ಅವರ ಸಂಬಂಧಿಕರು ಹೇಳುತ್ತಿದ್ದಾರೆ. ಅಲ್ಲಿಂದ ಈ ವಿಚಾರವಾಗಿ ಹೆಂಡತಿಯನ್ನು ಪ್ರಶ್ನೆ ಮಾಡಿದ್ದಾನೆ. ಹಾಗೆಯೇ ಲಿಂಗಪ್ಪನನ್ನು ಮನೆಯಿಂದ ದೂರ ಇಡುವ ಪ್ರಯತ್ನ ಮಾಡಿದ್ದಾನೆ. ಆದರೆ, ಅವರ ನಡುವಿನ ಸಂಬಂಧ ದೂರ ಸಾಗಿದ್ದರಿಂದಲೋ ಏನೋ, ಅವರಿಬ್ಬರೂ ಪ್ಲಾನ್ ಮಾಡಿ ಗಣೇಶನ ಮೇಲೆ ಹಲ್ಲೆ ನಡೆಸಿ ನಾಲ್ಕು ಅಡಿ ಕೆಳಗೆ ಬೀಳಿಸಿದ್ದಾರೆ ಎನ್ನುವುದು ಗಣೇಶನ ಸಂಬಂಧಿಕರ ಆರೋಪವಾಗಿದೆ. ಅಲ್ಲಿನ ದೃಶ್ಯ ನೋಡಿದರೆ, ಆತ ಹೇಗೆ ಬಿದ್ದರೂ ಈ ರೀತಿಯ ಪೆಟ್ಟು ಆಗುವುದಿಲ್ಲ ಎಂದು ಗಣೇಶನ ಸಂಬಂಧಿಕರು ಗಟ್ಟಿಯಾಗಿ ಹೇಳುತ್ತಿದ್ದಾರೆ. ಇಲ್ಲಿನ ಪೊಲೀಸರು ಅವಳಿಗೆ ಸಪೋರ್ಟ್ ಮಾಡುತ್ತಿದ್ದಾರೆ ಯಾಕೆ ಅನ್ನುವುದು ಗೊತ್ತಾಗುತ್ತಿಲ್ಲ ಎನ್ನುವುದು ಅವರ ಅಳಲಾಗಿದೆ

    ಆದರೆ ಶಿಲ್ಪ ಮಾತ್ರ, ಗಂಡ ಕುಡಿದಿದ್ದ. ಆಯತಪ್ಪಿ ಕೆಳಗೆ ಬಿದ್ದಿದ್ದಾನೆ. ಅವನನ್ನು ಆಸ್ಪತ್ರೆಗೆ ಸೇರಿಸಿದ್ದೇನೆ. ಚಿಕಿತ್ಸೆ ಫಲಕಾರಿಯಾಗಿಲ್ಲ ಅನ್ನೋದು ಅವಳ ಸ್ಟೇಟ್ಮೆಂಟ್. ತನ್ನ ಮತ್ತು ಲಿಂಗಪ್ಪನ ನಡುವಿನ ಸಂಬಂಧದ ವಿಚಾರವನ್ನಾಗಲಿ ಗಲಾಟೆ ನಡೆದಿದ್ದ ವಿಚಾರವನ್ನಾಗಲಿ ಶಿಲ್ಪ ಎಲ್ಲಿಯೂ ಬಾಯಿ ಬಿಟ್ಟಿಲ್ಲ ಎನ್ನಲಾಗುತ್ತಿದೆ. ಶಿಲ್ಪಳ ಸಹೋದರ ಈ ವಿಚಾರದಲ್ಲಿ ಶಿಲ್ಪಗಳಿಂದ ಅಂತರ ಕಾಪಾಡಿಕೊಂಡಿದ್ದಾನೆ. ಶಿಲ್ಪ ಅನೈತಿಕ ಸಂಬಂಧ ಇಟ್ಟುಕೊಂಡು ಕುಟುಂಬದ ಮರ್ಯಾದೆ ತೆಗೆದಿದ್ದಾಳೆ ಅನ್ನುವ ರೀತಿಯಲ್ಲಿ ಅವರು ಮಾತನಾಡಿದ್ದು, ಏನಾದರೂ ಮಾಡಿಕೊಳ್ಳಲಿ ಅವಳಿಗೂ ನಮಗೂ ಸಂಬಂಧವಿಲ್ಲ ಅನ್ನುವ ರೀತಿಯಲ್ಲಿ ಮಾತನಾಡಿದ್ದಾರೆ.

    ಗಣೇಶನಿಗೆ ಇನ್ನು 30 ವರ್ಷ, ವೆನ್ಲಾಕ್ ಆಸ್ಪತ್ರೆಯ ವೈದ್ಯರು ಗಣೇಶನ ಸಂಬಂಧಿಕರಿಗೆ ಹೇಳಿದ ಪ್ರಕಾರ ಇದು ಬಿದ್ದ ಪೆಟ್ಟಲ್ಲ ಬಲವಾಗಿ ಹೊಡೆದಿರುವಂತಹ ಪೆಟ್ಟಾಗಿದೆ ಅಂತ ಹೇಳಿದ ಮೇಲೆಯೇ, ಆ ಸಂಬಂಧಿಕರಿಗೆ ಶಿಲ್ಪಾಳ ಮೇಲೆ ಅನುಮಾನ ಬಂದಿದೆ. ಡಾಕ್ಟರ್ ಹೇಳದಿದ್ದರೆ ಅವರು ಶಿಲ್ಪಾಳ ಮಾತೊಂದೇ ನಂಬುತ್ತಿದ್ದರೇನೋ.

    ಈಗ, ಶಿಲ್ಪ ಮತ್ತು ಲಿಂಗಪ್ಪನ ಮೇಲೆ ದೂರನ್ನು ಗಣೇಶನ ಅಣ್ಣ ಮುತ್ತಪ್ಪನ ಕೈನಿಂದ ಕೊಡಿಸಲಾಗಿದೆ. ಒಂದು ದಿನದ ಮೊದಲು, ಮುತ್ತಪ್ಪ ನಿಂದ ಬಲವಂತವಾಗಿ ಮೆಟ್ಟಿಲಿನಿಂದ ಬಿದ್ದು ಸತ್ತಿದ್ದಾನೆ ಎಂಬಂತೆ ಪೊಲೀಸರಿಗೆ  ದೂರು ಕೊಡಿಸಿದ್ದರು ಅಂತ ಆರೋಪಿಸಿರುವ ಗಣೇಶನ ಸಂಬಂಧಿಕರು, ಹಾಗಾಗಿಯೇ ಊರಿನಿಂದ ಹಿರಿಯರನ್ನು ಕರೆಸಿಕೊಂಡು ಇಂದು ಮತ್ತೆ ದೂರನ್ನು ನೀಡಲಾಗಿದೆ. ಆ ಕಾರಣ ಎರಡನೆಯ ಬಾರಿಗೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ಕಾವೂರು ಪೊಲೀಸ್ ಠಾಣೆಗೆ ಕೊಟ್ಟಂತಾಗಿದೆ ಎನ್ನಲಾಗುತ್ತಿದೆ. ಈ ಬಗ್ಗೆ ಮೃತ ಗಣೇಶನ ಸಂಬಂಧಿಕರು ಪತ್ರಿಕೆಯ ಜೊತೆಗೆ ಮಾತನಾಡುತ್ತಾ, ನಮಗೆ ನ್ಯಾಯ ಬೇಕು. ಗಣೇಶನ ಕೊಲೆಯಾಗಿದೆ. ಅದಕ್ಕೆ ಕಾರಣರಾದವರನ್ನು ಶಿಕ್ಷಿಸಬೇಕು ಎಂಬ ಆಗ್ರಹವನ್ನು ಮಾಡಿದ್ದಾರೆ. ಈ ಬಗ್ಗೆ ಮಂಗಳೂರು ಪೊಲೀಸ್ ಕಮಿಷನರ್ ಅವರಿಗೆ ಮನವಿ ನೀಡುವುದಾಗಿಯೂ ಅವರು ಪತ್ರಿಕೆಗೆ ತಿಳಿಸಿದ್ದಾರೆ.

    ಏನೇ ಇರಲಿ, ಇದು ಕೊಲೆ ಮಾಡಿದ್ದು ಅಥವಾ ಬಿದ್ದು ಊಟ ಮಾಡಿಕೊಂಡಿದ್ದಾನೋ ಅನ್ನುವುದು ತನಿಖೆಯ ಮೂಲಕವೇ ಗೊತ್ತಾಗಬೇಕಿದೆ. ಈ ಬಗ್ಗೆ  ನಗರದ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರೆದಿದೆ.

    ವರದಿ- ರಾಜೇಶ್

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ದಿವಾ ಉತ್ಕರ್ಷ ಬೆಂಗಳೂರಿನ ಕೇವಲ 17 ವರ್ಷದ ಹೆಣ್ಣುಮಗಳಕಾರ್ಯಕ್ಕೆ ಪ್ರಪಂಚವೇ ಫಿದಾ…ಫೋರ್ಬ್ಸ್ ಟಾಪ್ ಪಟ್ಟಿಯಲ್ಲಿ ಯುವಸ್ಪೂರ್ತಿ ಹೆಸರು ಯಾಕೆ ಬಂತು ..!?
    ಒಂದೆಡೆ ‘ನಶಾ ಮುಕ್ತ ಯುವ ಭಾರತ’ ಅಭಿಯಾನ; ಮತ್ತೊಂದೆಡೆ ಪಬ್ ಸಂಸ್ಕೃತಿಯ ಸೆಳೆತ..! ಮಣಿಪಾಲದಲ್ಲಿ ಅಪ್ರಾಪ್ತರ ಮದ್ಯಪಾನ ಬಯಲು
    ಮೂಡಬಿದ್ರೆ: ಅಕ್ರಮ ಜಾನುವಾರು ಸಾಗಾಟ -ಆರೋಪಿಗಳ ಬಂಧನ, ವಾಹನ ಹಾಗೂ ಕರು ವಶಕ್ಕೆ.
    ಬೆಳ್ಳಂಬೆಳಗ್ಗೆ ಸಿದ್ದರಾಮಯ್ಯ ಮನೆಗೆ ಡಿ.ಕೆ. ಶಿವಕುಮಾರ್ ಸರ್ಪ್ರೈಸ್ ವಿಸಿಟ್!
    ನೂರರ ಸಂಭ್ರಮದಲ್ಲಿ “ಜೈ” ತುಳು ಸಿನಿಮಾ
    ಜೈಲಿನೊಳಗೆ ಮೊಬೈಲ್ ಮಾಫಿಯಾ: ಖತರ್ನಾಕ್ ಐಡಿಯಾ..!
    ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    40 ವರ್ಷದ ಹಳೆಯ ಕೊಲೆಕೇಸ್‌ಗೆ ಅಂತಿಮ ಕೀ ಆಗಿ ಸಾಕ್ಷಿ ಆಗಿದ್ದು ತಿಂದು ಉಗುಳಿದ ಚೂಯಿಂಗ್ ಗಮ್ …!ಏನಿದು realstory..
    ಕೆಲವೊಮ್ಮೆ ದೇಹದ ಶತ್ರು “ಲೂಪಸ್ “ಹೊರಗಿಲ್ಲ… ಒಳಗೇ ಇರುತ್ತದೆ.ಮಹಿಳೆಯರ ದಣಿವು, ಸಂಧಿ ನೋವು, ತೂಕ ಇಳಿಕೆ —. ನಿರ್ಲಕ್ಷ್ಯ ಬೇಡ. ‘ಸಾಮಾನ್ಯ’ ಎಂದು ಕಡೆಗಣಿಸಬೇಡಿ.
    ಮಾದಕ ವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯ ಬಂಧನ
    ಕುಂದಾಪುರದಲ್ಲಿ ಯುವತಿ ಆತ್ಮಹತ್ಯೆಗೆ ಪ್ರಿಯಕರನ ಕುಮ್ಮಕ್ಕು
    ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿ ಗಡಿಪಾರು ಆದೇಶ….
    ಪಶ್ಚಿಮ ಬಂಗಾಳ ಅಪ್ರಾಪ್ತೆಯ ಸಾವು, ಸಾರ್ವಜನಿಕರಿಂದ ಶಂಕಿತನ ಲಿಂಚಿಂಗ್ ..!ಬಾಲಕಿಯ ಹತ್ಯೆ ಬೆನ್ನಲ್ಲೇ ಭುಗಿಲೆದ್ದ ಹಿಂಸಾಚಾರ;
    ಟ್ರಂಪ್ ಇರಾನ್ ಡೀಲ್ ಕಥೆ ಏನು?ಒಪ್ಪಂದವಾಗುತ್ತಾ? ಅಥವಾ ಯುದ್ಧ ಮುಂದುವರೆಯುತ್ತಾ?
    ಹೊರಗೆ ಕ್ಯಾಂಟೀನ್…ಆದ್ರೆ ಒಳಗೆ ನಡೆಯುತ್ತಿತ್ತು ಬೇರೆದ್ದೇ ಆಟ..!ಬಯಲಾಯ್ತು ಬೆಚ್ಚಿಬೀಳಿಸುವ ದಂಧೆ. 
    ಸರಸಕ್ಕೆ ಅಡ್ಡಿಪಡಿಸಿದ ಯುವಕನ ಮೇಲೆ  ಭೀಕರ ದಾಳಿ: ಗುಜರಾತ್‌ನಲ್ಲಿ 21 ವರ್ಷದ ಯುವಕ ಬಲಿ
    ಪಕ್ಷದಿಂದ ಪಕ್ಕಕ್ಕೆ? ರಾಘವ್ ಚಡ್ಡಾ ಹಿಂದೆ ಏನಿದೆ ದೊಡ್ಡ ರಾಜಕೀಯ ಆಟ!”ಮೌನಗೊಳಿಸಿದರೂ ನಿಲ್ಲದ ಧ್ವನಿ – ರಾಘವ್ ಚಡ್ಡಾ!”
    ಮಂಗಳೂರಿನಲ್ಲಿ ಜೂನಿಯರ್ ವಿದ್ಯಾರ್ಥಿಗಳ ಮೇಲೆ ಗ್ಯಾಂಗ್ ಹಲ್ಲೆ:…ಕಾಲೇಜು ವಿದ್ಯಾರ್ಥಿಗಳ ರ‍್ಯಾಗಿಂಗ್ ಸಂಸ್ಕೃತಿಗೆ ಬ್ರೇಕ್ ಬೇಕು
    ಸಂಸತ್ತಿನಲ್ಲಿ ಇತಿಹಾಸ ಸೃಷ್ಟಿಸುವ ಚರ್ಚೆ-ಮಹಿಳಾ ಮೀಸಲು ಬಿಲ್ಲಿನ ಸುತ್ತ ಕಂಗೊಳಿಸಿದ ಸಂಸತ್ !
    ಮಂಗಳೂರು ಶಾಕ್ ! ನೇತ್ರಾವತಿ ತೀರದ ನದಿಯಲ್ಲಿ ತೇಲಿ ಬಂದ ರಾಶಿ ರಾಶಿ ಆಧಾರ್ ಕಾರ್ಡ್‌ಗಳು !!!ಹೊಣೆ ಯಾರು?
    “ಬೆಡ್‌ರೂಮ್ ರಾಜಕೀಯ”ಪಪ್ಪು ಯಾದವ್ ಹೇಳಿಕೆ ಸ್ಫೋಟಕ ಚರ್ಚೆ…!ಪಪ್ಪು ತಪ್ಪಾಗ್ ಮಾತಾಡಿದ್ದು ತಪ್ಪು 
    ಮಕ್ಕಳ ಕೈಯಿಂದ ಮೊಬೈಲ್ ಕಸಿಯಲು ಮುಂದಾದ ಬ್ರಿಟನ್!ಯುಕೆಯ ನಿರ್ಧಾರಕ್ಕೆ ವಿಶ್ವದ ಗಮನ…
    ಕರ್ನಾಟಕದಲ್ಲಿ ಅತಿ ಕನಿಷ್ಠ ಮಟ್ಟಕ್ಕೆ ಕುಸಿದ ‘ಟೀನ್ ಪ್ರೆಗ್ನೆನ್ಸಿ’! 70% ಕೇಸ್‌ಗಳು ಮಾಯವಾಗಿದ್ದು ಹೇಗೆ?
    ಶೃಂಗೇರಿ ವಿಧಾನಸಭೆಯ ಮರುಕೌಂಟಿಂಗ್ ನಲ್ಲಿ ನಡೆದ ಲಪಡಾಗಳೇನು?
    ಭಾರತದಲ್ಲಿ ಮೊದಲ ಬಾರಿಗೆ ಭಾರೀ ಕ್ಯಾಪ್ಟಾಗನ್ “ಜಿಹಾದಿ ಡ್ರಗ್”ಜಾಲ ಬಯಲಾಗಿದ್ದು, ಸುಮಾರು ₹182 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ!ಅಪಾಯಕಾರಿ ಡ್ರಗ್ ದೇಶದೊಳಗೆ ಹೇಗೆ ಪ್ರವೇಶಿಸಿತು ಎಂಬುದರ ಬಗ್ಗೆ ತನಿಖೆ ತೀವ್ರವಾಗಿದೆ.
    ಇನ್ಮುಂದೆ ಏರ್‌ಪೋರ್ಟ್‌ನಲ್ಲಿ ಇಷ್ಟ ಬಂದಂತೆ ವಿಡಿಯೋ ಮಾಡುವಂತಿಲ್ಲ! ಇನ್ಸ್ಟಾರೀಲ್ಸ್, ವಿಡಿಯೋ ಮಾಡಿದರೆ ‘ನೋ-ಫ್ಲೈ ಲಿಸ್ಟ್’ ಸೇರುವ ಮುನ್ನೆಚ್ಚರಿಕೆ ನೀಡಿದ DGCA! ಲೇಟೆಸ್ಟ್ ಅಪ್ಡೇಟ್ ಹೊಸ ರೂಲ್ಸ್ ಇಲ್ಲಿದೆ.. ಓದಿ..
    ದೆಹಲಿಯಲ್ಲಿ ಬಸ್‌ನಲ್ಲಿ ನಿರ್ಭಯಾ ನೆನಪಿಸುವ ಘಟನೆ -30 ವರ್ಷದ ಮಹಿಳೆ ಗ್ಯಾಂಗ್‌ರೇಪ್ ಶಾಕ್
    ಭಾರತದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಅನ್ನೋ ಇತಿಹಾಸ ಬರೆಯಲಿದ್ದಾರೆ ‘ಡಿ ಕೆ ಶಿ’!
    “ಧುರಂಧರ್ “ಸಿನಿಮಾವನ್ನೂ ಮೀರಿದ ಪಾಕ್ ಸಂಚನ್ನ ಭೇದಿಸಿದ ಕೇಂದ್ರ ಗುಪ್ತಚರ ಇಲಾಖೆ ಮತ್ತು ಕರ್ನಾಟಕ ಖಾಕಿ..
    ಇಂದು ಮಾಜಿ ಸಚಿವರಿಂದ ಸೌಹಾರ್ದ ಇಫ್ತಾರ್ ಕೂಟ