📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ ವೈದ್ಯನನ್ನು ಅಮಾನತ್ತು ಮಾಡಿದರೆ ಸಾಕೆ?

    ಕುಂದಾಪುರ ಪತ್ರಕರ್ತರೊಬ್ಬರ ಮೇಲೆ ಇಲ್ಲಿನ ತಾಲೂಕು ಸರ್ಕಾರಿ ಆಸ್ಪತ್ರೆಯ ವೈದ್ಯ ಮಹೇಂದ್ರ ಶೆಟ್ಟಿ ಎಂಬಾತ ಏಕಾಏಕಿ ನಗರದ ಹೋಟೆಲ್ ಒಂದರಲ್ಲಿ ಹಲ್ಲೆ ನಡೆಸುತ್ತಾನೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಹಾಗೂ ವೈದ್ಯರನ್ನು ಸರ್ಕಾರಿ ಸೇವೆಯಿಂದ ಅಮಾನತ್ತು ಗೊಳಿಸಲಾಗಿದೆ.

    ಇದರಿಂದ ಆ ವೈದ್ಯ ಪಾಠ ಕಲಿಯುತ್ತಾನಾ? ಸಂತ್ರಸ್ತ ಪತ್ರಕರ್ತ, ಸರ್ಕಾರಿ ಆಸ್ಪತ್ರೆಯಲ್ಲಿನ ಅವ್ಯವಹಾರ ಹಾಗೂ ನಿಯಮಬಾಹಿರ ಚಟುವಟಿಕೆಯನ್ನು ಅದ್ಯಯನ ನಡೆಸಿ ವರದಿ ಮಾಡಿರುತ್ತಾರೆ. ಈ ವರದಿಯಿಂದ ಕುಪಿತಗೊಂಡ ಡಾಕ್ಟರ್ ಶೆಟ್ಟಿ, ತನ್ನ ಜೊತೆಗೆ ಇನ್ನೊಬ್ಬ ಆಯುರ್ವೇದ  ವೈದ್ಯೆಯನ್ನು ಕರೆದುಕೊಂಡು ಬಂದು, ಹೋಟೆಲ್ ಒಂದರಲ್ಲಿ ಪತ್ನಿ ಹಾಗೂ ಸ್ನೇಹಿತರೊಂದಿಗೆ ತಿಂಡಿ ತಿನ್ನುತ್ತಿರುವಾಗ ಏಕಾ ಏಕಿ ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ್ದಾನೆ ಈ ಒಂದು ಪ್ರಕರಣವು ಹೋಟೆಲಿನ ಸಿಸಿ ಕ್ಯಾಮೆರಾದಲ್ಲೂ ದಾಖಲಾಗಿದೆ.  ಜನರ ಕಾಪಾಡುವ ದೇವರು ಎಂದು ಕರೆಯಲಾಗುವ ಡಾಕ್ಟರ್ ಶೆಟ್ಟಿಯ ಈ ನಡವಳಿಕೆ ವೈದ್ಯಕೀಯ ಸಮುದಾಯಕ್ಕೆ ಕಪ್ಪು ಚುಕ್ಕೆ.

    ಇಂತಹ ಕಪ್ಪು ಚುಕ್ಕೆ ವ್ಯಕ್ತಿಯನ್ನು ಕೇವಲ ಅಮಾನತ್ತು ಮಾಡಿದರೆ ಸಾಕೆ? ಈ ವ್ಯಕ್ತಿಯ ನಡವಳಿಕೆ ಅತ್ಯಂತ ಕ್ರೂರತನದಿಂದ ಕೂಡಿದೆ ಎಂಬ ಆರೋಪವು ಬಹಳ ಸಮಯದಿಂದ ಇದೆ. ಆತ ಕೆಲಸ ಮಾಡಿದ ಕಡೆಯಲ್ಲೆಲ್ಲಾ, ಕೆಟ್ಟ ಹೆಸರು ಸಂಪಾದಿಸಿದ್ದಾನೆ ಹೊರತು ಒಳ್ಳೆಯ ಹೆಸರು ಕಿಂಚಿತ್ತು ಇಲ್ಲ. ಅವನ ಕೈಗೆ ವೈದ್ಯಕೀಯ ಸಲಕರಣೆ ಸಿಕ್ಕರೆ ಏನಾಗಬಹುದು? ಸರ್ಕಾರ ಯೋಚಿಸಬೇಕಿದೆ. ವೈದ್ಯಕೀಯ ಕ್ಷೇತ್ರ ಯೋಚಿಸಬೇಕಿದೆ. ಸಂಭಂಧಪಟ್ಟ ಅಧಿಕಾರಿಗಳು, ಯೂನಿಯನ್ ನವರು ಯೋಚಿಸಬೇಕಿದೆ.

    ಉಡುಪಿ ಜಿಲ್ಲೆಯಲ್ಲಿ ಸಾವಿರಾರು ಡಾಕ್ಟರ್ಸ್ಗಳಿದ್ದಾರೆ. ರೋಗಿಗಳ ಮನಸ್ಥಿತಿಯನ್ನು ಅರ್ಥ ಮಾಡಿಕೊಂಡು ಶಾಂತವಾಗಿ ಅಷ್ಟೇ ಸoಯಮದಿಂದ ಪ್ರತಿಕ್ರಿಯೆ ನೀಡುತ್ತಾ, ಅವರನ್ನು ಗುಣಮುಖ ಮಾಡುವ ನಿಟ್ಟಿನಲ್ಲಿ ಕಾರ್ಯಚರಿಸುತ್ತಿರುವ ವೈದ್ಯರುಗಳ ಮಧ್ಯೆ ಈ ಮಹೇಂದ್ರ ಶೆಟ್ಟಿ ಎಂಬ ರೌಡಿ ವೈದ್ಯ ವೃತ್ತಿಗೆ ಅಪಕ್ಯಾತಿ ಯಾಗಿದ್ದಾನೆ ಎಂಬ ಮಾತು ಕುಂದಾಪುರದಿಂದ ಕೇಳಿ ಬರುತ್ತಿದೆ.

    ತಕ್ಷಣವೇ, ಈತನಿಗೆ ನೀಡಲಾಗಿರುವ ವೈದ್ಯಕೀಯ ಸೇವೆಯನ್ನು ನೀಡಲು ಅರ್ಹವಾಗಿದ್ದ ಸರ್ಟಿಫಿಕೇಟ್ ಅನ್ನು ಹಿಂದಕ್ಕೆ ಪಡೆಯುವ ಕೆಲಸ ಆಗಬೇಕು. ಆದರಿಂದ ಮಾತ್ರ ಈತ ಬುದ್ಧಿ ಕಲಿಯಬಹುದು. ಅಹಂಕಾರ ಹಾಗೂ ಹಣದ ಹಪಾಹಪಿ ಬಿಟ್ಟರೆ ಬೇರೆನೂ ಇಲ್ಲ. ಸೇವೆ ಅನ್ನುವುದಕ್ಕೆ ಈತನ ಬಳಿ ಜಾಗವೇ ಇಲ್ಲ. ಅಂತಹ ಮನಸ್ಥಿತಿಯ ವ್ಯಕ್ತಿಯ ಕೈಗೆ ವೈದ್ಯಕೀಯ ಸರ್ಟಿಫಿಕೇಟ್ ಸಿಕ್ಕರೆ ಇನ್ನೇನಾಗುತ್ತದೆ? ಅದೇ ಇಲ್ಲಾಗಿದೆ ಅನ್ನೋದು ಸಾರ್ವಜನಿಕರ ಆಕ್ರೋಶದ ನುಡಿಯಾಗಿದೆ. ಹಾಗಾಗಿ ಕೇವಲ ಅಮಾನತ್ತು ಶಿಕ್ಷೆಯಿಂದ ಆತ ಪಾಠವನ್ನು ಕಲಿಯುವುದಿಲ್ಲ, ತನ್ನನ್ನು ತಾನು ತಿದ್ದಿಕೊಳ್ಳುವುದು ಇಲ್ಲ. ಖಾಸಗಿ ಕ್ಷೇತ್ರದಲ್ಲಿ ಸುಲಿಗೆಯನ್ನು ಮುಂದುವರಿಸುತ್ತಾನೆ ಅಷ್ಟೇ ಎಂದು, ಇಲ್ಲಿನ ಜನರು ಮಾತನಾಡಿಕೊಳ್ಳುತ್ತಿದ್ದಾರೆ. ಹಾಗಾಗಿ ಆತನಿಗೆ ನೀಡಲಾಗಿರುವಂತಹ ಸರ್ಟಿಫಿಕೇಟ್ ಹಿಂಪಡೆಯುವ ಕೆಲಸ ಸಂಬಂಧ ಪಟ್ಟ ಇಲಾಖೆಯಿಂದ ಆಗಬೇಕಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಬೈಂದೂರಿನಲ್ಲಿ ಹಳೆ ವೈಷಮ್ಯದಿಂದ ಮನೆಗೆ ನುಗ್ಗಿ ಹಲ್ಲೆಗೆ ಯತ್ನ
    Anticipatory Bail ಗೆ ಹೊಸ ರಕ್ಷಣೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಆಕ್ಷೇಪ
    “ಬರ್ಕಾಸ್ತು ಘಟಕಕ್ಕೆ ‘ಬೋಗಸ್ ನಾಯಕತ್ವ’ – ಕರವೇ ಮಹಿಳಾ ಘಟಕದಲ್ಲಿ ಭಿನ್ನಮತ ಸ್ಫೋಟ!”
    ಕುಂದಾಪುರದಲ್ಲಿ ಗುಂಡಿನ ದಾಳಿ: ಬಾರ್ಕೂರು ಮೂಲದ ಐವನ್ ರಿಚರ್ಡ್ ಮಸ್ಕರೇನಸ್ ಹತ್ಯೆ
    ನದಿಯಲ್ಲ ರಸ್ತೆ..!ಕೈಕಂಬದ ಕಂದಾವರದ ಈ ರಸ್ತೆ ಕೆರೆಯಾಗಿ ನೀರಿನಲ್ಲಿ ಮುಳುಗಿದೆ!ಶಾಲಾ ಮಕ್ಕಳಿಂದ ವೃದ್ಧರವರೆಗೆ ಎಲ್ಲರಿಗೂ ಜೀವಭಯ!
    ನೀವು Fit…ಆದ್ರೆ ನಿಮ್ಮ ಹೃದಯ ?ಮನೆಯಲ್ಲಿಯೇ 5 ನಿಮಿಷದಲ್ಲಿ ಪರೀಕ್ಷಿಸಿಕೊಳ್ಳಿ ನಿಮ್ಮ ಹೃದಯದ ಆರೋಗ್ಯ!
    ಇಂಧನ ಬೆಲೆ ಏರಿಕೆ ಹೊಡೆತ Air India ಹೊಸ ತೀರ್ಮಾನ ಶಾಕಿಂಗ್ …!
    ಅನ್ನಭಾಗ್ಯ ಅಕ್ಕಿಯ ಅಕ್ರಮ ದಾಸ್ತಾನು ಪತ್ತೆ – ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
    ತಮಿಳುನಾಡು ರಾಜಕೀಯದಲ್ಲಿ ದಿನಕ್ಕೊಂದು ಟ್ವಿಸ್ಟ್ -TVK wave ಎಷ್ಟು ದೂರ ಸಾಗುತ್ತದೆ?
    ಎಸ್.ಎಸ್.ಎಲ್.ಸಿ. ಪರೀಕ್ಷೆ: ಮಂಗಳೂರಲ್ಲಿ ನಿಷೇಧಾಜ್ಞೆ ಜಾರಿ
    ಎಲ್ಲರಿಗೂ ಯುಗಾದಿ ಹಬ್ಬ… ಆದರೆ ಈ ಗ್ರಾಮಗಳಲ್ಲಿ ಭಯ ಮೌನ…ಹಬ್ಬ ಇಲ್ಲ…!ಒಂದು ವಿಚಿತ್ರ ಕಥೆ!
    ಮನೆಯವರಿಂದಲೇ 16 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು! ಪೊಲೀಸರಿಗೆ ದೂರು 🚨
    “ಅಂಕಗಳು ಭವಿಷ್ಯ ನಿರ್ಧರಿಸುವುದಿಲ್ಲ” B.Tech ನಲ್ಲಿ 24 ವಿಷಯ ಫೇಲ್ ಆದರೂ IPS ಆದ ಸಮೀರ್ ಶರ್ಮಾ
    ಉದ್ಯಮಿ, ಕಾಲೇಜ್ topper,  ಕೋಟ್ಯದೀಶರೇ…ಕಠಿಣ ಜೈನ ಸನ್ಯಾಸದತ್ತ…!
    ಏರ್ ಇಂಡಿಯಾದಿಂದ ದೈನಂದಿನ ವಿಮಾನ ಹಾರಾಟದ ಬಗ್ಗೆ ನೂತನ ಪ್ರಕಟಣೆ
    ದೇಶದ ಗಮನ ಸೆಳೆದ ಒಡಿಶಾದ ಐತಿಹಾಸಿಕ ಶಿಕ್ಷಣ ಕ್ರಾಂತಿ: LKGಯಿಂದ PGವರೆಗೆ ಸಂಪೂರ್ಣ ಉಚಿತ ಶಿಕ್ಷಣ ಘೋಷಣೆ… “ಶಿಕ್ಷಣ ಎಲ್ಲರ ಹಕ್ಕು”
    ಪ್ರಮೋದ್ ಮಧ್ವರಾಜ್ ಅವರಿಗೆ ಕೊನೆಗೂ ಸಿಕ್ಕಿತು ಗೌರವ
    ಸ್ಪೇನ್ ಅಧ್ಯಕ್ಷರ ವಿರುದ್ಧ ಟ್ರಂಪ್ ಗುಡುಗು 
    ಇನ್ಮುಂದೆ ಏರ್‌ಪೋರ್ಟ್‌ನಲ್ಲಿ ಇಷ್ಟ ಬಂದಂತೆ ವಿಡಿಯೋ ಮಾಡುವಂತಿಲ್ಲ! ಇನ್ಸ್ಟಾರೀಲ್ಸ್, ವಿಡಿಯೋ ಮಾಡಿದರೆ ‘ನೋ-ಫ್ಲೈ ಲಿಸ್ಟ್’ ಸೇರುವ ಮುನ್ನೆಚ್ಚರಿಕೆ ನೀಡಿದ DGCA! ಲೇಟೆಸ್ಟ್ ಅಪ್ಡೇಟ್ ಹೊಸ ರೂಲ್ಸ್ ಇಲ್ಲಿದೆ.. ಓದಿ..
    ಹೆತ್ತ ಮಗಳನ್ನೇ ಉಸಿರುಗಟ್ಟಿಸಿ ಕೊಂದ  ಪಾಪಿ ತಾಯಿ
    8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ
    ನಾಲ್ಕು ವರ್ಷದ ಬಾಲಕಿ  ಅಪಹರಿಸಿ, ಲೈಂಗಿಕ ದೌರ್ಜನ್ಯ ನಡೆಸಿ ಕೊಲೆಗೈದ ಆರೋಪಿಯನ್ನು ಎನ್ಕೌಂಟರ್ ಮಾಡಿದ ಪೊಲೀಸರು
    Top 5, ಹೆಚ್ಚು ಅನುದಾನ ಪಡೆದ ಇಲಾಖೆಗಳು ಯಾವವು ಗೊತ್ತಾ?
    ಉಡುಪಿಯಲ್ಲಿ  ಹರಿಕಥಾ ಕಾರ್ಯಕ್ರಮದಲ್ಲಿ ಶ್ರೀ ಜಗದ್ಗುರು ಶಂಕರಾಚಾರ್ಯರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ- ಯುಟಿಕ್ಷಮೆ ಯಾಚನೆ
    “ಕಾಂತರಾ” ಖ್ಯಾತಿಯ ಸಪ್ತಮಿ ಗೌಡ, ದುಮುಕಿದ್ದು  ಹೋರಾಟದ ಅಂಗಳಕ್ಕೆ
    ನಿಮ್ಮ ಮಾತು ಕೇಳಿ ರಾಜೀನಾಮೆ ನೀಡಿದ್ದೇನೆ. ಈಗ ನನ್ನ ಬೇಡಿಕೆ ಈಡೇರಿಸುವುದು ನಿಮ್ಮ ಸರದಿ  ಎಂದ ಸಿದ್ದರಾಮಯ್ಯ
    ಗೃಹಸಚಿವ ಪ್ರಿಯಾಂಕ್ ಖರ್ಗೆಗೆ ಅವಹೇಳನ ಜಾತಿ ನಿಂದನೆ  ಆರೋಪದಲ್ಲಿ ಕಾರ್ಕಳ ವ್ಯಕ್ತಿಯ ಬಂಧನ !
    ಹೆಚ್.ಪಿ.ವಿ. ಚುಚ್ಚು ಮದ್ದಿನ ಬಗ್ಗೆ ಗೊಂದಲ ಬೇಡ: ಜಿಲ್ಲಾ ಆರೋಗ್ಯಾಧಿಕಾರಿ ಸ್ಪಷ್ಟನೆ
    ಸಚಿನ್ ತೆಂಡೂಲ್ಕರ್ ಮಗಳ ಜಪಾನೀಸ್ ಕನೆಕ್ಷನ್ ಈಗ ದೇಶದ ಗಮನ ಸೆಳೆಯುತ್ತಿದೆ…ಸಾರಾ ಹೊಸ ಒಪ್ಪಂದ ಚರ್ಚೆಯಲ್ಲಿ
    ಕಾಂಗ್ರೆಸ್ ಹೈಕಮಾಂಡ್ ಖಡಕ್ ವಾರ್ನಿಂಗ್: ಸ್ವಾಮೀಜಿ, ಧಾರ್ಮಿಕ ಮುಖಂಡರ ಶಿಫಾರಸುಗಳಿಗೆ ಸಿಗಲ್ಲ ಮನ್ನಣೆ!