📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಪರಸ್ತ್ರೀ ಹುಂಡಿಗೆ  ಒಂದುವರೆ ಕೋಟಿ ಅಪಾರ್ಟ್ಮೆಂಟ್, ಮಾಜಿ ಶಾಸಕನ ರಂಗಿನಾಟ 

ಇದು ಇಂದು ನಿನ್ನಯ ಕಥೆಯಲ್ಲ, ಬಹಳ ಸಮಯದಿಂದ ನಡೆದುಕೊಂಡು ಬಂದಂತಹ ಇಲ್ಲಿಗಲ್ ರಿಲೇಷನ್ಶಿಪ್ ಕಥೆ. ಇಂತಹದೊಂದು ಅನಾಹುತಕಾರಿ ಕೆಲಸವನ್ನು ಮಾಜಿ ಶಾಸಕನೊಬ್ಬ ಮಾಡಿ ಸುದ್ದಿಯಾಗುತ್ತಿದ್ದಾನೆ. ಆತ ಮಾಡಿದ ಘನಂದಾರಿ ಕೆಲಸದಿಂದ ಒಬ್ಬ ಸಾಮಾನ್ಯ ಗಂಡಸು , ಮಾನಸಿಕ ವೇದನೆಗೆ ತುತ್ತಾಗಿದ್ದಾನೆ. ಅವನ ವೇದನೆಗೆ ನ್ಯಾಯ ಕೊಡಬೇಕಾದಂತಹ ಅನಿವಾರ್ಯತೆಗೆ ಸಿಲುಕಿದ್ದಾರೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ

ಮಂಡ್ಯದ ಜಿಲ್ಲಾ ಕೇಂದ್ರದಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ದಿಶಾ ಸಭೆ ನಡೆಯುತ್ತಿತ್ತು. ಆ ಸಭೆಯಲ್ಲಿ ಕುದ್ದು ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಅಚಾನಕ್ಕಾಗಿ ಬಂದಂತಹ ಮಳವಳ್ಳಿ ವಿಧಾನಸಭಾ ಕ್ಷೇತ್ರದ ಪ್ರಸನ್ನ ಎಂಬ ಯುವಕ, ಎಚ್ ಡಿ ಕುಮಾರಸ್ವಾಮಿ ಅವರಲ್ಲಿ ಕಣ್ಣೀರನ ಮನವಿ ಒಂದನ್ನು ನೀಡುತ್ತಾರೆ. ನನಗೆ ನ್ಯಾಯ ಕೊಡಿ ಅಂತ ಅತ್ತು ಕರೆದು ಬೇಡಿಕೊಳ್ಳುತ್ತಾರೆ. ಯಾರಿಗೂ ಶಿಕ್ಷೆ ಬೇಡ, ನನಗೆ ಮುಕ್ತಿ ಕೊಡಿಸಿ ಅಂತ ಬೇಡಿಕೊಳ್ಳುತ್ತಾರೆ. ಅಷ್ಟಕ್ಕೂ ಆಗಿದ್ದು ಏನು?

ಜೆಡಿಎಸ್ ಪಕ್ಷದ ಮಾಜಿ ಶಾಸಕ ಡಾಕ್ಟರ್ ಕೆ ಅನ್ನದಾನಿ ಈ ಒಂದು ಪ್ರಕರಣದಲ್ಲಿ ಪ್ರಮುಖವಾಗಿ ಗೋಚರಿಸುತ್ತಾರೆ. ಪ್ರಸನ್ನ ಎಂಬ ಯುವಕನ ಹೆಂಡತಿಯನ್ನು ಡಾಕ್ಟರ್ ಕೆ ಅನ್ನದಾನಿ ತನ್ನ ಕಾಮದಾಟಕ್ಕೆ ಬಳಸಿಕೊಳ್ಳುತ್ತಾರೆ ಅನ್ನುವುದು ಆ ಹೆಂಗಸಿನ ಸ್ವಂತ ಗಂಡ ಪ್ರಸನ್ನನ ಗಂಭೀರ ಆರೋಪ . ಶಾಸಕರು ತನ್ನ ಹೆಂಡತಿಯನ್ನು ಬುಟ್ಟಿಗೆ ಹಾಕಿಕೊಂಡಿದ್ದಾರೆ, ಬಹುತೇಕವಾಗಿ ಜೊತೆಗೂ ಇದ್ದಾರೆ ಅನ್ನುವುದು ಸ್ವತಃ ಆ ಹೆಂಗಸಿನ ಗಂಡನ ಅಧಿಕೃತ ಸ್ಟೇಟ್ಮೆಂಟ್. ಒಂದು ಮೂಲದ ಪ್ರಕಾರ ಆ ಹೆಂಗಸು ನಡತೆಗಟ್ಟು ಬಹಳ ಸಮಯವೇ ಆಗಿ ಹೋಯಿತು. ಅವಳ ಈ ನಡತೆಗೆಟ್ಟ ಜೀವನಕ್ಕೆ ಸ್ವತಹ ಅವಳ ತವರು ಮನೆಯವರು ಸಹಕಾರ ಕೊಡುತ್ತಿದ್ದಾರೆ ಎನ್ನುವುದು ಆ ಹೆಂಗಸಿನ ಸ್ವಂತ ಪತಿಯ ಆರೋಪವೂ ಹೌದು 

ಮೈಸೂರಿನಲ್ಲಿ ಸುಮಾರು ಒಂದುವರೆ ಕೋಟಿ ಮೌಲ್ಯದ ಅಪಾರ್ಟ್ಮೆಂಟ್ ಒಂದರಲ್ಲಿ ಈ ಹೆಂಗಸನ್ನು ಇಟ್ಟುಕೊಂಡಿದ್ದಾನೆ  ಈ ಮಾಜಿ ಶಾಸಕ ಅನ್ನುವುದು ನೊಂದು ಬೆಂದು ಹೋಗಿರುವಂತಹ ಪ್ರಸನ್ನ ಆರೋಪ. ಅದಕ್ಕೆ ಬೇಕಾದಂತಹ ಒಂದಷ್ಟು ಸಾಕ್ಷಿಗಳನ್ನು ಜೊತೆಗಿಟ್ಟುಕೊಂಡಿದ್ದಾನೆ. ಪೊಲೀಸರು ತನ್ನ ಮಾತನ್ನು ಕೇಳುತ್ತಿಲ್ಲ, ತನ್ನ ದೂರನ್ನು ತೆಗೆದುಕೊಳ್ಳುತ್ತಿಲ್ಲ ಎನ್ನುವುದು ಪ್ರಸನ್ನನ ಗಂಭೀರ ದೂರು . ನನಗೆ ಆ ಹೆಂಗಸಿನ ಮೇಲೆ ಕ್ರಮವಾಗಬೇಕು, ಮಾಜಿ ಶಾಸಕರನ್ನು ಬಂಧಿಸಬೇಕು ಅನ್ನುವುದು ಉದ್ದೇಶವಲ್ಲ, ನನಗೆ ಆ ಹೆಂಗಸಿನಿಂದ ಮುಕ್ತಿ ಕೊಡಿಸಿ. ಕಣ್ಣೆದುರೇ ಹೆಂಡತಿಯು ಇನ್ನೊಬ್ಬರ ಸಹವಾಸದಲ್ಲಿರುವುದನ್ನು ನೋಡಿಯೂ ಬದುಕಬೇಕಾದಂತಹ ದುಸ್ಥಿತಿ ನನ್ನದಾಗಿದೆ. ವಿಚ್ಛೇದನ ಕೊಡು ಅಂದರೆ 30 ಲಕ್ಷ ಕೊಡಲು ಹೇಳುತ್ತಾಳೆ. ನಾನು ಅಷ್ಟು ದುಡ್ಡನ್ನು ಎಲ್ಲಿಂದ ತರಲಿ ಅನ್ನೋದು ಆ ಬಡಪ್ರಸನ್ನನ ಗೋಳು. ನಾನು ಅವರಿಂದ ಏನನ್ನು ಬಯಸುತ್ತಿಲ್ಲ. ನನಗೆ ವಿಚ್ಛೇದನ ಕೊಟ್ಟು ಸಂಬಂಧದಿಂದ ಮುಕ್ತವಾದರೆ ಸಾಕು ಅನ್ನುವುದಷ್ಟೇ ಪ್ರಸನ್ನನ ಮನವಿಯಾಗಿದೆ. ಇದೇ ಮನವಿಯನ್ನು ಜೆಡಿಎಸ್ ನಾಯಕ ಹಾಗೂ ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ ಅವರಲ್ಲಿ ಮೊನ್ನೆ ಮಾಡಿರುವಂತದ್ದು. ಆ ಮನವಿಯನ್ನು ಸ್ವೀಕರಿಸಿದ ಹೆಚ್ ಡಿ ಕುಮಾರಸ್ವಾಮಿ, ನೊಂದು ಬೆಂದಿರುವ ಪ್ರಸನ್ನನನ್ನು ಸಂತೈಸಿ , ನ್ಯಾಯ ಕೊಡಿಸುವ ಭರವಸೆಯನ್ನು ನೀಡಿದ್ದಾರೆ. ಇಲ್ಲಿಗಲ್ ರಿಲೇಶನ್ಶಿಪ್ಗಿಂತ ಅವರಿಬ್ಬರೂ ಒಟ್ಟಾಗಿಯೇ ಇರಲಿ, ನನಗೆ ವಿಚ್ಛೇದನ ಕೊಟ್ಟು ಅವರ ಸಂಬಂಧವನ್ನು ಗಟ್ಟಿ ಮಾಡಿಕೊಳ್ಳಲಿ ಅನ್ನೋದು ಪ್ರಸನ್ನನ ಆಗ್ರಹವಾಗಿದೆ. ಅದು ಸರಿಯೂ ಹೌದು. ಒಬ್ಬ ಮಾಜಿ ಶಾಸಕ ತನ್ನ ಪ್ರೇಯಸಿಯನ್ನು  ಜೊತೆಗಿಟ್ಟುಕೊಳ್ಳಬೇಕೆಂಬ ಬಯಕೆ ಇದ್ದಲ್ಲಿ ಅದರಿಂದ ಇನ್ನೊಬ್ಬ ವ್ಯಕ್ತಿಗೆ ಚುತಿ ಬರದ ಹಾಗೆ ನೋಡಿಕೊಳ್ಳಬೇಕು. ಆ ಹೆಂಗಸಿಗೆ ಮಾನವೂ ಇಲ್ಲ ಮರ್ಯಾದೆಯೂ ಇಲ್ಲ.  ಹಾಳಾಗಿ ಹೋಗಲಿ. ಮಾಜಿ ಶಾಸಕರಿಗಾದರೂ ಬುದ್ಧಿ ಬೇಡ್ವಾ? ಹೇಳಿಕೊಳ್ಳಲು ಪ್ರಸನ್ನ ಗಂಡ, ಚಕ್ಕಂದ ಆಡಲಿಕ್ಕೆ ಮಾಜಿ ಶಾಸಕರು ಅನ್ನುವಂತಾಗಿದೆ ಈಗಿನ ಇವರ ಸಂಬಂಧ. ಇದು ಅಕ್ಷಮ್ಯವೂ ಹೌದು . ಪ್ರಸನ್ನ ಹೇಳಿದ್ದೆಲ್ಲವೂ ಸತ್ಯವಾದರೆ, ಮಾಜಿ ಶಾಸಕ ಹಾಗೂ ಆ ಹೇಂಗಸು ಇಬ್ಬರು ಕ್ರಿಮಿನಲ್ ಅಪರಾಧಿಗಳು ಆಗುತ್ತಾರೆ. ಇವರ ವೈಯಕ್ತಿಕ ಜೀವನ ಏನೇ ಇದ್ದರೂ ಅದರಿಂದ ಇನ್ನೊಬ್ಬರ ಮನಸ್ಸಿಗೆ ಘಾಸಿಯಾಗಬಾರದು ಅಷ್ಟೇ ಅನ್ನುತ್ತಿದ್ದಾರೆ ಮಂಡ್ಯದ ಸಾರ್ವಜನಿಕರು.

COMMENTS

Login with Gmail to comment

ಇನ್ನಷ್ಟು ಸುದ್ದಿ

ಟೆನಿಸ್ ಕೋರ್ಟ್‌ನಲ್ಲಿ ಡಿಸೈನರ್ ಉಡುಪುಗಳ ಧಮಾಕಾ!
ರಾಜಕೀಯ ಸುದ್ದಿ ಅಂದರೆ ಬೋರ್ ಅಂತ ಅನ್ನಿಸುವರಿಗೆ ಇದು ಒಂದು ಪಕ್ಕಾ ಎಂಟರ್‌ಟೈನ್‌ಮೆಂಟ್ ಎಪಿಸೋಡ್!!!
“ನನ್ನ ಮಗಳನ್ನೂ ಅದೇ ಕೋಟೆಯಿಂದ ಕೆಳಗೆ ತಳ್ಳಿ!” – ನಿಶ್ಚಿತ ವರನ ಹತ್ಯೆಗೈದ ಸಿಯಾ ಹೆತ್ತವರ ಆಕ್ರೋಶದ ಹೇಳಿಕೆ
ಡ್ರೋನ್ ದಾಳಿಯ ನಂತರ ಬಹ್ರೇನ್‌ನಲ್ಲಿ ಕನಿಷ್ಠ 32 ಜನರಿಗೆ ಗಾಯ
ನ್ಯಾಯಾಂಗಕ್ಕೆ ಕಳಂಕ ತರುವುದನ್ನು ನೋಡಿಯೂ ಕೈಕಟ್ಟಿ ಕೂರಲಾಗದು
ದಾವೂದ್ ಇಬ್ರಾಹಿಂನ ಆಪ್ತ. ಸಲೀಂ ಡೋಲಾ ಬಂದನ ವಿದೇಶದಲ್ಲಿ ಅಡಗಿದ್ದರೂ ಕಾನೂನಿನಿಂದ ತಪ್ಪಿಸಿಕೊಳ್ಳಲಾಗಲಿಲ್ಲ
“ಸಂತೋಷ್ Kumar” ಯಾರು? ಸಾವಿರ ಕಾರ್ಡ್‌ಗಳಲ್ಲಿ ಒಂದೇ ಹೆಸರು..!₹95 ಕೋಟಿ ಅಮೆರಿಕಾ ಹಣ,1000 ಡೆಬಿಟ್ ಕಾರ್ಡ್‌ಗಳು!ಬಯಲಾಯ್ತು ಕರ್ನಾಟಕದಲ್ಲಿ ಭಾರೀ ನಕ್ಸಲ್-ಮತಾಂತರ ಜಾಲ?
ಉಪಚುನಾವಣೆ ಮುಗಿಯುತಿದ್ದಂತೆಯೇ, ವಿದ್ಯುತ್ ದರ ಏರಿಸುತ್ತಿರುವ ರಾಜ್ಯ ಸರ್ಕಾರ
ಕರ್ನಾಟಕ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: 123 ಕೇಂದ್ರಗಳ ಪಾಸ್ ವಿತರಣ –ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿದೆ, ಬಸ್‌ಗಳ ಸಂಖ್ಯೆಯೂ ಹೆಚ್ಚುತ್ತದೆಯೇ?
ಶಾಮ್ ಇನ್ಸ್ಟಿಟ್ಯೂಶನ್ ಪ್ರಸ್ತುತ ಪಡಿಸಿದ “ಕಜ್ಜ” ತುಳು ಸಿನಿಮಾದ ಆಡಿಯೋ, ಟೇಲರ್ ಬಿಡುಗಡೆ
ಸಾಯಿ ಚಿರಾಗ್ ಚಿಕಿತ್ಸೆಗೆ ಹರಿದುಬಂತು 2 ಕೋಟಿ ರೂ. ಜನಸಾಗರದ ನಿಧಿ!
ಇನ್ನು ಹೈವೇಯಲ್ಲಿ ಲಿಮಿಟ್ ಗಿಂತ ವೇಗವಾಗಿ ಹೋಗುವವರು ಹುಷಾರಾಗಿರಿ…
ಮಾಜಿ ಮುಖ್ಯಮಂತ್ರಿಯ ಮೇಲೆ ಗುಂಡಿನ ದಾಳಿ,- Z+ ಭದ್ರತೆಯ ನಡುವೆ ದಾಳಿಕೋರ ಹೇಗೆ  ಬಂದ?
 ಮಗಳ ಗಂಡನೇ …ಅತ್ತೆಯ ಗಂಡ! ಹೌದು…ಅಳಿಯ-ಅತ್ತೆಯ ಪ್ರೇಮಕಥೆ ವೈರಲ್!ಕುಟುಂಬ ಸಂಬಂಧಗಳೇ ತಲೆಕೆಳಗು! ಉತ್ತರ ಪ್ರದೇಶದ ಈ ಮದುವೆ ಹಿಂದಿನ ರಹಸ್ಯ ಏನು?
ಬ್ರಹ್ಮಾವರ ಅಪಾರ್ಟ್‌ಮೆಂಟ್ ರೂಮಿನಲ್ಲಿ ಯುವತಿಯ ನಿಗೂಢ ಸಾವು
ಕೆತ್ತಿಕಲ್‌ನಿಂದ ಚಾರ್ಮಾಡಿವರೆಗೆ ಅಪಾಯದ ಗಂಟೆ! ಭೂಕುಸಿತ ಭೀತಿಯಲ್ಲಿ ಕರಾವಳಿ ರಸ್ತೆಗಳು !ಮಳೆ ಬಂದ ಮೇಲೆ ಸಭೆ, ಪರಿಶೀಲನೆ… ಆದರೆ ಮುನ್ನೆಚ್ಚರಿಕೆ ಎಲ್ಲಿದೆ?
ಹತ್ತು ವರ್ಷದ ಮಗಳ ಹುಟ್ಟುಹಬ್ಬದ ಸಂಭ್ರಮ…  ವಿಧಿಯಾಟದಲ್ಲಿ ಕಣ್ಣೀರಾಗಿ ಮಾರ್ಪಟ್ಟ ದುರಂತ ಕಥೆ
ತಮಿಳುನಾಡು ರಾಜಕೀಯದಲ್ಲಿ ದಿನಕ್ಕೊಂದು ಟ್ವಿಸ್ಟ್ -TVK wave ಎಷ್ಟು ದೂರ ಸಾಗುತ್ತದೆ?
ಪರಮೇಶ್ವರ ವಿರುದ್ಧ FIR-₹500 ಬೆಟ್ಟಿಂಗ್ ಹೇಳಿಕೆಗೆ ಕಾನೂನು ಕ್ರಮ.
ಜನಿವಾರಕ್ಕೆ ಕೈ ಹಾಕಿದವರು, ಪರ್ಮನೆಂಟ್ ಮನೆಗೆ ಹೋಗುವ ದಾರಿಯಲ್ಲಿ….
ಕಾಂಗ್ರೆಸ್ ಮೇಲಿನ ಕೋಪ ತಣ್ಣಗಾಗಿಲ್ಲ….. ಜನಪರ ಯೋಜನೆ ಮುಂದುವರೆಸಲು ಸ್ಟಾಲಿನ್ ಮನವಿ
165 ಹೆಣ್ಮಕ್ಕಳು ತಮ್ಮದಲ್ಲದ ತಪ್ಪಿಗೆ ಹತ್ಯೆಗೆ ಒಳಗಾದರು 
ಶಿಶಿಲದಲ್ಲಿ ವಿಷಪೂರಿತ ಹಾವು ಕಚ್ಚಿ 65 ವರ್ಷದ ರೈತ ಮೃತ್ಯು
ಅಯೋಧ್ಯೆ ರಾಮ ಮಂದಿರ ಸ್ಫೋಟಿಸಲು ಹರಿಹರದಲ್ಲಿ ಪ್ಲಾನ್! ಬಂಧಿತ ಸುಹೇಲ್ ಬೆನ್ನತ್ತಿದ ಇಂಟೆಲಿಜೆನ್ಸ್; 10 ಜನರ ಟೀಮ್‌ಗಾಗಿ ತೀವ್ರ ಶೋಧ!
ಹೆಚ್.ಪಿ.ವಿ. ಚುಚ್ಚು ಮದ್ದಿನ ಬಗ್ಗೆ ಗೊಂದಲ ಬೇಡ: ಜಿಲ್ಲಾ ಆರೋಗ್ಯಾಧಿಕಾರಿ ಸ್ಪಷ್ಟನೆ
“ಮಾರಿಕೊಂಡ ಮಾಧ್ಯಮದವರು ಯಾರು?” ಪ್ರಶ್ನೆಗೆ ಪ್ರಕಾಶ್ ರಾಜ್ ನಿರುತ್ತರ”ಪತ್ರಿಕಾಗೋಷ್ಠಿಯಲ್ಲೇ ಶುರುವಾದ ಭಾರೀ ವಿವಾದ ಏನು?
ಆರೋಪಿ ಸಮೀರ್ ಮುಲ್ಲಾ ಸ್ಫೋಟಕ ಹೇಳಿಕೆ-ಖುಷಿ ಒಳ್ಳೆ ಹುಡುಗಿ-🔥 ಹುಬ್ಬಳ್ಳಿ ಲವ್ ಜಿಹಾದ್ ಅಲ್ಲ ಎಂದ ಪೊಲೀಸರು : ಇದೀಗ ಹೊಸ ಟ್ವಿಸ್ಟ್!
ನಿಮ್ಮ ಮಾತು ಕೇಳಿ ರಾಜೀನಾಮೆ ನೀಡಿದ್ದೇನೆ. ಈಗ ನನ್ನ ಬೇಡಿಕೆ ಈಡೇರಿಸುವುದು ನಿಮ್ಮ ಸರದಿ  ಎಂದ ಸಿದ್ದರಾಮಯ್ಯ
ಜನಗಣತಿ 2026–27 – Self Enumeration ಮುಗಿದು ಈಗ ಮನೆ ಮನೆ ಭೇಟಿ ಹಂತ ಆರಂಭ!ನಮ್ಮ ಮಾಹಿತಿ = ನಮ್ಮ ದೇಶದ ಬೆಳವಣಿಗೆ…
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ಯಾಂಕಾಕ್‌ನಿಂದ ಬಂದ ಪ್ರಯಾಣಿಕನ ಬ್ಯಾಗ್‌ನಲ್ಲಿ 47 ಜೀವಂತ ಅಪರೂಪದ ಪ್ರಾಣಿಗಳು ಪತ್ತೆ!