📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಪವಾಡವೇ? 33 ದಿನ ,775 ಗಂಟೆಗಳ ಬಳಿಕ ಸಮಾಧಿಯಿಂದ ಹೊರಬಂದ ಶಿವಯೋಗಿ ಶ್ರೀಗಳು……!!!!ಗದಗದಲ್ಲಿ ಅಪರೂಪದ ಆಧ್ಯಾತ್ಮಿಕ ಘಟನೆ!ಪರಮ ಯೋಗವೇ?

ಲೋಕಕಲ್ಯಾಣಕ್ಕಾಗಿ 33 ದಿನಗಳ ಶಿವಯೋಗ ಸಮಾಧಿ

ಗದಗ ಜಿಲ್ಲೆಯ ಅಂತೂರು-ಬೆಂತೂರು ಗ್ರಾಮದ ಬೂದೀಶ್ವರ ಮಠ ಭಾನುವಾರ ಅಪರೂಪದ ಕ್ಷಣಕ್ಕೆ ಸಾಕ್ಷಿಯಾಯಿತು. ಲೋಕಕಲ್ಯಾಣ, ರೈತರ ಹಿತ ಹಾಗೂ ಯೋಧರ ಕ್ಷೇಮಕ್ಕಾಗಿ ಡಾ. ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ಕೈಗೊಂಡಿದ್ದ 33 ದಿನಗಳ ‘ಶಿವಯೋಗ ಸಮಾಧಿ ಅನುಷ್ಠಾನ’ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಸಮಾಧಿಯಿಂದ ಹೊರಬಂದ ಶ್ರೀಗಳನ್ನು ಕಂಡ ಕ್ಷಣ ಸಾವಿರಾರು ಭಕ್ತರು ಭಾವೋದ್ವೇಗದಿಂದ ಜಯಘೋಷ ಮೊಳಗಿಸಿದರು.

ಗಾಳಿ-ನೀರು-ಆಹಾರವಿಲ್ಲದ 775 ಗಂಟೆಗಳ ಕಠಿಣ ತಪಸ್

ಮಠದ ಮಾಹಿತಿ ಪ್ರಕಾರ, ಸ್ವಾಮೀಜಿಗಳು 775 ಗಂಟೆಗಳ ಕಾಲ ಅನ್ನ, ನೀರು, ಬೆಳಕು ಮತ್ತು ಗಾಳಿಯ ಸಂಪರ್ಕವಿಲ್ಲದ ಸಮಾಧಿಯಲ್ಲಿಕಠಿಣ ಯೋಗಸಾಧನೆ ನಡೆಸಿದರು. ಈ ಅನುಷ್ಠಾನವನ್ನು ಭಕ್ತರು ಅಪರೂಪದ ಆಧ್ಯಾತ್ಮಿಕ ಸಾಧನೆ ಎಂದು ಕೊಂಡಾಡುತ್ತಿದ್ದಾರೆ. ಈ ರೀತಿಯ ಸಾಧನೆಗಳ ಕುರಿತು ವಿಭಿನ್ನ ಅಭಿಪ್ರಾಯಗಳಿದ್ದರೂ, ಸ್ಥಳದಲ್ಲಿ ನೆರೆದಿದ್ದ ಭಕ್ತರಿಗೆ ಅದು ಜೀವನದಲ್ಲಿ ಮರೆಯಲಾಗದ ಅನುಭವವಾಗಿ ಪರಿಣಮಿಸಿತು.

ಜೂನ್ 3ರಂದು ಆರಂಭವಾದ ಈ ಅನುಷ್ಠಾನದ ವೇಳೆ ಸಮಾಧಿ ಮಂಟಪದ ಬಾಗಿಲನ್ನು ಕಲ್ಲು ಮತ್ತು ಸಿಮೆಂಟ್‌ನಿಂದ ಸಂಪೂರ್ಣ ಮುಚ್ಚಲಾಗಿತ್ತು. ಹೊರಗೆ ನಿರಂತರ ಶಿವಪೂಜೆ, ರುದ್ರಪಾರಾಯಣ, ಯಜ್ಞ, ಭಜನೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಕೊನೆಯ ದಿನ ವಿವಿಧ ಮಠಾಧೀಶರು, ಸಾಧು-ಸಂತರು ಮತ್ತು ಸಾವಿರಾರು ಭಕ್ತರ ಸಮ್ಮುಖದಲ್ಲಿ ಸಮಾಧಿಯ ದ್ವಾರ ತೆರೆಯಲಾಯಿತು.

ಬಾಗಿಲು ತೆರೆಯುತ್ತಿದ್ದಂತೆಯೇ ಶ್ರೀಗಳು ಶಿವಯೋಗ ಸಮಾಧಿಯಿಂದ ಹೊರಬಂದ ದೃಶ್ಯ ಕಂಡು ಅನೇಕ ಭಕ್ತರು ಭಕ್ತಿಭಾವದಿಂದ ಕಣ್ಣೀರಿಟ್ಟರು. “ಹರ ಹರ ಮಹಾದೇವ” ಎಂಬ ಘೋಷಣೆಗಳಿಂದ ಇಡೀ ಪ್ರದೇಶ ಮೊಳಗಿತು. ಬಳಿಕ ಶ್ರೀಗಳಿಗೆ ವಿಶೇಷ ಅಭಿಷೇಕ, ತುಲಾಭಾರ ಸೇವೆ ಹಾಗೂ ಅದ್ದೂರಿ ಮೆರವಣಿಗೆ ನಡೆಸಲಾಯಿತು.

ಸ್ವಾಮೀಜಿಗಳ 775 ಗಂಟೆಗಳ ತಪಸ್ಸಿನ ಸ್ಮರಣಾರ್ಥ 775 ಶಿವಲಿಂಗಗಳನ್ನು ಪ್ರತಿಷ್ಠಾಪಿಸಿರುವುದು ಈ ಅನುಷ್ಠಾನದ ಮತ್ತೊಂದು ವಿಶೇಷ. ಮಠದ ಆವರಣದಲ್ಲಿ ಈ ಶಿವಲಿಂಗಗಳು ಭಕ್ತರ ಆಕರ್ಷಣೆಯ ಕೇಂದ್ರವಾಗಿವೆ.

ಈ ಮಧ್ಯೆ ಅನುಷ್ಠಾನದ ಅವಧಿಯಲ್ಲಿ ಶ್ರೀಗಳ ಆರೋಗ್ಯದಲ್ಲಿ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ವೈದ್ಯಕೀಯ ತಂಡದ ಮೇಲ್ವಿಚಾರಣೆ ಮತ್ತು ಆಸ್ಪತ್ರೆಯ ಸಹಕಾರವೂ ಒದಗಿಸಲಾಗಿತ್ತು ಎಂದು ಮಠದ ಮೂಲಗಳು ತಿಳಿಸಿವೆ.

‘ಹರ ಹರ ಮಹಾದೇವ’ 

ಈ ಘಟನೆ ಭಕ್ತರಲ್ಲಿ ಭಕ್ತಿಯ ಅಲೆ ಎಬ್ಬಿಸಿದ್ದು, “ಇದು ಶಿವಭಕ್ತಿಯ ಮಹಿಮೆ”, “ಶಿವಯೋಗದ ಅದ್ಭುತ ಶಕ್ತಿ” ಎಂದು ಅನೇಕರು ವರ್ಣಿಸುತ್ತಿದ್ದಾರೆ. ಮತ್ತೊಂದೆಡೆ, ಇಂತಹ ಅಸಾಮಾನ್ಯ ಸಾಧನೆಗಳ ಬಗ್ಗೆ ವೈದ್ಯಕೀಯ ಮತ್ತು ವೈಜ್ಞಾನಿಕ ದೃಷ್ಟಿಕೋಣದಿಂದ ಪ್ರಶ್ನೆಗಳೂ ಉದ್ಭವಿಸುತ್ತಿವೆ. ಆದಾಗ್ಯೂ, ಗದಗದ ಈ ಶಿವಯೋಗ ಸಮಾಧಿ ಅನುಷ್ಠಾನವು ರಾಜ್ಯದಾದ್ಯಂತ ವ್ಯಾಪಕ ಚರ್ಚೆಗೆ ಕಾರಣವಾಗಿದ್ದು, ಆಧ್ಯಾತ್ಮಿಕ ಕ್ಷೇತ್ರದಲ್ಲಿ ವಿಶಿಷ್ಟ ಘಟನೆಯಾಗಿ ದಾಖಲಾಗಿದೆ.

##ಶಿವಯೋಗಸಮಾಧಿ #ರಾಚೋಟೇಶ್ವರಶಿವಾಚಾರ್ಯಸ್ವಾಮೀಜಿ #ಗದಗ #ಬೂದೀಶ್ವರಮಠ #ಹರಹರಮಹಾದೇವ

COMMENTS

Login with Gmail to comment

ಇನ್ನಷ್ಟು ಸುದ್ದಿ

ಪುತ್ತೂರಿನ ದೇವಸ್ಥಾನ ಪದಾಧಿಕಾರಿಗಳ ವಿರುದ್ಧ FIR ..!
ಸ್ಪೇನ್ ಅಧ್ಯಕ್ಷರ ವಿರುದ್ಧ ಟ್ರಂಪ್ ಗುಡುಗು 
ಸಾಮಾಜಿಕ‌ ಕಾರ್ಯಕರ್ತರಿಗೆ ಹಾಗೂ ನಗರ ಸಭೆ ಪೌರಯುಕ್ತರಿಗೆ ಬಹಿರಂಗ ಸವಾಲು.ಶ್ರೀಮಂತರ ಅಕ್ರಮಗಳ ಬಗ್ಗೆ ಮೌನವೇಕೆ.‌‌?
ರಾಜಕೀಯ ಬದಲಾಗುತ್ತಿದೆ -ಪಂಚರಾಜ್ಯ election ರಿಸಲ್ಟ್ “ಗೆಲುವು-ಸೋಲಿನ ಶಕ್ತಿ ಪಕ್ಷದಲ್ಲಲ್ಲ… ಜನರ ಕೈಯಲ್ಲಿ”
🚨 “ಮಂಗಳೂರು ಜಿಲ್ಲಾಕಾರಾಗೃಹದಲ್ಲಿ ಗಲಾಟೆ: ಜೈಲು ಅಧೀಕ್ಷಕರ ಮೇಲೆಯೇ ಕೈದಿಗಳ ಹಲ್ಲೆಯತ್ನ!”
 ಆಸ್ಪತ್ರೆಯಲ್ಲಿ ಡಾಕ್ಟರ್ “mistakeಎಡವಟ್”…ಅಚ್ಚರಿಯೂ ಮೀರಿದ ಆಘಾತ!
“ಭಾರತೀಯ ಕುಟುಂಬ ಆಸ್ತಿ ವಿವಾದಗಳಲ್ಲಿ ಮಧ್ಯಸ್ಥಿಕೆಯ ಮಹತ್ವವನ್ನು ಮತ್ತೊಮ್ಮೆ ಎತ್ತಿಹಿಡಿದ ಸುಪ್ರೀಂ ಕೋರ್ಟ್”
ಭಾರತದ ಟ್ರಾಫಿಕ್ ಕಿರಿಕಿರಿಗೆ ಇದುವರೆಗೂ ಯಾರೂ ಯೋಚಿಸದ ಮಾಸ್ಟರ್ ಪ್ಲಾನ್!ಉಬರ್ ಡ್ರೈವರ್ ಕೊಟ್ಟ ಐಡಿಯಾ ಕೇಳಿದ್ರೆ ನೀವೂ ಹೌದಲ್ವಾ ಅಂತೀರಾ….
ಕನ್ನಡದ ನೆಲದಲ್ಲಿ ಕನ್ನಡಕ್ಕೇ ಗೇಟ್ ಪಾಸ್: ಇವರು ಕರ್ನಾಟಕದ ಸಚಿವರೊ⁉️ಇಂಗ್ಲೆಂಡಿನ ಪ್ರತಿನಿಧಿಯೋ?
ಬೈಂದೂರಿನಲ್ಲಿ ಹಳೆ ವೈಷಮ್ಯದಿಂದ ಮನೆಗೆ ನುಗ್ಗಿ ಹಲ್ಲೆಗೆ ಯತ್ನ
ಗ್ರಾಹಕರ ಮಾತು ಕೇಳಿ, ₹900 ಕೋಟಿಯ ರೆಸ್ಟೋರೆಂಟ್ ಸಾಮ್ರಾಜ್ಯ ನಿರ್ಮಿಸಿದ ಉದ್ಯಮಿ..
ವೈರಲ್ ವೀಡಿಯೊ ….ನಗು ಆರೋಗ್ಯಕ್ಕೆ ಒಳ್ಳೆಯದು, ಆದ್ರೆ ಹೆಣ್ಣುಮಗುವಿನ ಹೆಣದ ಮುಂದೆ ನಕ್ಕರೆ.. ಏನಂತಾರೆ?ತಮಿಳುನಾಡಿನ ಜನ ಕಣ್ಣೀರಲ್ಲಿರುವಾಗ ಇವರಿಗೆ ಜೋಕ್ಸ್‌ ನೆನಪಾಯ್ತಾ? ಏನದು ಅಂತ ಜೋಕ್ಸ್ …
ಕದನ ವಿರಾಮ ಚೂರುಚೂರು-ಮಧ್ಯಪ್ರಾಚ್ಯ ಮತ್ತೆ ಯುದ್ಧದ ಅಂಚಿನಲ್ಲಿ!ಜೋರ್ಡಾನ್, ಬಹ್ರೇನ್, ಕುವೈತ್‌ನಲ್ಲಿ ಕ್ಷಿಪಣಿ ಅಲರ್ಟ್ !!
ಮದರಸಾದಲ್ಲಿ ದೌರ್ಜನ್ಯ ಮತ್ತು ಬಲವಂತದ ಕೂಲಿ ಆರೋಪ-24 ಮಕ್ಕಳ ರಕ್ಷಣೆ
108 ಆರೋಗ್ಯ ಕವಚ'”ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ಇನ್ಮುಂದೆ ಆಂಬ್ಯುಲೆನ್ಸ್ ನಿಮ್ಮ ಮನೆಬಾಗಿಲಿಗೆ! 
ಬ್ಯಾಂಕುಗಳ ಮೇಲೆ ಭೀಕರ ದಾಳಿಯ ಮುನ್ಸೂಚನೆ ನೀಡಿದ ಇರಾನ್- ಮಿನಿಮಮ್ 1000 ಮೀಟರ್ ದೂರವಿರಿ
“ವಾಹನ ಮಾರಾಟ-RC ಬದಲಾವಣೆ  ಅಗತ್ಯ.. ಇಲ್ಲವಾದರೆ ಕಾನೂನು ಸಮಸ್ಯೆಗಳು ತಪ್ಪಿದ್ದಲ್ಲ..!” ಹೈಕೋರ್ಟ್
ಒಂದು ವಾಟ್ಸ್ಯಾಪ್ ಮೆಸೇಜ್… ಕೋರ್ಟ್ ವರೆಗೂ ಎಳೆದ ಶಾಕ್ ಘಟನೆಯ ಸುತ್ತ..
ಅಯೋಧ್ಯೆಯಲ್ಲಿ ನ್ಯಾಯಕ್ಕಾಗಿ ವಕೀಲರ ಮೆರವಣಿಗೆ..ಭುಗಿಲೆದ್ದ ಪ್ರತಿಭಟನೆ..ಕಠಿಣ ಕ್ರಮಕ್ಕೆ ಆಗ್ರಹ
ಹೊಟ್ಟೆಪಾಡಿಗಾಗಿ ಬಂದ ಕಾರ್ಮಿಕನ ಜೀವ ರೋಡ್ ರೋಲರ್ ಹರಿದು ರಸ್ತೆಯಲ್ಲೇ ಅಂತ್ಯ…
ಆರ್‌ಸಿಬಿ ಎದುರಿಸಲು ರಾಯಲ್ಸ್ ರೆಡಿ??: ಕ್ರಿಕೆಟ್ ಜಗತ್ತಿಗೆ ಶಾಕ್ ಕೊಟ್ಟ ಬಿಹಾರದ ಬಾಲಕ-ಸಚಿನ್ ತೆಂಡೂಲ್ಕರ್ ಕೂಡ ಮೆಚ್ಚಿದ ಆ 29 ಎಸೆತಗಳ ರುದ್ರತಾಂಡವ!
ಆಂಬುಲೆನ್ಸ್ ಡ್ರೈವರ್ ನ ಸಮಾಜ ಸೇವೆಯ ಕಾರ್ಯ ಶ್ಲಾಘನಿಯ – ಸುದೇಶ್ ಕುಮಾರ್
‼️ ಮುಂಗಾರು ಅಬ್ಬರ ಶುರು: ಕರ್ನಾಟಕ-ಕೇರಳಕ್ಕೆ IMD ರೆಡ್ ಸಿಗ್ನಲ್! ಮುಂದಿನ 7 ದಿನ ಭಾರೀ ಮಳೆ, ಬಿರುಗಾಳಿ ಸಾಧ್ಯತೆ!
ನಿಶ್ಶಬ್ದ ಕೊಠಡಿ ಹೇಳುವ ನಿಗೂಢ ರಹಸ್ಯ …!ಮನೆಯ ಗೋಡೆಗಳ ಮೇಲೆ ಬರಹ,ಕಾಗದಗಳು ನೂರಾರು…! ಅಸಹಜ ಮರಣದ ಹಿಂದೆ ಅಡಗಿರುವ ಸತ್ಯ ಇನ್ನೂ ಅನಾವರಣವಾಗಿಲ್ಲ…”
ಯುದ್ಧ: ಯಾವುದೇ ಜಾಗತಿಕ ನಾಯಕರ ಮಾತುಕತೆ ಫಲಪ್ರದವಾಗದೇ?!
ರಸ್ತೆಯ ವಿಚಾರಕ್ಕೆ ನೆರೆಹೊರೆಯರ ನಡುವೆ ಬಾರಿ ಗಲಾಟೆ !
“ಫುಟ್‌ಪಾತ್ ಯಾರದ್ದು? ಪಾದಚಾರಿಗಳ ಹಕ್ಕೋ, ಹೊಟ್ಟೆಪಾಡಿನ ಹೋರಾಟವೋ?”
ಧೂಮಪಾನ ಮಾಡುತ್ತಿದ್ದೀರಾ? ನಿಮ್ಮ ಮುಖ ನಿಧಾನವಾಗಿ ನಾಶವಾಗುತ್ತಿದೆ…
ನಾಟೆಕಲ್ ತಿರುವಿನಲ್ಲಿ ಪಿ.ಎ. ಕಾಲೇಜು ಬಸ್ ಅಪಘಾತ: ಬಸ್‌ನಡಿ ಸಿಲುಕಿ ಬೈಕ್ ಸವಾರ ಗಂಭೀರ ಗಾಯಗೊಂಡು ಸಾವು
ದಾವಣಗೆರೆ ಬೆಚ್ಚಿಬಿದ್ದಿದೆ! 41 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ..