📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಪವಾಡವೇ? 33 ದಿನ ,775 ಗಂಟೆಗಳ ಬಳಿಕ ಸಮಾಧಿಯಿಂದ ಹೊರಬಂದ ಶಿವಯೋಗಿ ಶ್ರೀಗಳು……!!!!ಗದಗದಲ್ಲಿ ಅಪರೂಪದ ಆಧ್ಯಾತ್ಮಿಕ ಘಟನೆ!ಪರಮ ಯೋಗವೇ?

    ಲೋಕಕಲ್ಯಾಣಕ್ಕಾಗಿ 33 ದಿನಗಳ ಶಿವಯೋಗ ಸಮಾಧಿ

    ಗದಗ ಜಿಲ್ಲೆಯ ಅಂತೂರು-ಬೆಂತೂರು ಗ್ರಾಮದ ಬೂದೀಶ್ವರ ಮಠ ಭಾನುವಾರ ಅಪರೂಪದ ಕ್ಷಣಕ್ಕೆ ಸಾಕ್ಷಿಯಾಯಿತು. ಲೋಕಕಲ್ಯಾಣ, ರೈತರ ಹಿತ ಹಾಗೂ ಯೋಧರ ಕ್ಷೇಮಕ್ಕಾಗಿ ಡಾ. ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿ ಕೈಗೊಂಡಿದ್ದ 33 ದಿನಗಳ ‘ಶಿವಯೋಗ ಸಮಾಧಿ ಅನುಷ್ಠಾನ’ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಸಮಾಧಿಯಿಂದ ಹೊರಬಂದ ಶ್ರೀಗಳನ್ನು ಕಂಡ ಕ್ಷಣ ಸಾವಿರಾರು ಭಕ್ತರು ಭಾವೋದ್ವೇಗದಿಂದ ಜಯಘೋಷ ಮೊಳಗಿಸಿದರು.

    ಗಾಳಿ-ನೀರು-ಆಹಾರವಿಲ್ಲದ 775 ಗಂಟೆಗಳ ಕಠಿಣ ತಪಸ್

    ಮಠದ ಮಾಹಿತಿ ಪ್ರಕಾರ, ಸ್ವಾಮೀಜಿಗಳು 775 ಗಂಟೆಗಳ ಕಾಲ ಅನ್ನ, ನೀರು, ಬೆಳಕು ಮತ್ತು ಗಾಳಿಯ ಸಂಪರ್ಕವಿಲ್ಲದ ಸಮಾಧಿಯಲ್ಲಿಕಠಿಣ ಯೋಗಸಾಧನೆ ನಡೆಸಿದರು. ಈ ಅನುಷ್ಠಾನವನ್ನು ಭಕ್ತರು ಅಪರೂಪದ ಆಧ್ಯಾತ್ಮಿಕ ಸಾಧನೆ ಎಂದು ಕೊಂಡಾಡುತ್ತಿದ್ದಾರೆ. ಈ ರೀತಿಯ ಸಾಧನೆಗಳ ಕುರಿತು ವಿಭಿನ್ನ ಅಭಿಪ್ರಾಯಗಳಿದ್ದರೂ, ಸ್ಥಳದಲ್ಲಿ ನೆರೆದಿದ್ದ ಭಕ್ತರಿಗೆ ಅದು ಜೀವನದಲ್ಲಿ ಮರೆಯಲಾಗದ ಅನುಭವವಾಗಿ ಪರಿಣಮಿಸಿತು.

    ಜೂನ್ 3ರಂದು ಆರಂಭವಾದ ಈ ಅನುಷ್ಠಾನದ ವೇಳೆ ಸಮಾಧಿ ಮಂಟಪದ ಬಾಗಿಲನ್ನು ಕಲ್ಲು ಮತ್ತು ಸಿಮೆಂಟ್‌ನಿಂದ ಸಂಪೂರ್ಣ ಮುಚ್ಚಲಾಗಿತ್ತು. ಹೊರಗೆ ನಿರಂತರ ಶಿವಪೂಜೆ, ರುದ್ರಪಾರಾಯಣ, ಯಜ್ಞ, ಭಜನೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಕೊನೆಯ ದಿನ ವಿವಿಧ ಮಠಾಧೀಶರು, ಸಾಧು-ಸಂತರು ಮತ್ತು ಸಾವಿರಾರು ಭಕ್ತರ ಸಮ್ಮುಖದಲ್ಲಿ ಸಮಾಧಿಯ ದ್ವಾರ ತೆರೆಯಲಾಯಿತು.

    ಬಾಗಿಲು ತೆರೆಯುತ್ತಿದ್ದಂತೆಯೇ ಶ್ರೀಗಳು ಶಿವಯೋಗ ಸಮಾಧಿಯಿಂದ ಹೊರಬಂದ ದೃಶ್ಯ ಕಂಡು ಅನೇಕ ಭಕ್ತರು ಭಕ್ತಿಭಾವದಿಂದ ಕಣ್ಣೀರಿಟ್ಟರು. “ಹರ ಹರ ಮಹಾದೇವ” ಎಂಬ ಘೋಷಣೆಗಳಿಂದ ಇಡೀ ಪ್ರದೇಶ ಮೊಳಗಿತು. ಬಳಿಕ ಶ್ರೀಗಳಿಗೆ ವಿಶೇಷ ಅಭಿಷೇಕ, ತುಲಾಭಾರ ಸೇವೆ ಹಾಗೂ ಅದ್ದೂರಿ ಮೆರವಣಿಗೆ ನಡೆಸಲಾಯಿತು.

    ಸ್ವಾಮೀಜಿಗಳ 775 ಗಂಟೆಗಳ ತಪಸ್ಸಿನ ಸ್ಮರಣಾರ್ಥ 775 ಶಿವಲಿಂಗಗಳನ್ನು ಪ್ರತಿಷ್ಠಾಪಿಸಿರುವುದು ಈ ಅನುಷ್ಠಾನದ ಮತ್ತೊಂದು ವಿಶೇಷ. ಮಠದ ಆವರಣದಲ್ಲಿ ಈ ಶಿವಲಿಂಗಗಳು ಭಕ್ತರ ಆಕರ್ಷಣೆಯ ಕೇಂದ್ರವಾಗಿವೆ.

    ಈ ಮಧ್ಯೆ ಅನುಷ್ಠಾನದ ಅವಧಿಯಲ್ಲಿ ಶ್ರೀಗಳ ಆರೋಗ್ಯದಲ್ಲಿ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ವೈದ್ಯಕೀಯ ತಂಡದ ಮೇಲ್ವಿಚಾರಣೆ ಮತ್ತು ಆಸ್ಪತ್ರೆಯ ಸಹಕಾರವೂ ಒದಗಿಸಲಾಗಿತ್ತು ಎಂದು ಮಠದ ಮೂಲಗಳು ತಿಳಿಸಿವೆ.

    ‘ಹರ ಹರ ಮಹಾದೇವ’ 

    ಈ ಘಟನೆ ಭಕ್ತರಲ್ಲಿ ಭಕ್ತಿಯ ಅಲೆ ಎಬ್ಬಿಸಿದ್ದು, “ಇದು ಶಿವಭಕ್ತಿಯ ಮಹಿಮೆ”, “ಶಿವಯೋಗದ ಅದ್ಭುತ ಶಕ್ತಿ” ಎಂದು ಅನೇಕರು ವರ್ಣಿಸುತ್ತಿದ್ದಾರೆ. ಮತ್ತೊಂದೆಡೆ, ಇಂತಹ ಅಸಾಮಾನ್ಯ ಸಾಧನೆಗಳ ಬಗ್ಗೆ ವೈದ್ಯಕೀಯ ಮತ್ತು ವೈಜ್ಞಾನಿಕ ದೃಷ್ಟಿಕೋಣದಿಂದ ಪ್ರಶ್ನೆಗಳೂ ಉದ್ಭವಿಸುತ್ತಿವೆ. ಆದಾಗ್ಯೂ, ಗದಗದ ಈ ಶಿವಯೋಗ ಸಮಾಧಿ ಅನುಷ್ಠಾನವು ರಾಜ್ಯದಾದ್ಯಂತ ವ್ಯಾಪಕ ಚರ್ಚೆಗೆ ಕಾರಣವಾಗಿದ್ದು, ಆಧ್ಯಾತ್ಮಿಕ ಕ್ಷೇತ್ರದಲ್ಲಿ ವಿಶಿಷ್ಟ ಘಟನೆಯಾಗಿ ದಾಖಲಾಗಿದೆ.

    ##ಶಿವಯೋಗಸಮಾಧಿ #ರಾಚೋಟೇಶ್ವರಶಿವಾಚಾರ್ಯಸ್ವಾಮೀಜಿ #ಗದಗ #ಬೂದೀಶ್ವರಮಠ #ಹರಹರಮಹಾದೇವ

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ
    ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್! ಇಳಿದ ಚಿನ್ನದ ಬೆಲೆ….!ಖರೀದಿದಾರರಿಗೆ ಬಂಪರ್ ರಿಲೀಫ್.
    ರಾಜಕೀಯ ಸುದ್ದಿ ಅಂದರೆ ಬೋರ್ ಅಂತ ಅನ್ನಿಸುವರಿಗೆ ಇದು ಒಂದು ಪಕ್ಕಾ ಎಂಟರ್‌ಟೈನ್‌ಮೆಂಟ್ ಎಪಿಸೋಡ್!!!
    ಶಸ್ತ್ರಚಿಕಿತ್ಸೆಯ ಪಿತಾಮಹ ಮಹಾನ್ ವೈದ್ಯ….ಸುಶ್ರುತನನ್ನ ಜಗತ್ತು ಗೌರವಿಸಿದ ಕ್ಷಣ…ಆಧುನಿಕ ವೈದ್ಯಕೀಯದ ಬೇರುಗಳು ಭಾರತದಲ್ಲೇ…
    ಮೂಡಬಿದ್ರಿ ಪುರಸಭೆಯ ಬೇಜವಾಬ್ದಾರಿ ಹಾಗೂ ವೇಸ್ಟ್ ಆಗುತ್ತಿರುವ ನೀರು
    “ಅಮ್ಮನ ನೋವು ನೋಡಲಾಗಲಿಲ್ಲ…” ನಾಲ್ಕನೇ ಮಹಡಿಯಿಂದ ತಳ್ಳಿದ ಮಗ …
    🔥 ಮಧ್ಯಪ್ರಾಚ್ಯ ಯುದ್ಧ: 17ನೇ ದಿನಕ್ಕೆ- ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ!
    ಭೋಪಾಲ್ ತ್ವಿಷಾ ಶರ್ಮಾ ಪ್ರಕರಣ ಪೋಷಕರ ಪಟ್ಟು-ಅಂತ್ಯಕ್ರಿಯೆ ಮಾಡುವುದಿಲ್ಲ “ನ್ಯಾಯ ಸಿಗುವವರೆಗೂ ನಾವು ದೇಹವನ್ನು ಸ್ವೀಕರಿಸುವುದಿಲ್ಲ” 
    ತುಮಕೂರಿನಲ್ಲಿ ಬೆಚ್ಚಿಬೀಳಿಸುವ ತಂದೆ-ಮಗಳು ದುರಂತ
    ಹೊಲದಲ್ಲಿ ಹೂತಿಟ್ಟ ₹5 ಲಕ್ಷ… ತೆರೆದಾಗ ಶಾಕ್!
    ಪುತ್ತೂರು ಅತ್ಯಾಚಾರ ಪ್ರಕರಣ: ಹೈಕೋರ್ಟ್‌ನಲ್ಲಿ ರಾಜಿ ಸಂಧಾನ ಪ್ರಸ್ತಾಪ..!
    ಖಾಸಗಿ ಬಸ್ಸಿನಲ್ಲಿ ಮಹಿಳೆಯ ಮಂಗಳಸೂತ್ರ ಏಗರಿಸಿದ್ರಾ?
    ಮಹಿಳಾ ಟಿ20 ವಿಶ್ವಕಪ್‌ಗೂ ಮುನ್ನ ಭಾರತ-ಪಾಕ್ ಹೈಪ್ ನಡುವೆ ಮಂಧಾನಾ ಮಾತು ವೈರಲ್…
    ₹3 ಕೋಟಿ ಹೂಡಿಕೆ ಮಾಡಿದ ಶಾಲೆಗೀಗ 20ಕ್ಕೂ ಹೆಚ್ಚು ಭಾಷೆಗಳಲ್ಲಿ ಮಾತನಾಡುವ ಸುಂದರಿ “ಐರಿಸ್” ಮೇಡಂ…ಸರ್ಕಾರಿ ಶಾಲೆ ನೋಡಿ ದೇಶವೇ ಶಾಕ್!
    ಡೊನಾಲ್ಡ್ ಟ್ರoಪ್ ಮುಂದೆ ಮಂಡಿಯೂರಿ ಕೂತ ಜಗತ್ತು!
    ಚಾರ್ಮಾಡಿ ಘಾಟಿಯಲ್ಲಿ ಬಂಡೆ ಕುಸಿತ; ಅದೃಷ್ಟವಶಾತ್ ಅಪಾಯ ತಪ್ಪಿತು
    ಬಂಟ್ವಾಳದಲ್ಲಿ ಸಿನಿಮೀಯ ರೀತಿಯಲ್ಲಿ ದರೋಡೆ: ತಲವಾರು ತೋರಿಸಿ ₹8.52 ಲಕ್ಷ ದೋಚಿದ ದುಷ್ಕರ್ಮಿಗಳು… ಪ್ರಕರಣದ ಸುತ್ತ ಸಂಶಯದ ಹುತ್ತ
    BRICS ಸಭೆಯಲ್ಲಿ UAE ಮೇಲೆ ಇರಾನ್ ಕಿಡಿ! ಇಸ್ರೇಲ್–ಇರಾನ್ ಯುದ್ಧ – ಇಸ್ರೇಲ್‌ಗೆ UAE ಗುಪ್ತ ಬೆಂಬಲವೇ?
    ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಮಾತ್ರ (ಅ)ವ್ಯವಸ್ಥೆ ಎಚ್ಚರಗೊಳ್ಳಬೇಕೇ? ಯಾರು ಹೊಣೆ? ಏನು ಕ್ರಮ?
    ತೈಲ, ಯುದ್ಧ ಮತ್ತು ಆರ್ಥಿಕತೆ: ಭಾರತದ ಮುಂದೆ ಹೊಸ ಸವಾಲು
    ಹೋಟೆಲ್ನಲ್ಲಿ ಅಗ್ನಿಯ ಜ್ವಾಲೆ-ಉಸಿರುಗಟ್ಟಿದ ಹೊಗೆಯೊಳಗೆ ಅಡಗಿಹೋದ ಜೀವಗಳು ..!
    “ಸಂತೋಷ್ Kumar” ಯಾರು? ಸಾವಿರ ಕಾರ್ಡ್‌ಗಳಲ್ಲಿ ಒಂದೇ ಹೆಸರು..!₹95 ಕೋಟಿ ಅಮೆರಿಕಾ ಹಣ,1000 ಡೆಬಿಟ್ ಕಾರ್ಡ್‌ಗಳು!ಬಯಲಾಯ್ತು ಕರ್ನಾಟಕದಲ್ಲಿ ಭಾರೀ ನಕ್ಸಲ್-ಮತಾಂತರ ಜಾಲ?
    ಮಂಗಳೂರು ಏರ್‌ಪೋರ್ಟ್‌ನಲ್ಲಿ ಉಬರ್ …
    “ಅಕ್ಕಾ, ಮನೆಗೆ ಹೋಗೋಣ” ಎಂದು ಅಕ್ಕನನ್ನು ಕರೆತರಲು ಬಂದ ಅಪೂರ್ವ… ಕೆಲವೇ ಕ್ಷಣಗಳಲ್ಲಿ ಕಬ್ಬಿಣದ ಗೇಟ್ ಅಡಿಯಲ್ಲಿ ಅಂತ್ಯ
    AI ಹವಾ-ಬೇಗನೆ ಫೈನಾನ್ಷಿಯಲ್ ಇಂಡಿಪೆಂಡೆಂಟ್ ಆಗೋ ಟ್ರೆಂಡ್- ಕೈಬಿಟ್ಟ  ಓದು!! ಇದು ಗಂಭೀರ ಸೂಚನೆ….
    ವಿಶ್ವಕಪ್‌ನಲ್ಲಿ ಪಾಕಿಸ್ತಾನವನ್ನು ಪುಡಿಗೈದ ಭಾರತದ ವನಿತೆಯರು !ಆರಂಭವೇ ವಿಜಯದ ಘರ್ಜನೆ!
    ಮೋದಿ ನೇತೃತ್ವದಲ್ಲಿ ಇತಿಹಾಸಕ್ಕೆ ಮರಳಿದ ರಾಜರಾಜಚೋಳರ ಹೆಮ್ಮೆ — ಆನೈಮಂಗಲಂ ತಾಮ್ರಶಾಸನಗಳು! 1000 ವರ್ಷದ ಇತಿಹಾಸ 100 ವರ್ಷಗಳ ಬಳಿಕ ಚೋಳರ ಕಾಲದ ಅಪರೂಪದ ದಾಖಲೆ ನೆದರ್‌ಲ್ಯಾಂಡ್ಸ್‌ನಿಂದ ಭಾರತಕ್ಕೆ ವಾಪಸ್….
    ವೋಟರ್ಸ್ ಗಮನಕ್ಕೆಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ: ಸಾರ್ವಜನಿಕರು ತಿಳಿಯಲೇಬೇಕಾದ ಪ್ರಮುಖ ವರದಿ
    ದಾವಣಗೆರೆ ಬೆಚ್ಚಿಬಿದ್ದಿದೆ! 41 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ..
    ಇತಿಹಾಸ ಸೃಷ್ಟಿಸಿದ ಈಶಾಂಕ್ ಸಮುದ್ರವನ್ನೇ ಸವಾಲಾಗಿ ತೆಗೆದುಕೊಂಡ 7 ವರ್ಷದ ಹೀರೋ ..!