📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಪುತ್ತೂರು ಗ್ರಾಮಾಂತರದಲ್ಲಿ ಭೂ ವಿವಾದದ ಗಲಾಟೆ ತೀವ್ರತೆ: ಪರಸ್ಪರ ಹಲ್ಲೆ – ಎರಡು ಪ್ರಕರಣಗಳು ದಾಖಲು

ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಪ್ರತ್ಯೇಕ ಹಲ್ಲೆ ಪ್ರಕರಣಗಳು ವರದಿ

ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪರಸ್ಪರ ಸಂಬಂಧಿತ ಭೂ ವಿವಾದದಿಂದ ಉದ್ಭವಿಸಿದ ಎರಡು ಪ್ರತ್ಯೇಕ ಹಲ್ಲೆ ಪ್ರಕರಣಗಳು ದಾಖಲಾಗಿವೆ.

ಮೊದಲ ಪ್ರಕರಣದಲ್ಲಿ, ಪಿರ್ಯಾದಿದಾರರಾದ ಅಬ್ದುಲ್ ರಹಿಮಾನ್ (29) ಅವರು 2023ರಲ್ಲಿ ಖರೀದಿಸಿದ 0.36 ಸೆಂಟ್ಸ್ ಜಾಗದ ವಿಚಾರದಲ್ಲಿ ಪಿ. ಮಹಮ್ಮದ್ ಅವರೊಂದಿಗೆ ನಡೆಯುತ್ತಿದ್ದ ತಕರಾರಿನ ಹಿನ್ನೆಲೆ, 26.04.2026 ರಂದು ಜಾಗಕ್ಕೆ ತೆರಳಿದಾಗ ಮಹಮ್ಮದ್ ಮತ್ತು ಅವರ ಕೆಲಸದಾಳುಗಳು ಅಕ್ರಮವಾಗಿ ತಡೆಗೋಡೆ ನಿರ್ಮಿಸುತ್ತಿದ್ದರೆಂದು ಆರೋಪಿಸಲಾಗಿದೆ. ಪ್ರಶ್ನಿಸಿದಾಗ ಅವಾಚ್ಯ ಶಬ್ದಗಳಿಂದ ನಿಂದಿಸಿ ಕಲ್ಲು ಎಸೆದಿದ್ದು, ಪಿರ್ಯಾದಿದಾರರ ತಾಯಿಗೆ ಗಾಯವಾಗಿದೆ ಎಂದು ತಿಳಿಸಲಾಗಿದೆ. ನಂತರ ಕತ್ತಿಯಿಂದ ದಾಳಿ ಮಾಡುವ ಯತ್ನವೂ ನಡೆದಿದ್ದು, ಸ್ಥಳೀಯರು ಮಧ್ಯಪ್ರವೇಶಿಸುವಷ್ಟರಲ್ಲಿ ಆರೋಪಿತರು ಜೀವ ಬೆದರಿಕೆ ನೀಡಿ ಪರಾರಿಯಾಗಿದ್ದಾರೆ. ಈ ಸಂಬಂಧ ಅ.ಕ್ರ: 66/2026 ಕಲಂ 352, 351(2), 126(2) ಅಡಿ ಪ್ರಕರಣ ದಾಖಲಾಗಿದೆ.

ಇನ್ನೊಂದು ಪ್ರಕರಣದಲ್ಲಿ, ಪಿರ್ಯಾದಿದಾರ ಮಹಮ್ಮದ್ (56) ಅವರ ಮೇಲೆ ಅದೇ ದಿನ ಮಧ್ಯಾಹ್ನ 2.30ಕ್ಕೆ ಆರೋಪಿತರಾದ ಅಬ್ದುಲ್ ರಹೆಮಾನ್, ಸಾವುಲ್ ಹಮೀದ್, ಮಿಖ್ದಾದ್, ರಶೀದ್ ಮತ್ತು ಮೊಯಿದು ಎಂಬವರು ಮನೆ ಬಳಿ ದಾಳಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಜಾಗದ ವಿವಾದ ಹಾಗೂ ಹಣಕಾಸು ವಿಚಾರ ಉಲ್ಲೇಖಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಕಲ್ಲು ಹಾಗೂ ಕತ್ತಿಯಿಂದ ಹಲ್ಲೆ ನಡೆಸಲಾಗಿದೆ ಎಂದು ದೂರಿನಲ್ಲಿ ಹೇಳಲಾಗಿದೆ. ಹಲ್ಲೆಯಿಂದ ಪಿರ್ಯಾದಿದಾರರಿಗೆ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಅ.ಕ್ರ: 67-2026 ಕಲಂ 115(2), 118(1), 351(2), 325 ಬಿಎನ್ ಎಸ್ ಅಡಿ ಪ್ರಕರಣ ದಾಖಲಾಗಿದೆ.

ಪೊಲೀಸರು ಎರಡೂ ಪ್ರಕರಣಗಳಲ್ಲಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

##Puttur #LandDispute #AssaultCase #PoliceCase #DakshinaKannada #CrimeNews

COMMENTS

Login with Gmail to comment

ಇನ್ನಷ್ಟು ಸುದ್ದಿ

ಹತ್ತು ವರ್ಷದಿಂದ ಪೊಲೀಸರಿಗೆ ಬೇಕಾದ ಆರೋಪಿಯನ್ನು ಕೊನೆಗೂ ಬಂಧಿಸಿದ ಪೊಲೀಸರು
ವಿದ್ಯಾರ್ಥಿಯೊಬ್ಬ 12ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ..
ಅಕ್ರಮ ಗಡಿ ದಾಟಿದವರಿಗೆ ಈಗ ಭಾರತದಲ್ಲಿ ನೋ ಎಂಟ್ರಿ!ಬಾಂಗ್ಲಾ ಗಡಿಯಲ್ಲಿ ಎನ್‌ಆರ್‌ಸಿ ಅಸ್ತ್ರ: ರಾಜಕೀಯಕ್ಕಿಂತ ರಾಷ್ಟ್ರೀಯ ಭದ್ರತೆ ಮುಖ್ಯ
 ಆಸ್ಪತ್ರೆಯಲ್ಲಿ ಡಾಕ್ಟರ್ “mistakeಎಡವಟ್”…ಅಚ್ಚರಿಯೂ ಮೀರಿದ ಆಘಾತ!
ದೇಶಕ್ಕಾಗಿ ಹಾರಿದ ಯುವ ಪೈಲಟ್: ಅಸ್ಸಾಂ ದುರಂತದಲ್ಲಿ ಐಎಎಫ್ ಅಧಿಕಾರಿ ವೀರಮರಣ
“ಪ್ರೇಮ ಕಥೆ ತಿರುವು: ಗಂಡನ ಜೀವವೇ ಟಾರ್ಗೆಟ್!”ಬ್ಯಾಂಕ್ ಅಧಿಕಾರಿ ಪತ್ನಿ taxi ಚಾಲಕನೊಂದಿಗೆ ಸೇರಿ killing plan
ಮಹಿಳಾ ದಿನಾಚರಣೆಯಲ್ಲಿ ಮಹಿಳಾ ಸಂಪನ್ಮೂಲ ಕೇಂದ್ರ ಉದ್ಘಾಟನೆ, ಜಾಗೃತಿ ಕಾರ್ಯಕ್ರಮ
ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್: ಬಿಸಿಲಿಗೆ ಎಚ್ಚರ!
ಮುಳುಗುತ್ತಿರುವ ಕಾಂಗ್ರೆಸ್ಸಿಗೆ ಇನ್ನೂ ಬುದ್ಧಿ ಬಂದಂತಿಲ್ಲ… ಡಿಜೆಪಿ ರಾಮಚಂದ್ರರಾವ್  ಅಮಾನತ್ ಆದೇಶ ಹಿಂಪಡೆದ  ಸರ್ಕಾರ
ದಕ್ಷಿಣ ಕನ್ನಡದ 14 ವರ್ಷದ ಎಲ್ಲ ಬಾಲಕಿಯರು ಉಚಿತ HPV ಲಸಿಕೆ ಹಾಕಿಸಿಕೊಳ್ಳಲು ಸಂಸದರ ಕರೆ
ಬಾಲಕಾರ್ಮಿಕ ಪತ್ತೆ : ಮಾಲೀಕನಿಗೆ ಜೈಲು, ದಂಡ
ಆಸಿಡ್ ದಾಳಿಗೊಳಗಾದ ಮಹಿಳೆಯರಿಗೆ ₹50 ಸಾವಿರ ಮಾಸಾಶನ: ಆಸಿಡ್ ಮಾರಾಟಕ್ಕೆ ಕಡಿವಾಣ ಹಾಕಲು ಸರ್ಕಾರ ಕ್ರಮ
ಘರ್ಷಣೆಗಳ ನಡುವೆಯೂ ಜನರ ಮತದ ಹಕ್ಕು ಅಚಲ…ಸಂಕ್ಷಿಪ್ತ ನೋಟ..
ಟ್ರಂಪ್-“Strait of Hormuz ತಕ್ಷಣ ತೆರೆಯಿರಿ…! “ ಇರಾನ್-“ಕೀ ಗಳನ್ನು ಕಳೆದುಕೊಂಡಿದ್ದೇವೆ…!”
ದೊಡ್ಡ ಬಜೇಟ್  ತುಳು ಸಿನಿಮಾ`ಗಜಾನನ ಕ್ರಿಕೆಟರ್ಸ್’ ಮೇ 22 ರಂದು ತೆರೆಗೆ
ಬಾವಿ ಮುಖ್ಯಮಂತ್ರಿ ಆಪ್ತನ ಭೀಕರ ಹತ್ಯೆ ಹಿಂದೆ ಯಾರು?
ಸ್ಟೇಟ್ ಬ್ಯಾಂಕ್ ಮೀನು ಮಾರುಕಟ್ಟೆಗೆ ಭೇಟಿ ನೀಡಿದ ಡಾ. ನಾಗಲಕ್ಷ್ಮಿ ಚೌಧರಿ – ಮಹಿಳಾ ಮೀನುಗಾರರ ಸಮಸ್ಯೆ ಆಲಿಕೆ
ಆಂಬ್ಯುಲೆನ್ಸ್‌ನಲ್ಲೇ ನಡೆದ ಭೀಕರ ಘಟನೆ… ನಂಬಲು ಕಷ್ಟ, ಆದರೆ ಸತ್ಯ!
ಥಾರ್ ಕಾರ್ ನಲ್ಲಿ ಬಂದು ದೇವಸ್ಥಾನದಲ್ಲಿ ವಿಕೃತಿ ಮೆರೆದ ಕಿಡಿಗೇಡಿ!
ಕರ್ನಾಟಕ CM ಬದಲಾವಣೆ ರಾಜಕೀಯ ಕೌಂಟ್‌ಡೌನ್ ಶುರುವಾಗಿದೆ! ತೆರೆಮರೆಯಲ್ಲಿ ಏನೋ ನಡೀತಿದೆ… 
ಪೂಜೆಗಾಗಿ ತೆರಳಿದ ಅರ್ಚಕರ ಶವ ನಾಲೆಯಲ್ಲಿ ಪತ್ತೆ
ಅಸ್ಸಾಂನಲ್ಲಿ ಮತದಾನದ ಹಿನ್ನೆಲೆ ಹಿಂಸಾಚಾರ: 30ಕ್ಕೂ ಹೆಚ್ಚು ಮಂದಿ ಗಾಯ, 7 ಜನರ ಬಂಧನ
ಜಗಳ ನಿಲ್ಲಿಸಲು ಹೋದವನ ಜೀವ ಹರಣ: ಮಾನವೀಯತೆ ಕುಸಿದರೆ ಸಮಾಜದ ನೆಮ್ಮದಿ ಎಲ್ಲಿ?”
ಒಂದು ರಾಷ್ಟ್ರ, ಒಂದು ಚುನಾವಣೆ’ಗೆ ಡಿಕೆಶಿ ಸಿಡಿದೆದ್ದೇಕೆ?
ಮಂಗಳೂರು ವಿಮಾನ ನಿಲ್ದಾಣಕ್ಕೆ ಪ್ಲಾಟಿನಂ ಕಿರೀಟ!
ಬಂಗಾಳದ ಸಿಂಹಾಸನಕ್ಕೆ ಸುವೇಂದು ಏರಿಕೆ — 15 ವರ್ಷದ ಮಮತಾ ಯುಗಕ್ಕೆ ಬ್ರೇಕ್!ಟಿಎಂಸಿ ಕೋಟೆ ಕುಸಿತ…
🎬 ಸೀನ್ ಹಿಂದೆ ಇರುವ ಸೀಕ್ರೆಟ್ ಏನು?ಧುರಂಧರ್ ಚಿತ್ರದ ಈ ಸಣ್ಣ ಕ್ಷಣವೇ ಈಗ ದೊಡ್ಡ ಸೆನ್ಸೇಶನ್ ಆಗಿದೆ…ಮುಸ್ತಫಾ ಫುಲ್ ಖುಷ್
ಮಹಿಳೆಯ ಸ್ಕೂಟಿಯನ್ನೇ ಕದ್ದ ಕಳ್ಳರು….. ಹೆಚ್ಚುತ್ತಿರುವ ವಾಹನ ಕಳ್ಳತನ
80 ಲಕ್ಷ ವಂಚನೆ ಪ್ರಕರಣ ದೂರು ದಾಖಲು