📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    “ಫುಟ್‌ಪಾತ್ ಯಾರದ್ದು? ಪಾದಚಾರಿಗಳ ಹಕ್ಕೋ, ಹೊಟ್ಟೆಪಾಡಿನ ಹೋರಾಟವೋ?”

    ಶಾಶ್ವತ ಪರಿಹಾರ ಯಾವಾಗ?ಮಂಗಳೂರಿನ ನೂರಾರು ಬೀದಿಬದಿ ವ್ಯಾಪಾರಿಗಳ ಅಳಲು

    ಮಂಗಳೂರು, ಜುಲೈ 3: ಮಂಗಳೂರು ನಗರದ ಸಂಡೇ ಬಜಾರ್ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ನಗರಪಾಲಿಕೆ ನಡೆಸುತ್ತಿರುವ ತೆರವು ಕಾರ್ಯಾಚರಣೆಯಿಂದ ಸಂಕಷ್ಟಕ್ಕೆ ಸಿಲುಕಿರುವ ಬೀದಿಬದಿ ವ್ಯಾಪಾರಿಗಳು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಅವರನ್ನು ಭೇಟಿ ಮಾಡಿ ತಮ್ಮ ಅಹವಾಲು ಸಲ್ಲಿಸಿದರು. ನೂರಕ್ಕೂ ಹೆಚ್ಚು ವ್ಯಾಪಾರಿಗಳು ಸಾಮೂಹಿಕವಾಗಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ, “ಬೀದಿ ವ್ಯಾಪಾರವೇ ನಮ್ಮ ಜೀವನಾಧಾರ. ನಮ್ಮ ಮಕ್ಕಳ ಭವಿಷ್ಯ ಈ ಸಣ್ಣ ವ್ಯಾಪಾರದ ಮೇಲೆ ನಿಂತಿದೆ. ನಮ್ಮ ಬದುಕುವ ಹಕ್ಕನ್ನು ಕಾಪಾಡಿ, ಪರ್ಯಾಯ ಸ್ಥಳ ಕಲ್ಪಿಸಿಕೊಡಿ” ಎಂದು ಮನವಿ ಮಾಡಿದರು.

    ಜಿಲ್ಲಾಧಿಕಾರಿಗಳು ಮನವಿಯನ್ನು ಆಲಿಸಿ ಸಕಾರಾತ್ಮಕವಾಗಿ ಸ್ಪಂದಿಸಿದರು. ಬೀದಿಬದಿ ವ್ಯಾಪಾರಿಗಳ ಸಂಘವು ಸೂಕ್ತವಾದ ಮೂರು ಸ್ಥಳಗಳನ್ನು ಸೂಚಿಸಿದರೆ ಅಧಿಕಾರಿಗಳೊಂದಿಗೆ ಪರಿಶೀಲಿಸಿ ಸಾಧ್ಯವಾದ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಬೆಳಿಗ್ಗೆಯಿಂದ ಕಾಯುತ್ತಿದ್ದ ವ್ಯಾಪಾರಿಗಳನ್ನು ಮಧ್ಯಾಹ್ನ ಸಭೆಯ ನಡುವೆಯೇ ಭೇಟಿ ಮಾಡಿ ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿಗಳ ನಡೆ ವ್ಯಾಪಾರಿಗಳಲ್ಲಿ ಆಶಾಭಾವನೆ ಮೂಡಿಸಿತು.

    ಆದರೆ ಈ ಬೆಳವಣಿಗೆ ಮಂಗಳೂರಿನಲ್ಲಿ ಬಹುಕಾಲದಿಂದ ಚರ್ಚೆಯಾಗುತ್ತಿರುವ ಒಂದು ದೊಡ್ಡ ಪ್ರಶ್ನೆಯನ್ನು ಮತ್ತೆ ಮುಂದಿಟ್ಟಿದೆ. ಫುಟ್‌ಪಾತ್ ನಿರ್ಮಿಸಿರುವುದು ವ್ಯಾಪಾರಕ್ಕಾಗಿ ಅಲ್ಲ; ಅದು ಪಾದಚಾರಿಗಳು ಸುರಕ್ಷಿತವಾಗಿ ನಡೆಯಲು ಇರುವ ಸಾರ್ವಜನಿಕ ಹಕ್ಕಿನ ಸ್ಥಳ. ವೃದ್ಧರು, ಮಕ್ಕಳು, ಮಹಿಳೆಯರು, ಶಾಲಾ ವಿದ್ಯಾರ್ಥಿಗಳು, ಅಂಗವಿಕಲರು ಸೇರಿದಂತೆ ಎಲ್ಲರೂ ಫುಟ್‌ಪಾತ್ ಬಳಸುವ ಕಾನೂನುಬದ್ಧ ಹಕ್ಕು ಹೊಂದಿದ್ದಾರೆ. ಫುಟ್t‌ಪಾತ್ ಅತಿಕ್ರಮಣಗೊಂಡಾಗ ಜನರು ಅನಿವಾರ್ಯವಾಗಿ ರಸ್ತೆ ಮೇಲೆ ನಡೆಯಬೇಕಾಗುತ್ತದೆ. ಇದು ಅಪಘಾತದ ಅಪಾಯವನ್ನು ಹೆಚ್ಚಿಸುತ್ತದೆ.

    ಆದರೆ ಸಾರ್ವಜನಿಕರಲ್ಲಿ ಮತ್ತೊಂದು ಪ್ರಶ್ನೆಯೂ ಕೇಳಿಬರುತ್ತಿದೆ. ಕಾನೂನು ಎಲ್ಲರಿಗೂ ಒಂದೇ ಆಗಿದ್ದರೆ, ಕ್ರಮವೂ ಎಲ್ಲರ ಮೇಲೂ ಒಂದೇ ರೀತಿಯಲ್ಲಿ ಇರಬಾರದೇ? 

    ಮಂಗಳೂರಿನ ಬಂದರ್, ಕಾರ್‌ಸ್ಟ್ರೀಟ್, ಸ್ಟೇಟ್ ಬ್ಯಾಂಕ್, ಹಂಪನಕಟ್ಟೆ ಸೇರಿದಂತೆ ಹಲವು ಪ್ರಮುಖ ವ್ಯಾಪಾರ ಪ್ರದೇಶಗಳಲ್ಲಿ ಅನೇಕ ಶಾಶ್ವತ ಅಂಗಡಿಗಳೂ ತಮ್ಮ ಸರಕುಗಳನ್ನು ಫುಟ್‌ಪಾತ್‌ಗಳ ಮೇಲೆ ಇಡುವ ದೃಶ್ಯ ಸಾಮಾನ್ಯವಾಗಿದೆ. ಕೆಲವು ಕಡೆ ಅಂಗಡಿಗಳ ಪ್ರದರ್ಶನ ಸಾಮಗ್ರಿ, ಬೋರ್ಡ್‌ಗಳು ಮತ್ತು ವಸ್ತುಗಳಿಂದ ಫುಟ್‌ಪಾತ್ ಸಂಪೂರ್ಣ ಮುಚ್ಚಲ್ಪಟ್ಟಿರುತ್ತದೆ. ಇಂತಹ ಸಂದರ್ಭಗಳಲ್ಲಿ ಪಾದಚಾರಿಗಳು ರಸ್ತೆಗಿಳಿದು ನಡೆಯಬೇಕಾಗುತ್ತದೆ.

    ಈ ಹಿನ್ನೆಲೆಯಲ್ಲಿ ಹಲವರು ಪ್ರಶ್ನಿಸುತ್ತಿದ್ದಾರೆ – ಕೇವಲ ಸಂಡೇ ಬಜಾರ್ ಅಥವಾ ಸಣ್ಣ ಬೀದಿಬದಿ ವ್ಯಾಪಾರಿಗಳ ಮೇಲಷ್ಟೇ ಕ್ರಮ ಏಕೆ? ಶಾಶ್ವತ ಅಂಗಡಿಗಳಿಂದ ಆಗುತ್ತಿರುವ ಫುಟ್‌ಪಾತ್ ಅತಿಕ್ರಮಣದ ವಿರುದ್ಧವೂ ಸಮಾನ ಕಾನೂನು ಜಾರಿಯಾಗಬಾರದೇ?ಕಾನೂನು ಆಯ್ದವರ ಮೇಲೆ ಮಾತ್ರ ಜಾರಿಯಾದರೆ ನ್ಯಾಯದ ಬಗ್ಗೆ ಪ್ರಶ್ನೆಗಳು ಸಹಜವಾಗಿಯೇ ಉದ್ಭವಿಸುತ್ತವೆ ಎಂಬುದು ಸಾರ್ವಜನಿಕ ಅಭಿಪ್ರಾಯ.

    ನಗರದ ಹಲವಾರು ನಾಗರಿಕರು ಹೇಳುವಂತೆ, “ಸಮಸ್ಯೆ ಬಗ್ಗೆ ಎಲ್ಲರೂ ಮಾತನಾಡುತ್ತಾರೆ; ಆದರೆ ಶಾಶ್ವತ ಪರಿಹಾರದ ಬಗ್ಗೆ ಕಡಿಮೆ ಚರ್ಚೆಯಾಗುತ್ತದೆ.” ಬೀದಿಬದಿ ವ್ಯಾಪಾರಿಗಳು ನಗರ ಆರ್ಥಿಕತೆಯ ಒಂದು ಭಾಗ. ಮತ್ತೊಂದೆಡೆ ಪಾದಚಾರಿಗಳ ಸುರಕ್ಷಿತ ಸಂಚಾರವೂ ಮೂಲಭೂತ ಹಕ್ಕು. ಆದ್ದರಿಂದ ಎರಡನ್ನೂ ಸಮತೋಲನಗೊಳಿಸುವ ವ್ಯವಸ್ಥೆ ಅಗತ್ಯವಾಗಿದೆ.

    ಕಾನೂನು ಏನು ಹೇಳುತ್ತದೆ? ಬೀದಿಬದಿ ವ್ಯಾಪಾರಿಗಳಿಗೂ ಜೀವನೋಪಾಯದ ಹಕ್ಕಿದೆ. ಅದೇ ವೇಳೆ ಸಾರ್ವಜನಿಕ ರಸ್ತೆ ಮತ್ತು ಫುಟ್‌ಪಾತ್‌ಗಳನ್ನು ಸುರಕ್ಷಿತವಾಗಿ ಬಳಸುವ ಹಕ್ಕು ನಾಗರಿಕರಿಗೂ ಇದೆ. ಈ ಎರಡೂ ಹಕ್ಕುಗಳ ನಡುವೆ ಸಮತೋಲನ ಸಾಧಿಸುವ ಜವಾಬ್ದಾರಿ ಸ್ಥಳೀಯ ಆಡಳಿತದ ಮೇಲಿದೆ. ಸೂಕ್ತ ವಲಯಗಳನ್ನು ಗುರುತಿಸಿ, ನಿಯಮಬದ್ಧವಾಗಿ ವ್ಯಾಪಾರಕ್ಕೆ ಅವಕಾಶ ಕಲ್ಪಿಸುವುದು ಮತ್ತು ಪಾದಚಾರಿಗಳಿಗೆ ಅಡೆತಡೆ ಆಗದಂತೆ ವ್ಯವಸ್ಥೆ ಮಾಡುವುದು ಆಡಳಿತಾತ್ಮಕ ಹೊಣೆಗಾರಿಕೆಯ ಭಾಗವಾಗಿದೆ.

    ಹಾಗಾದರೆ ಪರಿಹಾರವೇನು? ನಗರದ ವಿವಿಧ ಭಾಗಗಳಲ್ಲಿ ಯೋಜಿತ ಹಾಕರ್ಸ್ ಝೋನ್ ಅಥವಾ ಸ್ಟ್ರೀಟ್ ವೆಂಡಿಂಗ್ ಝೋನ್ಗಳನ್ನು ಅಭಿವೃದ್ಧಿಪಡಿಸಬಹುದು. ಕುಡಿಯುವ ನೀರು, ಶೌಚಾಲಯ, ಕಸ ನಿರ್ವಹಣೆ, ವಾಹನ ನಿಲುಗಡೆ, ವಿದ್ಯುತ್ ಮತ್ತು ಭದ್ರತೆ ಸೇರಿದಂತೆ ಮೂಲಸೌಕರ್ಯ ಒದಗಿಸಿದರೆ ವ್ಯಾಪಾರಿಗಳಿಗೂ, ಗ್ರಾಹಕರಿಗೂ ಅನುಕೂಲವಾಗುತ್ತದೆ. ಡಿಜಿಟಲ್ ನೋಂದಣಿ, ಗುರುತಿನ ಚೀಟಿ, ನಿಗದಿತ ಸಮಯ ಹಾಗೂ ನಿಗದಿತ ಸ್ಥಳದ ವ್ಯವಸ್ಥೆಯಿಂದ ಅವ್ಯವಸ್ಥೆ ಕಡಿಮೆಯಾಗಬಹುದು.

    ಸ್ಟೇಟ್ ಬ್ಯಾಂಕ್ ಸಮೀಪ ಈಗಾಗಲೇ ಬೀದಿಬದಿ ವ್ಯಾಪಾರಿಗಳಿಗಾಗಿ ಸ್ಥಳ ಮೀಸಲಿಟ್ಟಿರುವ ಕುರಿತು ಸ್ಥಳೀಯವಾಗಿ ಉಲ್ಲೇಖವಾಗುತ್ತದೆ. ಆದರೆ ಆ ಸ್ಥಳದಲ್ಲಿ ವ್ಯಾಪಾರ ಮಾಡಲು ಹಲವರು ಮುಂದೆ ಬರುತ್ತಿಲ್ಲ ಎಂಬ ಪ್ರಶ್ನೆಯೂ ಕೇಳಿಬರುತ್ತಿದೆ. ಅದರ ಹಿಂದಿನ ಕಾರಣಗಳು ಯಾವುವು? ಗ್ರಾಹಕರ ಸಂಚಾರ ಕಡಿಮೆಯೇ? ಮೂಲಸೌಕರ್ಯದ ಕೊರತೆಯೇ? ವಾಹನ ನಿಲುಗಡೆ ಸಮಸ್ಯೆಯೇ? ಅಥವಾ ಜನರ ಓಡಾಟ ಇಲ್ಲದ ಕಾರಣ ವ್ಯಾಪಾರ ನಷ್ಟವಾಗುತ್ತಿದೆಯೇ? ಎಂಬುದನ್ನು ಆಡಳಿತ ಮತ್ತು ವ್ಯಾಪಾರಿಗಳ ಸಂಘಗಳು ಸೇರಿ ಅಧ್ಯಯನ ಮಾಡಿ ಸೂಕ್ತ ತಿದ್ದುಪಡಿ ಕ್ರಮ ಕೈಗೊಳ್ಳುವುದು ಅಗತ್ಯವಾಗಿದೆ.

    ಸಾರ್ವಜನಿಕರ ಧ್ವನಿ ಒಂದೇ: “ಕಾನೂನು ಜಾರಿಯಾಗಬೇಕು. ಆದರೆ ಅದು ಎಲ್ಲರಿಗೂ ಸಮಾನವಾಗಿರಬೇಕು. ಫುಟ್‌ಪಾತ್ ಅತಿಕ್ರಮಿಸಿದವರು ಸಣ್ಣ ವ್ಯಾಪಾರಿಗಳೇ ಆಗಲಿ ಅಥವಾ ದೊಡ್ಡ ಅಂಗಡಿ ಮಾಲೀಕರೇ ಆಗಲಿ, ನಿಯಮ ಉಲ್ಲಂಘಿಸಿದರೆ ಒಂದೇ ರೀತಿಯ ಕ್ರಮವಾಗಬೇಕು.”

    ತಜ್ಞರ ಅಭಿಪ್ರಾಯವೂ ಇದೇ ದಿಕ್ಕಿನಲ್ಲಿದೆ. ಮೊದಲ ಹಂತದಲ್ಲಿ ಜಾಗೃತಿ, ನಂತರ ನೋಟಿಸ್, ಬಳಿಕ ದಂಡ ಮತ್ತು ಪುನರಾವರ್ತನೆ ಮಾಡಿದರೆ ಕಠಿಣ ದಂಡ ಹಾಗೂ ವಸ್ತು ವಶಪಡಿಸಿಕೊಳ್ಳುವಂತಹ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿದರೆ ಮಾತ್ರ ನಗರದಲ್ಲಿ ಶಿಸ್ತು ಮೂಡಬಹುದು. ಆಯ್ದವರ ಮೇಲೆ ಮಾತ್ರ ಕ್ರಮವಲ್ಲ, ಎಲ್ಲರಿಗೂ ಒಂದೇ ಕಾನೂನು ಎಂಬ ಸಂದೇಶ ಸ್ಪಷ್ಟವಾಗಿ ತಲುಪಿದಾಗ ಮಾತ್ರ ಸಮಸ್ಯೆಗೆ ಶಾಶ್ವತ ಪರಿಹಾರ ಸಾಧ್ಯ.

    ಮಂಗಳೂರು ಸ್ಮಾರ್ಟ್, ಸ್ವಚ್ಛ ಮತ್ತು ಪಾದಚಾರಿ ಸ್ನೇಹಿ ನಗರವಾಗಬೇಕಾದರೆ, ಪಾದಚಾರಿಗಳ ಹಕ್ಕು, ಸಣ್ಣ ವ್ಯಾಪಾರಿಗಳ ಜೀವನೋಪಾಯ ಮತ್ತು ಕಾನೂನಿನ ಸಮಾನ ಜಾರಿ – ಈ ಮೂರರ ನಡುವೆ ಸಮತೋಲನ ಸಾಧಿಸುವ ಆಡಳಿತಾತ್ಮಕ ನಿರ್ಧಾರವೇ ಕಾಲದ ಅಗತ್ಯವಾಗಿದೆ.

    ##Mangaluru #StreetVendors #FootpathEncroachment #DakshinaKannada #PublicIssue

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಜನಪ್ರಿಯ “ಶಕ್ತಿ ಯೋಜನೆ” ವಿಫಲಗೊಳಿಸಲು ಸಂಚು!
    ಶಾಲೆಯ ಮೊದಲ ದಿನವೇ ಕಣ್ಣೀರು ತರಿಸಿದ ಫಿಲಿಪೈನ್ಸ್‌ ಭೂಕಂಪ ಸೃಷ್ಟಿಸಿದ ಭೀಕರತೆ ಮುಗ್ಧ ಮಕ್ಕಳನ್ನು ಆವರಿಸಿದ ಭೀತಿ..
    ಬೆಳ್ಮಣ್ಣಿನಲ್ಲಿ ಗುಂಡಿನ ಸದ್ದು… ಮಾಜಿ ಸಚಿವರ ಶಿಷ್ಯನ ಭೀಕರ ಹತ್ಯೆ
    ಐಸಿಸಿ ಟ್ವೆಂಟಿ-20 ವಿಶ್ವಕಪ್ ಮೂಡಿಗೇರಿಸಿಕೊಂಡ ಭಾರತ
    ಟೆಕ್ಸಾಸ್‌ನಲ್ಲಿ ತ್ರಿವರ್ಣ ಧ್ವಜ ಹರಿದು ಹಾಕಿದ ವಿಡಿಯೋ ವೈರಲ್ …ಅಮೆರಿಕದಲ್ಲಿ ಹೆಚ್ಚುತ್ತಿದೆಯೇ ಭಾರತ ವಿರೋಧಿ ಮನೋಭಾವ?
    ಸರ್ಕಾರಕ್ಕೆ CJP ಸವಾಲು…ದೆಹಲಿ ಪ್ರತಿಭಟನೆಗೆ ಹಿಂಸಾತ್ಮಕ ತಿರುವು..ಲಾಠಿಚಾರ್ಜ್, ಅಶ್ರುವಾಯು, ಇಂಟರ್ನೆಟ್ ಶಟ್‌ಡೌನ್..
    ಕೇವಲ ₹5 ಕ್ಕೆ ಸಿಗಲಿದೆ ಬಿಸಿಬಿಸಿ ಮೀನು-ಊಟ! ಮಹಿಳೆಯರ ಖಾತೆಗೆ ಪ್ರತಿ ತಿಂಗಳು ₹3,000 ಫಿಕ್ಸ್! ಎಲ್ಲಿ ಯಾರು ಕೊಡ್ತಾರೆ …
    ಅಮೆರಿಕದ ಪರ್ಡ್ಯೂ ವಿಶ್ವವಿದ್ಯಾಲಯದಲ್ಲಿ ಯು.ಟಿ. ಖಾದರ್ – ಕಳಪೆ ಆಹಾರಕ್ಕೆ ಕಟ್ಟುನಿಟ್ಟು,ಕರ್ನಾಟಕದ ಆಹಾರ ಸುರಕ್ಷತೆಗೆ ಜಾಗತಿಕ ಮಟ್ಟದ ಯೋಜನೆ!
    ಕಾಕ್ರೋಜ್ ಎಫೆಕ್ಟ್, ಉನ್ನತ ಶಿಕ್ಷಣ ಇಲಾಖೆಯಲ್ಲಿ ಪ್ರಮುಖ  ಬದಲಾವಣೆ.
    ಸಾಲದ ಭಾರವೂ ಶಿಸ್ತಿನ ಮುಂದೆ ಸೋಲುತ್ತದೆ…! ಇದಕ್ಕೆ ಸಾಕ್ಷಿಯೇ ಸಾಕ್ಷಿ..!₹80 ಲಕ್ಷ ಸಾಲ-1 ವರ್ಷ ಮತ್ತು ಒಂದು ಡೆಡಿಕೇಟೆಡ್ ಟಾರ್ಗೆಟ್..!
    ಉಡುಪಿಯ ಆರು ತಹಶೀಲ್ದಾರ್ ಕಚೇರಿಗಳಿಗೆ ಲೋಕಾಯುಕ್ತ ಪೊಲೀಸರ ದಾಳಿ… ದಾಳಿಯ ಬಿಸಿ ತಟ್ಟುತ್ತದಾ ಅಧಿಕಾರಿಗಳಿಗೆ?
    ಮೂಡಬಿದ್ರೆ: ಅಕ್ರಮ ಜಾನುವಾರು ಸಾಗಾಟ -ಆರೋಪಿಗಳ ಬಂಧನ, ವಾಹನ ಹಾಗೂ ಕರು ವಶಕ್ಕೆ.
    ನಕಲಿ ಔಷಧ ದಂಧೆ: ಜೀವ ಉಳಿಸಬೇಕಾದ ಔಷಧವೇ ಹಣ ಮಾಡುವ ದಂಧೆಯಾಯಿತೇ?
    ಹಾರರ್ ಸಿನಿಮಾ ಸೀನ್ ಅಂತ ಅನಿಸ್ತು… ಆದರೆ ಇದು ನಿಜ ಘಟನೆ! ಟಾಯ್ಲೆಟ್ ಒಳಗಿಂದ ತಲೆ ಎತ್ತಿದ ವಿಷದ ರಾಜ…
    ಜಗಳ ನಿಲ್ಲಿಸಲು ಹೋದವನ ಜೀವ ಹರಣ: ಮಾನವೀಯತೆ ಕುಸಿದರೆ ಸಮಾಜದ ನೆಮ್ಮದಿ ಎಲ್ಲಿ?”
    ಅಯೋಧ್ಯೆ ರಾಮ ಮಂದಿರ ಸ್ಫೋಟಿಸಲು ಹರಿಹರದಲ್ಲಿ ಪ್ಲಾನ್! ಬಂಧಿತ ಸುಹೇಲ್ ಬೆನ್ನತ್ತಿದ ಇಂಟೆಲಿಜೆನ್ಸ್; 10 ಜನರ ಟೀಮ್‌ಗಾಗಿ ತೀವ್ರ ಶೋಧ!
    ದ್ವಿತೀಯ ಪಿ.ಯು.ಸಿ ಪರೀಕ್ಷಾ ಹಾಜರಾತಿ
    ಒಂದು ತಪ್ಪು ಹೆಜ್ಜೆ…25 ಅಡಿ ಬಾವಿಗೆ ಬಿದ್ದ ಆನೆ …ನೋಡಿ ಈ ಸ್ಮಾರ್ಟ್ ಆಪರೇಷನ್!
    594 ಕಿಮೀ ಗಂಗಾ ಎಕ್ಸ್‌ಪ್ರೆಸ್‌ ವೇ ..!ಮೀರಟ್‌ನಿಂದ ಪ್ರಯಾಗರಾಜ್‌ವರೆಗೆ -ದೇಶದ ಪ್ರಗತಿಗೆ ಮತ್ತೊಂದು ಮೈಲುಗಲ್ಲು 
    ಮಂಗಳೂರು ಕುಕ್ಕರ್ ಬಾಂಬ್ ಪ್ರಕರಣಕ್ಕೆ ಅಂತಿಮ ತೀರ್ಪು – ಶಾರೀಕ್ ಗೆ 10 ವರ್ಷ ಜೈಲು..
    ಪತ್ರಿಕೋದ್ಯಮವೇ? ಪ್ರಚೋದನೆಯೇ? ಸುಳ್ಳು ಸುದ್ದಿಗೆ ಕೋಮು ಬಣ್ಣ ಆರೋಪದಲ್ಲಿ 7 ಮಾಧ್ಯಮಗಳ ವಿರುದ್ಧ FIR…!
    ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ….
    ಸ್ಪೇನ್‌ಗೆ 2ನೇ FIFA ವಿಶ್ವಕಪ್ ಕಿರೀಟ!ನ್ಯೂಯಾರ್ಕ್‌ನಲ್ಲಿ ಮೆಸ್ಸಿಯ ಅರ್ಜೆಂಟೀನಾವನ್ನು ಮಣಿಸಿದ ಸ್ಪೇನ್ ನ ಲಾ ರೋಜಾ ಗೆ ಐತಿಹಾಸಿಕ ಜಯ! 
    ಅಕ್ರಮ ಪ್ರವೇಶ, ದೌರ್ಜನ್ಯ, ಹಾಗೂ ಕೃಷಿ ಚಟುವಟಿಕೆಗೆ ತಡೆಯ ಬಗ್ಗೆ ದೂರು ದಾಖಲು
    717 ಮದ್ಯದಂಗಡಿಗಳಿಗೆ ವಿಜಯ್ ಬ್ರೇಕ್‌! ತಮಿಳುನಾಡು ಖಜಾನೆಗೆ ಸಾವಿರಾರು ಕೋಟಿ ಶಾಕ್!
    ಪಶ್ಚಿಮ ಬಂಗಾಳ ಅಪ್ರಾಪ್ತೆಯ ಸಾವು, ಸಾರ್ವಜನಿಕರಿಂದ ಶಂಕಿತನ ಲಿಂಚಿಂಗ್ ..!ಬಾಲಕಿಯ ಹತ್ಯೆ ಬೆನ್ನಲ್ಲೇ ಭುಗಿಲೆದ್ದ ಹಿಂಸಾಚಾರ;
    ಕಾರ್ಕಳದ ವೈದ್ಯಕೀಯ ವಿದ್ಯಾರ್ಥಿನಿ ಭೀಕರ  ಅಪಘಾತಕ್ಕೆ ಬಲಿ
    ಮೊಸಾದ್ ಏಜೆಂಟ್ ಇಸ್ಮಾಯಿಲ್ ಖಾನಿಯಿಂದ ಇರಾನಿ ಸರ್ವೋಚ್ಛ ನಾಯಕನ  ಹತ್ಯೆ
    AAP ಸದ್ದು ಮಂಗಳೂರಲ್ಲೂ! ಜನರ ಸಮಸ್ಯೆಗೆ ನೇರ ಹೋರಾಟ
    ಕೊನೆಗೂ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ನಿತೀಶ್ ಕುಮಾರ್