📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಬರಾಯಿಪುರ 12 ವರ್ಷದ ಬಾಲಕಿಯ ಅತ್ಯಾಚಾರದ ಕ್ರೌರ್ಯಕ್ಕಿಂತ ಈಗ ಎನ್‌ಕೌಂಟರ್‌ ಚರ್ಚೆಯ ಕೇಂದ್ರ!?ಆರೋಪಿ ಒಟ್ಟಿಗೆ … ಎಲ್ಲಾ ಸತ್ಯವೂ ಸತ್ತಿತೇ?

    ಅತ್ಯಾಚಾರದ ಆರೋಪಿ ಎನ್‌ಕೌಂಟರ್: ನ್ಯಾಯ ಸಿಕ್ಕಿತೇ, ಅಥವಾ ಸತ್ಯಕ್ಕೆ ಗುಂಡು ಬಿದ್ದಿತೇ?ತಾಯಿಯ ಕಣ್ಣೀರಿನ ತೀರ್ಪು ಕಠಿಣ ಮಾತು ಬೆಚ್ಚಿಬೀಳಿಸಿತು! ಆದರೂ ದೇಶವೇ ಚಪ್ಪಾಳೆ ತಟ್ಟಿತು.

    ಪಶ್ಚಿಮ ಬಂಗಾಳದ ಬರಾಯಿಪುರದಲ್ಲಿ 12 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಮತ್ತು ಹತ್ಯೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿತು. ಈ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡಲ್ ಪೊಲೀಸ್ ಎನ್‌ಕೌಂಟರ್‌ನಲ್ಲಿ ಮೃತಪಟ್ಟಿದ್ದಾನೆ.

    ಈ ಪ್ರಕರಣದಲ್ಲಿ ಮತ್ತೊಂದು ಗಮನಸೆಳೆದ ಬೆಳವಣಿಗೆ ಎಂದರೆ ಆರೋಪಿ ಪ್ರಭಾಸ್ ಮೊಂಡಲ್‌ನ ತಾಯಿಯ ಪ್ರತಿಕ್ರಿಯೆ. ಮಗನ ಶವವನ್ನು ಸ್ವೀಕರಿಸಲು ನಿರಾಕರಿಸಿದ ಅವರು, “ಅವನು ಮಾಡಿದ ಕೃತ್ಯಕ್ಕೆ ತಕ್ಕ ಶಿಕ್ಷೆಯೇ ಸಿಕ್ಕಿದೆ. ಒಬ್ಬ ತಾಯಿಯಾಗಿ ಮಗನನ್ನು ಕಳೆದುಕೊಂಡ ನೋವು ಇದೆ. ಆದರೆ ಆ ಪುಟ್ಟ ಬಾಲಕಿಗೆ ಅವನು ಮಾಡಿರುವ ಅಮಾನವೀಯ ಕೃತ್ಯವನ್ನು ನಾನು ಕ್ಷಮಿಸಲು ಸಾಧ್ಯವಿಲ್ಲ. ಅವನ ಮುಖವನ್ನೂ ನೋಡಲು ಇಷ್ಟವಿಲ್ಲ. ಶವವನ್ನು ಮನೆಗೆ ತರಲು ನಾನು ಹೋಗುವುದಿಲ್ಲ,” ಎಂದು ಮಾಧ್ಯಮಗಳ ಮುಂದೆ ಕಣ್ಣೀರಿನೊಂದಿಗೆ ಹೇಳಿದ್ದಾರೆ. ಅವರ ಈ ಮಾತುಗಳು ಪ್ರಕರಣದ ಕ್ರೌರ್ಯವನ್ನು ಮತ್ತೊಮ್ಮೆ ನೆನಪಿಸುವಂತಿದ್ದು, ತಾಯಿಯೊಬ್ಬಳು ಕೂಡ ತನ್ನ ಮಗನ ಕೃತ್ಯವನ್ನು ಸಮರ್ಥಿಸಲು ನಿರಾಕರಿಸಿರುವುದು ವ್ಯಾಪಕ ಚರ್ಚೆಗೆ ಕಾರಣವಾಗಿದೆ.

    ಪೊಲೀಸರು ಹೇಳುವ ಪ್ರಕಾರ, ಮಹಜರು ವೇಳೆ ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿ ಏಕಾಏಕಿ ಅಧಿಕಾರಿಯ ಪಿಸ್ತೂಲ್ ಕಸಿದುಕೊಳ್ಳಲು ಮುಂದಾದ ಕಾರಣ ಆತ್ಮರಕ್ಷಣೆಗಾಗಿ ಗುಂಡು ಹಾರಿಸಬೇಕಾಯಿತು.

    ಆದರೆ ಈ ಎನ್‌ಕೌಂಟರ್ ಮತ್ತೊಂದು ಚರ್ಚೆಗೆ ಕಾರಣವಾಗಿದೆ. ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದಾರೆ ಎಂಬ ಆರೋಪಗಳ ನಡುವೆ, ಪ್ರಮುಖ ಆರೋಪಿ ಜೀವಂತವಾಗಿದ್ದರೆ ಇನ್ನಷ್ಟು ಮಾಹಿತಿ ಹೊರಬರಬಹುದಿತ್ತೇ ಎಂಬ ಪ್ರಶ್ನೆ ಕೇಳಲಾಗುತ್ತಿದೆ. ಇತರ ಆರೋಪಿಗಳ ಪಾತ್ರ, ಸಂಚಿನ ಸಂಪೂರ್ಣ ಚಿತ್ರ ಹಾಗೂ ಸಾಕ್ಷ್ಯಗಳ ಸರಪಳಿ ನ್ಯಾಯಾಲಯದ ಮುಂದೆ ಸ್ಪಷ್ಟವಾಗಬೇಕಾದರೆ ಮುಖ್ಯ ಆರೋಪಿಯ ವಿಚಾರಣೆ ಮಹತ್ವದ್ದಾಗಿತ್ತು ಎಂಬ ಅಭಿಪ್ರಾಯವೂ ವ್ಯಕ್ತವಾಗುತ್ತಿದೆ.

    ಇನ್ನೊಂದೆಡೆ, ಎನ್‌ಕೌಂಟರ್‌ಗೆ ವ್ಯಾಪಕ ಬೆಂಬಲವೂ ವ್ಯಕ್ತವಾಗಿದೆ. “ಕ್ರೂರ ಅಪರಾಧಿಗೆ ತಕ್ಕ ಶಿಕ್ಷೆ ಸಿಕ್ಕಿದೆ” ಎಂದು ಹಲವರು ಹೇಳುತ್ತಿದ್ದಾರೆ. ಸಂತ್ರಸ್ತೆಯ ಕುಟುಂಬಕ್ಕೆ ತಕ್ಷಣದ ನ್ಯಾಯ ಸಿಕ್ಕ ಭಾವನೆಯೂ ಜನರಲ್ಲಿ ಕಾಣಿಸುತ್ತಿದೆ. ಆದರೆ ನ್ಯಾಯದ ವ್ಯವಸ್ಥೆಯಲ್ಲಿ ಶಿಕ್ಷೆಯನ್ನು ನಿರ್ಧರಿಸುವುದು ನ್ಯಾಯಾಲಯವೇ ಹೊರತು ಗುಂಡಲ್ಲ ಎಂಬ ವಾದವೂ ಸಮಾನವಾಗಿ ಕೇಳಿಬರುತ್ತಿದೆ.

    ಈ ನಡುವೆ ರಾಜಕೀಯ ಆರೋಪ-ಪ್ರತ್ಯಾರೋಪಗಳೂ ಆರಂಭವಾಗಿವೆ. ಕೆಲವರು ಇದು ನ್ಯಾಯ ಎಂದು ಸಮರ್ಥಿಸುತ್ತಿದ್ದರೆ, ಇನ್ನೂ ಕೆಲವರು ಎನ್‌ಕೌಂಟರ್ ಕುರಿತು ಸ್ವತಂತ್ರ ತನಿಖೆ ಅಗತ್ಯ ಎಂದು ಒತ್ತಾಯಿಸುತ್ತಿದ್ದಾರೆ. ಇಂತಹ ಪ್ರಕರಣಗಳಲ್ಲಿ ರಾಜಕೀಯ ಹೇಳಿಕೆಗಳು ಸತ್ಯಕ್ಕಿಂತ ಹೆಚ್ಚು ಗೊಂದಲ ಸೃಷ್ಟಿಸುವ ಅಪಾಯವೂ ಇದೆ.

    ಕೊನೆಗೆ ಒಂದು ಪ್ರಶ್ನೆ ಮಾತ್ರ ಉಳಿಯುತ್ತದೆ. ಜನರ ಆಕ್ರೋಶ ಸಹಜ. ಆದರೆ ಭಾವನೆಗಳ ನಡುವೆ ರಾಜಕೀಯ ಆಟ ನಡೆಯುತ್ತಿದೆಯೇ ಎಂಬುದನ್ನು ಗುರುತಿಸುವುದು ಕೂಡ ಅಷ್ಟೇ ಮುಖ್ಯ. ಸಾಮಾನ್ಯ ಜನರು ಅಪರಾಧಿಗೆ ಶಿಕ್ಷೆ ಬೇಕೆಂದು ಬಯಸುತ್ತಾರೆ; ಆದರೆ ಅದೇ ಸಮಯದಲ್ಲಿ ನಿಜವಾದ ಸಂಚಿನಲ್ಲಿ ಭಾಗಿಯಾದ ಒಬ್ಬರೂ ತಪ್ಪಿಸಿಕೊಳ್ಳಬಾರದು ಎಂಬುದನ್ನೂ ಬಯಸುತ್ತಾರೆ. ಅತ್ಯಾಚಾರದಂತಹ ಪ್ರಕರಣಗಳಲ್ಲಿ ರಾಜಕೀಯ ಲಾಭ-ನಷ್ಟವಲ್ಲ, ಸಂಪೂರ್ಣ ಸತ್ಯ ಹೊರಬರುವುದು ಮತ್ತು ಪ್ರತಿಯೊಬ್ಬ ತಪ್ಪಿತಸ್ಥನಿಗೂ ಕಾನೂನುಬದ್ಧ ಶಿಕ್ಷೆಯಾಗುವುದೇ ನಿಜವಾದ ನ್ಯಾಯ.

    ##WestBengal #Encounter #Justice #CrimeNews #BreakingNews

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಜಸ್ಟ್ one click ನಲ್ಲೇ ಎಲ್ಲಾ ಸರ್ಟಿಫಿಕೇಟ್…!2026–27ರಿಂದ ಅಂಕಪಟ್ಟಿ ಹಾರ್ಡ್ ಕಾಪಿ ಇಲ್ಲ..
    ರಾಜ್ಯವ್ಯಾಪಿ ಖೋಟಾ ನೋಟು ಜಾಲ ಭೇದಿಸಿದ ಖಾಕಿಯ ಚಾಣಾಕ್ಷ ಕಾರ್ಯಾಚರಣೆ..!
    ಅಣ್ಣಾಮಲೈ ಸಿಡಿಸಿದ ಬಾಂಬ್: ವಿಜಯ್ ಸರ್ಕಾರದ ಸಚಿವರ ವಿರುದ್ಧ 2–4% ಕಿಕ್‌ಬ್ಯಾಕ್ ಆರೋಪ!
    ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್ ವಿಂಗಡಣೆ ನಡುವೆ ಮಹಿಳಾ ಮಿಸಲಿಗೆ ಸೋಲು….
    ಆಂಬ್ಯುಲೆನ್ಸ್‌ನಲ್ಲೇ ನಡೆದ ಭೀಕರ ಘಟನೆ… ನಂಬಲು ಕಷ್ಟ, ಆದರೆ ಸತ್ಯ!
    ಕರ್ನಾಟಕದಲ್ಲಿ AI ಆವಿಷ್ಕಾರಕ್ಕೆ ಹೊಸ ಹೆಜ್ಜೆ: ಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾದ Anthropic ತಂಡ
    ಹೃದಯವಿದ್ರಾವಕ ಘಟನೆ: ರಾಜಕಾಲುವೆಯಲ್ಲಿ ತೇಲಿ ಬಂದ ನವಜಾತ ಹಸುಗೂಸು
    ವೈರಲ್ ‘Reservation Hatao Movement’ ಹಿಂದೆ ಏನಿದೆ? 7 ಗಂಟೆಗಳಲ್ಲಿ 90 ಸಾವಿರದಿಂದ 4 (40ಲಕ್ಷ) ಮಿಲಿಯನ್ ಫಾಲೋವರ್ಸ್‌! ಮೀಸಲಾತಿ ವಿರುದ್ಧದ ಅಭಿಯಾನಕ್ಕೆ ದೇಶಾದ್ಯಂತ ಭಾರೀ ಬೆಂಬಲ..
    ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಹೊರಟ್ಟಿ  ಕೊನೆಗೂ ರಾಜೀನಾಮೆ
    NEET ಹಂಗಾಮ ನೀಟಾಗಿ ಅಂತ್ಯ ಕಾಣುತ್ತಾ…?!ಮೋದಿಯ ‘ತಡವಾದ ಪ್ರತಿಕ್ರಿಯೆ’-ಕೊನೆಗೂ ವಾಂಗ್ಚುಕ್ ಉಪವಾಸ ಅಂತ್ಯ… ಆದರೆ … ‘ಕಾಕ್ರೋಚ್’ ಹೋರಾಟ ಮುಂದುವರಿಕೆ!ಮುಂದೇನು??
    ಹೊಸ ಸಂಸತ್ ಭವನದ ವಿನ್ಯಾಸಕ್ಕೆ ಶಶಿ ತರೂರ್ ಅಸಮಾಧಾನ: “ಆತ್ಮ ರಹಿತ ಸಮಾವೇಶ ಕೇಂದ್ರ”
    ಸಿಖ್ ವಿರೋಧಿ ದಂಗೆಯ ಆರೋಪಿ, ಸಜ್ಜನ್ ಕುಮಾರ್ ಜೈಲಿನಲ್ಲಿ ನಿಧನ
    ಅಕ್ರಮ ಗಡಿ ದಾಟಿದವರಿಗೆ ಈಗ ಭಾರತದಲ್ಲಿ ನೋ ಎಂಟ್ರಿ!ಬಾಂಗ್ಲಾ ಗಡಿಯಲ್ಲಿ ಎನ್‌ಆರ್‌ಸಿ ಅಸ್ತ್ರ: ರಾಜಕೀಯಕ್ಕಿಂತ ರಾಷ್ಟ್ರೀಯ ಭದ್ರತೆ ಮುಖ್ಯ
    ಹೆತ್ತ ಮಗಳನ್ನೇ ಉಸಿರುಗಟ್ಟಿಸಿ ಕೊಂದ  ಪಾಪಿ ತಾಯಿ
    ಸಾಲ ಮರುಪಾವತಿ ವಿಚಾರಕ್ಕೆ ಜಾಲ್ಸೂರು ರಸ್ತೆಯಲ್ಲೇ ಗಲಾಟೆ ಹಲ್ಲೆ
    ಕಾಂಗ್ರೆಸ್ ನಿಂದ ”MLC ಮಾಡಿಸುತ್ತೇನೆ” ಎಂದು 1.5 ಕೋಟಿ ವಂಚನೆ ಆರೋಪ
    ಪುತ್ತೂರು ಗ್ರಾಮಾಂತರದಲ್ಲಿ ಭೂ ವಿವಾದದ ಗಲಾಟೆ ತೀವ್ರತೆ: ಪರಸ್ಪರ ಹಲ್ಲೆ – ಎರಡು ಪ್ರಕರಣಗಳು ದಾಖಲು
    50ಕ್ಕೂ ಹೆಚ್ಚು ಆಟೋ ಚಾಲಕರ ದಿನನಿತ್ಯದ ಆರೋಗ್ಯದ ಬದುಕಿಗೆ ಮುಳುವಾದ ದೇರಳಕಟ್ಟೆ ಜಂಕ್ಷನ್ ದುರ್ನಾತ! 
    ಮಧ್ಯಪ್ರಾಚ್ಯದಲ್ಲಿ ಯುದ್ಧ– ಸಂಕಷ್ಟದಲ್ಲಿ ಜಗತ್ತು-ಉಸಿರು ತಡೆದ ಪರಿಸ್ಥಿತಿ!ಏನಾಗ್ತಾ ಇದೆ…
    ರಿಲಯನ್ಸ್ ವಿರುದ್ಧ ಇ.ಡಿ ಬಿಗ್ ಹ್ಯಾಮರ್ – ₹1,021 ಕೋಟಿ ಮುಟ್ಟುಗೋಲು
    ಸ್ವಯಂಪ್ರೇರಿತ ಲೈಂಗಿಕ ಕೆಲಸ -ವೇಶ್ಯಾವಾಟಿಕೆ ವೃತ್ತಿ ಅಪರಾಧವಲ್ಲ ಕಾನೂನುಬಾಹಿರವಲ್ಲ! -ಇತಿಹಾಸ ಸೃಷ್ಟಿಸಿದ ಸುಪ್ರೀಂ ಕೋರ್ಟ್!
    BRICS ಸಭೆಯಲ್ಲಿ UAE ಮೇಲೆ ಇರಾನ್ ಕಿಡಿ! ಇಸ್ರೇಲ್–ಇರಾನ್ ಯುದ್ಧ – ಇಸ್ರೇಲ್‌ಗೆ UAE ಗುಪ್ತ ಬೆಂಬಲವೇ?
    ಸೋನಂ ವಾಂಗ್ಚುಕ್ ಹೋರಾಟ ಸರ್ಕಾರದತ್ತ ಹೆಚ್ಚುತ್ತಿರುವ ಒತ್ತಡ: “ಸಂಸತ್ತಿನಲ್ಲಿ ಶಿಕ್ಷಣದ ಹೊಣೆಗಾರಿಕೆ ಬಗ್ಗೆ ಭರವಸೆ ಸಿಕ್ಕರೆ ಉಪವಾಸ ಅಂತ್ಯ!”…?
    ಆನ್ ಲೈನ್ ವಂಚನೆ ಶಿರ್ವದ ಯುವತಿಗೆ ಲಕ್ಷ ಲಕ್ಷ ಉಂಡೆನಾಮ… ಬ್ಯಾಂಕ್ ನಿಯಮ ವಂಚಕರಿಗೆ  ಸಹಕಾರಿ?
    ತುಳು ವಿಕಿಪೀಡಿಯಾಗೆ ದಶಮಾನೋತ್ಸವ ಸಂಭ್ರಮ
    “ಅಪ್ಪಾ” ಎಂದು ಕರೆದವನ ಕೈಯಿಂದಲೇ 18 ತಿಂಗಳ ಕಂದಮ್ಮನ ದೇಹದ ಮೇಲೆ 91 ಗಾಯದ ಗುರುತು – ಅಮಾನುಷ ಹತ್ಯೆ!..
    “ವೇತನಕ್ಕಾಗಿ ಹೋರಾಟದಿಂದ ಆರಂಭವಾದ ಪ್ರತಿಭಟನೆ… ನೋಯ್ಡಾ ರಸ್ತೆಗಳಲ್ಲಿ ಅರಾಜಕತೆ, ಬೆಂಕಿ, ಘರ್ಷಣೆ — ಈಗ ಸರ್ಕಾರವೇ ತನಿಖೆ ನಡೆಸುವಷ್ಟು ಗಂಭೀರ ಪರಿಸ್ಥಿತಿ!” 🔥🚨
    ವಿಪರೀತ ಸೆಕೆಯಿಂದ ಬಳಲುತ್ತಿರುವಾಗಲೇ ಕರೆಂಟ್ ತೆಗೆದ ದುಷ್ಟ ಮೆಸ್ಕಾಂ
    ಬೆಳಗಾವಿ ₹4500 ಕೋಟಿ ವಂಚನೆ ಪ್ರಕರಣ – CID ತನಿಖೆಯಿಂದ ಹೊರಬರುತ್ತಿರುವ ಕತ್ತಲೆಯ ಜಾಲ – ಯಾರು ನಿಜವಾದ ಮಾಸ್ಟರ್ ಮೈಂಡ್?
    🚢 “ಹಾರ್ಮುಝ್‌ನಿಂದ ಮಂಗಳೂರುವರೆಗೆ – 46,000 MT ಎಲ್‌ಪಿಜಿ ಯಮಹಾಯಾತ್ರೆ!