📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

“ಬಾಂಬ್‌ಗಿಂತ ಅಪಾಯಕಾರಿ ಅಹಂಕಾರ …! ಜಗತ್ತೇ ಕಾಯುತ್ತಿದೆ… ಮುಂದೇನು?”

ಮೌನವೇ ದೊಡ್ಡ ಸಂಶಯ — ಇಸ್ರೇಲ್ ಪಾತ್ರ ಏನು?ಪವರ್ ಗೇಮ್ ಮಧ್ಯೆ ಸಿಲುಕಿದ ಜಗತ್ತು!ದೊಡ್ಡ ದೇಶಗಳ ಆಟ… ಸಾಮಾನ್ಯ ಜನರ ನೋವು,ಯುದ್ಧ ಶುರು ಮಾಡೋದು ಸುಲಭ… ಮುಗಿಸಲು ಯಾರಿಗೂ ಸಾಧ್ಯವಾಗುತ್ತಿಲ್ಲ!

ಯುದ್ಧದ ಕಥೆ – ಯಾರು ಶುರುಮಾಡಿದರು?

2026ರಲ್ಲಿ ಮಧ್ಯಪೂರ್ವದಲ್ಲಿ ಉಂಟಾದ ಈ ಸಂಘರ್ಷವು ಏಕಾಏಕಿ ಹುಟ್ಟಿದುದಲ್ಲ. ಅಮೆರಿಕಾ (ಟ್ರಂಪ್ ನೇತೃತ್ವದಲ್ಲಿ) ಮತ್ತು ಇಸ್ರೇಲ್ ಸೇರಿ ಇರಾನ್ ಮೇಲೆ ದಾಳಿ ನಡೆಸಿದ ನಂತರ ಪರಿಸ್ಥಿತಿ ಉಗ್ರಗೊಂಡಿತು. ಅಮೆರಿಕಾ ಇದನ್ನು “ಇರಾನ್ ಜಗತ್ತನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿದೆ,ಸುರಕ್ಷತೆಗಾಗಿ ಮುನ್ನೆಚ್ಚರಿಕೆ ಕ್ರಮ” ಎಂದು ಹೇಳಿದರೆ, ಇರಾನ್ ಇದನ್ನು ನೇರ ಆಕ್ರಮಣವೆಂದು ಹೇಳಿ “ನಾವು ಪ್ರತಿರೋಧ ಮಾಡ್ತಿದ್ದೇವೆ”ಅಂತ ಪ್ರತಿಕ್ರಿಯೆ ನೀಡುತ್ತಿದೆ. ಹೀಗಾಗಿ, ಯಾರು ತಪ್ಪು, ಯಾರು ಸರಿ ಎಂಬುದಕ್ಕಿಂತ “ಯಾರು ಮೊದಲ ಹೊಡೆತ ಕೊಟ್ಟರು?” ಎಂಬ ಪ್ರಶ್ನೆಯೇ ಹೆಚ್ಚು ಚರ್ಚೆಯಾಗಿದೆ.

ಹಾರ್ಮುಜ್” ಅಲ್ಲ… “ಟ್ರಂಪ್ ಜಲಸಂಧಿ”?

ಹಾರ್ಮುಜ್ ಜಲಸಂಧಿ ಈ ಯುದ್ಧದ ಕೇಂದ್ರಬಿಂದುವಾಗಿದೆ. ಜಗತ್ತಿನ ಬಹುಪಾಲು ತೈಲ ಸಾಗಾಟ ಇದೇ ಮಾರ್ಗದಿಂದ ಸಾಗುತ್ತದೆ. ಇರಾನ್ ಇದನ್ನು ತನ್ನ ನಿಯಂತ್ರಣದಲ್ಲಿ ಇಡಲು ಪ್ರಯತ್ನಿಸುತ್ತಿದೆ. ಅಮೆರಿಕಾ ಇದನ್ನು ತೆರೆಯಲು ನೌಕಾಪಡೆಯಿಂದ ಒತ್ತಡ ಹಾಕುತ್ತಿದೆ. ಟ್ರಂಪ್ ಕಠಿಣ ಮಾತುಗಳಲ್ಲಿ ಎಚ್ಚರಿಕೆ ನೀಡುತ್ತಾ, ಕೆಲವೊಮ್ಮೆ “ಇದು ಈಗ ನಮ್ಮ ನಿಯಂತ್ರಣದಲ್ಲಿ ಇರಬೇಕು” ಇದನ್ನು “Strait of Trump” ಎಂದು ಕರೆಯುತ್ತಿದ್ದಾರೆ.

ಇರಾನ್ ನಿಲುವು – ತಗ್ಗುವುದಿಲ್ಲ ಇರಾನ್ ಸ್ಪಷ್ಟವಾಗಿ ಹೇಳಿದೆ: “ಹಾರ್ಮುಜ್ ನಮ್ಮ ಹಕ್ಕು, ನಮ್ಮ ನಿಯಂತ್ರಣದಲ್ಲೇ ಇರುತ್ತದೆ.” ಅಮೆರಿಕಾ ಒತ್ತಡಕ್ಕೆ ಮಣಿಯುವುದಿಲ್ಲ, ಮತ್ತೆ ದಾಳಿ ಮಾಡಿದರೆ ಕಠಿಣ ಪ್ರತಿಕ್ರಿಯೆ ಕೊಡುತ್ತೇವೆ ಎಂದು ಎಚ್ಚರಿಸಿದೆ. ಮಾತುಕತೆಗೆ ಸಿದ್ಧತೆ ಇದೆ ಆದರೆ ಒತ್ತಡದ ರಾಜಕೀಯವನ್ನು ಒಪ್ಪುವುದಿಲ್ಲ ಎಂಬುದು ಅವರ ನಿಲುವು.

ಇಸ್ರೇಲ್ – ಮೌನದ ಹಿಂದೆ ಪಾತ್ರ

ಯುದ್ಧದ ಆರಂಭದಲ್ಲಿ ಇಸ್ರೇಲ್ ಪ್ರಮುಖ ಪಾತ್ರ ವಹಿಸಿದ್ದರೂ, ಈಗ ಅದು ಬಹಳಷ್ಟು ಮೌನವಾಗಿದೆ. ಆದರೆ ಇದು ಸಂಪೂರ್ಣ ದೂರವಾಗಿದೆ ಎಂದಲ್ಲ. ಹಿಂದಿನಿಂದ ಸೈನಿಕ ಮತ್ತು ತಾಂತ್ರಿಕ ಬೆಂಬಲ ನೀಡುತ್ತಿದೆ ಎಂಬ ಅಭಿಪ್ರಾಯ ಇದೆ. ಸಾಮಾನ್ಯ ಜನರ ದೃಷ್ಟಿಯಲ್ಲಿ, “ಯುದ್ಧ ಶುರುಮಾಡಿಸಿ ಈಗ ಮೌನವಾಗಿರುವುದು” ಎಂಬ ಟೀಕೆ ಕೇಳಿಬರುತ್ತಿದೆ.

ಟ್ರಂಪ್ – ಅತಂತ್ರ

ಟ್ರಂಪ್ ತಮ್ಮ ಕ್ರಮವನ್ನು ಯಶಸ್ವಿಯೆಂದು ತೋರಿಸಲು ಪ್ರಯತ್ನಿಸುತ್ತಿದ್ದಾರೆ. ಆದರೆ ನೆಲಮಟ್ಟದ ಸ್ಥಿತಿ ನೋಡಿದರೆ, ಸಮಸ್ಯೆಗಳು ಇನ್ನೂ ಮುಂದುವರಿದಿವೆ. ಜಲಸಂಧಿ ಸಂಪೂರ್ಣವಾಗಿ ತೆರೆಯಲ್ಪಟ್ಟಿಲ್ಲ, ತೈಲ ಬೆಲೆ ಏರಿಕೆಯಾಗಿದೆ, ಜಾಗತಿಕ ಒತ್ತಡ ಹೆಚ್ಚಾಗಿದೆ. ಇದರಿಂದ “ಯುದ್ಧ ಶುರು ಮಾಡುವುದು ಸುಲಭ, ಮುಗಿಸುವುದು ಕಷ್ಟ” ಎಂಬ ಟೀಕೆಗಳು ಕೇಳಿಬರುತ್ತಿವೆ.

ಸಾಮಾನ್ಯ ಜನರ ಮನಸ್ಥಿತಿ

ಈ ಯುದ್ಧದ ದೊಡ್ಡ ಹೊಡೆತ ಸಾಮಾನ್ಯ ಜನರಿಗೆ ತಟ್ಟುತ್ತಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ, ಆರ್ಥಿಕ ಒತ್ತಡ — ಇವು ಜನರ ದಿನನಿತ್ಯದ ಜೀವನವನ್ನು ಪ್ರಭಾವಿಸುತ್ತಿವೆ. “ದೊಡ್ಡ ದೇಶಗಳ ರಾಜಕೀಯ ಆಟ, ಆದರೆ ಕಷ್ಟ ನಮಗೆ” ಎಂಬ ಭಾವನೆ ವ್ಯಾಪಕವಾಗಿದೆ.

ಈ ಯುದ್ಧವು— ಶಕ್ತಿ, ಅಹಂಕಾರ, ತೈಲ ಮತ್ತು ರಾಜಕೀಯದ ಮಿಶ್ರಣ. ಟ್ರಂಪ್ ಒತ್ತಡ ಹಾಕುತ್ತಿದ್ದಾರೆ, ಇರಾನ್ ತಗ್ಗುತ್ತಿಲ್ಲ, ಇಸ್ರೇಲ್ ಮೌನದಲ್ಲಿದೆ. ಆದರೆ ಕೊನೆಗೆ, ಈ ಎಲ್ಲಾ ನಡುವೆ ಸಾಮಾನ್ಯ ಜನರೇ ಹೆಚ್ಚು ಬೆಲೆ ಕಟ್ಟುತ್ತಿದ್ದಾರೆ.

##Israel #MiddleEast #HiddenMoves #WarAnalysis##Trump #USIran #PowerPlay #WorldPolitics

COMMENTS

Login with Gmail to comment

ಇನ್ನಷ್ಟು ಸುದ್ದಿ

ಪುತ್ತೂರಿನ ಕೃಷ್ಣ ಜೆ. ರಾವ್ ಪ್ರಕರಣಕ್ಕೆ ಹೈಕೋರ್ಟ್ ಬ್ರೇಕ್!“ಮಧ್ಯಂತರ ತೀರ್ಪು: ₹75K ತಿಂಗಳ ಸಹಾಯ ಷರತ್ತು”
₹6,695 ಕೋಟಿಯ ಮೆಗಾ ಪ್ರಾಜೆಕ್ಟ್‌ಗೆ ಮಳೆಯ ಅಗ್ನಿಪರೀಕ್ಷೆ-ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಭೂಕುಸಿತ
Lokayukta Raid In Hassan: ಬಾಗಿಲು ತೆರೆಯದೆ AEE ಹೈಡ್ರಾಮಾ, ಮನೆ ಏರಿದ ಲೋಕಾ ಪೊಲೀಸರು | AEE Satyanarayan
ಅಹಿಂಸೆ, ಸತ್ಯ ಮತ್ತು ತ್ಯಾಗದ ಮಾರ್ಗವೇ ಮಹಾವೀರರ ದರ್ಶನ — ಇದೇ ಸುಖಿ ಜೀವನದ ಗುಟ್ಟು.
“ಕುಮಾರಸ್ವಾಮಿ ಅವರನ್ನು ಹರಕೆ ಕುರಿ ಮಾಡುತ್ತಿದ್ದಾರೆ” – ಬಿಜೆಪಿ ವಿರುದ್ಧ ಕೆಪಿಸಿಸಿ ಅಧ್ಯಕ್ಷರ ವಾಗ್ದಾಳಿ
ಹೆಣ್ಣು ಎಂಬ ಕನಿಕರ, ಸಿಗದ ಹಾಗೆ ಮಾಡಿದ ಮಾಯಾಂಗನೇ…
ಪುತ್ತೂರು ಅತ್ಯಾಚಾರ ಪ್ರಕರಣ: ಹೈಕೋರ್ಟ್‌ನಲ್ಲಿ ರಾಜಿ ಸಂಧಾನ ಪ್ರಸ್ತಾಪ..!
ಕರ್ನಾಟಕದಲ್ಲಿ ಅತಿ ಕನಿಷ್ಠ ಮಟ್ಟಕ್ಕೆ ಕುಸಿದ ‘ಟೀನ್ ಪ್ರೆಗ್ನೆನ್ಸಿ’! 70% ಕೇಸ್‌ಗಳು ಮಾಯವಾಗಿದ್ದು ಹೇಗೆ?
Forex ಟ್ರೇಡಿಂಗ್ ಹೆಸರಲ್ಲಿ 3.5 ಲಕ್ಷ ವಂಚನೆ – ಆರೋಪಿ ವಿರುದ್ಧ ಪ್ರಕರಣ ದಾಖಲು
ಆರೋಪಿ ಸಮೀರ್ ಮುಲ್ಲಾ ಸ್ಫೋಟಕ ಹೇಳಿಕೆ-ಖುಷಿ ಒಳ್ಳೆ ಹುಡುಗಿ-🔥 ಹುಬ್ಬಳ್ಳಿ ಲವ್ ಜಿಹಾದ್ ಅಲ್ಲ ಎಂದ ಪೊಲೀಸರು : ಇದೀಗ ಹೊಸ ಟ್ವಿಸ್ಟ್!
ಜೀತಕ್ಕಿಟ್ಟುಕೊಂಡು ದರ್ಬಾರ್ ನಡೆಸುತ್ತಿದ್ದ ರಜನಿಶೆಟ್ಟಿಯ ಬಂಧನ
ಏರ್ ಇಂಡಿಯಾದಿಂದ ದೈನಂದಿನ ವಿಮಾನ ಹಾರಾಟದ ಬಗ್ಗೆ ನೂತನ ಪ್ರಕಟಣೆ
ಯುಎಇಯಿಂದ ಯುರೋಪ್ ತನಕ ಮೋದಿ ಐತಿಹಾಸಿಕ ವಿದೇಶ ಪ್ರವಾಸ…ಡಿಪ್ಲೊಮಸಿ – ತೈಲದಿಂದ ತಂತ್ರಜ್ಞಾನವರೆಗೆ ಇದು ಭಾರತದ ಭವಿಷ್ಯದ ತಂತ್ರಾತ್ಮಕ ನಡೆ ?!
ಶಿಕ್ಷಣದ ಹೆಸರಿನಲ್ಲಿ ಡ್ರಗ್ ವ್ಯವಹಾರ! ಬೆಚ್ಚಿಬಿದ್ದ ಮಂಗಳೂರು…
ಇರಾನ್–ಇಸ್ರೇಲ್ ಯುದ್ಧ: ಯುದ್ಧ ನಿಲ್ಲಿಸಲು ಇರಾನ್‌ನ 3 ಷರತ್ತುಗಳು… ಅಮೇರಿಕಾ ಕಂಗಾಲು
ಕೂದಲೆಳೆ ಅಂತರದಲ್ಲಿ ಪಾರಾದ ಗುಜರಾತ್ ಟೈಟಾನ್ಸ್!ಕ್ಷಣಾರ್ಧ ತಡವಾಗಿದ್ದರೂ ಸಂಭವಿಸುತ್ತಿತ್ತು ಘೋರ ಅಗ್ನಿ ದುರಂತ!
ಉಡುಪಿ ಜಿಲ್ಲೆಯಲ್ಲಿ  ಹೆಚ್ಚಾದ  ಚಿರತೆ ಉಪಟಳ : ತುರ್ತು ಕ್ರಮಕ್ಕೆ ತುರವೇ ಮನವಿ
ಪ್ರಕೃತಿಯ ಮುನಿಸಿಗೆ ಕರಗುತ್ತಿದೆ ಯುರೋಪ್ ….!ತಂತ್ರಜ್ಞಾನದ ಅಹಂಕಾರವನ್ನು ಸುಟ್ಟು ಬೂದಿ ಮಾಡುತ್ತಿರುವ ಯುರೋಪ್ ಹೀಟ್‌ವೇವ್!
ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಮಚ್ಚು ದಾಳಿ: ಕಾಲೇಜಿಗೆ ತೆರಳುತ್ತಿದ್ದ ಪಿಯುಸಿ ವಿದ್ಯಾರ್ಥಿನಿ ಮೇಲೆ ಹಲ್ಲೆ; ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು
ತಿಮರೋಡಿ ಸೇರಿ ನಾಲ್ವರಿಗೆ ಕೇಸ್…
ಯುದ್ಧದ ಹೊಡೆತ: ಹಣ ಕೊಟ್ಟರೂ ಗ್ಯಾಸ್ ಇಲ್ಲ! ಕಾರವಾರ ಬಂದರು ಸ್ತಬ್ಧ — ಜನಜೀವನ ಅಸ್ತವ್ಯಸ್ತ 🔥
ಕುಂದಾಪುರದಲ್ಲಿ ಎರಡು ಮಕ್ಕಳ ತಾಯಿ ನಾಪತ್ತೆ. ಸ್ನೇಹಿತರ ಜೊತೆಯಲ್ಲಿ ಹೋಗಿರುವ ಶಂಕೆ
“ಟೀಕೆ ಮಾಡಿ, ತೇಜೋವಧೆ ಬೇಡ” – ಹೈಕೋರ್ಟ್‌ನಿಂದ ಗಿರೀಶ್ ಮಟ್ಟೆಣ್ಣನವರ್‌ಗೆ ಖಡಕ್ ಎಚ್ಚರಿಕೆ
ಶಾಲೆ ಹತ್ತಿರವಿದ್ದರೂ,ಮಕ್ಕಳ ಹೆಲ್ಮೆಟ್ ನಿರ್ಲಕ್ಷಿಸಬೇಡಿ!4 ವರ್ಷದೊಳಗಿನ ಮಗುಗೂ ಹೆಲ್ಮೆಟ್ ಕಡ್ಡಾಯ!
ಅಮಿತ್ ಶಾ- “UCC ಜಾರಿಗೆ ತಂದು ನಾಲ್ಕು ಮದುವೆ ಪದ್ಧತಿ ನಿಷೇಧ” — ಪಶ್ಚಿಮ ಬಂಗಾಳದಲ್ಲಿ ದೊಡ್ಡ ಘೋಷಣೆ
ಕೊಲೆ ಆರೋಪಿಗಳ ಕಾರು ಮಾಣಿಯಲ್ಲಿ ಪತ್ತೆ ….!
ಕರ್ನಾಟಕದಲ್ಲಿ ಹೆಚ್ಚುತ್ತಿರುವ ಹೆಚ್‌ಐವಿ ಪ್ರಕರಣಗಳು..!ಯುವ ಪೀಳಿಗೆಯನ್ನು ಗುರಿಯಾಗಿಸಿ “ಹೈ-ಅಲರ್ಟ್ ಘೋಷಿಸಿದ ಆರೋಗ್ಯ ಇಲಾಖೆ.”
ಬೆಳಗಾವಿ ಮಾಜಿ ಯೋಧನ ಸಾವಿನ ಹಿಂದೆ ಬೆಚ್ಚಿಬೀಳಿಸುವ ಸತ್ಯ ₹2 ಕೋಟಿ ವಿಮೆ..!? ಸಿನೆಮಾವನ್ನೂ ಮೀರಿಸಿದ ಕ್ರೈಂ ಸ್ಟೋರಿ!
ನ್ಯಾಯಾಂಗಕ್ಕೆ ಕಳಂಕ ತರುವುದನ್ನು ನೋಡಿಯೂ ಕೈಕಟ್ಟಿ ಕೂರಲಾಗದು
ಮೂಡಬಿದ್ರೆ: ಅಕ್ರಮ ಜಾನುವಾರು ಸಾಗಾಟ -ಆರೋಪಿಗಳ ಬಂಧನ, ವಾಹನ ಹಾಗೂ ಕರು ವಶಕ್ಕೆ.