📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಬಾರ್ ಲೆಕ್ಕಾಚಾರ-ಚೂರಿ ದಾಳಿ – ಯುವಕನ ಕುತ್ತಿಗೆಗೆ ಕೊಯ್ದು ಕೊಲೆ ಯತ್ನ

    ಸುಳ್ಯ ಪಟ್ಟಣದ ಶ್ರೀರಾಮ್ ಪೇಟೆಯಲ್ಲಿರುವ ಬಾರ್‌ನಲ್ಲಿ ಯುವಕನ ಮೇಲೆ ಚೂರಿಯಿಂದ ದಾಳಿ ನಡೆಸಿ ಕೊಲೆ ಮಾಡಲು ಯತ್ನಿಸಿದ ಘಟನೆ ಮಾರ್ಚ್ 14ರಂದು ಸಂಜೆ ನಡೆದಿದೆ. ಈ ಸಂಬಂಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪೊಲೀಸರ ಮಾಹಿತಿ ಪ್ರಕಾರ, ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಜನತಾ ಕಾಲೋನಿಯ ನಿವಾಸಿ ನಿತೇಶ್ ಆರ್.ಕೆ (33) ಅವರು ಸುಳ್ಯ ಕಸಬಾ ಗ್ರಾಮದ ಸುಳ್ಯ ಪೇಟೆಯ ಸಂಗಮ್ ಬಿಲ್ಡಿಂಗ್‌ನ ಬಾಡಿಗೆ ಕೊಠಡಿಯಲ್ಲಿ ವಾಸವಾಗಿದ್ದು ಪೇಂಟಿಂಗ್ ಕೆಲಸ ಮಾಡಿಕೊಂಡಿದ್ದಾರೆ.

    ಮಾರ್ಚ್ 14ರಂದು ನಿತೇಶ್ ಅವರು ತಮ್ಮ ಸ್ನೇಹಿತ ಹರೀಶ್ ಜೊತೆ ಸುಳ್ಯ ಸಮೀಪದ ಅರಂಬೂರು ಪ್ರದೇಶದಲ್ಲಿ ಪೇಂಟಿಂಗ್ ಕೆಲಸ ಮುಗಿಸಿಕೊಂಡು ಸಂಜೆ ಸುಮಾರು 5 ಗಂಟೆ ಸುಮಾರಿಗೆ ಶ್ರೀರಾಮ್ ಪೇಟೆಯಲ್ಲಿರುವ ರಾಜೇಶ್ ಬಾರ್‌ಗೆ ತೆರಳಿ ವಾರದ ಲೆಕ್ಕಾಚಾರ ಮಾಡುತ್ತಿದ್ದರು. ಆ ವೇಳೆ ಹರೀಶ್ ಲೆಕ್ಕಾಚಾರದ ಪುಸ್ತಕದಲ್ಲಿ ವಿವರಗಳನ್ನು ಬರೆಯುತ್ತಿದ್ದರು.

    ಸುಮಾರು ಸಂಜೆ 5.45ರ ವೇಳೆಗೆ ಬಾರ್‌ನಲ್ಲಿ ಇದ್ದ ಇಬ್ಬರು ಯುವಕರು ನಿತೇಶ್ ಅವರ ಬಳಿಗೆ ಬಂದು ಏಕಾಏಕಿ ಜಗಳಕ್ಕೆ ಮುಂದಾದರು. ಅವರಲ್ಲಿ ಒಬ್ಬನು ತನ್ನ ಕೈಯಲ್ಲಿ ಹಿಡಿದಿದ್ದ ಚೂರಿಯಿಂದ ಹರೀಶ್ ಅವರನ್ನು ಕೊಲ್ಲುವ ಉದ್ದೇಶದಿಂದ ಕುತ್ತಿಗೆಗೆ ಕೊಯ್ಯಲು ಯತ್ನಿಸಿದ್ದಾನೆ. ಈ ವೇಳೆ ಹರೀಶ್ ಚೂರಿಯನ್ನು ಹಿಡಿದು ತಡೆಯಲು ಪ್ರಯತ್ನಿಸಿದ್ದು, ನಿತೇಶ್ ಕೂಡ ಬಲವಾಗಿ ಚೂರಿಯನ್ನು ಹಿಡಿದುಕೊಂಡು ತಡೆಯಲು ಯತ್ನಿಸಿದ್ದಾರೆ.

    ಆದರೂ ದಾಳಿಕೋರನು ಚೂರಿಯಿಂದ ಹರೀಶ್ ಅವರ ಎಡ ಕುತ್ತಿಗೆಗೆ ಕೊಯ್ದ ಪರಿಣಾಮ ರಕ್ತ ಗಾಯವಾಗಿದೆ. ಅಲ್ಲದೆ, ಚೂರಿಯನ್ನು ತಡೆಯುವ ವೇಳೆ ನಿತೇಶ್ ಮತ್ತು ಹರೀಶ್ ಅವರ ಎಡ ಕೈಗಳ ಅಂಗೈಗಳಿಗೆ ಕೂಡ ಗಾಯಗಳಾಗಿವೆ. ನೋವಿನಿಂದ ಇಬ್ಬರೂ ಬೊಬ್ಬೆ ಹಾಕುತ್ತಿದ್ದಂತೆ ಬಾರ್‌ನಲ್ಲಿ ಇದ್ದ ಇತರರು ಮಧ್ಯಪ್ರವೇಶಿಸಿ ಹೆಚ್ಚಿನ ಹಲ್ಲೆ ನಡೆಯದಂತೆ ತಡೆದಿದ್ದಾರೆ.

    ನಂತರ ಗಾಯಗೊಂಡ ಇಬ್ಬರನ್ನು ತಕ್ಷಣ ಸುಳ್ಯ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿದೆ.

    ಬಳಿಕ ದಾಳಿ ನಡೆಸಿದವರ ಹೆಸರು ಹಾಗೂ ವಿಳಾಸ ಪತ್ತೆಯಾಗಿದ್ದು, ಸುಳ್ಯ ತಾಲೂಕು ಅಜ್ಜಾವರ ಗ್ರಾಮದ ಗಂಧದಗುಡ್ಡೆ ಕಾಂತಮಂಗಲ ನಿವಾಸಿಗಳಾದ ರಾಜೇಶ್ ಬಿ.ಆರ್ (27) ಮತ್ತು ದಯಾನಂದ್ (30) ಎಂಬವರಾಗಿದ್ದಾರೆ ಎಂದು ತಿಳಿದುಬಂದಿದೆ. ಅವರು ಹರೀಶ್ ಅವರ ಕುತ್ತಿಗೆಗೆ ಚೂರಿಯಿಂದ ಕೊಯ್ದು ಕೊಲೆ ಮಾಡಲು ಪ್ರಯತ್ನಿಸಿರುವುದಾಗಿ ದೂರಿನಲ್ಲಿ ಹೇಳಲಾಗಿದೆ.

    ಆದರೆ ಆರೋಪಿಗಳು ಹರೀಶ್ ಅವರನ್ನು ಯಾವ ಕಾರಣಕ್ಕೆ ಕೊಲೆ ಮಾಡಲು ಯತ್ನಿಸಿದರು ಎಂಬುದು ಇನ್ನೂ ತಿಳಿದುಬಂದಿಲ್ಲ. ಈ ಸಂಬಂಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಂಖ್ಯೆ 31/2026ರಡಿ BNS 2023ರ 118(1), 109 ಮತ್ತು 3(5) ಕಲಂಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

    #bar#crime

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಮುಂಬೈ ಮಳೆ ಅವಾಂತರ: ಒಂದು ನಗರವೇ ಜಲಾವೃತ… ದುರಂತ, ಮಾನವೀಯತೆ ಮತ್ತು ಹೋರಾಟದ ಹಲವು ಮುಖಗಳು
    ಮಹಿಳಾ ಕ್ರೀಡಾಪಟುಗಳ ಹೋರಾಟಕ್ಕೆ ಹೊಸ ತಿರುವು ಕೊಟ್ಟ ದೆಹಲಿ ಹೈಕೋರ್ಟ್!
    ಮಂಗಳೂರುಗೆ ಹೈಕೋರ್ಟ್ ಸರ್ಕ್ಯೂಟ್ ಬೆಂಚ್: ಕರಾವಳಿಗೆ ಐತಿಹಾಸಿಕ ನ್ಯಾಯಾಂಗ ಶಕ್ತಿ ನೀಡುವ ಮಹತ್ವದ ಹೆಜ್ಜೆ..
    ಶಾಲಾ ಶಿಕ್ಷಕಿಯರ ಹೆಸರಿನಲ್ಲಿ ಡ್ರಗ್ಸ್ ಜಾಲ ..! ತನಿಖೆಯಲ್ಲಿ ಬೆಚ್ಚಿಬೀಳಿಸುವ ಕೊಂಡಿಗಳು ಇನ್‌ಸ್ಟಾಗ್ರಾಮ್‌ನಿಂದ ಗ್ರಾಹಕರ ಸೆಳೆತ, ಗಲ್ಫ್ ನಂಬರ್ ಮೂಲಕ ಬುಕ್ಕಿಂಗ್
    ಪಶ್ಚಿಮ ಘಟ್ಟದ ಕಸ್ತೂರಿರಂಗನ್ ವರದಿಗೆ ಬ್ರೇಕ್?…ವಿಶೇಷ ಅಧಿವೇಶನಕ್ಕೆ ಸರ್ಕಾರ ಸಿದ್ಧತೆ
    ಶಾಸಕ ಸ್ಥಾನಕ್ಕೆ ರಾಜೀನಾಮೆ, ಯಶ್ವಂತರಾಯಗೌಡರ ನಡೆ  ಸಸ್ಪೆನ್ಸ್
    ಶೃಂಗೇರಿ ವಿಧಾನಸಭೆಯ ಮರುಕೌಂಟಿಂಗ್ ನಲ್ಲಿ ನಡೆದ ಲಪಡಾಗಳೇನು?
    ಹಿಂದೂ ಬುಡಕಟ್ಟು ಸಮಾಜದ ರುದ್ರಾಕ್ಷಿ ಸುಂದರಿ ಮುಸ್ಲಿಂ ಹುಡುಗನ ಮದುವೆಯಾದ್ಲು
    ರಾಜ್ಯಮಟ್ಟದಲ್ಲಿ ಸದ್ದು ಮಾಡಿದ ತೆರಿಗೆ ವಂಚನೆ ಪ್ರಕರಣದ ನಂತರವೂ ಅಧಿಕಾರಿಗಳು ಪಾಠ ಕಲಿತಿಲ್ಲವೇ….!?
    ವಿವಾಹಿತ ದಂಪತಿಗಳಿಗೆ ಜಂಟಿ ITR ವ್ಯವಸ್ಥೆ ತರಲು- ಸಂಸತ್ತಿನಲ್ಲಿ Raghav Chadha ಆಗ್ರಹ.
    ಹಾಸನದಲ್ಲಿ ಮೀಸಲಾತಿ ವಿಚಾರಕ್ಕೆ ವಾಕ್ಸಮರ: ರೇವಣ್ಣ–ಶಿವಲಿಂಗೇಗೌಡ ತಿರುಗೇಟು
    ತಪ್ಪುಅರ್ಥಕ್ಕೆಕ್ಷಮೆ, ಹೊಸರೂಪದಲ್ಲಿಮತ್ತೆ ‘ಸರ್ಸೆಸೆರಗು’”-ಪ್ರೇಮ್
    ತಮಿಳುನಾಡು ಮುಖ್ಯಮಂತ್ರಿ ವಿಜಯ್, ಚಧುರಂಗದಾಟದಲ್ಲಿ ಲಾಂಗ್ ಟೈಮ್ ಉಳಿಯುವರೇ?
    ಮತ್ತೊಂದು ಭೀಕರ ದುರಂತ: ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ
    ಮೊಬೈಲ್ ನಂಬರ್ ದುರ್ಬಳಕೆ; ನಿವೃತ್ತ ಉದ್ಯೋಗಿಯ ವಿವಿಧ ಬ್ಯಾಂಕ್ ಖಾತೆಗಳಿಂದ ₹2.12 ಕೋಟಿ ಆನ್‌ಲೈನ್ ವಹಿವಾಟು
    ಹೈಕೋರ್ಟ್ ತೀರ್ಪಿನಿಂದ ದಕ್ಷಿಣ ಕನ್ನಡ ಇ-ರಿಕ್ಷಾ ಚಾಲಕರಿಗೆ favour
    ಅಮಿತ್ ಶಾ- “UCC ಜಾರಿಗೆ ತಂದು ನಾಲ್ಕು ಮದುವೆ ಪದ್ಧತಿ ನಿಷೇಧ” — ಪಶ್ಚಿಮ ಬಂಗಾಳದಲ್ಲಿ ದೊಡ್ಡ ಘೋಷಣೆ
    ಸಿಟಿ ಬಸ್ ಫೋಲ್ಡಿಂಗ್ ಬಾಗಿಲು ಕಡ್ಡಾಯ: ಸುರಕ್ಷತೆಗೆ ಹೆಜ್ಜೆ, ಆದರೆ ಸವಾಲುಗಳೇನು? ಪರಿಹಾರ ಹೇಗೆ?
    ಬರ್ಗಿ ಅಣೆಕಟ್ಟಿನಲ್ಲಿ ಭೀಕರ ದುರಂತ-ಕರುಳು ಹಿಂಡುವ ದೃಶ್ಯ ಅಮ್ಮ-ಮಗು ಅಪ್ಪಿಕೊಂಡೇ ಜಲಸಮಾದಿ ಸಂತೋಷದ ಪ್ರವಾಸದಿಂದ ಶೋಕದ ಸಾಗರಕ್ಕೆ
    ಮಾರ್ಚ್ 7 ರಂದು ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಆಗಮನ
    ಶಾಂತಿ ಕಾಪಾಡಿ, ವದಂತಿಗಳಿಗೆ ಕಿವಿಗೊಡಬೇಡಿ: ಪ್ರತಿಭಟನಾಕಾರರಿಗೆ ದೆಹಲಿ ಪೊಲೀಸರ ಮನವಿ
    ‘ನನ್ನ ಮೇಲ್‌ಗೆ ಉತ್ತರವೇ ಬರಲಿಲ್ಲ…’ ಸಭೆಯಲ್ಲೇ ಮಹಿಳೆಯ ಪ್ರಶ್ನೆ; ನಿಖಿಲ್ ಕಾಮತ್ ನೀಡಿದ ಪ್ರತಿಕ್ರಿಯೆಗೆ ದೇಶವೇ ಫಿದಾ!
    ಭಾರೀ ಮಳೆ ಎಚ್ಚರಿಕೆ: ದಕ್ಷಿಣ ಕನ್ನಡದಲ್ಲಿ ನಾಳೆ ಶಾಲೆಗಳಿಗೆ ರಜೆ!
    ಮಂಗಳೂರಿಗೆ “ಅಮ್ಮ”ನ ಆಗಮನ ಭಕ್ತರಲ್ಲಿ ಸಡಗರವೂ ಸಡಗರ….. ನಾಳೆ ನಗರಕ್ಕೆ ಇಬ್ಬರು ಕೇಂದ್ರ ಸಚಿವರ ಆಗಮನ
    HSRP ರಿಲೀಫ್ + PUCC ಫೈನ್ ಮುಕ್ತ…ಡೀಟೇಲ್ಸ್ ಇಲ್ಲಿದೆ ಕರ್ನಾಟಕದ ಎಲ್ಲ ಡ್ರೈವರ್‌ಗಳಿಗೆ ಡಬಲ್ ಗುಡ್ ನ್ಯೂಸ್!???
    ನಾಸಿಕ್‌ನ Tata Consultancy Services ಕಚೇರಿಯಲ್ಲಿ ಗಂಭೀರ ಆರೋಪಗಳ ನಡುವೆ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್ — ಸುರಕ್ಷತೆಗೆ ಮೊದಲ ಆದ್ಯತೆ.
    ಬೃಹತ್ ಅಭಿಯಾನ….5.51 ಟನ್ ವಸ್ತುಗಳು..!5000ಕ್ಕೂ ಹೆಚ್ಚು ದೇವರ ಫೋಟೋಗಳು
    ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ, ನಿರೀಕ್ಷಿತ ತನಿಖೆ
    ಫ್ರಿಡ್ಜ್ ರಿಪೇರಿಗೆ ಬಂದವ ಮನೆ ಲೂಟಿ ಪರಾರಿ…!ಬಿ ಅಲರ್ಟ್ ‼️
    ಸರ್ಕಾರಿ ಸ್ವಾಮ್ಯದ ಬೇಲಿ ಕಂಬ ಕಿತ್ತಾಕಲು DYFI ಕುಮ್ಮಕ್ಕು….!