📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಬಿಜೆಪಿಯನ್ನು ಹಿಂದಿಕ್ಕಿದ   ಜಿರಳೆ ಪಕ್ಷ..”ಕಾಕ್ರೋಚ್ ಜನತಾ ಪಾರ್ಟಿ”

ಕೇವಲ ನಾಲ್ಕು ದಿನದ ಹಿಂದೆ ಪ್ರಾರಂಭವಾದ ಕಾಕ್ಕ್ರೋಚ್ ಜನತಾ ಪಾರ್ಟಿ ಎಂಬ ನೂತನ ಪಕ್ಷವು, ಕೇಂದ್ರದಲ್ಲಿ ಕಳೆದ 13 ವರ್ಷದಿಂದ ಅಧಿಕಾರ ನಡೆಸುತ್ತಿರುವ, ದೇಶದ ಅನೇಕ ರಾಜ್ಯಗಳನ್ನು ಗೆದ್ದುಕೊಂಡಿರುವ ಭಾರತೀಯ ಜನತಾ ಪಕ್ಷವನ್ನು ಮೀರಿ ಬೆಳೆದು ನಿಂತಿದೆ ಅಂದರೆ ನಂಬುತ್ತೀರಾ? ನೀವು ನಂಬಲೇಬೇಕು. 

ಅಷ್ಟಕ್ಕೂ ಈ ಕಾಕ್ರೋಚ್ ಜನತಾ ಪಾರ್ಟಿ ಯಾರದ್ದು? ಇದು ಹುಟ್ಟಿದ್ದು ಏಕೆ? ಈ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಅವರ ಒಂದು ಹೇಳಿಕೆ ವಿರುದ್ಧ ಶುರುವಾದ ಅಭಿಯಾನ, ಯಾವ ಮಟ್ಟಕ್ಕೆ ಬಂದು ನಿಂತಿದೆ ನೋಡಿ. ಇದು ಈಗ ವಿಶ್ವದಲ್ಲಿಯೇ ಅತಿ ದೊಡ್ಡ ಪಕ್ಷ ಎಂಬ ಬಿಗುತ್ತಿರುವ ಭಾರತೀಯ ಜನತಾ ಪಕ್ಷಕ್ಕೆ ಮುಜುಗರವನ್ನುಂಟು ಮಾಡುತ್ತಿದೆ. ಆ ಮಟ್ಟಕ್ಕೆ ಟ್ರೆಂಡ್ ಕ್ರಿಯೇಟ್ ಆಗಿದೆ. ಯುವ ಜನಾಂಗ, ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಯಾವ ಮಟ್ಟದಲ್ಲಿ ಹೋರಾಟ ಮಾಡಬಹುದು ಅನ್ನುವುದಕ್ಕೆ ಇದೂ ಒಂದು ಸಾಕ್ಷಿ ನೋಡಿ

ವಕೀಲರೊಬ್ಬರು, ಹಿರಿಯ ವಕೀಲರಾಗಲು ಅರ್ಜಿ ಸಲ್ಲಿಸುತ್ತಾರೆ. ಆ ಅರ್ಜಿಯನ್ನು ಪರಿಶೀಲಿಸಿದ ನ್ಯಾಯಮೂರ್ತಿಗಳು, ಅರ್ಜಿಯ ಬಗ್ಗೆ ಕಮೆಂಟ್ ಮಾಡುತ್ತಾರೆ. ಕ್ರಮಬದ್ಧವಾಗಿ ಅರ್ಜಿ ಸಲ್ಲಿಸಿಲ್ಲ ಅಂತ ಪಕ್ಕಕ್ಕೆ ಅರ್ಜಿಯನ್ನು ಇಡುವ ಬದಲು, ಈ ಸಂದರ್ಭದಲ್ಲಿ ಅವರು ಮಾಡಿದ ಕಮೆಂಟ್ ವಿಚಾರ ಇವತ್ತು ಇಡೀ ದೇಶದಲ್ಲಿ ದೊಡ್ಡ ಸಂಚಲವನವನ್ನೇ ನಿರ್ಮಿಸುತ್ತಿದೆ.

ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ರವರು, ಇವತ್ತಿನ ಕೆಲವು ಯುವಕರು ಸರಿಯಾದ ಉದ್ಯೋಗವನ್ನು ಸಂಪಾದಿಸಲಾಗದೆ, ತಾವೇ ಮಾಧ್ಯಮಗಳಾಗಿ ಬಿಡುತ್ತಾರೆ, ಸಾಮಾಜಿಕ ಮಾಧ್ಯಮದ ಹೀರೋಗಳಾಗಿ ಬಿಡುತ್ತಾರೆ. ಆರ್‌ಟಿಐ ಕಾರ್ಯಕರ್ತರಾಗಿಬಿಡುತ್ತಾರೆ. ಕಾಕ್ರೋಜತರ ಎಲ್ಲೆಂದರಲ್ಲಿ ಹರಿದಾಡುತ್ತಾರೆ ಅಂತ ಕಮೆಂಟ್ ಮಾಡಿದ್ದನ್ನು ವಕೀಲರೊಬ್ಬರು ತೀವ್ರವಾಗಿ ಆಕ್ಷೇಪಿಸಿದ್ದಾರೆ.  ಇದನ್ನು ನೋಡಿದ, ಮಹಾರಾಷ್ಟ್ರದ ನಾಗಪುರ ಪ್ರದೇಶದ 30 ವರ್ಷದ ಅಭಿಜಿತ್ ದೀಪ್ಕೆ ಎಂಬ ಯುವಕ, ತನ್ನ ಟ್ಯಾಲೆಂಟ್ ತೋರಿಸಿದ್ದಾನೆ ನೋಡಿ.

ಮೊನ್ನೆ ಮೇ 16ರಂದು ಅಭಿಜಿತ್ ದೀಪ್ಗೆ, ಕಾಕ್ಕ್ರೋಜ್ ಜನತಾ ಪಾರ್ಟಿ ಎಂಬ ಹೆಸರಿನಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಅಕೌಂಟ್ ತೆರೆಯುತ್ತಾರೆ. ಅದು ಯಾವ ಮಟ್ಟಿಗೆ ದೇಶದಾದ್ಯಂತ  ವೈರಲಾಗುತ್ತಿದೆ ಎಂದರೆ, ಸ್ವತಹ ಆಡಳಿತ ಪಕ್ಷ ಬಿಜೆಪಿಯ ತತ್ತರಿಸಿ ಹೋಗುವಂತಿದೆ ಆ ಒಂದು ಪೇಜಿನಿಂದಾಗಿ.

ಭಾರತೀಯ ಜನತಾ ಪಕ್ಷದ ಹಿಂಬಾಲಕರ ಸಂಖ್ಯೆ 8.8 ಮಿಲಿಯನ್ ಆಗಿದ್ದರೆ, ಕಾಕ್ರೋಚ್ ಜನತಾ ಪಾರ್ಟಿಯ ಹಿಂಬಾಲಕರ ಸಂಖ್ಯೆ 9.6 ಮಿಲಿಯನ್ ದಾಟಿದೆ. ಕೇವಲ ಆರು ದಿನದಲ್ಲಿ ಇಷ್ಟು ದೊಡ್ಡ ಸಂಖ್ಯೆಯ ಹಿಂಬಾಲಕರನ್ನು ಹೊಂದಿ, ವ್ಯವಸ್ಥೆಯನ್ನು ಅಣಕ ಮಾಡಲು ಪ್ರಾರಂಭ ಮಾಡಿದ್ದಾರೆ ಎಂದರೆ, ದೇಶದ ಯುವ ಜನಾಂಗ ಎಷ್ಟರಮಟ್ಟಿಗೆ ಈ ವ್ಯವಸ್ಥೆಯ ವಿರುದ್ಧ ಅಸಮಾಧಾನಿತರಾಗಿದ್ದಾರೆ ಎನ್ನುವುದನ್ನು ಅರಿಯಬಹುದು.

ಆಡಳಿತ ಪಕ್ಷಗಳಿಗೆ ಹಾಗೂ ವ್ಯವಸ್ಥೆಯ ಭಾಗವಾಗಿರುವ ಅಧಿಕಾರಿಗಳಿಗೆ ಇದೊಂದು ಎಚ್ಚರಿಕೆಯ ಕರೆಗಂಟೆ ಅಂತ ಭಾವಿಸದಿದ್ದರೆ ಮುಂದಿನ ದಿನದಲ್ಲಿ ಇದರ ಪರಿಣಾಮ ಶ್ರೀಲಂಕಾ ನೇಪಾಳದಂತೆ ಹೋರಾಟವಾಗಬಹುದು ಎಂಬ ಮಾತುಗಳು ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿದೆ. ಈ ಒಂದು ಪ್ರಕರಣದಲ್ಲಿ ರಾಜಕೀಯ ಪಕ್ಷವಾಗಿರುವ ಬಿಜೆಪಿಯಷ್ಟೇ ಮುಖಭಂಗ ನ್ಯಾಯಮೂರ್ತಿಗಳಿಗೂ ಆಗುತ್ತಿರುವುದು ದುರ್ದೈವದ ವಿಚಾರ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಒಂದು ವಾಟ್ಸ್ಯಾಪ್ ಮೆಸೇಜ್… ಕೋರ್ಟ್ ವರೆಗೂ ಎಳೆದ ಶಾಕ್ ಘಟನೆಯ ಸುತ್ತ..
ನ್ಯಾಯಾಂಗಕ್ಕೆ ಕಳಂಕ ತರುವುದನ್ನು ನೋಡಿಯೂ ಕೈಕಟ್ಟಿ ಕೂರಲಾಗದು
ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್: ಬಿಸಿಲಿಗೆ ಎಚ್ಚರ!
ನಿಮ್ಮ ಮಾತು ಕೇಳಿ ರಾಜೀನಾಮೆ ನೀಡಿದ್ದೇನೆ. ಈಗ ನನ್ನ ಬೇಡಿಕೆ ಈಡೇರಿಸುವುದು ನಿಮ್ಮ ಸರದಿ  ಎಂದ ಸಿದ್ದರಾಮಯ್ಯ
ದಿಲ್ಲಿಯಲ್ಲಿ ವಾಗ್ದಾಳಿ.. ಗಲ್ಲಿಯಲ್ಲಿ ಒಪ್ಪಂದ?! ದೇಶದ ಅತ್ಯಂತ ಕಾಂಟ್ರವರ್ಸಿಯಲ್ ಬಿಡ್ ತೆರೆಮರೆಯಲ್ಲಿ ನಡೆದ ಆ ಒಂದು ನಡೆ ಕಾಂಗ್ರೆಸ್ ಸರ್ಕಾರಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದ್ದು ಯಾಕೆ?!
ಪ್ರಧಾನಿ ಮೋದಿ ನೆದರ್ಲ್ಯಾಂಡ್ ಭೇಟಿ ಭಾರತ ಸಹಕಾರದ ಸೇತುವೆ ಕಟ್ಟುವ ದ್ವಿಪಕ್ಷೀಯ ಸಂಬಂಧಗಳ ವಿಸ್ತರಣೆ…
ಧೂಮಪಾನ ಮಾಡುತ್ತಿದ್ದೀರಾ? ನಿಮ್ಮ ಮುಖ ನಿಧಾನವಾಗಿ ನಾಶವಾಗುತ್ತಿದೆ…
ನಾಟಕ ಕಲಾವಿದೆ ಸೌಮ್ಯ ಶೆಟ್ಟಿ ಬಂಧನ
ವಿವಾಹಿತ ದಂಪತಿಗಳಿಗೆ ಜಂಟಿ ITR ವ್ಯವಸ್ಥೆ ತರಲು- ಸಂಸತ್ತಿನಲ್ಲಿ Raghav Chadha ಆಗ್ರಹ.
📣3 ತಿಂಗಳಲ್ಲಿ LPG ಸಂಪರ್ಕ ರದ್ದು ??– PNGಗೆ ಬದಲಾವಣೆ ಕಡ್ಡಾಯ” ಈಗಲೇ ಸತ್ಯ ತಿಳಿದುಕೊಳ್ಳಿ..! ಗ್ಯಾಸ್ ಬಗ್ಗೆ ಗೊಂದಲಕ್ಕೆ ಸ್ಪಷ್ಟ ಉತ್ತರ ಇಲ್ಲಿದೆ.
ಡಾನ್ -3 ಸಿನಿಮಾ ಕಥೆ ಗೋವಿಂದ….!
ಸಂಸತ್ತಿನಲ್ಲಿ ಇತಿಹಾಸ ಸೃಷ್ಟಿಸುವ ಚರ್ಚೆ-ಮಹಿಳಾ ಮೀಸಲು ಬಿಲ್ಲಿನ ಸುತ್ತ ಕಂಗೊಳಿಸಿದ ಸಂಸತ್ !
ಬೆಳ್ತಂಗಡಿ ಸ್ನಾನಕ್ಕೆ ತೆರಳಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವು…
ಮಕ್ಕಳ ಕೈಯಿಂದ ಮೊಬೈಲ್ ಕಸಿಯಲು ಮುಂದಾದ ಬ್ರಿಟನ್!ಯುಕೆಯ ನಿರ್ಧಾರಕ್ಕೆ ವಿಶ್ವದ ಗಮನ…
ಕನಕಪುರ ಬಂಡೆ ಬಿಜೆಪಿಗೆ ಎಂಬ ಬೋಗಸ್ ಸುದ್ದಿ
ಫ್ರಿಡ್ಜ್ ರಿಪೇರಿಗೆ ಬಂದವ ಮನೆ ಲೂಟಿ ಪರಾರಿ…!ಬಿ ಅಲರ್ಟ್ ‼️
ಖಾಸಗಿ ಬಸ್ಸಿನಲ್ಲಿ ಮಹಿಳೆಯ ಮಂಗಳಸೂತ್ರ ಏಗರಿಸಿದ್ರಾ?
ಕನ್ನಡ ಫಿಲಂ ಇಂಡಸ್ಟ್ರಿ ಮರ್ಯಾದೆ “ಒಂದು ಬಾಟ್ಲು ಸಾರಾಯಿ, ಒಂದು ಚಮಚ ಉಪ್ಪಿನ ಕಾಯಿಗೆ”ಆನ್‌ಲೈನ್‌ನಲ್ಲಿ (Online) ಹರಾಜು..!
ಮಂಗಳೂರಿಗರಿಗೆ ಎಚ್ಚರಿಕೆ: ನೀರನ್ನು ಜಾಣ್ಮೆಯಿಂದ ಬಳಸಿ –ಮಾರ್ಚ್ ನಲ್ಲೇ ರೇಷನಿಂಗ್ ಮಾಡುವ ಪರಿಸ್ಥಿತಿ ಇದೆ…
ಕ್ರಿಕೆಟ್ pad gloves ಒಳಗೆ ಕೋಟಿ ಕೋಟಿ ಕೊಕೇನ್!
ಜಗಳ ನಿಲ್ಲಿಸಲು ಹೋದವನ ಜೀವ ಹರಣ: ಮಾನವೀಯತೆ ಕುಸಿದರೆ ಸಮಾಜದ ನೆಮ್ಮದಿ ಎಲ್ಲಿ?”
ಶಂಕರಾಚಾರ್ಯರ ಹೊಸ ಯೋಜನೆ ದೇಶವನ್ನೇ ಚರ್ಚೆಗೆ ತಳ್ಳಿದ ಕಾರಣ ಏನು?Go-LXಒಂದು ಕ್ಲಿಕ್‌ನಲ್ಲಿ ಹಸು ಮಾರಾಟ…
ಕಾಂಗ್ರೆಸ್ ಜನರ ವಿಶ್ವಾಸದಿಂದ ದಿನದಿಂದ ದಿನಕ್ಕೂ ದೂರ ಹೋಗುತ್ತಿರುವುದಕ್ಕೆ ಸಾಕ್ಷಿನೇ ಇದು
“ವಾಹನ ಮಾರಾಟ-RC ಬದಲಾವಣೆ  ಅಗತ್ಯ.. ಇಲ್ಲವಾದರೆ ಕಾನೂನು ಸಮಸ್ಯೆಗಳು ತಪ್ಪಿದ್ದಲ್ಲ..!” ಹೈಕೋರ್ಟ್
ಇ-ಸಿಗರೇಟ್‌ಗೆ ಭಾರಿ ಡಿಮ್ಯಾಂಡ್ – ಗೋಣಿ ಚೀಲದಲ್ಲಿಸಂಗ್ರಹಿಸಿಟ್ಟ ಆರೋಪಿ ಬಂಧನ..!
“ಅಪ್ಪಾ” ಎಂದು ಕರೆದವನ ಕೈಯಿಂದಲೇ 18 ತಿಂಗಳ ಕಂದಮ್ಮನ ದೇಹದ ಮೇಲೆ 91 ಗಾಯದ ಗುರುತು – ಅಮಾನುಷ ಹತ್ಯೆ!..
ಬೆಳ್ತಂಗಡಿಯಲ್ಲಿ ಮಧುಮಗ ಜೈಲಿಗೆ-ಅಪ್ರಾಪ್ತೆಯ ಮೇಲೆ ದೌರ್ಜನ್ಯ – ಇಬ್ಬರು ಆರೋಪಿಗಳ ಬಂಧನ..!
ಪ್ರಮೋದ್ ಮಧ್ವರಾಜ್ ಅವರಿಗೆ ಕೊನೆಗೂ ಸಿಕ್ಕಿತು ಗೌರವ
8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಭಾರತದ ಹಡಗಿಗೆ ಗ್ರೀನ್ ಸಿಗ್ನಲ್ ನೀಡಿದ ಇರಾನ್