📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಬಿಜೆಪಿಯನ್ನು ಹಿಂದಿಕ್ಕಿದ   ಜಿರಳೆ ಪಕ್ಷ..”ಕಾಕ್ರೋಚ್ ಜನತಾ ಪಾರ್ಟಿ”

    ಕೇವಲ ನಾಲ್ಕು ದಿನದ ಹಿಂದೆ ಪ್ರಾರಂಭವಾದ ಕಾಕ್ಕ್ರೋಚ್ ಜನತಾ ಪಾರ್ಟಿ ಎಂಬ ನೂತನ ಪಕ್ಷವು, ಕೇಂದ್ರದಲ್ಲಿ ಕಳೆದ 13 ವರ್ಷದಿಂದ ಅಧಿಕಾರ ನಡೆಸುತ್ತಿರುವ, ದೇಶದ ಅನೇಕ ರಾಜ್ಯಗಳನ್ನು ಗೆದ್ದುಕೊಂಡಿರುವ ಭಾರತೀಯ ಜನತಾ ಪಕ್ಷವನ್ನು ಮೀರಿ ಬೆಳೆದು ನಿಂತಿದೆ ಅಂದರೆ ನಂಬುತ್ತೀರಾ? ನೀವು ನಂಬಲೇಬೇಕು. 

    ಅಷ್ಟಕ್ಕೂ ಈ ಕಾಕ್ರೋಚ್ ಜನತಾ ಪಾರ್ಟಿ ಯಾರದ್ದು? ಇದು ಹುಟ್ಟಿದ್ದು ಏಕೆ? ಈ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ

    ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಅವರ ಒಂದು ಹೇಳಿಕೆ ವಿರುದ್ಧ ಶುರುವಾದ ಅಭಿಯಾನ, ಯಾವ ಮಟ್ಟಕ್ಕೆ ಬಂದು ನಿಂತಿದೆ ನೋಡಿ. ಇದು ಈಗ ವಿಶ್ವದಲ್ಲಿಯೇ ಅತಿ ದೊಡ್ಡ ಪಕ್ಷ ಎಂಬ ಬಿಗುತ್ತಿರುವ ಭಾರತೀಯ ಜನತಾ ಪಕ್ಷಕ್ಕೆ ಮುಜುಗರವನ್ನುಂಟು ಮಾಡುತ್ತಿದೆ. ಆ ಮಟ್ಟಕ್ಕೆ ಟ್ರೆಂಡ್ ಕ್ರಿಯೇಟ್ ಆಗಿದೆ. ಯುವ ಜನಾಂಗ, ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಯಾವ ಮಟ್ಟದಲ್ಲಿ ಹೋರಾಟ ಮಾಡಬಹುದು ಅನ್ನುವುದಕ್ಕೆ ಇದೂ ಒಂದು ಸಾಕ್ಷಿ ನೋಡಿ

    ವಕೀಲರೊಬ್ಬರು, ಹಿರಿಯ ವಕೀಲರಾಗಲು ಅರ್ಜಿ ಸಲ್ಲಿಸುತ್ತಾರೆ. ಆ ಅರ್ಜಿಯನ್ನು ಪರಿಶೀಲಿಸಿದ ನ್ಯಾಯಮೂರ್ತಿಗಳು, ಅರ್ಜಿಯ ಬಗ್ಗೆ ಕಮೆಂಟ್ ಮಾಡುತ್ತಾರೆ. ಕ್ರಮಬದ್ಧವಾಗಿ ಅರ್ಜಿ ಸಲ್ಲಿಸಿಲ್ಲ ಅಂತ ಪಕ್ಕಕ್ಕೆ ಅರ್ಜಿಯನ್ನು ಇಡುವ ಬದಲು, ಈ ಸಂದರ್ಭದಲ್ಲಿ ಅವರು ಮಾಡಿದ ಕಮೆಂಟ್ ವಿಚಾರ ಇವತ್ತು ಇಡೀ ದೇಶದಲ್ಲಿ ದೊಡ್ಡ ಸಂಚಲವನವನ್ನೇ ನಿರ್ಮಿಸುತ್ತಿದೆ.

    ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ರವರು, ಇವತ್ತಿನ ಕೆಲವು ಯುವಕರು ಸರಿಯಾದ ಉದ್ಯೋಗವನ್ನು ಸಂಪಾದಿಸಲಾಗದೆ, ತಾವೇ ಮಾಧ್ಯಮಗಳಾಗಿ ಬಿಡುತ್ತಾರೆ, ಸಾಮಾಜಿಕ ಮಾಧ್ಯಮದ ಹೀರೋಗಳಾಗಿ ಬಿಡುತ್ತಾರೆ. ಆರ್‌ಟಿಐ ಕಾರ್ಯಕರ್ತರಾಗಿಬಿಡುತ್ತಾರೆ. ಕಾಕ್ರೋಜತರ ಎಲ್ಲೆಂದರಲ್ಲಿ ಹರಿದಾಡುತ್ತಾರೆ ಅಂತ ಕಮೆಂಟ್ ಮಾಡಿದ್ದನ್ನು ವಕೀಲರೊಬ್ಬರು ತೀವ್ರವಾಗಿ ಆಕ್ಷೇಪಿಸಿದ್ದಾರೆ.  ಇದನ್ನು ನೋಡಿದ, ಮಹಾರಾಷ್ಟ್ರದ ನಾಗಪುರ ಪ್ರದೇಶದ 30 ವರ್ಷದ ಅಭಿಜಿತ್ ದೀಪ್ಕೆ ಎಂಬ ಯುವಕ, ತನ್ನ ಟ್ಯಾಲೆಂಟ್ ತೋರಿಸಿದ್ದಾನೆ ನೋಡಿ.

    ಮೊನ್ನೆ ಮೇ 16ರಂದು ಅಭಿಜಿತ್ ದೀಪ್ಗೆ, ಕಾಕ್ಕ್ರೋಜ್ ಜನತಾ ಪಾರ್ಟಿ ಎಂಬ ಹೆಸರಿನಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಅಕೌಂಟ್ ತೆರೆಯುತ್ತಾರೆ. ಅದು ಯಾವ ಮಟ್ಟಿಗೆ ದೇಶದಾದ್ಯಂತ  ವೈರಲಾಗುತ್ತಿದೆ ಎಂದರೆ, ಸ್ವತಹ ಆಡಳಿತ ಪಕ್ಷ ಬಿಜೆಪಿಯ ತತ್ತರಿಸಿ ಹೋಗುವಂತಿದೆ ಆ ಒಂದು ಪೇಜಿನಿಂದಾಗಿ.

    ಭಾರತೀಯ ಜನತಾ ಪಕ್ಷದ ಹಿಂಬಾಲಕರ ಸಂಖ್ಯೆ 8.8 ಮಿಲಿಯನ್ ಆಗಿದ್ದರೆ, ಕಾಕ್ರೋಚ್ ಜನತಾ ಪಾರ್ಟಿಯ ಹಿಂಬಾಲಕರ ಸಂಖ್ಯೆ 9.6 ಮಿಲಿಯನ್ ದಾಟಿದೆ. ಕೇವಲ ಆರು ದಿನದಲ್ಲಿ ಇಷ್ಟು ದೊಡ್ಡ ಸಂಖ್ಯೆಯ ಹಿಂಬಾಲಕರನ್ನು ಹೊಂದಿ, ವ್ಯವಸ್ಥೆಯನ್ನು ಅಣಕ ಮಾಡಲು ಪ್ರಾರಂಭ ಮಾಡಿದ್ದಾರೆ ಎಂದರೆ, ದೇಶದ ಯುವ ಜನಾಂಗ ಎಷ್ಟರಮಟ್ಟಿಗೆ ಈ ವ್ಯವಸ್ಥೆಯ ವಿರುದ್ಧ ಅಸಮಾಧಾನಿತರಾಗಿದ್ದಾರೆ ಎನ್ನುವುದನ್ನು ಅರಿಯಬಹುದು.

    ಆಡಳಿತ ಪಕ್ಷಗಳಿಗೆ ಹಾಗೂ ವ್ಯವಸ್ಥೆಯ ಭಾಗವಾಗಿರುವ ಅಧಿಕಾರಿಗಳಿಗೆ ಇದೊಂದು ಎಚ್ಚರಿಕೆಯ ಕರೆಗಂಟೆ ಅಂತ ಭಾವಿಸದಿದ್ದರೆ ಮುಂದಿನ ದಿನದಲ್ಲಿ ಇದರ ಪರಿಣಾಮ ಶ್ರೀಲಂಕಾ ನೇಪಾಳದಂತೆ ಹೋರಾಟವಾಗಬಹುದು ಎಂಬ ಮಾತುಗಳು ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿದೆ. ಈ ಒಂದು ಪ್ರಕರಣದಲ್ಲಿ ರಾಜಕೀಯ ಪಕ್ಷವಾಗಿರುವ ಬಿಜೆಪಿಯಷ್ಟೇ ಮುಖಭಂಗ ನ್ಯಾಯಮೂರ್ತಿಗಳಿಗೂ ಆಗುತ್ತಿರುವುದು ದುರ್ದೈವದ ವಿಚಾರ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಜೈಲಿನೊಳಗೆ ಮೊಬೈಲ್ ಮಾಫಿಯಾ: ಖತರ್ನಾಕ್ ಐಡಿಯಾ..!
    ಪತ್ರಿಕೋದ್ಯಮವೇ? ಪ್ರಚೋದನೆಯೇ? ಸುಳ್ಳು ಸುದ್ದಿಗೆ ಕೋಮು ಬಣ್ಣ ಆರೋಪದಲ್ಲಿ 7 ಮಾಧ್ಯಮಗಳ ವಿರುದ್ಧ FIR…!
    ಡೇಟಾದಲ್ಲಿ ಸತ್ತಿದ್ದಾರೆ: ಬಡ ಮಹಿಳೆ ತಾನು ಜೀವಂತ ಸಾಬೀತುಪಡಿಸಲು ಹರಸಾಹಸ…ಬಡಜನರು “ಡೇಟಾ” ಅಲ್ಲ — ಅವರು ಜೀವಂತ ಮಾನವರು. 
    ಮುಂಬೈನಲ್ಲಿ ಮಳೆ ರುದ್ರನರ್ತನ: ಕುರ್ಲಾದಲ್ಲಿ ಭೂಕುಸಿತ, ಇಬ್ಬರು ಬಲಿ!
    “ಕೃಷ್ಣ ಜೆ. ರಾವ್‌ ಡಿಎನ್ಎ ಸತ್ಯ ಬಯಲು — ಮಗುವಿಗೆ ನ್ಯಾಯ ಬೇಕು ಎಂದ ಹೈಕೋರ್ಟ್!”
    ಮತ್ತೆ ಹೊತ್ತಿ ಉರಿದ ಮಧ್ಯಪ್ರಾಚ್ಯ: ಇಸ್ರೇಲ್ ಪ್ರಧಾನಿ ನೆತನ್ಯಾಹು ಹೇಳಿಕೆ ಬೆನ್ನಲ್ಲೇ ಲೆಬನಾನ್ ಮತ್ತು ಗಾಜಾದಲ್ಲಿ ಹೆಚ್ಚಿದ ಭೀಕರ ಯುದ್ಧದ ತೀವ್ರತೆ.
    ಇಂದು ಮಾಜಿ ಸಚಿವರಿಂದ ಸೌಹಾರ್ದ ಇಫ್ತಾರ್ ಕೂಟ 
    ಕರ್ನಾಟಕದ ನಂದನ್ ನಿಲೇಕಣಿ ನೇತೃತ್ವದಲ್ಲಿ ಭಾರತದ ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ಮೋದಿ ಸರ್ಕಾರದ ಬಿಗ್ ಪ್ಲಾನ್!ಈಗ ರಾಷ್ಟ್ರೀಯ ಪರೀಕ್ಷೆಗಳಿಗೆ ಹೊಸ ರೂಪ ನಿಲೇಕಣಿ ಕೈಯಲ್ಲಿ!
    ದೇವರ ಮುಂದೆ ಸಾಲಿನಲ್ಲಿ ನಿಲ್ಲಲೇಬೇಕು! ಮಂತ್ರಿ ಇರಲಿ, ಸೆಲೆಬ್ರಿಟಿ ಇರಲಿ…ಅಧಿಕಾರ ಇರಲಿ, ಅಂತಸ್ತು ಇರಲಿ…”ವಿಐಪಿ ದರ್ಶನ”ಕ್ಕೆ ಹೈಕೋರ್ಟ್ ಕೊಟ್ಟ ಚಾವಟಿ ಏಟು!
    ಟೂರಿಸಂ ಡೆವಲಪ್‌ಮೆಂಟ್‌ಗೆ ಅಧಿಕಾರಿಗಳೇ ಮಾರಕ
    ಹುಬ್ಬಳ್ಳಿ ಲವ್ ಜಿಹಾದ್..!?ಮೂರು ವರ್ಷದ ಸಂಬಂಧ, friendship, ಫ್ಯಾಮಿಲಿ closeness-ಕ್ಷಣದಲ್ಲೇ ಬಾರಿ ಸಂಘರ್ಷ..!
    ಮೊಬೈಲ್ ನೋಡುತ್ತಿದ್ದ ಉಡುಪಿ ಡಿಸಿ ವಿರುದ್ಧ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಿಡಿ
    ಬಾವಿ ಮುಖ್ಯಮಂತ್ರಿ ಆಪ್ತನ ಭೀಕರ ಹತ್ಯೆ ಹಿಂದೆ ಯಾರು?
    ಗ್ರಾಹಕರ ಮಾತು ಕೇಳಿ, ₹900 ಕೋಟಿಯ ರೆಸ್ಟೋರೆಂಟ್ ಸಾಮ್ರಾಜ್ಯ ನಿರ್ಮಿಸಿದ ಉದ್ಯಮಿ..
    ದ.ಕ ಜಿಲ್ಲಾಡಳಿತದಿಂದ ಮಂಗಳಮುಖಿಯರಲ್ಲದವರಿಗೂ ಗುರುತಿನ ಚೀಟಿ ವಿತರಣೆ – ಗಂಭೀರ ಆರೋಪ
    ಉಡುಪಿಯ ಹಲವು ಉದ್ಯಮಿಗಳು ಹಾಗೂ ಪುಡಿ ರಾಜಕಾರಣಿಗಳ ಎದೆಯಲ್ಲಿ ಭಯ ಸೃಷ್ಟಿಸಿದ ಹನಿಟ್ರ್ಯಾಪ್, ವಂಚನೆ ಆರೋಪಿ ಜೀನತ್ ಬಂಧನ ….!
    ಸಾಮಾಜಿಕ‌ ಕಾರ್ಯಕರ್ತರಿಗೆ ಹಾಗೂ ನಗರ ಸಭೆ ಪೌರಯುಕ್ತರಿಗೆ ಬಹಿರಂಗ ಸವಾಲು.ಶ್ರೀಮಂತರ ಅಕ್ರಮಗಳ ಬಗ್ಗೆ ಮೌನವೇಕೆ.‌‌?
    ಎಲಾನ್ ಮಸ್ಕ್: ವಿಶ್ವದ ಮೊದಲ ಟ್ರಿಲಿಯನೇರ್‌ನಿಂದ ಇನ್ನೂ ಎತ್ತರದತ್ತ!
    “ವಕೀಲರೇ ಎಚ್ಚರ! ಕೋರ್ಟ್‌ನಲ್ಲಿ ನಕಲಿ AI ರೆಫರೆನ್ಸ್ ನೀಡಿದರೆ ಕಠಿಣ ಶಿಸ್ತು ಕ್ರಮ: BCIಗೆ ಸುಪ್ರೀಂ ಕೋರ್ಟ್ ಮಹತ್ವದ ನಿರ್ದೇಶನ”
    ಒಂದು ಕ್ಷಣದಲ್ಲಿ ನಗು, ಇನ್ನೊಂದು ಕ್ಷಣದಲ್ಲಿ ನಿಶ್ಶಬ್ದ ಕಣ್ಣೀರು…
    ಭರತ್ ತಿವಾರಿ ಎನ್‌ಕೌಂಟರ್ -ಬಿಹಾರ ಎಡಿಜಿಪಿಯಿಂದಲೇ ಪೊಲೀಸ್ ಲೋಪದ ಒಪ್ಪಿಗೆ: ಶಾಹಪುರ SHO ಸೇರಿ 5 ಅಧಿಕಾರಿಗಳು ಸಸ್ಪೆಂಡ್!
    ನಾಟಕ ಕಲಾವಿದೆ ಸೌಮ್ಯ ಶೆಟ್ಟಿ ಬಂಧನ
    ಬೀದಿ ನಾಯಿಗಳ ಹಾವಳಿ ಮಾನವ ಜೀವ ರಕ್ಷಣೆಗೆ ಮೊದಲ ಆದ್ಯತೆ — ಸುಪ್ರೀಂ ಕೋರ್ಟ್‌ನ ಕಠಿಣ ನಿಲುವು
    ಕ್ಲೀನ್ ಮಂಗಳೂರು ಕನಸು ನಿಮ್ಮದಾಗಿದ್ದರೆ ಇಲ್ಲಿದೆ ದಾರಿ…ಸ್ವಚ್ಛ ಮಂಗಳೂರು ಅಭಿಯಾನ: ನಾಗರಿಕರ ಕೈಗೆ ಸಿಕ್ಕಿತು ವಾಟ್ಸಾಪ್ ಅಸ್ತ್ರ….!
    ಜನಿವಾರಕ್ಕೆ ಕೈ ಹಾಕಿದವರು, ಪರ್ಮನೆಂಟ್ ಮನೆಗೆ ಹೋಗುವ ದಾರಿಯಲ್ಲಿ….
    ದರೆಗುಡ್ಡೆಯಲ್ಲಿ ಬಾರಿ ಅಗ್ನಿ ಅವಗಡ…!
    ಗುರುವಾಯನಕೆರೆ ಯ ಪ್ರತಿಷ್ಠಿತ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ
    ಉಡುಪಿ ಮಹಿಳೆಗೆ ಮುಂಬೈನಲ್ಲಿ ಕಂಬಿ! ₹3.10 ಕೋಟಿ ವಂಚನೆ ಉಡುಪಿ ಮೂಲದ ಮಹಿಳೆ ಅರೆಸ್ಟ್!
    ಹೆಣ್ಣು ಎಂಬ ಕನಿಕರ, ಸಿಗದ ಹಾಗೆ ಮಾಡಿದ ಮಾಯಾಂಗನೇ…
    ಒಂದೆಡೆ ‘ನಶಾ ಮುಕ್ತ ಯುವ ಭಾರತ’ ಅಭಿಯಾನ; ಮತ್ತೊಂದೆಡೆ ಪಬ್ ಸಂಸ್ಕೃತಿಯ ಸೆಳೆತ..! ಮಣಿಪಾಲದಲ್ಲಿ ಅಪ್ರಾಪ್ತರ ಮದ್ಯಪಾನ ಬಯಲು