📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಬಿಡದಿ ಟೌನ್‌ಶಿಪ್ ಯೋಜನೆ ಜಾರಿಗೆ ಸ್ಥಳೀಯ ರೈತರಿಂದಲೇ ಆಗ್ರಹ

    ಬೈರಮಂಗಲ, ಕಂಚುಗಾರನಹಳ್ಳಿಯಲ್ಲಿ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಲು ರೈತರ ಒತ್ತಾಯ

    ರಾಮನಗರ: ಬಿಡದಿ ಟೌನ್‌ಶಿಪ್ ಯೋಜನೆಯನ್ನು ಶೀಘ್ರ ಜಾರಿಗೊಳಿಸುವುದು ಹಾಗೂ ಬೈರಮಂಗಲ ಮತ್ತು ಕಂಚುಗಾರನಹಳ್ಳಿ ಗ್ರಾಮಗಳಲ್ಲಿ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಅಂತಿಮ ಅಧಿಸೂಚನೆ ಹೊರಡಿಸುವಂತೆ ಆಗ್ರಹಿಸಿ ಆಯಾ ಗ್ರಾಮಗಳ ರೈತರ ನಿಯೋಗವು  ಇಂದು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.

    ಕಳೆದ ಎರಡು ದಶಕಗಳಿಂದ ರೆಡ್‌ಜೋನ್‌ನಿಂದಾಗಿ ತೀವ್ರ ಸಂಕಷ್ಟ ಎದುರಿಸುತ್ತಿದ್ದೇವೆ ಎಂದು ರೈತರು ತಮ್ಮ ಅಳಲು ತೋಡಿಕೊಂಡಿದ್ದಾರೆ. ವೃಷಭಾವತಿ ಕೊಳಚೆ ನೀರಿನಿಂದ ಕೃಷಿ ಚಟುವಟಿಕೆಗಳಿಗೆ ತೀವ್ರ ತೊಂದರೆಯಾಗಿದ್ದು, ತೆಂಗಿನ ತೋಟಗಳು ಮೇಲ್ನೋಟಕ್ಕೆ ಹಸಿರಾಗಿ ಕಂಡರೂ ನಿರೀಕ್ಷಿತ ಇಳುವರಿ ದೊರೆಯುತ್ತಿಲ್ಲ ಎಂದು ರೈತರು ತಿಳಿಸಿದ್ದಾರೆ.

    ಕಲುಷಿತ ನೀರು ಹಾಗೂ ಪರಿಸರದ ಪರಿಣಾಮವಾಗಿ ಹಾಲಿನ ಗುಣಮಟ್ಟದ ಮೇಲೂ ಪರಿಣಾಮ ಬೀರುತ್ತಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ. ರೆಡ್‌ಜೋನ್ ನಿರ್ಬಂಧಗಳಿಂದಾಗಿ ಆಸ್ಪತ್ರೆ, ಕಲ್ಯಾಣಮಂಟಪ ಸೇರಿದಂತೆ ಅಗತ್ಯ ಮೂಲಸೌಕರ್ಯ ಹಾಗೂ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ದೂರಿದ್ದಾರೆ.

    ಪಕ್ಕದ ಗ್ರಾಮಗಳಲ್ಲಿನ ಜಮೀನುಗಳಿಗೆ ಬ್ಯಾಂಕ್‌ಗಳು ದೊಡ್ಡ ಮೊತ್ತದ ಸಾಲ ನೀಡುತ್ತಿದ್ದರೆ, ರೆಡ್‌ಜೋನ್ ವ್ಯಾಪ್ತಿಯಲ್ಲಿರುವ ತಮ್ಮ ಜಮೀನುಗಳಿಗೆ ಕನಿಷ್ಠ ಸಾಲವೂ ದೊರೆಯುತ್ತಿಲ್ಲ. ಇದರಿಂದ ಮದುವೆ, ವೈದ್ಯಕೀಯ ತುರ್ತು ಪರಿಸ್ಥಿತಿ ಸೇರಿದಂತೆ ಅಗತ್ಯ ಸಂದರ್ಭಗಳಲ್ಲಿಯೂ ಜಮೀನುಗಳನ್ನು ಬಳಸಿಕೊಂಡು ಆರ್ಥಿಕ ನೆರವು ಪಡೆಯಲು ಸಾಧ್ಯವಾಗುತ್ತಿಲ್ಲ ಎಂದು ರೈತರು ತಿಳಿಸಿದ್ದಾರೆ.

    “ಕಳೆದ 20 ವರ್ಷಗಳಿಂದ ರೆಡ್‌ಜೋನ್ ಸಮಸ್ಯೆಯಿಂದ ಸಂಕಷ್ಟ ಅನುಭವಿಸುತ್ತಿದ್ದೇವೆ. ನಮ್ಮ ಜಮೀನುಗಳ ಮೇಲೆ ಯಾವುದೇ ಅಭಿವೃದ್ಧಿ ಕಾರ್ಯ ನಡೆಸಲು ಸಾಧ್ಯವಾಗುತ್ತಿಲ್ಲ. ಸರ್ಕಾರ ನಮ್ಮ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ, ಬಿಡದಿ ಟೌನ್‌ಶಿಪ್ ಯೋಜನೆಯನ್ನು ಜಾರಿಗೊಳಿಸಬೇಕು” ಎಂದು ರೈತರು ಮನವಿ ಮಾಡಿದ್ದಾರೆ.

    ಬೈರಮಂಗಲ ಹಾಗೂ ಕಂಚುಗಾರನಹಳ್ಳಿ ಗ್ರಾಮಗಳ ಭೂಸ್ವಾಧೀನ ಪ್ರಕ್ರಿಯೆಗೆ ಅಂತಿಮ ಅಧಿಸೂಚನೆ ಹೊರಡಿಸಿ, ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ನಿಯೋಗ ಒತ್ತಾಯಿಸಿದೆ.

    ರೈತರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು, ಸಮಸ್ಯೆಯನ್ನು  ಶೀಘ್ರವಾಗಿ ಬಗೆಹರಿಸಿ ಅಗತ್ಯ ಕ್ರಮ ಕೈಗೊಳ್ಳಲು ಪ್ರಯತ್ನಿಸುವುದಾಗಿ ಆ ರೈತರ ನಿಯೋಗಕ್ಕೆ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಸಹೋದರಿಯ ಎಲುಬುಗಳೊಂದಿಗೆ ಬ್ಯಾಂಕ್ ಗೆ ಬಂದ ಅಣ್ಣ…!ದಾಖಲೆ ನಿಯಮಗಳ ನಡುವೆ ಸೋತ ಮಾನವೀಯತೆ”
    ಮಂಗಳೂರು ಶಾಕ್ ! ನೇತ್ರಾವತಿ ತೀರದ ನದಿಯಲ್ಲಿ ತೇಲಿ ಬಂದ ರಾಶಿ ರಾಶಿ ಆಧಾರ್ ಕಾರ್ಡ್‌ಗಳು !!!ಹೊಣೆ ಯಾರು?
    ಸೆಲೆಬ್ರಿಟಿಗಳು–ಇನ್‌ಫ್ಲುವೆನ್ಸರ್‌ಗಳಿಗೆ FSSAI ನೋಟಿಸ್ ….!ಹಣಕ್ಕಾಗಿ ಜಾಹೀರಾತು, ಜನರ ಆರೋಗ್ಯದ ಜೊತೆ ಆಟವೇ?
    ಪೆಟ್ರೋಲ್ ಡೀಸೆಲ್ ದರ ಏರಿಕೆ ತಡೆಯಲು ಕೇಂದ್ರದ ಮಹತ್ವದ ಕ್ರಮ 
    🎬 ಜೈಲರ್ 2 ಸೆಟ್‌ನಲ್ಲಿ ವಿದ್ಯುತ್ ಅವಘಡ…28 ವರ್ಷದ ಕಾರ್ತಿಕೇಯನ್ ವಿದ್ಯುತ್ ಶಾಕ್‌ಗೆ ಬಲಿ..
    ಏಳು ವರ್ಷದ ನಂತರ ಮಂಗಳೂರಿಗೆ “ಅಮ್ಮ” ಬರುತ್ತಿದ್ದಾರೆ…. 50ಸಾವಿರ ಜನರ ನಿರೀಕ್ಷೆ
    ಡಿಕೆಶಿ ಸೈಲೆಂಟ್ ಆಪರೇಷನ್ ಮಿಸ್ ಫೈರ್ ಆಗಿದ್ದೆಲ್ಲಿ?ರಾಷ್ಟ್ರ ರಾಜಧಾನಿಯಲ್ಲಿ ಕರ್ನಾಟಕ ಕಾಂಗ್ರೆಸ್ ಹೈ-ವೋಲ್ಟೇಜ್ ಹರಟೆ…!
    ಶಾಲೆಗಳ ಸುತ್ತ ಜಂಕ್ ಫುಡ್‌ಗೆ ಬ್ರೇಕ್: ಮಕ್ಕಳ ಆರೋಗ್ಯ ರಕ್ಷಣೆಗೆ FDA ಅಲರ್ಟ್!
    ಕರ್ನಾಟಕದಲ್ಲೇ ಮೊದಲು-ಕಿಚ್ಚ ಸುದೀಪ್ ಕೈಯಿಂದ ಗ್ರಾಂಡ್ ಓಪನಿಂಗ್!₹130 ಕೋಟಿ ವೆಚ್ಚದ ವಿಶ್ವದರ್ಜೆಯ ‘MR-Linac’ ತಂತ್ರಜ್ಞಾನ ಹೈಟೆಕ್ ಕ್ಯಾನ್ಸರ್ ಆಸ್ಪತ್ರೆ!
    ಬಿಡದಿ ಟೌನ್‌ಶಿಪ್‌ಗೆ ಮರುಜೀವ: ವಿಶ್ವದರ್ಜೆಯ ‘ಎಐ ಸಿಟಿ’ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ .. ಜನರನ್ನು ಉದ್ದೇಶಿಸಿ ಮಾತನಾಡಿದ ಸಿಎಂ
    ಬೆಳ್ಳಂಬೆಳಗ್ಗೆ ಸಿದ್ದರಾಮಯ್ಯ ಮನೆಗೆ ಡಿ.ಕೆ. ಶಿವಕುಮಾರ್ ಸರ್ಪ್ರೈಸ್ ವಿಸಿಟ್!
    ಮುದ್ದಾದ ಅವಳಿ ಹೆಣ್ಣು ಮಕ್ಕಳನ್ನು ಕತ್ತು ಸೀಳಿ ಕೊಂದ ಪಾಪಿ ಅಪ್ಪ
    ಯುಎಇಯಿಂದ ಯುರೋಪ್ ತನಕ ಮೋದಿ ಐತಿಹಾಸಿಕ ವಿದೇಶ ಪ್ರವಾಸ…ಡಿಪ್ಲೊಮಸಿ – ತೈಲದಿಂದ ತಂತ್ರಜ್ಞಾನವರೆಗೆ ಇದು ಭಾರತದ ಭವಿಷ್ಯದ ತಂತ್ರಾತ್ಮಕ ನಡೆ ?!
    🚨 ಸಾರ್ವಜನಿಕರಿಗೆ ತುರ್ತು ಎಚ್ಚರಿಕೆ – ಕಟಪಾಡಿ ರಾಷ್ಟ್ರೀಯ ಹೆದ್ದಾರಿ ಅಪಘಾತ
    ₹5ಕ್ಕೆ ಇಡ್ಲಿ… 56 ವರ್ಷಗಳಿಂದ ಅದೇ ರುಚಿ! 70ರ ಹರೆಯದಲ್ಲೂ ಪ್ರತಿದಿನ 1,500 ಇಡ್ಲಿ ಮಾಡಿ ಜನರ ಮನ ಗೆದ್ದ ಕರ್ನಾಟಕದ ಅನ್ನದಾತ…
    ದೇವಳದ ಗೋಲ್ಮಾಲ್ ತಡೆಗೆ ಉಪ-ಮುಖ್ಯಮಂತ್ರಿ ಬುಲಾವ್!
    ಅಯೋಧ್ಯೆಯಲ್ಲಿ ನ್ಯಾಯಕ್ಕಾಗಿ ವಕೀಲರ ಮೆರವಣಿಗೆ..ಭುಗಿಲೆದ್ದ ಪ್ರತಿಭಟನೆ..ಕಠಿಣ ಕ್ರಮಕ್ಕೆ ಆಗ್ರಹ
    ಆನ್ ಲೈನ್ ವಂಚನೆ ಶಿರ್ವದ ಯುವತಿಗೆ ಲಕ್ಷ ಲಕ್ಷ ಉಂಡೆನಾಮ… ಬ್ಯಾಂಕ್ ನಿಯಮ ವಂಚಕರಿಗೆ  ಸಹಕಾರಿ?
    ಸ್ಮಾರ್ಟ್ ಲಾಕ್ ಇದ್ದ ಸುರಕ್ಷಿತ ಮನೆಯಲ್ಲೇ ಯುವತಿಯ ರೇಪ್ ಅಂಡ್ ಮರ್ಡರ್…!ನಗರವನ್ನು ಬೆಚ್ಚಿಬೀಳಿಸಿದ ಘಟನೆ”
    ಹಲವು ಗಂಭೀರ ಅಪರಾಧ ಪ್ರಕರಣಗಳಲ್ಲಿ ಆರೋಪಿಯಾಗಿ ಕಳೆದ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಕೊನೆಗೂ ಪತ್ತೆ ಹಚ್ಚಲಾಗಿದೆ.
    ಮಸೀದಿ ಹುಂಡಿಗೂ ಲಗ್ಗೆ ಇಟ್ಟ ಕಳ್ಳರು….!
    5.5 ವರ್ಷದ ಹೆಣ್ಣುಮಗಳ ಕೊಲೆ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್!ಮಗು ಸತ್ತು 3 ತಿಂಗಳು…ಆದ್ರೆ FIR ಇಲ್ಲ! 3 ಪೊಲೀಸರು ಸಸ್ಪೆಂಡ್
    ದಾವೂದ್ ಇಬ್ರಾಹಿಂನ ಆಪ್ತ. ಸಲೀಂ ಡೋಲಾ ಬಂದನ ವಿದೇಶದಲ್ಲಿ ಅಡಗಿದ್ದರೂ ಕಾನೂನಿನಿಂದ ತಪ್ಪಿಸಿಕೊಳ್ಳಲಾಗಲಿಲ್ಲ
    ಬಾಲ್ಯದ ಗೆಳೆಯನ ಬಲೆಗೆ ಬಿದ್ದ ವಾಯುಸೇನೆ ಅಧಿಕಾರಿಯ ಪತ್ನಿ?! ಲೈಂಗಿಕ ಬ್ಲ್ಯಾಕ್‌ಮೇಲ್,’ಕಬೂಲ್ ಹೈ’ ಹೇಳುವಂತೆ ಒತ್ತಾಯ!
    ಮಂಗಳೂರು ಕುಕ್ಕರ್ ಬಾಂಬ್ ಪ್ರಕರಣಕ್ಕೆ ಅಂತಿಮ ತೀರ್ಪು – ಶಾರೀಕ್ ಗೆ 10 ವರ್ಷ ಜೈಲು..
    108 ಆರೋಗ್ಯ ಕವಚ'”ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ಇನ್ಮುಂದೆ ಆಂಬ್ಯುಲೆನ್ಸ್ ನಿಮ್ಮ ಮನೆಬಾಗಿಲಿಗೆ! 
    ನ್ಯಾಯಾಂಗಕ್ಕೆ ಕಳಂಕ ತರುವುದನ್ನು ನೋಡಿಯೂ ಕೈಕಟ್ಟಿ ಕೂರಲಾಗದು
    “ಫುಟ್‌ಪಾತ್ ಯಾರದ್ದು? ಪಾದಚಾರಿಗಳ ಹಕ್ಕೋ, ಹೊಟ್ಟೆಪಾಡಿನ ಹೋರಾಟವೋ?”
    ಸದ್ಯದಲ್ಲೇ ಬರುತ್ತೆ ತಣ್ಣೀರ್ಬಾವಿ ಬೀಚ್‌ಗೆ shortcut ಮಾರ್ಗ!30 ನಿಮಿಷ ಕಡಿಮೆ ಪ್ರಯಾಣ..!
    ಚಿಕ್ಕಸ್ವಾಮಿ-ದೊಡ್ಡಸ್ವಾಮಿ ಭಕ್ತರ ಮಿಲನ! ಕಾಶಿಮಠ ವಿವಾದಕ್ಕೆ ಸಂಯಮೇ೦ದ್ರ ಮದ್ದು