📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಬಿಡದಿ “ಸಮಗ್ರ ಉಪನಗರ” ಯೋಜನೆ ಕೈಬಿಡಿ: ಸಿಎಂ ಡಿಕೆ ಶಿಗೆ ಎಚ್.ಡಿ. ದೇವೇಗೌಡ ಪತ್ರ

    ಬೆಂಗಳೂರು: ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಪ್ರಸ್ತಾವಿಸಿರುವ ಬಿಡದಿ ಸಮಗ್ರ ಉಪನಗರ ಯೋಜನೆಯನ್ನು ಕೂಡಲೇ ಕೈಬಿಡುವಂತೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

    ಈ ಕುರಿತು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ದೇವೇಗೌಡರು, ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲ್ಲೂಕಿನ ಬಿಡದಿ ಹೋಬಳಿಯ 8 ಗ್ರಾಮಗಳು ಹಾಗೂ ಹಾರೋಹಳ್ಳಿ ತಾಲ್ಲೂಕಿನ 1 ಗ್ರಾಮ ಸೇರಿ ಒಟ್ಟು 7,481 ಎಕರೆ 21.08 ಗುಂಟೆ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಕ್ರಮಕ್ಕೆ ಸ್ಥಳೀಯ ರೈತರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ ಎಂದು ತಿಳಿಸಿದ್ದಾರೆ. ರೈತರು ನಿರಂತರವಾಗಿ ಹೋರಾಟ ನಡೆಸುತ್ತಿರುವುದಾಗಿಯೂ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

    “ಹೊಸ ಯೋಜನೆಗೆ ಅವಶ್ಯಕತೆ ಇಲ್ಲ”

    ರಾಜ್ಯ ಸರ್ಕಾರ ಈಗಾಗಲೇ ಶಿವರಾಮ ಕಾರಂತ ಲೇಔಟ್ ಮತ್ತು ನಾಡಪ್ರಭು ಕೆಂಪೇಗೌಡ ಲೇಔಟ್ಗಳಲ್ಲಿ ಸಾವಿರಾರು ನಿವೇಶನಗಳನ್ನು ಹಂಚಿಕೆ ಮಾಡದೆ ಉಳಿಸಿಕೊಂಡಿದೆ. ಜೊತೆಗೆ ಬೆಂಗಳೂರು ಬಿಸಿನೆಸ್ ಕಾರಿಡಾರ್-2 (PRR-2) ವ್ಯಾಪ್ತಿಯಲ್ಲಿ ಹಲವು ಬಡಾವಣೆಗಳ ನಿರ್ಮಾಣ ಯೋಜನೆಗಳು ಪ್ರಗತಿಯಲ್ಲಿವೆ. ಈ ಹಿನ್ನೆಲೆಯಲ್ಲಿ ಹೊಸದಾಗಿ ಉಪನಗರ ಯೋಜನೆ ರೂಪಿಸುವ ಅಗತ್ಯವೇ ಇಲ್ಲ ಎಂದು ದೇವೇಗೌಡರು ಅಭಿಪ್ರಾಯಪಟ್ಟಿದ್ದಾರೆ.

    ರೈತರ ಜೀವನೋಪಾಯಕ್ಕೆ ಹೊಡೆತ

    ಬಿಡದಿ ಮತ್ತು ಹಾರೋಹಳ್ಳಿ ಪ್ರದೇಶಗಳಲ್ಲಿ ಈಗಾಗಲೇ KIADB ಕೈಗಾರಿಕಾ ಅಭಿವೃದ್ಧಿಗಾಗಿ ಸಾವಿರಾರು ಎಕರೆ ಕೃಷಿ ಭೂಮಿಯನ್ನು ವಶಪಡಿಸಿಕೊಂಡಿದೆ. ಇದರಿಂದ ಸ್ಥಳೀಯ ರೈತರ ಜೀವನೋಪಾಯಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಮತ್ತೆ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡರೆ ರೈತರ ಬದುಕು ಸಂಪೂರ್ಣವಾಗಿ ಅಸ್ತವ್ಯಸ್ತವಾಗುತ್ತದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

    ರೈತರ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಬಿಡದಿ ಸಮಗ್ರ ಉಪನಗರ ಯೋಜನೆಯನ್ನು ಮರುಪರಿಶೀಲಿಸಿ ಕೈಬಿಡಬೇಕು ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರಿಗೆ ಪತ್ರವನ್ನು ಬರೆಯುವ ಮೂಲಕ ಸರ್ಕಾರವನ್ನು ಆಗ್ರಹಿಸಿದ್ದಾರೆ.


    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ನಾಲ್ಕು ವರ್ಷದ ಬಾಲಕಿ  ಅಪಹರಿಸಿ, ಲೈಂಗಿಕ ದೌರ್ಜನ್ಯ ನಡೆಸಿ ಕೊಲೆಗೈದ ಆರೋಪಿಯನ್ನು ಎನ್ಕೌಂಟರ್ ಮಾಡಿದ ಪೊಲೀಸರು
    ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಹಿಗ್ಗಾಮುಗ್ಗ ಜಾಡಿಸಿದ ಹೆಚ್ ವಿಶ್ವನಾಥ್
    ಶಾಲೆ ಹತ್ತಿರವಿದ್ದರೂ,ಮಕ್ಕಳ ಹೆಲ್ಮೆಟ್ ನಿರ್ಲಕ್ಷಿಸಬೇಡಿ!4 ವರ್ಷದೊಳಗಿನ ಮಗುಗೂ ಹೆಲ್ಮೆಟ್ ಕಡ್ಡಾಯ!
    ಹನಿಟ್ರ್ಯಾಪ್ ಕ್ವೀನ್ ಜೀನತ್ ಇಬ್ರಾಹಿಂ ಗೆ ನ್ಯಾಯಾಂಗ ಬಂಧನ- ಟ್ರ್ಯಾಪ್ ನಲ್ಲಿ ಹೊಸ ಹೊಸ ಹೆಸರುಗಳು !!!?
    ಮೊಬೈಲ್ ನೋಡುತ್ತಿದ್ದ ಉಡುಪಿ ಡಿಸಿ ವಿರುದ್ಧ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಿಡಿ
    ಜೈನ ಸನ್ಯಾಸ ದೀಕ್ಷೆ ನಿಯಮಗಳು ಏನು ಗೊತ್ತಾ?
    ಇಂದು ಮಾಜಿ ಸಚಿವರಿಂದ ಸೌಹಾರ್ದ ಇಫ್ತಾರ್ ಕೂಟ 
    ತಪ್ಪುಅರ್ಥಕ್ಕೆಕ್ಷಮೆ, ಹೊಸರೂಪದಲ್ಲಿಮತ್ತೆ ‘ಸರ್ಸೆಸೆರಗು’”-ಪ್ರೇಮ್
    ಕರ್ನಾಟಕದಲ್ಲಿ ಯುಗಾದಿ ಹಬ್ಬಕ್ಕೂ ಮುನ್ನವೇ  ಮುಂಗಾರು  ಮಳೆರಂಗು – 5 ಜಿಲ್ಲೆಗಳಲ್ಲಿ ಆಲಿಕಲ್ಲು ಅಬ್ಬರ!
    ತುರ್ತು ಎಚ್ಚರಿಕೆ ‼️ಹಿಪ್ನೋಟೈಸಿಂಗ್ ಸ್ವಾಮಿಗಳು ನಿಮ್ಮ ಬಳಿಯೂ ಬರಬಹುದು
    E20 ಪೆಟ್ರೋಲ್‌ನಿಂದ ಮರ್ಸಿಡಿಸ್ ಕಾರಿನ ಮೈಲೇಜ್ ಕುಸಿತವೇ? ವೈರಲ್ ವಿಡಿಯೋ ಬಳಿಕ ಕಂಪನಿಯ ಸ್ಪಷ್ಟನೆ; ನಿಜ ಏನು?
    ಭಾರತದಲ್ಲಿ ಮೋದಿ-ಜಸ್ಸಿ ಹೈ-ಲೆವೆಲ್ ಮೀಟಿಂಗ್ – ಅಮೆಜಾನ್ ಬರೋಬ್ಬರಿ $48 ಬಿಲಿಯನ್ ಹೂಡಿಕೆಗೆ ಆಂಡಿ ಜಸ್ಸಿ ಮುದ್ರೆ!
    ಹಿಂದೂ ಬುಡಕಟ್ಟು ಸಮಾಜದ ರುದ್ರಾಕ್ಷಿ ಸುಂದರಿ ಮುಸ್ಲಿಂ ಹುಡುಗನ ಮದುವೆಯಾದ್ಲು
    ಆಡುತ್ತಾ ಆಡುತ್ತಲೇ ಜೀವ ಬಿಟ್ಟ ಫಿಟ್ ಆಗಿದ್ದ ಯುವಕ್ರಿಕೆಟಿಗ… ನೀರು ಕುಡಿದ ತಕ್ಷಣವೇ ಕುಸಿದು ಬಿದ್ದ ರಣಜಿ ಆಟಗಾರ… 
    ಕರ್ನಾಟಕದಲ್ಲಿ AI ಆವಿಷ್ಕಾರಕ್ಕೆ ಹೊಸ ಹೆಜ್ಜೆ: ಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾದ Anthropic ತಂಡ
    Golden Hour ಉಳಿಸುವತ್ತ ಗ್ರಾಮದಿಂದ ನಗರವರೆಗೆ – ಕರ್ನಾಟಕ ಹೆಲ್ತ್ ಸಿಸ್ಟಮ್ ಮಹತ್ವದ ಹೆಜ್ಜೆ
    ಮಹಿಳೆಯ ಸ್ಕೂಟಿಯನ್ನೇ ಕದ್ದ ಕಳ್ಳರು….. ಹೆಚ್ಚುತ್ತಿರುವ ವಾಹನ ಕಳ್ಳತನ
    ಅಮ್ಮಾ, ನನ್ನನ್ನು ಕ್ಷಮಿಸು’ ಎಂದು ಡೆತ್‌ನೋಟ್ ಬರೆದು ಯುವಕ ಆತ್ಮಹತ್ಯೆ
    ಹೆಚ್.ಪಿ.ವಿ. ಚುಚ್ಚು ಮದ್ದಿನ ಬಗ್ಗೆ ಗೊಂದಲ ಬೇಡ: ಜಿಲ್ಲಾ ಆರೋಗ್ಯಾಧಿಕಾರಿ ಸ್ಪಷ್ಟನೆ
    ಭೀಕರ ಅಪಘಾತಕ್ಕೆ ಸ್ಥಳೀಯ ನಾಯಕ ಸೇರಿ ಇಬ್ಬರು ದುರ್ಮರಣ 
    ಮಕ್ಕಳಿಗೆ ಪ್ರಕೃತಿ ಮತ್ತು ಸಕಲ ಜೀವಿಗಳನ್ನು ಪ್ರೀತಿಸುವುದನ್ನು ಕಲಿಸಿ
    “ಅಪ್ಪಾ” ಎಂದು ಕರೆದವನ ಕೈಯಿಂದಲೇ 18 ತಿಂಗಳ ಕಂದಮ್ಮನ ದೇಹದ ಮೇಲೆ 91 ಗಾಯದ ಗುರುತು – ಅಮಾನುಷ ಹತ್ಯೆ!..
    ಭಾರತೀಯ ಸೇನೆಯ ನೆರವಿಗೆ ಡ್ರೋನ್ ನರ್ಸಿಂಗ್ ಹೋಮ್! ದುರ್ಗಮ ಪ್ರದೇಶಗಳಲ್ಲೂ ಸಿಗಲಿದೆ ಅತ್ಯಾಧುನಿಕ ವೈದ್ಯಕೀಯ ಚಿಕಿತ್ಸೆ
    ನದಿಯಲ್ಲ ರಸ್ತೆ..!ಕೈಕಂಬದ ಕಂದಾವರದ ಈ ರಸ್ತೆ ಕೆರೆಯಾಗಿ ನೀರಿನಲ್ಲಿ ಮುಳುಗಿದೆ!ಶಾಲಾ ಮಕ್ಕಳಿಂದ ವೃದ್ಧರವರೆಗೆ ಎಲ್ಲರಿಗೂ ಜೀವಭಯ!
    ಗ್ರಾಮೀಣ ಅಭಿವೃದ್ಧಿಯಲ್ಲಿ ಉಡುಪಿ ನಂ.1: ಐದು ಪಂಚಾಯಿತಿಗಳಿಗೆ ರಾಷ್ಟ್ರ ಗೌರವ-ಉಡುಪಿ ಬರೆದ ಸುವರ್ಣ ಇತಿಹಾಸ!
    ಬ್ಯಾಂಕುಗಳ ಮೇಲೆ ಭೀಕರ ದಾಳಿಯ ಮುನ್ಸೂಚನೆ ನೀಡಿದ ಇರಾನ್- ಮಿನಿಮಮ್ 1000 ಮೀಟರ್ ದೂರವಿರಿ
    🚢 “ಹಾರ್ಮುಝ್‌ನಿಂದ ಮಂಗಳೂರುವರೆಗೆ – 46,000 MT ಎಲ್‌ಪಿಜಿ ಯಮಹಾಯಾತ್ರೆ!
    ವೃಷಣಗಳಿಗೆ ₹6 ಕೋಟಿ? ನಾ ರೀಲ್ ನಂಬಿ  16ರ ಬಾಲಕ ಹತ್ಯೆ!ಇದು ₹6 ಕೋಟಿ ಆಸೆಗೆ ನಡೆದ ಭೀಕರ ಕೃತ್ಯ…!
    ಚಿನ್ನ ಖರೀದಿಸುವ ಕಾಲ ಹೋಯ್ತಾ? ಗಗನಕ್ಕೇರಿದ ದರ ಕೇಳಿ ಬೆಚ್ಚಿಬಿದ್ದ ಜನ!ಒಂದೂವರೆ ಲಕ್ಷ ರೂಪಾಯಿ ಗಡಿದಾಟಿತಾ …?ಬೆಳ್ಳಿಎರಡೇ ದಿನದಲ್ಲಿ ಆರು ಸಾವಿರ ಏರಿಕೆ
    ಕಳುವಾದ ವಾಹನ ಸಮೇತ ಕಳ್ಳರ ಬಂಧನ…!