📍 Karavali Maruta
  • LOGIN
  • BREAKING
    ‘ಮೇಡ್ ಇನ್ ಮಂಗಳೂರು’ ಹಡಗು ಜರ್ಮನ್ ಸಂಸ್ಥೆಯ ತೆಕ್ಕೆಗೆ; ವಿಶ್ವದ ಗಮನ ಸೆಳೆದ ಚೌಗುಲೆ ಶಿಪ್‌ಯಾರ್ಡ್! ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಬೀಡಿ, ಗೋಡಂಬಿ ಮತ್ತು ಸ್ಕೀಮ್ ಕಾರ್ಮಿಕರಿಗೆ ಕನಿಷ್ಠ ಕೂಲಿ ನೀಡಿ: ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ.

    ಮಂಗಳೂರಿನಲ್ಲಿ ನಡೆದ CITU ನೇತೃತ್ವದ ಜಿಲ್ಲಾಧಿಕಾರಿಗಳ ಕಚೇರಿ ಚಲೋ ಪ್ರತಿಭಟನೆ ವೈಜ್ಞಾನಿಕ ಕನಿಷ್ಠ ಕೂಲಿಗಾಗಿ ಮಂಗಳೂರಿನಲ್ಲಿ ಕಾರ್ಮಿಕರ ಬೃಹತ್ ಪ್ರತಿಭಟನೆ

    ಮಂಗಳೂರು: ವೈಜ್ಞಾನಿಕ ಕನಿಷ್ಠ ಕೂಲಿ ಜಾರಿ, ಕಾರ್ಮಿಕ ಕಾನೂನುಗಳ ರಕ್ಷಣೆ ಹಾಗೂ ಬೀಡಿ, ಗೋಡಂಬಿ, ಸ್ಕೀಮ್ ಕಾರ್ಮಿಕರನ್ನು ಕನಿಷ್ಠ ಕೂಲಿ ವ್ಯಾಪ್ತಿಗೆ ಸೇರಿಸಲು ಒತ್ತಾಯಿಸಿ CITU ಕರೆ ನೀಡಿದ್ದ ‘ಜಿಲ್ಲಾಧಿಕಾರಿಗಳ ಕಚೇರಿ ಚಲೋ’ ಅಂಗವಾಗಿ ಮಂಗಳೂರಿನ ನಾಗುರಿ ಜಂಕ್ಷನ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.

    ಪ್ರಮುಖ ಒತ್ತಾಯಗಳು ಮತ್ತು ಆಕ್ರೋಶ:

    • ಏಕರೂಪದ ವೇತನಕ್ಕೆ ವಿರೋಧ: ಮೇ 22ರಂದು ರಾಜ್ಯ ಸರ್ಕಾರ ಪ್ರಕಟಿಸಿದ ಕನಿಷ್ಠ ವೇತನ ಪರಿಷ್ಕರಣೆಯಲ್ಲಿ ಪ್ರತೀ ಉದ್ದಿಮೆಗೆ ಪ್ರತ್ಯೇಕ ವೇತನ ನಿಗದಿಪಡಿಸದೆ, ಏಕರೂಪವಾಗಿ ಮಾಡಿರುವುದನ್ನು CITU ಜಿಲ್ಲಾಧ್ಯಕ್ಷ ಬಿ. ಎಂ. ಭಟ್ ಖಂಡಿಸಿದರು. ಹೈಕೋರ್ಟ್ ನಿರ್ದೇಶನ ಹಾಗೂ ಸುಪ್ರೀಂ ಕೋರ್ಟ್‌ನ ‘ರೆಪ್ತಕೋಸ್’ ತೀರ್ಪಿನ ಮಾನದಂಡಗಳನ್ನು ಸರ್ಕಾರ ಸಂಪೂರ್ಣ ನಿರ್ಲಕ್ಷಿಸಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
    • ಕೇಂದ್ರದ ಕಾರ್ಮಿಕ ವಿರೋಧಿ ನೀತಿ: ದೇಶದ ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿ ಕಾರ್ಪೊರೇಟ್ ಪರವಾಗಿ ‘ಸಂಹಿತೆ’ಗಳನ್ನು ರೂಪಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಟೀಕಿಸಿದರು.
    • ಕಾರ್ಮಿಕರ ಹೊರಗಿಡುವಿಕೆ: ಬೀಡಿ, ಗಾರ್ಮೆಂಟ್ಸ್, ಬಿಸಿಯೂಟ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಸೇರಿದಂತೆ 19 ವಿಭಾಗಗಳನ್ನು ಕನಿಷ್ಠ ಕೂಲಿ ವ್ಯಾಪ್ತಿಯಿಂದ ಹೊರಗಿಟ್ಟಿರುವುದನ್ನು ಹಿರಿಯ ನಾಯಕ ವಸಂತ ಆಚಾರಿ ಖಂಡಿಸಿದರು.

    ಜಿಲ್ಲಾಧಿಕಾರಿಗಳ ಕ್ರಮಕ್ಕೆ ಖಂಡನೆ: ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸದಂತೆ ಫಾರ್ಮಾನು ಹೊರಡಿಸಿರುವ ಜಿಲ್ಲಾಧಿಕಾರಿಗಳ ಧೋರಣೆಯನ್ನು ಮತ್ತು ಜನಸಾಮಾನ್ಯರ ಹೋರಾಟ ಹತ್ತಿಕ್ಕುವ ಆಳುವ ವರ್ಗದ ಹುನ್ನಾರವನ್ನು ಮುಖಂಡರಾದ ಜೆ. ಬಾಲಕೃಷ್ಣ ಶೆಟ್ಟಿ, ಸುಕುಮಾರ್ ತೊಕ್ಕೋಟು ಸೇರಿದಂತೆ ಇತರ ನಾಯಕರು ತೀವ್ರವಾಗಿ ಖಂಡಿಸಿದರು.

    ಬಂಧನ ಮತ್ತು ಮನವಿ ಸಲ್ಲಿಕೆ:

    ಪ್ರತಿಭಟನೆ ಮುಗಿಸಿ ಜಿಲ್ಲಾಧಿಕಾರಿಗಳ ಕಚೇರಿಯತ್ತ ಮುನ್ನುಗ್ಗಲು ಯತ್ನಿಸಿದ 300ಕ್ಕೂ ಹೆಚ್ಚು ಕಾರ್ಮಿಕರನ್ನು ಪೊಲೀಸರು ತಡೆದು, ಪ್ರಮುಖ ನಾಯಕರನ್ನು ಬಂಧಿಸಿ ನಂತರ ಬಿಡುಗಡೆ ಮಾಡಿದರು. ಬಳಿಕ CITU ಉನ್ನತ ಮಟ್ಟದ ನಿಯೋಗವು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.

    ಈ ಹೋರಾಟಕ್ಕೆ ರೈತ ಸಂಘಟನೆಗಳು, DYFI ಮತ್ತು SFI ನಾಯಕರು ಹಾಗೂ ನೂರಾರು ಕಾರ್ಮಿಕ ಮುಖಂಡರು ಬೆಂಬಲ ಸೂಚಿಸಿ ಭಾಗವಹಿಸಿದ್ದರು.

    ##Mangaluru #CITUProtest #LabourRights #MinimumWage #DCChalo #WorkersProtest #KarnatakaLabour #DakshinaKannada

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    “ಮಾರಿಕೊಂಡ ಮಾಧ್ಯಮದವರು ಯಾರು?” ಪ್ರಶ್ನೆಗೆ ಪ್ರಕಾಶ್ ರಾಜ್ ನಿರುತ್ತರ”ಪತ್ರಿಕಾಗೋಷ್ಠಿಯಲ್ಲೇ ಶುರುವಾದ ಭಾರೀ ವಿವಾದ ಏನು?
    ‘ಗಾರ್ಡನ್ ಸಿಟಿ’ ಈಗ ‘ಹಾಟ್ ಸಿಟಿ’!ದಾಖಲೆ ಮಟ್ಟಕ್ಕೆ ಏರಿದ ಬಿಸಿ…
    ಬೇಕಾದಾಗ, ಬೇಕಾದಂಗೆ ಸಂವಿಧಾನದ ಜಪ
    ರಾಮ ಮಂದಿರ ಟ್ರಸ್ಟ್‌ಗೆ ಸರ್ಕಾರದ ನಿಯಂತ್ರಣವೇ ಇಲ್ಲ! ಆರ್‌ಟಿಐಗೂ ಬಾಧ್ಯತೆ ಇಲ್ಲ ಎಂದ ಸಿಐಸಿ
    ಬೆಳ್ತಂಗಡಿಯಲ್ಲಿ ಮಧುಮಗ ಜೈಲಿಗೆ-ಅಪ್ರಾಪ್ತೆಯ ಮೇಲೆ ದೌರ್ಜನ್ಯ – ಇಬ್ಬರು ಆರೋಪಿಗಳ ಬಂಧನ..!
    ದೆಹಲಿ ಭಾರೀ ದುರಂತದಿಂದ ಪಾರು!: ಏರ್ ಇಂಡಿಯಾ ವಿಮಾನಗಳು ಜಖಂಗೊಂಡರೂ ತಪ್ಪಿದ ಪ್ರಾಣಾಪಾಯ!
    ತಿರುಪತಿಯಲ್ಲಿ ಒಂದಿಡೀ ಕುಟುಂಬವೇ ನಾಶ!
    ಸುಮಂತ್ ನಿಗೂಢ ಸಾವು ಪ್ರಕರಣ: ತನಿಖೆಗೆ ಹೊಸ ತಿರುವು—ಕುಟುಂಬಸ್ಥರ ಬ್ರೈನ್ ಮ್ಯಾಪಿಂಗ್, ಮಂಪರು ಪರೀಕ್ಷೆ!
    “ವಾಹನ ಮಾರಾಟ-RC ಬದಲಾವಣೆ  ಅಗತ್ಯ.. ಇಲ್ಲವಾದರೆ ಕಾನೂನು ಸಮಸ್ಯೆಗಳು ತಪ್ಪಿದ್ದಲ್ಲ..!” ಹೈಕೋರ್ಟ್
    ಉಡುಪಿಯಲ್ಲಿ  ಬೆಟ್ಟಿಂಗ್ ಮಾಫಿಯಾದ ಚಟುವಟಿಕೆಯನ್ನು ಡೆತ್ ನೋಟ್ ರಿವಿಲ್ ಮಾಡಿತೇ?
    ಕೊನೆಗೂ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ನಿತೀಶ್ ಕುಮಾರ್
    ಕಾಪು ಮಹಿಳೆ ಹತ್ಯೆ – ಇಬ್ಬರು ಪೊಲೀಸ್ ವಶಕ್ಕೆ
    ಪಹಲ್ಗಾಂಮ್ ದಾಳಿಯ ಒಂದು ವರ್ಷ: ಇನ್ನೂ ಮುಗಿಯದ ನೋವು, ಮರೆಯಲಾಗದ ನೆನಪುಗಳು
    ಸಚಿವ ಜಮೀರ್ ಅಹಮದ್ ಹಚ್ಚಿದ ಪಟಾಕಿಗೆ ಕಾಂಗ್ರೆಸ್ ಕೋಟೆಯಲ್ಲಿ ಬಿರುಕು..!?
    ಟ್ರಂಪ್-“Strait of Hormuz ತಕ್ಷಣ ತೆರೆಯಿರಿ…! “ ಇರಾನ್-“ಕೀ ಗಳನ್ನು ಕಳೆದುಕೊಂಡಿದ್ದೇವೆ…!”
    ಜಾತಿ ನಿಂದನೆಗೆ ಕೋರ್ಟ್ ಹಾಕಿದ ಕಾನೂನು ಸ್ಪಷ್ಟತೆ!?
    ಅಲ್ಪಸಂಖ್ಯಾತರ ಘಟಕ ಬರ್ಕಾಸ್ತು- ಡಿಕೆ ಶಿವಕುಮಾರ್ ಗಟ್ಟಿ ನಿರ್ಧಾರ.
    17ನೇ ಆಯವ್ಯಯ ಮಂಡನೆ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ
    ಪೊರಕೆ ಹಿಡಿದ ಕೈಯಲ್ಲಿ ಫಾರ್ಚೂನರ್ ಕನಸು! SI ಬೆಳ್ಳಿಯಪ್ಪ ,ಸೇಸಪ್ಪನ ಬದುಕಿಗೆ ಹೊಸ ತಿರುವು….?!!!
    ಹೆಸರು ಬದಲಾವಣೆ ಪಶ್ಚಿಮ ಬಂಗಾಳ ಪೆಂಡಿಂಗ್, ಕೇರಳ ಪ್ರಗತಿಯಲ್ಲಿ
    79% ಹಾಲು ಅಶುದ್ಧ! ಹಾಲಿನ ಮಾಫಿಯಾಗೆ ಸಿಂಹಸ್ವಪ್ನವಾದ ಐಎಎಸ್ ತುಕಾರಾಂ ಮುಂಧೆ…350 ಬಂಧನ, 360 ದಾಳಿ!
    30 ವರ್ಷದ ಕನಸು ಸಾಕಾರ: ಮಾಣಿಲ–ಪೆರ್ಲ ಸಂಪರ್ಕಕ್ಕೆ ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್!
    ಇಬ್ಬರು ಮಕ್ಕಳ ಕಣ್ಣೆದುರೇ ಪತ್ನಿಯನ್ನು ಸುಮಾರು 20 ಬಾರಿ ಚಾಕುವಿನಿಂದ ಇರಿದು ಕೊಂದ ಪತಿ – ಕಾರಣ ಮೊಬೈಲ್‌ನಲ್ಲಿ ಆಟ
    ಟೂರಿಸಂ ಡೆವಲಪ್‌ಮೆಂಟ್‌ಗೆ ಅಧಿಕಾರಿಗಳೇ ಮಾರಕ
    ನೇಪಾಳದಲ್ಲಿ ಭೀಕರ ಫ್ಲ್ಯಾಶ್ ಫ್ಲಡ್: 95 ಮಂದಿ ಸಾವು, 384 ಪ್ರಯಾಣಿಕರು ನಾಪತ್ತೆ; 105 ಭಾರತೀಯರೂ ಸಂಪರ್ಕಕ್ಕೆ ಸಿಗದೆ ಆತಂಕ!
    ವೇಣೂರಿನಲ್ಲಿ ಬಾಲಕಿಗೆ ಶಾಲಾ ರಿಕ್ಷಾಚಾಲಕನಿಂದಲೇ ಲೈಂಗಿಕದೌರ್ಜನ್ಯ: ಮಕ್ಕಳಿಗೆ ಯಾರನ್ನು ನಂಬಬೇಕು? ಯಾರಿಗೆ ಹೇಳಬೇಕು? — ಪೋಷಕರೇ ಎಚ್ಚರ
    “ಕುನಾಲ್ ಶಾ ವಾಟ್ಸಾಪ್ ಗ್ಲೋಬಲ್ ಹೆಡ್! ಸುಂದರ್ ಪಿಚೈ, ಸತ್ಯ ನಾಡೆಲ್ಲಾ ಸಾಲಿಗೆ ಮತ್ತೊಬ್ಬ ಭಾರತೀಯನ ಸೇರ್ಪಡೆ.
    ಹೆತ್ತ ಮಗಳನ್ನೇ ವೇಶ್ಯಾವಾಟಿಕೆಗೆ ದೂಡಲು ಯತ್ನಿಸಿದ ತಾಯಿಯ ಜೊತೆಗೆ ಮಗಳನ್ನು ಕಳುಹಿಸಲು ಕೋರ್ಟ್ ನಕಾರ 
    KIOCL ಮತ್ತು NDMC ವಿಲೀನಕ್ಕೆ ಶಾಸಕ ಡಾ. ಭರತ್ ಶೆಟ್ಟಿಯಿಂದ ಕೇಂದ್ರ ಸಚಿವರಿಗೆ ಮನವಿ
    ಶಿರಸಿ ಮಾರಿಯಮ್ಮನ ಜಾತ್ರೆ ಪ್ರಾರಂಭ