📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಬೆಂಗಳೂರು ಟು ಮುಂಬೈ  ಐದೇ ಘಂಟೆ ಪ್ರಯಾಣ- ಎಕ್ಸ್ಪ್ರೆಸ್ ಹೈವೇಗೆ ಅಸ್ತು

ಬೆಂಗಳೂರು ಟು ಮುಂಬೈ ಸರಿಸುಮಾರು ಏಳುನೂರು ಕಿಲೋಮೀಟರ್ ಅಂತರವನ್ನು ಹೊಂದಿದೆ. ಉತ್ತಮವಾದಂತಹ ಹೆದ್ದಾರಿಯನ್ನು ಹೊಂದಿದ್ದರೂ ಸಹ, ಈಗಿನ ಸ್ಥಿತಿಯಲ್ಲಿ ಕಡಿಮೆ ಅಂದರೂ 12 ಗಂಟೆಯ ಜರ್ನಿ ಮಾಡಬೇಕಾಗುತ್ತದೆ. ಈ ಜರ್ನಿಯನ್ನು ಐದರಿಂದ ಐದೂವರೆ ಗಂಟೆ ಜರ್ನಿಗೆ ಇಳಿಸುವಂತಹ ಪ್ಲಾನಿಂಗ್  ಭಾರತ ಸರ್ಕಾರದಿಂದ ರೆಡಿಯಾಗಿದೆ.

ಸಚಿವ ನಿತಿನ್ ಗಡ್ಕರಿ

ಈ ಬಗ್ಗೆ ಸ್ವತಹ ನಿತಿನ್ ಗಡ್ಕರಿ ಯವರು ವಿವರವನ್ನು ನೀಡಿದ್ದಾರೆ. ಈಗಾಗಲೇ ಪುಣೆ ಮತ್ತು ಮುಂಬೈ ನಡುವೆ ಎಕ್ಸ್ಪ್ರೆಸ್ ವೇ ಇದೆ. ಈ ಒಂದು ಎಕ್ಸ್ಪ್ರೆಸ್ ವೇ ಇಂದಾಗಿ ಮುಂಬೈ ಪುಣೆ ನಡುವಿನ ಅಂತರ ಒಂದು ಗಂಟೆಗೆ ಇಳಿದಿದ್ದನ್ನು ನಾವೆಲ್ಲರೂ ನೋಡಿದ್ದೇವೆ. ಮುಂಬೈನಿಂದ ಪುಣೆಗೆ ಕೇವಲ ಒಂದು ಗಂಟೆ ಪ್ರಯಾಣದ ಮೂಲಕ ತಲುಪಬಹುದು. ಅದೇ ರೀತಿಯ ಎಕ್ಸ್ಪ್ರೆಸ್ ವೇ ಬೆಂಗಳೂರು ಟು ಪುಣೆಗೆ ನಿರ್ಮಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ. ಈ ಕಾಮಗಾರಿಯನ್ನು ಕೇವಲ ಎರಡೇ ವರ್ಷದಲ್ಲಿ ಮುಗಿಸಿ ಲೋಕಾರ್ಪಣೆ ಮಾಡುವ ಪ್ಲಾನಿಂಗ್ ಹಾಕಿಕೊಳ್ಳಲಾಗಿದೆ ಎಂದು ಸ್ವತಹ ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. 

ಅಷ್ಟ ಪಥವನ್ನು ಹೊಂದಿರುವಂತಹ ಈ ರಾಷ್ಟ್ರೀಯ ಹೆದ್ದಾರಿಯು, ತಡೆರಹಿತವಾಗಿರುತ್ತದೆ. ಎಲ್ಲಿಯೂ  ಪ್ರಯಾಣಕ್ಕೆ ಕುಂಠಿತವಾಗುವಂತಹ, ಅಡ್ಡಿ  ಆಗದ ಹಾಗೆ ನಿರಂತರ ಹಾಗೂ ವೇಗದ ಪ್ರಯಾಣಕ್ಕೆ ಅನುಕೂಲಕರವಾಗಿ ಈ ಹೆದ್ದಾರಿಯನ್ನು ನಿರ್ಮಿಸಲಾಗುತ್ತಿದೆ ಎಂದು ಹೇಳಿದ ಗಡ್ಕರಿ, ಪ್ರತಿ ಗಂಟೆಗೆ  120 ಕಿಲೋಮೀಟರ್ ವೇಗದಲ್ಲಿ ನಿರಾತಂಕವಾಗಿ ಚಲಿಸಬಹುದು. ಈ ವೇಗದಲ್ಲಿ ಬೆಂಗಳೂರಿನಿಂದ ಹೊರಟರೆ, ಐದುವರೆ ಗಂಟೆಯಲ್ಲಿ ಮುಂಬೈ ತಲುಪಬಹುದಾಗಿದೆ. ಈ ಒಂದು ಎಕ್ಸ್ಪ್ರೆಸ್ ವೇ ರಾಜ್ಯದ ಬೆಳಗಾವಿ ಬಾಗಲಕೋಟೆ ಗದಗ ಕೊಪ್ಪಳ ಚಿತ್ರದುರ್ಗ ತುಮಕೂರು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಹಾದು ಹೋಗುತ್ತದೆ. ಈ ಒಂದು ಎಕ್ಸ್ಪ್ರೆಸ್ ವೇ ಪ್ರಾರಂಭವಾದ ನಂತರ ಬೆಂಗಳೂರು ಮುಂಬೈ ವಿಮಾನದ ಹಾರಾಟದಲ್ಲಿ ಸಾಕಷ್ಟು ವ್ಯತ್ಯಯವಾಗುತ್ತದೆ. ಮೊದಲು ಪುಣೆ ಮತ್ತು ಮುಂಬೈ ನಡುವೆ ಎರಡರಿಂದ ಮೂರು ಜಟ್ ಓಡಾಡುತ್ತಿತ್ತು. ಎಕ್ಸ್ಪ್ರೆಸ್ ವೇ ಯಾವಾಗ ಶುರುವಾಯಿತೋ, ಅಲ್ಲಿಂದ ಜೆಟ್ ಹಾರಾಟ ಬಂದ್ ಆಗಿದೆ. ಇದರ ಅರ್ಥ ಇಷ್ಟೇ, ಜನರು ಕಡಿಮೆ ಖರ್ಚಿನಲ್ಲಿ ವೇಗವಾಗಿ ಹೋಗಬಹುದಾದಂತಹ ಮಾರ್ಗವನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಸರ್ಕಾರವು ಜನರಿಗೆ ಅಂತಹ ಆಯ್ಕೆಯನ್ನು ಕೊಡುವ ಕೆಲಸ ಮಾಡಬೇಕು. ಸರ್ಕಾರ ಆ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ಹಾಕಿಕೊಳ್ಳುತ್ತಿದೆ. ಆಗಲೇ ದೆಹಲಿ ಟು ರಾಜಸ್ಥಾನ್ ಎಕ್ಸ್ಪ್ರೆಸ್ ವೇ ಪ್ರಗತಿಯಲ್ಲಿದೆ. ಅದೇ ರೀತಿ ದೆಹಲಿ ಟು ಡೆಹ್ರಾಡೂನ್ ಎಕ್ಸ್ಪ್ರೆಸ್ ವೇ ಕಾಮಗಾರಿಯು ಬಹುತೇಕವಾಗಿ ಮುಗಿಯುತ್ತಿದೆ ಎಂದು ಸಚಿವ ಗಡಕರಿ ಹೇಳಿದ್ದಾರೆ  

COMMENTS

Login with Gmail to comment

ಇನ್ನಷ್ಟು ಸುದ್ದಿ

ಅಕ್ರಮ ಡಿಸೇಲ್ ದಾಸ್ತಾನು ಪ್ರಕರಣ: 4,175 ಲೀಟರ್ ಡಿಸೇಲ್ ಕಂದಾಯ ಇಲಾಖೆಯಿಂದ ಹರಾಜು – ₹2.35 ಲಕ್ಷಕ್ಕೆ ಮಾರಾಟ!
 ಆಸ್ಪತ್ರೆಯಲ್ಲಿ ಡಾಕ್ಟರ್ “mistakeಎಡವಟ್”…ಅಚ್ಚರಿಯೂ ಮೀರಿದ ಆಘಾತ!
ಚುನಾವಣೆಯವರೆಗೆ ಮೌನ, ನಂತರ LPG ದರ ಭಾರಿ ಏರಿಕೆ –ಇದು ರಾಜಕೀಯ ಅಜೆಂಡಾನಾ?
ಡಿಕೆಶಿ ಸೈಲೆಂಟ್ ಆಪರೇಷನ್ ಮಿಸ್ ಫೈರ್ ಆಗಿದ್ದೆಲ್ಲಿ?ರಾಷ್ಟ್ರ ರಾಜಧಾನಿಯಲ್ಲಿ ಕರ್ನಾಟಕ ಕಾಂಗ್ರೆಸ್ ಹೈ-ವೋಲ್ಟೇಜ್ ಹರಟೆ…!
🚨 ಬೈಂದೂರಿನಲ್ಲಿ ಭಯಾನಕ ದಾಳಿ! ಕತ್ತಿಯಿಂದ ಹಲ್ಲೆ – ಆರೋಪಿ ಬಂಧನ
ಜಗಳ ನಿಲ್ಲಿಸಲು ಹೋದವನ ಜೀವ ಹರಣ: ಮಾನವೀಯತೆ ಕುಸಿದರೆ ಸಮಾಜದ ನೆಮ್ಮದಿ ಎಲ್ಲಿ?”
ಭಾರತ ಬಗ್ಗೆ ಟ್ರಂಪ್ ಡಬಲ್ ಸ್ಟ್ಯಾಂಡ್…!ವಿವಾದ ಸೃಷ್ಟಿಸಿ, ಬಳಿಕ ಸಮಾಧಾನದ ಮಾತು
ಸಹೋದರಿಯ ಎಲುಬುಗಳೊಂದಿಗೆ ಬ್ಯಾಂಕ್ ಗೆ ಬಂದ ಅಣ್ಣ…!ದಾಖಲೆ ನಿಯಮಗಳ ನಡುವೆ ಸೋತ ಮಾನವೀಯತೆ”
ಬಂಗಾಳ ರಾಜಕೀಯದಲ್ಲಿ ಭಾರಿ ಟ್ವಿಸ್ಟ್ ಮೇಲೆ ಟ್ವಿಸ್ಟ್..! ಸುವೇಂದು ಪ್ರಮಾಣವಚನಕ್ಕೂ ಬ್ರೇಕ್ ಬೀಳುತ್ತಾ?ಸುಪ್ರೀಂ ಕೋರ್ಟ್ ಎಂಟ್ರಿ ಆಗುತ್ತಾ?
ಜಾಗತಿಕ ಸಂಘರ್ಷದ ಮಧ್ಯೆ ಭಾರತ–ಯುಎಇ ಬಿಗ್ ಡೀಲ್! ತಂತ್ರಜ್ಞಾನ, ಇಂಧನ ಮತ್ತು ಭದ್ರತೆಯಲ್ಲಿ ಐತಿಹಾಸಿಕ ಒಗ್ಗಟ್ಟು.
ತೆರಿಗೆ ನಮ್ಮದು… ಪಾಲು ಬೇರೆ ರಾಜ್ಯಗಳಿಗೆ!
ಜನಿವಾರಕ್ಕೆ ಕೈ ಹಾಕಿದವರು, ಪರ್ಮನೆಂಟ್ ಮನೆಗೆ ಹೋಗುವ ದಾರಿಯಲ್ಲಿ….
ಎಚ್ಚರ… ನಿಮ್ಮಸುತ್ತಮುತ್ತ ಏನು ನಡೆಯುತ್ತಿದೆ ಗೊತ್ತಿರಲಿ! 🚨Be Aware… Stay Alert… Save Youth!
ಮಕ್ಕಳ ಸುರಕ್ಷತೆಯೇ ಮುಖ್ಯ – ಸಂದೇಶ ಕೊಟ್ಟ ಹೈಕೋರ್ಟ್
ಕಾಂಗ್ರೆಸ್ ಮೇಲಿನ ಕೋಪ ತಣ್ಣಗಾಗಿಲ್ಲ….. ಜನಪರ ಯೋಜನೆ ಮುಂದುವರೆಸಲು ಸ್ಟಾಲಿನ್ ಮನವಿ
“ಮಂಗಳೂರಲ್ಲಿ ಡ್ರೈ ಡೇ ಘೋಷಣೆ -ಎರಡು ದಿನ ಬಾರ್‌ಗಳಿಗೆ ಲಾಕ್ ..!” ದಕ್ಷಿಣ ಕನ್ನಡದಲ್ಲಿ ಕಟ್ಟುನಿಟ್ಟಿನ ಆದೇಶ
ಸಚಿವ ಜಮೀರ್ ಕಥೆ ಗೋವಿಂದ!!!?
ಲಿವ್-ಇನ್ ಸಂಬಂಧಗಳಲ್ಲಿ ಕಾನೂನು ಮಿತಿ ಎಲ್ಲಿದೆ?-ಸುಪ್ರೀಂ ಕೋರ್ಟ್‌ನ ಮಹತ್ವದ ಪ್ರಶ್ನೆ
ಮಾಜಿ ಮುಖ್ಯಮಂತ್ರಿಯ ಮೇಲೆ ಗುಂಡಿನ ದಾಳಿ,- Z+ ಭದ್ರತೆಯ ನಡುವೆ ದಾಳಿಕೋರ ಹೇಗೆ  ಬಂದ?
ಅಮಾವಾಸ್ಯೆ ಬೈಲ್ ಪೊಲೀಸ್ ಠಾಣೆಯಲ್ಲಿ ಜೀವ ಬೆದರಿಕೆ ಹಾಗೂ ನಿಂದನೆಯ ಪ್ರಕರಣ ದಾಖಲು
ತೈಲ ಟ್ಯಾಂಕರ್ ಮೇಲೆ ಇರಾನ್ ಆತ್ಮಹತ್ಯಾ ದೋಣಿ ದಾಳಿ – ಭಾರತೀಯ ನಾವಿಕ ಸಾವು
165 ಹೆಣ್ಮಕ್ಕಳು ತಮ್ಮದಲ್ಲದ ತಪ್ಪಿಗೆ ಹತ್ಯೆಗೆ ಒಳಗಾದರು 
ಮಂಗಳೂರು ನಗರದಲ್ಲಿ ಭಾರೀ ಪ್ರಮಾಣದ MDMA ವಶ – ಇಬ್ಬರು ಡ್ರಗ್ ಪೆಡ್ಲರ್‌ಗಳ ಬಂಧನ…
ಮಾರ್ಚ್ 7 ರಂದು ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಆಗಮನ
ಕಾರ್ಕಳದ ವಂಚನೆ ಪ್ರಕರಣ, ದೂರುದಾರನ ಮೇಲೂ ಶಂಕೆ
ಆರೋಪಿ ಸಮೀರ್ ಮುಲ್ಲಾ ಸ್ಫೋಟಕ ಹೇಳಿಕೆ-ಖುಷಿ ಒಳ್ಳೆ ಹುಡುಗಿ-🔥 ಹುಬ್ಬಳ್ಳಿ ಲವ್ ಜಿಹಾದ್ ಅಲ್ಲ ಎಂದ ಪೊಲೀಸರು : ಇದೀಗ ಹೊಸ ಟ್ವಿಸ್ಟ್!
ಸಚಿನ್ ತೆಂಡೂಲ್ಕರ್ ಮಗಳ ಜಪಾನೀಸ್ ಕನೆಕ್ಷನ್ ಈಗ ದೇಶದ ಗಮನ ಸೆಳೆಯುತ್ತಿದೆ…ಸಾರಾ ಹೊಸ ಒಪ್ಪಂದ ಚರ್ಚೆಯಲ್ಲಿ
ಏಪ್ರಿಲ್ 1, 2026ರಿಂದಲೇ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ
8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಹೊಟ್ಟೆಪಾಡಿಗಾಗಿ ಬಂದ ಕಾರ್ಮಿಕನ ಜೀವ ರೋಡ್ ರೋಲರ್ ಹರಿದು ರಸ್ತೆಯಲ್ಲೇ ಅಂತ್ಯ…