📍 Karavali Maruta
  • LOGIN
  • BREAKING
    ಧಾರವಾಡದಲ್ಲಿ ಭೀಕರ LPG ಸಿಲಿಂಡರ್ ಸ್ಫೋಟ , ಹಲವು ಮೀಟರ್ ದೂರಕ್ಕೆ ಹಾರಿದ ಬೈಕ್‌! ಹಲವರಿಗೆ ಗಾಯ CCTVಯಲ್ಲಿ ಶಾಕಿಂಗ್ ದೃಶ್ಯ ದಯಾಮರಣ ಕೇಳಿದ್ದ ತುಮಕೂರು ರಾಬಿಯಾ ಇನ್ನಿಲ್ಲ …!ಪರಮೇಶ್ವರ್ ಮುಂದೆ ಕಣ್ಣೀರಿಟ್ಟಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ವಿಷಸೇವಿಸಿ ಕೊನೆಯುಸಿರು…‘ಮನೆ’ ಸಿಕ್ಕರೂ ಬದುಕು ಉಳಿಯಲಿಲ್ಲ! ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್! ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ ವಾಜಪೇಯಿ ಸರ್ಕಾರದ  ಕನಸಿನ ಯೋಜನೆ ನದಿ ಜೋಡಣೆ ವಿರೋಧಿಸಿ ಶಿರಸಿಯಲ್ಲಿ ಸಹಿ ಸಂಗ್ರಹ ಅಭಿಯಾನ
    ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    *ಬೈಕಂಪಾಡಿ ಹೆದ್ದಾರಿ ಡಕಾಯಿತಿ, 23 ಲಕ್ಷ ಮೌಲ್ಯದ ಸೊತ್ತು ದರೋಡೆ ಪ್ರಕರಣ: 3 ಆರೋಪಿಗಳು ಸೆರೆ.

    ಮಂಗಳೂರು: ಮಹಾರಾಷ್ಟ್ರದಿಂದ ಕೇರಳಕ್ಕೆ ತೆರಳುತ್ತಿದ್ದ ಕುಟುಂಬವೊಂದನ್ನು ಅಡ್ಡಗಟ್ಟಿ ತಲವಾರು ತೋರಿಸಿ ಬೆದರಿಸಿ ರೂ.23.10 ಲಕ್ಷ ಮೌಲ್ಯದ ಚಿನ್ನಾಭರಣ, ಕಾರು ಸಹಿತ ಸೊತ್ತು ದರೋಡೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

    ಘಟನೆ ನಡೆದದ್ದು ಹೇಗೆ?
    ದಿನಾಂಕ 29-06-2026 ರಂದು ನಸುಕಿನ 2:45ಕ್ಕೆ ರಾಷ್ಟ್ರೀಯ ಹೆದ್ದಾರಿ-66ರ ಬೈಕಂಪಾಡಿ ಬಳಿ ಈ ಘಟನೆ ನಡೆದಿದೆ. ದೂರುದಾರ ವಿಕಾಸ್ ಸುಬ್ಬರಾವ್ ಧವಡೆ (44) ಅವರು ಪತ್ನಿ ಮತ್ತು ಮಗನೊಂದಿಗೆ KL-59-R-9450 ಸ್ವಿಫ್ಟ್ ಡಿಸೈರ್ ಕಾರಿನಲ್ಲಿ ಪಯ್ಯನ್ನೂರಿಗೆ ತೆರಳುತ್ತಿದ್ದರು. ಈ ವೇಳೆ ಎರಡು ಇನ್ನೋವಾ ಮತ್ತು ಒಂದು ಸ್ವಿಫ್ಟ್ ಕಾರಿನಲ್ಲಿ ಬಂದ 6-7 ಜನ ಮುಸುಕುಧಾರಿಗಳು ಕಾರನ್ನು ಅಡ್ಡಗಟ್ಟಿ, ತಲವಾರು ತೋರಿಸಿ ಹಲ್ಲೆ ನಡೆಸಿದ್ದಾರೆ.

    ದೂರುದಾರರಿಗೆ ಗಾಯಪಡಿಸಿ, ಪತ್ನಿ-ಮಗನನ್ನು ಅಪಹರಿಸಿ ಕೆಲ ಕಿ.ಮೀ ದೂರದಲ್ಲಿ ಅವರನ್ನು ಬಿಟ್ಟು, ಕಾರು, 180 ಗ್ರಾಂ ಚಿನ್ನಾಭರಣ (ರೂ.20 ಲಕ್ಷ), 2 ಮೊಬೈಲ್ (ರೂ.10,000) ಸಹಿತ ಒಟ್ಟು ರೂ.23,10,000 ಮೌಲ್ಯದ ಸೊತ್ತು ದೋಚಿ ಪರಾರಿಯಾಗಿದ್ದರು.
    ಪಣಂಬೂರು ಠಾಣೆಯಲ್ಲಿ BNS ಕಲಂ 310(2), 311, 324(2), 137(2), 126(2) ಹಾಗೂ KPDLP Act ಅಡಿ ಪ್ರಕರಣ ದಾಖಲಾಗಿ ಇದೀಗ ಮೂವರು ಆರೋಪಿಗಳನ್ನು ಎಡೆಮುಡಿ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

    ಬಂಧಿತ ಆರೋಪಿಗಳು
    ನಿಮಿಲ್ ಆರ್.ಕೆ (37) ಕಣ್ಣೂರು, ಕೇರಳ. ಈತನನ್ನು ಕಣ್ಣೂರಿನ ASTER MIMS ಆಸ್ಪತ್ರೆ ಬಳಿ ಬಂಧಿಸಲಾಯಿತು. ಇರ್ಷಾದ್ (40) ಮಡಿಕೇರಿ. ಕೃತ್ಯಕ್ಕೆ ಸಹಕರಿಸಿ, ಆರೋಪಿತರಿಗೆ ಆಶ್ರಯ ನೀಡಿದ ಆರೋಪ ಈತನ ಮೇಲಿದೆ. ಈತನನ್ನು ಪೊನ್ನಂಪೇಟೆಯಲ್ಲಿ ಸೆರೆ ಹಿಡಿಯಲಾಯಿತು.
    ಮುಸ್ತಾಫ (49) ಮಡಿಕೇರಿಯವ. ದುಷ್ಕೃತ್ಯಕ್ಕೆ ಕಾರು ಒದಗಿಸಿ ಆಶ್ರಯ ನೀಡಿದ ಆರೋಪ ಈತನ ಮೇಲಿದೆ. ಮೂರ್ನಾಡು ಬಸ್ ನಿಲ್ದಾಣದಲ್ಲಿ ಹೆಡೆಮುರಿ ಕಟ್ಟಲಾಯಿತು

    ಮೂವರನ್ನೂ ದಿನಾಂಕ 03-07-2026 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿ 10 ದಿನಗಳ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ.

    ತನಿಖಾ ಪ್ರಗತಿ
    ಪ್ರಾಥಮಿಕ ವಿಚಾರಣೆಯಲ್ಲಿ ಒಟ್ಟು 14 ಆರೋಪಿಗಳು ನೇರವಾಗಿ, 2 ಆರೋಪಿಗಳು ಸಹಕಾರ ನೀಡಿರುವುದು ಬೆಳಕಿಗೆ ಬಂದಿದೆ. ಒಟ್ಟು 16 ಆರೋಪಿಗಳ ಪೈಕಿ 13 ಜನರ ಪತ್ತೆ ಬಾಕಿ ಇದೆ.

    ಸೊತ್ತು ಸ್ವಾಧೀನ: ದೂರುದಾರರ ಮಾರುತಿ ಡಿಝೈರ್ ಕಾರು ಪಚ್ಚಿನಡ್ಕ ಗುಡ್ಡದಲ್ಲಿ ಪತ್ತೆಯಾಗಿದೆ. ಆರೋಪಿಗಳು ಬಳಸಿದ 4 ಕಾರುಗಳ ಪೈಕಿ 1 ಇನ್ನೋವಾ ಕ್ರಿಸ್ಟಾ ವಶಪಡಿಸಿಕೊಂಡಿದ್ದಾರೆ ಪೊಲೀಸರು.
    ಪತ್ತೆ ಬಾಕಿ
    180 ಗ್ರಾಂ ಚಿನ್ನ, 2 ಮೊಬೈಲ್, ಉಳಿದ 3 ಕಾರುಗಳು.

    ಉತ್ತರ ವಿಭಾಗ ಎಸಿಪಿ ಶ್ರೀಕಾಂತ ಕೆ., ಸಿಸಿಬಿ ಎಸಿಪಿ ಮನೋಜ್ ಕುಮಾರ್ ನಾಯ್ಕ್ ನೇತೃತ್ವದಲ್ಲಿ ಪಣಂಬೂರು ನಿರೀಕ್ಷಕ ಸಲೀಂ ಅಬ್ಬಾಸ್, ಪಿಎಸ್‌ಐ ಶ್ರೀಕಲಾ ಕೆ.ಟಿ, ಜ್ಞಾನಶೇಖರ ಹಾಗೂ ವಿವಿಧ ಠಾಣೆಗಳ ತಂಡಗಳು ಕಾರ್ಯಾಚರಣೆ ನಡೆಸಿದ್ದವು. ಆರೋಪಿಗಳೆಲ್ಲರೂ ಮಡಿಕೇರಿ ಮತ್ತು ಕೇರಳದವರೆಂದು ತನಿಖೆಯಲ್ಲಿ ತಿಳಿದುಬಂದಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    “ಕಾಂತರಾ” ಖ್ಯಾತಿಯ ಸಪ್ತಮಿ ಗೌಡ, ದುಮುಕಿದ್ದು  ಹೋರಾಟದ ಅಂಗಳಕ್ಕೆ
    ಗಂಡನನ್ನು ಕೊಂದ ಪತಿವ್ರತೆ… ಮೂರು ವರ್ಷದ ಮಗು ಅನಾಥ
    ಇನ್ಮುಂದೆ ಗೂಗಲ್‌ನಲ್ಲಿ ನಿಮ್ಮ ಹಳೆಯ ಕೋರ್ಟ್ ಕೇಸ್‌ಗಳ ವಿವರಗಳನ್ನುಮರೆಮಾಡಬಹುದು-ದೆಹಲಿ ಹೈಕೋರ್ಟ್ ಗೈಡ್‌ಲೈನ್ಸ್ ರಿಲೀಸ್! 
    ಆಹಾರ ಬೆಲೆ ಏರಿಕೆ: ಸಾಮಾನ್ಯರ ಅಡಿಗೆ ಮನೆಗೆ ಮತ್ತೆ ಹೊರೆ?
    KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ ಅಮಾನತ್
    ವೈರಲ್ ವೀಡಿಯೊ ….ನಗು ಆರೋಗ್ಯಕ್ಕೆ ಒಳ್ಳೆಯದು, ಆದ್ರೆ ಹೆಣ್ಣುಮಗುವಿನ ಹೆಣದ ಮುಂದೆ ನಕ್ಕರೆ.. ಏನಂತಾರೆ?ತಮಿಳುನಾಡಿನ ಜನ ಕಣ್ಣೀರಲ್ಲಿರುವಾಗ ಇವರಿಗೆ ಜೋಕ್ಸ್‌ ನೆನಪಾಯ್ತಾ? ಏನದು ಅಂತ ಜೋಕ್ಸ್ …
    ಇರಾನ್ ಮೇಲೆ ಇಸ್ರೇಲ್-ಅಮೆರಿಕ ದಾಳಿಗೆ  ಪ್ರತಿದಾಳಿ ಯುಎಇ, ಬಹ್ರೇನ್, ಸೌದಿಯಲ್ಲಿ ಅಮೆರಿಕದ ನೆಲೆಗಳಿಗೆ ನಡುಕ.
    ತಾಯಿಯನ್ನೇ ಮದುವೆಗೆ ಆಹ್ವಾನಿಸದ ಕಾರಣಕ್ಕೆ ಉದ್ಯೋಗ ಕಳೆದುಕೊಂಡ ಯುವಕ…!
    ಡಿಜಿಟಲ್ ದಿಗ್ಗಜರಿಗೆ ₹2 ಕೋಟಿ ಲೀಗಲ್ ನೋಟಿಸ್ ಶಾಕ್!ಯೂಟ್ಯೂಬ್ ಸ್ಟಾರ್ vs ಟಿವಿ ಸ್ಟಾರ್ ನಡುವಿನ ಕಾನೂನು ಸಮರ!
    ಮಂಗಳೂರಲ್ಲಿ 10ನೇ ತರಗತಿ ತಾಯಿಯಿಲ್ಲದ ಬಾಲಕಿ ಮೇಲೆ ಜಲೀಲ್ ಎಂಬಾತ 7 ತಿಂಗಳು ನಿರಂತರ ದೌರ್ಜನ್ಯ! 
    ಬಿಜೆಪಿಯ ಹೊಸ ರಾಷ್ಟ್ರೀಯ ಪದಾಧಿಕಾರಿಗಳ ತಂಡ ready…!
    ರಾಜಕೀಯ ಸುದ್ದಿ ಅಂದರೆ ಬೋರ್ ಅಂತ ಅನ್ನಿಸುವರಿಗೆ ಇದು ಒಂದು ಪಕ್ಕಾ ಎಂಟರ್‌ಟೈನ್‌ಮೆಂಟ್ ಎಪಿಸೋಡ್!!!
    ಉಡುಪಿಯಲ್ಲಿ ಪೊಲೀಸ್ ಅಧಿಕಾರಿಗಳ ಸೋಗಿನಲ್ಲಿ  ಮಹಿಳೆಗೆ ₹65 ಲಕ್ಷ ವಂಚನೆ
    ಬೆಳಗ್ಗೆಯೇ ಲೋಕಾಯುಕ್ತ ಬಿಗ್ ಬ್ಲಾಸ್ಟ್!54 ಕಡೆ ಏಕಕಾಲದಲ್ಲಿ ರೇಡ್… ಚಿನ್ನ, ನಗದು, ಮನೆ, ಜಮೀನುಗಳ ಮಹಾಪರ್ವತ ಪತ್ತೆ!
    ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆಯ ಕ್ರೆಡಿಟ್ ಪಡೆದುಕೊಳ್ಳಲು ಶುರುವಾಯಿತು ಫೈಟ್
    ಉಡುಪಿಯಲ್ಲಿ  ಬೆಟ್ಟಿಂಗ್ ಮಾಫಿಯಾದ ಚಟುವಟಿಕೆಯನ್ನು ಡೆತ್ ನೋಟ್ ರಿವಿಲ್ ಮಾಡಿತೇ?
    ವಿಮಾನ ಪ್ರಯಾಣ ದುಬಾರಿ: ಟಿಕೆಟ್ ದರ ಏರಿಕೆ ವಿರುದ್ಧ PIL: ಸರ್ಕಾರಕ್ಕೆ ಸುಪ್ರೀಂ ನೋಟಿಸ್
    ಭರತ್ ತಿವಾರಿ ಎನ್‌ಕೌಂಟರ್ -ಬಿಹಾರ ಎಡಿಜಿಪಿಯಿಂದಲೇ ಪೊಲೀಸ್ ಲೋಪದ ಒಪ್ಪಿಗೆ: ಶಾಹಪುರ SHO ಸೇರಿ 5 ಅಧಿಕಾರಿಗಳು ಸಸ್ಪೆಂಡ್!
    ವಾಲ್ಮೀಕಿ ಹಗರಣಕ್ಕೆ ನಾಗೇಂದ್ರ ತಲೆದಂಡ? ರಾಜೀನಾಮೆ ಚರ್ಚೆ ನಡುವೆ ಕಾಂಗ್ರೆಸ್‌ಗೆ ಹೊಸ ಸಂಕಷ್ಟ!
    2026 ವಿಧಾನಸಭೆ ಚುನಾವಣೆ – ಮುಖ್ಯ ಮಾಹಿತಿ
    7 ಲಕ್ಷದ ಸುಪಾರಿ ನೀಡಿ ತಾಯಿಯನ್ನು accident ಮಾಡಿ ಕೊಂದ ಮಗಳ ವಿಕೃತ ಘಟನೆ..!
    ಮಿಜಾರಿನಲ್ಲಿ ರಸ್ತೆ ಕುಸಿತ, ಸಾರ್ವಜನಿಕರಲ್ಲಿ ಆತಂಕ ಮೊದಲ ಮಳೆಯಲ್ಲೇ ಕೊಚ್ಚಿಹೋಯ್ತು ಹೆದ್ದಾರಿ! ಕೋಟಿ ಕೋಟಿ ಕಾಮಗಾರಿಯ ಅಸಲಿ ಮುಖ ಬಯಲು? 
    ನಾಗಪ್ರತಿಷ್ಠಾ ಮಂಟಪದ ಎದುರು ನಡೆದಾಡಲು ಸ್ಥಳವಿಲ್ಲದಷ್ಟು ಭಕ್ತಾದಿಗಳು …
    ಮ್ಯಾರಥಾನ್ ನಲ್ಲಿ ಇರುವಾಗಲೇ ಹೃದಯಾಘಾತದಿಂದ  ಸಬ್ ಇನ್ಸ್ಪೆಕ್ಟರ್ ನಿಧನ
    ಚುನಾವಣಾ ಆಯೋಗ ಸರ್ವಾಧಿಕಾರಿಯಾಗುತ್ತಿದೆ ಎಂಬ ಅನುಮಾನದ ಸುತ್ತ….
    ಇಂದು ಆನ್‌ಲೈನ್ ಔಷಧ ಮಾರಾಟ ವಿರುದ್ಧ ದೇಶವ್ಯಾಪಿ ಆಕ್ರೋಶ!ದಕ್ಷಿಣ ಕನ್ನಡದಲ್ಲಿ 1100 ಮೆಡಿಕಲ್ ಶಾಪ್ ಬಂದ್!
    ಮೋದಿ ಅವರ ನಿರ್ಧಾರಗಳು“ದೀರ್ಘಕಾಲೀನ ಅಭಿವೃದ್ಧಿಗೆ ಜವಾಬ್ದಾರಿಯುತ ನೀತಿಗಳು” ಆತಂಕದ ಸೂಚನೆ ಅಲ್ಲ-ಎಸ್.ಎಸ್. ನಾಯಕ್
    ಮಂಗಳೂರು ಶಾಲಾ ದಾಖಲಾತಿ ಅಂದೋಲನ-ಎಲ್ಲ ಮಕ್ಕಳಿಗೂ ಶಾಲೆಯ ಹಕ್ಕು …
    ವರದಕ್ಷಿಣೆ ಕಿರುಕುಳ ಪ್ರಕರಣ ಹೈಕೋರ್ಟ್‌ನ ಮಹತ್ವದ ತೀರ್ಪು…!ಕಾನೂನಿನ ದುರುಪಯೋಗಕ್ಕೆ ಹೈಕೋರ್ಟ್ ಬ್ರೇಕ್..!
    ಸಚಿವ ಜಮೀರ್ ಕಥೆ ಗೋವಿಂದ!!!?