📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

*ಬೈಕಂಪಾಡಿ ಹೆದ್ದಾರಿ ಡಕಾಯಿತಿ, 23 ಲಕ್ಷ ಮೌಲ್ಯದ ಸೊತ್ತು ದರೋಡೆ ಪ್ರಕರಣ: 3 ಆರೋಪಿಗಳು ಸೆರೆ.

ಮಂಗಳೂರು: ಮಹಾರಾಷ್ಟ್ರದಿಂದ ಕೇರಳಕ್ಕೆ ತೆರಳುತ್ತಿದ್ದ ಕುಟುಂಬವೊಂದನ್ನು ಅಡ್ಡಗಟ್ಟಿ ತಲವಾರು ತೋರಿಸಿ ಬೆದರಿಸಿ ರೂ.23.10 ಲಕ್ಷ ಮೌಲ್ಯದ ಚಿನ್ನಾಭರಣ, ಕಾರು ಸಹಿತ ಸೊತ್ತು ದರೋಡೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ಘಟನೆ ನಡೆದದ್ದು ಹೇಗೆ?
ದಿನಾಂಕ 29-06-2026 ರಂದು ನಸುಕಿನ 2:45ಕ್ಕೆ ರಾಷ್ಟ್ರೀಯ ಹೆದ್ದಾರಿ-66ರ ಬೈಕಂಪಾಡಿ ಬಳಿ ಈ ಘಟನೆ ನಡೆದಿದೆ. ದೂರುದಾರ ವಿಕಾಸ್ ಸುಬ್ಬರಾವ್ ಧವಡೆ (44) ಅವರು ಪತ್ನಿ ಮತ್ತು ಮಗನೊಂದಿಗೆ KL-59-R-9450 ಸ್ವಿಫ್ಟ್ ಡಿಸೈರ್ ಕಾರಿನಲ್ಲಿ ಪಯ್ಯನ್ನೂರಿಗೆ ತೆರಳುತ್ತಿದ್ದರು. ಈ ವೇಳೆ ಎರಡು ಇನ್ನೋವಾ ಮತ್ತು ಒಂದು ಸ್ವಿಫ್ಟ್ ಕಾರಿನಲ್ಲಿ ಬಂದ 6-7 ಜನ ಮುಸುಕುಧಾರಿಗಳು ಕಾರನ್ನು ಅಡ್ಡಗಟ್ಟಿ, ತಲವಾರು ತೋರಿಸಿ ಹಲ್ಲೆ ನಡೆಸಿದ್ದಾರೆ.

ದೂರುದಾರರಿಗೆ ಗಾಯಪಡಿಸಿ, ಪತ್ನಿ-ಮಗನನ್ನು ಅಪಹರಿಸಿ ಕೆಲ ಕಿ.ಮೀ ದೂರದಲ್ಲಿ ಅವರನ್ನು ಬಿಟ್ಟು, ಕಾರು, 180 ಗ್ರಾಂ ಚಿನ್ನಾಭರಣ (ರೂ.20 ಲಕ್ಷ), 2 ಮೊಬೈಲ್ (ರೂ.10,000) ಸಹಿತ ಒಟ್ಟು ರೂ.23,10,000 ಮೌಲ್ಯದ ಸೊತ್ತು ದೋಚಿ ಪರಾರಿಯಾಗಿದ್ದರು.
ಪಣಂಬೂರು ಠಾಣೆಯಲ್ಲಿ BNS ಕಲಂ 310(2), 311, 324(2), 137(2), 126(2) ಹಾಗೂ KPDLP Act ಅಡಿ ಪ್ರಕರಣ ದಾಖಲಾಗಿ ಇದೀಗ ಮೂವರು ಆರೋಪಿಗಳನ್ನು ಎಡೆಮುಡಿ ಕಟ್ಟುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಗಳು
ನಿಮಿಲ್ ಆರ್.ಕೆ (37) ಕಣ್ಣೂರು, ಕೇರಳ. ಈತನನ್ನು ಕಣ್ಣೂರಿನ ASTER MIMS ಆಸ್ಪತ್ರೆ ಬಳಿ ಬಂಧಿಸಲಾಯಿತು. ಇರ್ಷಾದ್ (40) ಮಡಿಕೇರಿ. ಕೃತ್ಯಕ್ಕೆ ಸಹಕರಿಸಿ, ಆರೋಪಿತರಿಗೆ ಆಶ್ರಯ ನೀಡಿದ ಆರೋಪ ಈತನ ಮೇಲಿದೆ. ಈತನನ್ನು ಪೊನ್ನಂಪೇಟೆಯಲ್ಲಿ ಸೆರೆ ಹಿಡಿಯಲಾಯಿತು.
ಮುಸ್ತಾಫ (49) ಮಡಿಕೇರಿಯವ. ದುಷ್ಕೃತ್ಯಕ್ಕೆ ಕಾರು ಒದಗಿಸಿ ಆಶ್ರಯ ನೀಡಿದ ಆರೋಪ ಈತನ ಮೇಲಿದೆ. ಮೂರ್ನಾಡು ಬಸ್ ನಿಲ್ದಾಣದಲ್ಲಿ ಹೆಡೆಮುರಿ ಕಟ್ಟಲಾಯಿತು

ಮೂವರನ್ನೂ ದಿನಾಂಕ 03-07-2026 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿ 10 ದಿನಗಳ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ.

ತನಿಖಾ ಪ್ರಗತಿ
ಪ್ರಾಥಮಿಕ ವಿಚಾರಣೆಯಲ್ಲಿ ಒಟ್ಟು 14 ಆರೋಪಿಗಳು ನೇರವಾಗಿ, 2 ಆರೋಪಿಗಳು ಸಹಕಾರ ನೀಡಿರುವುದು ಬೆಳಕಿಗೆ ಬಂದಿದೆ. ಒಟ್ಟು 16 ಆರೋಪಿಗಳ ಪೈಕಿ 13 ಜನರ ಪತ್ತೆ ಬಾಕಿ ಇದೆ.

ಸೊತ್ತು ಸ್ವಾಧೀನ: ದೂರುದಾರರ ಮಾರುತಿ ಡಿಝೈರ್ ಕಾರು ಪಚ್ಚಿನಡ್ಕ ಗುಡ್ಡದಲ್ಲಿ ಪತ್ತೆಯಾಗಿದೆ. ಆರೋಪಿಗಳು ಬಳಸಿದ 4 ಕಾರುಗಳ ಪೈಕಿ 1 ಇನ್ನೋವಾ ಕ್ರಿಸ್ಟಾ ವಶಪಡಿಸಿಕೊಂಡಿದ್ದಾರೆ ಪೊಲೀಸರು.
ಪತ್ತೆ ಬಾಕಿ
180 ಗ್ರಾಂ ಚಿನ್ನ, 2 ಮೊಬೈಲ್, ಉಳಿದ 3 ಕಾರುಗಳು.

ಉತ್ತರ ವಿಭಾಗ ಎಸಿಪಿ ಶ್ರೀಕಾಂತ ಕೆ., ಸಿಸಿಬಿ ಎಸಿಪಿ ಮನೋಜ್ ಕುಮಾರ್ ನಾಯ್ಕ್ ನೇತೃತ್ವದಲ್ಲಿ ಪಣಂಬೂರು ನಿರೀಕ್ಷಕ ಸಲೀಂ ಅಬ್ಬಾಸ್, ಪಿಎಸ್‌ಐ ಶ್ರೀಕಲಾ ಕೆ.ಟಿ, ಜ್ಞಾನಶೇಖರ ಹಾಗೂ ವಿವಿಧ ಠಾಣೆಗಳ ತಂಡಗಳು ಕಾರ್ಯಾಚರಣೆ ನಡೆಸಿದ್ದವು. ಆರೋಪಿಗಳೆಲ್ಲರೂ ಮಡಿಕೇರಿ ಮತ್ತು ಕೇರಳದವರೆಂದು ತನಿಖೆಯಲ್ಲಿ ತಿಳಿದುಬಂದಿದೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಪ್ರೀತಿಸಿ ಓಡಿಹೋದ ಸೇಡಿನ ಬೆಂಕಿಗೆ ಬಲಿಯಾದ ನಿರ್ದೋಷಿ ಅಣ್ಣ..!
ಪಶ್ಚಿಮ ಬಂಗಾಳ ಅಪ್ರಾಪ್ತೆಯ ಸಾವು, ಸಾರ್ವಜನಿಕರಿಂದ ಶಂಕಿತನ ಲಿಂಚಿಂಗ್ ..!ಬಾಲಕಿಯ ಹತ್ಯೆ ಬೆನ್ನಲ್ಲೇ ಭುಗಿಲೆದ್ದ ಹಿಂಸಾಚಾರ;
ಗಂಡನಿಗೆ ಚಿನ್ನ ಕಳ್ಳತನದ ಪಿಎಚ್‌ಡಿ, ಹೆಂಡತಿಗೆ ಮಾರ್ಕೆಟಿಂಗ್ ಜಾಣ್ಮೆ…ಆಹಾ ಒಮ್ಮೆ ಓದಿ ಎಂಥಾ ಜೋಡಿ..
ಮಂಗಳೂರು ದಸರಾ ಮೆರವಣಿಗೆಗೆ ವಿದ್ಯುತ್ ತಂತಿಗಳ ಸಮಸ್ಯೆಗೆ ಗುಡ್‌ಬೈ!
KSRTC ಬಸ್ ಪಲ್ಟಿಯಾಗಿ ಕಂದಕಕ್ಕೆ — ಐವರು ದುರ್ಮರಣ, ಹಲವರಿಗೆ ಗಂಭೀರ ಗಾಯ-ಜಹೀರಾಬಾದ್ ಸಮೀಪ ಭೀಕರ ರಸ್ತೆ ಅಪಘಾತ
ಹತ್ತು ವರ್ಷದಿಂದ ಪೊಲೀಸರಿಗೆ ಬೇಕಾದ ಆರೋಪಿಯನ್ನು ಕೊನೆಗೂ ಬಂಧಿಸಿದ ಪೊಲೀಸರು
ಹೋಟೆಲ್, ಕೆಫೆ ಬಿಸಿ ಬಿಸಿ ಪ್ಲಾಸ್ಟಿಕ್ ಲ್ಲಿ ಪಾರ್ಸೆಲ್‌ಗೆ ಬ್ರೇಕ್ –ಹಾಗೆ 5ರೂ 10ರೂ ಬೀಡಿ ಸಿಗರೇಟ್ ಗುಟ್ಕಾಕ್ಕೆ ₹1000 ದಂಡ ಕಟ್ಟಬೇಕಾದಿತು ಎಚ್ಚರ …!
🔴 ಯುದ್ಧದ ಹೊತ್ತಿನಲ್ಲಿ ಮಾನವೀಯ ರಾಜತಾಂತ್ರಿಕತೆ: ಇರಾನ್‌ಗೆ ಭಾರತದಿಂದ ಮೊದಲ ವೈದ್ಯಕೀಯ ನೆರವು:
ಸಿಎಂ ಕುರ್ಚಿಯನ್ನು, ಡಿಕೆಗೆ ಮಗ್ಗಲ ಮುಳ್ಳನ್ನಾಗಿಸಲು ಸಕಲ ತಯಾರಿ
ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್ ವಿಂಗಡಣೆ ನಡುವೆ ಮಹಿಳಾ ಮಿಸಲಿಗೆ ಸೋಲು….
30 ದಿನ, 13 ನಗರಗಳು, ₹10 ಲಕ್ಷ ಖರ್ಚು! ಅಮೆರಿಕದ ದಂಪತಿಯ ಭಾರತ ಯಾತ್ರೆ ವೈರಲ್….ವೈರಲ್ ವಿಡಿಯೋದಲ್ಲಿ ಹೊರಬಿದ್ದ ಅಚ್ಚರಿಯ ಲೆಕ್ಕ!
ಬ್ಯಾಂಕಿಂಗ್ ಸೇವೆ ಸ್ಮಾರ್ಟ್‌ಫೋನ್ ನೇ ಬೇಕಂತಿಲ್ಲ .ಕೀಪ್ಯಾಡ್ ಫೋನ್ ಸಾಕು ಈಗ “ಸ್ಮಾರ್ಟ್” ಆಗಿದ್ದರೆ ಸಾಕು! 
ಹಲವು ಗಂಭೀರ ಅಪರಾಧ ಪ್ರಕರಣಗಳಲ್ಲಿ ಆರೋಪಿಯಾಗಿ ಕಳೆದ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಕೊನೆಗೂ ಪತ್ತೆ ಹಚ್ಚಲಾಗಿದೆ.
30 ವರ್ಷದ ಕನಸು ಸಾಕಾರ: ಮಾಣಿಲ–ಪೆರ್ಲ ಸಂಪರ್ಕಕ್ಕೆ ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್!
ಅರೆ ವಾ..! ಕರ್ನಾಟಕದ ಜನರಿಗೆ ಫ್ಯಾನ್ಸಿ ನಂಬರ್‌ಗಳೇ ಫೇವರಿಟ್…RTOಗೆ ₹118 ಕೋಟಿ ಆದಾಯ!
ಕರ್ನಾಟಕದಲ್ಲಿ ಮಳೆ ಅಲರ್ಟ್! 13 ಜಿಲ್ಲೆಗಳಿಗೆ ಯೆಲ್ಲೋ ವಾರ್ನಿಂಗ್ – ಜನರು ಎಚ್ಚರಿಕೆ ಅಗತ್ಯ
BRICS ಸಭೆಯಲ್ಲಿ UAE ಮೇಲೆ ಇರಾನ್ ಕಿಡಿ! ಇಸ್ರೇಲ್–ಇರಾನ್ ಯುದ್ಧ – ಇಸ್ರೇಲ್‌ಗೆ UAE ಗುಪ್ತ ಬೆಂಬಲವೇ?
8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ದರೆಗುಡ್ಡೆಯಲ್ಲಿ ಬಾರಿ ಅಗ್ನಿ ಅವಗಡ…!
ಶಿರಸಿ ಮಾರಿಯಮ್ಮನ ಜಾತ್ರೆ ಪ್ರಾರಂಭ
AYS TROPHY–2026 ಯಶಸ್ವಿಯಾಗಿಸಲು ನಿಮ್ಮ ಉಪಸ್ಥಿತಿ ಅಗತ್ಯ.
ಕಮ್ ಬ್ಯಾಕ್ ಮಾಡಿದ ಮುಂಬೈ ಇಂಡಿಯನ್, ಕ್ಯಾಪ್ಟನ್ ಪ್ರೇರಣೆಗೆ ವರ್ಮಾ ಬ್ಯಾಟಿನಿಂದ  ಮೊದಲ ಸೆಂಚುರಿ
ರಾಜಕೀಯದಲ್ಲಿ ಅನುಭವ ಎಷ್ಟು ಮುಖ್ಯ?…  ತಮಿಳುನಾಡು ರಾಜಕಾರಣ ತೋರಿಸುತ್ತಿದೆ ನೋಡಿ
“ಪ್ರಜಾಪ್ರಭುತ್ವದ ಮೇಲೆ ದಾಳಿ”ಸುಪ್ರೀಂ ಕೋರ್ಟ್ ಕಿಡಿ: ಇದು ಪ್ರತಿಭಟನೆ ಅಲ್ಲ, ಸಂಚು!”
ಯುದ್ಧದ ಹೊಡೆತ: ಹಣ ಕೊಟ್ಟರೂ ಗ್ಯಾಸ್ ಇಲ್ಲ! ಕಾರವಾರ ಬಂದರು ಸ್ತಬ್ಧ — ಜನಜೀವನ ಅಸ್ತವ್ಯಸ್ತ 🔥
sdfdf
ಮೂರನೇ ಮಹಾಯುದ್ಧದ ಭೀತಿ: ಇರಾನ್ ಹೊಸ ನಾಯಕನಾಗಿ ಮೊಜ್ತಬಾ ಖಮೇನಿ –ನೂತನ ನಾಯಕನಿಗೆ ರಷ್ಯಾ, ಚೀನಾ ಬೆಂಬಲ
ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ
“ಕೃಷ್ಣ ಜೆ. ರಾವ್‌ ಡಿಎನ್ಎ ಸತ್ಯ ಬಯಲು — ಮಗುವಿಗೆ ನ್ಯಾಯ ಬೇಕು ಎಂದ ಹೈಕೋರ್ಟ್!”
ಎಲ್ಲರಿಗೂ ಯುಗಾದಿ ಹಬ್ಬ… ಆದರೆ ಈ ಗ್ರಾಮಗಳಲ್ಲಿ ಭಯ ಮೌನ…ಹಬ್ಬ ಇಲ್ಲ…!ಒಂದು ವಿಚಿತ್ರ ಕಥೆ!
ಮಂಗಳೂರು ಬಸ್‌ನಲ್ಲಿ ಗುಪ್ತಾಂಗ ತೋರಿಸಿ ಕಂಡಕ್ಟರ್ ವಿಕೃತ ವರ್ತನೆ: ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ – ಬಂಧನ