📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಬ್ರಹ್ಮಾವರ ಅಪಾರ್ಟ್‌ಮೆಂಟ್ ರೂಮಿನಲ್ಲಿ ಯುವತಿಯ ನಿಗೂಢ ಸಾವು

ಬ್ರಹ್ಮಾವರ, ಜೂನ್ 5: ಬ್ರಹ್ಮಾವರ ತಾಲೂಕಿನ ಹೆಬ್ರಿ ರಸ್ತೆಯ ಅಪಾರ್ಟ್‌ಮೆಂಟ್ ರೂಮಿನಲ್ಲಿ ಯುವತಿಯೊಬ್ಬರು ಮೃತಪಟ್ಟ ಘಟನೆ ಬೆಳಕಿಗೆ ಬಂದಿದೆ. ಮೃತರು ಮೂರ್ಛೆ ರೋಗದಿಂದ ಬಳಲುತ್ತಿದ್ದರು ಎನ್ನ ಲಾಗಿದ್ದು ಅದೇ ಕಾರಣದಿಂದ ಸಾವಾಗಿರುವ ಶಂಕೆಯಿದೆ.

ಮೃತಪಟ್ಟವರನ್ನು ಚಾಂತಾರು ಗ್ರಾಮದ ಶ್ರೇಯಸ್ ಅಪಾರ್ಟ್‌ಮೆಂಟ್ ಎ ಬ್ಲಾಕ್ 6ನೇ ಮಹಡಿ ರೂಮ್ ನಂ 605ರಲ್ಲಿ ವಾಸಿಸುತ್ತಿದ್ದ ಶ್ರೇಯಾ ಎಂದು ಗುರುತಿಸಲಾಗಿದೆ. ಅವರು ವೆಲೆನ್ಸಿಯಾ ಕ್ಯಾಶ್ಯೂ ಪ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು.

ಪ್ರಕರಣದ ದೂರುದಾರರಾದ ಜಯಕರ (32), ಕೊಳರಬೆಟ್ಟು, ಕಳ್ತೂರು ಗ್ರಾಮ, ಬ್ರಹ್ಮಾವರ ಇವರು ವೃತ್ತಿಯಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದಾರೆ. ಜೂನ್ ನಾಲ್ಕರಂದು ರಾತ್ರಿ 8:00 ಗಂಟೆಗೆ ಊಟ ಮುಗಿಸಿ ಶ್ರೇಯಾ ರೂಮಿಗೆ ಹೋಗಿದ್ದರು. ಅವರ ಜೊತೆ ಆರುಷಿ ಎಂಬ ಯುವತಿಯೂ ಅದೇ ರೂಮಿನಲ್ಲಿ ವಾಸಿಸುತ್ತಿದ್ದರು.

ದಿನಾಂಕ 05-06-2026 ರಂದು ಬೆಳಿಗ್ಗೆ 8:45 ಗಂಟೆಗೆ ಶ್ರೇಯಾರನ್ನು ಕಾರ್ಖಾನೆಗೆ ಕರೆದುಕೊಂಡು ಹೋಗಲು ಬಂದ ಜಯಕರ, ಶ್ರೇಯಾ ಇನ್ನೂ ಎದ್ದೇಳದೇ ಇರುವುದನ್ನು ಗಮನಿಸಿದ್ದಾರೆ. ಅದೇ ಪ್ಲಾಟ್‌ನ ಇನ್ನೊಂದು ರೂಮಿನಲ್ಲಿ ವಾಸವಿದ್ದ ಆರುಷಿ ಈ ವಿಷಯ ತಿಳಿಸಿದ್ದರು.

ಜಯಕರ ಅವರು ರೂಮಿನ ಬಾಗಿಲನ್ನು ತಳ್ಳಿ ನೋಡಿದಾಗ ಶ್ರೇಯಾ ಕವುಚಿ ಮಲಗಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು. ಎಬ್ಬಿಸಲು ಪ್ರಯತ್ನಿಸಿದಾಗ ಅವರು ಮಲಗಿದ ಸ್ಥಿತಿಯಲ್ಲೇ ಮೃತಪಟ್ಟಿರುವುದು ಕಂಡುಬಂದಿದೆ.

ಶ್ರೇಯಾ ಅವರಿಗೆ ಮೂರ್ಛೆ ರೋಗ ಕಾಯಿಲೆ ಇತ್ತು ಎನ್ನಲಾಗಿದ್ದು, ಇದೇ ಕಾಯಿಲೆಯಿಂದ ಅಥವಾ ಇನ್ನಾವುದೋ ಕಾರಣದಿಂದ ಮೃತಪಟ್ಟಿರುವ ಸಾಧ್ಯತೆಯಿದೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಕ್ರಮಾಂಕ 39/2026, ಕಲಂ 194 BNS ಸೆಕ್ಷನ್ 2023 ರಂತೆ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿ ಬಂದ ನಂತರ ಸಾವಿಗೆ ನಿಖರ ಕಾರಣ ತಿಳಿಯಲಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಘೋರ ಭಾನುವಾರ, ಒಂದೇ ಕುಟುಂಬದ ಎಂಟು ಮಹಿಳೆಯರ ದುರ್ಮರಣ
ಕರ್ನಾಟಕದಲ್ಲೇ ಮೊದಲು-ಕಿಚ್ಚ ಸುದೀಪ್ ಕೈಯಿಂದ ಗ್ರಾಂಡ್ ಓಪನಿಂಗ್!₹130 ಕೋಟಿ ವೆಚ್ಚದ ವಿಶ್ವದರ್ಜೆಯ ‘MR-Linac’ ತಂತ್ರಜ್ಞಾನ ಹೈಟೆಕ್ ಕ್ಯಾನ್ಸರ್ ಆಸ್ಪತ್ರೆ!
ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಹಿಗ್ಗಾಮುಗ್ಗ ಜಾಡಿಸಿದ ಹೆಚ್ ವಿಶ್ವನಾಥ್
ನಿರ್ಮಾಣ ಹಂತದ ಗಾಲ್ಫ್ ಕೋರ್ಸ್‌ನ ಕೆರೆಯಲ್ಲಿ ತೇಲಿದ ಮೂವರು ಬಾಲಕರ ಶವಗಳು..!
ಕಮ್ ಬ್ಯಾಕ್ ಮಾಡಿದ ಮುಂಬೈ ಇಂಡಿಯನ್, ಕ್ಯಾಪ್ಟನ್ ಪ್ರೇರಣೆಗೆ ವರ್ಮಾ ಬ್ಯಾಟಿನಿಂದ  ಮೊದಲ ಸೆಂಚುರಿ
ಭರ್ಜರಿ ಬಿಜೆಪಿ ವಿಜಯೋತ್ಸವ ಬೆಂಗಳೂರಲ್ಲಿ ..!ಪ್ರಧಾನಿ ಮೋದಿ ಬರ್ತಿದ್ದಾರೆ.
ಅಮೆರಿಕದ ಭೀಕರ ವಾಯು ದಾಳಿ: ಇರಾನ್‌ನ ಆರ್ಥಿಕ ಹೃದಯ ‘ಖಾರ್ಗ್ ದ್ವೀಪ’ದ ಸೇನಾ ನೆಲೆಗಳು ಧ್ವಂಸ – ಪ್ರತಿದಾಳಿ ಮಾಡಿದರೆ ತೈಲ ಕೇಂದ್ರಗಳೇ ಮುಂದಿನ ಗುರಿ ಎಂದು ಟ್ರಂಪ್ ಕಠಿಣ ಎಚ್ಚರಿಕೆ
ಆರ್‌ಸಿಬಿ ಎದುರಿಸಲು ರಾಯಲ್ಸ್ ರೆಡಿ??: ಕ್ರಿಕೆಟ್ ಜಗತ್ತಿಗೆ ಶಾಕ್ ಕೊಟ್ಟ ಬಿಹಾರದ ಬಾಲಕ-ಸಚಿನ್ ತೆಂಡೂಲ್ಕರ್ ಕೂಡ ಮೆಚ್ಚಿದ ಆ 29 ಎಸೆತಗಳ ರುದ್ರತಾಂಡವ!
ಒಂದು ಕ್ಷಣದಲ್ಲಿ ನಗು, ಇನ್ನೊಂದು ಕ್ಷಣದಲ್ಲಿ ನಿಶ್ಶಬ್ದ ಕಣ್ಣೀರು…
ಕ್ರಿಕೆಟ್ pad gloves ಒಳಗೆ ಕೋಟಿ ಕೋಟಿ ಕೊಕೇನ್!
ಹೋಟೆಲ್ನಲ್ಲಿ ಅಗ್ನಿಯ ಜ್ವಾಲೆ-ಉಸಿರುಗಟ್ಟಿದ ಹೊಗೆಯೊಳಗೆ ಅಡಗಿಹೋದ ಜೀವಗಳು ..!
ಗಂಡನ ಮನೆಯಿಂದ ಯುವತಿಯನ್ನು ಎಳೆದೊಯ್ದರು
ಅಗತ್ಯ ಮಾಹಿತಿ ಇಲ್ಲಿದೆ ಓದಿ..!“ಎಲ್‌ಪಿಜಿ ಬುಕಿಂಗ್‌ಗೆ ಹೊಸ ನಂಬರ್‌ಗಳು: ಆತಂಕ ಬೇಡ, ಸರಬರಾಜು ಶೀಘ್ರ ಸಾಮಾನ್ಯಕ್ಕೆ!”
ಸಾಲದ ಹಣ ಕೇಳಿದ ವಿಚಾರಕ್ಕೆ ಚೂರಿಯಿಂದ ಕೊಲೆ ಯತ್ನ..
“ವಚನಾನಂದ ಶ್ರೀ ಸರದಿ ಸಾಲಿನಲ್ಲಿ ಮಕ್ಕಳನ್ನು ಕರೆಯುತ್ತಿದ್ದರು”– ಪೀಠದಿಂದ ಉಚ್ಚಾಟನೆ ಬಳಿಕ ಪೋಕ್ಸೋ ಕೇಸ್ ಶಾಕ್..ಮಠದಲ್ಲಿ ಭಾರೀ ಸಂಚಲನ .. ಭೇಟಿ ನೀಡಿದ ಮಕ್ಕಳ ಕಲ್ಯಾಣ ಸಮಿತಿ
ಬೆಳಗಾವಿ ₹4500 ಕೋಟಿ ವಂಚನೆ ಪ್ರಕರಣ – CID ತನಿಖೆಯಿಂದ ಹೊರಬರುತ್ತಿರುವ ಕತ್ತಲೆಯ ಜಾಲ – ಯಾರು ನಿಜವಾದ ಮಾಸ್ಟರ್ ಮೈಂಡ್?
ಮನೆಗಣತಿ ಮಂಗಳೂರು ಮಹಾನಗರ ಪಾಲಿಕೆ-ಸ್ಪೀಕರ್ ಯು ಟಿ ಖಾದರ್ ಚಾಲನೆ
ಬಂಗಾಳ ಚುನಾವಣೆ ಫಲಿತಾಂಶವೇ ಬದಲಾಗಿತ್ತಾ?ಬಂಗಾಳ ರಾಜಕೀಯದಲ್ಲಿ ಹೊಸ ಬಾಂಬ್!ಸುಪ್ರೀಂ ಕೋರ್ಟ್ ಮುಂದೆ ಬಿಜೆಪಿ ಜಯದ ಮೇಲೆ ಟಿಎಂಸಿ ದೊಡ್ಡ ಪ್ರಶ್ನೆ!
ಭೀಕರ ಅಪಘಾತ ಮಹಿಳೆ ಬಲಿ
ಸೂರ್ಯನ ತಾಪಕ್ಕೆ ಜೋಗ ಜಲಪಾತ ದೊಡ್ಡ ಬಂಡೆಯೇ ಒಡೆಯಿತು..ಮಾನವನಿಗೆ ಅಪಾಯ ಇನ್ನಷ್ಟು!
ಮೈ ಜುಮ್ಮೆನ್ನಿಸುವ ಬೈಕ್–ಲಾರಿ ಡಿಕ್ಕಿ ಅಪಘಾತ… ಕ್ಷಣಾರ್ಧದಲ್ಲೇ ಜೀವ ಹೋದ ಹೃದಯವಿದ್ರಾವಕ ರಸ್ತೆ ದುರಂತ
ಅಜಿತ್ ಅಗರ್ಕರ್ ಗೆ ಜಾಕ್ಪಾಟ್
ಶಾಲೆಯ ಮೊದಲ ದಿನವೇ ಕಣ್ಣೀರು ತರಿಸಿದ ಫಿಲಿಪೈನ್ಸ್‌ ಭೂಕಂಪ ಸೃಷ್ಟಿಸಿದ ಭೀಕರತೆ ಮುಗ್ಧ ಮಕ್ಕಳನ್ನು ಆವರಿಸಿದ ಭೀತಿ..
ಜಬಲ್ಪುರ್ ದುರಂತಕ್ಕೆ ಹೊಣೆ ಯಾರು? ಕ್ರಮ ಏನು?
ಡಿಕೆಎಮುಲ್‌ನಿಂದ ₹1,270 ಕೋಟಿ ದಾಖಲೆ ಬೆಳವಣಿಗೆ ಹೊಸ ಮೈಲುಗಲ್ಲು..!
ಅಕ್ರಮ ಪ್ರವೇಶ, ದೌರ್ಜನ್ಯ, ಹಾಗೂ ಕೃಷಿ ಚಟುವಟಿಕೆಗೆ ತಡೆಯ ಬಗ್ಗೆ ದೂರು ದಾಖಲು
ಹೆತ್ತ ಮಗಳನ್ನೇ ವೇಶ್ಯಾವಾಟಿಕೆಗೆ ದೂಡಲು ಯತ್ನಿಸಿದ ತಾಯಿಯ ಜೊತೆಗೆ ಮಗಳನ್ನು ಕಳುಹಿಸಲು ಕೋರ್ಟ್ ನಕಾರ 
ಕೊಲೆ ಆರೋಪಿಗಳ ಕಾರು ಮಾಣಿಯಲ್ಲಿ ಪತ್ತೆ ….!
ಕಾರ್ಕಳದ ವೈದ್ಯಕೀಯ ವಿದ್ಯಾರ್ಥಿನಿ ಭೀಕರ  ಅಪಘಾತಕ್ಕೆ ಬಲಿ
ದವಳ ಕೋ- ಆಪರೇಟಿವ್ನ ಈ ಸಾಲಿನ ವ್ಯವಹಾರ ಎರಡುನೂರು ಕೋಟಿ