📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಬ್ರಹ್ಮಾವರ ಕೆಂಜೂರಿನಲ್ಲಿ ಅನ್ನಭಾಗ್ಯದ ಅಕ್ಕಿ  ಅಕ್ರಮ ದಾಸ್ತಾನು- 15 ಕ್ವಿಂಟಲ್‌ಗೂ ಅಧಿಕ ಅಕ್ಕಿ ವಶ

    ಬ್ರಹ್ಮಾವರ: ಸರ್ಕಾರ ಪಡಿತರ ಚೀಟಿದಾರರಿಗೆ ಉಚಿತವಾಗಿ ವಿತರಿಸುವ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಇರಿಸಿದ್ದ ಆರೋಪದ ಮೇಲೆ ಕೆಂಜೂರು ಗ್ರಾಮದ ಶ್ರೇಯಾ ಜನರಲ್ ಸ್ಟೋರ್‌ ಮೇಲೆ ಅಧಿಕಾರಿಗಳು ದಾಳಿ ನಡೆಸಿ 15 ಕ್ವಿಂಟಲ್‌ಗೂ ಅಧಿಕ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ.

    ಜುಲೈ 20ರಂದು ಸಾರ್ವಜನಿಕರಿಂದ ಬಂದ ದೂರಿನ ಹಿನ್ನೆಲೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳ ಸೂಚನೆಯಂತೆ ಆಹಾರ ನಿರೀಕ್ಷಕ ವಸಂತ ಕುಮಾರ್ ಅವರು ಕೆಂಜೂರು ಗ್ರಾಮದ ಶ್ರೇಯಾ ಜನರಲ್ ಸ್ಟೋರ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಅಂಗಡಿಯ ಪಕ್ಕದ ಕೋಣೆಯಲ್ಲಿ ಅಕ್ಕಿ ಚೀಲಗಳು ಪತ್ತೆಯಾಗಿದ್ದು, ಪರಿಶೀಲಿಸಿದಾಗ ಅವು ಸರ್ಕಾರ ಪಡಿತರ ಚೀಟಿದಾರರಿಗೆ ಉಚಿತವಾಗಿ ವಿತರಿಸುವ ಅಕ್ಕಿಯಾಗಿರುವುದು ಬೆಳಕಿಗೆ ಬಂದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

    ಅಕ್ಕಿಯನ್ನು ವಶಕ್ಕೆ ಪಡೆದು ಅಂಗಡಿ ಮಾಲೀಕರ ಕುರಿತು ವಿಚಾರಿಸಿದಾಗ, ನಾಗರಾಜ ನಾಯ್ಕ್, ತಂದೆ ಕುಪ್ಪ ನಾಯ್ಕ್, ಕೆಂಜೂರು ಗ್ರಾಮ, ಬ್ರಹ್ಮಾವರ ತಾಲೂಕು ಎಂದು ತಿಳಿದುಬಂದಿದೆ. ಅಕ್ಕಿಯನ್ನು ಸಂಗ್ರಹಿಸಿಡಲು ಅಗತ್ಯ ದಾಖಲೆಗಳಿವೆಯೇ ಎಂದು ವಿಚಾರಿಸಿದಾಗ ಯಾವುದೇ ದಾಖಲೆಗಳು ಇಲ್ಲವೆಂದು ತಿಳಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಅಕ್ಕಿಯನ್ನು ಎಲ್ಲಿಂದ ತಂದಿದ್ದಾರೆ ಎಂಬುದಕ್ಕೂ ಸಮರ್ಪಕ ಉತ್ತರ ನೀಡಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

    ಬಳಿಕ ಬ್ರಹ್ಮಾವರ ಪೊಲೀಸ್ ಠಾಣೆಯ ಎಎಸ್‌ಐ ವಿಠಲ ಎಂ. ಹಾಗೂ ಪಂಚರ ಸಮ್ಮುಖದಲ್ಲಿ ಅಕ್ಕಿ ಚೀಲಗಳನ್ನು ತೂಕ ಮಾಡಲಾಗಿದ್ದು, ಒಟ್ಟು 42 ಚೀಲಗಳಲ್ಲಿ 15 ಕ್ವಿಂಟಲ್ 20 ಕೆ.ಜಿ. 62 ಗ್ರಾಂ ಅಕ್ಕಿ ಪತ್ತೆಯಾಗಿದೆ. ವಶಪಡಿಸಿಕೊಂಡ ಅಕ್ಕಿಯ ಅಂದಾಜು ಮೌಲ್ಯ ₹51,680 ಎಂದು ತಿಳಿಸಲಾಗಿದೆ.

    ಈ ಸಂಬಂಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 130/2026ರಂತೆ ಅಗತ್ಯ ವಸ್ತುಗಳ ಕಾಯ್ದೆ-1955ರ ಕಲಂ 3 ಮತ್ತು 7 ಹಾಗೂ ಅಗತ್ಯ ವಸ್ತುಗಳ ಸಾರ್ವಜನಿಕ ವಿತರಣಾ ವ್ಯವಸ್ಥೆ  ಆದೇಶ-2016ರ ಸಂಬಂಧಿತ ಕಲಂಗಳಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಹನಿಟ್ರ್ಯಾಪ್ ಕ್ವೀನ್ ಜೀನತ್ ಇಬ್ರಾಹಿಂ ಗೆ ನ್ಯಾಯಾಂಗ ಬಂಧನ- ಟ್ರ್ಯಾಪ್ ನಲ್ಲಿ ಹೊಸ ಹೊಸ ಹೆಸರುಗಳು !!!?
    ಜಿಮ್,“ಫಿಟ್ನೆಸ್ ಸೆಂಟರ್‌ಗಳಲ್ಲಿ ಹೆಚ್ಚುತ್ತಿರುವ ಅಪಾಯಕಾರಿ ಸಂಬಂಧಗಳು: ಜಿಮ್ ಟ್ರೈನರ್ ಆತ್ಮಹತ್ಯೆ
    ಮೊಸಾದ್ ಏಜೆಂಟ್ ಇಸ್ಮಾಯಿಲ್ ಖಾನಿಯಿಂದ ಇರಾನಿ ಸರ್ವೋಚ್ಛ ನಾಯಕನ  ಹತ್ಯೆ
    ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳು …ಮಕ್ಕಳ ಶಾಲೆಯಾ? ನ್ಯೂಸ್ ಚಾನೆಲ್ಲಾ? ಬ್ರೇಕಿಂಗ್ ನ್ಯೂಸ್…ಪಠ್ಯಪುಸ್ತಕದಿಂದ ಪ್ರೈಮ್‌ಟೈಮ್‌ವರೆಗೆ..!
    ಕಾಂಗ್ರೆಸ್–ಮುಸ್ಲಿಂ ಸಮುದಾಯ ಸಂಬಂಧದಲ್ಲಿ ದೊಡ್ಡ ಬಿರುಕು?
    ಚಿಕ್ಕಸ್ವಾಮಿ-ದೊಡ್ಡಸ್ವಾಮಿ ಭಕ್ತರ ಮಿಲನ! ಕಾಶಿಮಠ ವಿವಾದಕ್ಕೆ ಸಂಯಮೇ೦ದ್ರ ಮದ್ದು
    ಶಾಂತಿ ಕಾಪಾಡಿ, ವದಂತಿಗಳಿಗೆ ಕಿವಿಗೊಡಬೇಡಿ: ಪ್ರತಿಭಟನಾಕಾರರಿಗೆ ದೆಹಲಿ ಪೊಲೀಸರ ಮನವಿ
    ನಿಮ್ಮ ಪ್ರೊಫೈಲ್ ಪಿಕ್ಚರ್ ಸೇಫ್ ಇದೆಯೇ?ಸ್ಮಾರ್ಟ್‌ಫೋನ್ ಬಳಕೆದಾರರೇ ಎಚ್ಚರ! AI ಡೀಪ್‌ಫೇಕ್ ಮಾಯಾಜಾಲ, ಸೈಬರ್ ಕ್ರೈಂ ಪೊಲೀಸರ ಅಧಿಕೃತ ವಾರ್ನಿಂಗ್!
    17ನೇ ಆಯವ್ಯಯ ಮಂಡನೆ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ
    ತಿಮರೋಡಿ ಸೇರಿ ನಾಲ್ವರಿಗೆ ಕೇಸ್…
    ಹೊರಗೆ ಕ್ಯಾಂಟೀನ್…ಆದ್ರೆ ಒಳಗೆ ನಡೆಯುತ್ತಿತ್ತು ಬೇರೆದ್ದೇ ಆಟ..!ಬಯಲಾಯ್ತು ಬೆಚ್ಚಿಬೀಳಿಸುವ ದಂಧೆ. 
    ಭೀಕರ ಅಪಘಾತಕ್ಕೆ ಸ್ಥಳೀಯ ನಾಯಕ ಸೇರಿ ಇಬ್ಬರು ದುರ್ಮರಣ 
    ಸಚಿವ ಜಮೀರ್ ಕಥೆ ಗೋವಿಂದ!!!?
    ವಿಟ್ಲ ಪಟಾಕಿ ತಯಾರಿಕಾ ಘಟಕದಲ್ಲಿ ಪಟಾಕಿ ಸ್ಫೋಟ
    ಪಹಲ್ಗಾಂಮ್ ದಾಳಿಯ ಒಂದು ವರ್ಷ: ಇನ್ನೂ ಮುಗಿಯದ ನೋವು, ಮರೆಯಲಾಗದ ನೆನಪುಗಳು
    ಅಪ್ಪನ ಶವದ ಪಕ್ಕದಲ್ಲೇ ರಕ್ತದ ಮಡುವಿನಲ್ಲಿ ಮಗು…!ಧಾರವಾಡದಲ್ಲಿ ಬೆಚ್ಚಿಬೀಳಿಸಿದ ವೈದ್ಯ ಕುಟುಂಬ ದುರಂತ..!ಪತ್ನಿ ಪೊಲೀಸ್ ವಶದಲ್ಲಿ, ತನಿಖೆ ತೀವ್ರ .
    ಕುಡಿತದ ಅಮಲಿನಲ್ಲಿ ಹೆತ್ತ ತಾಯಿಯನ್ನೇ ಕೊಂದ ಮಗಳು, ಮೊಮ್ಮಗ: ಕೆಂಗೇರಿಯಲ್ಲಿ ಕರುಳು ಹರಿಯುವ ಕೃತ್ಯ!
    ಮಧ್ಯಪ್ರಾಚ್ಯದಲ್ಲಿ ಯುದ್ಧ– ಸಂಕಷ್ಟದಲ್ಲಿ ಜಗತ್ತು-ಉಸಿರು ತಡೆದ ಪರಿಸ್ಥಿತಿ!ಏನಾಗ್ತಾ ಇದೆ…
    ಸುಬ್ರಹ್ಮಣ್ಯ ಅಭಿವೃದ್ಧಿ — ಸ್ಥಳೀಯರ ಜೊತೆಗೂಡಿ ಮಾತ್ರ ಸಾಧ್ಯ!”
    ಸಾಲದ ಭಾರವೂ ಶಿಸ್ತಿನ ಮುಂದೆ ಸೋಲುತ್ತದೆ…! ಇದಕ್ಕೆ ಸಾಕ್ಷಿಯೇ ಸಾಕ್ಷಿ..!₹80 ಲಕ್ಷ ಸಾಲ-1 ವರ್ಷ ಮತ್ತು ಒಂದು ಡೆಡಿಕೇಟೆಡ್ ಟಾರ್ಗೆಟ್..!
    FSSAI ಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ…!ಕಾರ್ಪೊರೇಟ್ ಒತ್ತಡಕ್ಕೆ ಮಣಿದಿರಾ?ಪ್ಯಾಕ್ ಆಹಾರಕ್ಕೆ ಎಚ್ಚರಿಕೆ ಲೇಬಲ್ ಕಡ್ಡಾಯ ಯಾಕಿಲ್ಲ? 
    “ಮಂಜಿನ ನಡುವೆ ಕ್ಷಣಾರ್ಧದಲ್ಲಿ ಮಾಯವಾದ ಮಗಳು”ಶ್ರೀನಂದಾ ಶವವಾಗಿ ಪತ್ತೆ…!
    ಸರ್ಕಾರಿ ವೈದ್ಯರ ಅನರ್ದಿಷ್ಟಾವಧಿ ಮುಷ್ಕರ ರದ್ದು
    ಒಂದೂವರೆ ವರ್ಷ ಫ್ರೀ ಬಸ್  ಪ್ರಯಾಣ…ಕೊನೆಯಲ್ಲಿ ದಂಡ ಮತ್ತು ಜೈಲು ಶಿಕ್ಷೆ!
    ಪ್ರಧಾನಿ ಮೋದಿ ನೆದರ್ಲ್ಯಾಂಡ್ ಭೇಟಿ ಭಾರತ ಸಹಕಾರದ ಸೇತುವೆ ಕಟ್ಟುವ ದ್ವಿಪಕ್ಷೀಯ ಸಂಬಂಧಗಳ ವಿಸ್ತರಣೆ…
    ಮಂಗಳೂರಲ್ಲಿ ಮಳೆಯ ಅಬ್ಬರ… ಗುಡುಗು-ಮಿಂಚಿನ ಆಟ ದಕ್ಷಿಣ ಕನ್ನಡದಲ್ಲಿ ಮತ್ತೆ pre-ಮಾನ್ಸೂನ್ ಮ್ಯಾಜಿಕ್!?
    ಸಿಖ್ ವಿರೋಧಿ ದಂಗೆಯ ಆರೋಪಿ, ಸಜ್ಜನ್ ಕುಮಾರ್ ಜೈಲಿನಲ್ಲಿ ನಿಧನ
    ಪುತ್ತೂರಿನ ಕೃಷ್ಣ ಜೆ. ರಾವ್ ಪ್ರಕರಣಕ್ಕೆ ಹೈಕೋರ್ಟ್ ಬ್ರೇಕ್!“ಮಧ್ಯಂತರ ತೀರ್ಪು: ₹75K ತಿಂಗಳ ಸಹಾಯ ಷರತ್ತು”
    ಅಮೇರಿಕಾಕ್ಕೆ ಅಷ್ಟು ಧೈರ್ಯದಿಂದ ಎಲ್ಲಿಂದ ಬಂತು?
    ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆಯ ಕ್ರೆಡಿಟ್ ಪಡೆದುಕೊಳ್ಳಲು ಶುರುವಾಯಿತು ಫೈಟ್