📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಬ್ರಹ್ಮಾವರ, ಮಂದಾರ್ತಿ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ಹೇಳೋರು ಕೇಳೋರು ಯಾರು ಇಲ್ವಾ?

ಅಲ್ಲಿನ ಜನರಿಗೆ ಹೆಚ್ಚಿನ ಬಡ್ಡಿ ಹಾಕಿ ಸಾಲ ವಸೂಲಾತಿ ಮಾಡುವ ಈ ಎರಡು ಕೋ ಆಪರೇಟಿವ್ ಸೊಸೈಟಿಗಳು ಜನರಿಂದ ವಸೂಲಿ ಮಾಡಿದ ಬಡ್ಡಿ ಹಣದಲ್ಲಿ ಮೋಜು ಮಸ್ತಿ ಮಾಡಲು ಉತ್ತರ ಭಾರತದ ಪ್ರವಾಸಕ್ಕೆ ಎಲ್ಲಾ ಡೈರೆಕ್ಟರ್ಸ್ಗಳ ಜೊತೆ ಹೋಗಿದ್ದಾರೆ ಎಂಬ ಮಾಹಿತಿ ಪತ್ರಿಕಾ ಕಚೇರಿಗೆ ಬಂದು ತಲುಪಿದೆ.

ಸೊಸೈಟಿಯ ಹಣದಲ್ಲಿ ಸಿ ಇ ಒ ಸೇರಿದಂತೆ ಎಲ್ಲಾ ಡೈರೆಕ್ಟರ್ಗಳು ಹಿಮಾಚಲ್ ಪ್ರದೇಶ, ಶಿಮ್ಲಾ, ಮನಾಲಿ ಸೇರಿದಂತೆ ಕೆಲವು ಪ್ರಮುಖ ಪ್ರೇಕ್ಷಣೀಯ ಸ್ಥಳಗಳಿಗೆ ಹೋಗಿದ್ದಾರೆ ಅನ್ನೋದು ಪಕ್ಕ ಮಾಹಿತಿಯಾಗಿದೆ. ಈ ಒಂದು ಪ್ರವಾಸಕ್ಕೆ ಸೊಸೈಟಿ ಕಡೆಯಿಂದ ತೇಪೆ ಹಾಕುವ ಉತ್ತರ ಬರುತ್ತದೆ, ಅಲ್ಲಿನ ಕೃಷಿ ಚಟುವಟಿಕೆ ಹಾಗೂ ಸಹಕಾರಿ ಚಟುವಟಿಕೆಯ ಅಭ್ಯಾಸಿಸುವ ನಿಟ್ಟಿನಲ್ಲಿ ಈ ಪ್ರವಾಸ ಹಾಕಿಕೊಳ್ಳಲಾಗಿದೆ. ಅಲ್ಲಿನ ಲಾಭದಾಯಕವನ್ನು ನಮ್ಮಲ್ಲಿಯೂ ಅಳವಡಿಸಿ ಕೊಳ್ಳಲು ಪ್ರಯತ್ನಿಸಲಾಗುವುದು ಎಂಬ  ನಿರೀಕ್ಷಿತ ಉತ್ತರವು ಅವರ ಕಡೆಯಿಂದ ಬರುತ್ತದೆ ಬಿಡಿ.

ಅದೇನೇ ಇರಲಿ ಈಗ ಈ ಎರಡು ಕೋ ಆಪರೇಟಿವ್ ಸೊಸೈಟಿಗಳ ಡೈರೆಕ್ಟರ್ಸ್ ಗಳು ಅಭ್ಯಾಸದ ನೆಪದ ಮೇಲೆ ಸೊಸೈಟಿಯ ಹಣದಲ್ಲಿ ಈ ಒಂದು ಪ್ರವಾಸಕ್ಕೆ ಹೋಗಿರುವಂಥದ್ದು ಅನೇಕ ಅನುಮಾನಗಳಿಗೆ ಕಾರಣವಾಗಿದೆ. ಒಬ್ಬೊಬ್ಬ ಡೈರೆಕ್ಟರ್ಗಳಿಗೆ ಒಂದೊಂದು ಲಕ್ಷವನ್ನು ಹಂಚಲಾಗಿದೆ ಎನ್ನುವುದು ಪ್ರಾಥಮಿಕ ಮಾಹಿತಿ. ಉಳಿದ ಮಾಹಿತಿಯನ್ನು ಪತ್ರಿಕಾ ಸಂಸ್ಥೆಯು ಕಲೆ ಹಾಕುವ ಕೆಲಸ ಮಾಡಲಿದೆ.

ನಮ್ಮಲ್ಲಿಯ ಕೃಷಿ ಚಟುವಟಿಕೆಗೋ ಹಿಮಾಚಲ್ ಪ್ರದೇಶ್ ಹಾಗೂ ಶೀತ ಪ್ರದೇಶದ ಕೃಷಿ ಚಟುವಟಿಕೆಗೂ ಅಜಗಜಾಂತರ ವ್ಯತ್ಯಾಸವಿದೆ ಹೀಗಿರುವಾಗ ಅಲ್ಲಿಯ ಕೃಷಿ ಚಟುವಟಿಕೆಯ ಅಭ್ಯಾಸ ಮಾಡಲು ಹೋದವರಿಂದ ಈ ಪ್ರದೇಶಕ್ಕೆ ಯಾವ ಲಾಭವೂ ಆಗುವುದಿಲ್ಲ ಈ ಅಭ್ಯಾಸದ ಪ್ರವಾಸ ಅನ್ನೋದು ಜನರ ಕಣ್ಣಿಗೆ ಪರದೆ ಎಳೆಯಲು ಇರುವ ಮಾರ್ಗ ಅಷ್ಟೇ , ಇದೇನು ಅಭ್ಯಾಸ ಪ್ರವಾಸವಲ್ಲ ಮೋಜು-ಮಸ್ತಿಯ ಪ್ರವಾಸ ಅಷ್ಟೇ ಅಂತ ತಿಳಿದುಕೊಳ್ಳಬೇಕು.

ಇದರ ಜೊತೆಗೆ ಮಂದಾರ್ತಿ ವ್ಯವಸಾಯ ಸೇವಾ ಸಹಕಾರಿ ಸಂಘ ಇದರ ಲಪಡಾ ಬಗ್ಗೆ ಸಾಕಷ್ಟು ಮಾಹಿತಿಯು ತೋರಿಬತ್ತಿದೆ. ಕೇವಲ ಎರಡು ವರ್ಷದ ಹಿಂದೆ ಬರೋಬ್ಬರಿ 8 ಕೋಟಿ ಖರ್ಚು ಮಾಡಿ ಸಹಕಾರಿ  ಸೌಧ ” ಎಂಬ ಕಟ್ಟಡವನ್ನು ನಿರ್ಮಾಣ ಮಾಡಿತ್ತು. ಎಂಟು ಕೋಟಿ ಖರ್ಚು ಮಾಡಿ ನಿರ್ಮಾಣ ಮಾಡಲಾದ ಆ ಕಟ್ಟಡ ಎರಡೇ ವರ್ಷದಲ್ಲಿ ಲೀಕೇಜ್ ಪ್ರಾಬ್ಲಮ್ ಗೆ ತುತ್ತಾಗಿದೆ. ಆ ಲೀಕೆಜ್ ಸರಿಪಡಿಸಲು ಈಗ ಮತ್ತೆ ಬರೋಬ್ಬರಿ 32 ಲಕ್ಷ ವಿನಿಯೋಗಿಸಲು ರೆಡಿಯಾಗಿದೆ ಕೂಡ. ಕಾರ್ಯದರ್ಶಿ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿ ಒಟ್ಟಾಗಿ ಸೇರಿಯೇ ಒಳ್ಳೆಯ ಗೆಬರುಕೆ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.

ಅದೇನೇ ಇರಲಿ ಈ ಒಂದು ಸೊಸೈಟಿಗಳ ಮೇಲುಸ್ತುವಾರಿಯನ್ನು ನೋಡಿಕೊಳ್ಳಬೇಕಾದ ಅಧಿಕಾರಿಗಳು ಇತ್ತ ಗಮನಹರಿಸಬೇಕಿದೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

₹5ಕ್ಕೆ ಇಡ್ಲಿ… 56 ವರ್ಷಗಳಿಂದ ಅದೇ ರುಚಿ! 70ರ ಹರೆಯದಲ್ಲೂ ಪ್ರತಿದಿನ 1,500 ಇಡ್ಲಿ ಮಾಡಿ ಜನರ ಮನ ಗೆದ್ದ ಕರ್ನಾಟಕದ ಅನ್ನದಾತ…
ಭರತ್ ತಿವಾರಿ ಎನ್‌ಕೌಂಟರ್ -ಬಿಹಾರ ಎಡಿಜಿಪಿಯಿಂದಲೇ ಪೊಲೀಸ್ ಲೋಪದ ಒಪ್ಪಿಗೆ: ಶಾಹಪುರ SHO ಸೇರಿ 5 ಅಧಿಕಾರಿಗಳು ಸಸ್ಪೆಂಡ್!
ಸಂಸತ್ತಿನಲ್ಲಿ ಪ್ರಶ್ನೆ ಎದುರಿಸಲು ಆಗದೆ,  ಪ್ರಶ್ನೆಯನ್ನೇ ಕೇಳದಂತೆ ಮಾಡಿದರು – ರಾಹುಲ್ ಗಾಂಧಿ
🚨 ದೇಶಾದ್ಯಂತ ಉಗ್ರ ಜಾಲದ ಮೇಲೆ ದೊಡ್ಡ ದಾಳಿ: ಕರ್ನಾಟಕದ ಬಳ್ಳಾರಿಯ ಅಬ್ದುಲ್ ಸಲಾಂ ಸೇರಿದಂತೆ 7 ರಾಜ್ಯಗಳಲ್ಲಿ 12 ಮಂದಿ ಬಂಧನ — ಯುವಕರಿಗೆ ಎಚ್ಚರಿಕೆ!
ತಿರುಮಲ ತಿಮ್ಮಪ್ಪನ 3,550 ಮೆಟ್ಟಿಲು ಹತ್ತಿದ 116 ವರ್ಷದ ನವನೀತಮ್ಮ ಕರ್ನಾಟಕದ ಶತಾಯುಷಿ!
book ಮಾಡಿದ ನಿಮ್ಮ ಹೊಸ ಕಾರು-ಬೈಕ್ ಇನ್ನೂ ಬಂದಿಲ್ವಾ?ಪಶ್ಚಿಮ ಏಷ್ಯಾ ಯುದ್ಧದಿಂದ ಸರಬರಾಜು ವಿಳಂಬ…!
ಬಲಪಂಥೀಯರ ಜೊತೆ ಮುಖ್ಯಮಂತ್ರಿಗಳ ಸ್ನೇಹ : ಅಭದ್ರತೆ ಯಾರಿಗೆಲ್ಲ?
ಭಾರತ ಬಗ್ಗೆ ಟ್ರಂಪ್ ಡಬಲ್ ಸ್ಟ್ಯಾಂಡ್…!ವಿವಾದ ಸೃಷ್ಟಿಸಿ, ಬಳಿಕ ಸಮಾಧಾನದ ಮಾತು
ಶಿಕ್ಷಣ ಸುಧಾರಣೆಗೆ ರಾಜ್ಯ ಸರ್ಕಾರದ ಭರ್ಜರಿ ಪ್ಲಾನ್ ಬಹಿರಂಗ!
ಇನ್‌ಸ್ಟಾಗ್ರಾಮ್ ವ್ಯಾಮೋಹಕ್ಕೆ ಹೆತ್ತ ತಾಯಿಗೇ ವಿಷವಿಕ್ಕಿದ ಮಗಳು..ಪ್ರೀತಿಯ ಹೆಸರಲ್ಲಿ ಹಾದಿ ತಪ್ಪಿದ ಹದಿಹರೆಯ ಮುಂದೇನಾಯತು?
ಮೂಡಬಿದ್ರಿ ಪುರಸಭೆಯ ಬೇಜವಾಬ್ದಾರಿ ಹಾಗೂ ವೇಸ್ಟ್ ಆಗುತ್ತಿರುವ ನೀರು
₹1270 ಕೋಟಿ ಕಾನ್ಟ್ರಾಕ್ಟ್ ಹಗರಣ -CM ಖಾಂಡು ಕುಟುಂಬ ವಿಚಾರಣೆ-ಸುಪ್ರೀಂಕೋರ್ಟ್ ಸಿಬಿಐಗೆ ಆದೇಶ..
ಬೈಕಂಪಾಡಿಯಲ್ಲಿ ನಡುರಾತ್ರಿ ನಡೆದ ಸಿನೆಮಾ ಸ್ಟೈಲ್ ದರೋಡೆ: ಕೇರಳ ಉದ್ಯಮಿ ಕುಟುಂಬಕ್ಕೆ ಗನ್ ಪಾಯಿಂಟ್ ಶಾಕ್!
ಸಚಿವ ಜಮೀರ್ ಅಹಮದ್ ಹಚ್ಚಿದ ಪಟಾಕಿಗೆ ಕಾಂಗ್ರೆಸ್ ಕೋಟೆಯಲ್ಲಿ ಬಿರುಕು..!?
ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆ ನಿರ್ಧಾರ ಬದಲಾಗುತ್ತದೆಯೇ? ಕರಾವಳಿ ಕಾದಿದೆ ಉಸಿರು ಹಿಡಿದು!
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ಯಾಂಕಾಕ್‌ನಿಂದ ಬಂದ ಪ್ರಯಾಣಿಕನ ಬ್ಯಾಗ್‌ನಲ್ಲಿ 47 ಜೀವಂತ ಅಪರೂಪದ ಪ್ರಾಣಿಗಳು ಪತ್ತೆ! 
ಅಮೆರಿಕ–ಇರಾನ್ ಸಂಘರ್ಷಕ್ಕೆ ಮತ್ತೆ ಹೊತ್ತಿ ಉರಿದ ಮಧ್ಯಪ್ರಾಚ್ಯ! ಕದನ ವಿರಾಮ ಸಂಪೂರ್ಣ ವಿಫಲ..
ಹೆಣ್ಣು ಎಂಬ ಕನಿಕರ, ಸಿಗದ ಹಾಗೆ ಮಾಡಿದ ಮಾಯಾಂಗನೇ…
ದೇಶಕ್ಕಾಗಿ ಹಾರಿದ ಯುವ ಪೈಲಟ್: ಅಸ್ಸಾಂ ದುರಂತದಲ್ಲಿ ಐಎಎಫ್ ಅಧಿಕಾರಿ ವೀರಮರಣ
ಕೆತ್ತಿಕಲ್‌ನಿಂದ ಚಾರ್ಮಾಡಿವರೆಗೆ ಅಪಾಯದ ಗಂಟೆ! ಭೂಕುಸಿತ ಭೀತಿಯಲ್ಲಿ ಕರಾವಳಿ ರಸ್ತೆಗಳು !ಮಳೆ ಬಂದ ಮೇಲೆ ಸಭೆ, ಪರಿಶೀಲನೆ… ಆದರೆ ಮುನ್ನೆಚ್ಚರಿಕೆ ಎಲ್ಲಿದೆ?
‘₹1ಕ್ಕೆ ಫ್ಯಾಷನ್’ ಜಾಹೀರಾತು ವೈರಲ್… ಮಾಲಾಡ್ ಮಾಲ್‌ನಲ್ಲಿ ನಿಯಂತ್ರಣ ತಪ್ಪಿದ ಜನಸಾಗರ-ಸ್ಟ್ಯಾಂಪೀಡ್ ಭೀತಿ ಮೂಡಿಸಿದ ಜನಸಂದಣಿ!
ನಾಟೆಕಲ್ ತಿರುವಿನಲ್ಲಿ ಪಿ.ಎ. ಕಾಲೇಜು ಬಸ್ ಅಪಘಾತ: ಬಸ್‌ನಡಿ ಸಿಲುಕಿ ಬೈಕ್ ಸವಾರ ಗಂಭೀರ ಗಾಯಗೊಂಡು ಸಾವು
ಚುನಾವಣೆಯವರೆಗೆ ಮೌನ, ನಂತರ LPG ದರ ಭಾರಿ ಏರಿಕೆ –ಇದು ರಾಜಕೀಯ ಅಜೆಂಡಾನಾ?
2026 ವಿಧಾನಸಭೆ ಚುನಾವಣೆ – ಮುಖ್ಯ ಮಾಹಿತಿ
ಜೆಡಿಎಸ್  ಜನರಲ್ ಸೆಕ್ರೆಟರಿಯಾಗಿ ಯೋಗೇಶ್ ಶೆಟ್ಟಿ ಜಪ್ಪು ಆಯ್ಕೆಯ ಲೆಕ್ಕಾಚಾರವೇನು?
ರಾಕಿಂಗ್ ಸ್ಟಾರ್ ಯಶ್ ‘ಟಾಕ್ಸಿಕ್’ ಸಿನಿಮಾ ಅಪ್ಡೇಟ್: ಸೋಶಿಯಲ್ ಮೀಡಿಯಾದಲ್ಲಿ ಧೂಳೆಬ್ಬಿಸ್ತಿರೋ ಯಶ್ ಡೈಲಾಗ್!
ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷದ ಕಮೆಂಟ್ ಗಳನ್ನು ಹಾಕಿದ ಆರೋಪಿಯ ಬಂಧನ
ಮಂಗಳೂರು ನಗರದಲ್ಲಿ ಭಾರೀ ಪ್ರಮಾಣದ MDMA ವಶ – ಇಬ್ಬರು ಡ್ರಗ್ ಪೆಡ್ಲರ್‌ಗಳ ಬಂಧನ…
ಆರ್‌ಸಿಬಿ ಎದುರಿಸಲು ರಾಯಲ್ಸ್ ರೆಡಿ??: ಕ್ರಿಕೆಟ್ ಜಗತ್ತಿಗೆ ಶಾಕ್ ಕೊಟ್ಟ ಬಿಹಾರದ ಬಾಲಕ-ಸಚಿನ್ ತೆಂಡೂಲ್ಕರ್ ಕೂಡ ಮೆಚ್ಚಿದ ಆ 29 ಎಸೆತಗಳ ರುದ್ರತಾಂಡವ!
*ಬೈಕಂಪಾಡಿ ಹೆದ್ದಾರಿ ಡಕಾಯಿತಿ, 23 ಲಕ್ಷ ಮೌಲ್ಯದ ಸೊತ್ತು ದರೋಡೆ ಪ್ರಕರಣ: 3 ಆರೋಪಿಗಳು ಸೆರೆ.