📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಗ್ಯಾಸ್ ಅಭಾವ ಮತ್ತು ಬೆಲೆ ಏರಿಕೆ, ಸುಳ್ಳು ಎನ್ನುತ್ತಿದೆ-HPCL

ಸೋಶಿಯಲ್ ಮೀಡಿಯಾದಲ್ಲಿ “ದೇಶದಲ್ಲಿ ಪೆಟ್ರೋಲ್-ಡೀಸೆಲ್ ಕೊರತೆ ಉಂಟಾಗಿದೆ” ಎಂಬ ಸಂದೇಶಗಳು ವೈರಲ್ ಆಗುತ್ತಿರುವ ಹಿನ್ನೆಲೆ ಜನರಲ್ಲಿ ಆತಂಕ ಮೂಡಿದೆ. ಆದರೆ ಸರ್ಕಾರಿ ತೈಲ ಕಂಪನಿಗಳು ಈ ಸುದ್ದಿಯನ್ನು ಸ್ಪಷ್ಟವಾಗಿ ತಪ್ಪು ಮತ್ತು ದಾರಿ ತಪ್ಪಿಸುವ ಮಾಹಿತಿ ಎಂದು ಹೇಳಿವೆ.

ಭಾರತದ ಪ್ರಮುಖ ತೈಲ ಕಂಪನಿಗಳಾದ HPCL, IndianOil ಮತ್ತು BPCL ಸ್ಪಷ್ಟಪಡಿಸಿರುವುದೇನೆಂದರೆ ದೇಶದಲ್ಲಿ ಪೆಟ್ರೋಲ್, ಡೀಸೆಲ್ ಮತ್ತು LPG ಇಂಧನದ ಸಮರ್ಪಕ ಸಂಗ್ರಹ ಇದೆ ಮತ್ತು ಸರಬರಾಜು ಸಾಮಾನ್ಯವಾಗಿ ನಡೆಯುತ್ತಿದೆ. ಆದ್ದರಿಂದ ಜನರು ಆತಂಕಪಟ್ಟು ಪೆಟ್ರೋಲ್ ಬಂಕ್‌ಗಳಿಗೆ ದೌಡಾಯಿಸುವ ಅಗತ್ಯವಿಲ್ಲ ಎಂದು ಕಂಪನಿಗಳು ಮನವಿ ಮಾಡಿವೆ.

HPCL ಅಧಿಕೃತವಾಗಿ ತನ್ನ ಪ್ರಕಟಣೆಯಲ್ಲಿ ,

“ಕೆಲವು ಪ್ರದೇಶಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಬಗ್ಗೆ ಹರಡುತ್ತಿರುವ ಸಂದೇಶಗಳು ತಪ್ಪು ಮತ್ತು ಆಧಾರರಹಿತ. ದೇಶದಾದ್ಯಂತ ಇಂಧನ ಸರಬರಾಜು ಸಾಮಾನ್ಯವಾಗಿದೆ ಮತ್ತು ಸಾಕಷ್ಟು ಸಂಗ್ರಹ ಲಭ್ಯವಿದೆ. “ ಎಂದು ಹೇಳಿದೆ.

ಈಗಾಗಲೇ ಅಧಿಕೃತವಾಗಿ ಎಲ್ಪಿಜಿ ದರ ಹೆಚ್ಚಾಗಿದೆ ಅದನ್ನು ಯಾವ ತೈಲ ಕಂಪನಿಗಳು ಒಪ್ಪಿಕೊಂಡಿಲ್ಲ ಅದರ ಬಗ್ಗೆ ಸ್ಪಷ್ಟನೆಯನ್ನು ನೀಡಿಲ್ಲ. ಜೊತೆಗೆ ಈಗಾಗಲೇ ಬೆಂಗಳೂರು ಸೇರಿದಂತೆ ಅನೇಕ ಕಡೆ , ಹೋಟೆಲ್ ಮಾಲೀಕರು ಅಡುಗೆ ಅನಿಲ ಕೊರತೆಯ ಕಾರಣದಿಂದ ವ್ಯವಹಾರ ಸ್ಥಗಿತಗೊಳಿಸುವುದರ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದು ಸುಳ್ಳಲ್ಲ. ಆದರೂ ಆ ಯಾವ ವಿಚಾರವನ್ನು ಈ ತೈಲ ಕಂಪನಿಗಳು ಗಮನಿಸದೆ ಕೇವಲ ತಿಪ್ಪೆ ಸಾರಿಸುವ ರೀತಿಯಲ್ಲಿ ಪಕ್ಕನೆ ನೀಡಿ ಮೌನವಹಿಸಿವೆ. ಇದು ಆ ಕಂಪನಿಗಳ ಅಧಿಕೃತ ಹೇಳಿಕೆ ಆಗಿದ್ದರೆ ಮಧ್ಯದಲ್ಲಿ ಯಾರು ಧರ ಹೆಚ್ಚಳ ಮಾಡಿದ್ದಾರೆ ಅನ್ನುವುದನ್ನು ಸರ್ಕಾರ ತನಿಖೆ ನಡೆಸಬೇಕು ಹಾಗೂ ಅನಿಲ ಪುರೋಹಿಕೆಗೆ ಆಗುತ್ತಿರುವ ವ್ಯಕ್ತಿಯದ ಬಗ್ಗೆಯೂ ತನಿಖೆಯಾಗಬೇಕಾಗುತ್ತದೆ.

ಅದಿರಲಿ ಮದ್ಯಪ್ರಾಚ್ಯದ ಯುದ್ಧದ ಪರಿಣಾಮ ಭಾರತಕ್ಕೆ ಯಾವ ಮಟ್ಟಿಗೆ ಬಿಸಿ ತಟ್ಟುತ್ತದೆ ಅಂತ  ಗಮನಿಸಿದ್ರೆ, ಈಗಾಗಲೇ  lPG ಸಿಲಿಂಡರ್ ಬೆಲೆ ಹೆಚ್ಚಳವಾಗಿದೆ. ಅಡುಗೆ ಅನಿಲದ ಬೆಲೆ ಸಿಲಿಂಡರ್ ಗೆ 60 ರೂಪಾಯಿ ಹೆಚ್ಚಾಗಿದೆ. ಕಮರ್ಷಿಯಲ್ ಸಿಲೆಂಡರ್ ಬೆಲೆ 300 ರಿಂದ 400 ಹೆಚ್ಚಾಗಿದೆ. ಈ ವ್ಯತ್ಯಯವನ್ನ  ಎಲ್ಲಾ  ಬಳಕೆದಾರರು ಅನುಭವಿಸ್ತಾ ಇದ್ದಾರೆ. ಸರಬುರಾಜು ಕೊರತೆಯಿಂದ ಸಿಲಿಂಡರಗಳ ಪೂರೈಕೆ ಸ್ಥಗಿತಗೊಂಡಿದೆ. 50 ದಿನಗಳಿಗೆ ಆಗುವಷ್ಟು ಮಾತ್ರ ದಾಸ್ತಾನು ಇದೆ ಅಂತ ಭಾರತ ಸರ್ಕಾರ ಹೇಳಿದೆ. ಈಗಾಗ್ಲೇ ಬೆಂಗಳೂರಿನ ಕೆಲವು ಹೋಟೆಲ್ ರೆಸ್ಟೋರೆಂಟ್ ಗಳು ಇಂದು ಮಾರ್ಚ್ 10ರಿಂದ ಎಲ್ಪಿಜಿ ಇಲ್ಲದೇ ಹೋಟೆಲ್  ಮುಚ್ಚುವ ನಿರ್ಧಾರಕ್ಕೆ ಬಂದಿದೆ. ಸಿಲಿಂಡರ್ ಅಭಾವ ಉಂಟಾಗಬಹುದು ಅನ್ನುವ ಭಯದಿಂದ ಜನರು ಸಿಲಿಂಡರ್ ದಾಸ್ತಾನಿಗೆ ಮುಗಿಬಿದ್ದಿದ್ದಾರೆ.

ಅಷ್ಟೇ ಅಲ್ಲ ಇದರ ಪರಿಣಾಮ, ಪುಣೆಯ ಸ್ಮಶಾನದ ಮೇಲು ಬಿದ್ದಿದೆ. ಗ್ಯಾಸ್ ಮೂಲಕ ಬರ್ನ್ ಮಾಡಲಾಗುತ್ತಿದ್ದ  ಶವಗಳಿಗೆ ಇನ್ನು ವಿದ್ಯುತ್ ಅಥವಾ ಕಟ್ಟಿಗೆಯ ಮೊರೆ ಅನಿವಾರ್ಯ. ಇವತ್ತಿನಿಂದ ಸಿಲೆಂಡರು ಮೂಲಕ ಬರ್ನ್ ಮಾಡುವುದಕ್ಕೆ ತಡೆ ಒಡ್ಡಲಾಗಿದೆ ಎಂಬ ಮಾಹಿತಿ ಬರುತ್ತಿದೆ.

ಸಂಬಂಧಪಟ್ಟ ಸಚಿವರು ಹಾಗೂ ಅಧಿಕಾರಿಗಳು ಈ ಬಗ್ಗೆ ಇನ್ನೂ ಹೆಚ್ಚಾಗಿ ತಲೆಕೆಡಿಸಿಕೊಂಡಂತೆ ಕಾಣುತ್ತಿಲ್ಲ. ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ಕೆಲವರು ತಮ್ಮ ಬೇಳೆ ಬೇಯಿಸಿಕೊಳ್ಳಲು ಕಾಳ ಸಂತೆಯ ಮೂಲಕ ದರ ಹೆಚ್ಚಳ ಮಾಡಿ ಜನರಿಗೆ ತೊಂದರೆ ಕೊಡುವ ಪರಿಪಾಠವಿದೆ. ಈಗಾಗಲೇ ಅದು ಪ್ರಾರಂಭವೂ ಆಗಿದೆ. ಈ ಬಗ್ಗೆ ಖುದ್ದು ಸರ್ಕಾರವೇ ಯಾವುದೇ ಬೆಲೆಯನ್ನು ಹೆಚ್ಚಳ ಮಾಡದಂತೆ ಖಡಕ್ ಆದೇಶ ನೀಡುವುದಷ್ಟೇ ಅಲ್ಲ ಅದು ಪಾಲನೆ ಯಾಗುತ್ತಿದೆಯಾ ಅನ್ನುವುದರ ಮೇಲೆ ಕಟ್ಟು ನಿಟ್ಟಿನ ನಿಗಾ ಇಡುವುದು ಮುಖ್ಯವಾಗುತ್ತದೆ ಎಂಬ ಮಾತುಗಳು ಸಾರ್ವಜನಿಕ ವಲಯದಿಂದ ಹಾರಿದು ಬರುತ್ತಿದೆ

COMMENTS

Login with Gmail to comment

ಇನ್ನಷ್ಟು ಸುದ್ದಿ

ಸಾಲದ ಹಣ ಕೇಳಿದ ವಿಚಾರಕ್ಕೆ ಚೂರಿಯಿಂದ ಕೊಲೆ ಯತ್ನ..
ನೆತನ್ಯಾಹು ಎಲ್ಲಿದ್ದಾರೆ? ಬದುಕಿದ್ದರೆ ಹಿಂಬಾಲಿಸಿ ಕೊಲ್ಲುತ್ತೇವೆ ಎಂದ ಇರಾನ್
ಸಿಐಡಿ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್: ವಂಚಕರ ಬಲೆಯಿಂದ ಜಸ್ಟ್ ಎಸ್ಕೇಪ್
“ಪಾಲಕ್ಕಾಡ್‌ನಲ್ಲಿ ಮೋದಿ ಚಂಡೆ ಸದ್ದು—ಕೇರಳದಲ್ಲಿ ಚುನಾವಣಾ ಕಹಳೆ!” 
ಪರಸ್ತ್ರೀ ಹುಂಡಿಗೆ  ಒಂದುವರೆ ಕೋಟಿ ಅಪಾರ್ಟ್ಮೆಂಟ್, ಮಾಜಿ ಶಾಸಕನ ರಂಗಿನಾಟ 
ಬಾರ್ ಲೆಕ್ಕಾಚಾರ-ಚೂರಿ ದಾಳಿ – ಯುವಕನ ಕುತ್ತಿಗೆಗೆ ಕೊಯ್ದು ಕೊಲೆ ಯತ್ನ
ಶಿಕ್ಷಣದ ಹೆಸರಿನಲ್ಲಿ ಡ್ರಗ್ ವ್ಯವಹಾರ! ಬೆಚ್ಚಿಬಿದ್ದ ಮಂಗಳೂರು…
ಎಸ್.ಎಸ್.ಎಲ್.ಸಿ. ಪರೀಕ್ಷೆ: ಮಂಗಳೂರಲ್ಲಿ ನಿಷೇಧಾಜ್ಞೆ ಜಾರಿ
ಜೀವನ್ಮರಣ ಹೋರಾಟದಲ್ಲೂ ಗೆಳೆಯರ ಬದುಕಿಸಿದ 14ರ ಬಾಲಕನ ರೋಚಕ  ಸ್ಟೋರಿ 
ಪಾಕಿಸ್ತಾನದಲ್ಲಿ ಹಿಂದೂ ಯುವತಿಯ ಸಾಧನೆ
ರಾಜ್ಯಸಭೆಗೆ ಬಿಜೆಪಿಯಿಂದ 9 ಜನರ ಪಟ್ಟಿ ಬಿಡುಗಡೆ
ಸೋಶಿಯಲ್ ಮೀಡಿಯಾ ಮೂಲಕ ಸಾರ್ವಜನಿಕರಲ್ಲಿ ಭಯ ಸೃಷ್ಠಿ -45 ಜನರ ಬಂಧನ
Lokayukta Raid In Hassan: ಬಾಗಿಲು ತೆರೆಯದೆ AEE ಹೈಡ್ರಾಮಾ, ಮನೆ ಏರಿದ ಲೋಕಾ ಪೊಲೀಸರು | AEE Satyanarayan
HSRP ರಿಲೀಫ್ + PUCC ಫೈನ್ ಮುಕ್ತ…ಡೀಟೇಲ್ಸ್ ಇಲ್ಲಿದೆ ಕರ್ನಾಟಕದ ಎಲ್ಲ ಡ್ರೈವರ್‌ಗಳಿಗೆ ಡಬಲ್ ಗುಡ್ ನ್ಯೂಸ್!???
“ವಾಹನ ಮಾರಾಟ-RC ಬದಲಾವಣೆ  ಅಗತ್ಯ.. ಇಲ್ಲವಾದರೆ ಕಾನೂನು ಸಮಸ್ಯೆಗಳು ತಪ್ಪಿದ್ದಲ್ಲ..!” ಹೈಕೋರ್ಟ್
🚨 ಸಾರ್ವಜನಿಕರಿಗೆ ತುರ್ತು ಎಚ್ಚರಿಕೆ – ಕಟಪಾಡಿ ರಾಷ್ಟ್ರೀಯ ಹೆದ್ದಾರಿ ಅಪಘಾತ
ಕನ್ನಡದ ನೆಲದಲ್ಲಿ ಕನ್ನಡಕ್ಕೇ ಗೇಟ್ ಪಾಸ್: ಇವರು ಕರ್ನಾಟಕದ ಸಚಿವರೊ⁉️ಇಂಗ್ಲೆಂಡಿನ ಪ್ರತಿನಿಧಿಯೋ?
ಭೀಕರ ಅಪಘಾತ ಮಹಿಳೆ ಬಲಿ
ಬಂಟರ ಸಮುದಾಯದಲ್ಲೊಂದು ಹೀನ ಸಂಪ್ರದಾಯ-ವರದಕ್ಷಿಣೆಗಾಗಿ ಹಿಂಸೆ, ಹಲ್ಲೆ.. ಬೆದರಿಕೆ!
ಟೂರಿಸಂ ಡೆವಲಪ್‌ಮೆಂಟ್‌ಗೆ ಅಧಿಕಾರಿಗಳೇ ಮಾರಕ
ಮಂಗಳೂರು -ವೆನ್ಲಾಕ್ ಮಾಸ್ಟರ್ ಪ್ಲ್ಯಾನ್…!
ವಿಶ್ವದ ನಂಬರ್ ವನ್ ಜನನಾಯಕನಾದ ಪ್ರಧಾನಿ ಮೋದಿ
ಗುರು ಬ್ರಹ್ಮ – ಗುರು ವಿಷ್ಣು ಅನ್ನುವ ಕಾಲ ಮುಗಿದು ಹೋಯ್ತೇ?
ತೈಲ, ಯುದ್ಧ ಮತ್ತು ಆರ್ಥಿಕತೆ: ಭಾರತದ ಮುಂದೆ ಹೊಸ ಸವಾಲು
ಹಾವು ಮುಂಗುಸಿ ಅಂತಾಗಿದ್ದವರು ಒಂದಾದರು
ಎಲ್ಲರಿಗೂ ಯುಗಾದಿ ಹಬ್ಬ… ಆದರೆ ಈ ಗ್ರಾಮಗಳಲ್ಲಿ ಭಯ ಮೌನ…ಹಬ್ಬ ಇಲ್ಲ…!ಒಂದು ವಿಚಿತ್ರ ಕಥೆ!
🚨 ದೇಶಾದ್ಯಂತ ಉಗ್ರ ಜಾಲದ ಮೇಲೆ ದೊಡ್ಡ ದಾಳಿ: ಕರ್ನಾಟಕದ ಬಳ್ಳಾರಿಯ ಅಬ್ದುಲ್ ಸಲಾಂ ಸೇರಿದಂತೆ 7 ರಾಜ್ಯಗಳಲ್ಲಿ 12 ಮಂದಿ ಬಂಧನ — ಯುವಕರಿಗೆ ಎಚ್ಚರಿಕೆ!
ಬಾಲಗರ್ಭಿಣಿಯರ ಸಂಖ್ಯೆ 5975….!!
ಹೋಳಿ ಮತ್ತು ರಂಜಾನ್ ಒಂದು ಜೀವವನ್ನೇ ನುಂಗಿತು..!
ಒಂದು ದೇಶವನ್ನೇ ಮಟ್ಟಾಶ್ ಮಾಡುವಷ್ಟು ನ್ಯೂಕ್ಲಿಯರ್ ಪವರ್ stock ಇರಾನ್ನಲ್ಲಿ ಇದ್ಯಾ !?