📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಗ್ಯಾಸ್ ಅಭಾವ ಮತ್ತು ಬೆಲೆ ಏರಿಕೆ, ಸುಳ್ಳು ಎನ್ನುತ್ತಿದೆ-HPCL

ಸೋಶಿಯಲ್ ಮೀಡಿಯಾದಲ್ಲಿ “ದೇಶದಲ್ಲಿ ಪೆಟ್ರೋಲ್-ಡೀಸೆಲ್ ಕೊರತೆ ಉಂಟಾಗಿದೆ” ಎಂಬ ಸಂದೇಶಗಳು ವೈರಲ್ ಆಗುತ್ತಿರುವ ಹಿನ್ನೆಲೆ ಜನರಲ್ಲಿ ಆತಂಕ ಮೂಡಿದೆ. ಆದರೆ ಸರ್ಕಾರಿ ತೈಲ ಕಂಪನಿಗಳು ಈ ಸುದ್ದಿಯನ್ನು ಸ್ಪಷ್ಟವಾಗಿ ತಪ್ಪು ಮತ್ತು ದಾರಿ ತಪ್ಪಿಸುವ ಮಾಹಿತಿ ಎಂದು ಹೇಳಿವೆ.

ಭಾರತದ ಪ್ರಮುಖ ತೈಲ ಕಂಪನಿಗಳಾದ HPCL, IndianOil ಮತ್ತು BPCL ಸ್ಪಷ್ಟಪಡಿಸಿರುವುದೇನೆಂದರೆ ದೇಶದಲ್ಲಿ ಪೆಟ್ರೋಲ್, ಡೀಸೆಲ್ ಮತ್ತು LPG ಇಂಧನದ ಸಮರ್ಪಕ ಸಂಗ್ರಹ ಇದೆ ಮತ್ತು ಸರಬರಾಜು ಸಾಮಾನ್ಯವಾಗಿ ನಡೆಯುತ್ತಿದೆ. ಆದ್ದರಿಂದ ಜನರು ಆತಂಕಪಟ್ಟು ಪೆಟ್ರೋಲ್ ಬಂಕ್‌ಗಳಿಗೆ ದೌಡಾಯಿಸುವ ಅಗತ್ಯವಿಲ್ಲ ಎಂದು ಕಂಪನಿಗಳು ಮನವಿ ಮಾಡಿವೆ.

HPCL ಅಧಿಕೃತವಾಗಿ ತನ್ನ ಪ್ರಕಟಣೆಯಲ್ಲಿ ,

“ಕೆಲವು ಪ್ರದೇಶಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಬಗ್ಗೆ ಹರಡುತ್ತಿರುವ ಸಂದೇಶಗಳು ತಪ್ಪು ಮತ್ತು ಆಧಾರರಹಿತ. ದೇಶದಾದ್ಯಂತ ಇಂಧನ ಸರಬರಾಜು ಸಾಮಾನ್ಯವಾಗಿದೆ ಮತ್ತು ಸಾಕಷ್ಟು ಸಂಗ್ರಹ ಲಭ್ಯವಿದೆ. “ ಎಂದು ಹೇಳಿದೆ.

ಈಗಾಗಲೇ ಅಧಿಕೃತವಾಗಿ ಎಲ್ಪಿಜಿ ದರ ಹೆಚ್ಚಾಗಿದೆ ಅದನ್ನು ಯಾವ ತೈಲ ಕಂಪನಿಗಳು ಒಪ್ಪಿಕೊಂಡಿಲ್ಲ ಅದರ ಬಗ್ಗೆ ಸ್ಪಷ್ಟನೆಯನ್ನು ನೀಡಿಲ್ಲ. ಜೊತೆಗೆ ಈಗಾಗಲೇ ಬೆಂಗಳೂರು ಸೇರಿದಂತೆ ಅನೇಕ ಕಡೆ , ಹೋಟೆಲ್ ಮಾಲೀಕರು ಅಡುಗೆ ಅನಿಲ ಕೊರತೆಯ ಕಾರಣದಿಂದ ವ್ಯವಹಾರ ಸ್ಥಗಿತಗೊಳಿಸುವುದರ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದು ಸುಳ್ಳಲ್ಲ. ಆದರೂ ಆ ಯಾವ ವಿಚಾರವನ್ನು ಈ ತೈಲ ಕಂಪನಿಗಳು ಗಮನಿಸದೆ ಕೇವಲ ತಿಪ್ಪೆ ಸಾರಿಸುವ ರೀತಿಯಲ್ಲಿ ಪಕ್ಕನೆ ನೀಡಿ ಮೌನವಹಿಸಿವೆ. ಇದು ಆ ಕಂಪನಿಗಳ ಅಧಿಕೃತ ಹೇಳಿಕೆ ಆಗಿದ್ದರೆ ಮಧ್ಯದಲ್ಲಿ ಯಾರು ಧರ ಹೆಚ್ಚಳ ಮಾಡಿದ್ದಾರೆ ಅನ್ನುವುದನ್ನು ಸರ್ಕಾರ ತನಿಖೆ ನಡೆಸಬೇಕು ಹಾಗೂ ಅನಿಲ ಪುರೋಹಿಕೆಗೆ ಆಗುತ್ತಿರುವ ವ್ಯಕ್ತಿಯದ ಬಗ್ಗೆಯೂ ತನಿಖೆಯಾಗಬೇಕಾಗುತ್ತದೆ.

ಅದಿರಲಿ ಮದ್ಯಪ್ರಾಚ್ಯದ ಯುದ್ಧದ ಪರಿಣಾಮ ಭಾರತಕ್ಕೆ ಯಾವ ಮಟ್ಟಿಗೆ ಬಿಸಿ ತಟ್ಟುತ್ತದೆ ಅಂತ  ಗಮನಿಸಿದ್ರೆ, ಈಗಾಗಲೇ  lPG ಸಿಲಿಂಡರ್ ಬೆಲೆ ಹೆಚ್ಚಳವಾಗಿದೆ. ಅಡುಗೆ ಅನಿಲದ ಬೆಲೆ ಸಿಲಿಂಡರ್ ಗೆ 60 ರೂಪಾಯಿ ಹೆಚ್ಚಾಗಿದೆ. ಕಮರ್ಷಿಯಲ್ ಸಿಲೆಂಡರ್ ಬೆಲೆ 300 ರಿಂದ 400 ಹೆಚ್ಚಾಗಿದೆ. ಈ ವ್ಯತ್ಯಯವನ್ನ  ಎಲ್ಲಾ  ಬಳಕೆದಾರರು ಅನುಭವಿಸ್ತಾ ಇದ್ದಾರೆ. ಸರಬುರಾಜು ಕೊರತೆಯಿಂದ ಸಿಲಿಂಡರಗಳ ಪೂರೈಕೆ ಸ್ಥಗಿತಗೊಂಡಿದೆ. 50 ದಿನಗಳಿಗೆ ಆಗುವಷ್ಟು ಮಾತ್ರ ದಾಸ್ತಾನು ಇದೆ ಅಂತ ಭಾರತ ಸರ್ಕಾರ ಹೇಳಿದೆ. ಈಗಾಗ್ಲೇ ಬೆಂಗಳೂರಿನ ಕೆಲವು ಹೋಟೆಲ್ ರೆಸ್ಟೋರೆಂಟ್ ಗಳು ಇಂದು ಮಾರ್ಚ್ 10ರಿಂದ ಎಲ್ಪಿಜಿ ಇಲ್ಲದೇ ಹೋಟೆಲ್  ಮುಚ್ಚುವ ನಿರ್ಧಾರಕ್ಕೆ ಬಂದಿದೆ. ಸಿಲಿಂಡರ್ ಅಭಾವ ಉಂಟಾಗಬಹುದು ಅನ್ನುವ ಭಯದಿಂದ ಜನರು ಸಿಲಿಂಡರ್ ದಾಸ್ತಾನಿಗೆ ಮುಗಿಬಿದ್ದಿದ್ದಾರೆ.

ಅಷ್ಟೇ ಅಲ್ಲ ಇದರ ಪರಿಣಾಮ, ಪುಣೆಯ ಸ್ಮಶಾನದ ಮೇಲು ಬಿದ್ದಿದೆ. ಗ್ಯಾಸ್ ಮೂಲಕ ಬರ್ನ್ ಮಾಡಲಾಗುತ್ತಿದ್ದ  ಶವಗಳಿಗೆ ಇನ್ನು ವಿದ್ಯುತ್ ಅಥವಾ ಕಟ್ಟಿಗೆಯ ಮೊರೆ ಅನಿವಾರ್ಯ. ಇವತ್ತಿನಿಂದ ಸಿಲೆಂಡರು ಮೂಲಕ ಬರ್ನ್ ಮಾಡುವುದಕ್ಕೆ ತಡೆ ಒಡ್ಡಲಾಗಿದೆ ಎಂಬ ಮಾಹಿತಿ ಬರುತ್ತಿದೆ.

ಸಂಬಂಧಪಟ್ಟ ಸಚಿವರು ಹಾಗೂ ಅಧಿಕಾರಿಗಳು ಈ ಬಗ್ಗೆ ಇನ್ನೂ ಹೆಚ್ಚಾಗಿ ತಲೆಕೆಡಿಸಿಕೊಂಡಂತೆ ಕಾಣುತ್ತಿಲ್ಲ. ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ಕೆಲವರು ತಮ್ಮ ಬೇಳೆ ಬೇಯಿಸಿಕೊಳ್ಳಲು ಕಾಳ ಸಂತೆಯ ಮೂಲಕ ದರ ಹೆಚ್ಚಳ ಮಾಡಿ ಜನರಿಗೆ ತೊಂದರೆ ಕೊಡುವ ಪರಿಪಾಠವಿದೆ. ಈಗಾಗಲೇ ಅದು ಪ್ರಾರಂಭವೂ ಆಗಿದೆ. ಈ ಬಗ್ಗೆ ಖುದ್ದು ಸರ್ಕಾರವೇ ಯಾವುದೇ ಬೆಲೆಯನ್ನು ಹೆಚ್ಚಳ ಮಾಡದಂತೆ ಖಡಕ್ ಆದೇಶ ನೀಡುವುದಷ್ಟೇ ಅಲ್ಲ ಅದು ಪಾಲನೆ ಯಾಗುತ್ತಿದೆಯಾ ಅನ್ನುವುದರ ಮೇಲೆ ಕಟ್ಟು ನಿಟ್ಟಿನ ನಿಗಾ ಇಡುವುದು ಮುಖ್ಯವಾಗುತ್ತದೆ ಎಂಬ ಮಾತುಗಳು ಸಾರ್ವಜನಿಕ ವಲಯದಿಂದ ಹಾರಿದು ಬರುತ್ತಿದೆ

COMMENTS

Login with Gmail to comment

ಇನ್ನಷ್ಟು ಸುದ್ದಿ

ರಾಪಿಡೊ ಚಾಲಕನ ಖಾತೆಯಲ್ಲಿ 300 ಕೋಟಿ ರೂ. ವಹಿವಾಟು! ಶಾಕ್ ಅದ ED
ಚುನಾವಣಾ ಆಯೋಗ ಸರ್ವಾಧಿಕಾರಿಯಾಗುತ್ತಿದೆ ಎಂಬ ಅನುಮಾನದ ಸುತ್ತ….
ರಾಜ್ಯದ 800 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ ಗಳಾಗಿ ಉನ್ನತೀಕರಿಸಲು 3900 ಕೋಟಿ ಮೀಸಲು
ಕ್ರಿಕೆಟ್ pad gloves ಒಳಗೆ ಕೋಟಿ ಕೋಟಿ ಕೊಕೇನ್!
ಉಡುಪಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಕಾನೂನುಬಾಹಿರ ಚಟುವಟಿಕೆ
🚨4 ವರ್ಷಗಳಿಂದ ಪೊಲೀಸರಿಗೆ ತಪ್ಪಿಸಿಕೊಂಡಿದ್ದ 17 ಪ್ರಕರಣಗಳ ಆರೋಪಿಯ ಡ್ರಾಮಾಟಿಕ್ ಬಂಧನ!
ಉತ್ತರ ಪ್ರದೇಶದಲ್ಲಿ ಸುಮಾರು 90ಕ್ಕೂ ಹೆಚ್ಚು ಜನರು ಬಲಿ ಹೃದಯವಿದ್ರಾವಕ ಪರಿಸ್ಥಿತಿ…ಭಾರೀ ಮಳೆ, ಬಿರುಗಾಳಿ ಮತ್ತು ಕುಸಿದ ಮನೆಗಳು
ಅಮೇರಿಕಾಕ್ಕೆ ಅಷ್ಟು ಧೈರ್ಯದಿಂದ ಎಲ್ಲಿಂದ ಬಂತು?
ಜೈಲಿನೊಳಗೆ ಮೊಬೈಲ್ ಮಾಫಿಯಾ: ಖತರ್ನಾಕ್ ಐಡಿಯಾ..!
ಆಸ್ಪತ್ರೆಯಲ್ಲೇ ಮೂರನೇ ಮಹಡಿಯಿಂದ ಬಿದ್ದು ಸಾವುನಿರ್ಲಕ್ಷ್ಯವೇ? ಸುರಕ್ಷತೆ ಪ್ರಶ್ನೆಗೊಳಗಾಗಿದೆ!
ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆಯ ಕ್ರೆಡಿಟ್ ಪಡೆದುಕೊಳ್ಳಲು ಶುರುವಾಯಿತು ಫೈಟ್
ಆನ್ ಲೈನ್ ವಂಚನೆ ಶಿರ್ವದ ಯುವತಿಗೆ ಲಕ್ಷ ಲಕ್ಷ ಉಂಡೆನಾಮ… ಬ್ಯಾಂಕ್ ನಿಯಮ ವಂಚಕರಿಗೆ  ಸಹಕಾರಿ?
ಫ್ರಿಡ್ಜ್ ರಿಪೇರಿಗೆ ಬಂದವ ಮನೆ ಲೂಟಿ ಪರಾರಿ…!ಬಿ ಅಲರ್ಟ್ ‼️
₹168 ಕೋಟಿ ಆದಾಯದೊಂದಿಗೆ ಕುಕ್ಕೆ ಸುಬ್ರಹ್ಮಣ್ಯ 15ನೇ ವರ್ಷವೂ ಅಗ್ರಸ್ಥಾನದಲ್ಲಿ… ಕೋಟಿ ಕೋಟಿ ಕಾಣಿಕೆ – ಭಕ್ತಿಯ ಮಹಾಪ್ರವಾಹ ಕುಕ್ಕೆ ದೇವಾಲಯ…
ಪುಲ್ವಾಮಾ ದಾಳಿಯ ಮಾಸ್ಟರ್ಮೈಂಡ್ ಹಮ್ಜಾ ಬುರ್ಹಾನ್ ಹತ್ಯೆ: ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ರಹಸ್ಯ ಗುಂಡಿನ ದಾಳಿ
₹1270 ಕೋಟಿ ಕಾನ್ಟ್ರಾಕ್ಟ್ ಹಗರಣ -CM ಖಾಂಡು ಕುಟುಂಬ ವಿಚಾರಣೆ-ಸುಪ್ರೀಂಕೋರ್ಟ್ ಸಿಬಿಐಗೆ ಆದೇಶ..
Political Heatwave 2026:ದಕ್ಷಿಣದಲ್ಲಿ ಅಧಿಕಾರ ಆಟ, ಅಸ್ಸಾಂನಲ್ಲಿ ಅಬ್ಬರ..!
ಸಚಿವ ಜಮೀರ್ ಅಹಮದ್ ಹಚ್ಚಿದ ಪಟಾಕಿಗೆ ಕಾಂಗ್ರೆಸ್ ಕೋಟೆಯಲ್ಲಿ ಬಿರುಕು..!?
“ಹಿಜಾಬ್ ಆದೇಶಕ್ಕೆ ಕರಾವಳಿಯಲ್ಲಿ ಬಿಜೆಪಿ ಸಿಡಿದೆದ್ದಿದೆ!ಓಲೈಕೆಗಾಗಿ ಶಿಕ್ಷಣವನ್ನೇ ಬಲಿ ಕೊಟ್ಟ ಕಾಂಗ್ರೆಸ್” – ಬಿಜೆಪಿ ವಾಗ್ದಾಳಿ.
ಯುದ್ಧದ ಹೊಡೆತ: ಹಣ ಕೊಟ್ಟರೂ ಗ್ಯಾಸ್ ಇಲ್ಲ! ಕಾರವಾರ ಬಂದರು ಸ್ತಬ್ಧ — ಜನಜೀವನ ಅಸ್ತವ್ಯಸ್ತ 🔥
ಹತ್ತು ವರ್ಷದ ಮಗಳ ಹುಟ್ಟುಹಬ್ಬದ ಸಂಭ್ರಮ…  ವಿಧಿಯಾಟದಲ್ಲಿ ಕಣ್ಣೀರಾಗಿ ಮಾರ್ಪಟ್ಟ ದುರಂತ ಕಥೆ
ಆಡುತ್ತಾ ಆಡುತ್ತಲೇ ಜೀವ ಬಿಟ್ಟ ಫಿಟ್ ಆಗಿದ್ದ ಯುವಕ್ರಿಕೆಟಿಗ… ನೀರು ಕುಡಿದ ತಕ್ಷಣವೇ ಕುಸಿದು ಬಿದ್ದ ರಣಜಿ ಆಟಗಾರ… 
ಅಸ್ಸಾಂನಲ್ಲಿ ಮತದಾನದ ಹಿನ್ನೆಲೆ ಹಿಂಸಾಚಾರ: 30ಕ್ಕೂ ಹೆಚ್ಚು ಮಂದಿ ಗಾಯ, 7 ಜನರ ಬಂಧನ
ಕೇವಲ ₹5 ಕ್ಕೆ ಸಿಗಲಿದೆ ಬಿಸಿಬಿಸಿ ಮೀನು-ಊಟ! ಮಹಿಳೆಯರ ಖಾತೆಗೆ ಪ್ರತಿ ತಿಂಗಳು ₹3,000 ಫಿಕ್ಸ್! ಎಲ್ಲಿ ಯಾರು ಕೊಡ್ತಾರೆ …
ED ₹2,178 ಕೋಟಿ ಆಸ್ತಿ ಜಪ್ತಿ ನಿರವ್ ಮೋದಿ–ವಿಜಯ್ ಮಲ್ಯ ಸೇರಿ 21 ಜನರ ಆರ್ಥಿಕ ಅಪರಾಧಿಗಳ ವಿರುದ್ಧ ದೊಡ್ಡ ಮಟ್ಟದ ಕ್ರಮ
AYS TROPHY–2026 ಯಶಸ್ವಿಯಾಗಿಸಲು ನಿಮ್ಮ ಉಪಸ್ಥಿತಿ ಅಗತ್ಯ.
MRPL ವಿರುದ್ಧ ಜನಹೋರಾಟದ ಎಚ್ಚರಿಕೆ – ಮೇ 1ರಿಂದ ಅನಿರ್ದಿಷ್ಟ ಧರಣಿಗೆ ಸಮಿತಿ ಸಜ್ಜು..
ಡಿಕೆಶಿ ಸೈಲೆಂಟ್ ಆಪರೇಷನ್ ಮಿಸ್ ಫೈರ್ ಆಗಿದ್ದೆಲ್ಲಿ?ರಾಷ್ಟ್ರ ರಾಜಧಾನಿಯಲ್ಲಿ ಕರ್ನಾಟಕ ಕಾಂಗ್ರೆಸ್ ಹೈ-ವೋಲ್ಟೇಜ್ ಹರಟೆ…!
ಡೈಮಂಡ್ ನೆಕ್ಲೇಸ್, ಕಿವಿಯೋಲೆಗಳು, ಚಿನ್ನದ ಚೈನ್, ಪ್ಲಾಟಿನಂ ಉಂಗುರ ಕಳವು…!
ಮದರಸಾದಲ್ಲಿ ದೌರ್ಜನ್ಯ ಮತ್ತು ಬಲವಂತದ ಕೂಲಿ ಆರೋಪ-24 ಮಕ್ಕಳ ರಕ್ಷಣೆ