📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಭಾರತೀಯ ಸೇನೆಯ ನೆರವಿಗೆ ಡ್ರೋನ್ ನರ್ಸಿಂಗ್ ಹೋಮ್! ದುರ್ಗಮ ಪ್ರದೇಶಗಳಲ್ಲೂ ಸಿಗಲಿದೆ ಅತ್ಯಾಧುನಿಕ ವೈದ್ಯಕೀಯ ಚಿಕಿತ್ಸೆ

ಡ್ರೋನ್ ತಂತ್ರಜ್ಞಾನವನ್ನು ಬಳಸಿ ಭಾರತೀಯ ಸೇನೆ ದುರ್ಗಮ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುವ ಸಂಚಾರಿ ನರ್ಸಿಂಗ್ ಹೋಮ್ ವ್ಯವಸ್ಥೆ ಕಲ್ಪಿಸುವುದಕ್ಕೆ ಮುಂದಾಗಿದೆ.  ಸೈನಿಕರಿಗೆ ತುರ್ತು ವೈದ್ಯಕೀಯ ನೆರವನ್ನು ಹೆಚ್ಚು ವೇಗವಾಗಿ ಮತ್ತು ಸುರಕ್ಷಿತವಾಗಿ ಒದಗಿಸುವತ್ತ ಮಹತ್ವದ ಹೆಜ್ಜೆ ಇದು ಅಂತ ಹೇಳಬಹುದು. ಇದು ಭವಿಷ್ಯದಲ್ಲಿ ಸೇನಾ ವೈದ್ಯಕೀಯ ಸೇವೆಯ ಕಾರ್ಯಕ್ಷಮತೆಯನ್ನು ಇನ್ನಷ್ಟು ಹೆಚ್ಚಿಸುವ ಸಾಧ್ಯತೆಯನ್ನು ಸೂಚಿಸುತ್ತದೆ.

ಲಡಾಖ್‌ ಸೇರಿದಂತೆ ಕಠಿಣ ಪರಿಸ್ಥಿತಿಯ ಪ್ರದೇಶಗಳಲ್ಲಿ ರಕ್ತ, ಔಷಧಿಗಳು ಮತ್ತು ವೈದ್ಯಕೀಯ ಉಪಕರಣಗಳನ್ನು ವೇಗವಾಗಿ ತಲುಪಿಸುವಲ್ಲಿ ಡ್ರೋನ್‌ಗಳು ಮಹತ್ವದ ಪಾತ್ರವಹಿಸುತ್ತಿವೆ.

ವೈದ್ಯಕೀಯ ವಿತರಣೆ ವ್ಯವಸ್ಥೆ
ಹಿಮಾಲಯದ ಎತ್ತರ ಪ್ರದೇಶಗಳಲ್ಲಿ ರಸ್ತೆ ಸಂಪರ್ಕ ಮತ್ತು ಹವಾಮಾನ ಸಮಸ್ಯೆಗಳ ಕಾರಣ ವೈದ್ಯಕೀಯ ಸಾಮಗ್ರಿಗಳನ್ನು ತಲುಪಿಸುವುದು ಬಹಳ ಕಷ್ಟಕರ. ಈ ಸಮಸ್ಯೆಗೆ ಪರಿಹಾರವಾಗಿ ಭಾರತೀಯ ಸೇನೆ ಡ್ರೋನ್‌ಗಳ ಮೂಲಕ ರಕ್ತದ ಪ್ಯಾಕ್‌ಗಳು, ಔಷಧಿಗಳು ಹಾಗೂ ತುರ್ತು ವೈದ್ಯಕೀಯ ಉಪಕರಣಗಳನ್ನು ಕೆಲವೇ ನಿಮಿಷಗಳಲ್ಲಿ ಮುಂಚೂಣಿ ಶಿಬಿರಗಳಿಗೆ ತಲುಪಿಸುತ್ತಿದೆ. ಇದರಿಂದ ಗಾಯಗೊಂಡ ಸೈನಿಕರಿಗೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡಲು ಸಾಧ್ಯವಾಗುತ್ತಿದೆ.

ಡ್ರೋನ್ ಆಂಬ್ಯುಲೆನ್ಸ್ ತಂತ್ರಜ್ಞಾನ
ಯುದ್ಧಭೂಮಿಯಲ್ಲಿ ಗಾಯಗೊಂಡ ಸೈನಿಕರನ್ನು ಸುರಕ್ಷಿತವಾಗಿ ಆಸ್ಪತ್ರೆಗೆ ಸಾಗಿಸಲು ಮಾನವರಹಿತ ಡ್ರೋನ್ ಆಂಬ್ಯುಲೆನ್ಸ್  ಜೊತೆಗೇನೇ ನರ್ಸಿಂಗ್ ಹೋಮ್ ವ್ಯವಸ್ಥೆಯನ್ನೂ ಪರೀಕ್ಷಿಸಲಾಗುತ್ತಿದೆ. ಈ ಡ್ರೋನ್‌ಗಳು ದೂರ ನಿಯಂತ್ರಣದ ಮೂಲಕ ಕಾರ್ಯನಿರ್ವಹಿಸಿ ಗಾಯಾಳು ಸೈನಿಕರನ್ನು ತುರ್ತು ಚಿಕಿತ್ಸಾ ಕೇಂದ್ರಗಳಿಗೆ ವೇಗವಾಗಿ ಸಾಗಿಸುವ ಸಾಮರ್ಥ್ಯ ಹೊಂದಿವೆ. ಇದರಿಂದ ಅಪಾಯಕಾರಿ ಪ್ರದೇಶಗಳಲ್ಲಿ ಮಾನವ ಜೀವ ಹಾನಿಯನ್ನು ಕಡಿಮೆ ಮಾಡಬಹುದು.

ಪ್ರಾಜೆಕ್ಟ್ ಭೀಷ್ಮ (BHISHM)
ಭಾರತೀಯ ಸೇನೆ ಅಭಿವೃದ್ಧಿಪಡಿಸಿರುವ “ಭೀಷ್ಮ” ಎಂಬ ಪೋರ್ಟಬಲ್ ಆಸ್ಪತ್ರೆ ವ್ಯವಸ್ಥೆ ವಿಶ್ವದಲ್ಲೇ ಮೊದಲನೆಯದು ಎಂದು ಹೇಳಲಾಗುತ್ತಿದೆ. ಈ ಆಸ್ಪತ್ರೆಯನ್ನು ಸುಲಭವಾಗಿ ಸಾಗಿಸಬಹುದಾದ ರೀತಿಯಲ್ಲಿ ವಿನ್ಯಾಸಗೊಳಿಸಲಾಗಿದೆ. ಯುದ್ಧಭೂಮಿ ಅಥವಾ ಎತ್ತರದ ಪರ್ವತ ಪ್ರದೇಶಗಳಲ್ಲಿ ತುರ್ತು ಶಸ್ತ್ರಚಿಕಿತ್ಸೆ ಹಾಗೂ ಚಿಕಿತ್ಸಾ ಸೇವೆ ನೀಡಲು ಇದು ಸಹಾಯಕವಾಗಿದೆ.

ಅಶ್ವಿನಿ (ASHNI) ಪ್ಲಟೂನ್ ಸ್ಥಾಪನೆ
ಡ್ರೋನ್ ಆಧಾರಿತ ವಿಶೇಷ ಕಾರ್ಯಾಚರಣೆಗಳನ್ನು ನಿರ್ವಹಿಸಲು “ಅಶ್ವಿನಿ ಪ್ಲಟೂನ್” ಎಂಬ ವಿಶೇಷ ಘಟಕವನ್ನು ಸ್ಥಾಪಿಸಲಾಗಿದೆ. ಈ ಪಡೆ ವೈದ್ಯಕೀಯ ಲಾಜಿಸ್ಟಿಕ್ಸ್, ತುರ್ತು ಸರಕು ಸಾಗಣೆ ಹಾಗೂ ನಿಗಾವಹಿಸುವ ಕಾರ್ಯಗಳನ್ನು ಡ್ರೋನ್‌ಗಳ ಮೂಲಕ ನಿರ್ವಹಿಸುತ್ತದೆ.

ತಾಂತ್ರಿಕ ಸಾಮರ್ಥ್ಯ
ಈ ಡ್ರೋನ್‌ಗಳು ಜಿಪಿಎಸ್ ನ್ಯಾವಿಗೇಶನ್, ದೂರ ನಿಯಂತ್ರಣ ವ್ಯವಸ್ಥೆ, ಮತ್ತು ಕಠಿಣ ಹವಾಮಾನ ಪರಿಸ್ಥಿತಿಗಳಲ್ಲಿಯೂ ಕಾರ್ಯನಿರ್ವಹಿಸುವ ಸಾಮರ್ಥ್ಯ ಹೊಂದಿವೆ. ಕೆಲವು ಡ್ರೋನ್‌ಗಳು ಹಲವು ಕಿಲೋಮೀಟರ್ ದೂರವನ್ನು ಕಡಿಮೆ ಸಮಯದಲ್ಲಿ ದಾಟಿ 5–20 ಕಿಲೋಗ್ರಾಂವರೆಗೆ ವೈದ್ಯಕೀಯ ಸಾಮಗ್ರಿಗಳನ್ನು ಸಾಗಿಸಬಲ್ಲವು.

COMMENTS

Login with Gmail to comment

ಇನ್ನಷ್ಟು ಸುದ್ದಿ

Anticipatory Bail ಗೆ ಹೊಸ ರಕ್ಷಣೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಆಕ್ಷೇಪ
ಜಿಮ್,“ಫಿಟ್ನೆಸ್ ಸೆಂಟರ್‌ಗಳಲ್ಲಿ ಹೆಚ್ಚುತ್ತಿರುವ ಅಪಾಯಕಾರಿ ಸಂಬಂಧಗಳು: ಜಿಮ್ ಟ್ರೈನರ್ ಆತ್ಮಹತ್ಯೆ
ಸಂಸತ್ತಿನಲ್ಲಿ ಪ್ರಶ್ನೆ ಎದುರಿಸಲು ಆಗದೆ,  ಪ್ರಶ್ನೆಯನ್ನೇ ಕೇಳದಂತೆ ಮಾಡಿದರು – ರಾಹುಲ್ ಗಾಂಧಿ
ಬಳ್ಳಾರಿ “ಪೊಲೀಸ್ ಗನ್‌ಮನ್ ಎಕ್ಸ್‌ಟಾರ್ಷನ್”ಇಲಾಖೆಗೆ ಕಳಂಕ: ಗನ್‌ಮನ್ ಸೇರಿ ಮೂವರ ವಿರುದ್ಧ ಪ್ರಕರಣ!
ಉಂಡ ಮನೆಗೇ ಕನ್ನ ಹಾಕಿದ ದ್ರೋಹಿಗಳು 
ಕದನ ವಿರಾಮ ಚೂರುಚೂರು-ಮಧ್ಯಪ್ರಾಚ್ಯ ಮತ್ತೆ ಯುದ್ಧದ ಅಂಚಿನಲ್ಲಿ!ಜೋರ್ಡಾನ್, ಬಹ್ರೇನ್, ಕುವೈತ್‌ನಲ್ಲಿ ಕ್ಷಿಪಣಿ ಅಲರ್ಟ್ !!
ಸ್ಪೀಕರ್ ಯುಟಿ ಖಾದರ್‌ಗೆ ಮುತ್ತಿಗೆ: 11 ಜನರ ವಿರುದ್ಧ FIR
ಶಿಕ್ಷಣ ಸುಧಾರಣೆಗೆ ರಾಜ್ಯ ಸರ್ಕಾರದ ಭರ್ಜರಿ ಪ್ಲಾನ್ ಬಹಿರಂಗ!
ತಿರುಪತಿಗೆ ಹೋದ ಗಂಡ… ಗೋವಾಗೆ ಹೋದ ಯುವಕ…! ಮನೆಗೆ ಬಂದದ್ದು ಶವವಾಗಿ! ಪ್ರವಾಸವೇ ಭಯ ಹುಟ್ಟಿಸುತ್ತಿದೆಯೇ?
ಶೈಕ್ಷಣಿಕ ವರ್ಷ ಆರಂಭ, ನೋಟ್‌ಬುಕ್‌ನಿಂದ ಆಟೋವರೆಗೆ ಎಲ್ಲ ಖರ್ಚು ಗಗನಕ್ಕೆ….ಪೋಷಕರಿಗೆ ದುಬಾರಿ ಹೊರೆ
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ….!!!!
“ಅಪ್ರಾಪ್ತ ಅತ್ಯಾಚಾರ ಸಂತ್ರಸ್ತರಿಗೆ ಅಬಾರ್ಷನ್ ಮಾಡಲು ಆದ್ಯತೆ ,ಕಾನೂನು ತಿದ್ದುಪಡಿ”- ಸುಪ್ರೀಂ ಕೋರ್ಟ್
ಕಾಂಗ್ರೆಸ್‌ಗೆ ಹೊಸ ತಲೆನೋವು? ಅಹಿಂದ ಸಂಘಟನೆಯಿಂದ ‘ಪಕ್ಷ ವಿಭಜನೆ’ ಎಚ್ಚರಿಕೆ!
60 ಕೋಟಿ ರೂ. ಸರ್ಕಾರಿ ಹಣ ಗುಳುಂ: ಸಿಬಿಐ ಬಲೆಯಲ್ಲಿ ಹಿರಿಯ ಐಎಎಸ್ ಅಧಿಕಾರಿ!
“ಮಂಗಳೂರಲ್ಲಿ ಡ್ರೈ ಡೇ ಘೋಷಣೆ -ಎರಡು ದಿನ ಬಾರ್‌ಗಳಿಗೆ ಲಾಕ್ ..!” ದಕ್ಷಿಣ ಕನ್ನಡದಲ್ಲಿ ಕಟ್ಟುನಿಟ್ಟಿನ ಆದೇಶ
ಸಿಎಂ ಕುರ್ಚಿಯನ್ನು, ಡಿಕೆಗೆ ಮಗ್ಗಲ ಮುಳ್ಳನ್ನಾಗಿಸಲು ಸಕಲ ತಯಾರಿ
ಜಾಗತಿಕ ಯುದ್ಧ ಭೀತಿ:ಟ್ರಂಪ್ ಎಫೆಕ್ಟ್‌ಗೆ ಭಾರೀ ಆರ್ಥಿಕ ಭೂಕಂಪ! — ಒಂದೇ ದಿನ ₹6 ಲಕ್ಷ ಕೋಟಿ ನಷ್ಟ!ಸೆನ್ಸೆಕ್ಸ್ ಧರೆಗುರುಳಿ, ರೂಪಾಯಿ ದಾಖಲೆ ಪತನ!
ದೆಹಲಿಯನ್ನು ನಡುಗಿಸಿದ ಸೈಕೋಪಾತ್ ಘಟನೆಯ ಕ್ರೂರ ಸತ್ಯ…. ಆನ್‌ಲೈನ್ ಬೆಟ್ಟಿಂಗ್ ಮತ್ತು ಆಟಗಳ ಅಡಿಕ್ಟ್ – ಸಾಲ …ಮನೋವೈಕಲ್ಯ ಲಕ್ಷಣ!
ಪರಮೇಶ್ವರ ವಿರುದ್ಧ FIR-₹500 ಬೆಟ್ಟಿಂಗ್ ಹೇಳಿಕೆಗೆ ಕಾನೂನು ಕ್ರಮ.
₹119 ಕೋಟಿ ವ್ಯತ್ಯಾಸ ಸಣ್ಣ ವಿಷಯನಾ….ಏನಿದು ತಲೈವಾ..!
ಪುತ್ತೂರಿನ ಜಾತ್ರೆಯಲ್ಲಿ ಸುಡುಮದ್ದು ದುರಂತ-ಹಲವರಿಗೆ ಗಾಯ..
ಆನ್ ಲೈನ್ ವಂಚನೆ ಶಿರ್ವದ ಯುವತಿಗೆ ಲಕ್ಷ ಲಕ್ಷ ಉಂಡೆನಾಮ… ಬ್ಯಾಂಕ್ ನಿಯಮ ವಂಚಕರಿಗೆ  ಸಹಕಾರಿ?
ಬೀದಿ ನಾಯಿಗಳ ಹಾವಳಿ ಮಾನವ ಜೀವ ರಕ್ಷಣೆಗೆ ಮೊದಲ ಆದ್ಯತೆ — ಸುಪ್ರೀಂ ಕೋರ್ಟ್‌ನ ಕಠಿಣ ನಿಲುವು
ದೇಶಾದ್ಯಂತ ಇಂದು ಮೊಬೈಲ್‌ನಲ್ಲಿ ತುರ್ತು ಎಚ್ಚರಿಕೆ ಡ್ರಿಲ್ – ಗಾಬರಿ ಬೇಡ
ವಿಷಪ್ರಾಶನ  ಪ್ರಕರಣದಲ್ಲಿ ಕಾರ್ಕಳ ಗಜರಿಯ ಹಾಸ್ಪಿಟಲ್ ತಪ್ಪು ಮಾಡಿತೇ?
ಕರಾವಳಿಯ ಭವಿಷ್ಯ ರೂಪಿಸಲು ಸಿಎಂನ ಮಾಸ್ಟರ್ ಪ್ಲಾನ್! ಹೆಲಿ ಟೂರಿಸಂನಿಂದ ಹಿಡಿದು ಸಾವಿರಾರು ಉದ್ಯೋಗಗಳವರೆಗೆ…ಕ್ಯಾಬಿನೆಟ್ ಸಭೆ ಮೇಲೆ ಎಲ್ಲರ ಕಣ್ಣು.
ನಿಮ್ಮ ಮಾತು ಕೇಳಿ ರಾಜೀನಾಮೆ ನೀಡಿದ್ದೇನೆ. ಈಗ ನನ್ನ ಬೇಡಿಕೆ ಈಡೇರಿಸುವುದು ನಿಮ್ಮ ಸರದಿ  ಎಂದ ಸಿದ್ದರಾಮಯ್ಯ
ರಾಜಕೀಯ ಬದಲಾಗುತ್ತಿದೆ -ಪಂಚರಾಜ್ಯ election ರಿಸಲ್ಟ್ “ಗೆಲುವು-ಸೋಲಿನ ಶಕ್ತಿ ಪಕ್ಷದಲ್ಲಲ್ಲ… ಜನರ ಕೈಯಲ್ಲಿ”
ಜಸ್ಟ್ one click ನಲ್ಲೇ ಎಲ್ಲಾ ಸರ್ಟಿಫಿಕೇಟ್…!2026–27ರಿಂದ ಅಂಕಪಟ್ಟಿ ಹಾರ್ಡ್ ಕಾಪಿ ಇಲ್ಲ..
30 ವರ್ಷದ ಕನಸು ಸಾಕಾರ: ಮಾಣಿಲ–ಪೆರ್ಲ ಸಂಪರ್ಕಕ್ಕೆ ಸಿರಿಯ ನದಿಗೆ ಸೇತುವೆ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್!