📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಮಂಗಳೂರು ಇನ್ಸ್ಟಾಮಾರ್ಟ ಕುಂಟಿಕಾನದಲ್ಲಿ ಲಿಫ್ಟ್ ದುರಂತ: ಡೆಲಿವರಿ ಸಿಬ್ಬಂದಿ ದುರ್ಮರಣ

    ಮಂಗಳೂರು: ನಗರದ ಕುಂಟಿಕಾನ ಸಮೀಪದ ಆನ್‌ಲೈನ್ ಡೆಲಿವರಿ ಸಂಸ್ಥೆಯ ಕಟ್ಟಡದಲ್ಲಿ ಸಂಭವಿಸಿದ ಹೃದಯವಿದ್ರಾವಕ ಲಿಫ್ಟ್ ದುರಂತದಲ್ಲಿ ಯುವ ಉದ್ಯೋಗಿಯೊಬ್ಬರು ದುರ್ಮರಣಕ್ಕೀಡಾದ ಘಟನೆ ಶನಿವಾರ ನಡೆದಿದೆ.

    ಮೃತರನ್ನು ಬೆಳ್ತಂಗಡಿ ತಾಲೂಕಿನ ಬೆಳಾಲು ಪೂಂಜಕೆರೆ ನಿವಾಸಿ ನೌಫಾಲ್ (28) ಎಂದು ಗುರುತಿಸಲಾಗಿದೆ. ಅವರು ಖಾಸಗಿ ಆನ್‌ಲೈನ್ ಡೆಲಿವರಿ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು.

    ಕರ್ತವ್ಯದ ನಿಮಿತ್ತ ಕಟ್ಟಡದ ಮೇಲ್ಮಹಡಿಗೆ ಲಿಫ್ಟ್ ಮೂಲಕ ತೆರಳುತ್ತಿದ್ದ ವೇಳೆ ಏಕಾಏಕಿ ಲಿಫ್ಟ್ ತಾಂತ್ರಿಕ ದೋಷದಿಂದ ನೆಲಮಹಡಿ ಮತ್ತು ಮೊದಲ ಮಹಡಿ ನಡುವಿನ ಭಾಗದಲ್ಲಿ ಸ್ಥಗಿತಗೊಂಡಿದೆ ಎಂದು ತಿಳಿದು ಬಂದಿದೆ. ಲಿಫ್ಟ್ ಒಳಗೆ ಸಿಲುಕಿಕೊಂಡ ನೌಫಾಲ್ ಸಹಾಯಕ್ಕಾಗಿ ಕೂಗಿಕೊಂಡಿದ್ದು, ತಕ್ಷಣ ಸಹೋದ್ಯೋಗಿಗಳು ಹಾಗೂ ಸಿಬ್ಬಂದಿ ರಕ್ಷಣಾ ಕಾರ್ಯಕ್ಕೆ ಧಾವಿಸಿದ್ದರು.

    ಲಿಫ್ಟ್‌ನ ಒಂದು ಭಾಗ ಮೊದಲ ಮಹಡಿಗೆ ಸಮೀಪದಲ್ಲಿದ್ದ ಹಿನ್ನೆಲೆ, ಸಿಬ್ಬಂದಿ ಬಾಗಿಲು ತೆರೆಯುವ ಮೂಲಕ ನೌಫಾಲ್ ಅವರನ್ನು ಮೇಲಕ್ಕೆ ಎಳೆಯಲು ಪ್ರಯತ್ನಿಸಿದ್ದಾರೆ. ಆದರೆ ಇದೇ ವೇಳೆ ಲಿಫ್ಟ್ ಅನಿರೀಕ್ಷಿತವಾಗಿ ಮರುಚಲನೆಗೊಂಡ ಪರಿಣಾಮ, ನೌಫಾಲ್ ಗಂಭೀರವಾಗಿ ಸಿಲುಕಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ತೀವ್ರವಾಗಿ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.

    ಯುವ ಉದ್ಯೋಗಿಯ ಅಕಾಲಿಕ ಸಾವಿನಿಂದ ಕುಟುಂಬಸ್ಥರು, ಬಂಧುಗಳು ಹಾಗೂ ಸಹೋದ್ಯೋಗಿಗಳಲ್ಲಿ ಆಕ್ರಂದನ ಮೇಳೈಸಿದೆ.

    ಘಟನಾ ಸ್ಥಳಕ್ಕೆ ಉರ್ವ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಲಿಫ್ಟ್‌ನಲ್ಲಿ ತಾಂತ್ರಿಕ ದೋಷ ಉಂಟಾಗಿದ್ದೇ ಅಥವಾ ಸುರಕ್ಷತಾ ಕ್ರಮಗಳಲ್ಲಿ ನಿರ್ಲಕ್ಷ್ಯ ವಹಿಸಲಾಗಿತ್ತೇ ಎಂಬುದರ ಕುರಿತು ತನಿಖೆ ಆರಂಭಿಸಲಾಗಿದೆ.

    ##Mangalore #Instamart #RIPNaufal #Tragedy

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಅಮಾವಾಸ್ಯೆ ಬೈಲ್ ಪೊಲೀಸ್ ಠಾಣೆಯಲ್ಲಿ ಜೀವ ಬೆದರಿಕೆ ಹಾಗೂ ನಿಂದನೆಯ ಪ್ರಕರಣ ದಾಖಲು
    ಮುಂಬಯಿಯಲ್ಲಿ ಪಹಲ್ಗಾಮ್ ಮಾದರಿ ದಾಳಿ ಯತ್ನ: ಉಗ್ರ ಚಟುವಟಿಕೆ ಯತ್ನ ವಿಫಲ…!
    ದಲಿತ ವಿಧವೆ ಮೇಲೆ ಸಾಮೂಹಿಕ ಅತ್ಯಾಚಾರ – ಮೂವರು ಆರೋಪಿಗಳು ಬಂಧನ
    ಒಂದು ಕ್ಷಣದಲ್ಲಿ ನಗು, ಇನ್ನೊಂದು ಕ್ಷಣದಲ್ಲಿ ನಿಶ್ಶಬ್ದ ಕಣ್ಣೀರು…
    ಕಾಂಗ್ರೆಸ್ ಜನರ ವಿಶ್ವಾಸದಿಂದ ದಿನದಿಂದ ದಿನಕ್ಕೂ ದೂರ ಹೋಗುತ್ತಿರುವುದಕ್ಕೆ ಸಾಕ್ಷಿನೇ ಇದು
    ಬೆಳಗಾವಿ ₹4500 ಕೋಟಿ ವಂಚನೆ ಪ್ರಕರಣ – CID ತನಿಖೆಯಿಂದ ಹೊರಬರುತ್ತಿರುವ ಕತ್ತಲೆಯ ಜಾಲ – ಯಾರು ನಿಜವಾದ ಮಾಸ್ಟರ್ ಮೈಂಡ್?
    🔴 ಪೊಲೀಸರ ಮೇಲಿನ ಹಿಡಿತ ಕಠಿಣ: PEBಗೆ ಹೆಚ್ಚಿದ ಅಧಿಕಾರ — ರಾಜ್ಯದ ದೊಡ್ಡ ಆಡಳಿತಾತ್ಮಕ ತೀರ್ಮಾನ
    ಉಡುಪಿಯ ಮಾರ್ಕೆಟ್‌ 99 ಮ್ಯಾನೇಜರ್‌ ವಿರುದ್ಧ ₹13.39 ಲಕ್ಷ ದುರ್ಬಳಕೆ ಪ್ರಕರಣ ದಾಖಲು…
    ಯುದ್ಧ: ಯಾವುದೇ ಜಾಗತಿಕ ನಾಯಕರ ಮಾತುಕತೆ ಫಲಪ್ರದವಾಗದೇ?!
    ಅಕ್ರಮ ಡಿಸೇಲ್ ದಾಸ್ತಾನು ಪ್ರಕರಣ: 4,175 ಲೀಟರ್ ಡಿಸೇಲ್ ಕಂದಾಯ ಇಲಾಖೆಯಿಂದ ಹರಾಜು – ₹2.35 ಲಕ್ಷಕ್ಕೆ ಮಾರಾಟ!
    ನಾಳೆ ಮಂಗಳೂರಲ್ಲಿ ಇಡೀ ದಿನ ಕರೆಂಟಿಲ್ಲ Power Cut.. ಎಲ್ಲೆಲ್ಲಿ?
    ಧರ್ಮಸ್ಥಳ-ಚಿಕ್ಕಮಗಳೂರು ಟ್ರಿಪ್‌ಗೆ ಹೊರಟ ಸ್ವಿಗ್ಗಿ ಡೆಲಿವರಿ ಬಾಯ್ಸ್… ಅರಬೈಲ್ ಘಾಟ್‌ನಲ್ಲಿ ಭೀಕರ ಅಪಘಾತ, 6 ಜೀವಗಳು ಅಂತ್ಯ!
    8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
    ವಿದ್ಯಾರ್ಥಿ ಪ್ರತಿಭಟನಾ ಪ್ರಕರಣಗಳು: ಎಫ್‌ಐಆರ್‌ ಹಿಂಪಡೆಯಲು ಸುಪ್ರೀಂ ಕೋರ್ಟ್‌ ಮಹತ್ವದ ಸ್ಪಷ್ಟನೆ
    ಸಂಸತ್ತಿನಲ್ಲಿ ಪ್ರಶ್ನೆ ಎದುರಿಸಲು ಆಗದೆ,  ಪ್ರಶ್ನೆಯನ್ನೇ ಕೇಳದಂತೆ ಮಾಡಿದರು – ರಾಹುಲ್ ಗಾಂಧಿ
    “ಪ್ರಜಾಪ್ರಭುತ್ವದ ಮೇಲೆ ದಾಳಿ”ಸುಪ್ರೀಂ ಕೋರ್ಟ್ ಕಿಡಿ: ಇದು ಪ್ರತಿಭಟನೆ ಅಲ್ಲ, ಸಂಚು!”
    ದೊಡ್ಡ ಬಜೇಟ್  ತುಳು ಸಿನಿಮಾ`ಗಜಾನನ ಕ್ರಿಕೆಟರ್ಸ್’ ಮೇ 22 ರಂದು ತೆರೆಗೆ
    ಜೂನ್ 22ರವರೆಗೆ ಭಾರತದಲ್ಲಿ ಟೆಲಿಗ್ರಾಂ ಬ್ಯಾನ್…!ಅಪ್ಲಿಕೇಶನ್ ಬ್ಯಾನ್ ಅಲ್ಲ, ವ್ಯವಸ್ಥೆ ಸರಿಪಡಿಸಿ! ಸರ್ಕಾರಕ್ಕೆ ನಿಸರ್ಗ ಅಧಿಕಾರಿಯ ಸಲಹೆ
    ಪಾಕಿಸ್ತಾನದಿಂದ ನೀರಿನ ವಿಚಾರದಲ್ಲಿ ಕಠಿಣ ಎಚ್ಚರಿಕೆ; ನೀರಿಗಾಗಿ ಯುದ್ದಕ್ಕೂ ಸಿದ್ದವೆಂದ ಪಾಕ್ ….!
    ತಮಿಳುನಾಡು ಮುಖ್ಯಮಂತ್ರಿ ವಿಜಯ್, ಚಧುರಂಗದಾಟದಲ್ಲಿ ಲಾಂಗ್ ಟೈಮ್ ಉಳಿಯುವರೇ?
    ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣಕ್ಕೆ ಆಪ್ ತೀವ್ರ ವಿರೋಧ-ಒಪ್ಪಂದ ಬಹಿರಂಗಪಡಿಸುವಂತೆ ಆಗ್ರಹ
    ಆರೋಪಿ ಸಮೀರ್ ಮುಲ್ಲಾ ಸ್ಫೋಟಕ ಹೇಳಿಕೆ-ಖುಷಿ ಒಳ್ಳೆ ಹುಡುಗಿ-🔥 ಹುಬ್ಬಳ್ಳಿ ಲವ್ ಜಿಹಾದ್ ಅಲ್ಲ ಎಂದ ಪೊಲೀಸರು : ಇದೀಗ ಹೊಸ ಟ್ವಿಸ್ಟ್!
    ಮೀನುಗಳ ಮಾರಣಹೋಮ, ಕಪ್ಪಾದ ನೀರು,ಉಸಿರುಗಟ್ಟಿಸುವ ದುರ್ವಾಸನೆ — ಜನರ ಬದುಕಿಗೆ ದೊಡ್ಡ ಎಚ್ಚರಿಕೆ!
    E20 ಪೆಟ್ರೋಲ್‌ನಿಂದ ಮರ್ಸಿಡಿಸ್ ಕಾರಿನ ಮೈಲೇಜ್ ಕುಸಿತವೇ? ವೈರಲ್ ವಿಡಿಯೋ ಬಳಿಕ ಕಂಪನಿಯ ಸ್ಪಷ್ಟನೆ; ನಿಜ ಏನು?
    ಬುಡಕಟ್ಟು ಹೆಣ್ಣುಮಕ್ಕಳ ಬದುಕು ಬದಲಿಸಿದ ಗಾರ್ಗಿ ಜೈನ್ ‘ಮೇಡಂ ಕಲೆಕ್ಟರ್’ನಿಂದ ‘ಕಲೆಕ್ಟರ್ ದೀದಿ’ವರೆಗೆ…
    ಗುಂಡಿನ ದಾಳಿ ನಡೆಸಿದ ಹಂತಕರ ಬಂಧನ??
    ಜಮ್ಮು-ಕಾಶ್ಮೀರದಲ್ಲಿ ಖಾಕಿ ಮೇಲೆ ಖಾಕಿ ದಾಳಿ? ಹೈಡ್ರಾಮಾ: ಕರ್ನಲ್, ಮೇಜರ್ ಸೇರಿ 40 ಸೇನಾ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲು.
    “ಅಪ್ರಾಪ್ತ ಅತ್ಯಾಚಾರ ಸಂತ್ರಸ್ತರಿಗೆ ಅಬಾರ್ಷನ್ ಮಾಡಲು ಆದ್ಯತೆ ,ಕಾನೂನು ತಿದ್ದುಪಡಿ”- ಸುಪ್ರೀಂ ಕೋರ್ಟ್
    ದರ್ಶನ್‌ಗೆ ಇನ್ನೊಂದು ವರ್ಷ ಜೈಲೇ ಗತಿ…ಜಾಮೀನು ನಿರಾಕರಣೆ.
    Anticipatory Bail ಗೆ ಹೊಸ ರಕ್ಷಣೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಆಕ್ಷೇಪ