📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಮಂಗಳೂರು -ವೆನ್ಲಾಕ್ ಮಾಸ್ಟರ್ ಪ್ಲ್ಯಾನ್…!


ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ತಯಾರಿಸಿ ಕಾರ್ಯರೂಪಕ್ಕೆ ತರುವಂತೆ ಜಿಲ್ಲಾಧಿಕಾರಿ ದರ್ಶನ್ ಹೆಚ್. ವಿ ಸೂಚಿಸಿದ್ದಾರೆ.
ಅವರು ವೆನ್ಲಾಕ್ ಆಸ್ಪತ್ರೆಯಲ್ಲಿ ಬುಧವಾರ ನಡೆದ ಆರೋಗ್ಯ ರಕ್ಷಾ ಸಮಿತಿ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಆಸ್ಪತ್ರೆಯಲ್ಲಿ ವಿವಿಧ ವಿಭಾಗಗಳನ್ನು ರೋಗಿಗಳಿಗೆ ಸ್ನೇಹಿಯಾಗಿ ಕಾರ್ಯರೂಪಕ್ಕೆ ತರಲು ಮಾಸ್ಟರ್ ಪ್ಲಾನ್ ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಶೀಘ್ರವಾಗಿ ಕಾರ್ಯಪ್ರವೃತ್ತರಾಗಬೇಕು ಎಂದು ಅವರು ಸೂಚಿಸಿದರು.

ವೆನ್‍ಲಾಕ್ ಆಸ್ಪತ್ರೆಯ ಪ್ರಸಕ್ತ ಇರುವ ಹೊರರೋಗಿ ವಿಭಾಗಗಳ ಕಟ್ಟಡವನ್ನು ತೆರವುಗೊಳಿಸಿ ನೂತನ ಅತ್ಯಾಧುನಿಕ ಮಾದರಿಯ ಒ.ಪಿ.ಡಿ ಕಟ್ಟಡವನ್ನು ನಿರ್ಮಿಸಲು ರಾಜ್ಯ ಸರಕಾರದಿಂದ 70 ಕೋಟಿ ರೂ. ಅನುದಾನ ಮಂಜೂರಾಗಿದೆ. ಪ್ರಸಕ್ತ ಅಲ್ಲಿರುವ ಎಲ್ಲಾ ವಿಭಾಗಗಳನ್ನು ಟ್ರಾಮಾ ಬ್ಲಾಕ್‍ಗೆ ಸ್ಥಳಾಂತರಿಸಿ ಹಳೆ ಒ.ಪಿ.ಡಿ ಕಟ್ಟಡವನ್ನು ಕೆಡವಲಾಗುವುದು. ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ವೆನ್ಲಾಕ್ ಅಧೀಕ್ಷಕ ಡಾ. ಶಿವಪ್ರಕಾಶ್ ತಿಳಿಸಿದರು.
ರೋಗಿಗಳಿಗೆ ನೆರವಾಗಲು ಒ.ಪಿ.ಡಿ, ಎಕ್ಸ್ ರೇ, ರೇಡಿಯೋಲಜಿ ಮತ್ತಿತರ ಘಟಕಗಳನ್ನು ಒಂದೇ ಕಡೆ ನಿರ್ಮಿಸಲು ಜಿಲ್ಲಾಧಿಕಾರಿಗಳು ಸೂಚಿಸಿದರು.
ಲೇಡಿಗೋಶನ್ ಆಸ್ಪತ್ರೆಗೆ ಪ್ರತ್ಯೇಕ ಆರೋಗ್ಯ ರಕ್ಷಾ ಸಮಿತಿ ರಚಿಸಲು ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ. ವೆನ್‍ಲಾಕ್‍ನಲ್ಲಿ ಪಿ.ಎಂ ಅಭಿಮ್ ಯೋಜನೆಯಡಿ 50 ಬೆಡ್‍ಗಳ ಕ್ರಿಟಿಕಲ್ ಕೇರ್ ಕಟ್ಟಡದ ಕಾಮಗಾರಿ ಕೊನೆಯ ಹಂತದಲ್ಲಿದೆ. ಅತ್ತಾವರ ರಸ್ತೆಯಲ್ಲಿರುವ ವೆನ್‍ಲಾಕ್‍ನ 2.71 ಎಕರೆ ಖಾಲಿ ಜಾಗದಲ್ಲಿ ಪಾರ್ಕಿಂಗ್ ಮಾಡಲು ಪೇ ಆಂಡ್ ಪಾರ್ಕಿಂಗ್ ಕಾಮಗಾರಿಗೆ ಮಹಾನಗರಪಾಲಿಕೆಗೆ ಪತ್ರ ಬರೆಯಲಾಗಿದೆ ಎಂದು ಸಭೆಗೆ ತಿಳಿಸಲಾಯಿತು.
ವೆನ್‍ಲಾಕ್ ಹೊಸ ಸರ್ಜಿಕಲ್ ಬ್ಲಾಕ್ ಕಟ್ಟಡದ ನೆಲಮಹಡಿಯ ಮಳಿಗೆಗಳನ್ನು ವಾಣಿಜ್ಯ ಉಪಯೋಗಕ್ಕೆ ಹರಾಜು ಮೂಲಕ ನೀಡಲು ಸಭೆಯಲ್ಲಿ ಒಪ್ಪಿಗೆ ನೀಡಲಾಯಿತು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ್ ಕಾರ್ಬಾರಿ, ಲೇಡಿಗೋಶನ್ ಅಧೀಕ್ಷಕ ಡಾ. ದುರ್ಗಾಪ್ರಸಾದ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ತಿಮ್ಮಯ್ಯ ಮತ್ತಿತರರು ಉಪಸ್ಥಿತರಿದ್ದರು.

#dakshina kannada#hospital devolopment#latest news#new plan#wenlock hospital

COMMENTS

Login with Gmail to comment

ಇನ್ನಷ್ಟು ಸುದ್ದಿ

 ಡಿಗ್ರಿಗೂ ಮುನ್ನ ಹ್ಯಾಕರ್ ಗೆ IIT ಉದ್ಯೋಗ! ಪ್ರತಿಭೆ ಇದ್ದರೆ ಅವಕಾಶವೇ ನಿಮ್ಮ ಮನೆ ಬಾಗಿಲು ತಟ್ಟುತ್ತದೆ!” ಅನ್ನೋದಕ್ಕೆ ಸ್ಫೂರ್ತಿ ಈ ನಿಸರ್ಗ ಅಧಿಕಾರಿ..
ರಾಮನ ಹೆಸರಲ್ಲಿ ‘ರಾವಣ’ ರಾಜ್ಯ-ಕರ್ನಾಟಕಕ್ಕೂ ತಟ್ಟಿದ ಕಳಂಕ!ರಾಮನ ಹೆಸರಲ್ಲಿ ಭಕ್ತರಿಗೇ ನಾಮ-ಅಯೋಧ್ಯೆಯ ಕೋಟಿಕೋಟಿ ಲೂಟಿಗೆ ಬೀದರ್ ಕನೆಕ್ಷನ್!
ಜಾಗತಿಕ ಯುದ್ಧ ಭೀತಿ:ಟ್ರಂಪ್ ಎಫೆಕ್ಟ್‌ಗೆ ಭಾರೀ ಆರ್ಥಿಕ ಭೂಕಂಪ! — ಒಂದೇ ದಿನ ₹6 ಲಕ್ಷ ಕೋಟಿ ನಷ್ಟ!ಸೆನ್ಸೆಕ್ಸ್ ಧರೆಗುರುಳಿ, ರೂಪಾಯಿ ದಾಖಲೆ ಪತನ!
ಅಮೆರಿಕ–ಇಸ್ರೇಲ್ ದಾಳಿ ಬಳಿಕ ಇರಾನ್‌ನಲ್ಲಿ ಉದ್ವಿಗ್ನತೆ ತಾರಕಕ್ಕೆ
ಮೂಡುಬಿದಿರೆಯಲ್ಲಿ ಖರೀದಿಸಿದ ಕೆಲವೇ ಗಂಟೆಗಳಲ್ಲಿ ಕಾರಿಗೆ ಬೆಂಕಿ! ತಪ್ಪಿದ ಭಾರೀ ದುರಂತ ..ಏಕಾಏಕಿ ಬೆಂಕಿ.ಕಾರಿನಲ್ಲಿದ್ದ ಕುಟುಂಬ ಅಪಾಯದಿಂದ ಪಾರು.
ಆಂಬ್ಯುಲೆನ್ಸ್‌ನಲ್ಲೇ ನಡೆದ ಭೀಕರ ಘಟನೆ… ನಂಬಲು ಕಷ್ಟ, ಆದರೆ ಸತ್ಯ!
ನಾಲ್ಕು ಮಕ್ಕಳನ್ನು ಹೆತ್ತ ಮಹಾತಾಯಿ, ಸದ್ಯಕ್ಕೆ ತಾಯಿ ಮಕ್ಕಳು ಸೇಫ್
ಪಂಜಿಮೊಗರುವಿನಲ್ಲಿ ಹೆಂಡತಿಯ ಅಕ್ರಮ ಸಂಬಂಧಕ್ಕೆ, ಗಂಡ ಫಿನಿಶ್!
ಅಯೋಧ್ಯೆ ರಾಮ ಮಂದಿರ ಸ್ಫೋಟಿಸಲು ಹರಿಹರದಲ್ಲಿ ಪ್ಲಾನ್! ಬಂಧಿತ ಸುಹೇಲ್ ಬೆನ್ನತ್ತಿದ ಇಂಟೆಲಿಜೆನ್ಸ್; 10 ಜನರ ಟೀಮ್‌ಗಾಗಿ ತೀವ್ರ ಶೋಧ!
ದೇಶಾದ್ಯಂತ ಇಂದು ಮೊಬೈಲ್‌ನಲ್ಲಿ ತುರ್ತು ಎಚ್ಚರಿಕೆ ಡ್ರಿಲ್ – ಗಾಬರಿ ಬೇಡ
ಸೂರತ್‌ನಲ್ಲಿ ಮಳೆಯ ರೌದ್ರನರ್ತನ: 200ಕ್ಕೂ ಹೆಚ್ಚು ಅಂಗಡಿಗಳಿಗೆ ನೀರು ನುಗ್ಗಿ ₹200 ಕೋಟಿ ನಷ್ಟ – ಕಣ್ಣೀರಿನಲ್ಲಿ ಮುಳುಗಿದ ವ್ಯಾಪಾರಿಗಳು
ಪವಾಡವೇ? 33 ದಿನ ,775 ಗಂಟೆಗಳ ಬಳಿಕ ಸಮಾಧಿಯಿಂದ ಹೊರಬಂದ ಶಿವಯೋಗಿ ಶ್ರೀಗಳು……!!!!ಗದಗದಲ್ಲಿ ಅಪರೂಪದ ಆಧ್ಯಾತ್ಮಿಕ ಘಟನೆ!ಪರಮ ಯೋಗವೇ?
“ನನ್ನ ಮೇಲೆ ನಂಬಿಕೆ ಇಲ್ಲದಿದ್ದರೆ ನಾನು ಅಧ್ಯಕ್ಷ ಸ್ಥಾನ ಬಿಡಲು ಸಿದ್ಧ”!-ಉದ್ಧವ್ ಠಾಕ್ರೆ ಕಣ್ಣೀರಿನ ಮನವಿ.
ಮದರಸಾದಲ್ಲಿ ದೌರ್ಜನ್ಯ ಮತ್ತು ಬಲವಂತದ ಕೂಲಿ ಆರೋಪ-24 ಮಕ್ಕಳ ರಕ್ಷಣೆ
ಖಾದರ್‌ ಖಡಕ್ ವಾರ್ನಿಂಗ್ ವೈರಲ್ : ಆದರೆ ಖಡಕ್ ಆಕ್ಷನ್ ಯಾವಾಗ?”ಪ್ರತಿ ಮಳೆಯಲ್ಲೂ ಅದೇ ಕಥೆ: ರಸ್ತೆ ಗುಂಡಿ, ಅಪಘಾತ, ಎಚ್ಚರಿಕೆ, ಜವಾಬ್ದಾರಿ ಹೊತ್ತವರ ಜಾಣ ಮರೆವು!
ಕದನ ವಿರಾಮ ಹೇಳಿಕೆ ಮಾತ್ರ…“Middle East ಮತ್ತೆ ಸ್ಫೋಟಕ
ಜನರ ಹಾಹಾ ಕಾರಕ್ಕೆ ಬೆಚ್ಚಿಬಿದ್ದ ಸರ್ಕಾರ –  ಎಸ್ಮ ಕಾಯ್ದೆ ಜಾರಿಗೆ
book ಮಾಡಿದ ನಿಮ್ಮ ಹೊಸ ಕಾರು-ಬೈಕ್ ಇನ್ನೂ ಬಂದಿಲ್ವಾ?ಪಶ್ಚಿಮ ಏಷ್ಯಾ ಯುದ್ಧದಿಂದ ಸರಬರಾಜು ವಿಳಂಬ…!
ಪಹಲ್ಗಾಮ್ ದಾಳಿಗೆ ವರ್ಷ : ಮೋದಿ ಶ್ರದ್ಧಾಂಜಲಿ, ಉಗ್ರರಿಗೆ ಎಚ್ಚರಿಕೆ
ಸನ್ಯಾಸಿಗೆ ಕಾಡಿದ ಸುಂದರಿಯ  ಬಂಧನ
ದ್ವಿತೀಯ ಪಿ.ಯು.ಸಿ ಪರೀಕ್ಷಾ ಹಾಜರಾತಿ
ಮಂಗಳೂರಿನಲ್ಲಿ ವಕೀಲರೊಬ್ಬರ ನಕಲಿ ದುಷ್ಕೃತ್ಯ ಬಯಲಿಗೆ?
ಈ ‘ಗೋಲ್ಡನ್ ಇನ್ನರ್‌ವೇರ್ ಸೆಟ್ ‘ಯಾರದ್ದು ?ಜಗತ್ತನ್ನೇ ಬೆಚ್ಚಿಬೀಳಿಸಿದ ಇರಾಕ್ ಸಂಸದೆ ಅಲಿಯಾ ನಸೀಫ್ ದ್ದಾ ..!?
ದವಳ ಕೋ- ಆಪರೇಟಿವ್ನ ಈ ಸಾಲಿನ ವ್ಯವಹಾರ ಎರಡುನೂರು ಕೋಟಿ
ಎಲ್ಲರಿಗೂ ಯುಗಾದಿ ಹಬ್ಬ… ಆದರೆ ಈ ಗ್ರಾಮಗಳಲ್ಲಿ ಭಯ ಮೌನ…ಹಬ್ಬ ಇಲ್ಲ…!ಒಂದು ವಿಚಿತ್ರ ಕಥೆ!
ಒಂದು ಕ್ಷಣದಲ್ಲಿ ನಗು, ಇನ್ನೊಂದು ಕ್ಷಣದಲ್ಲಿ ನಿಶ್ಶಬ್ದ ಕಣ್ಣೀರು…
ಹಾರ್ಮುಜ್‌ನಲ್ಲಿ ಹಡಗು ಸಂಚಾರ ಹೆಚ್ಚಳ—ಇಂಧನ ಪೂರೈಕೆಗೆ ದೊಡ್ಡ ಮುನ್ನಡೆ 🚢
ದೆಹಲಿಯನ್ನು ನಡುಗಿಸಿದ ಸೈಕೋಪಾತ್ ಘಟನೆಯ ಕ್ರೂರ ಸತ್ಯ…. ಆನ್‌ಲೈನ್ ಬೆಟ್ಟಿಂಗ್ ಮತ್ತು ಆಟಗಳ ಅಡಿಕ್ಟ್ – ಸಾಲ …ಮನೋವೈಕಲ್ಯ ಲಕ್ಷಣ!
ಮಂಗಳೂರು- ಕೊಲ್ಲೂರಿನವರೆಗೆ ಹೈ ಅಲರ್ಟ್!ಕ.ರ.ವೇ ಕಪ್ಪು ಬಾವುಟ .!!ತಮಿಳುನಾಡು ಸಿಎಂ ವಿಜಯ್ ಭೇಟಿ-ಕೊಲ್ಲೂರಿನಲ್ಲಿ ಹೈವೋಲ್ಟೇಜ್ ದಿನ! 
ವಿಶ್ವಕಪ್‌ನಲ್ಲಿ ಪಾಕಿಸ್ತಾನವನ್ನು ಪುಡಿಗೈದ ಭಾರತದ ವನಿತೆಯರು !ಆರಂಭವೇ ವಿಜಯದ ಘರ್ಜನೆ!