📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಮಂಗಳೂರು ಸಿಟಿ ಪೊಲೀಸರ ಭರ್ಜರಿ ಬೇಟೆ – ನಿಷೇಧಿತ ಎಂಡಿಎಂ, ಗಾಂಜಾ ಮರಾಟಗಾರರ ಬಂಧನ

ಮಂಗಳೂರು: MDMA ಹಾಗೂ ಗಾಂಜಾ ಮಾರಾಟ ಪ್ರಕರಣ – 6 ಆರೋಪಿಗಳ ಬಂಧನ

ಮಂಗಳೂರು ನಗರದಲ್ಲಿ ನಿಷೇಧಿತ ಮಾದಕ ವಸ್ತುಗಳನ್ನು ಕಾಲೇಜು ವಿದ್ಯಾರ್ಥಿಗಳು ಹಾಗೂ ಮಹಿಳೆಯರಿಗೆ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಪೊಲೀಸರು ಒಟ್ಟು 6 ಮಂದಿಯನ್ನು ಬಂಧಿಸಿದ್ದಾರೆ.

ಕಮಿಷನರ್
ಆರೋಪಿಗಳು

ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅ.ಕ್ರ.56/2026ರಲ್ಲಿ NDPS ಕಾಯ್ದೆಯ ಕಲಂ 8(c), 20(b)(ii)(A), 22(C) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಬಂಧಿತರನ್ನು ಮೊಹಮ್ಮದ್ ಸಯ್ಯದ್ ಆಫ್ರಿದಿ, ಮಕ್ಸೂದ್ ಸಾಗ್, ಅಹಮ್ಮದ್ ಅಲಿ ಅರ್ಷಾನ್ ಮತ್ತು ಫೆಲಿಕ್ಸ್ ಪಿ. ಜೋಸೆಫ್ ಎಂದು ಗುರುತಿಸಲಾಗಿದೆ. ಇವರಿಂದ 53.87 ಗ್ರಾಂ MDMA, 103.20 ಗ್ರಾಂ ಹೈಡ್ರೋವೀಡ್ ಗಾಂಜಾ ಹಾಗೂ MG Hector ಕಾರನ್ನು ವಶಪಡಿಸಿಕೊಳ್ಳಲಾಗಿದೆ.

ಮಾರ್ಚ್ 4ರಂದು ಬದ್ರಿಯಾ ರಸ್ತೆಯ Classic Comfort Lodgeನಲ್ಲಿ ರೂಮ್ ಪಡೆದು ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದಾಗ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ.

ಆರೋಪಿಗಳು
ರೋಪಿಗಳು

ಇದೇ ವೇಳೆ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಅ.ಕ್ರ.29/2026ರಲ್ಲಿ NDPS ಕಾಯ್ದೆಯ ಕಲಂ 8(c), 20(B)(ii)(B) ಅಡಿಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ. ಈ ಪ್ರಕರಣದಲ್ಲಿ ಎಡಲ್ ರೋಚ್ ಮತ್ತು ಆರೋನ್ ವಿಶಾಲ್ ಲಾಸ್ರಾದೋ ಬಂಧಿತರಾಗಿದ್ದು, ಇವರಿಂದ 60 ಗ್ರಾಂ ಹೈಡ್ರೋವೀಡ್ ಗಾಂಜಾ, 1 ಕೆಜಿ 155 ಗ್ರಾಂ ಗಾಂಜಾ ಹಾಗೂ ಮಾರುತಿ ಸ್ವಿಫ್ಟ್ ಕಾರು ವಶಪಡಿಸಿಕೊಳ್ಳಲಾಗಿದೆ. ಇವರನ್ನು ಗ್ರೀನ್ ಪಾರ್ಕ್ ಮೈದಾನ, ಬಂದರ್ ಬಳಿ ಕಾರಿನಲ್ಲಿ ಕುಳಿತು ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಬಂಧಿಸಲಾಗಿದೆ.

ಪ್ರಾಥಮಿಕ ತನಿಖೆಯಲ್ಲಿ ಮುಂಬೈ ಮೂಲದ ಸಂದೀಪ್ ಶೆಟ್ಟಿ ದುಬೈಯಲ್ಲಿರುವ ಹೋಟೆಲ್‌ನಲ್ಲಿ ಮ್ಯಾನೇಜರ್ ಆಗಿದ್ದು, ವಿಮಾನದ ಮೂಲಕ ಮಾದಕ ವಸ್ತುಗಳನ್ನು ಬೆಂಗಳೂರಿಗೆ ಕಳುಹಿಸುತ್ತಿದ್ದನೆಂದು ತಿಳಿದುಬಂದಿದೆ. ಬೆಂಗಳೂರಿನಿಂದ ಎಡಲ್ ರೋಚ್ ಮೂಲಕ ಸಾಗಾಟ ವ್ಯವಸ್ಥೆ ಮಾಡಲಾಗುತ್ತಿತ್ತು. ಬಳಿಕ ಎಡಲ್ ರೋಚ್ ಮತ್ತು ಆರೋನ್ ವಿಶಾಲ್ ಲಾಸ್ರಾದೋ ಮಕ್ಸೂದ್ ಸಾಗ್ ಮೂಲಕ ಮೊಹಮ್ಮದ್ ಸಯ್ಯದ್ ಆಫ್ರಿದಿ ಮತ್ತು ಅಹಮ್ಮದ್ ಅಲಿ ಅರ್ಷಾನ್ ಅವರಿಗೆ ಮಾದಕ ವಸ್ತು ಪೂರೈಸುತ್ತಿದ್ದರು.

ಆರೋಪಿಗಳು

ಆಫ್ರಿದಿ ಮತ್ತು ಅರ್ಷಾನ್ ಬೆಂಗಳೂರಿನಿಂದ ಗಾಂಜಾ, ಹೈಡ್ರೋವೀಡ್ ಹಾಗೂ MDMA ಅನ್ನು MG Hector ವಾಹನದಲ್ಲಿ ಮಂಗಳೂರಿಗೆ ತರಲಾಗಿತ್ತು. ನಂತರ Classic Comfort Lodgeನಲ್ಲಿ ಯುವಕ-ಯುವತಿಯರಿಗೆ ಮಾರಾಟ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಪುತ್ತೂರಿನ ದೇವಸ್ಥಾನ ಪದಾಧಿಕಾರಿಗಳ ವಿರುದ್ಧ FIR ..!
ಬಂಗಾಳದಲ್ಲಿ ಬಿಜೆಪಿಯ ಯುದ್ಧೋನ್ಮಾದ, ದೀದಿಯ ರಚ್ಚೆ…
ವಿಶ್ವ ಸಂಸ್ಥೆಯು ಯಾವ ಪುರುಷಾರ್ಥಕ್ಕೆ? ಬಲವರ್ಧನೆಯ  ಅಗತ್ಯತೆ
ವಿಶ್ವದ ಅತ್ಯುತ್ತಮ ಶಾಲೆಗಳ ಪಟ್ಟಿಯಲ್ಲಿ ಭಾರತದ 7 ಶಾಲೆಗಳು …!ವಿಶ್ವದ ಗಮನ ಸೆಳೆದ ಸಾಧನೆ ಅಂಥದ್ದೇನಿದೆ!?
ಮಾರ್ಕ್ಸ್ 90%, ಆದರೆ 19ಕ್ಕೆ ಕ್ರೂರ ಅಪರಾಧಿ!ಕನಸುಗಳಿದ್ದ ಹುಡುಗನೊಬ್ಬ ಕಟುಕನಾದ ದುರಂತ ಕಥೆ”
₹119 ಕೋಟಿ ವ್ಯತ್ಯಾಸ ಸಣ್ಣ ವಿಷಯನಾ….ಏನಿದು ತಲೈವಾ..!
ಗೃಹ ಸಚಿವರಾದ ಜಿ ಪರಮೇಶ್ವರ್ ರವರ ಒಡೆತನದ ಸಂಸ್ಥೆಯಲ್ಲಿ ನಡೆದಿದೆ ಎಂಬ ವಿಡಿಯೋ ವೈರಲ್….!
ಏಳು ವರ್ಷದ ನಂತರ ಮಂಗಳೂರಿಗೆ “ಅಮ್ಮ” ಬರುತ್ತಿದ್ದಾರೆ…. 50ಸಾವಿರ ಜನರ ನಿರೀಕ್ಷೆ
🔴 ಪೊಲೀಸರ ಮೇಲಿನ ಹಿಡಿತ ಕಠಿಣ: PEBಗೆ ಹೆಚ್ಚಿದ ಅಧಿಕಾರ — ರಾಜ್ಯದ ದೊಡ್ಡ ಆಡಳಿತಾತ್ಮಕ ತೀರ್ಮಾನ
ಮಂಗಳೂರು ನೀರಿನ ಸಂಕಷ್ಟ:ಮಳೆಯಿಲ್ಲದೆ ಮುಂದಿನ 1–2 ತಿಂಗಳು ಗಂಭೀರ ನೀರಿನ ಕೊರತೆ ಸಂಭವ ಸಾಧ್ಯತೆ.
146 ವರ್ಷಗಳಲ್ಲೇ ಅತ್ಯಂತ ಒಣ ಜೂನ್..ದೇಶಾದ್ಯಂತ 46% ಮಳೆ ಕೊರತೆ!
ಮುಗ್ಧ ಮಗು ಮೇಲೆ ನಡೆದ ಅಮಾನವೀಯ ಕ್ರೌರ್ಯ… ನ್ಯಾಯಕ್ಕಾಗಿ ಸಮಾಜದ ಒಕ್ಕೊರಲ ಹೋರಾಟ
ಘರ್ಷಣೆಗಳ ನಡುವೆಯೂ ಜನರ ಮತದ ಹಕ್ಕು ಅಚಲ…ಸಂಕ್ಷಿಪ್ತ ನೋಟ..
ವಿಶಾಖಪಟ್ಟಣಂ ಉಕ್ಕಿನ ಕಾರ್ಖಾನೆ ದುರಂತ:ಕೆಲವೇ ಕ್ಷಣಗಳಲ್ಲಿ ಎಂಟು ಜೀವಗಳನ್ನು ನುಂಗಿದ ಉಕ್ಕಿನ ಬೆಂಕಿ!ಕೆಲಸಕ್ಕೆ ಹೋದವರು ಮನೆಗೆ ಮರಳಲಿಲ್ಲ… 
ಮುಖವಾಡ ಧರಿಸಿದವರನ್ನು ನಂಬುವ ಮುನ್ನ ನೂರು ಬಾರಿ ಯೋಚಿಸಿ…!
ಕೇರಳ ಸರ್ಕಾರ ರಚನೆಯ ಕಗ್ಗಂಟು.. ಸಿಎಂ ಅಭ್ಯರ್ಥಿ ಆಯ್ಕೆಗೆ ಕಸರತ್ತು… ಕಾಂಗ್ರೆಸ್ ದುರ್ಬಲತೆಗೆ ಸಾಕ್ಷಿ
ಕಪ್ಪೆ ಚಿಪ್ಪು ದುರಂತಕ್ಕೆ ಮತ್ತೆರಡು ಜೀವ ಬಲಿ, ಬಲಿಯ ಸಂಖ್ಯೆ ಏರುವ ಸಾಧ್ಯತೆ
“ಕಣ್ಣು ಮುಚ್ಚಿಸಿ ಕಟ್ಟಿ ಹಾಕಿ ಬೆಂಕಿ ಹಚ್ಚಿದಳು: ರೋಲ್ ಪ್ಲೇ ಹೆಸರಿನಲ್ಲಿ ಪ್ರಿಯಕರನ ಭೀಕರ ಕೊಲೆ-ಬೆಚ್ಚಿಬೀಳಿಸುವ ಘಟನೆ”
ಹೈ ಪ್ರೋಫೈಲ್ ಕೇಸ್ ಬಿಹಾರದಿಂದ UPವರೆಗೆ CID ಚೇಸ್… ಕೊನೆಗೂ ಸಿಕ್ಕಿದ ಸುಪಾರಿ ಕಿಲ್ಲರ್ಸ್!ಸಿನಿಮಾ ಸ್ಟೈಲ್ ಮರ್ಡರ್ ಮಿಸ್ಟರಿ: ಹೈಟೆಕ್ ಪ್ಲಾನ್ ಮಾಡಿದ ಹಂತಕರು… 
ಡೈಮಂಡ್ ನೆಕ್ಲೇಸ್, ಕಿವಿಯೋಲೆಗಳು, ಚಿನ್ನದ ಚೈನ್, ಪ್ಲಾಟಿನಂ ಉಂಗುರ ಕಳವು…!
ದೈವದ ನ್ಯಾಯ ತಡವಾಗಬಹುದು… ಆದರೆ ತಪ್ಪದು!”ತುಳುನಾಡಿನ ದೈವಶಕ್ತಿ – ನಂಬಿಕೆಗೆ ಸಾಕ್ಷಿಯಾದ ನಿಜಘಟನೆ ..
ಶಿರಸಿ ಮಾರಿಯಮ್ಮನ ಜಾತ್ರೆ ಪ್ರಾರಂಭ
‘ಪೊಲೀಸರಿಗೆ ದೂರು ಕೊಡ್ತೀಯಾ?’… ಗಾಂಜಾ ವ್ಯಸನಕ್ಕೆ ಸೈಜು ಕಲ್ಲಿನಿಂದ ಅಜ್ಜಿಯ ತಲೆ ಪುಡಿ ಮಾಡಿದ ಮೊಮ್ಮಗ!ಅಜ್ಜಿಯೇ ಬಲಿ!
ಮಸೀದಿ ಹುಂಡಿಗೂ ಲಗ್ಗೆ ಇಟ್ಟ ಕಳ್ಳರು….!
ಹಾಡುಹಗಲೇ ಉಡುಪಿಯ ಕರಾವಳಿ ಬೈಪಾಸ್ ನಲ್ಲಿ ಗುಂಡಾಗಿರಿ
ಜೀತಕ್ಕಿಟ್ಟುಕೊಂಡು ದರ್ಬಾರ್ ನಡೆಸುತ್ತಿದ್ದ ರಜನಿಶೆಟ್ಟಿಯ ಬಂಧನ
“ಕಾಂತರಾ” ಖ್ಯಾತಿಯ ಸಪ್ತಮಿ ಗೌಡ, ದುಮುಕಿದ್ದು  ಹೋರಾಟದ ಅಂಗಳಕ್ಕೆ
ದರೆಗುಡ್ಡೆಯಲ್ಲಿ ಬಾರಿ ಅಗ್ನಿ ಅವಗಡ…!
ಹೊಟ್ಟೆಪಾಡಿಗಾಗಿ ಬಂದ ಕಾರ್ಮಿಕನ ಜೀವ ರೋಡ್ ರೋಲರ್ ಹರಿದು ರಸ್ತೆಯಲ್ಲೇ ಅಂತ್ಯ…
ಮಂಗಳೂರು ಬೆಂಗಳೂರು ಮಧ್ಯೆ ಇನ್ನು ತಡರಾತ್ರಿಯೂ ವಿಮಾನ ಯಾನ